High court : ಪುತ್ರಿಯನ್ನು ಗಂಡನ ಸುಪರ್ದಿಗೆ ಒಪ್ಪಿಸದ ವೈದ್ಯೆ; ಆಕೆಗೆ ಕೋರ್ಟ್‌ ಕೊಟ್ಟ ಸ್ಪೆಷಲ್ ಶಿಕ್ಷೆ ಏನು? - Vistara News

ಆರೋಗ್ಯ

High court : ಪುತ್ರಿಯನ್ನು ಗಂಡನ ಸುಪರ್ದಿಗೆ ಒಪ್ಪಿಸದ ವೈದ್ಯೆ; ಆಕೆಗೆ ಕೋರ್ಟ್‌ ಕೊಟ್ಟ ಸ್ಪೆಷಲ್ ಶಿಕ್ಷೆ ಏನು?

High court : ನ್ಯಾಯಾಲಯ ಆದೇಶವನ್ನು ಉಲ್ಲಂಘಿಸಿದ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯೆಯೊಬ್ಬರಿಗೆ ಕೋರ್ಟ್‌ ವಿಶೇಷ ಶಿಕ್ಷೆ ನೀಡಿದೆ. ಏನಿದು ಶಿಕ್ಷೆ ಇಲ್ಲಿದೆ ವಿವರ..

VISTARANEWS.COM


on

high court and doctor
ಪ್ರಾತಿನಿಧಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅವರು ಒಬ್ಬ ವೈದ್ಯೆ. ವಯಸ್ಸು 33. ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ (Doctor in a private Hospital) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೌಟುಂಬಿಕ ಸಮಸ್ಯೆ (family problem) ಹಿನ್ನೆಲೆಯಲ್ಲಿ ಗಂಡನಿಂದ ಬೇರ್ಪಟ್ಟು ಸ್ವತಂತ್ರ ಜೀವನ ನಡೆಸುತ್ತಿದ್ದಾರೆ. ಈ ದಂಪತಿಗೆ ಎಂಟು ವರ್ಷದ ಒಬ್ಬ ಮಗಳಿದ್ದಾಳೆ (8 year old daughter). ಡೈವೋರ್ಸ್‌ ಸಂದರ್ಭದಲ್ಲಿ ಡಾಕ್ಟರ್‌ ತನ್ನ ಮಗಳನ್ನು ತನ್ನ ಜತೆಗೇ ಉಳಿಸಿಕೊಂಡಿದ್ದರು. ಈ ನಡುವೆ ಮಗಳನ್ನು ತನ್ನ ಸುಪರ್ದಿಗೆ ಕೊಡಬೇಕು ಎಂದು ಕೋರಿ ಗಂಡ ಕೋರ್ಟ್‌ ಮೊರೆ ಹೊಕ್ಕಿದ್ದರು. ಹೈಕೋರ್ಟ್‌ ಈ ಮನವಿಯನ್ನು ಆಧರಿಸಿ ಮಗಳನ್ನು ತಾತ್ಕಾಲಿಕವಾಗಿ ತಂದೆಯ ಸುಪರ್ದಿಗೆ (daughter Should be given to the care of father too) ಒಪ್ಪಿಸುವಂತೆ ಕಳೆದ ಜುಲೈನಲ್ಲಿ ಆದೇಶ ನೀಡಿತ್ತು. ಆದರೆ, ಡಾಕ್ಟರ್‌ ತೀರ್ಪನ್ನು ಪಾಲಿಸಿರಲಿಲ್ಲ. ಇದಕ್ಕೆ ಹೈಕೋರ್ಟ್‌ ಗರಂ Karnataka High court) ಆಗಿತ್ತು. ಹೀಗೆ ಸಿಟ್ಟುಕೊಂಡ ಕೋರ್ಟ್‌ ಆಕೆಗೆ ಕೊಟ್ಟಿರುವ ಪ್ರಾಯಶ್ಚಿತ್ತದ ಶಿಕ್ಷೆ ಏನು ಗೊತ್ತೇ? ಈ ಸ್ಟೋರಿ ಓದಿ.

ಕೋರ್ಟ್‌ ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯ ಸುಪರ್ದಿಗೆ ಒಪ್ಪಿಸುವಂತೆ ಆದೇಶ ಕೊಟ್ಟಿದ್ದರೂ ವೈದ್ಯೆ ಅದನ್ನು ಪಾಲಿಸಿರಲಿಲ್ಲ. ಮಗಳನ್ನು ಬಿಟ್ಟಿರಲು ಸಾಧ್ಯವಿಲ್ಲ ಎನ್ನುವುದೂ ಒಂದು ಕಾರಣವಾಗಿತ್ತು. ಆದರೆ, ಆಕೆಯ ಗಂಡ ಇದನ್ನು ಮತ್ತೆ ನ್ಯಾಯಾಲಯದ ಗಮನಕ್ಕೆ ತಂದಿದ್ದರು.. ಇದನ್ನು ಗಮನಿಸಿದ ಕೋರ್ಟ್‌ ಆಕೆಯ ಮೇಲೆ ಸ್ವಯಂಪ್ರೇರಿ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಕೇಸು ದಾಖಲಿಸಿಕೊಂಡಿತ್ತು.

ಈ ಪ್ರಕರಣ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ ನ್ಯಾಯಪೀಠ ಆಕೆಯನ್ನು ಪ್ರಶ್ನೆ ಮಾಡಿತು. ಈ ವೇಳೆ ಬೇಷರತ್‌ ಕ್ಷಮಾಪಣೆ ಕೇಳಿದ ಮಹಿಳಾ ವೈದ್ಯೆ, ಕೋರ್ಟ್‌ ನೀಡುವ ಯಾವುದೇ ಶಿಕ್ಷೆಗೂ ಸಿದ್ಧ ಎಂದು ಹೇಳಿದರು.

ಆಕೆಗೆ ಆಗಿರುವ ಪ್ರಾಯಶ್ಚಿತ್ತದ ಭಾವವನ್ನು ಅರ್ಥ ಮಾಡಿಕೊಂಡ ಕೋರ್ಟ್‌, ನ್ಯಾಯಾಲಯದ ಆದೇಶದಂತೆ ಮಗಳನ್ನು ತಂದೆಯ ಸುಪರ್ದಿಗೆ ಒಪ್ಪಿಸುವ ಜತೆಗೆ ಒಂದು ಮುಚ್ಚಳಿಕೆ ಬರೆದುಕೊಡುವಂತೆ ಸೂಚಿಸಿತು. ಅಷ್ಟೇ ಅಲ್ಲ . ಆರು ತಿಂಗಳ ಕಳೆದ ನಂತರ ತನ್ನ ಮುಚ್ಚಳಿಕೆಯನ್ನು ಪಾಲನೆ ಮಾಡಿದ ಸಂಬಂಧ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನಲರ್‌ ಅವರಿಗೆ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿತು.

