Murugha Shri : 2ನೇ ಪೋಕ್ಸೊ ಕೇಸಿನಲ್ಲಿ ಮುರುಘಾ ಶ್ರೀಗೆ ವಾರಂಟ್ ; ಮತ್ತೆ ಜೈಲು ಗ್ಯಾರಂಟಿ Vistara News

ಕರ್ನಾಟಕ

Murugha Shri : 2ನೇ ಪೋಕ್ಸೊ ಕೇಸಿನಲ್ಲಿ ಮುರುಘಾ ಶ್ರೀಗೆ ವಾರಂಟ್ ; ಮತ್ತೆ ಜೈಲು ಗ್ಯಾರಂಟಿ

Murugha Shri : ಒಂದು ಪೋಕ್ಸೋ ಕೇಸಿನಲ್ಲಿ ಐದು ದಿನಗಳ ಹಿಂದಷ್ಟೇ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾ ಶ್ರೀಗಳಿಗೆ ಈಗ ಎರಡನೇ ಪ್ರಕರಣದಲ್ಲಿ ವಾರಂಟ್‌ ಜಾರಿಯಾಗಿದೆ. ಬಂಧನವೂ ಗ್ಯಾರಂಟಿಯಾಗಿದೆ.

VISTARANEWS.COM


on

Arrest warrant against murugha Shri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಮಠದ ಸನಿವಾಸ ಶಾಲೆಯ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ (Physical abuse) ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ 14 ತಿಂಗಳ ಬಳಿಕ ಜಾಮೀನಿನಲ್ಲಿ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾ ಮಠದ (Chitradurga Murugha Matt) ಶಿವಮೂರ್ತಿ ಮುರುಘಾಶ್ರೀಗಳ (Murugha Shri) ವಿರುದ್ಧ ಮತ್ತೆ ವಾರಂಟ್‌ ಜಾರಿಯಾಗಿದ್ದು, (Warrant against Murugha Shri) ಯಾವುದೇ ಕ್ಷಣ ಬಂಧನ ನಡೆಯಲಿದೆ. ಅವರು ಮತ್ತೆ ಸೇರುವುದು ಗ್ಯಾರಂಟಿಯಾಗಿದೆ.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ಎರಡು ಪ್ರಕರಣಗಳು ದಾಖಲಾಗಿದ್ದವು. ಒಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣವಾದರೆ ಎರಡನೇ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಜತೆಗೆ ಅವರು ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖಿಸಲಾಗಿದೆ. ಮೊದಲ ಪ್ರಕರಣದಲ್ಲಿ ಪೋಕ್ಸೊ ಪ್ರಕರಣ ಮಾತ್ರ ಇದ್ದರೆ, ಎರಡನೇ ಕೇಸ್‌ನಲ್ಲಿ ಪೋಕ್ಸೋ ಜತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯೂ ಅನ್ವಯವಾಗಿದೆ.

ನಿಜವೆಂದರೆ, ಮೊದಲನೇ ಪ್ರಕರಣದಲ್ಲಿ ಜಾಮೀನು ಪಡೆದಾಗ ಎರಡನೇ ಪ್ರಕರಣದ ಉಲ್ಲೇಖ ಆಗಿರಲಿಲ್ಲ. ಅದರಲ್ಲೂ ಮುಖ್ಯವಾಗಿ ಎರಡನೇ ಪ್ರಕರಣದಲ್ಲಿ ನಡೆಯಬೇಕಾದ ಬಂಧನ, ವಿಚಾರಣೆಯ ಯಾವ ಪ್ರಕ್ರಿಯೆಗಳೂ ನಡೆದಿರಲಿಲ್ಲ. ಮೊದಲ ಪ್ರಕರಣದಲ್ಲಿ ಜಾಮೀನು ಪಡೆದಾಗ (ನವೆಂಬರ್‌ 16) ಶ್ರೀಗಳಿಗೆ ಹಲವು ಷರತ್ತುಗಳನ್ನು ವಿಧಿಸಲಾಗಿತ್ತು. ಅದರಲ್ಲಿ ಚಿತ್ರದುರ್ಗ ಜಿಲ್ಲಾ ಪ್ರವೇಶ ಮಾಡುವಂತಿಲ್ಲ ಎನ್ನುವುದು ಕೂಡಾ ಒಂದು. ಹೀಗಾಗಿ ಚಿತ್ರದುರ್ಗ ಜೈಲಿನಿಂದ ಹೊರಬಿದ್ದ ಶ್ರೀಗಳು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ಹೋಗಿದ್ದರು.

ಈ ನಡುವೆ, ಜೈಲಿನಿಂದ ಬಿಡುಗಡೆಯಾದ ದಿನವೇ ಅಂದರೆ ನವೆಂಬರ್‌ 16ರಂದೇ ಎರಡನೇ ಪ್ರರಕಣದ ವಿಚಾರಣೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು. ಶ್ರೀಗಳು ವಿಡಿಯೊ ಕಾನ್ಫರೆನ್ಸ್‌ನಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಈ ವಿಚಾರಣೆ ನವೆಂಬರ್‌ 18ಕ್ಕೆ ಮುಂದೂಡಲ್ಪಟ್ಟಿತ್ತು. ನವೆಂಬರ್‌ 18ರಂದು ನಡೆದ ವಿಚಾರಣೆಯ ಅಂತಿಮ ತೀರ್ಪನ್ನು ನವೆಂಬರ್‌ 20ಕ್ಕೆ (ಮಂಗಳವಾರ) ಕಾಯ್ದಿರಿಸಲಾಗಿತ್ತು.

ಜಾಮೀನುರಹಿತ ವಾರಂಟ್‌ ಹೊರಡಿಸಿದ ಕೋರ್ಟ್

ಇದೀಗ ಎರಡನೇ ಪ್ರಕರಣದಲ್ಲಿ ಮುರುಘಾ ಶ್ರೀ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದ್ದು, ಶ್ರೀಗಳನ್ನು ಮಂಗಳವಾರದ ಒಳಗೆ ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಆದೇಶಿಸಲಾಗಿದೆ.

2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರ ಆದೇಶದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಠಾಣೆ ಸಿಪಿಐ ಮುದ್ದುರಾಜ್ ಮತ್ತು ಟೀಮ್ ದಾವಣಗೆರೆಯ ವಿರಕ್ತ ಮಠದಿಂದ ಶ್ರೀಗಳನ್ನು ಬಂಧಿಸಿ ಕರೆ ತರಲಿದೆ. ದಾವಣಗೆರೆಯ ದೊಡ್ಡ ಪೇಟೆಯಲ್ಲಿರುವ ವಿರಕ್ತ ಮಠದ ಸುತ್ತ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಮುರುಘಾ ಶ್ರೀಗಳನ್ನು ಭೇಟಿಯಾದ ಜೆಡಿಎಸ್‌ ಮಾಜಿ ಶಾಸಕ ಶಿವಶಂಕರ್‌

ಈ ನಡುವೆ, ಮುರುಘಾಶ್ರೀಗಳ ಬಂಧನಕ್ಕೆ ವಾರಂಟ್‌ ಹೊರಡುತ್ತಿದ್ದಂತೆಯೇ ಜೆಡಿಎಸ್‌ ಮಾಜಿ ಶಾಸಕ ಶಿವಶಂಕರ್‌ ಅವರು ವಿರಕ್ತ ಮಠಕ್ಕೆ ಭೇಟಿ ನೀಡಿದ್ದಾರೆ.

ʻʻನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ. 14 ತಿಂಗಳಿನಿಂದ ನಾವು ನೋವು ಅನುಭವಿಸಿಕೊಂಡು ಬಂದಿದ್ದೇವೆ. ಇದೇನು ಕೂಡ ಹೊಸದೇನಲ್ಲ. ಶ್ರೀಗಳ ದೇಶದ ಕಾನೂನಿಗೆ ತಲೆ ಬಾಗ್ತಿನಿ ಅಂತ ಹೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ಕಾನೂನು ರೀತಿ ನಾವು ಹೋರಾಟ ಮಾಡುತ್ತೇವೆʼʼ ಎಂದು ಮಾಜಿ ಶಾಸಕ ಶಿವಶಂಕರ ಮಠಕ್ಕೆ ಭೇಟಿ ನೀಡಿದ ವೇಳೆ ಹೇಳಿದರು.

ಈ ನಡುವೆ, ಶ್ರೀಗಳ ಬಂಧನಕ್ಕೆ ಮತ್ತೆ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ದಾವಣಗೆರೆ ವಿರಕ್ತ ಮಠದ ಮುಂದೆ ಭಕ್ತರು ಜಮಾಯಿಸುತ್ತಿಧಧಾರೆ. ಶ್ರೀಗಳು ಮಠದ ಕೋಣೆಯಲ್ಲಿ ಕುಳಿತಿದ್ದಾರೆ.

ವಿರಕ್ತ ಮಠದಲ್ಲಿರು ಶ್ರೀಗಳನ್ನು ಬಂಧಿಸುವ ಪೊಲೀಸರು ಅವರನ್ನು ಚಿತ್ರದುರ್ಗಕ್ಕೆ ಕರೆತಂದು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಿದ್ದಾರೆ. ಬಳಿಕ ನ್ಯಾಯಾಧೀಶರಾದ ಬಿ.ಕೆ ಕೋಮಲ ಮುಂದೆ ಹಾಜರುಪಡಿಸಲಿದ್ದಾರೆ.

ಮುಂದೇನಾಗಬಹುದು?

