Rapes In India | ದೇಶದಲ್ಲಿ ಗಂಟೆಗೆ 86 ಹೆಣ್ಣುಮಕ್ಕಳ ಅತ್ಯಾಚಾರ, ಇದು ಸರಕಾರವೇ ನೀಡಿದ ಲೆಕ್ಕಾಚಾರ - Vistara News

ಕ್ರೈಂ

Rapes In India | ದೇಶದಲ್ಲಿ ಗಂಟೆಗೆ 86 ಹೆಣ್ಣುಮಕ್ಕಳ ಅತ್ಯಾಚಾರ, ಇದು ಸರಕಾರವೇ ನೀಡಿದ ಲೆಕ್ಕಾಚಾರ

ಅತ್ಯಾಚಾರಿಗಳ ವಿರುದ್ಧ ಎಷ್ಟೇ ಕಠಿಣ ನಿಯಮ ರೂಪಿಸಿದರೂ, ಅತ್ಯಾಚಾರದ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ದೇಶದಲ್ಲಿ ಅತ್ಯಾಚಾರ (Rapes In India) ಮಾತ್ರ ನಿಲ್ಲುತ್ತಿಲ್ಲ. ದೇಶದಲ್ಲಿ ನಿತ್ಯ ಗಂಟೆಗೆ ಸರಾಸರಿ 86 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತದೆ ಎಂದು ಸರಕಾರವೇ ಮಾಹಿತಿ ನೀಡಿದೆ.

VISTARANEWS.COM


on

Rape
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅತ್ಯಾಚಾರಿಗಳ ವಿರುದ್ಧ ಎಷ್ಟೇ ಕಠಿಣ ನಿಯಮ ರೂಪಿಸಿದರೂ, ಅತ್ಯಾಚಾರದ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ದೇಶದಲ್ಲಿ ಅತ್ಯಾಚಾರ (Rapes In India) ಮಾತ್ರ ನಿಲ್ಲುತ್ತಿಲ್ಲ. ದೇಶದಲ್ಲಿ ಗಂಟೆಗೆ ಸರಾಸರಿ ೮೬ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತದೆ ಎಂದು ಸರಕಾರವೇ ಮಾಹಿತಿ ನೀಡಿದ್ದು, ಇದು ನಾಗರಿಕ ಸಮಾಜವೇ ತಲೆತಗ್ಗಿಸುವ ವಿಷಯವಾಗಿದೆ.

ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೊ ವರದಿ ಪ್ರಕಾರ ಕಳೆದ ವರ್ಷ ೩೧,೬೭೭ ಅತ್ಯಾಚಾರ ಪ್ರಕರಣ ದಾಖಲಾಗಿವೆ. ಅಂದರೆ, ನಿತ್ಯ ಗಂಟೆಗೆ ಸರಾಸರಿ ೮೬ ಕೇಸ್‌ಗಳು ದಾಖಲಾಗಿವೆ. ಅದೇ ರೀತಿ, ಗಂಟೆಗೆ ಸರಾಸರಿ ೪೯ ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಲ್ಲಿ ತಿಳಿಸಿದೆ.

ಅತ್ಯಾಚಾರ ಪ್ರಕರಣಗಳ ದಾಖಲಾಗುವುದರಲ್ಲಿ ರಾಜಸ್ಥಾನ (೬,೩೩೭) ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ (೨,೯೪೭), ಉತ್ತರ ಪ್ರದೇಶ (೨,೮೪೫) ಹಾಗೂ ದೆಹಲಿ (೧,೨೫೦) ಇವೆ. ೨೦೨೦ರಲ್ಲಿ ದೇಶಾದ್ಯಂತ ೨೮,೦೪೬ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೆ, ೨೦೧೯ರಲ್ಲಿ ೩೨,೦೩೩ ಕೇಸ್‌ ದಾಖಲಾಗಿದ್ದವು.

ಇದನ್ನೂ ಓದಿ | Conviction Rate | ಉತ್ತರ ಪ್ರದೇಶದಲ್ಲಿ ಮಹಿಳಾ ದೌರ್ಜನ್ಯಕ್ಕಿಲ್ಲ ಆಸ್ಪದ, ಶಿಕ್ಷೆ ಪ್ರಮಾಣ ದೇಶದಲ್ಲೇ ಗರಿಷ್ಠ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Dengue fever: ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ.