Doctor in hospital

ಹಾಗಿದ್ದರೆ ಆ ಶಿಕ್ಷೆ ಯಾವುದು?

ಭವಿಷ್ಯದಲ್ಲಿ ತಮ್ಮ ವಿರುದ್ಧ ನ್ಯಾಯಾಲಯವು ಯಾವುದೇ ಕ್ರಮ ತೆಗೆದುಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗದಂತೆ ನಡೆದುಕೊಳ್ಳಲಾಗುವುದು ಎಂದು ವೈದ್ಯೆ ಹೇಳಿದ್ದರು. ಅದನ್ನು ಋಜುವಾತುಪಡಿಸುವುದಕ್ಕಾಗಿ ಈ ಪ್ರಾಯಶ್ಚಿತ್ತದ ಶಿಕ್ಷೆಯನ್ನು ನೀಡಲು ಕೋರ್ಟ್‌ ತೀರ್ಮಾನಿಸಿತು.

ಅದೇನೆಂದರೆ, ಮುಂದಿನ ಆರು ತಿಂಗಳ ಕಾಲ ತಿಂಗಳಲ್ಲಿ ಒಂದು ದಿನ ಪೂರ್ತಿ ಬೆಂಗಳೂರಿನ ಯಾವುದಾದರೂ ಸರ್ಕಾರಿ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಸಲ್ಲಿಸಬೇಕು ಎನ್ನುವುದು. ಹಾಗಂತ ಸುಮ್ಮನೆ ಹೋಗಿ ಸೇವೆ ಮಾಡಿ ಬರುವುದಲ್ಲ. ಸರಕಾರಿ ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಪೂರ್ವಾನುಮತಿಯನ್ನು ಪಡೆದು ಇಂಥ ದಿನ ಬರುವುದಾಗಿ ಹೇಳಿ ಸೇವೆ ನೀಡಬೇಕು ಎಂದು ಹೇಳಲಾಯಿತು.

ವೈದ್ಯೆ ಈ ಆ ಮುಚ್ಚಳಿಕೆ ಮತ್ತು ಬೇಷರತ್‌ ಕ್ಷಮಾಪಣೆ ಪ್ರಮಾಣ ಪತ್ರವನ್ನು ನೀಡಿದ ಬಳಿಕ ಅದಕ್ಕೆ ಒಪ್ಪಿಗೆ ಸೂಚಿಸಿದ ವಿಭಾಗೀಯ ಪೀಠ, ವೈದ್ಯೆ ಮೇಲಿನ ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ರದ್ದುಪಡಿಸಿತು.

ಈ ನಡುವೆ, ವೈದ್ಯೆಯು ನಗರದ ಯಾವುದೇ ಸರ್ಕಾರಿ ಆಸ್ಪತ್ರೆಗೆ ಮನವಿ ಮಾಡಿದರೆ, ಆ ಮನವಿಯನ್ನು ಆಸ್ಪತ್ರೆಯ ಮುಖ್ಯಸ್ಥರು ಪರಿಗಣಿಸಬೇಕು. ಆಕೆಯ ಮನವಿಯಂತೆ ಮುಂದಿನ ಆರು ತಿಂಗಳ ಕಾಲ ತಿಂಗಳಲ್ಲಿ ಒಂದು ದಿನ ಪೂರ್ತಿ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೂಡಾ ಕೋರ್ಟ್‌ ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

ಯಾವುದೇ ಆಹಾರ ತಯಾರಿಸುವ ಸಂದರ್ಭ ಚಿಟಿಕೆ ಏಲಕ್ಕಿಯನ್ನು ಅದಕ್ಕೆ ಹಾಕಿದರೂ ಸಾಕು, ಅದು ಏಲಕ್ಕಿಯ ಘಮವನ್ನು ಪಡೆದುಕೊಂಡುಬಿಡುತ್ತದೆ. ಅದಕ್ಕಾಗಿಯೇ, ಇದು ಸಿಹಿತಿಂಡಿಗಳಿಗೆ ಹೇಳಿ ಮಾಡಿಸಿದ ಮಸಾಲೆ. ಒಂದು ಚಿಟಿಕೆ ಏಲಕ್ಕಿ ಹಾಕಿದ ಪಾಯಸದ ರುಚಿಯೇ ಬೇರೆ. ಆದರೆ, ಏಲಕ್ಕಿ, ಕೇವಲ ತನ್ನ ಘಮದಲ್ಲಷ್ಟೇ ಶ್ರೀಮಂತಿಕೆ ಮೆರೆದಿಲ್ಲ. ಗುಣದಲ್ಲೂ ಏಲಕ್ಕಿ ಶ್ರೀಮಂತಿಕೆಯಲ್ಲಿ ಯಾವುದಕ್ಕೂ (cardamom benefits) ಕಡಿಮೆಯಿಲ್ಲ.

VISTARANEWS.COM


on

Cardamom Benefits
Koo

ಮಸಾಲೆಗಳ ರಾಣಿ ಎಂದೇ ಹೆಸರಾದ ಏಲಕ್ಕಿಗೆ ಒಂದು ಅಪರೂಪದ ಘಮವಿದೆ. ತನ್ನ ಘಮದ ಮೂಲಕ ಯಾವುದೇ ಆಹಾರವನ್ನು ಕ್ಷಣ ಮಾತ್ರದಲ್ಲಿ ತನ್ನತನವನ್ನು ಅದಕ್ಕೆ ಕೊಡುವ ಶಕ್ತಿಯಿದೆ. ಯಾವುದೇ ಆಹಾರ ತಯಾರಿಸುವ ಸಂದರ್ಭ ಚಿಟಿಕೆ ಏಲಕ್ಕಿಯನ್ನು ಅದಕ್ಕೆ ಹಾಕಿದರೂ ಸಾಕು, ಅದು ಏಲಕ್ಕಿಯ ಘಮವನ್ನು ಪಡೆದುಕೊಂಡುಬಿಡುತ್ತದೆ. ಅದಕ್ಕಾಗಿಯೇ, ಇದು ಸಿಹಿತಿಂಡಿಗಳಿಗೆ ಹೇಳಿ ಮಾಡಿಸಿದ ಮಸಾಲೆ. ಒಂದು ಚಿಟಿಕೆ ಏಲಕ್ಕಿ ಹಾಕಿದ ಪಾಯಸದ ರುಚಿಯೇ ಬೇರೆ. ಆದರೆ, ಏಲಕ್ಕಿ, ಕೇವಲ ತನ್ನ ಘಮದಲ್ಲಷ್ಟೇ ಶ್ರೀಮಂತಿಕೆ ಮೆರೆದಿಲ್ಲ. ಗುಣದಲ್ಲೂ ಏಲಕ್ಕಿ ಶ್ರೀಮಂತಿಕೆಯಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಬನ್ನಿ, ಏಲಕ್ಕಿಯ ಆರೋಗ್ಯಕರ ಲಾಭಗಳನ್ನು (cardamom benefits) ತಿಳಿಯೋಣ.