ಎರಡನೇ ಪೋಕ್ಸೋ ಪ್ರಕರಣದಲ್ಲಿ ಶ್ರೀಗಳನ್ನು ಬಂಧಿಸಿ ಮತ್ತೆ ಮೊದಲಿನಂತೆ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಈ ಹಂತದಲ್ಲಿ ಶ್ರೀಗಳ ಪರವಾಗಿ ವಕೀಲರು ಜಾಮೀನು ಅರ್ಜಿ ಸಲ್ಲಿಸಬಹುದು. ಆಗ ಮೊದಲ ಪ್ರಕರಣದಲ್ಲಿ ಕೋರ್ಟ್‌ ಯಾವ ಆಧಾರದಲ್ಲಿ ಜಾಮೀನು ನೀಡಿತ್ತು ಎಂಬ ಅಂಶ ಪರಿಗಣನೆಗೆ ಬರಲಿದೆ. ಹೀಗಾಗಿ ಎರಡನೇ ಪ್ರಕರಣದಲ್ಲಿ ಜಾಮೀನು ಹಿಂದಿನಷ್ಟು ಕಷ್ಟವಾಗಲಾರದು. ಆದರೆ, ಶ್ರೀಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮುಂದಾಗಿರುವುದರಿಂದ ಸ್ವಲ್ಪ ಜಟಿಲವಾಗಲೂಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

Belagavi Winter Session: ರೈತರಿಗೆ ಸಮರ್ಪಕವಾಗಿ ವಿದ್ಯುತ್‌ ಕೊಡುತ್ತಿಲ್ಲ. ಟಿಸಿ ಹಾಳಾದರೆ ಅದನ್ನು ಬದಲಾವಣೆ ಮಾಡಲು, ರಿಪೇರಿ ಮಾಡಲು ಹಣ ಕೇಳುತ್ತಾರೆ. ಇದೆಂಥ ಪರಿಸ್ಥಿತಿ ಬಂದಿದೆ ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

VISTARANEWS.COM


on

R Ashok in assembly session
Koo

ಬೆಳಗಾವಿ: ರಾಜ್ಯದಲ್ಲಿ ಭೀಕರ ಬರಗಾಲ (Karnataka Drought) ಇದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನೂ ಸೇರಿಸಿ ಯಾವೊಬ್ಬ ಸಚಿವರೂ ಸಹ ರೈತರನ್ನು ಭೇಟಿ ಮಾಡುವ ಕೆಲಸ ಮಾಡಲಿಲ್ಲ. ಸಿಎಂ ಮತ್ತು ಸಚಿವರು ಎಲ್ಲ ಕಡೆ ಹೋಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತು. ಆದರೆ, ಕೆಲವು ಕಡೆಯಾದರೂ ಹೋಗಬೇಕಲ್ಲವೇ? ನೋಡಲ್ ಅಧಿಕಾರಿ ವಿಮಾನದಲ್ಲಿ ಹೋಗಿ ಮೀಟಿಂಗ್ ಮಾಡಿ ವಾಪಸ್ ಬರುತ್ತಾರೆ. ಕೊನೆಗೆ ಅಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಕೊಡುತ್ತಾರೆ. ಸಿದ್ದರಾಮಯ್ಯ ಸಿದ್ದರಾಮಣ್ಣ ಮತ್ತು ನಮ್ಮ ಊರಲ್ಲೂ ಅದೇ ಕುರುಕ್ಷೇತ್ರ. ಇನ್ನು ರೈತರಿಗೆ ಸಮರ್ಪಕವಾಗಿ ವಿದ್ಯುತ್‌ ಕೊಡುತ್ತಿಲ್ಲ. ಟಿಸಿ ಹಾಳಾದರೆ ಅದನ್ನು ಬದಲಾವಣೆ ಮಾಡಲು, ರಿಪೇರಿ ಮಾಡಲು ಹಣ ಕೇಳುತ್ತಾರೆ. ಇದೆಂಥ ಪರಿಸ್ಥಿತಿ ಬಂದಿದೆ ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ (Opposition leader R Ashok) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಬರದ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ಬರ ಪರಿಸ್ಥಿತಿ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಕುಳಿತಲ್ಲೇ ವರದಿ ತಯಾರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಯಾವುದಾದರೂ ತಹಸೀಲ್ದಾರ್ ಎಷ್ಟು ಊರಿಗೆ ಹೋಗಿರುವುದಾಗಿ ಹೇಳಿದ್ದಾರೆ ಎಂಬುದನ್ನು ಯಾರಾದರೂ ಹೇಳಿ ನೋಡೋಣ? ಗ್ರಾಮ ಪಂಚಾಯಿತಿಯಲ್ಲಿ ಕುಳಿತುಕೊಂಡು ಅಧಿಕಾರಿಗಳಿಗೆ ಏನು ಕೆಲಸ? ಬೆಳೆ ಎಷ್ಟು ನಷ್ಟ ಆಗಿದೆ ಅಂತ ನೋಡಿ ಹೇಳಬೇಕಲ್ಲವೇ? ಎಂದು ಆರ್.‌ ಅಶೋಕ್‌ ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಸಿಎಂ ಆಗಿ ಮುಂದೆ ಇರ್ತಾರೋ ಇಲ್ಲವೋ ಗೊತ್ತಿಲ್ಲ!

ಸಿದ್ದರಾಮಯ್ಯ 15 ಬಾರಿ ಬಜೆಟ್ ಮಂಡಿಸಿದ್ದಾರೆ. 2 ಬಾರಿ ಸಿಎಂ ಆಗಿದ್ದಾರೆ. 14 ಬಾರಿ ಅಲ್ವಾ ಒಂದು ಹೆಚ್ಚಾಗಿ ಹೇಳಿದ್ದೇನೆ. ಮುಂದೆಯೂ ನೀವೇ ಇರುತ್ತೀರಿ ಎಂದು ಹೇಳಿದ್ದೇನೆ. ನನಗೆ ಈ ಬಗ್ಗೆ ಗೊತ್ತಿಲ್ಲ. ಮಂಡ್ಯ ಎಂಎಲ್‌ಎ ರವಿ ಗಣಿಗ ಅವರು ಮಂಡ್ಯದಲ್ಲಿ 2 ವರ್ಷ, 3 ವರ್ಷ ಆದ ಮೇಲೆ ಯಾರನ್ನೋ ತರುತ್ತೇವೆ ಎಂದು ಹೇಳಿದ್ದರು ಎಂಬುದಾಗಿ ಆರ್.‌ ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆಯುತ್ತಿದ್ದಂತೆ ಎದ್ದುನಿಂತ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ, ನಿಮ್ಮ ಪಕ್ಷದ ಶಾಸಕರೊಬ್ಬರು ಮುಂದಿನ 10 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂತ ಹೇಳಿದ್ದಾರೆ ಎಂದು ನೆನಪಿಸಿದರು. ಅದಕ್ಕೆ ಆರ್.‌ ಅಶೋಕ್‌, ಆಯ್ತು ಅಂತ ಹೇಳಿ ಸುಮ್ಮನಾದರು.

ಕೇರಳದಿಂದ ಟಿಸಿ ಖರೀದಿ ಏಕೆ? ಆರಗ ಜ್ಞಾನೇಂದ್ರ ಪ್ರಶ್ನೆ

ಕೇರಳದಿಂದ ನಾಲ್ಕು ಸಾವಿರ ಟಿಸಿಗಳನ್ನು ಏಕೆ ಖರೀದಿ ಮಾಡುತ್ತಿದ್ದೀರಿ? ನಮ್ಮ ರಾಜ್ಯದಲ್ಲಿ ಉತ್ತಮ ಸಂಸ್ಥೆಗಳು ಇದ್ದರೂ ಕೇರಳದ ಸಂಸ್ಥೆಗಳಿಂದ ಟ್ರಾನ್ಸ್‌ಫಾರ್ಮ್ ಅನ್ನು ಖರೀದಿ ಮಾಡಿದ್ದು ಏಕೆ? ಎಂದು ಆರಗ ಜ್ಞಾನೇಂದ್ರ ಸದನದಲ್ಲಿ ಇದೇ ವೇಳೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್, ನಮ್ಮ ರಾಜ್ಯದ ಸಂಸ್ಥೆಯಿಂದಲೂ ಟಿಸಿ ಕೂಡ ಖರೀದಿ ಮಾಡುತ್ತಿದ್ದೇವೆ. ಹೆಚ್ಚುವರಿ ಟಿಸಿಗೆ ಕೇರಳ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಯಿಂದ ಖರೀದಿ ಮಾಡುತ್ತಿದ್ದೇವೆ. ಇದೇನು ಹೊಸತಲ್ಲ, ಬೆಸ್ಕಾಂ ಮನವಿ ಮೇರೆಗೆ ಒಪ್ಪಿಗೆ ಕೊಟ್ಟಿದ್ದೇವೆ ಎಂದು ಹೇಳಿದರು.

ಟಿಸಿ ಬದಲಾಯಿಸಲು ಹಣ ಕೇಳುತ್ತಿದ್ದಾರೆ!

ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ರೈತರು ಹೇಳಿದ್ದನ್ನು ನಾನು ಹೇಳುತ್ತಿದ್ದೇನೆ. ಒಂದು ಟಿಸಿ ರಿಪೇರಿಗೆ ಹತ್ತರಿಂದ ಐದಿನೈದು ದಿನಗಳನ್ನು ತೆಗೆದುಕೊಳ್ಳುತ್ತಾರೆ. ಒಂದು ಕಂಬ ಹಾಕಲು ಎಂಟು ಸಾವಿರ ರೂಪಾಯಿಯನ್ನು ತೆಗೆದುಕೊಳ್ಳುತ್ತಾರೆ. ಏಳೆಂಟು ಬೋರ್‌ವೆಲ್‌ಗಳಿಗೆ ಒಂದು ಟ್ರಾನ್ಸ್‌ಫಾರ್ಮರ್ ಇರುತ್ತದೆ. ಅದು ರಿಪೇರಿಯಾದರೆ ಎಲ್ಲರೂ ಎರಡು ಸಾವಿರ ರೂಪಾಯಿ ಹಾಕಬೇಕು. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇದಕ್ಕೆ ಸಾಕ್ಷಿ ಕೇಳಿದ್ದರು. ಶಾಸಕ ಬಾಲಕೃಷ್ಣ ಅವರು ಹಿಂದೆಯೂ ಇತ್ತು, ಈಗಲೂ ಇದೆ ಎಂದು ಹೇಳುತ್ತಿದ್ದಾರೆ. ಸಾಕ್ಷಿಗೆ ಅವರ ಈ ಹೇಳಿಕೆಯೇ ಸಾಕು ಅನ್ನಿಸುತ್ತದೆ ಎಂದು ಹೇಳಿದರು.

