Soujanya Case : ಸೌಜನ್ಯ ಸಾವಿನ ಮರುತನಿಖೆಗೆ ತಂದೆ ಮನವಿ; ಸರ್ಕಾರ, ಸಿಬಿಐಗೆ ಕೋರ್ಟ್‌ ನೋಟಿಸ್‌ - Vistara News

ಕೋರ್ಟ್

Soujanya Case : ಸೌಜನ್ಯ ಸಾವಿನ ಮರುತನಿಖೆಗೆ ತಂದೆ ಮನವಿ; ಸರ್ಕಾರ, ಸಿಬಿಐಗೆ ಕೋರ್ಟ್‌ ನೋಟಿಸ್‌

Soujanya Case : ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರದ ಕೇಸ್‌ಗೆ ಸಂಬಂಧಿಸಿ ಸಿಬಿಐ ಮರು ತನಿಖೆಗೆ ಮನವಿ ಮಾಡಲಾಗಿದೆ. ಈ ಸಂಬಂಧ ಕೋರ್ಟ್‌ ಸರ್ಕಾರ ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗೆ ನೋಟಿಸ್‌ ನೀಡಿದೆ.

VISTARANEWS.COM


on

Soujanya Case High Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಧರ್ಮಸ್ಥಳದಲ್ಲಿ 11 ವರ್ಷದ ಹಿಂದೆ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Soujanya Case) ಮರು ತನಿಖೆ ಕೋರಿ ಆಕೆಯ ತಂದೆ ರಾಜ್ಯ ಹೈಕೋರ್ಟ್‌ಗೆ (Karnataka High court) ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಆಧರಿಸಿ ಹೈಕೋರ್ಟ್‌ ರಾಜ್ಯ ಸರ್ಕಾರ (Karnataka Government) ಮತ್ತು ಸಿಬಿಐಗೆ ನೋಟಿಸ್‌ ಜಾರಿ (Notice to CBI) ಮಾಡಿದೆ. 2012ರ ಅಕ್ಟೋಬರ್‌ 9ರಂದು ನಡೆದ ಈ ಘಟನೆಯಲ್ಲಿ ಆರೋಪಿ ಎಂದು ಬಂಧಿತನಾದ ಸಂತೋಷ್‌ ರಾವ್‌ಗೆ (Accused Santhosh Rao) ಸಿಬಿಐ ಕ್ಲೀನ್‌ ಚಿಟ್‌ ನೀಡಲಾಗಿತ್ತು. ಹಾಗಿದ್ದರೆ ಕೊಲೆಗಾರ ಯಾರು ಎನ್ನುವ ಪ್ರಶ್ನೆ ಗಾಢವಾಗಿ ಕಾಡುತ್ತಿದ್ದು, ಅದನ್ನು ಪತ್ತೆ ಹಚ್ಚಲು ಮರು ತನಿಖೆಯಾಗಲಿ ಎಂಬ ಬೇಡಿಕೆ ಜೋರಾಗಿ ಕೇಳಿಬಂದಿತ್ತು. ಅದರಂತೆ ಯುವತಿ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ‌ ಸೌಜನ್ಯ ಅವರ ತಂದೆ ಚಂದಪ್ಪ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ಪೀಠವು ನೋಟಿಸ್‌ ಜಾರಿಗೊಳಿಸಿದೆ.

Soujanya Case Santhosh Rao

ಪ್ರಕರಣದಿಂದ ಆರೋಪಿ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯು ಇದೇ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿರುವ ಪೀಠವು ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.

ಇದನ್ನೂ ಓದಿ : Soujanya Case : ಸೌಜನ್ಯ ಕೊಲೆ ಪ್ರಕರಣ; ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

Soujanya Case : ಏನಿದು ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ?