Blood Pressure Regulation Cucumber Benefits

ರಕ್ತದೊತ್ತಡಕ್ಕೆ ಪರಿಹಾರ

ಅಧಿಕ ರಕ್ತದೊತ್ತಡ ಇರುವ ಮಂದಿಗೆ ಏಲಕ್ಕಿಯಿಂದ ಲಾಭಗಳಿವೆ. ಒಂದು ಸಂಶೋಧನೆಯ ಪ್ರಕಾರ, ಅಧಿಕ ರಕ್ತದೊತ್ತಡ ಸಮಸ್ಯೆ ಆರಂಭವಾದ 20 ಮಂದಿಗೆ ಪ್ರತಿದಿನ ಮೂರು ಗ್ರಾಂಗಳಷ್ಟು ಏಲಕ್ಕಿ ಪುಡಿ ಪ್ರತಿಯೊಬ್ಬರೂ ಸೇವಿಸದಾಗ 12 ವಾರಗಳಲ್ಲೇ ಅವರ ರಕ್ತದೊತ್ತಡ ಸಮತೋಲನಕ್ಕೆ ಬಂದಿರುವುದು ಸಾಬೀತಾಗಿದೆ. ಇದಕ್ಕೆ ಕಾರಣ, ಏಲಕ್ಕಿಯಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು.

ealthy internal organs of human digestive system / highlighted blue organs

ಜೀರ್ಣಕಾರಿ ಗುಣಗಳಿವೆ

ಏಲಕ್ಕಿಯಲ್ಲಿ ಜೀರ್ಣಕಾರಿ ಗುಣಗಳಿವೆ. ಏಲಕ್ಕಿಯಲ್ಲಿರುವ ಮೆಂಥೋನ್‌ ಎಂಬ ಎಣ್ಣೆಯಂಶಕ್ಕೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಗುಣವಿದೆ. ಇದು ಅಸಿಡಿಟಿ, ಅಜೀರ್ಣ ಹಾಗೂ ಹೊಟ್ಟೆ ನೋವಿನಂಥ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ. ಇದಕ್ಕೆ ಜೀರ್ಣಕ್ರಿಯೆಯನ್ನು ಪ್ರಚೋದಿಸುವ ಗುಣವಿದೆ.

ವಾಂತಿಗೆ ಪರಿಹಾರ

ಏಲಕ್ಕಿಯಲ್ಲಿ ವಾಂತಿ ಹಾಗೂ ತಲೆಸುತ್ತಿನಂಥ ಸಮಸ್ಯೆಗೆ ಪರಿಹಾರವಿದೆ. ವಾಂತಿಯಾದ ಮೇಲೆ ಆಗುವ ಗಂಟಲಿನ ಹುಳಿ ರುಚಿಯಂಥ ಕಿರಿಕಿರಿ ಗಂಟಲು ಕೆರೆತದ ಭಾವಕ್ಕೆ ಏಲಕ್ಕಿ ಒಳ್ಳೆಯ ಪರಿಹಾರ. ಅಷ್ಟೇ ಅಲ್ಲ, ಪ್ರಯಾಣದಲ್ಲಿ ಆಗುವ ವಾಂತಿಯಂಥ ಸಮಸ್ಯೆಗೂ ಏಲಕ್ಕಿಯನ್ನು ಬಾಯಲ್ಲಿ ಇಟ್ಟುಕೊಳ್ಳುವುದರಿಂದ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ.

Woman Suffering from Toothache Benefits Of Drinking Green Tea

ಹಲ್ಲು ನೋವು ನಿವಾರಣೆ

ಏಲಕ್ಕಿಯಲ್ಲಿ ಆಂಟಿ ಸೆಪ್ಟಿಕ್‌ ಹಾಗೂ ಆಂಟಿ ಮೈಕ್ರೋಬಿಯಲ್‌ ಗುಣಗಳಿವೆ. ಇದರಿಂದಾಗಿ ಇದು ಹಲ್ಲಿನ ಸಮಸ್ಯೆಗಳಿಗೆ ಒಳ್ಳೆಯದು. ಏಲಕ್ಕಿಯಲ್ಲಿರುವ ಎಣ್ಣೆಯ ಅಂಶ ಹಲ್ಲು ನೋವಿಗೆ ಒಳ್ಳೆಯ ಔಷಧಿ. ಯಾಕೆಂದರೆ ಇದರಲ್ಲಿರುವ ಆಂಟಿ ಸೆಪ್ಟಿಕ್‌ ಗುಣವು ಕ್ಯಾವಿಟಿಗೆ ಬಹಳ ಒಳ್ಳೆಯದು. ಅಷ್ಟೇ ಅಲ್ಲ, ಹಲ್ಲು ಹುಳುಕಾಗುವುದನ್ನೂ ಇದು ತಡೆಯುತ್ತದೆ.

ಶೀತ ಬಾಧೆ ನಿವಾರಣೆ

ಶೀತ ಹಾಗೂ ನೆಗಡಿಗೂ ಏಲಕ್ಕಿ ಒಳ್ಳೆಯದು ಎಂದರೆ ನಂಬುತ್ತೀರಾ? ಹೌದು, ನಂಬಲೇಬೇಕು. ಏಲಕ್ಕಿಯಲ್ಲಿರುವ ವಿಶೇಷ ಗುಣವು ಕಫ ಕಟ್ಟುವುದನ್ನು ತಡೆಯುತ್ತದೆ. ಇದು ಶ್ವಾಸಕೋಶದಲ್ಲಿ ರಕ್ತ ಪರಿಚಲನೆಯನ್ನು ಚುರುಕಾಗಿಸುತ್ತದೆ. ಇದರಿಂದ ಉಸಿರಾಟದ ಗತಿಯೂ ಚುರುಕಾಗುತ್ತದೆ.

ಅತ್ಯುತ್ತಮ ಡಿಟಾಕ್ಸ್‌

ಏಲಕ್ಕಿ ಅತ್ಯುತ್ತಮ ಡಿಟಾಕ್ಸ್‌ ಕೂಡಾ ಹೌದು. ಇದು ರಕ್ತದಲ್ಲಿರುವ ವಿಷಕಾರಿ ಅಂಶವನ್ನು ದೇಹದಿಂದ ಹೊರಕ್ಕೆ ಕಳುಹಿಸುತ್ತದೆ. ಏಲಕ್ಕಿಯಲ್ಲಿರುವ ಏಸೆನ್ಶಿಯಲ್ ಆಯಿಲ್‌ ಹಾಗೂ ಫೈಟೋಕೆಮಿಕಲ್‌ಗಳಲ್ಲಿ ಡಿಟಾಕ್ಸ್‌ ಗುಣವಿದೆ.