VISTARANEWS.COM


on

dengue fever hassan girl death
Koo

ಹಾಸನ: ಡೆಂಗ್ಯು ಜ್ವರದ (Dengue fever) ಪರಿಣಾಮ ಬಾಲಕಿಯೊಬ್ಬಳು (Girl death) ಮೃತಪಟ್ಟಿದ್ದಾಳೆ. ರಾಜ್ಯದಲ್ಲಿ ದಿನೇ ದಿನೆ ಡೆಂಗ್ಯು ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಸಣ್ಣ ಮಕ್ಕಳಲ್ಲಿ ಇದು ಮಾರಣಾಂತಿಕವಾಗುತ್ತಿರುವುದು ಆತಂಕ ಮೂಡಿಸಿದೆ.

ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ. ಕಳೆದ ಬುಧವಾರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಕ್ಷತಾ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರಾದ ಅಕ್ಷತಾಳ ಪೋಷಕರು ಕೂಲಿ ಕೆಲಸ ಮಾಡುವ ಬಡವರಾಗಿದ್ದಾರೆ.

ಗುಣಮಖಳಾಗದಿದ್ದಾಗ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚೇತರಿಸಿಕೊಳ್ಳದ ಅಕ್ಷತಾಳನ್ನು ನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದರು. ಬಳಿಕ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.

ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಯುವಕನ ಬಲಿ

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: Dengue Fever: ರಾಯಚೂರಲ್ಲಿ 6 ವರ್ಷದ ಮಗುವಿಗೆ ಡೆಂಗ್ಯೂ; ದಾವಣಗೆರೆ ಜಿಲ್ಲೆಯಲ್ಲಿ 142 ಪ್ರಕರಣಗಳು ಪತ್ತೆ!

Continue Reading

ಕರ್ನಾಟಕ

Mangalore Jail: ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ಗಾಯ

Mangalore Jail: ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ಆಸ್ಪತೆಗೆ ದಾಖಲಿಸಲಾಗಿದೆ. ಹಲ್ಲೆ ಸಂಬಂಧ ಏಳು ಆರೋಪಿಗಳ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Mangalore Jail
Koo

ಮಂಗಳೂರು: ಮಂಗಳೂರು ಜೈಲಿನಲ್ಲಿ (Mangalore Jail) ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಗಾಯಗಳಾಗಿವೆ. ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಆರೋಪಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30) ಗಾಯಾಳುಗಳು. ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್, ಜೈನುದ್ದೀನ್ ಹಲ್ಲೆ ಅರೋಪಿಗಳು.

ಉಳ್ಳಾಲ ಠಾಣಾ ವ್ಯಾಪ್ತಿಯ ಕೇಸ್‌ನಲ್ಲಿ ವಿಚಾರಣಾಧೀನ ಕೈದಿಗಳಾಗಿರುವ ಇಬ್ಬರ ಮೇಲೆ ಟೋಪಿ ನೌಫಲ್ ಮತ್ತು ಗ್ಯಾಂಗ್‌ನಿಂದ ದಾಳಿ ನಡೆಸಲಾಗಿದೆ. ಟೋಪಿ ನೌಫಲ್ ತಂಡದವರು ರೌಡಿ ಶೀಟರ್‌ಗಳಾಗಿದ್ದು, ಸಂಜೆ 6:30 ರಿಂದ 6:45 ರ ನಡುವೆ ವಿಚಾರಣಾಧೀನ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಇಬ್ಬರಿಗೆ ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ.

ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹಲ್ಲೆ ಮಾಡಿದ್ದರಿಂದ ಇಬ್ಬರು ಗಾಯಗೊಂಡಿದ್ದಾರೆ. ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಹಲ್ಲೆ ಆರೋಪಿಗಳು ಮತ್ತು ಹಲ್ಲೆಗೊಳಗಾದ ಇಬ್ಬರೂ ಅನೇಕ ಪ್ರಕರಣಗಳಲ್ಲಿ ಬಂಧನವಾದವರು. ಅಲ್ಲದೇ ರೌಡಿ ಶೀಟರ್‌ಗಳಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ | Viral News: ಇದೆಂಥಾ ಹುಚ್ಚಾಟ! ಎನ್‌ಡಿಎ ಕಳಪೆ ಪ್ರದರ್ಶನದಿಂದ ಖಿನ್ನತೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಬಗ್ಗೆ ಕಮಿಷನರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

Assault Case in Hubballi

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ನಡುವೆ ಗ್ಯಾಂಗ್ ವಾರ್ (Gang War) ನಡೆದಿದ್ದು, ಎರಡು ಗ್ಯಾಂಗ್‌ಗಳಿಂದ ದೂರು ಪ್ರತಿದೂರು ದಾಖಲಾಗಿದೆ. ಗನ್ ತೋರಿಸಿ‌ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (Assault case) ದಾಖಲಾಗಿದೆ.