ಹಣ ಕೇಳುವ ಅಧಿಕಾರಿ ಹೆಸರು ಹೇಳಿ; ಕ್ರಮ ತೆಗೆದುಕೊಳ್ಳುವೆ

ಶಾಸಕ ಸುನೀಲ್ ಕುಮಾರ್ ಮಾತನಾಡಿ, 24 ಗಂಟೆಯೊಳಗೆ ಟಿಸಿ ಸರಿ‌ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದೆ. ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಂಡಿದ್ದರು. ಬರಗಾಲದ ಸಂದರ್ಭದಲ್ಲಿ ಟಿಸಿ ಬದಲಾವಣೆಗೆ ಹಣ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೆ.ಜೆ. ಜಾರ್ಜ್‌, ಈಗ ಅಧಿಕಾರಿಗಳು ಹಣ ಕೇಳುತ್ತಾ ಇದ್ದಾರೆ ಎಂದು ವಿಪಕ್ಷ ನಾಯಕರು ಹೇಳುತ್ತಾ ಇದ್ದಾರೆ. ಯಾವ ಅಧಿಕಾರಿಗಳು ಎಂದು ನನ್ನ ಗಮನಕ್ಕೆ ತಂದರೆ ನಾನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು.

ಟಿಸಿಗೆ ಸಂಬಂಧಿಸಿ ಎಲ್ಲದಕ್ಕೂ ಹಣ ಕೊಡಬೇಕು: ಅಶೋಕ್‌ ಕಿಡಿ

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್, ಟಿಸಿಗಳನ್ನು ರಿಪೇರಿ ಮಾಡಲು ಹಣ ಕೊಡಬೇಕು. ರಿಪೇರಿಗೆ ತೆಗೆದುಕೊಂಡು ಹೋದ ಆಟೋ ಚಾರ್ಜ್ ಕೊಡಬೇಕು. ಟಿಸಿಗೆ ಆಯಿಲ್‌ ಅನ್ನು ಸ್ವತಃ ರೈತರೇ ಕೊಡಬೇಕು. ಉಪ್ಪು ಸಹ ಕೊಡಬೇಕು, ಸರ್ಕಾರಕ್ಕೆ ಉಪ್ಪು ಸಹ ಬರವೇ? ಎಂದು ಸದನದ ಗಮನಕ್ಕೆ ತಂದರು. ಆಗ ಇದಕ್ಕೆ ಪ್ರತಿಕ್ರಿಯೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್‌, ಅಂತಹ ಯಾವ ಘಟನೆಗಳು ಆಗಿವೆ ಎಂಬ ಬಗ್ಗೆ ನಮಗೆ ವಿವರ ಕೊಡಿ. ಯಾರು ತಪ್ಪಿತಸ್ಥರು ಇದ್ದಾರೆ. ಅಂಥವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಇನ್ನೂ ಸ್ಟ್ರಾಂಗ್ ಆಗಿ ಮಾತಾಡಬೇಕು ಎಂದ ರಾಯರೆಡ್ಡಿ

ಬರದ ವಿಷಯದಲ್ಲಿ ಸರ್ಕಾರ ಅಧಿಕಾರಿಗಳ ಮಾತು ಕೇಳಿದರೆ ಆಗುವುದಿಲ್ಲ. ಜನರ ಬಳಿಯೇ ನೀವು ಹೋಗಿ, ಸತ್ಯ ಗೊತ್ತಾಗುತ್ತದೆ ಎಂದು ಆರ್.‌ ಅಶೋಕ್‌ ಹೇಳುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಶಾಸಕ ಬಸವರಾಜ್ ರಾಯರೆಡ್ಡಿ, ಅಶೋಕ್ ಅವರೇ ನಿಮ್ಮ ಬಳಿ ಇರುವ ಮಾಹಿತಿ ಕೊಟ್ಟು ಬಿಡಿ. ಆಡಳಿತಾತ್ಮಕವಾಗಿ ಒಳ್ಳೆಯದು ಆಗಲಿದೆ. ನೀವು ರೂಲಿಂಗ್ ಪಾರ್ಟಿಯವರು ಮಾತಾಡಿದಂತೆ ಮಾತಡುತ್ತೀರಿ. ನೀವು ವಿಪಕ್ಷ ನಾಯಕರು. ಇನ್ನೂ ಸ್ಟ್ರಾಂಗ್ ಆಗಿ ಮಾತಾಡಬೇಕು ಎಂದು ಸಲಹೆ ನೀಡಿದರು.

ಕರಡಿ ದಾಳಿಯಾದವರಿಗೆ ಪರಿಹಾರ ಕೊಡಿ

ಬಳಿಕ ಮಾತು ಮುಂದುವರಿಸಿದ ಆರ್. ಅಶೋಕ್, ಕರೆಂಟ್ ಬರೋದು ಬೆಳಗಿನ ಜಾವ ಮೂರು ಗಂಟೆ ಎಂದು ಹೇಳುತ್ತಾರೆ. ಆದರೆ ಅದೂ ಸಹ ಎರಡು ಗಂಟೆ ಬರುತ್ತದೆ. ಅದು ಸಹ ಟ್ರಿಪ್‌ ಆಗುತ್ತಿರುತ್ತದೆ. ಟಿಸಿಗಳು ಸುಟ್ಟು ಹೋಗುತ್ತವೆ. ರಾತ್ರಿ ಕರೆಂಟ್ ಕೊಡುತ್ತೇವೆ ಎಂದು ಹೇಳಿದರು. ರಾತ್ರಿ ಕರೆಂಟ್ ಹಾಕಲು ಹೋದವನಿಗೆ ಕರಡಿ ಕಚ್ಚಿದೆ. ಹಗಲು ಹೊತ್ತು ಕರೆಂಟ್ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು. ಕರಡಿ ಕಚ್ಚಿದರೆ ಅರಣ್ಯ ಇಲಾಖೆಯಿಂದ ಕಡಿಮೆ ಪರಿಹಾರ ಸಿಗುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಇಂಧನ ಕೆ.ಜೆ ಜಾರ್ಜ್, ನನಗೆ ಕೆಲ ರೈತರು ಮನವಿ ಮಾಡಿದ್ದಾರೆ. ನಿರಂತರವಾಗಿ ಕರೆಂಟ್ ಕೊಟ್ಟರೆ ಬೋರ್‌ವೆಲ್‌ ಅನ್ನು ನಿರಂತರವಾಗಿ ಬಳಕೆ‌ ಮಾಡಲು ಆಗಲ್ಲ. ಹಗಲು ಮತ್ತು ರಾತ್ರಿ ವೇಳೆ ಸಮಯ ಹಂಚಿಕೆ ವಿದ್ಯುತ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಕರಡಿ, ಆನೆ ಕಾಟ ಇರುವ ಕಡೆ ಹಗಲು ಹೊತ್ತು ಕರೆಂಟ್ ಕೊಡಲು ಆದೇಶ ಮಾಡಲಾಗಿದೆ. ರಾತ್ರಿ ಹೊತ್ತು ಬೋರ್‌ವೆಲ್ ಆನ್ ಮಾಡಲು ಹೋದಾಗ ಕರಡಿ ದಾಳಿಗೆ ತುತ್ತಾದವರಿಗೆ ನಮ್ಮ ಇಲಾಖೆಯಿಂದಲೇ ಪರಿಹಾರ ನೀಡಲಾಗುತ್ತದೆ. ಆದರೆ, ಇದು ಇದೊಂದು ಪ್ರಕರಣಕ್ಕೆ ಮಾತ್ರ ಎಂದು ಹೇಳಿದರು. ಎಲ್ಲರಿಗೂ ಅನ್ವಯ ಆಗಲಿ ಎಂದು ವಿಪಕ್ಷ ಸದಸ್ಯರು ಆಗ್ರಹಿಸಿದರು. ಅದಕ್ಕೆ ಇಲ್ಲ ಎಂದು ಕೆ.ಜೆ. ಜಾರ್ಜ್‌ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಅವರಿಗೆ ಹಣ ಹೊಂದಿಸುವ ಸಾಮರ್ಥ್ಯವಿದೆ

ರೈತರಿಗಾಗಿ ಹಗಲು ಹೊತ್ತು ಕರೆಂಟ್ ಕೊಡಿ. ಇದಕ್ಕೆ ಸಾವಿರ ಕೋಟಿ ರೂ. ಆಗಬಹುದು. ಸಿಎಂ ಸಿದ್ದರಾಮಯ್ಯ ಅವರಿಗೆ ಹಣ ಹೊಂದಿಸುವ ಸಾಮರ್ಥ್ಯವಿದೆ. ಮೇವು ಸಂಗ್ರಹ ಎಂಟರಿಂದ ಹತ್ತು ಆಗುತ್ತದೆ ಎಂದು ಹೇಳಿದ್ದಾರೆ. ಎಲ್ಲೂ ಸಂಗ್ರಹ ಮಾಡಿದ್ದು ಕಾಣಿಸಿಲ್ಲ. ನಮ್ಮ ಬಳಿ ಹಣವಿದೆ, ಆದರೆ ಮೇವು ಖರೀದಿಗೆ ಸರ್ಕಾರ ಆದೇಶ ಕೊಟ್ಟಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಂದೆ ಜನವರಿಯಲ್ಲಿ ಮೇವು ಎಲ್ಲಿಂದ ತರುತ್ತೀರ? ಇದುವರೆಗೆ ಒಂದು ಗೋ ಶಾಲೆಯನ್ನೂ ಮಾಡಿಲ್ಲ. ಸರ್ಕಾರ‌ ಮಾಡಿದ್ದನ್ನು ಸಹ ಕ್ಯಾನ್ಸಲ್ ಮಾಡಿದ್ದಾರೆ. ರೈತರಿಗೆ ಮೇವು ಕೊಡಬೇಕು. ದೇವರ ಹೆಸರಿನಲ್ಲಿ ಗೋವುಗಳನ್ನು ಬಿಟ್ಟಿರುತ್ತಾರೆ. ಈ ಬಗ್ಗೆ ಬಳ್ಳಾರಿ ಡಿಸಿ ಜತೆಗೆ ಮಾತನಾಡಿದ್ದೇನೆ. ಅವರು ನಮ್ಮ ಬಳಿ ಹಣ ಇದೆ ಎಂದು ಹೇಳುತ್ತಾರೆ. ಹಣ ಇರುವುದು ಎಲ್ಲರಿಗೂ ಗೊತ್ತಿದೆ. ಆದರೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಖರ್ಚು ಮಾಡುವ ಮನಸ್ಸು ಮಾಡುತ್ತಿಲ್ಲ. ಜಿಲ್ಲಾ‌ ಮಂತ್ರಿಗಳು ಪರಿಶೀಲನೆ ಸಭೆ ನಡೆಸಿ ಹಣ ಬಿಡುಗಡೆಗೆ ಆದೇಶ ಮಾಡಬೇಕಿತ್ತು. ಅಧಿಕಾರಿಗಳಿಗೆ ಬುದ್ಧಿ ಕಲಿಸಿದರೆ ಎಲ್ಲರೂ ದಾರಿಗೆ ಬರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ; ತಿದ್ದುಪಡಿ ವಿಧೇಯಕ ಮಂಡನೆ