  1. 2012ರ ಅಕ್ಟೋಬರ್‌ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
  2. ಬೆಳ್ತಂಗಡಿ ಠಾಣಾ ಪೊಲೀಸರು ಒಂದೆರಡು ದಿನದಲ್ಲಿ ಸಂತೋಷ್‌ ರಾವ್‌ ಎಂಬಾತನೇ ಕೊಲೆಗಾರ ಎಂದು ಹೇಳಿ ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು.
  3. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ 2023ರ ಜೂನ್‌ 16ರಂದು ಆದೇಶಿಸಿತ್ತು.
  4. ಆ ಆದೇಶದಲ್ಲಿ ಪ್ರಾಸಿಕ್ಯೂಷನ್‌ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿತ್ತು.
  5. ಗೋಲ್ಡನ್‌ ಅವರ್‌ನಲ್ಲಿ ತನಿಖೆಯನ್ನು (ಪ್ರಕರಣ ಘಟಿಸಿದ ಅಲ್ಪ ಅವಧಿಯಲ್ಲಿಯೇ ನಡೆಸುವ ಮಾಹಿತಿ, ಸಾಕ್ಷ್ಯ ಸಂಗ್ರಹ) ಸಮರ್ಪಕವಾಗಿ ಮಾಡಿಲ್ಲ ಎಂದು ಸಿಬಿಐ ತನ್ನ ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
  6. ಇದು ಸಂತೋಷ್‌ ರಾವ್‌ ಮಾಡಿದ ಕೊಲೆಯಲ್ಲ, ಯಾರೋ ಪ್ರಭಾವಿಗಳು ಮಾಡಿ ಸಂತೋಷ್‌ ರಾವ್‌ ತಲೆಗೆ ಕಟ್ಟಲಾಗಿದೆ ಎಂಬ ಆರೋಪಗಳು ಜೋರಾಗಿವೆ.
  7. ಸಂತೋಷ್‌ ರಾವ್‌ ಖುಲಾಸೆ ಆಗಿದ್ದರೆ ನಿಜವಾದ ಆರೋಪಿ ಯಾರು ಎನ್ನುವ ಬಗ್ಗೆ ತನಿಖೆಯಾಗಬೇಕು ಎಂಬ ಬೇಡಿಕೆಯೂ ಇದೆ.
  8. ತನಿಖೆ ನ್ಯಾಯೋಚಿತವಾಗಿ ನಡೆದಿಲ್ಲ ಎಂಬುದು ಸ್ಪಷ್ಟವಾಗಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎನ್ನುವುದು ತಂದೆಯ ಮನವಿಯಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

MP High Court: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

MP High Court: ಮಧ್ಯ ಪ್ರದೇಶ ಹೈಕೋರ್ಟ್‌ ನೀಡಿದ ಮಹತ್ವದ ತೀರ್ಪಿನಲ್ಲಿ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

VISTARANEWS.COM


on

MP High Court
Koo

ಭೋಪಾಲ್‌: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ (MP High Court) ತೀರ್ಪು ನೀಡಿದೆ. ವೈವಾಹಿಕ ಅತ್ಯಾಚಾರವು ಭಾರತೀಯ ದಂಡ ಸಂಹಿತೆಯಡಿ ಅಪರಾಧವಲ್ಲದ ಕಾರಣ, ಈ ಪ್ರಕರಣದಲ್ಲಿ ಹೆಂಡತಿಯ ‘ಸಮ್ಮತಿ’ ಎಂಬ ಪರಿಕಲ್ಪನೆಯು ‘ಮುಖ್ಯವಲ್ಲ’ ಎಂದು ಅದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ಹಲವು ತೀರ್ಪುಗಳು ಮತ್ತು ಐಪಿಸಿಯ ಸೆಕ್ಷನ್ 375ರ ಅಡಿಯಲ್ಲಿನ ಅತ್ಯಾಚಾರದ ವ್ಯಾಖ್ಯಾನವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಜಿ.ಎಸ್.ಅಹ್ಲುವಾಲಿಯಾ ಅವರು, ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

