Public Exam : 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕಥೆ ಏನು? ಇಂದು ಹೈಕೋರ್ಟ್‌ ಇತ್ಯರ್ಥ ಸಾಧ್ಯತೆ - Vistara News

ಕೋರ್ಟ್

Public Exam : 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕಥೆ ಏನು? ಇಂದು ಹೈಕೋರ್ಟ್‌ ಇತ್ಯರ್ಥ ಸಾಧ್ಯತೆ

Public Exam : ಸುಪ್ರೀಂಕೋರ್ಟ್‌ ನೀಡಿದ ತಡೆಯಾಜ್ಞೆಯಿಂದ 5, 8, 9ನೇ ತರಗತಿಯ ಪಬ್ಲಿಕ್‌ ಪರೀಕ್ಷೆ ಅರ್ಧದಲ್ಲೇ ನಿಂತಿದೆ. ಈ ಅನಿಶ್ಚಿತತೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯುವ ವಿಚಾರಣೆ ವೇಳೆ ಇತ್ಯರ್ಥವಾಗಬಹುದು ಎಂಬ ನಿರೀಕ್ಷೆ ಇದೆ.

VISTARANEWS.COM


on

Public Exam high court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಬೋರ್ಡ್‌ ಎಕ್ಸಾಂ‌ (Public Exam) ಅರ್ಧದಲ್ಲೇ ನಿಂತಿದೆ. ಶಾಲಾ ಶಿಕ್ಷಣ ಇಲಾಖೆಯು (School Education department) ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮಕ್ಕಳಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಹೈಕೋರ್ಟ್‌ (Karnataka High court) ಮೆಟ್ಟಿಲೇರಿತ್ತು. ಹೈಕೋರ್ಟ್‌ ಪರೀಕ್ಷೆಗೆ ಅನುಮತಿ ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ್ದರಿಂದ ಮಾರ್ಚ್‌ 12ರಂದು ಸುಪ್ರೀಂಕೋರ್ಟ್‌ ಪರೀಕ್ಷೆಗೆ (Supreme Court Stay) ತಡೆ ನೀಡಿದೆ. ವಿವಾದವನ್ನು ಹೈಕೋರ್ಟ್‌ನಲ್ಲೇ ಇತ್ಯರ್ಥಪಡಿಸಲು ಸೂಚಿಸಿದೆ. ಈ ನಡುವೆ ಮಾರ್ಚ್‌ 11ರಿಂದ ಆರಂಭಗೊಂಡ ಪರೀಕ್ಷೆಯನ್ನು ಮಧ್ಯದಲ್ಲೇ ನಿಲ್ಲಿಸಲಾಗಿದೆ. ಹೀಗಾಗಿ ಅತಂತ್ರ ಸ್ಥಿತಿ ನಿರ್ಮಾಣಗೊಂಡಿದೆ.

ರಾಜ್ಯ ಸರ್ಕಾರ ವಿವಾದವನ್ನು ಇತ್ಯರ್ಥಪಡಿಸಲು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಆದರೆ, ಅದು ಸಾಧಕ ಬಾಧಕಗಳ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಇತ್ತ ಬೋರ್ಡ್‌ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ರುಪ್ಸಾ ಬೆಂಬಲಿತ ಕೆಲವು ಪೋಷಕರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕು ಎಂಬ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಶಿಕ್ಷಣ ಇಲಾಖೆಯ ಸುತ್ತೋಲೆ ರದ್ದತಿ ಕೋರಿದ ಅರ್ಜಿ

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ವೇಳೆ ಅನುದಾನ ರಹಿತ ಶಾಲೆಗಳ ಕೆಲ ವಿದ್ಯಾರ್ಥಿಗಳು ಮತ್ತವರ ಪೂಷಕರ ಪರ ವಕೀಲರ ಮೆಮೊ ಸಲ್ಲಿಸಿ, ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ರಾಜೇಶ್‌ ರೈ ಕೆ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಕೋರಿದರು.

ಈ ಮನವಿಯನ್ನು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರುಪ್ಸಾ) ಪರ ವಕೀಲರು ಬೆಂಬಲಿಸಿದರು. ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ಮುಂದೂಡಿ ಮಾರ್ಚ್‌ 12ರಂದು ರಾಜ್ಯ ಸರ್ಕಾರ ಮತ್ತೊಂದು ಸುತ್ತೋಲೆ ಹೊರಡಿಸಿದೆ. ಪರೀಕ್ಷೆ ನಡೆಸುವ ಸಂಬಂಧ ಅಧಿಸೂಚನೆಯನ್ನು ಹೈಕೋರ್ಟ್‌ ಏಕ ಸದಸ್ಯ ಪೀಠ ಹಾಗೂ ಸುಪ್ರೀಂ ಕೋರ್ಟ್‌ ಸಹ ರದ್ದುಪಡಿಸಿವೆ. ಇಂತಹ ಸಂದರ್ಭದಲ್ಲಿ ಸುತ್ತೋಲೆ ಹೊರಡಿಸಿಯೇ ಸರ್ಕಾರ ಪರೀಕ್ಷೆ ಮುಂದೂಡಿದೆ. ಈ ಸುತ್ತೋಲೆ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮತ್ತೊಂದು ಮೊಮೊ ಸಲ್ಲಿಸಿದರು.

ಈ ಎರಡೂ ಮೆಮೊಗಳನ್ನು ತಿರಸ್ಕರಿಸಿದ ಪೀಠವು ಮೇಲ್ಮನವಿಯನ್ನು ವಿಚಾರಣೆ ನಡೆಸಿ ಶೀಘ್ರ ಸೂಕ್ತ ನಿರ್ಧಾರ ಪ್ರಕಟಿಸುವಂತೆ ಹೈಕೋರ್ಟ್‌ಗೆ (ವಿಭಾಗೀಯ ಪೀಠಕ್ಕೆ) ಸುಪ್ರೀಂ ಕೋರ್ಟ್‌ ಸೂಚಿಸಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿತು. ಅಂತೆಯೇ, ಮೇಲ್ಮನವಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಇಂದು ಮಹತ್ವದ ವಿಚಾರಣೆ ನಿರೀಕ್ಷೆ