ಸಿಎಂ ಸಿದ್ದರಾಮಯ್ಯ ಜನತಾ ದರ್ಶನವನ್ನು ಪ್ರತಿ ತಿಂಗಳು ಮಾಡಬೇಕು ಎಂದು ಆರ್.‌ ಅಶೋಕ್ ಇದೇ ವೇಳೆ ಒತ್ತಾಯ ಮಾಡಿದರು.

Continue Reading

ಕರ್ನಾಟಕ

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

Belagavi Winter Session: ಬರ ಪೀಡಿತ ಪ್ರದೇಶಕ್ಕೆ ಸಿಎಂ ಮತ್ತು ಸಚಿವರು ಎಲ್ಲ ಕಡೆ ಹೋಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತು. ಆದರೆ, ಕೆಲವು ಕಡೆಯಾದರೂ ಹೋಗಬೇಕಲ್ಲವೇ? ನೋಡಲ್ ಅಧಿಕಾರಿ ವಿಮಾನದಲ್ಲಿ ಹೋಗಿ ಮೀಟಿಂಗ್ ಮಾಡಿ ವಾಪಸ್ ಬರುತ್ತಾರೆ. ಕೊನೆಗೆ ಅಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಕೊಡುತ್ತಾರೆ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

VISTARANEWS.COM


on

R Ashok
Koo

ಬೆಳಗಾವಿ: ರಾಜ್ಯದಲ್ಲಿ ಭೀಕರ ಬರಗಾಲ (Karnataka Drought) ಇದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನೂ ಸೇರಿಸಿ ಯಾವೊಬ್ಬ ಸಚಿವರೂ ಸಹ ರೈತರನ್ನು ಭೇಟಿ ಮಾಡುವ ಕೆಲಸ ಮಾಡಲಿಲ್ಲ. ಸಿಎಂ ಮತ್ತು ಸಚಿವರು ಎಲ್ಲ ಕಡೆ ಹೋಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತು. ಆದರೆ, ಕೆಲವು ಕಡೆಯಾದರೂ ಹೋಗಬೇಕಲ್ಲವೇ? ನೋಡಲ್ ಅಧಿಕಾರಿ ವಿಮಾನದಲ್ಲಿ ಹೋಗಿ ಮೀಟಿಂಗ್ ಮಾಡಿ ವಾಪಸ್ ಬರುತ್ತಾರೆ. ಕೊನೆಗೆ ಅಧಿಕಾರಿಗಳು ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಕೊಡುತ್ತಾರೆ. ಸಿದ್ದರಾಮಯ್ಯ ಸಿದ್ದರಾಮಣ್ಣ ಮತ್ತು ನಮ್ಮ ಊರಲ್ಲೂ ಅದೇ ಕುರುಕ್ಷೇತ್ರ ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ (Opposition leader R Ashok) ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಬರದ ಮೇಲಿನ ಚರ್ಚೆಯನ್ನು ಕೈಗೆತ್ತಿಕೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ಬರ ಪರಿಸ್ಥಿತಿ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಕುಳಿತಲ್ಲೇ ವರದಿ ತಯಾರಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

ಯಾವುದಾದರೂ ತಹಸೀಲ್ದಾರ್ ಎಷ್ಟು ಊರಿಗೆ ಹೋಗಿರುವುದಾಗಿ ಹೇಳಿದ್ದಾರೆ ಎಂಬುದನ್ನು ಯಾರಾದರೂ ಹೇಳಿ ನೋಡೋಣ? ಗ್ರಾಮ ಪಂಚಾಯಿತಿಯಲ್ಲಿ ಕುಳಿತುಕೊಂಡು ಅಧಿಕಾರಿಗಳಿಗೆ ಏನು ಕೆಲಸ? ಬೆಳೆ ಎಷ್ಟು ನಷ್ಟ ಆಗಿದೆ ಅಂತ ನೋಡಿ ಹೇಳಬೇಕಲ್ಲವೇ? ಎಂದು ಆರ್.‌ ಅಶೋಕ್‌ ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಸಿಎಂ ಆಗಿ ಮುಂದೆ ಇರ್ತಾರೋ ಇಲ್ಲವೋ ಗೊತ್ತಿಲ್ಲ!

ಸಿದ್ದರಾಮಯ್ಯ 15 ಬಾರಿ ಬಜೆಟ್ ಮಂಡಿಸಿದ್ದಾರೆ. 2 ಬಾರಿ ಸಿಎಂ ಆಗಿದ್ದಾರೆ. 14 ಬಾರಿ ಅಲ್ವಾ ಒಂದು ಹೆಚ್ಚಾಗಿ ಹೇಳಿದ್ದೇನೆ. ಮುಂದೆಯೂ ನೀವೇ ಇರುತ್ತೀರಿ ಎಂದು ಹೇಳಿದ್ದೇನೆ. ನನಗೆ ಈ ಬಗ್ಗೆ ಗೊತ್ತಿಲ್ಲ. ಮಂಡ್ಯ ಎಂಎಲ್‌ಎ ರವಿ ಗಣಿಗ ಅವರು ಮಂಡ್ಯದಲ್ಲಿ 2 ವರ್ಷ, 3 ವರ್ಷ ಆದ ಮೇಲೆ ಯಾರನ್ನೋ ತರುತ್ತೇವೆ ಎಂದು ಹೇಳಿದ್ದರು ಎಂಬುದಾಗಿ ಆರ್.‌ ಅಶೋಕ್‌ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆಯುತ್ತಿದ್ದಂತೆ ಎದ್ದುನಿಂತ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ, ನಿಮ್ಮ ಪಕ್ಷದ ಶಾಸಕರೊಬ್ಬರು ಮುಂದಿನ 10 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂತ ಹೇಳಿದ್ದಾರೆ ಎಂದು ನೆನಪಿಸಿದರು. ಅದಕ್ಕೆ ಆರ್.‌ ಅಶೋಕ್‌, ಆಯ್ತು ಅಂತ ಹೇಳಿ ಸುಮ್ಮನಾದರು.

ಕೇರಳದಿಂದ ಟಿಸಿ ಖರೀದಿ ಏಕೆ? ಆರಗ ಜ್ಞಾನೇಂದ್ರ ಪ್ರಶ್ನೆ

ಕೇರಳದಿಂದ ನಾಲ್ಕು ಸಾವಿರ ಟಿಸಿಗಳನ್ನು ಏಕೆ ಖರೀದಿ ಮಾಡುತ್ತಿದ್ದೀರಿ? ನಮ್ಮ ರಾಜ್ಯದಲ್ಲಿ ಉತ್ತಮ ಸಂಸ್ಥೆಗಳು ಇದ್ದರೂ ಕೇರಳದ ಸಂಸ್ಥೆಗಳಿಂದ ಟ್ರಾನ್ಸ್‌ಫಾರ್ಮ್ ಅನ್ನು ಖರೀದಿ ಮಾಡಿದ್ದು ಏಕೆ? ಎಂದು ಆರಗ ಜ್ಞಾನೇಂದ್ರ ಸದನದಲ್ಲಿ ಇದೇ ವೇಳೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್, ನಮ್ಮ ರಾಜ್ಯದ ಸಂಸ್ಥೆಯಿಂದಲೂ ಟಿಸಿ ಕೂಡ ಖರೀದಿ ಮಾಡುತ್ತಿದ್ದೇವೆ. ಹೆಚ್ಚುವರಿ ಟಿಸಿಗೆ ಕೇರಳ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಯಿಂದ ಖರೀದಿ ಮಾಡುತ್ತಿದ್ದೇವೆ. ಇದೇನು ಹೊಸತಲ್ಲ, ಬೆಸ್ಕಾಂ ಮನವಿ ಮೇರೆಗೆ ಒಪ್ಪಿಗೆ ಕೊಟ್ಟಿದ್ದೇವೆ ಎಂದು ಹೇಳಿದರು.

ಟಿಸಿ ಬದಲಾಯಿಸಲು ಹಣ ಕೇಳುತ್ತಿದ್ದಾರೆ!

ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌, ರೈತರು ಹೇಳಿದ್ದನ್ನು ನಾನು ಹೇಳುತ್ತಿದ್ದೇನೆ. ಒಂದು ಟಿಸಿ ರಿಪೇರಿಗೆ ಹತ್ತರಿಂದ ಐದಿನೈದು ದಿನಗಳನ್ನು ತೆಗೆದುಕೊಳ್ಳುತ್ತಾರೆ. ಒಂದು ಕಂಬ ಹಾಕಲು ಎಂಟು ಸಾವಿರ ರೂಪಾಯಿಯನ್ನು ತೆಗೆದುಕೊಳ್ಳುತ್ತಾರೆ. ಏಳೆಂಟು ಬೋರ್‌ವೆಲ್‌ಗಳಿಗೆ ಒಂದು ಟ್ರಾನ್ಸ್‌ಫಾರ್ಮರ್ ಇರುತ್ತದೆ. ಅದು ರಿಪೇರಿಯಾದರೆ ಎಲ್ಲರೂ ಎರಡು ಸಾವಿರ ರೂಪಾಯಿ ಹಾಕಬೇಕು. ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇದಕ್ಕೆ ಸಾಕ್ಷಿ ಕೇಳಿದ್ದರು. ಶಾಸಕ ಬಾಲಕೃಷ್ಣ ಅವರು ಹಿಂದೆಯೂ ಇತ್ತು, ಈಗಲೂ ಇದೆ ಎಂದು ಹೇಳುತ್ತಿದ್ದಾರೆ. ಸಾಕ್ಷಿಗೆ ಅವರ ಈ ಹೇಳಿಕೆಯೇ ಸಾಕು ಅನ್ನಿಸುತ್ತದೆ ಎಂದು ಹೇಳಿದರು.

ಹಣ ಕೇಳುವ ಅಧಿಕಾರಿ ಹೆಸರು ಹೇಳಿ; ಕ್ರಮ ತೆಗೆದುಕೊಳ್ಳುವೆ

ಶಾಸಕ ಸುನೀಲ್ ಕುಮಾರ್ ಮಾತನಾಡಿ, 24 ಗಂಟೆಯೊಳಗೆ ಟಿಸಿ ಸರಿ‌ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದೆ. ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಂಡಿದ್ದರು. ಬರಗಾಲದ ಸಂದರ್ಭದಲ್ಲಿ ಟಿಸಿ ಬದಲಾವಣೆಗೆ ಹಣ ಕೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೆ.ಜೆ. ಜಾರ್ಜ್‌, ಈಗ ಅಧಿಕಾರಿಗಳು ಹಣ ಕೇಳುತ್ತಾ ಇದ್ದಾರೆ ಎಂದು ವಿಪಕ್ಷ ನಾಯಕರು ಹೇಳುತ್ತಾ ಇದ್ದಾರೆ. ಯಾವ ಅಧಿಕಾರಿಗಳು ಎಂದು ನನ್ನ ಗಮನಕ್ಕೆ ತಂದರೆ ನಾನು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು.

ಟಿಸಿಗೆ ಸಂಬಂಧಿಸಿ ಎಲ್ಲದಕ್ಕೂ ಹಣ ಕೊಡಬೇಕು: ಅಶೋಕ್‌ ಕಿಡಿ

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ ಅಶೋಕ್, ಟಿಸಿಗಳನ್ನು ರಿಪೇರಿ ಮಾಡಲು ಹಣ ಕೊಡಬೇಕು. ರಿಪೇರಿಗೆ ತೆಗೆದುಕೊಂಡು ಹೋದ ಆಟೋ ಚಾರ್ಜ್ ಕೊಡಬೇಕು. ಟಿಸಿಗೆ ಆಯಿಲ್‌ ಅನ್ನು ಸ್ವತಃ ರೈತರೇ ಕೊಡಬೇಕು. ಉಪ್ಪು ಸಹ ಕೊಡಬೇಕು, ಸರ್ಕಾರಕ್ಕೆ ಉಪ್ಪು ಸಹ ಬರವೇ? ಎಂದು ಸದನದ ಗಮನಕ್ಕೆ ತಂದರು. ಆಗ ಇದಕ್ಕೆ ಪ್ರತಿಕ್ರಿಯೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್‌, ಅಂತಹ ಯಾವ ಘಟನೆಗಳು ಆಗಿವೆ ಎಂಬ ಬಗ್ಗೆ ನಮಗೆ ವಿವರ ಕೊಡಿ. ಯಾರು ತಪ್ಪಿತಸ್ಥರು ಇದ್ದಾರೆ. ಅಂಥವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಇನ್ನೂ ಸ್ಟ್ರಾಂಗ್ ಆಗಿ ಮಾತಾಡಬೇಕು ಎಂದ ರಾಯರೆಡ್ಡಿ

ಬರದ ವಿಷಯದಲ್ಲಿ ಸರ್ಕಾರ ಅಧಿಕಾರಿಗಳ ಮಾತು ಕೇಳಿದರೆ ಆಗುವುದಿಲ್ಲ. ಜನರ ಬಳಿಯೇ ನೀವು ಹೋಗಿ, ಸತ್ಯ ಗೊತ್ತಾಗುತ್ತದೆ ಎಂದು ಆರ್.‌ ಅಶೋಕ್‌ ಹೇಳುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಶಾಸಕ ಬಸವರಾಜ್ ರಾಯರೆಡ್ಡಿ, ಅಶೋಕ್ ಅವರೇ ನಿಮ್ಮ ಬಳಿ ಇರುವ ಮಾಹಿತಿ ಕೊಟ್ಟು ಬಿಡಿ. ಆಡಳಿತಾತ್ಮಕವಾಗಿ ಒಳ್ಳೆಯದು ಆಗಲಿದೆ. ನೀವು ರೂಲಿಂಗ್ ಪಾರ್ಟಿಯವರು ಮಾತಾಡಿದಂತೆ ಮಾತಡುತ್ತೀರಿ. ನೀವು ವಿಪಕ್ಷ ನಾಯಕರು. ಇನ್ನೂ ಸ್ಟ್ರಾಂಗ್ ಆಗಿ ಮಾತಾಡಬೇಕು ಎಂದು ಸಲಹೆ ನೀಡಿದರು.

ಕರಡಿ ದಾಳಿಯಾದವರಿಗೆ ಪರಿಹಾರ ಕೊಡಿ

ಬಳಿಕ ಮಾತು ಮುಂದುವರಿಸಿದ ಆರ್. ಅಶೋಕ್, ಕರೆಂಟ್ ಬರೋದು ಬೆಳಗಿನ ಜಾವ ಮೂರು ಗಂಟೆ ಎಂದು ಹೇಳುತ್ತಾರೆ. ಆದರೆ ಅದೂ ಸಹ ಎರಡು ಗಂಟೆ ಬರುತ್ತದೆ. ಅದು ಸಹ ಟ್ರಿಪ್‌ ಆಗುತ್ತಿರುತ್ತದೆ. ಟಿಸಿಗಳು ಸುಟ್ಟು ಹೋಗುತ್ತವೆ. ರಾತ್ರಿ ಕರೆಂಟ್ ಕೊಡುತ್ತೇವೆ ಎಂದು ಹೇಳಿದರು. ರಾತ್ರಿ ಕರೆಂಟ್ ಹಾಕಲು ಹೋದವನಿಗೆ ಕರಡಿ ಕಚ್ಚಿದೆ. ಹಗಲು ಹೊತ್ತು ಕರೆಂಟ್ ಕೊಟ್ಟಿದ್ದರೆ ಅನುಕೂಲ ಆಗುತ್ತಿತ್ತು. ಕರಡಿ ಕಚ್ಚಿದರೆ ಅರಣ್ಯ ಇಲಾಖೆಯಿಂದ ಕಡಿಮೆ ಪರಿಹಾರ ಸಿಗುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಇಂಧನ ಕೆ.ಜೆ ಜಾರ್ಜ್, ನನಗೆ ಕೆಲ ರೈತರು ಮನವಿ ಮಾಡಿದ್ದಾರೆ. ನಿರಂತರವಾಗಿ ಕರೆಂಟ್ ಕೊಟ್ಟರೆ ಬೋರ್‌ವೆಲ್‌ ಅನ್ನು ನಿರಂತರವಾಗಿ ಬಳಕೆ‌ ಮಾಡಲು ಆಗಲ್ಲ. ಹಗಲು ಮತ್ತು ರಾತ್ರಿ ವೇಳೆ ಸಮಯ ಹಂಚಿಕೆ ವಿದ್ಯುತ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಕರಡಿ, ಆನೆ ಕಾಟ ಇರುವ ಕಡೆ ಹಗಲು ಹೊತ್ತು ಕರೆಂಟ್ ಕೊಡಲು ಆದೇಶ ಮಾಡಲಾಗಿದೆ. ರಾತ್ರಿ ಹೊತ್ತು ಬೋರ್‌ವೆಲ್ ಆನ್ ಮಾಡಲು ಹೋದಾಗ ಕರಡಿ ದಾಳಿಗೆ ತುತ್ತಾದವರಿಗೆ ನಮ್ಮ ಇಲಾಖೆಯಿಂದಲೇ ಪರಿಹಾರ ನೀಡಲಾಗುತ್ತದೆ. ಆದರೆ, ಇದು ಇದೊಂದು ಪ್ರಕರಣಕ್ಕೆ ಮಾತ್ರ ಎಂದು ಹೇಳಿದರು. ಎಲ್ಲರಿಗೂ ಅನ್ವಯ ಆಗಲಿ ಎಂದು ವಿಪಕ್ಷ ಸದಸ್ಯರು ಆಗ್ರಹಿಸಿದರು. ಅದಕ್ಕೆ ಇಲ್ಲ ಎಂದು ಕೆ.ಜೆ. ಜಾರ್ಜ್‌ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಅವರಿಗೆ ಹಣ ಹೊಂದಿಸುವ ಸಾಮರ್ಥ್ಯವಿದೆ