ದಂಪತಿಯು 2019ರ ಮೇಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಅದಾಗಿ ಒಂದು ವರ್ಷದ ಮೊದಲೇ ಅಂದರೆ 2020ರ ಫೆಬ್ರವರಿಯಿಂದ ಪತ್ನಿ ಅವರ ಪೋಷಕರ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪತಿ ಹೇಳಿದ್ದಾರೆ. ಇತ್ತ ಪತ್ನಿ ಪತಿ ಮತ್ತು ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ದಾಖಲಿಸಿದ್ದಾರೆ. ಸದ್ಯ ಇದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಮಧ್ಯೆ 2022ರ ಜುಲೈಯಲ್ಲಿ ಪತ್ನಿ ಮತ್ತೆ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊರಿಸಿ ಪತಿಯ ವಿರುದ್ಧ ಮತ್ತೊಂದು ಎಫ್‌ಆರ್‌ಐ ದಾಖಲಿಸಿದ್ದರು.

“ವೈವಾಹಿಕ ಅತ್ಯಾಚಾರವನ್ನು ಇಲ್ಲಿಯವರೆಗೆ ಗುರುತಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಅಹ್ಲುವಾಲಿಯಾ ಹೇಳಿ ಅರ್ಜಿದಾರರ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸಿದರು. ಐಪಿಸಿ ಸೆಕ್ಷನ್‌ 375ರ ಅಡಿಯಲ್ಲಿ ಅತ್ಯಾಚಾರದ ತಿದ್ದುಪಡಿ ವ್ಯಾಖ್ಯಾನವನ್ನು ಉಲ್ಲೇಖಿಸಿ, ಕೆಲವು ಸಂದರ್ಭಗಳಲ್ಲಿ ಅಸಹಜ ಕೃತ್ಯಕ್ಕೆ ಪತ್ನಿಯ ಒಪ್ಪಿಗೆ ಪಡೆಯುವುದು ಪ್ರಾಮುಖ್ಯತೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದೂ ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್‌

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ಅಥವಾ ವಿಧಿಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ.

ಇತ್ತೀಚೆಗೆ ಇಬ್ಬರು ಪೈಲಟ್‌ ಆಗಿ ಕೆಲಸ ಮಾಡುತ್ತಿದ್ದ ದಂಪತಿ ಸಲ್ಲಿಸಿದ್ದ ವಿಚ್ಛೇದನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್‌ ಇದ್ದ ಪೀಠ, ಹಿಂದೂ ವಿವಾಹವು ಸೂಕ್ತವಾದ ಆಚರಣೆಗಳು ಇಲ್ಲದೆಯೇ ಆಗಿದ್ದಲ್ಲಿ, ಅಂತಹ ವಿವಾಹವನ್ನು ‘ಹಿಂದೂ ವಿವಾಹವೆಂದು ಪರಿಗಣಿಸಲಾಗದು’ ಎಂದು ಏಪ್ರಿಲ್‌ 19ರ ಆದೇಶದಲ್ಲಿ ಹೇಳಿತ್ತು. ‘ಹಿಂದೂ ವಿವಾಹದಲ್ಲಿ ಸಪ್ತಪದಿ ಅಂದರೆ ಋಗ್ವೇದದ ಪ್ರಕಾರ, ಏಳನೆಯ ಹೆಜ್ಜೆಯನ್ನು ಪೂರ್ಣಗೊಳಿಸಿದ ನಂತರ ವರನು ವಧುವಿಗೆ ‘ಏಳು ಹೆಜ್ಜೆಗಳ ಮೂಲಕ ನಾವು ಸಖರಾಗಿದ್ದೇವೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ಚೆನ್ನಾಗಿ ಯೋಚಿಸಿ ನಿರ್ಧಾರಕ್ಕೆ ಬರಬೇಕು. ಹಿಂದೂ ವಿವಾಹ ಅಂದರೆ ಅದೊಂದು ಸಂಸ್ಕಾರ. ಭಾರತೀಯ ಸಮಾಜದಲ್ಲಿ ಮದುವೆಗೆ ಅದರದ್ದೇ ಆದ ಮೌಲ್ಯಗಳಿವೆ ಎಂದು ಹೇಳಿದೆ.