ಇದೇ ಸಂದರ್ಭದಲ್ಲಿ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಅವಕಾಶ ಕಲ್ಪಿಸಬಾರದು ಎಂದು ಕೋರಿ ಎರಡು ಪ್ರತ್ಯೇಕ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳ ವಿಚಾರಣೆಯನ್ನು ಇನ್ನಷ್ಟೇ ನಡೆಸಬೇಕಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ಖಾಸಗಿ ಶಿಕ್ಷಣ ಸಂಸ್ಥೆಗ ಪರ ವಕೀಲರು, ಸರ್ಕಾರ ನಡೆಸುವುದಕ್ಕೆ ಮುಂದಾಗಿರುವ ಪರೀಕ್ಷಾ ಕ್ರಮ ಗೊಂದಲಗಳಿಂದ ಕೂಡಿದೆ. ಇದರಿಂದ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸರ್ಕಾರದ ಈ ಸುತ್ತೋಲೆ ಕರ್ನಾಟಕ ಶಿಕ್ಷಣ ಕಾಯಿದೆಯ ಸೆಕ್ಷನ್ 22ಕ್ಕೆ ಸೀಮಿತವಾಗಿಲ್ಲ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಅಲ್ಲದೆ, ಸರ್ಕಾರದ ಸುತ್ತೋಲೆಗಳನ್ನು ಸುಪ್ರೀಂ ಕೋರ್ಟ್ ಕಾನೂನುಬಾಹಿರ ಎಂದು ರದ್ದುಪಡಿಸಿದೆ. ಹೀಗಾಗಿ, ಸುತ್ತೋಲೆ ರದ್ದುಪಡಿಸಿರುವ ಕ್ರಮ ಸರಿಯಾಗಿದೆ ಎಂದು ವಿಭಾಗೀಯ ಪೀಠಕ್ಕೆ ವಿವರಿಸಿದರು.

ಇದನ್ನೂ ಓದಿ : Public Exam : ಸುಪ್ರೀಂ ಆದೇಶದಂತೆ 5,8, 9 ತರಗತಿ ಪರೀಕ್ಷೆ ಮುಂದೂಡಿಕೆ; ಶಿಕ್ಷಣ ಇಲಾಖೆ ಪ್ರಕಟಣೆ

ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ಅರ್ಜಿದಾರರು ವಿನಾಕಾರಣ ಪ್ರಕರಣ ಎಳೆದು ಹೋಗುತ್ತಿದ್ದಾರೆ. ಇದರಿಂದ ಮೇಲ್ಮನವಿ ಇತ್ಯರ್ಥಪಡಿಸಲು ವಿಳಂಬವಾಗಲಿದೆ. ಕರ್ನಾಟಕ ಶಿಕ್ಷಣ ಕಾಯಿದೆಯ ಸೆಕ್ಷನ್ ಪ್ರಕಾರ ರಾಜ್ಯ ಸರ್ಕಾರಕ್ಕೆ ಬೋರ್ಡ್‌ ಪರೀಕ್ಷೆ ನಡೆಸುವುದಕ್ಕೆ ಅವಕಾಶವಿದೆ. ಅದರಂತೆ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.

ಇದೀಗ ಶುಕ್ರವಾರದ ವಿಚಾರಣೆಯಲ್ಲಿ ಪರೀಕ್ಷೆಗೆ ಸಂಬಂಧಿಸಿ ಒಂದು ತೀರ್ಮಾನ ಬರಬಹುದು ಎಂಬ ನಿರೀಕ್ಷೆಯಲ್ಲಿ ಮಕ್ಕಳ ಪೋಷಕರು ಇದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

NOTA: ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಸುಪ್ರೀಂ ಪ್ರಶ್ನೆ

NOTA: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠವು, ದೇಶದಾದ್ಯಂತ ಮತದಾರರ ಜಾಗೃತಿ ಮೂಡಿಸಲು ಚುನಾವಣೆಗಳಲ್ಲಿ ನೋಟಾವನ್ನು “ಕಾಲ್ಪನಿಕ ಚುನಾವಣಾ ಅಭ್ಯರ್ಥಿ” ಎಂದು ಪರಿಗಣಿಸಬೇಕೆ ಎಂಬುದನ್ನು ಪರಿಶೀಲಿಸಲು ಸಹ ಒಪ್ಪಿಗೆ ನೀಡಿದೆ.

VISTARANEWS.COM


on

nota vote
Koo

ಹೊಸದಿಲ್ಲಿ: ʼನೋಟಾʼ (NOTA) ಆಯ್ಕೆಗೆ ಹೆಚ್ಚಿನ ಸಂಖ್ಯೆಯ ಮತಗಳು ಬಿದ್ದ ಕ್ಷೇತ್ರದಲ್ಲಿ ಹೊಸ ಚುನಾವಣೆ ನಡೆಸಬಹುದೇ ಎಂಬ ಪ್ರಶ್ನೆಯನ್ನು ಚುನಾವಣಾ ಆಯೋಗದ (Election commission of India) ಮುಂದೆ ಸುಪ್ರೀಂ ಕೋರ್ಟ್‌ (Supreme court) ಇಟ್ಟು ಉತ್ತರ ಬಯಸಿದೆ. ಮತದಾರರಿಗೆ (Voters) “ಮೇಲಿನ ಯಾವುದೂ ಅಲ್ಲ” (ನೋಟಾ) ಆಯ್ಕೆಯನ್ನು ನೀಡಿದ ಹನ್ನೊಂದು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತೀಯ ಚುನಾವಣಾ ಆಯೋಗದಿಂದ (ECI) ಪ್ರತಿಕ್ರಿಯೆ ಕೇಳಿದೆ.

ನೋಟಾ ಬಟನ್ ಇವಿಎಂಗಳಲ್ಲಿ ಅಭ್ಯರ್ಥಿಗಳ ಪಟ್ಟಿಯ ಅತ್ಯಂತ ಕೆಳಭಾಗದಲ್ಲಿರುತ್ತದೆ. ಪ್ರಸ್ತುತ, ಒಂದು ಕ್ಷೇತ್ರದಲ್ಲಿ ನೋಟಾ ಹೆಚ್ಚು ಮತಗಳನ್ನು ಗಳಿಸಿದರೆ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠವು, ದೇಶದಾದ್ಯಂತ ಮತದಾರರ ಜಾಗೃತಿ ಮೂಡಿಸಲು ಚುನಾವಣೆಗಳಲ್ಲಿ ನೋಟಾವನ್ನು “ಕಾಲ್ಪನಿಕ ಚುನಾವಣಾ ಅಭ್ಯರ್ಥಿ” ಎಂದು ಪರಿಗಣಿಸಬೇಕೆ ಎಂಬುದನ್ನು ಪರಿಶೀಲಿಸಲು ಸಹ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ನೋಟಾಗೆ ಗರಿಷ್ಠ ಮತಗಳನ್ನು ಪಡೆದ, ಮತದಾರರಿಂದ ತಿರಸ್ಕೃತಗೊಂಡ ಅಭ್ಯರ್ಥಿಗಳನ್ನು ಹೊಸ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿಸಬಾರದು ಎಂಬ ಅರ್ಜಿದಾರರ ಮನವಿಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತು.