ರೈತರಿಗಾಗಿ ಹಗಲು ಹೊತ್ತು ಕರೆಂಟ್ ಕೊಡಿ. ಇದಕ್ಕೆ ಸಾವಿರ ಕೋಟಿ ರೂ. ಆಗಬಹುದು. ಸಿಎಂ ಸಿದ್ದರಾಮಯ್ಯ ಅವರಿಗೆ ಹಣ ಹೊಂದಿಸುವ ಸಾಮರ್ಥ್ಯವಿದೆ. ಮೇವು ಸಂಗ್ರಹ ಎಂಟರಿಂದ ಹತ್ತು ಆಗುತ್ತದೆ ಎಂದು ಹೇಳಿದ್ದಾರೆ. ಎಲ್ಲೂ ಸಂಗ್ರಹ ಮಾಡಿದ್ದು ಕಾಣಿಸಿಲ್ಲ. ನಮ್ಮ ಬಳಿ ಹಣವಿದೆ, ಆದರೆ ಮೇವು ಖರೀದಿಗೆ ಸರ್ಕಾರ ಆದೇಶ ಕೊಟ್ಟಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಂದೆ ಜನವರಿಯಲ್ಲಿ ಮೇವು ಎಲ್ಲಿಂದ ತರುತ್ತೀರ? ಇದುವರೆಗೆ ಒಂದು ಗೋ ಶಾಲೆಯನ್ನೂ ಮಾಡಿಲ್ಲ. ಸರ್ಕಾರ‌ ಮಾಡಿದ್ದನ್ನು ಸಹ ಕ್ಯಾನ್ಸಲ್ ಮಾಡಿದ್ದಾರೆ. ರೈತರಿಗೆ ಮೇವು ಕೊಡಬೇಕು. ದೇವರ ಹೆಸರಿನಲ್ಲಿ ಗೋವುಗಳನ್ನು ಬಿಟ್ಟಿರುತ್ತಾರೆ. ಈ ಬಗ್ಗೆ ಬಳ್ಳಾರಿ ಡಿಸಿ ಜತೆಗೆ ಮಾತನಾಡಿದ್ದೇನೆ. ಅವರು ನಮ್ಮ ಬಳಿ ಹಣ ಇದೆ ಎಂದು ಹೇಳುತ್ತಾರೆ. ಹಣ ಇರುವುದು ಎಲ್ಲರಿಗೂ ಗೊತ್ತಿದೆ. ಆದರೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಖರ್ಚು ಮಾಡುವ ಮನಸ್ಸು ಮಾಡುತ್ತಿಲ್ಲ. ಜಿಲ್ಲಾ‌ ಮಂತ್ರಿಗಳು ಪರಿಶೀಲನೆ ಸಭೆ ನಡೆಸಿ ಹಣ ಬಿಡುಗಡೆಗೆ ಆದೇಶ ಮಾಡಬೇಕಿತ್ತು. ಅಧಿಕಾರಿಗಳಿಗೆ ಬುದ್ಧಿ ಕಲಿಸಿದರೆ ಎಲ್ಲರೂ ದಾರಿಗೆ ಬರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ; ತಿದ್ದುಪಡಿ ವಿಧೇಯಕ ಮಂಡನೆ

ಸಿಎಂ ಸಿದ್ದರಾಮಯ್ಯ ಜನತಾ ದರ್ಶನವನ್ನು ಪ್ರತಿ ತಿಂಗಳು ಮಾಡಬೇಕು ಎಂದು ಆರ್.‌ ಅಶೋಕ್ ಇದೇ ವೇಳೆ ಒತ್ತಾಯ ಮಾಡಿದರು.

Continue Reading

ಕರ್ನಾಟಕ

Fraud Case : ಚಂದದ ಹುಡುಗಿ ಅಂತ ಆಸೆಪಟ್ಟು ರೂಮಿಗೆ ಹೋದರೆ ಅಲ್ಲಿ ಕಂಡಿದ್ದೇ ಬೇರೆ!

Fraud Case : ಸೂರತ್‌ ನಿಂದ ಬೆಂಗಳೂರಿಗೆ ಬಂದಿದ್ದ ನಿವೃತ್ತ ಅಧಿಕಾರಿಯೊಬ್ಬರ ಕಥೆ ಇದು. ಇಲ್ಲಿ ಯಾವುದೂ ನಿಜವಲ್ಲ ಎನ್ನುವುದು ಅವರು ಮೋಸ ಹೋದ ಕಥೆಯ ಸಾರಾಂಶ.

VISTARANEWS.COM


on

lusty old man and a woman
Koo

ಬೆಂಗಳೂರು: ಅವರು ಸೂರತ್‌ ಮೂಲದ ಒಬ್ಬ ನಿವೃತ್ತ ಅಧಿಕಾರಿ (Retired officer). ಗಜೆಟೆಡ್‌ ಹುದ್ದೆಯಲ್ಲಿದ್ದವರು. ಬೆಂಗಳೂರಿಗೆ ಯಾವುದೋ ಟ್ರಿಪ್‌ ಮೇಲೆ (Officer came on trip to Bangalore) ಬಂದಿದ್ದರು. ಊರು ಬಿಟ್ಟು ಬೆಂಗಳೂರಿಗೆ ಬಂದ ಅವರು ಸ್ವಲ್ಪ ಮೈ ಚಳಿ ಬಿಟ್ಟು ಸುತ್ತಾಡಿದ್ದರು. ಆಗ ಅವರಿಗೆ ಚರ್ಚ್‌ ಸ್ಟ್ರೀಟ್‌ನಲ್ಲಿ (Church Street) ಒಬ್ಳು ಸುಂದರವಾದ ಹುಡುಗಿ ಸಿಗ್ತಾಳೆ (A Beautiful Girl). ಅದೂ ಇದೂ ಮಾತಾಡೋ ಹೊತ್ತಿಗೆ 61ರ ವಯಸ್ಸಿನಲ್ಲಿ 16ರ ಕಾಮನೆ ಕೆರಳಿಬಿಡುತ್ತದೆ ಈ ರಿಟೈರ್ಡ್‌ ಆಫೀಸರ್‌ಗೆ. ಚಂದದ ಹುಡುಗಿ, ಬೆಂಗಳೂರಿನ ಹಿತವಾದ ವಾತಾವರಣ, ಚರ್ಚ್‌ ಸ್ಟ್ರೀಟ್‌ನ ಹಿತವಾದ ಜಾಗ.. ಇದಕ್ಕಿಂತ ಬೇರೆ ಬೇಕಾ ಎಂದು ಮಾತನಾಡುತ್ತಲೇ ಹುಡುಗಿಯನ್ನು ಸೆಟ್‌ ಮಾಡಿಕೊಂಡರು. ಆಕೆಯೋ ಮೊದಲೇ ಪಳಗಿದ ಹುಡುಗಿ. ಇವರು ನಾನ್‌ ರೆಡಿ ಎಂದ ಕೂಡಲೇ ಆಟೋ ಅಂತ ಕೂಗಿ ಕರೆದಳು. ಅವರಿಬ್ಬರು ಹೋಗಿದ್ದು ಒಂದು ಮನೆಗೆ!

ಅದುಮಿಟ್ಟಿದ್ದ ಆಕಾಂಕ್ಷೆಗಳನ್ನು ಬೆಂಗಳೂರಿನಲ್ಲಿ ಪೂರ್ಣವಾಗಿ ತೆರೆದಿಡುವ ಉತ್ಸಾಹದಲ್ಲಿ ಹೋಗಿದ್ದ ನಿವೃತ್ತ ಅಧಿಕಾರಿಗೆ ಅಲ್ಲಿ ಒಬ್ಬಳಲ್ಲ, ಇಬ್ಬರು ಸುಂದರಿಯರು ಸಿಕ್ಕರು. ಒಂದಕ್ಕೆ ಒಂದು ಫ್ರೀ ಎಂದು ಖುಷಿಯಲ್ಲಿದ್ದ ಅವರ ಉತ್ಸಾಹ ಕೆಲವೇ ಕ್ಷಣಗಳಲ್ಲಿ ಇಳಿದುಹೋಯಿತು. ಹಾಗಿದ್ದರೆ ಅಲ್ಲಿ ನಡೆದಿದ್ದೇನು? (Fraud Case)

ಇದು ಯಾರೋ ಹೇಳಿದ ಕಥೆಯಲ್ಲ, ಸ್ವತಃ ಆ ವ್ಯಕ್ತಿಯೇ ಕಬ್ಬನ್‌ ಪಾರ್ಕ್‌ ಪೊಲೀಸ್‌ ಸ್ಟೇಷನ್‌ ಗೆ ಬಂದು ವಿವರಿಸಿದ ರೋಚಕ ಕಹಾನಿ. ಅವರ ಕಥೇನ ಅವರದೇ ಬಾಯಿಯಲ್ಲಿ ಕೇಳಿ..

ನಾನು ಹಿಮವತ್‌ (ಹೆಸರು ಬದಲಿಸಿದೆ) ಅಂತ. ಸೂರತ್‌ ನನ್ನ ಊರು. ನಿವೃತ್ತ ಅಧಿಕಾರಿ. ಬೆಂಗಳೂರಿಗೆ ಒಂದು ಕೆಲಸದಲ್ಲಿ ಬಂದಿದ್ದೆ. ಇಲ್ಲೇ ಒಂದು ಹೋಟೆಲ್‌ನಲ್ಲಿ ರೂಮ್‌ ಮಾಡಿದ್ದೆ. ನನಗೆ ಒಂದು ಬ್ಯಾಗ್‌ ಬೇಕಿತ್ತು. ಹಾಗಾಗಿ ನಾನು ನವೆಂಬರ್‌ 29ರಂದು ಸಂಜೆ ಚರ್ಚ್‌ ಸ್ಟ್ರೀಟ್‌ಗೆ ಹೋದೆ. ಅಲ್ಲಿ ಮಲ್ಟಿನ್ಯಾಷನಲ್‌ ಕಾಫಿ ಚೈನ್‌ನ ಒಂದು ಔಟ್‌ ಲೆಟ್‌ ಎದುರು ನಿಂತಿದ್ದಾಗ ಒಬ್ಬ ಹುಡುಗಿ ಪರಿಚಯ ಆದ್ಳು. ನಾವಿಬ್ಬರೂ ಮಾತನಾಡಿಕೊಂಡೆವು.