ನಿಕೋಟಿನ್‌ನಿಂದ ಹೊರ ಬರಲು ಮದ್ದು

ನಿಕೋಟಿನ್‌ ಚಟಕ್ಕೆ ಬಿದ್ದ ಮಂದಿ, ಇದರಿಂದ ಹೊರಬರುವ ಇಚ್ಛೆಯಿದ್ದರೆ ನೈಸರ್ಗಿಕ ಉಪಾಯ ಎಂದರೆ ಅದು ಏಲಕ್ಕಿ. ಏಲಕ್ಕಿಯನ್ನು ದಿನಕ್ಕೆ ನಾಲ್ಕೈದು ಬಾರಿ ಜಗಿಯುವ ಮೂಲಕ ನಿಕೋಟಿನ್‌ ಬಯಕೆಯನ್ನು ನಿಧಾನವಾಗಿ ಹತ್ತಿಕ್ಕಬಹುದು. ಖಿನ್ನತೆಯಂತ ಸಮಸ್ಯೆ ಇರುವ ಮಂದಿಯ ನಿದ್ದೆಗೂ ಇದು ಒಳ್ಳೆಯದು.

Women with Breast Cancer Prevention Benefits Of Drinking Green Tea

ಕ್ಯಾನ್ಸರ್‌ ವಿರೋಧಿ ಗುಣ

ಏಲಕ್ಕಿಯಲ್ಲಿ ಕ್ಯಾನ್ಸರ್‌ ವಿರೋಧಿ ಗುಣಗಳೂ ಇವೆ. ದೇಹದಲ್ಲಿರುವ ಕ್ಯಾನ್ಸರ್‌ ವಿರೋಧಿ ಕಿಣ್ವಗಳನ್ನು ಮತ್ತಷ್ಟು ಚುರುಕಾಗಿಸುವ ಮೂಲಕ ಏಲಕ್ಕಿ ಕ್ಯಾನ್ಸರ್‌ನಂತಹ ಕಾಯಿಲೆಯ ವಿರುದ್ಧವೂ ಹೋರಾಡುವ ಗುಣ ಹೊಂದಿದೆ. ಇತ್ತೀಚೆಗೆ ನಡೆದ ಅಧ್ಯಯನವೊಂದು ಇದನ್ನು ಪುಷ್ಠೀಕರಿಸುತ್ತದೆ. ಕ್ಯಾನ್ಸರ್‌ನ ಗಡ್ಡೆಯ ಅಂಗಾಂಶಗಳನ್ನು ಕೊಲ್ಲಲು ಏಲಕ್ಕಿಯಲ್ಲಿರುವ ವಿಶೇಷ ಗುಣವು ಸಹಾಯ ಮಾಡುತ್ತದೆ.

ಇದನ್ನೂ ಓದಿ: Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

ಏನು ಮಾಡಬಹುದು?

ಏಲಕ್ಕಿಯ ಈ ಆರೋಗ್ಯಕರ ಗುಣಗಳನ್ನು ಪಡೆಯಲು ನಾವು ಏನು ಮಾಡಬಹುದು, ಹೇಗೆ ಇದನ್ನು ಸೇವಿಸಬೇಕು ಎಂಬುದು ಈಗ ಬಹುತೇಕರಲ್ಲಿರುವ ಪ್ರಶ್ನೆ. ಏಲಕ್ಕಿಯ ಒಂದೆರಡು ಬೀಜಗಳನು ಬಾಯಲ್ಲಿ ಹಾಕಿ ಮೌತ್‌ ಫ್ರೆಶ್ನರ್‌ನ ಹಾಗೆ ಬಳಸಬಹುದು. ಅಥವಾ ಏಲಕ್ಕಿ, ಜಾಯಿಕಾಯಿ, ಅರಿಶಿನ, ಕರಿಮೆಣಸು ಇತ್ಯಾದಿಗಳ ಪುಡಿ ಮಾಡಿ ಇಟ್ಟುಕೊಂಡು ರಾತ್ರಿ ಮಲಗುವ ಮುನ್ನ ಕುಡಿಯುವ ಹಾಲಿಗೆ ಚಿಟಿಕೆ ಪುಡಿ ಸೇರಿಸಿ ಕುಡಿಯಬಹುದು. ಇದರಿಂದ ಸೊಂಪಾದ ನಿದ್ರೆಯೂ ಬರುತ್ತದೆ. ಅಥವಾ ನಿತ್ಯವೂ ಕುಡಿಯುವ ನೀರಿಗೆ ಏಲಕ್ಕಿಯ ಎಸಳೊಂದನ್ನು ಹಾಕಿಡಬಹುದು. ಇನ್ನುಳಿದಂತೆ, ಆಹಾರದ ಮೂಲಕ, ಸಿಹಿತಿಂಡಿಗಳ ಮೂಲಕ ಏಲಕ್ಕಿ ಆಗಾಗ ದೇಹ ಸೇರುತ್ತಲೇ ಇರುತ್ತದೆ. ಈ ಎಲ್ಲ ವಿಧಾನಗಳ ಮೂಲಕ ಏಲಕ್ಕಿಯ ಲಾಭವನ್ನು ನಾವು ಪಡೆಯಬಹುದು.

Continue Reading

ಆಹಾರ/ಅಡುಗೆ

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

ಕೆಲವು ಬಗೆಯ ಹಣ್ಣುಗಳು, ಒಣಬೀಜಗಳು, ಒಣಹಣ್ಣುಗಳು, ಹಸಿ ತರಕಾರಿಗಳು, ಮೊಳಕೆ ಕಾಳುಗಳು, ಬೇಯಿಸಿದ ಕಾಳುಗಳು ಹೀಗೆ ಹತ್ತು ಹಲವು ಬಗೆಯ ಕಾಂಬಿನೇಶನ್ನಿನ ಸಲಾಡ್‌ಗಳನ್ನು ನಿತ್ಯವೂ ತಯಾರಿಸಬಹುದು. ಕಡಿಮೆ ಕ್ಯಾಲರಿಯ, ಪ್ರೊಟೀನ್‌ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನಮ್ಮ ದೇಹಕ್ಕೆ ಒದಗಿಸಬಲ್ಲ ಆಹಾರವಾದ ಈ ಸಲಾಡ್‌ಗಳು ಆರೋಗ್ಯಕರ ಎಂಬುದರಲ್ಲಿ ಎರಡು ಮಾತೇ ಇಲ್ಲ. ಹಸಿವಾದಾಗ ತಕ್ಷಣ ಹಸಿವು ಕಡಿಮೆ ಮಾಡಬಲ್ಲ ಆಪದ್ಬಾಂಧವ ಕೂಡಾ ಈ ಸಲಾಡ್‌ಗಳೇ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಆರೋಗ್ಯ ವರ್ಧಿಸುವ ಸಲಾಡ್‌ಗಳನ್ನು ಮಾಡುವ ಸಮಯದಲ್ಲಿ (healthy salad tips) ಕೆಲವು ತಪ್ಪುಗಳನ್ನು ಮಾಡುವ ಅಪಾಯವೂ ಇದೆ.