“ನಾವು ಅದನ್ನು ಹೇಗೆ ಮಾಡಲು ಸಾಧ್ಯ? ಅದು ಶಾಸಕಾಂಗದ ಆಯ್ಕೆ. ನಾವು ಅಂತಹ ಆದೇಶ ನೀಡಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಈ ವಿಷಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರ ಶಿವ ಖೇರಾ ಪರ ಹಾಜರಿದ್ದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರಿಗೆ ನ್ಯಾಯಪೀಠ ಹೇಳಿದೆ. ಖೇರಾ ದೆಹಲಿ ಮೂಲದ ಸ್ಫೂರ್ತಿ ಭಾಷಣಕಾರ ಮತ್ತು ಲೇಖಕ.

2013ರಲ್ಲಿ ನೋಟಾವನ್ನು ಪರಿಚಯಿಸಿದ್ದು, ಪ್ರಜಾಪ್ರಭುತ್ವದಲ್ಲಿ ಮತದಾರರ ಆಯ್ಕೆಯನ್ನು ಉತ್ತಮಗೊಳಿಸುವ ಸುಪ್ರೀಂ ಕೋರ್ಟ್‌ನ ಉದ್ದೇಶವನ್ನು ಮುಂದುವರಿಸುವ ಗುರಿಯನ್ನು ಅರ್ಜಿಯು ಹೊಂದಿದೆ ಎಂದು ಶಂಕರನಾರಾಯಣನ್ ಒತ್ತಿ ಹೇಳಿದರು. “ಸೂರತ್‌ನಲ್ಲಿ ಮತ ಚಲಾಯಿಸದೇ ಒಬ್ಬ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲಾಯಿತು. ಏಕೆಂದರೆ ಕಣದಲ್ಲಿ ಬೇರೆ ಅಭ್ಯರ್ಥಿ ಇರಲಿಲ್ಲ. ಮತದಾರರಿಗೆ ಆಯ್ಕೆ ಇರಲಿಲ್ಲ,” ಎಂದು ಅವರು ವಾದಿಸಿದರು.

ಮೇ 7ರಂದು ಮೂರನೆ ಹಂತದ ಮತದಾನ ನಡೆಯಲಿರುವ ಹದಿನೈದು ದಿನಗಳ ಮೊದಲು ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಭ್ಯರ್ಥಿ ಮುಖೇಶ್ ದಲಾಲ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಖೇರಾ ಅವರ ಅರ್ಜಿಯನ್ನು ಪರಿಶೀಲಿಸಲು ಸಮ್ಮತಿಸಿದ ಪೀಠ, ಇಸಿಐಗೆ ನೋಟಿಸ್ ಜಾರಿ ಮಾಡಿದೆ.

ನೋಟಾ ಮತ ತಟಸ್ಥವಾದುದು. ಯಾವುದೇ ಸಂಖ್ಯಾ ಮೌಲ್ಯವನ್ನು ಹೊಂದಿಲ್ಲ. ನೋಟಾ ಆಯ್ಕೆಯ ಶೂನ್ಯ ಸಂಖ್ಯಾತ್ಮಕ ಮೌಲ್ಯದ ಹೊರತಾಗಿಯೂ, 2013ರ ಸುಪ್ರೀಂ ಕೋರ್ಟ್ ತೀರ್ಪು “ಇದು ರಾಜಕೀಯ ಪಕ್ಷಗಳನ್ನು ಸಮರ್ಥ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಲು ಒತ್ತಾಯಿಸುತ್ತದೆ” ಎಂದು ಹೇಳಿದೆ. 2013ರ ತೀರ್ಪು ಹೇಳುವಂತೆ, “ನೋಟಾ ಮತದಾನವು ಚುನಾವಣೆಯಲ್ಲಿ ವ್ಯವಸ್ಥಿತ ಬದಲಾವಣೆಗೆ ಕಾರಣವಾಗುತ್ತದೆ ಮತ್ತು ರಾಜಕೀಯ ಪಕ್ಷಗಳು ಶುದ್ಧ ಅಭ್ಯರ್ಥಿಗಳನ್ನು ಹಾಕಲು ಒತ್ತಾಯಿಸುತ್ತದೆ. ಮತದಾನದ ಹಕ್ಕು ಶಾಸನಬದ್ಧ ಹಕ್ಕಾಗಿದ್ದರೆ, ಅಭ್ಯರ್ಥಿಯನ್ನು ತಿರಸ್ಕರಿಸುವ ಹಕ್ಕು ಸಂವಿಧಾನದ ಅಡಿಯಲ್ಲಿ ಭಾಷಣ ಮತ್ತು ಅಭಿವ್ಯಕ್ತಿಯ ಮೂಲಭೂತ ಹಕ್ಕು,” ಎಂದಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಟಾ 6,50,000ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದೆ. ಇದು ಒಟ್ಟು ಮತದ 1.06%. 17ನೇ ಲೋಕಸಭೆಗೆ ಸ್ಪರ್ಧಿಸಿದ 36 ಪಕ್ಷಗಳ ಪೈಕಿ ಹದಿನೈದು ರಾಜಕೀಯ ಪಕ್ಷಗಳು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿವೆ. ಈ ಪಕ್ಷಗಳು ಬೆರಳೆಣಿಕೆಯಷ್ಟು ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿವೆ.

2021ರಲ್ಲಿ, ಸುಪ್ರೀಂ ಕೋರ್ಟ್ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರ ಇದೇ ರೀತಿಯ ಅರ್ಜಿಯನ್ನು ಒಪ್ಪಿಕೊಂಡಿತ್ತು. “ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಸಬಲೀಕರಣಗೊಳಿಸಲು” ಮತ್ತು “ರಾಜಕೀಯ ಪಕ್ಷಗಳು ಹೆಚ್ಚು ಉತ್ತಮ ಆಯ್ಕೆಯನ್ನು ನೀಡಲು ಪ್ರೋತ್ಸಾಹಿಸಲು” ಕೋರಿತು. ಉಪಾಧ್ಯಾಯ ಅವರ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ.