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Covishield Vaccine: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Covishield vaccine supreme court
Koo

ಹೊಸದಿಲ್ಲಿ: ಬ್ರಿಟನ್‌ನಲ್ಲಿ (UK) ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆ, ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಬಗೆಗೆ ಅಧ್ಯಯನ ನಡೆಸಲು ಆದೇಶಿಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಮನವಿ ಸಲ್ಲಿಸಿದ್ದಾರೆ.

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಮಿತಿಯು ಏಮ್ಸ್‌ ನಿರ್ದೇಶಕರ ನೇತೃತ್ವವನ್ನು ಹೊಂದಿರಬೇಕು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರು ಮೇಲ್ವಿಚಾರಣೆ ಮಾಡಬೇಕು; ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಬೇಕು ಎಂದವರು ಕೋರಿದ್ದಾರೆ.

COVID-19 ಸಮಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನದ ಅಡ್ಡ ಪರಿಣಾಮಗಳಿಂದ ಮರಣ ಹೊಂದಿದ, ತೀವ್ರವಾಗಿ ಅಸ್ವಸ್ಥರಾದ, ಅಂಗವಿಕಲರಾದ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಬೇಕು. ಜನರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮಗಳನ್ನು ಕಾರಣವಾಗಬಹುದು ಎಂದು ಇತ್ತೀಚೆಗೆ ಕಂಪನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಮತ್ತು ಲಸಿಕೆ ಡೆವಲಪರ್ ಆಸ್ಟ್ರಾಜೆನೆಕಾ ಬ್ರಿಟನ್‌ನ ನ್ಯಾಯಾಲಯದಲ್ಲಿ ಇದನ್ನು ತಿಳಿಸಿದೆ. ಇದು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವಿಕೆ ಮತ್ತು ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

“ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ತಯಾರಿಕೆಗಾಗಿ ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ 175 ಕೋಟಿಗೂ ಹೆಚ್ಚು ಜನ ಕೋವಿಶೀಲ್ಡ್ ಅನ್ನು ಪಡೆದರು” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೋವಿಶೀಲ್ಡ್‌ ಜೊತೆಗೆ ಭಾರತೀಯ ತಯಾರಿಕೆಯಾದ Covaxin ಅನ್ನು ಕೂಡ ಭಾರತದಲ್ಲಿ ನೀಡಲಾಗಿತ್ತು.

ಕಳೆದ ವರ್ಷ ಲಂಡನ್‌ನಲ್ಲಿ ಜೇಮೀ ಸ್ಕಾಟ್ ಎಂಬವರು ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಅವರಲ್ಲಿ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೆದುಳಿನಲ್ಲಿ ರಕ್ತಸ್ರಾವವ ಉಂಟಾಗಿತ್ತು. ಶಾಶ್ವತ ಮಿದುಳಿನ ಗಾಯ ಉಂಟಾಗಿತ್ತು. ಇವರೂ ಸೇರಿ UKಯಲ್ಲಿ ಐವತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರು ಮತ್ತು ಸಂಬಂಧಿಕರು ಸುಮಾರು 100 ಮಿಲಿಯನ್ ಪೌಂಡ್‌ ಪರಿಹಾರವನ್ನು ಬಯಸಿದ್ದಾರೆ.

ಭಾರತದಲ್ಲಿ, ಕೋವಿಡ್ -19 ರ ನಂತರ ಹೃದಯಾಘಾತ ಮತ್ತು ವ್ಯಕ್ತಿಗಳ ಹಠಾತ್ ಕುಸಿತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಜನರಲ್ಲಿಯೂ ಹೃದಯಾಘಾತದ ಪ್ರಕರಣಗಳು ಸಂಭವಿಸಿವೆ. ಕೋವಿಶೀಲ್ಡ್‌ ಮಾಲಿಕ ಕಂಪನಿಯ ಮಾಹಿತಿ ದಾಖಲಾತಿಯು ನಮ್ಮಲ್ಲಿಯೂ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯ ಅಪಾಯಗಳ ಬಗ್ಗೆ ಯೋಚಿಸಲು ಒತ್ತಾಯಿಸಿದೆ ಎಂದು ಮನವಿಯಲ್ಲಿ ಹೇಳಿದೆ.