ಸುಂದರ್, ಪಿಲೋಮಿನ್, ಚಂದ್ರ ಪೌಲ್ ಎಂಬುವವರ ವಿರುದ್ಧ ಹುಬ್ಬಳ್ಳಿಯ ಸೆಟ್ಲಮೆಂಟ್ ನಿವಾಸಿ ಅಭಿಷೇಕ್ ಜಾಧವ್ ದೂರು ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಶಾಮ್ ಜಾಧವ ಹಾಗೂ ಪಾಲಿಕೆ ಸದಸ್ಯೆ ಮಂಜುಳಾ ಜಾಧವ ಅವರ ಪುತ್ರ ಅಭಿಷೇಕ್ ಜಾಧವ್‌ಗೆ ಈ ಆರೋಪಿಗಳು ಹುಬ್ಬಳ್ಳಿಗೆ ನಾವೇ ಡಾನ್‌ಗಳು ಎಂದು‌ ಧಮ್ಕಿ ಹಾಕಿದ್ದರಂತೆ.

ಇತ್ತ ಸುಂದರ ಪೌಲ್ ಆ್ಯಂಡ್ ಟೀಮ್ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಅಭಿಷೇಕ್‌ ಜಾಧವ್ ಗ್ಯಾಂಗ್‌ನವರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ನಾಲ್ವರ ವಿರುದ್ಧ ದೂರು ನೀಡಿದ್ದಾರೆ. ಹಲವು ಕ್ರಿಮಿನಲ್ ಆರೋಪ ಹೊತ್ತಿರುವ ಈ ಎರಡು ಗ್ಯಾಂಗ್‌ಗಳ ನಡುವೆ ಕಲಹ ಶುರುವಾಗಿದೆ. ಈ ಮಧ್ಯೆ ಪರಸ್ಪರ ಅವಾಜ್ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Continue Reading

Latest

Dating Application: ಡೇಟಿಂಗ್‌ ನೆಪದಲ್ಲಿ ಕೆಫೆಗೆ ಕರೆದ ಮಹಿಳೆ ಹೀಗಾ ಮಾಡೋದು?

Dating Application: ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳ ಮೂಲಕ ತಮಗೆ ಬೇಕಾದ ಸಂಗಾತಿಯನ್ನು ಹುಡುಕಿಕೊಂಡು ಮದುವೆಯಾಗುತ್ತಾರೆ. ಆದರೆ ಈ ಡೇಟಿಂಗ್ ಅಪ್ಲಿಕೇಶನ್ ಮೂಲಕ ಪರಿಚಯವಾಗುವವರು ಎಲ್ಲರೂ ಒಳ್ಳೆಯವರೇ ಆಗಿರುವುದಿಲ್ಲ. ಕೆಲವರಿಗೆ ಇದರ ಕಹಿ ಅನುಭವವೂ ಆಗಿದೆ. ಈಗ ಈ ಡೇಟಿಂಗ್ ನೆಪದಲ್ಲಿ ಸುಲಿಗೆ ಮಾಡುವ ಪ್ರಕರಣವೂ ನಡೆಯುತ್ತಿದೆ.ಡೇಟಿಂಗ್ ನೆಪದಲ್ಲಿ ಕೆಫೆ ಅಥವಾ ಪಬ್‌ಗೆ ಕರೆದು ಮೆನುವಿನಲ್ಲಿ ಇಲ್ಲದ ಫುಡ್ ಆರ್ಡರ್ ಮಾಡಿ ಸಿಕ್ಕಾಪಟ್ಟೆ ದುಡ್ಡನ್ನು ಪೀಕುವ ಜಾಲವೊಂದು ಈಗ ಪೊಲೀಸ್ ಬಲೆಗೆ ಬಿದ್ದಿದೆ.