ಇದನ್ನೂ ಓದಿ: Election Commission: ಥೀಮ್‌ ಸಾಂಗ್‌ನಲ್ಲಿ ‘ಜೈ ಭವಾನಿ’ ಪದ ಬಳಕೆ; ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ನೋಟಿಸ್‌

Continue Reading

ಕೋರ್ಟ್

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Chemistry paper leak: ಭಾರಿ ಚರ್ಚೆಗೆ ಗ್ರಾಸವಾಗಿ ರಾಜ್ಯದ ಗಮನ ಸೆಳೆದಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಆರೋಪಿಗಗಳನ್ನು ಖುಲಾಸೆಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

VISTARANEWS.COM


on

By

Chemistry paper leak case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ (Chemistry paper leak) ಪ್ರಕರಣದ 17 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

2016ರ ಮಾ.21ರಂದು ನಡೆದಿದ್ದ ದ್ವಿತೀಯ ಪಿಯು ರಸಾಯನಶಾಸ್ತ್ರದ ಪ್ರಶ್ನೆಪತ್ರಿಕೆಯು ಅದೇ ದಿನ ದಿನ ಬೆಳಗ್ಗೆ 7.30ಕ್ಕೆ ಸೋರಿಕೆಯಾಗಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿತ್ತು. ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳ ಒತ್ತಾಯಕ್ಕೆ ಮಣಿದು ಆಗೀನ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.

ಬಳಿಕ ತನಿಖೆ ನಡೆಸಿದ್ದ ಸಿಐಡಿ‌ ಅಧಿಕಾರಿಗಳು 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ವೇಳೆ ವಿಚಾರಣಾ ಹಂತದಲ್ಲಿಯೇ ಓರ್ವ ಆರೋಪಿ ಸಾವನ್ನಪ್ಪಿದರು. ಉಳಿದ ಆರೋಪಿಗಳನ್ನು ನ್ಯಾಯಾಲಯವು ಇಂದು ಗುರುವಾರ (ಏ.25) ಖುಲಾಸೆಗೊಳಿಸಿದೆ.

ಇನ್ನೂ ತನಿಖೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿತ್ತು. ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿತ್ತು. ಹೀಗಾಗಿ ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಯನ್ನೂ ನಡೆಸಿದ್ದರು.

2016ರ ಮಾರ್ಚ್ 21ರಂದು ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಮಾರ್ಚ್ 31ರಂದು ಮರು ಪರೀಕ್ಷೆ ನಡೆಸಿದಾಗಲೂ ಎರಡು ಬಾರಿಯೂ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ನಂತರ ಈ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

wealth redistribution: ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

VISTARANEWS.COM


on

supreme court wealth redistribution
Koo

ಹೊಸದಿಲ್ಲಿ: “ಸಂಪತ್ತು ಮರುಹಂಚಿಕೆ” (Wealth redistribution) ಕುರಿತ ವಿವಾದ (controversy) ರಾಷ್ಟ್ರ ರಾಜಕೀಯದಲ್ಲಿ ಜೋರಾಗುತ್ತಿರುವಂತೆ, ವ್ಯಕ್ತಿಯ ಖಾಸಗಿ ಒಡೆತನದ (Private property) ಆಸ್ತಿಯನ್ನು “ಸಮುದಾಯದ ವಸ್ತು ಸಂಪನ್ಮೂಲ” (community property) ಎಂದು ಪರಿಗಣಿಸಬಹುದೇ ಎಂದು ನಿರ್ಧರಿಸಲು ಮೂರು ದಶಕಗಳಷ್ಟು ಹಳೆಯ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಪೀಠ ಮರಳಿ ಕೈಗೆತ್ತಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠವು (nine judges bench) ಇಂದಿನಿಂದ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ವಿವಾದವೇನು?

ಬಿರುಸಿನ ಲೋಕಸಭೆ ಚುನಾವಣೆ (lok Sabha Election 2024) ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇದ್ದ ಒಂದು ಉಲ್ಲೇಖವನ್ನು ಎತ್ತಿ ಆಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi), “ಸಂಪತ್ತು ಪುನರ್ ವಿತರಣಾ ಯೋಜನೆಯ ಭಾಗವಾಗಿ ಮನೆ, ಚಿನ್ನ, ವಾಹನ ಸೇರಿದಂತೆ ಖಾಸಗಿ ಆಸ್ತಿಯನ್ನು ಕಿತ್ತುಕೊಳ್ಳುವುದಾಗಿ ಕಾಂಗ್ರೆಸ್ (Congress) ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ” ಎಂದಿದ್ದರು. ಇದು ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ಅಂತಹ ಯಾವುದೇ ಯೋಜನೆಯನ್ನು ಕಾಂಗ್ರೆಸ್ ನಿರಾಕರಿಸಿದೆ. ಪ್ರಧಾನಿ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ. ಕಾಂಗ್ರೆಸ್ ಆಯ್ಕೆಯಾದರೆ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿ ನಡೆಸಲಿದೆ ಎಂದು ಅದರ ಪ್ರಣಾಳಿಕೆ ಹೇಳುತ್ತದೆ. “ಜಾತಿಗಳು ಮತ್ತು ಉಪ-ಜಾತಿಗಳು ಮತ್ತು ಅವರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಎಣಿಸಲು ಕಾಂಗ್ರೆಸ್ ರಾಷ್ಟ್ರವ್ಯಾಪಿ ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಯನ್ನು ನಡೆಸುತ್ತದೆ. ದತ್ತಾಂಶದ ಆಧಾರದ ಮೇಲೆ, ನಾವು ಸಕಾರಾತ್ಮಕ ಕ್ರಮಕ್ಕಾಗಿ ಕಾರ್ಯಸೂಚಿಯನ್ನು ಬಲಪಡಿಸುತ್ತೇವೆ.” ಖಾಸಗಿ ಆಸ್ತಿ ಮರುಹಂಚಿಕೆ ಯೋಜನೆ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿಲ್ಲ.