ಈ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಲಸಿಕೆಯ ದುಷ್ಪರಿಣಾಮಗಳಿಗೆ ನಷ್ಟಪರಿಹಾರವನ್ನು ಕೋರಿದ್ದು, ಯುಕೆಯಂತಹ ಕೆಲವು ದೇಶಗಳಲ್ಲಿಯೂ ವ್ಯಾಕ್ಸಿನೇಷನ್‌ನಿಂದ ತೀವ್ರವಾಗಿ ಅಂಗವಿಕಲರಾದ ಜನರಿಗೆ ನಷ್ಟ ಪಾವತಿ ವ್ಯವಸ್ಥೆ ಇದೆ ಎಂದಿದ್ದಾರೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Continue Reading

ಪ್ರಮುಖ ಸುದ್ದಿ

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Kanthesh : ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

VISTARANEWS.COM


on

Kantesh
Koo

ಬೆಂಗಳೂರು: ಕರ್ನಾಟkದಲ್ಲಿ ಈಗ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಚರ್ಚೆ ಜೋರಾಗಿ ನಡೆಯುತ್ತಿದೆ. ಲೈಂಗಿಕ ಹಗರಣವೊಂದು ಬಯಲಾದ ಬಳಿಕ ಈ ವಿಷಯ ಗಂಭೀರ ಎನಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೊ ಹರಿದಾಡಿ ಕೇಸು ದಾಖಲಾಗಿ, ತನಿಖಾ ತಂಡ ರಚನೆಯಾದ ಬಳಿಕ ಚರ್ಚೆಗೆ ಸಾಕಷ್ಟು ವಿಷಯಗಳು ಸಿಕ್ಕಿವೆ. ಇವೆಲ್ಲದರ ನಡುವೆ ಬಿಜೆಪಿಯ ರಾಷ್ಟ್ರೀಯ ನಾಯಕರ ಮಾತಿಗೆ ಸೊಪ್ಪು ಹಾಕದೇ ಪಕ್ಷೇತರರಾಗಿ ಶಿವಮೊಗ್ಗ ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ (Kanthesh )​ ಕೂಡ ತಮಗೆ ಸಂಬಂಧಿಸಿದ ತಮ್ಮ ಮಾನ ಹಾನಿ ಮಾಡುವ ಯಾವುದೇ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದಿದ್ದಾರೆ. ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

ಅರ್ಜಿಯಲ್ಲಿ ಏನಿದೆ?:

ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ಕೆಲ ಮಾಧ್ಯಮಗಳು ನನ್ನ ಘನತೆ, ಗೌರವ ಮತ್ತು ಮಾನಹಾನಿ ಮಾಡಲು ಪ್ರಯತ್ನಿಸುತ್ತಿವೆ ಎಂಬ ಅನುಮಾನಗಳಿವೆ. ನನ್ನನ್ನೇ ನಕಲು ಮಾಡಿದ ಅಶ್ಲೀಲ ಪೋಟೊ, ವಿಡಿಯೊ ಮತ್ತು ಅಡಿಯೊಗಳನ್ನು ಪ್ರಸಾರ ಮಾಡಲು ಯತ್ನಿಸುತ್ತಿವೆ. ಒಂದೊಮ್ಮೆ ಅಂತಹ ಅಕ್ಷೇಪಾರ್ಹ ವಿಡಿಯೊ. ಫೋಟೊಗಳು ಪ್ರಸಾರಗೊಂಡರೆ ಅಥವಾ ಪ್ರಕಟವಾದರೆ ನನ್ನ ಮಾನಹಾನಿಯಾಗುತ್ತದೆ. ಆದ್ದರಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶ ನೀಡಬೇಕು’ ಎಂದು ಕಾಂತೇಶ್ ದಾವೆಯಲ್ಲಿ ಕೋರಿದ್ದಾರೆ.