VISTARANEWS.COM


on

Dating Application
Koo

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮದುವೆ ಸಂಬಂಧ ಕುದುರುವುದು ಡೇಟಿಂಗ್ ಅಪ್ಲಿಕೇಶನ್‌ಗಳ ಮೂಲಕ. ಇಲ್ಲಿ ಯುವಕ-ಯುವತಿಯರು ಒಬ್ಬರನ್ನೊಬ್ಬರು ಭೇಟಿಯಾಗಿ ಮದುವೆ ನಿಶ್ಚಯ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಕೆಲವು ಜನರು ತಮ್ಮ ಜೀವನ ಕಟ್ಟಿಕೊಂಡಿದ್ದರೆ, ಇನ್ನೂ ಕೆಲವರು ಈ ಅಪ್ಲಿಕೇಶನ್‌ನಲ್ಲಿ ಡೇಟಿಂಗ್ ಮಾಡಿ ಮೋಸ ಹೋಗಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಡೇಟಿಂಗ್ ಅಪ್ಲಿಕೇಶನ್‌ (Dating Application) ಮೋಸದ ಹಗರಣವೊಂದು ಬೆಳಕಿಗೆ ಬಂದಿದೆ.

ಅಪ್ಲಿಕೇಶನ್‌ನಲ್ಲಿ ಭೇಟಿಯಾದ ಮಹಿಳೆಯೊಂದಿಗೆ ಡೇಟಿಂಗ್ ಮಾಡಿದ ದೆಹಲಿಯ ನಾಗರಿಕ ಸೇವಾ ಆಕಾಂಕ್ಷಿಯೊಬ್ಬರು ಕೆಫೆಯಲ್ಲಿ 1.20 ಲಕ್ಷ ರೂ.ಗಳ ಬಿಲ್ ಕೊಟ್ಟು ಹಣವನ್ನು ಕಳೆದುಕೊಂಡಿದ್ದಾರೆ. ಇದು ಪ್ರಮುಖ ನಗರಗಳಲ್ಲಿ ವ್ಯಾಪಕವಾಗಿ ಹರಡಿರುವ ‘ಟಿಂಡರ್ ಹಗರಣ’ದ ಅನೇಕ ಪ್ರಕರಣಗಳಲ್ಲಿ ಒಂದಾಗಿದೆ.

ರೆಡ್ಡಿಟ್ ಎಂಬ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಅನೇಕ ಪೋಸ್ಟ್‌ಗಳಿದ್ದು ಅವುಗಳಲ್ಲಿ ಕೆಲವು ಒಂದು ವರ್ಷ ಹಳೆಯದಾಗಿವೆ. ಅದರಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಲ್ಲಿ ಮಹಿಳೆಯರೊಂದಿಗೆ ಡೇಟಿಂಗ್ ಮಾಡಿ ದುಬಾರಿ ಬಿಲ್ ತೆತ್ತು ಮೋಸಹೋದ ಜನರ ಖಾತೆಗಳ ಬಗ್ಗೆ ತಿಳಿಸುತ್ತದೆ. ಟಿಂಡರ್, ಬಂಬಲ್, ಹಿಂಜ್ ಮತ್ತು ಒಕ್ಯುಪಿಡ್‌ನಂತಹ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಯಾರಾದರೂ ಪ್ರೊಫೈಲ್‌ ಮಹಿಳೆಯ ಪ್ರೊಫೈಲ್‌ಗೆ ಮ್ಯಾಚ್ ಆದಾಗ ಅವಳು ತನ್ನ ವಾಟ್ಸಾಪ್ ಸಂಖ್ಯೆಯನ್ನು ಶೇರ್‌ ಮಾಡಿಕೊಂಡು ಅವರ ಜೊತೆ ಮಾತನಾಡಲು ಶುರು ಮಾಡುತ್ತಾಳೆ. ನಂತರ ಮಹಿಳೆ ಕೆಫೆ ಮತ್ತು ಪಬ್‌ಗಳಲ್ಲಿ ಮೀಟ್‌ ಆಗುವ ಎಂದು ಒತ್ತಾಯ ಮಾಡುವುದಕ್ಕೆ ಶುರುಮಾಡುತ್ತಾಳೆ. ಮಹಿಳೆಯ ಮಾತಿಗೆ ಒಪ್ಪಿ ಭೇಟಿಯಾಗುವುದಕ್ಕೆ ರೆಡಿಯಾದರೆ ಅವನಿಗೆ ನಿರ್ದಿಷ್ಟ ಮೆಟ್ರೋ ನಿಲ್ದಾಣದಲ್ಲಿ ಭೇಟಿಯಾಗಲು ಹೇಳಿ ಅಲ್ಲಿಂದ ಕೆಫೆ ಅಥವಾ ಪಬ್‌ಗೆ ಹೋಗುತ್ತಾರೆ