Narendra Modi

ಕೋರ್ಟ್‌ ಮುಂದಿರುವ ಪ್ರಕರಣ ಮತ್ತು ಅದರ ಇತಿಹಾಸ

ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಪೀಠದ ಮುಂದಿರುವ ಪ್ರಕರಣವು 1986ರ ಹಿಂದಿನದು. ಮಹಾರಾಷ್ಟ್ರ ಸರ್ಕಾರವು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಕಾಯಿದೆ- 1976 (MHADA) ಇದನ್ನು ತಿದ್ದುಪಡಿ ಮಾಡಿತ್ತು. 70 ಪ್ರತಿಶತ ನಿವಾಸಿಗಳ ಒಪ್ಪಿಗೆಯಿದ್ದರೆ ಮರುಸ್ಥಾಪನೆ ಉದ್ದೇಶಗಳಿಗಾಗಿ ಕೆಲವು “ಸೆಸ್ಡ್ ಆಸ್ತಿಗಳನ್ನು” ಸ್ವಾಧೀನಪಡಿಸಿಕೊಳ್ಳಬಹುದು ಎಂಬ ಅಧಿಕಾರವನ್ನು ಇದು ಮುಂಬೈ ಕಟ್ಟಡ ದುರಸ್ತಿ ಮತ್ತು ಪುನರ್ನಿರ್ಮಾಣ ಮಂಡಳಿಗೆ ಹೊಂದಲು ಅವಕಾಶ ಮಾಡಿಕೊಟ್ಟಿತು. ತಿದ್ದುಪಡಿಯು ಸಂವಿಧಾನದ 39(ಬಿ) ವಿಧಿಯನ್ನು ಉಲ್ಲೇಖಿಸಿದೆ. ಅದು “ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಲಾಗುವುದು” ಎಂದು ಹೇಳುತ್ತದೆ.

ಮುಂಬೈನಲ್ಲಿರುವ 20,000ಕ್ಕೂ ಹೆಚ್ಚು ಭೂಮಾಲೀಕರನ್ನು ಪ್ರತಿನಿಧಿಸುವ ಆಸ್ತಿ ಮಾಲೀಕರ ಸಂಘ (POA) ಈ ತಿದ್ದುಪಡಿಯನ್ನು ಪ್ರಶ್ನಿಸಿದೆ ಮತ್ತು ವಸತಿ ಸಂಕೀರ್ಣಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಮಂಡಳಿಗೆ ಇದು ಅನಿಯಂತ್ರಿತ ಅಧಿಕಾರವನ್ನು ನೀಡಿದೆ ಎಂದು ವಾದಿಸಿದೆ. ಡಿಸೆಂಬರ್ 1991ರಲ್ಲಿ, ಬಾಂಬೆ ಉಚ್ಚ ನ್ಯಾಯಾಲಯವು, “ಸಾಮಾನ್ಯ ಜನರಿಗೆ ಆಶ್ರಯ ನೀಡುವುದು ಸರ್ಕಾರವು ಕರ್ತವ್ಯವಾಗಿದೆ” ಎಂಬ ಕಾರಣಕ್ಕಾಗಿ ಅರ್ಜಿಗಳನ್ನು ರದ್ದುಗೊಳಿಸಿತು.

ಪಿಒಎ ಮತ್ತು ಇತರ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಅವರ ಅರ್ಜಿಯನ್ನು ಇನ್ನೆರಡು ಪ್ರಕರಣಗಳಿಗೆ ಜೋಡಿಸಲಾಗಿದೆ. ಅವು ಶಿವರಾಮ ರಾಮಯ್ಯ ಯೆರಾಳ ವರ್ಸಸ್‌ ಮಹಾರಾಷ್ಟ್ರ ಸರ್ಕಾರ ಪ್ರಕರಣ ಹಾಗೂ ಬಾಂಬೆಯ ಪ್ರಮೀಳಾ ಚಿಂತಾಮಣಿ ಮೋಹನ್‌ದಾಸ್ ವರ್ಸಸ್‌ ಮಹಾರಾಷ್ಟ್ರ ರಾಜ್ಯ ಸರ್ಕಾರ. ಇವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅತ್ಯಂತ ಹಳೆಯ ಪ್ರಕರಣಗಳಾಗಿವೆ. ಸುಪ್ರೀಂ ಕೋರ್ಟ್ ಪೀಠವು ಇವನ್ನು ಐದು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿತ್ತು. ಅದು ಇವನ್ನು ಏಳು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು. 2002ರಲ್ಲಿ, ಆಗಿನ ಮುಖ್ಯ ನ್ಯಾಯಮೂರ್ತಿ ಎಸ್‌ಪಿ ಭರೂಚಾ ನೇತೃತ್ವದ ಏಳು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಒಂಬತ್ತು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು.

2019ರಲ್ಲಿ, ಮತ್ತೊಂದು ಪ್ರಮುಖ ಬೆಳವಣಿಗೆ ನಡೆಯಿತು. ಮಹಾರಾಷ್ಟ್ರ ಸರ್ಕಾರ ಮತ್ತೆ ಕಾನೂನನ್ನು ತಿದ್ದುಪಡಿ ಮಾಡಿತು. ಹೊಸ ತಿದ್ದುಪಡಿಯ ಪ್ರಕಾರ, ಗಡುವಿನೊಳಗೆ ಆಸ್ತಿ ಮರುಸ್ಥಾಪಿಸಲು ಭೂಮಾಲೀಕರು ವಿಫಲವಾದರೆ, ರಾಜ್ಯ ಸರ್ಕಾರವು ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಬಹುದಿತ್ತು. ಇದು ಕಲ್ಯಾಣ ಶಾಸನ ಎಂದು ರಾಜ್ಯ ಸರ್ಕಾರ ಒತ್ತಿಹೇಳಿತು. ಆದರೆ ಆಸ್ತಿಯನ್ನು ಕಡಿಮೆ ಬೆಲೆಗೆ ಕಿತ್ತುಕೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸುವ ಯೋಜನೆ ಇದು ಎಂದು ಭೂಮಾಲೀಕರು ಆರೋಪಿಸಿದರು.

ಕಳೆದ ವರ್ಷ, ವಿಚಾರಣೆಗೆ ಬಾಕಿ ಇರುವ ಒಂಬತ್ತು ನ್ಯಾಯಾಧೀಶರ ಪೀಠದ ಪ್ರಕರಣಗಳನ್ನು ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ನಿನ್ನೆ ನಡೆಸಿತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್, ನ್ಯಾಯಮೂರ್ತಿ ಬಿವಿ ನಾಗರತ್ನ, ನ್ಯಾಯಮೂರ್ತಿ ಸುಧಾಂಶು ಧುಲಿಯಾ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ನ್ಯಾಯಮೂರ್ತಿ ಮನೋಜ್ ಮಿಶ್ರಾ, ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರು ಪೀಠದಲ್ಲಿರುವ ಇತರ ಎಂಟು ನ್ಯಾಯಾಧೀಶರು. ಒಟ್ಟು 16 ಅರ್ಜಿಗಳು ನ್ಯಾಯಾಲಯದ ಮುಂದಿವೆ.