VISTARANEWS.COM


on

Healthy Salad Tips
Koo

ಪೋಷಕಾಂಶಯುಕ್ತ ಆಹಾರ ಎಂದಾಕ್ಷಣ ಸುಲಭವಾಗಿ ನೆನಪಿಗೆ ಬರುವುದು ಸಲಾಡ್‌ಗಳು. ಸುಲಭವಾಗಿ ಮಾಡಬಹುದಾದ, ಹೆಚ್ಚೂ ಶ್ರಮ ಬೇಡದ, ಬೇಗ ಹೊಟ್ಟೆ ತುಂಬಿಸುವ ಗುಣ ಉಳ್ಳ ಸಲಾಡ್‌ಗಳು ತೂಕ ಇಳಿಸುವ ಮಂದಿಯ ಪರಮಾಪ್ತ ಸ್ನೇಹಿತನಂತೆ. ಕಚೇರಿಗಳಿಗೆ ಬಿಡು ಹೊತ್ತಿನಲ್ಲಿ ತಿನ್ನಬಹುದಾದ ಸ್ನ್ಯಾಕ್‌ಗಳ ಬದಲಿಗೂ ಈ ಸಲಾಡ್‌ಗಳು ಅನೇಕರಿಗೆ ಸುಲಭವಾಗಿ ಮಾಡಬಹುದಾದ ಆಹಾರವೇ ಆಗಿದೆ. ಕೆಲವು ಬಗೆಯ ಹಣ್ಣುಗಳು, ಒಣಬೀಜಗಳು, ಒಣಹಣ್ಣುಗಳು, ಹಸಿ ತರಕಾರಿಗಳು, ಮೊಳಕೆ ಕಾಳುಗಳು, ಬೇಯಿಸಿದ ಕಾಳುಗಳು ಹೀಗೆ ಹತ್ತು ಹಲವು ಬಗೆಯ ಕಾಂಬಿನೇಶನ್ನಿನ ಸಲಾಡ್‌ಗಳನ್ನು ನಿತ್ಯವೂ ತಯಾರಿಸಬಹುದು. ಕಡಿಮೆ ಕ್ಯಾಲರಿಯ, ಪ್ರೊಟೀನ್‌ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ನಮ್ಮ ದೇಹಕ್ಕೆ ಒದಗಿಸಬಲ್ಲ ಆಹಾರವಾದ ಈ ಸಲಾಡ್‌ಗಳು ಆರೋಗ್ಯಕರ ಎಂಬುದರಲ್ಲಿ ಎರಡು ಮಾತೇ ಇಲ್ಲ. ಹಸಿವಾದಾಗ ತಕ್ಷಣ ಹಸಿವು ಕಡಿಮೆ ಮಾಡಬಲ್ಲ ಆಪದ್ಬಾಂಧವ ಕೂಡಾ ಈ ಸಲಾಡ್‌ಗಳೇ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಈ ಆರೋಗ್ಯ ವರ್ಧಿಸುವ ಸಲಾಡ್‌ಗಳನ್ನು ಮಾಡುವ ಸಮಯದಲ್ಲಿ ಕೆಲವು ತಪ್ಪುಗಳನ್ನು ಮಾಡುವ ಅಪಾಯವೂ ಇದೆ. ಬನ್ನಿ, ನೀವು ಸಲಾಡ್‌ಗಳನ್ನು ಮಾಡುವ ಸಂದರ್ಭ ಈ ಕೆಳಗಿನ ತಪ್ಪುಗಳನ್ನು ಮಾಡುತ್ತಿದ್ದೀರಿ ಎಂದಾದಲ್ಲಿ, ಆರೋಗ್ಯಕ್ಕೆ ಒಳಿತಾಗುವ ರೀತಿಯಲ್ಲಿ ತಿದ್ದಿಕೊಳ್ಳಿ. ಬನ್ನಿ, ಸಲಾಡ್‌ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ (healthy salad tips) ಮಾಡುವ ತಪ್ಪುಗಳೇನು ಎಂಬುದನ್ನು ನೋಡೋಣ.

Greek Salad

ಡ್ರೆಸ್ಸಿಂಗ್‌ ಅತಿಯಾಗಿ ಮಾಡುವುದು

ಹೌದು, ಸಲಾಡ್‌ ಎಂದಾಕ್ಷಣ ಡ್ರೆಸ್ಸಿಂಗ್‌ ಸಹಜ. ಯಾಕೆಂದರೆ ಸಲಾಡ್‌ಗೆ ಒಂದು ರುಚಿಯನ್ನು ನೀಡುವುದೇ ಈ ಡ್ರೆಸ್ಸಿಂಗ್‌. ಆದರೆ, ಅತಿಯಾದ ಡ್ರೆಸ್ಸಿಂಗ್‌ ಮಾಡುವುದರಿಂದ ಸಲಾಡ್‌ನಲ್ಲಿ ಕೊಬ್ಬು ಜಾಸ್ತಿಯಾಗಬಹುದು. ಹೆಚ್ಚು ಕ್ಯಾಲರಿ ಸೇರಿಕೊಳ್ಳಬಹುದು. ಕೇವಲ ರುಚಿಗೆ ತಕ್ಕಷ್ಟೇ ಡ್ರೆಸ್ಸಿಂಗ್‌ ಮಾಡಿ.

ತರಕಾರಿಗಳನ್ನು ತೊಳೆಯದೆ ಇರುವುದು

ಹಸಿಯಾದ ತರಕಾರಿಗಳನ್ನು ಹಾಗೆಯೇ ಸಲಾಡ್‌ಗೆ ಬಳಸುವುದರಿಂದ ತರಕಾರಿಗಳನ್ನು ತೊಳೆಯುವುದು ಅತ್ಯಂತ ಮುಖ್ಯವಾದ ಘಟ್ಟ. ಹಾಗಾಗಿ ತರಕಾರಿಗಳನ್ನು ಒಮ್ಮೆ ಉಪ್ಪು ನೀರಿನಲ್ಲಿ ಹಾಕಿಟ್ಟು ತೊಳೆಯುವುದನ್ನು ರೂಢಿ ಮಾಡಿಕೊಳ್ಳಿ. ಯಾಕೆಂದರೆ ಇಲ್ಲಿ ತರಕಾರಿ ಬೇಯುವುದಿಲ್ಲವಾದ್ದರಿಂದ ಕೆಲವು ರಾಸಾಯನಿಕಗಳು ತರಕಾರಿಗೆ ಸಿಂಪಡಿಸಲ್ಪಟ್ಟದ್ದು ಹಾಗೆಯೇ ಉಳಿದಿರುವ ಸಾಧ್ಯತೆಯೂ ಇದೆ. ಹಾಗಾಗಿ, ತರಕಾರಿಯನ್ನು ಎರಡೆರಡು ಬಾರಿ ತೊಳೆದುಕೊಂಡು ಬಳಸಿ.