ನಾನೂ ಸೂರತ್‌ ನಿಂದ ಬಂದಿದ್ದೆ. ಬೆಂಗಳೂರಿನ ಹುಡುಗಿಯರು ಹೇಗೆ ಅಂತ ನೋಡುವ ಆಸೆ ಆಯಿತು. ಇಬ್ಬರೂ ಒಪ್ಪಿಕೊಂಡು ಒಂದು ಸುತ್ತಿನ ಸುಖ ಪಡೆಯುವುದು ಎಂದು ತೀರ್ಮಾನ ಮಾಡಿದೆವು. ಇದು ಸೆಕ್ಸ್‌ ಫಾರ್‌ ಮನಿ ಡೀಲ್‌.

ಅಷ್ಟೆಲ್ಲ ಆಗುವಾಗ ರಾತ್ರಿ 9.35 ಆಗಿತ್ತು. ಆಕೆ ಒಂದು ಆಟೊವನ್ನು ಕರೆದು ನನ್ನನ್ನು ಇಂದಿರಾನಗರದ ಒಂದು ಕೋಣೆಗೆ ಕರೆದುಕೊಂಡು ಹೋದಳು. ಅಲ್ಲಿ ಹೋಗಿ ನೋಡಿದರೆ ಅಲ್ಲಿ ಇನ್ನೊಬ್ಬಳಿದ್ದಳು. ನಾವು ಇಬ್ಬರೂ ಸೇವೆಗೆ ಸಿದ್ಧ ಎಂದು ಅವರು ಹೇಳಿದರು. ನಂಗೂ ಖುಷಿಯಾಯಿತು.

ಕೆಲವು ನಿಮಿಷ ಮಾತನಾಡಿ ನಾನು ನನ್ನ ಖುಷಿಯ ಕ್ಷಣಗಳನ್ನು ಪಡೆಯುವ ಉದ್ದೇಶದಿಂದ ಸಿದ್ಧನಾಗುತ್ತಿದ್ದರೆ ಅವರಿಬ್ಬರೂ ರೆಡಿ ಆದರು. ಆದರೆ, ನಾನು ಅವರಿಬ್ಬರನ್ನೂ ನೋಡಿ ಬೆಚ್ಚಿ ಬಿದ್ದೆ. ಯಾಕೆಂದರೆ, ಅವರಿಬ್ಬರು ಹುಡುಗಿಯರಾಗಿರಲೇ ಇಲ್ಲ. ಇಬ್ಬರೂ ತೃತೀಯ ಲಿಂಗಿಗಳಾಗಿದ್ದರು.

ಯಾಕೆ ಹೀಗೆ ಮೋಸ ಮಾಡಿದೆ ಎಂದು ನಾನು ಜಗಳ ಮಾಡಿದೆ. ಆಗ ನನ್ನನ್ನು ಕರೆದುಕೊಂಡು ಬಂದವಳು, ನಿನಗೆ ವಯಸ್ಸಾಗಿದೆ, ಇದರಲ್ಲೇ ಅಜಸ್ಟ್‌ ಮಾಡಿಕೋ ಎಂದು ಹೇಳಿದಳು. ನಾನು ಆಕೆ ಮೋಸ ಮಾಡಿದ್ದಕ್ಕೆ ಬೈದೆ. ಆಗ ಅವರಿಬ್ಬರೂ ಸೇರಿ ನನ್ನ ಮೇಲೆ ಮುಗಿಬಿದ್ದರು.

ನನ್ನ ಕೈಯಲ್ಲಿದ್ದ 1000೦ ರೂ. ಭಾರತೀಯ ಕರೆನ್ಸಿ ಮತ್ತು 9500 ರೂ. ಮೌಲ್ಯದ 4000 ಥಾಯ್‌ ಬಹ್ತ್‌ ಕಿತ್ತುಕೊಂಡರು. ನನಗೆ ಬೆದರಿಕೆ ಹಾಕಿ ನನ್ನ ಮೊಬೈಲನ್ನು ಕಿತ್ತುಕೊಂಡರು. ನನ್ನ ಡಿಜಿಟಲ್‌ ಪೇಮೆಂಟ್‌ ಆಪ್‌ನ ಪಾಸ್‌ ವರ್ಡ್‌ ಕೂಡಾ ಬೆದರಿಸಿ ಪಡೆದುಕೊಂಡರು. ಅದರಿಂದ 30000 ರೂ.ವನ್ನು ತಮ್ಮ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಂಡರು.

ಯಾರಿಗಾದರೂ ಈ ವಿಷಯ ಹೇಳಿದರೆ ಹುಷಾರ್‌ ಎಂದು ಹೆದರಿಸಿ ನನ್ನನ್ನು ಮನೆಯಿಂದ ಹೊರಗೆ ಹಾಕಿದರು. ನಾನು ಸಿಕ್ಕಿದ ರಿಕ್ಷಾ ಹಿಡಿದುಕೊಂಡು ನನ್ನ ರೂಮಿಗೆ ಬಂದೆ. ಮಾರನೇ ದಿನ ಮತ್ತೆ ಅದೇ ಚರ್ಚ್‌ ಸ್ಟ್ರೀಟ್‌ಗೆ ಹೋದೆ. ಆಕೆ ಅಲ್ಲೇ ಬರಬಹುದಾ ಎನ್ನುವುದು ನನ್ನ ನಿರೀಕ್ಷೆಯಾಗಿತ್ತು. ಆಕೆ ಬಂದಿರಲಿಲ್ಲ.

ನಂತ್ರ ಕಬ್ಬನ್‌ ಪಾರ್ಕ್‌ ಪೊಲೀಸ್‌ ಸ್ಟೇಷನ್‌ ಗೆ ಹೋಗಿ ದೂರು ನೀಡಿದೆ. ಬೆಂಗಳೂರಿನಲ್ಲಿ ಪುರುಷರನ್ನು ಈ ರೀತಿಯಲ್ಲಿಯೂ ಯಾಮಾರಿಸುತ್ತಾರೆ ಎಂದು ಹೇಳಿದೆ.

—-

ಇದಿಷ್ಟು ಹಿಮವತ್‌ ಅಲ್ಲಿ ನಡೆದುದನ್ನು ಹೇಳಿದ್ದು. ಈಗ ದೂರು ದಾಖಲಿಸಿಕೊಂಡಿರುವ ಕಬ್ಬನ್‌ ಪಾರ್ಕ್‌ ಪೊಲೀಸರು ಏನು ಹೇಳುತ್ತಾರೆ ಕೇಳಿ..

ಇದನ್ನೂ ಓದಿ: Fraud Case : ಬಿಟ್ಟೋದ ಗಂಡನ್ನ ಸೇರಿಸ್ತೀನಿ ಅಂತ FDA ಅಧಿಕಾರಿ ಮಹಿಳೆಗೆ ಲಕ್ಷ ಲಕ್ಷ ಮೋಸ!

ಆ ನಿವೃತ್ತ ಅಧಿಕಾರಿ ಆ ಕೋಣೆಗೆ ಹೋಗಿದ್ದು ನಿಜ ಇರಬಹುದು. ಆದರೆ, ಅವರು ಹೆಣ್ಣು ಎಂದುಕೊಂಡೇ ಹೋಗಿದ್ದರಾ ಅಥವಾ ತೃತೀಯ ಲಿಂಗಿ ಎಂದು ಗೊತ್ತಿದ್ದೇ ಹೋಗಿದ್ದಾರಾ ಎನ್ನುವುದು ಗೊತ್ತಾಗುತ್ತಿಲ್ಲ. ನಾವು ಅವರು ನೀಡಿದ ಗುರುತಿನ ಆಧಾರದಲ್ಲಿ ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತೇವೆ. ಬಳಿಕ ವಿಷಯ ಸ್ಪಷ್ಟವಾಗಲಿದೆ.

ಇಷ್ಟು ಹೇಳಿದ ಮೇಲೆ ಒಂದು ವಿಷಯ ಹೇಳಲೇಬೇಕು: ನೀವು ಅಪರಿಚಿತ ಹೆಣ್ಮಕ್ಕಳ ಜತೆ ವ್ಯವಹರಿಸುವಾಗ ಎಚ್ಚರವಾಗಿರಿ. ಮೋಸ ಹೋಗಬೇಡಿ. ಇದು ಪೊಲೀಸರ ಸಲಹೆಯೂ ಹೌದು.

Continue Reading

ಕರ್ನಾಟಕ

Excise Revenue: ಸರ್ಕಾರಕ್ಕೆ ಗ್ಯಾರಂಟಿ ಕಿಕ್‌ ಕೊಟ್ಟ ಬಿಯರ್; 22,500 ಕೋಟಿ ಆದಾಯ

Excise Revenue: ಅಬಕಾರಿ ಇಲಾಖೆಗೆ ಕಳೆದ 7 ತಿಂಗಳಲ್ಲಿ ಬರೋಬ್ಬರಿ 22,500 ಕೋಟಿ ಆದಾಯ ಸಂಗ್ರಹವಾಗಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಬಿಯರ್ ಮಾರಾಟದಲ್ಲಿ ಹೆಚ್ಚಳವಾಗಿರುವುದರಿಂದ ಆದಾಯದಲ್ಲೂ ಏರಿಕೆ ಕಂಡುಬಂದಿದೆ.

VISTARANEWS.COM


on

beer shop
Koo

ಬೆಂಗಳೂರು: ಚಳಿಗಾಲದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಯರ್ ಸೇರಿ ಎಲ್ಲ ಮಾದರಿಯ ಮದ್ಯ ಮಾರಾಟ ಹೆಚ್ಚಾಗಿದೆ. ಇದರಿಂದ ಅಬಕಾರಿ ಇಲಾಖೆಯ ಆದಾಯದಲ್ಲಿ (Excise Revenue) ಭಾರಿ ಏರಿಕೆ ಕಂಡುಬಂದಿದೆ. ಕಳೆದ 7 ತಿಂಗಳಲ್ಲಿ ಬರೋಬ್ಬರಿ 22,500 ಕೋಟಿ ಆದಾಯ ಸಂಗ್ರಹವಾಗಿದ್ದು, ವಿಶೇಷವಾಗಿ ಬಿಯರ್ ಮಾರಾಟದಲ್ಲಿ ಹೆಚ್ಚಳವಾಗಿರುವುದು ಕಂಡುಬಂದಿದೆ.

ಚಳಿಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಬಿಯರ್‌ಗೆ ಭಾರಿ ಬೇಡಿಕೆ ಬಂದಿದೆ. ಕಳೆದ ಮೂರು ತಿಂಗಳ ಹಿಂದೆ ಮದ್ಯದ ದರವನ್ನು ಹೆಚ್ಚಳ ಮಾಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದ ಮಧ್ಯಪ್ರಿಯರು, ನಂತರ ಮದ್ಯ ಸೇವನೆ ಕಡಿಮೆ ಮಾಡಿದ್ದರು. ಆದರೆ, ಈಗ ಚಳಿಗಾಲ ಆರಂಭವಾಗುತ್ತಿದ್ದಂತೆ ದರ ಏರಿಕೆ ವಿಷಯ ಮರೆತು ಮದ್ಯ ಸೇವನೆಗೆ ಮುಂದಾಗಿದ್ದಾರೆ. ಅದರಲ್ಲಿಯೂ ಬಿಯರ್ ಸೇವನೆ ಮಾಡುವವರ ಸಂಖ್ಯೆ ಅತ್ಯಧಿಕವಾಗಿ ಏರಿಕೆ ಆಗುತ್ತಿದೆ.

ಕಳೆದ ವರ್ಷದ ನವೆಂಬರ್‌ಗೆ ಹೋಲಿಕೆ ಮಾಡಿದಲ್ಲಿ ಈ ವರ್ಷದ ನವೆಂಬ‌ನರ್‌ನಲ್ಲಿ ಬರೋಬ್ಬರಿ 6 ಲಕ್ಷ ಬಿಯರ್ ಬಾಕ್ಸ್‌ಗಳು ಹೆಚ್ಚಾಗಿ ಮಾರಾಟವಾಗಿವೆ ಎಂದು ಅಬಕಾರಿ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಅಬಕಾರಿ ಇಲಾಖೆಗೆ ಆದಾಯ ಹೆಚ್ಚಾಗುತ್ತಿದೆ. ಕಳೆದ ಎಂಟು ತಿಂಗಳಿನಿಂದ ಶೇ.15.58 ರಷ್ಟು ಹೆಚ್ಚುವರಿ ಬಿಯರ್ ಮಾರಾಟ ಆಗುತ್ತಿದೆ ಆದರೆ,. ನವೆಂಬರ್ ತಿಂಗಳಲ್ಲೇ ಬಿಯರ್ ಶೇ.17 ಮಾರಾಟ ಹೆಚ್ಚಳವಾಗಿದೆ.

ಇದನ್ನೂ ಓದಿ | CM Siddaramaiah : ಸಿದ್ದರಾಮಯ್ಯರಿಂದ ಮುಸ್ಲಿಂ ಓಲೈಕೆ ಎಂದ ಬಿಜೆಪಿ; ಹೇಳಿದ್ದರಲ್ಲಿ ತಪ್ಪಿಲ್ಲ ಎಂದ ಸಿಎಂ!

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ 29.95 ಲಕ್ಷ ಬಾಕ್ಸ್ ಮಾರಾಟ ಆಗಿತ್ತು. ಆದರೆ, ಈ ವರ್ಷ ನವೆಂಬರ್‌ನಲ್ಲಿ 35.05 ಲಕ್ಷ ಬಾಕ್ಸ್ ಮಾರಾಟವಾಗಿದೆ. ಈ ಮೂಲಕ ಕಳೆದ ವರ್ಷದ ನವೆಂಬರ್‌ಗೆ ಹೋಲಿಕೆ ಮಾಡಿದಲ್ಲಿ 6 ಲಕ್ಷ ಬಿಯರ್ ಬಾಕ್ಸ್ ಮಾರಾಟ ಹೆಚ್ಚಳವಾಗಿದೆ.

ದರ ಏರಿಕೆಯ ನಡುವೆಯೂ ಮದ್ಯ ಮಾರಾಟ ಬಲು ಜೋರಾಗಿದೆ. ಬಿಯರ್ ಜೊತೆಗೆ ಇತರೆ ಲಿಕ್ಕರ್ ಮಾರಾಟದಲ್ಲೂ ಹೆಚ್ಚಳವಾಗಿದೆ. ಇನ್ನು ಚಳಿಗಾಲ ಆರಂಭವಾಗಿದ್ದರಿಂದ ನವೆಂಬರ್‌ನಲ್ಲಿ ಬಿಯರ್ ಸೇರಿ ಎಲ್ಲ ಮಾದರಿಯ ಮದ್ಯ ಮಾರಾಟ ಹೆಚ್ಚಾಗಿದ್ದು, ಒಟ್ಟಾರೆ ಲಿಕ್ಕರ್ ಮಾರಾಟ ಪ್ರಮಾಣ 0.43 ಶೇ. ಹೆಚ್ಚಳವಾಗಿದೆ. ಇನ್ನು ರಾಜ್ಯ ಸರ್ಕಾರದಿಂದ 2023-24ರಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ಆದಾಯ ಸಂಗ್ರಹಣೆಗೆ ಟಾರ್ಗೆಟ್ ನೀಡಲಾಗಿದೆ. ಈಗ ಕಳೆದ ಎಂಟು ತಿಂಗಳಿನಲ್ಲಿ (ಏಪ್ರಿಲ್‌ನಿಂದ ನವೆಂಬರ್ ವರೆಗೆ) ಬರೋಬ್ಬರಿ 22,500 ಕೋಟಿ ಆದಾಯ ಸಂಗ್ರಹವಾಗಿದೆ.

ಇದನ್ನೂ ಓದಿ | Belagavi Winter Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ; ತಿದ್ದುಪಡಿ ವಿಧೇಯಕ ಮಂಡನೆ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆ ಹೆಚ್ಚಾಗಿದೆ. ಹೀಗಾಗಿ ಖಜಾನೆ ಭರ್ತಿ ಮಾಡಲು ಸರ್ಕಾರ ಪ್ರಮುಖ ಆದಾಯದ ಮೂಲವಾದ ಮದ್ಯದ ದರ ಹೆಚ್ಚಳ ಮಾಡಿ ಮಾರಾಟ ಹೆಚ್ಚಳಕ್ಕೆ ಟಾರ್ಗೆಟ್‌ ನೀಡಿತ್ತು. ಆರಂಭದಲ್ಲಿ ದರ ಹೆಚ್ಚಳದಿಂದ ಬಾರ್‌ಗಳಿಂದ ದೂರ ಉಳಿದಿದ್ದ ಮದ್ಯಪ್ರಿಯರು ಚಳಿಗಾಲ ಆರಂಭವಾಗುತ್ತಿದ್ದಂತೆ ಹೆಚ್ಚಿನ ಮದ್ಯ ಸೇವನೆಗೆ ಮುಂದಾಗಿದ್ದಾರೆ. ಹೀಗಾಗಿ ನವೆಂಬರ್‌ನಲ್ಲಿ ಬಿಯ‌ರ್ ಮಾರಾಟ ಪ್ರಮಾಣ ಹೆಚ್ಚಾಗಿದೆ.

Continue Reading
Advertisement
R Ashok in assembly session
ಕರ್ನಾಟಕ1 min ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

Chetan Sakariya
ಕ್ರಿಕೆಟ್13 mins ago

Chetan Sakariya : ಹರಾಜಿಗೆ ಮೊದಲೇ ಎಂಗೇಜ್ಮೆಂಟ್​ ಮಾಡಿಕೊಂಡ ಐಪಿಎಲ್​ನ ಸ್ಟಾರ್​ ಬೌಲರ್​

loan new
ಮನಿ-ಗೈಡ್14 mins ago

Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

R Ashok
ಕರ್ನಾಟಕ15 mins ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

lusty old man and a woman
ಕರ್ನಾಟಕ25 mins ago

Fraud Case : ಚಂದದ ಹುಡುಗಿ ಅಂತ ಆಸೆಪಟ್ಟು ರೂಮಿಗೆ ಹೋದರೆ ಅಲ್ಲಿ ಕಂಡಿದ್ದೇ ಬೇರೆ!

beer shop
ಕರ್ನಾಟಕ30 mins ago

Excise Revenue: ಸರ್ಕಾರಕ್ಕೆ ಗ್ಯಾರಂಟಿ ಕಿಕ್‌ ಕೊಟ್ಟ ಬಿಯರ್; 22,500 ಕೋಟಿ ಆದಾಯ

Byjus
ಕ್ರಿಕೆಟ್36 mins ago

BCCI : ಬಿಸಿಸಿಐಗೆ ದೊಡ್ಡ ಮೊತ್ತ ಬಾಕಿ, ಬೈಜೂಸ್​ಗೆ ಮತ್ತೊಂದು ಸಂಕಷ್ಟ

Political Journey of to be chief minister telangana, Revanth Reddy
ದೇಶ57 mins ago

ರೇವಂತ್ ರೆಡ್ಡಿ ಅಂದು ಎಬಿವಿಪಿ ನಾಯಕ; ಇಂದು ಕಾಂಗ್ರೆಸ್‌ನಿಂದ ತೆಲಂಗಾಣ ಸಿಎಂ!

iit
ಉದ್ಯೋಗ1 hour ago

Job news: ಖರಗ್ಪುರ ಐಐಟಿ ಕ್ಯಾಂಪಸ್‌ನಲ್ಲಿ 6 ವಿದ್ಯಾರ್ಥಿಗಳಿಗೆ ಸಿಕ್ತು ಕೋಟಿ ರೂ. ಸಂಬಳದ ಆಫರ್‌!

Uttara Kannada News Cleanliness movement programme in Vajralli
ಉತ್ತರ ಕನ್ನಡ1 hour ago

Uttara Kannada News: ವಜ್ರಳ್ಳಿಯಲ್ಲಿ ಸ್ವಚ್ಛತಾ ಆಂದೋಲನ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

R Ashok in assembly session
ಕರ್ನಾಟಕ1 min ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ15 mins ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

ಟ್ರೆಂಡಿಂಗ್‌