ನಿರ್ಣಾಯಕ ಪ್ರಶ್ನೆ

ನ್ಯಾಯಾಲಯದ ಮುಂದಿರುವ ಪ್ರಮುಖ ಸಮಸ್ಯೆಯು ಸಂವಿಧಾನದಲ್ಲಿನ ಎರಡು ನಿಬಂಧನೆಗಳಿಗೆ ಸಂಬಂಧಿಸಿದೆ- ಆರ್ಟಿಕಲ್ 31 ಸಿ ಮತ್ತು ಆರ್ಟಿಕಲ್ 39 (ಬಿ). ಇವುಗಳು ರಾಜ್ಯ ನೀತಿಯ ಡೈರೆಕ್ಟಿವ್ ಪ್ರಿನ್ಸಿಪಲ್ಸ್‌ಗೆ ಸಂಬಂಧಿಸಿವೆ. ಈ ತತ್ವಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡುವುದಿಲ್ಲ. ಆದರೆ ದೇಶದ ಆಡಳಿತಕ್ಕೆ ಇವು ಮೂಲಭೂತವಾಗಿವೆ. ಕಾನೂನುಗಳನ್ನು ರಚಿಸುವಾಗ ಈ ತತ್ವಗಳನ್ನು ಅನ್ವಯಿಸುವುದು ರಾಜ್ಯದ ಕರ್ತವ್ಯ ಎಂದು ಸಂವಿಧಾನ ಹೇಳುತ್ತದೆ.

ಆರ್ಟಿಕಲ್ 39(ಬಿ) ಹೇಳುವಂತೆ, ಸಮುದಾಯದ ವಸ್ತು ಸಂಪನ್ಮೂಲಗಳ ಮಾಲೀಕತ್ವ ಮತ್ತು ನಿಯಂತ್ರಣವನ್ನು ಸಾಮಾನ್ಯ ಒಳಿತಿಗಾಗಿ ಉತ್ತಮ ರೀತಿಯಲ್ಲಿ ವಿತರಿಸಬಹುದು. ಆರ್ಟಿಕಲ್ 31(ಸಿ) ಕೆಲವು ನಿರ್ದೇಶನ ತತ್ವಗಳನ್ನು ಜಾರಿಗೆ ತರುವ ಕಾನೂನುಗಳನ್ನು ರಕ್ಷಿಸುತ್ತದೆ. ಇದರ ಅರ್ಥವೇನೆಂದರೆ, ನಿರ್ದೇಶನದ ತತ್ವಗಳ ಅಡಿಯಲ್ಲಿ ರಾಜ್ಯವು ಜಾರಿಗೊಳಿಸಿದ ಯಾವುದೇ ಕಾನೂನನ್ನು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಕ್ಕು ಸೇರಿದಂತೆ ಮೂಲಭೂತ ಹಕ್ಕುಗಳೊಂದಿಗೆ ವ್ಯವಹರಿಸುವ ಸಂವಿಧಾನದ ಆರ್ಟಿಕಲ್ 14 ಮತ್ತು ಆರ್ಟಿಕಲ್ 19ನ್ನು ಮುಂದಿಟ್ಟುಕೊಂಡು ಕೂಡ ಪ್ರತಿಭಟಿಸಲು ಸಾಧ್ಯವಿಲ್ಲ.

supreme court CJI DY chandrachud

ನಿರ್ದೇಶನದ ತತ್ವಗಳಲ್ಲಿ ರಾಜ್ಯವು “ಆದಾಯದಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡಲು ಶ್ರಮಿಸಬೇಕು ಮತ್ತು ವ್ಯಕ್ತಿಗಳ ನಡುವೆ ಮಾತ್ರವಲ್ಲದೆ ವಿವಿಧ ಪ್ರದೇಶಗಳಲ್ಲಿ ವಾಸಿಸುವ ಅಥವಾ ವಿವಿಧ ಕೆಲಸಗಳಲ್ಲಿ ತೊಡಗಿರುವ ಜನರ ಗುಂಪುಗಳ ನಡುವೆಯೂ ಸಹ ಸ್ಥಾನಮಾನ, ಸೌಲಭ್ಯಗಳು ಮತ್ತು ಅವಕಾಶಗಳಲ್ಲಿನ ಅಸಮಾನತೆಗಳನ್ನು ತೊಡೆದುಹಾಕಲು ಪ್ರಯತ್ನಿಸಬೇಕು” ಎಂದು ಹೇಳುತ್ತದೆ.

ಹಾಗಾಗಿ ಖಾಸಗಿ ಆಸ್ತಿಯನ್ನು ʼಸಮುದಾಯದ ವಸ್ತು ಸಂಪನ್ಮೂಲಗಳು’ ಎಂದು ಪರಿಗಣಿಸಬಹುದೇ ಮತ್ತು ಸಾಮಾನ್ಯ ಒಳಿತಿಗಾಗಿ ರಾಜ್ಯವು ಸ್ವಾಧೀನಪಡಿಸಿಕೊಳ್ಳಬಹುದೇ ಎಂಬುದು ನ್ಯಾಯಾಲಯದ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ.

ಪ್ರಮುಖ ಅವಲೋಕನಗಳು

ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು ಕೆಲವು ಪ್ರಮುಖ ಅವಲೋಕನಗಳನ್ನು ಮಾಡಿದರು. “ನೀವು ಆಸ್ತಿಯ ಬಂಡವಾಳಶಾಹಿ ಪರಿಕಲ್ಪನೆಯನ್ನು ನೋಡಿದರೆ, ಅದು ಆಸ್ತಿಗೆ ಪ್ರತ್ಯೇಕತೆಯ ಭಾವನೆಯನ್ನು, ಇದು ಪ್ರತ್ಯೇಕವಾಗಿ ನನ್ನದು ಎಂಬ ಭಾವನೆಯನ್ನು ಆರೋಪಿಸುತ್ತದೆ. ಆಸ್ತಿಯ ಸಮಾಜವಾದಿ ಪರಿಕಲ್ಪನೆಯು ಕನ್ನಡಿ ಪ್ರತಿಬಿಂಬವಾಗಿದೆ. ಇದು ಆಸ್ತಿಗೆ ಸಾಮಾನ್ಯತೆಯ ಕಲ್ಪನೆಯನ್ನು ಸೂಚಿಸುತ್ತದೆ. ಯಾವುದೂ ವ್ಯಕ್ತಿಗೆ ಪ್ರತ್ಯೇಕವಾಗಿಲ್ಲ. ಎಲ್ಲಾ ಆಸ್ತಿಯೂ ಸಮುದಾಯಕ್ಕೆ ಸಾಮಾನ್ಯವಾಗಿದೆ. ಇದು ತೀವ್ರ ಸಮಾಜವಾದಿ ದೃಷ್ಟಿಕೋನ” ಎಂದು ಹೇಳಿದರು.