ಇದನ್ನೂ ಓದಿ: Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

ಅತಿಯಾಗಿ ತರಕಾರಿಗಳನ್ನು ಬಳಸುವುದು

ಸಲಾಡ್‌ ಎಂದಾಕ್ಷಣ ಬೇಕಾದ ಹಾಗೆ ತರಕಾರಿಗಳನ್ನು ಬಳಸಬಹುದು ಎಂಬ ನಿಮ್ಮ ಎಣಿಕೆಯಾಗಿದ್ದರೆ ಅದು ತಪ್ಪು. ತರಕಾರಿಗಳ ಸಂಖ್ಯೆಯೂ ಅತಿಯಾಗಬಾರದು. ಒಂದಕ್ಕೊಂದು ಹೊಂದಿಕೊಳ್ಳುವ ಮೂರ್ನಾಲ್ಕು ಬಗೆಯ ತರಕಾರಿಗಳಿಗಿಂತ ಹೆಚ್ಚು ಬಳಸಬೇಡಿ. ತರಕಾರಿಗಳು ಅತಿಯಾದರೆ, ಅವು ಹಸಿಯಾಗಿರುವುದರಿಂದ ಇವು ಗ್ಯಾಸ್‌ನಂತಹ ಸಮಸಯೆಯನ್ನು ತಂದೊಡ್ಡಬಹುದು. ಜೀರ್ಣದ ಸಮಸ್ಯೆಗಳೂ ತಲೆದೋರಬಹುದು. ಕೆಲವರಿಗೆ ಹಸಿ ತರಕಾರಿಗಳು ಕರಗುವುದಿಲ್ಲ. ಇಂಥ ಮಂದಿ ತರಕಾರಿಗಳನ್ನು ಸ್ವಲ್ಪ ಬೇಯಿಸಿಕೊಂಡು ತಿನ್ನಬಹುದು. ಹೀಗೆ ಮಾಡುವುದರಿಂದ ಜೀರ್ಣ ಸಮಸ್ಯೆಗಳು ಬರದು.

Continue Reading

ಆರೋಗ್ಯ

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

Vijayanagara News: ದಡಾರಾ ಮತ್ತು ರುಬೆಲ್ಲಾ ಲಸಿಕಾ ಅಭಿಯಾನವು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು ಎಂದು ವಿಜಯನರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
Koo

ಹೊಸಪೇಟೆ: ದಡಾರಾ ಮತ್ತು ರುಬೆಲ್ಲಾ ಲಸಿಕಾ ಅಭಿಯಾನವು ಜಿಲ್ಲೆಯಲ್ಲಿ (Vijayanagara News) ಅಚ್ಚುಕಟ್ಟಾಗಿ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ದಡಾರಾ ಮತ್ತು ರುಬೆಲ್ಲಾ 2024 ಡಿಸೆಂಬರ್‌ದೊಳಗೆ ನಿರ್ಮೂಲನೆಯಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿ ನಡೆಯಬೇಕು. ಮಗುವಿಗೆ 9 ತಿಂಗಳ ತುಂಬಿದ ನಂತರ ಮೊದಲನೇ ಡೋಸ್ ನೀಡಬೇಕು. ಆ ಬಳಿಕ ಒಂದೂವರೆ ವರ್ಷಕ್ಕೆ ಎರಡನೇ ಡೋಸ್ ನೀಡುವ ಕಾರ್ಯವು ಜಿಲ್ಲೆಯಲ್ಲಿ ಶೇ. 100ರಷ್ಟು ಆಗಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದನ್ನೂ ಓದಿ: Forest Man Of India: ಇವರೇ ನೋಡಿ ಭಾರತದ ಫಾರೆಸ್ಟ್‌ ಮ್ಯಾನ್‌; ಏಕಾಂಗಿಯಾಗಿ 1,360 ಎಕ್ರೆಯಲ್ಲಿ ಕಾಡು ಬೆಳೆಸಿದ ಸಾಹಸಿ

ಮಕ್ಕಳಿಗೆ ಲಸಿಕೆಯನ್ನು ಹಾಕಿಸಲು ಕೆಲವೊಮ್ಮೆ ಗ್ರಾಮೀಣ ಪ್ರದೇಶದ ಜನರು ಸಹಕರಿಸುವುದಿಲ್ಲ. ಆದ್ದರಿಂದ ದಡಾರ ಮತ್ತು ರುಬೆಲ್ಲಾ ಲಸಿಕೆಯ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರ, ಮಹಿಳಾ ಸಂಘ-ಸಂಸ್ಥೆಗಳ, ಆಶಾ ಕಾರ್ಯಕರ್ತೆಯರ ಸಹಕಾರ ಪಡೆದುಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಶಂಕರ್ ನಾಯ್ಕ್ ಎಲ್. ಮಾತನಾಡಿ, ಗ್ರಾಮೀಣ ಭಾಗದ ಕೆಲ ಜನರು ಮೂಢ ನಂಬಿಕೆಗಳಿಂದ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡುವುದಿಲ್ಲ. ಆರೋಗ್ಯ ಇಲಾಖೆಯ ಯಾವುದೇ ಲಸಿಕೆ ಮತ್ತು ಅದರ ಮಹತ್ವದ ಕುರಿತು ವ್ಯಾಪಕವಾಗಿ ಜನರಿಗೆ ತಿಳಿವಳಿಕೆ ಮೂಡಿಸುವ ಕಾರ್ಯವು ಲಸಿಕಾ ಅಭಿಯಾನದ ಜತೆಜತೆಗೆ ಸಾಗಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ಮಕ್ಕಳಲ್ಲಿ ಜ್ವರ ಮತ್ತು ತದ್ದು ಕಂಡು ಬರುತ್ತಿದ್ದಲ್ಲಿ ಪಾಲಕರು ನಿರ್ಲಕ್ಷ್ಯ ಮಾಡಬಾರದು. ಅಂತಹ ಮಕ್ಕಳಿದ್ದಲ್ಲಿ ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು. ಆರೋಗ್ಯ ಇಲಾಖೆಯ ಗಮನಕ್ಕೆ ತರಬೇಕು. ಜ್ವರ ಮತ್ತು ತದ್ದು ಕಂಡು ಬರುವ ಮಕ್ಕಳೇನಾದರು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ ಈ ಬಗ್ಗೆ ಖಾಸಗಿ ಆಸ್ಪತ್ರೆಗಳು ಸರ್ಕಾರಿ ಆಸ್ಪತ್ರೆಗಳಿಗೆ ವರದಿ ಮಾಡಬೇಕು ಎಂದು ತಿಳಿಸಿದರು.