ಯಡಿಯೂರಪ್ಪ ವಿರುದ್ಧ ಬಂಡೆದ್ದ ಅಪ್ಪ, ಮಗ

ಮಾಜಿ ಸಚಿವ ಹಾಗೂ ಬಿಜೆಪಿ ಕಟ್ಟಾಳು ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಕುಟುಂಬ ರಾಜಕಾರಣ ಎಂದು ಹೇಳಿದ್ದಾರೆ. ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಇದನ್ನೂಓದಿ: Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದೀಗ ಪಕ್ಷೇತರವಾಗಿ ಕಣಕ್ಕಿಳಿದಿರುವ ಈಶ್ವರಪ್ಪ ರಾಘವೇಂದ್ರ ಅವರನ್ನು ಸೋಲಿಸಬೇಕೆಂದು ಪಣತೊಟ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

NOTA: ಅತಿ ಹೆಚ್ಚು `ನೋಟಾ’ ಬಿದ್ದರೆ ಹೊಸ ಚುನಾವಣೆ ಮಾಡಬಹುದೇ? ಸುಪ್ರೀಂ ಪ್ರಶ್ನೆ

NOTA: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠವು, ದೇಶದಾದ್ಯಂತ ಮತದಾರರ ಜಾಗೃತಿ ಮೂಡಿಸಲು ಚುನಾವಣೆಗಳಲ್ಲಿ ನೋಟಾವನ್ನು “ಕಾಲ್ಪನಿಕ ಚುನಾವಣಾ ಅಭ್ಯರ್ಥಿ” ಎಂದು ಪರಿಗಣಿಸಬೇಕೆ ಎಂಬುದನ್ನು ಪರಿಶೀಲಿಸಲು ಸಹ ಒಪ್ಪಿಗೆ ನೀಡಿದೆ.

VISTARANEWS.COM


on

nota vote
Koo

ಹೊಸದಿಲ್ಲಿ: ʼನೋಟಾʼ (NOTA) ಆಯ್ಕೆಗೆ ಹೆಚ್ಚಿನ ಸಂಖ್ಯೆಯ ಮತಗಳು ಬಿದ್ದ ಕ್ಷೇತ್ರದಲ್ಲಿ ಹೊಸ ಚುನಾವಣೆ ನಡೆಸಬಹುದೇ ಎಂಬ ಪ್ರಶ್ನೆಯನ್ನು ಚುನಾವಣಾ ಆಯೋಗದ (Election commission of India) ಮುಂದೆ ಸುಪ್ರೀಂ ಕೋರ್ಟ್‌ (Supreme court) ಇಟ್ಟು ಉತ್ತರ ಬಯಸಿದೆ. ಮತದಾರರಿಗೆ (Voters) “ಮೇಲಿನ ಯಾವುದೂ ಅಲ್ಲ” (ನೋಟಾ) ಆಯ್ಕೆಯನ್ನು ನೀಡಿದ ಹನ್ನೊಂದು ವರ್ಷಗಳ ನಂತರ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತೀಯ ಚುನಾವಣಾ ಆಯೋಗದಿಂದ (ECI) ಪ್ರತಿಕ್ರಿಯೆ ಕೇಳಿದೆ.

ನೋಟಾ ಬಟನ್ ಇವಿಎಂಗಳಲ್ಲಿ ಅಭ್ಯರ್ಥಿಗಳ ಪಟ್ಟಿಯ ಅತ್ಯಂತ ಕೆಳಭಾಗದಲ್ಲಿರುತ್ತದೆ. ಪ್ರಸ್ತುತ, ಒಂದು ಕ್ಷೇತ್ರದಲ್ಲಿ ನೋಟಾ ಹೆಚ್ಚು ಮತಗಳನ್ನು ಗಳಿಸಿದರೆ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಲಾಗುತ್ತದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠವು, ದೇಶದಾದ್ಯಂತ ಮತದಾರರ ಜಾಗೃತಿ ಮೂಡಿಸಲು ಚುನಾವಣೆಗಳಲ್ಲಿ ನೋಟಾವನ್ನು “ಕಾಲ್ಪನಿಕ ಚುನಾವಣಾ ಅಭ್ಯರ್ಥಿ” ಎಂದು ಪರಿಗಣಿಸಬೇಕೆ ಎಂಬುದನ್ನು ಪರಿಶೀಲಿಸಲು ಸಹ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ನೋಟಾಗೆ ಗರಿಷ್ಠ ಮತಗಳನ್ನು ಪಡೆದ, ಮತದಾರರಿಂದ ತಿರಸ್ಕೃತಗೊಂಡ ಅಭ್ಯರ್ಥಿಗಳನ್ನು ಹೊಸ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿಸಬಾರದು ಎಂಬ ಅರ್ಜಿದಾರರ ಮನವಿಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತು.