“ಭಾರತದ ರಾಜ್ಯ ನೀತಿಯ ನಿರ್ದೇಶನ ತತ್ವಗಳು ಗಾಂಧಿ ತತ್ವ ಮತ್ತು ಸಿದ್ಧಾಂತಕ್ಕೆ ಅನುಗುಣವಾಗಿವೆ. ಆ ತತ್ವಗಳೇನು? ನಮ್ಮ ನೀತಿಯು ನಂಬಿಕೆಯ ಆಸ್ತಿಯನ್ನು ಪರಿಗಣಿಸುತ್ತದೆ. ಖಾಸಗಿ ಆಸ್ತಿ ಇಲ್ಲ ಎಂಬುದಕ್ಕಾಗಿ ನಾವು ಸಮಾಜವಾದಿ ಮಾದರಿಯನ್ನು ಅಳವಡಿಸಿಕೊಳ್ಳಲು ಹೋಗಿಲ್ಲ. ಆದರೆ ಖಾಸಗಿ ಆಸ್ತಿ ಇದೆ” ಎಂದವರು ಗಮನಿಸಿದರು.

“ನಮ್ಮ ಆಸ್ತಿಯ ಪರಿಕಲ್ಪನೆಯು ತೀವ್ರ ಬಂಡವಾಳಶಾಹಿ ದೃಷ್ಟಿಕೋನದಿಂದ ಅಥವಾ ತೀವ್ರ ಸಮಾಜವಾದಿ ದೃಷ್ಟಿಕೋನದಿಂದ ಅತ್ಯಂತ ವಿಭಿನ್ನವಾದ, ಅತ್ಯಂತ ಸೂಕ್ಷ್ಮವಾದ ಬದಲಾವಣೆ ಹೊಂದಿದೆ. ನಾವು ಆಸ್ತಿಯನ್ನು ನಂಬುವ ವಿಷಯವೆಂದು ಪರಿಗಣಿಸುತ್ತೇವೆ. ನಾವು ಕುಟುಂಬದಲ್ಲಿ ಮುಂದಿನ ಪೀಳಿಗೆಗೆ ಆಸ್ತಿಯನ್ನು ನೀಡುವ ನಂಬಿಕೆಯನ್ನು ಇರಿಸಿದ್ದೇವೆ. ಆದರೆ ವಿಶಾಲವಾಗಿ ನಾವು ಆಸ್ತಿಯನ್ನು ವಿಶಾಲ ಸಮುದಾಯದ ವಿಶ್ವಾಸದಲ್ಲಿರಿಸುತ್ತೇವೆ. ಅದು ಸುಸ್ಥಿರ ಅಭಿವೃದ್ಧಿಯ ಸಂಪೂರ್ಣ ಪರಿಕಲ್ಪನೆಯಾಗಿದೆ. ಅದನ್ನೇ ನಾವು ಇಂಟರ್‌ಜೆನೆರೇಶನಲ್ ಇಕ್ವಿಟಿ ಎಂದು ಕರೆಯುತ್ತೇವೆ,” ಎಂದು ಅವರು ಹೇಳಿದರು.

“ಸಮುದಾಯದ ವಸ್ತು ಸಂಪನ್ಮೂಲಗಳು ಎಂದರೆ ಸಾರ್ವಜನಿಕ ಸಂಪನ್ಮೂಲಗಳು ಮತ್ತು ನಾವು ವ್ಯಕ್ತಿಯ ಖಾಸಗಿ ಆಸ್ತಿಯಲ್ಲಿ ಅದಿಲ್ಲ ಎಂದು ಸೂಚಿಸುವುದು ಸ್ವಲ್ಪ ವಿಪರೀತ. ಆ ದೃಷ್ಟಿಕೋನವನ್ನು ತೆಗೆದುಕೊಳ್ಳುವುದು ಏಕೆ ಅಪಾಯಕಾರಿ ಎಂದು ನಾನು ಹೇಳುತ್ತೇನೆ. ಗಣಿಗಳು ಮತ್ತು ಖಾಸಗಿ ಅರಣ್ಯಗಳಂತಹ ಸರಳ ವಿಷಯಗಳನ್ನು ತೆಗೆದುಕೊಳ್ಳಿ. ಉದಾಹರಣೆಗೆ, 39 (ಬಿ) ಅಡಿಯಲ್ಲಿ ಖಾಸಗಿ ಅರಣ್ಯಗಳಿಗೆ ಸರ್ಕಾರಿ ನೀತಿ ಅನ್ವಯಿಸುವುದಿಲ್ಲ ಎಂದು ನಾವು ಹೇಳುತ್ತೇವೆ. ಆದ್ದರಿಂದ ಪ್ರತಿಪಾದನೆಯಾಗಿ ಅತ್ಯಂತ ಅಪಾಯಕಾರಿ,” ಅವರು ಹೇಳಿದರು.

ಸಂವಿಧಾನ ರಚನೆಯಾದ 1950ರ ಪರಿಸ್ಥಿತಿಯನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಲಾಗಿತ್ತು. ಆಸ್ತಿಯನ್ನು ಖಾಸಗಿಯಾಗಿ ಹೊಂದಿರುವ ನಂತರ 39 (ಬಿ) ವಿಧಿಗೆ ಯಾವುದೇ ಅನ್ವಯವಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ.” ಎಂದರು.