ಎನ್‌ಪಿಎಸ್‌ಪಿ ಸರ್ವೆಲನ್ಸ್ ನೋಡಲ್ ಅಧಿಕಾರಿ ಡಾ.ಶ್ರೀಧರ ಆರ್.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಡಾ.ಷಣ್ಮುಖ ನಾಯ್ಕ ಬಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊಡ್ಡಮನಿ ಎಂ.ಪಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಕೆ.ಕಮಲಮ್ಮ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ. ರಾಧಿಕಾ, ಹೊಸಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಭಾಸ್ಕರ್, ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಜಗದೀಶ್ ಪಾಟ್ನೆ ಸೇರಿದಂತೆ ಇತರರು ಇದ್ದರು.

Continue Reading

ಆರೋಗ್ಯ

World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

ಜಗತ್ತಿನಲ್ಲಿ ಇಂದು (World No Tobacco Day )ತಂಬಾಕಿನ ಚಟ ಯುವ ವಯಸ್ಸಿನವರನ್ನೂ ಬಲಿ ತೆಗೆದುಕೊಳ್ಳುತ್ತಿದೆ. ನಿತ್ಯವೂ ತಂಬಾಕಿನ ಸೇವನೆಯಿಂದಾಗಿ ದೇಹಾರೋಗ್ಯವನ್ನು ಕೆಡಿಸಿಕೊಂಡು, ಅನೇಕ ಮಾರಕ ಕಾಯಿಲೆಗಳಿಗೆ ಬಲಿ ಬೀಳುತ್ತಿರುವುದು ಸಾಮಾನ್ಯವಾಗಿದೆ. ಜಗತ್ತಿನಲ್ಲಿ ವಯಸ್ಸಲ್ಲದ ವಯಸ್ಸಿನಲ್ಲಿ ಸಾಯುವ ಮಂದಿಯ ಮುಖ್ಯ ಅನಾರೋಗ್ಯದ ಕಾರಣ ಈ ತಂಬಾಕೇ ಆಗಿದೆ. ಹಾಗಾಗಿ ಧೂಮಪಾನ ಸೇರಿದಂತೆ ತಂಬಾಕಿನ ಚಟ ಯಾವ ರೀತಿಯಲ್ಲಿ ದೇಹಾರೋಗ್ಯವನ್ನು ಹಾಳು ಮಾಡಬಹುದು, ಯಾವೆಲ್ಲ ಕಾಯಿಲೆಗಳಿಗೆ ಇದು ನೇರವಾದ ಆಹ್ವಾನ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

World No Tobacco Day
Koo

ಮೇ 31 ವಿಶ್ವ ತಂಬಾಕು ದಿನ (World No Tobacco Day). ವಿಶ್ವದೆಲ್ಲೆಡೆ ತಂಬಾಕು ಮುಕ್ತ ಸಮಾಜಕ್ಕಾಗಿ ದನಿ ಎತ್ತುವ, ಜಾಗೃತಿ ಮೂಡಿಸುವ ದಿನವಾಗಿ ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಪ್ರತೀ ವರ್ಷ ಹಮ್ಮಿಕೊಳ್ಳುತ್ತದೆ. ಈ ವರ್ಷ ಮಕ್ಕಳಿಂದ ತಂಬಾಕನ್ನು ದೂರವಿಡಿ ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ವಿಶ್ವ ಆರೋಗ್ಯ ಸಂಸ್ಥೆ ಮಕ್ಕಳಲ್ಲಿಯೂ ಈ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಸಣ್ಣ ಮಕ್ಕಳು ನೇರವಾಗಿ ತಂಬಾಕು ಬಳಸದಿದ್ದರೂ, ತಮ್ಮ ಹೆತ್ತವರಿಂದ, ಸುತ್ತಮುತ್ತಲ ಪರಿಸರದಿಂದ ಹಾಗೂ ತಂಬಾಕು ಮಾರುಕಟ್ಟೆಯ ಜಗತ್ತಿನಿಂದಾಗಿ ಇದರ ವರ್ತಲದೊಳಕ್ಕೆ ಬೀಳುವ ಸಂಭವ, ಅನಿವಾರ್ಯತೆ ಹೆಚ್ಚು. ಈ ಅನಿವಾರ್ಯತೆಗೆ ಬಿದ್ದ ಮಕ್ಕಳನ್ನು ತಂಬಾಕಿನ ಜಗತ್ತಿನಿಂದ ಮೇಲೆತ್ತುವ ಹಾಗೂ ತಾವು ಇದಕ್ಕೆ ಬಲಿ ಬೀಳದಿರುವ ಬಗ್ಗೆ ಅವರಲ್ಲಿ ಎಚ್ಚರಿಕೆಯ ಬೀಜ ಬಿತ್ತುವ ಚಿಂತನೆ, ಉದ್ದೇಶ ವಿಶ್ವ ಆರೋಗ್ಯ ಸಂಸ್ಥೆಯದ್ದು. ಮಕ್ಕಳು ತಂಬಾಕಿನ ಚಟಕ್ಕೆ ಎಳವೆಯಲ್ಲಿಯೇ ಬೀಳದಂತೆ ರಕ್ಷಿಸುವುದು ಹಾಗೂ ತಂಬಾಕು ಮುಕ್ತ ಸ್ವಸ್ಥ ಸಮಾಜದ ಕನಸು ಈ ಘೋಷವಾಕ್ಯದ ಹಿಂದಿರುವ ಉದ್ದೇಶ. ಜಗತ್ತಿನಲ್ಲಿ ಇಂದು ತಂಬಾಕಿನ ಚಟ ಯುವ ವಯಸ್ಸಿನವರನ್ನೂ ಬಲಿ ತೆಗೆದುಕೊಳ್ಳುತ್ತಿದೆ. ನಿತ್ಯವೂ ತಂಬಾಕಿನ ಸೇವನೆಯಿಂದಾಗಿ ದೇಹಾರೋಗ್ಯವನ್ನು ಕೆಡಿಸಿಕೊಂಡು, ಅನೇಕ ಮಾರಕ ಕಾಯಿಲೆಗಳಿಗೆ ಬಲಿ ಬೀಳುತ್ತಿರುವುದು ಸಾಮಾನ್ಯವಾಗಿದೆ. ಜಗತ್ತಿನಲ್ಲಿ ವಯಸ್ಸಲ್ಲದ ವಯಸ್ಸಿನಲ್ಲಿ ಸಾಯುವ ಮಂದಿಯ ಮುಖ್ಯ ಅನಾರೋಗ್ಯದ ಕಾರಣ ಈ ತಂಬಾಕೇ ಆಗಿದೆ. ಹಾಗಾಗಿ ಧೂಮಪಾನ ಸೇರದಂತೆ ತಂಬಾಕಿನ ಚಟ ಯಾವ ರೀತಿಯಲ್ಲಿ ದೇಹಾರೋಗ್ಯವನ್ನು ಹಾಳು ಮಾಡಬಹುದು, ಯಾವೆಲ್ಲ ಕಾಯಿಲೆಗಳಿಗೆ ಇದು ನೇರವಾದ ಆಹ್ವಾನ ಎಂಬುದನ್ನು ನೋಡೋಣ.