“ನಾವು ಅದನ್ನು ಹೇಗೆ ಮಾಡಲು ಸಾಧ್ಯ? ಅದು ಶಾಸಕಾಂಗದ ಆಯ್ಕೆ. ನಾವು ಅಂತಹ ಆದೇಶ ನೀಡಲು ಸಾಧ್ಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಈ ವಿಷಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರ ಶಿವ ಖೇರಾ ಪರ ಹಾಜರಿದ್ದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರಿಗೆ ನ್ಯಾಯಪೀಠ ಹೇಳಿದೆ. ಖೇರಾ ದೆಹಲಿ ಮೂಲದ ಸ್ಫೂರ್ತಿ ಭಾಷಣಕಾರ ಮತ್ತು ಲೇಖಕ.

2013ರಲ್ಲಿ ನೋಟಾವನ್ನು ಪರಿಚಯಿಸಿದ್ದು, ಪ್ರಜಾಪ್ರಭುತ್ವದಲ್ಲಿ ಮತದಾರರ ಆಯ್ಕೆಯನ್ನು ಉತ್ತಮಗೊಳಿಸುವ ಸುಪ್ರೀಂ ಕೋರ್ಟ್‌ನ ಉದ್ದೇಶವನ್ನು ಮುಂದುವರಿಸುವ ಗುರಿಯನ್ನು ಅರ್ಜಿಯು ಹೊಂದಿದೆ ಎಂದು ಶಂಕರನಾರಾಯಣನ್ ಒತ್ತಿ ಹೇಳಿದರು. “ಸೂರತ್‌ನಲ್ಲಿ ಮತ ಚಲಾಯಿಸದೇ ಒಬ್ಬ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲಾಯಿತು. ಏಕೆಂದರೆ ಕಣದಲ್ಲಿ ಬೇರೆ ಅಭ್ಯರ್ಥಿ ಇರಲಿಲ್ಲ. ಮತದಾರರಿಗೆ ಆಯ್ಕೆ ಇರಲಿಲ್ಲ,” ಎಂದು ಅವರು ವಾದಿಸಿದರು.

ಮೇ 7ರಂದು ಮೂರನೆ ಹಂತದ ಮತದಾನ ನಡೆಯಲಿರುವ ಹದಿನೈದು ದಿನಗಳ ಮೊದಲು ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಭ್ಯರ್ಥಿ ಮುಖೇಶ್ ದಲಾಲ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಖೇರಾ ಅವರ ಅರ್ಜಿಯನ್ನು ಪರಿಶೀಲಿಸಲು ಸಮ್ಮತಿಸಿದ ಪೀಠ, ಇಸಿಐಗೆ ನೋಟಿಸ್ ಜಾರಿ ಮಾಡಿದೆ.