ಆದಾಗ್ಯೂ, ಮಹಾರಾಷ್ಟ್ರದ ಕಾನೂನು ಶಿಥಿಲಗೊಂಡ ಕಟ್ಟಡಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕಾರಿಗಳಿಗೆ ಅಧಿಕಾರ ನೀಡಿದೆಯೇ ಎಂಬುದು ವಿಭಿನ್ನ ವಿಷಯವಾಗಿದೆ ಮತ್ತು ಅದನ್ನು ಸ್ವತಂತ್ರವಾಗಿ ನಿರ್ಧರಿಸಲಾಗುತ್ತದೆ ಎಂದು ಅದು ಒತ್ತಿಹೇಳಿತು. ‘ಜಮೀಂದಾರಿ’ ಪದ್ಧತಿಯ ರದ್ದತಿಯನ್ನೂ ಮುಖ್ಯ ನ್ಯಾಯಮೂರ್ತಿ ಉಲ್ಲೇಖಿಸಿದರು. “ಸಂವಿಧಾನವು ಸಾಮಾಜಿಕ ಪರಿವರ್ತನೆಯನ್ನು ತರಲು ಉದ್ದೇಶಿಸಿರುವುದರಿಂದ ಸಂವಿಧಾನದಲ್ಲಿ 39 (ಬಿ) ವಿಧವನ್ನು ನಿರ್ದಿಷ್ಟ ರೀತಿಯಲ್ಲಿ ರಚಿಸಲಾಗಿದೆ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಆದ್ದರಿಂದ ನಾವು ಖಾಸಗಿ ಆಸ್ತಿಯನ್ನು ಖಾಸಗಿ ಆಸ್ತಿ ಎಂದು ಹೇಳಿದಾಗ ಆರ್ಟಿಕಲ್ 39 (ಬಿ) ಯಾವುದೇ ಅನ್ವಯವನ್ನು ಹೊಂದಿರುವುದಿಲ್ಲ” ಎಂದು ಅವರು ಹೇಳಿದರು. ಇಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Continue Reading

ಪ್ರಮುಖ ಸುದ್ದಿ

‌Nada Geethe: ನಾಡಗೀತೆ ವಿವಾದ; ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್

‌Nada Geethe: ದಿವಂಗತ ಮೈಸೂರು ಅನಂತಸ್ವಾಮಿ ಅವರು ಸಂಯೋಜಿಸಿದ್ದ 2 ನಿಮಿಷ 30 ಸೆಕೆಂಡ್‌ಗಳ ಕಾಲದ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ರದ್ದು ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದರು.

VISTARANEWS.COM


on

Nada Gheethe
Koo

ಬೆಂಗಳೂರು: ನಾಡಗೀತೆ (‌Nada Geethe) ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಪುರಸ್ಕರಿಸಿದ್ದು, ಸರ್ಕಾರದ ಆದೇಶ ರದ್ದು ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕಾರ ಮಾಡಿದೆ.

ದಿವಂಗತ ಮೈಸೂರು ಅನಂತಸ್ವಾಮಿ ಅವರು ಸಂಯೋಜಿಸಿದ್ದ 2 ನಿಮಿಷ 30 ಸೆಕೆಂಡ್‌ಗಳ ಕಾಲದ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ರದ್ದು ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದರು. ಆದರೆ, ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಕಡ್ಡಾಯಗೊಳಿಸಲು ಸರ್ಕಾರಕ್ಕೆ ಶಿಕ್ಷಣ ಕಾಯ್ದೆಯಡಿ ಅಧಿಕಾರವಿದೆ ಎಂದು ಹೈಕೋರ್ಟ್ ಸ್ಪಷ್ಟನೆ ನೀಡುವ ಮೂಲಕ, ಕಿಕ್ಕೇರಿ ಕೃಷ್ಣಮೂರ್ತಿ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿರುವುದರಿಂದ ಜನರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ. ಸರ್ಕಾರದ ಆದೇಶ ಪ್ರಶ್ನಿಸುವ ಯಾವುದೇ ಅಧಿಕಾರವನ್ನು ಅರ್ಜಿದಾರರು ಹೊಂದಿಲ್ಲ. ಅವರೇನೂ ಸರ್ಕಾರಿ ನೌಕರರಲ್ಲ ಅಥವಾ ಅವರ ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ ಎಂದಾಗಲೀ ಇಲ್ಲ. ಹೀಗಾಗಿ, ಅವರ ಮೂಲಭೂತ ಹಕ್ಕು ಉಲ್ಲಂಘನೆ ಆಗಿದೆ ಎಂಬ ಪ್ರಶ್ನೆಯೇ ಇಲ್ಲಿ ಉದ್ಭವಿಸುವುದಿಲ್ಲ. ನಿಮ್ಮ ಯಾವ ಹಕ್ಕುಗಳೂ ಉಲ್ಲಂಘನೆಯಾಗಿಲ್ಲ ಎಂಬುದನ್ನು ನೆನಪಿಡಿ. ಹೀಗಾಗಿ, ನಿಮ್ಮ ಅರ್ಜಿ ವಜಾ ಮಾಡಲಾಗುತ್ತಿದೆ’ ಎಂದು ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.

ಇದನ್ನೂ ಓದಿ | Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

ಅರ್ಜಿದಾರರ ವಾದವೇನು?

ನಾಡಗೀತೆಯನ್ನು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು’ ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್ 25ರಂದು ಹೊರಡಿಸಿದ ಆದೇಶವನ್ನು ಅರ್ಜಿದಾರ ಕಿಕ್ಕೇರಿ ಕೃಷ್ಣಮೂರ್ತಿ ಅವರು ಪ್ರಶ್ನಿಸಿದ್ದರು. ಅನಂತಸ್ವಾಮಿ ಅವರು ನಾಡಗೀತೆಯ ಕೇವಲ ಒಂದು ಪಲ್ಲವಿ ಮತ್ತು ಎರಡು ಚರಣಗಳಿಗೆ ಮಾತ್ರ ರಾಗ ಸಂಯೋಜಿಸಿದ್ದಾರೆ. ಗಾಯಕ ಮತ್ತು ಸಂಗೀತ ಸಂಯೋಜಕ ಸಿ.ಅಶ್ವತ್ ಅವರು ನಾಡಗೀತೆಯ ಎಲ್ಲಾ ಚರಣಗಳಿಗೆ ರಾಗ ಸಂಯೋಜಿಸಿದ್ದಾರೆ. ಹಾಗಾಗಿ, ಸರ್ಕಾರದ ಆದೇಶ ರದ್ದುಪಡಿಸಬೇಕು ಮತ್ತು ಸಿ.ಅಶ್ವತ್ ಅವರ ರಾಗ ಸಂಯೋಜಿಸಿದ ಧಾಟಿಯಲ್ಲೇ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದ್ದರು. ಆದರೆ, ಇದೀಗ ಈ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

Continue Reading
Advertisement
Zameer Ahmed Khan‌
ಕರ್ನಾಟಕ5 mins ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Medical Negligence
ಕ್ರೈಂ19 mins ago

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

IPL 2024
ಕ್ರೀಡೆ37 mins ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್47 mins ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ50 mins ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Srinivasa Prasad
ಕರ್ನಾಟಕ54 mins ago

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Gold Seized
ಕ್ರೈಂ1 hour ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ1 hour ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ1 hour ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ1 hour ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20244 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ9 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ16 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