Prevent Heart Attack

ಹೃದಯಾಘಾತಕ್ಕೂ ಮೂಲ

ತಂಬಾಕು ಎಂದ ತಕ್ಷಣ ಕೇವಲ ಶ್ವಾಸಕೋಶಕ್ಕೆ ಮಾತ್ರ ಸಂಬಂಧಿಸಿದ್ದು ಅಂದುಕೊಂಡರೆ ತಪ್ಪಾದೀತು. ಕಾರಣ, ಈ ಚಟ ದೇಹದ ಒಟ್ಟು ಆರೋಗ್ಯದ ಮೇಲೆ ಅತಿ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಹೃದ್ರೋಗ, ಹೃದಯಾಘಾತದಂತಹ ಸಮಸ್ಯೆಗಳೂ ತಂಬಾಕಿನ ಚಟದಿಂದ ಬರಬಹುದು. ರಕ್ತನಾಳಗಳು ತೆಳ್ಳಗಾಗಿ, ರಕ್ತ ಹರಿಯಲು ಸರಿಯಾದ ಜಾಗವಿಲ್ಲದೆ, ಬ್ಲಾಕ್‌ ಆಗುವುದರಿಂದ ಹೃದಯಾಘಾತದಂತಹ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು.

ಕ್ಯಾನ್ಸರ್‌ಗೆ ಕಾರಣ

ಪಿತ್ತಕೋಶ, ಜಠರ, ಕರುಳಿನ ಕ್ಯಾನ್ಸರ್‌ ಬರುವ ಸಾಧ್ಯತೆಗಳು ಜಾಸ್ತಿ. ಕರುಳು ಜಠರದಲ್ಲಿ ಹುಣ್ಣು, ಅನ್ನನಾಳದಲ್ಲಿ ಅಲ್ಸರ್‌ನಂತಹ ಸಮಸ್ಯೆಗಳು ತಲೆದೋರಬಹುದು. ನುಂಗಲು ಕಷ್ಟವಾಗುವುದು, ಹೊಟ್ಟೆ ನೋವು ಇತ್ಯಾದಿ ಆರಂಭಿಕ ಲಕ್ಷಣಗಳಿಂದ ಸಮಸ್ಯೆ ಶುರುವಾಗಬಹುದು.

ಸಂತಾನೋತ್ಪತ್ತಿಯ ಶಕ್ತಿ ಕುಂಠಿತ

ತಂಬಾಕಿನ ಚಟವು ಸಂತಾನೋತ್ಪತ್ತಿಯ ಶಕ್ತಿಯ ಮೇಲೆಯೂ ಕೆಟ್ಟ ಪರಿಣಾಮ ಬೀರಬಹುದು. ಮಹಿಳೆಯರಿಗಾದರೆ ಗರ್ಭ ನಿಲ್ಲದಿರುವುದು, ಗರ್ಭಸ್ರಾವ, ಮಕ್ಕಳಾಗದಿರುವ ಸಮಸ್ಯೆ, ಪುರುಷರಿಗೆ ವೀರ್ಯದ ಸಂಖ್ಯೆಯಲ್ಲಿ ಕುಸಿತ ಇತ್ಯಾದಿಗಳಿಂದ ಲೈಂಗಿಕ ಬಯಕೆಗಳಾಗದೇ ಇರುವುದು ಇತ್ಯಾದಿ ಸಮಸ್ಯೆಗಳೂ ಉದ್ಭವಿಸಬಹುದು.

Dark lip May be due to increased cigarette smoking or excessive sun exposure Lips Healthy Tips

ಬಾಯಿ ಆರೋಗ್ಯಕ್ಕೂ ಮಾರಕ

ಬಾಯಿಯ ಆರೋಗ್ಯ ಬಹಳ ಬೇಗನೆ ಹಾಳಾಗುತ್ತದೆ. ಬಾಯಿಯಲ್ಲಿ ಅಲ್ಸರ್‌, ಹುಣ್ಣುಗಳು, ಕೆಟ್ಟ ವಾಸನೆ, ಹಲ್ಲು ನೋವು ಇತ್ಯಾದಿ ಸಮಸ್ಯೆಗಳಾಗಬಹುದು.

ಚರ್ಮ ಕಳೆಗುಂದುತ್ತದೆ

ಚರ್ಮಕ್ಕೆ ಬಹುಬೇಗನೆ ವಯಸ್ಸಾದಂತೆ ಕಾಣಬಹುದು. ತುಟಿ, ಚರ್ಮ ಕಪ್ಪಾಗುವುದು, ಚರ್ಮದಲ್ಲಿ ನಿರಿಗೆಗಳ ಸಮಸ್ಯೆ, ಚರ್ಮ ಜೋತು ಬೀಳುವುದು ಇತ್ಯಾದಿ ಸಾಮಾನ್ಯ.

Food Beneficial For Eye Health

ದೃಷ್ಟಿ ಮಂದ

ಕಣಿನ ದೃಷ್ಟಿಯ ಮೇಲೆಯೂ ಇದು ಪರಿಣಾಮ ಬೀರುತ್ತದೆ. ದೃಷ್ಟಿ ಮಂಜಾಗುವುದು, ಕಣ್ಣಿನ ಸಮಸ್ಯೆಗಳು ಕೂಡಾ ಸಾಮಾನ್ಯ.

ರೋಗನಿರೋಧಕ ಶಕ್ತಿ ಕುಂಠಿತ

ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತದೆ. ಬಹುಬೇಗನೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಕಾಯಿಲೆಗೆ ಬೀಳುವುದೂ ಕೂಡಾ ಸಹಜವೇ ಆಗುತ್ತದೆ.

ಇದನ್ನೂ ಓದಿ : World No Tobacco Day: ಇಂದು ವಿಶ್ವ ತಂಬಾಕು ರಹಿತ ದಿನ; ತಂಬಾಕು ಸೇವನೆಯಿಂದ ವರ್ಷಕ್ಕೆ 60 ಲಕ್ಷ ಜನರ ಸಾವು!

ಖಿನ್ನತೆ ಕಾರಣ

ಮಾನಸಿಕ ಆರೋಗ್ಯದಲ್ಲಿ ಏರುಪೇರು, ಖಿನ್ನತೆ, ಒತ್ತಡ, ಉದ್ವೇಗದಂತಹ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತದೆ.

Continue Reading
Advertisement
Porsche Crash
ದೇಶ2 mins ago

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Physical Abuse
ಉಡುಪಿ6 mins ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್31 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ33 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 202437 mins ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು40 mins ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20241 hour ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ1 hour ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ1 hour ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

cm Siddaramaiah And DK Shivakumar
ಪ್ರಮುಖ ಸುದ್ದಿ1 hour ago

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