ನೋಟಾ ಮತ ತಟಸ್ಥವಾದುದು. ಯಾವುದೇ ಸಂಖ್ಯಾ ಮೌಲ್ಯವನ್ನು ಹೊಂದಿಲ್ಲ. ನೋಟಾ ಆಯ್ಕೆಯ ಶೂನ್ಯ ಸಂಖ್ಯಾತ್ಮಕ ಮೌಲ್ಯದ ಹೊರತಾಗಿಯೂ, 2013ರ ಸುಪ್ರೀಂ ಕೋರ್ಟ್ ತೀರ್ಪು “ಇದು ರಾಜಕೀಯ ಪಕ್ಷಗಳನ್ನು ಸಮರ್ಥ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಲು ಒತ್ತಾಯಿಸುತ್ತದೆ” ಎಂದು ಹೇಳಿದೆ. 2013ರ ತೀರ್ಪು ಹೇಳುವಂತೆ, “ನೋಟಾ ಮತದಾನವು ಚುನಾವಣೆಯಲ್ಲಿ ವ್ಯವಸ್ಥಿತ ಬದಲಾವಣೆಗೆ ಕಾರಣವಾಗುತ್ತದೆ ಮತ್ತು ರಾಜಕೀಯ ಪಕ್ಷಗಳು ಶುದ್ಧ ಅಭ್ಯರ್ಥಿಗಳನ್ನು ಹಾಕಲು ಒತ್ತಾಯಿಸುತ್ತದೆ. ಮತದಾನದ ಹಕ್ಕು ಶಾಸನಬದ್ಧ ಹಕ್ಕಾಗಿದ್ದರೆ, ಅಭ್ಯರ್ಥಿಯನ್ನು ತಿರಸ್ಕರಿಸುವ ಹಕ್ಕು ಸಂವಿಧಾನದ ಅಡಿಯಲ್ಲಿ ಭಾಷಣ ಮತ್ತು ಅಭಿವ್ಯಕ್ತಿಯ ಮೂಲಭೂತ ಹಕ್ಕು,” ಎಂದಿದೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಟಾ 6,50,000ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದೆ. ಇದು ಒಟ್ಟು ಮತದ 1.06%. 17ನೇ ಲೋಕಸಭೆಗೆ ಸ್ಪರ್ಧಿಸಿದ 36 ಪಕ್ಷಗಳ ಪೈಕಿ ಹದಿನೈದು ರಾಜಕೀಯ ಪಕ್ಷಗಳು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿವೆ. ಈ ಪಕ್ಷಗಳು ಬೆರಳೆಣಿಕೆಯಷ್ಟು ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿವೆ.

2021ರಲ್ಲಿ, ಸುಪ್ರೀಂ ಕೋರ್ಟ್ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರ ಇದೇ ರೀತಿಯ ಅರ್ಜಿಯನ್ನು ಒಪ್ಪಿಕೊಂಡಿತ್ತು. “ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಸಬಲೀಕರಣಗೊಳಿಸಲು” ಮತ್ತು “ರಾಜಕೀಯ ಪಕ್ಷಗಳು ಹೆಚ್ಚು ಉತ್ತಮ ಆಯ್ಕೆಯನ್ನು ನೀಡಲು ಪ್ರೋತ್ಸಾಹಿಸಲು” ಕೋರಿತು. ಉಪಾಧ್ಯಾಯ ಅವರ ಅರ್ಜಿಯು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ.

ಇದನ್ನೂ ಓದಿ: Election Commission: ಥೀಮ್‌ ಸಾಂಗ್‌ನಲ್ಲಿ ‘ಜೈ ಭವಾನಿ’ ಪದ ಬಳಕೆ; ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ನೋಟಿಸ್‌

Continue Reading
Advertisement
SSLC Exam Result 2024 to be declared tomorrow Here are the details
ಶಿಕ್ಷಣ15 mins ago

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Cooking Oils
ಆಹಾರ/ಅಡುಗೆ16 mins ago

Cooking Oils: ಭಾರತೀಯ ಅಡುಗೆ ಶೈಲಿಗೆ ಯೋಗ್ಯವಾದ 7 ಅಡುಗೆ ಎಣ್ಣೆಗಳಿವು

Karnataka Weather
ಕರ್ನಾಟಕ1 hour ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Sam Pitroda
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

dina bhavishya read your daily horoscope predictions for May 09 2024
ಪ್ರಮುಖ ಸುದ್ದಿ2 hours ago

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Pune
ದೇಶ7 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ8 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ8 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ8 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ9 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