ಇನ್ನು ಕೆಫೆಯಲ್ಲಿ, ಮಹಿಳೆಯೇ ಆರ್ಡರ್ ಮಾಡುತ್ತಾಳೆ. ಆದರೆ ಈ ಮೋಸದಾಟದ ಬಗ್ಗೆ ಅರಿವಿಲ್ಲದ ಪುರುಷರು ಸುಮ್ಮನಿರುತ್ತಾರೆ. ನಂತರ, ಮಹಿಳೆ ಮೆನುವಿನಲ್ಲಿ ಇಲ್ಲದಿರುವ ಏನನ್ನಾದರೂ ಆರ್ಡರ್ ಮಾಡಿ ತನಗೆ ಅರ್ಜೆಂಟ್ ಕೆಲಸವಿದೆ ಎಂದು ಹೇಳಿ ಅವಸರದಿಂದ ಅಲ್ಲಿಂದ ಹೋಗುತ್ತಾಳೆ. ಆದರೆ ಬಿಲ್ ಬಂದಾಗ, ಅದರ ಬೆಲೆ ನೋಡಿ ಬಲಿಪಶು ಶಾಕ್ ಆಗುವುದಂತೂ ಖಂಡಿತ. ಈ ಬಗ್ಗೆ ಪ್ರತಿಭಟಿಸಿದರೆ, ಕೆಫೆ ಸಿಬ್ಬಂದಿಗಳು ಅವನಿಗೆ ಬೆದರಿಕೆ ಹಾಕುತ್ತಾರೆ.

ಬೇರೆ ಆಯ್ಕೆಯಿಲ್ಲದೆ, ಅವನು ಬಿಲ್ ಪಾವತಿಸುತ್ತಾನೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜನರು ಪೊಲೀಸರನ್ನು ಸಂಪರ್ಕಿಸುವುದಿಲ್ಲ. ಏಕೆಂದರೆ ತನಿಖೆಯ ವೇಳೆ ಅವನು ಡೇಟಿಂಗ್ ಅಪ್ಲಿಕೇಶನ್ ಮೂಲಕ ಜನರನ್ನು ಭೇಟಿಯಾಗುತ್ತಿದ್ದಾನೆ ಎಂದು ಅವನ ಕುಟುಂಬಕ್ಕೆ ತಿಳಿಯಬಹುದೆಂದು ಹೆದರುತ್ತಾರೆ.

Dating Application

ಕೆಫೆ ಮಾಲೀಕರು, ವ್ಯವಸ್ಥಾಪಕರು ಮತ್ತು ಡೇಟಿಂಗ್ ಮಹಿಳೆಯರು ಸೇರಿದಂತೆ ಹಲವಾರು ಹೆಣೆದ ಬಲೆಯಾಗಿದೆ ಇದು ಎಂದು ಪೊಲೀಸರು ತಿಳಿಸಿದ್ದಾರೆ. ಐಎಎಸ್ ಆಕಾಂಕ್ಷಿಯನ್ನು ಗುರಿಯಾಗಿಸಿಕೊಂಡು ನಡೆದ ಇತ್ತೀಚಿನ ದೆಹಲಿ ಘಟನೆಯಲ್ಲಿ, ಕೆಫೆಯ ಮಾಲೀಕ ಅಕ್ಷಯ್ ಪಹ್ವಾ ಮತ್ತು ಸಂತ್ರಸ್ತೆಯ ‘ಡೇಟ್’ ಅಫ್ಸಾನ್ ಪರ್ವೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಗಂಡನ ಕುಡಿತ ನಿಲ್ಲಿಸಬೇಕೆ? ಹಾಗಾದ್ರೆ ಬಿಜೆಪಿ ಸಚಿವರೊಬ್ಬರ ಈ ಟಿಪ್ಸ್‌ ಟ್ರೈ ಮಾಡಿ ನೋಡಿ!

ಅಲ್ಲದೇ ಈ ಮೋಸದ ಆಟದಿಂದ ಬಂದ ಬಿಲ್ ಹಣದಲ್ಲಿ 15 ಪ್ರತಿಶತವನ್ನು ಮಹಿಳೆಗೆ, 45 ಪ್ರತಿಶತವನ್ನು ವ್ಯವಸ್ಥಾಪಕರಿಗೆ ಮತ್ತು ಉಳಿದ 40 ಪ್ರತಿಶತವನ್ನು ಮಾಲೀಕರಿಗೆ ಹಂಚಲಾಗುತ್ತದೆ ಎಂದು ಆರೋಪಿಗಳಲ್ಲಿ ಒಬ್ಬ ಪೊಲೀಸರಿಗೆ ತಿಳಿಸಿದ್ದಾರೆ.

Dating Application

ಈ ಪ್ರಕರಣ ದೆಹಲಿ ಮಾತ್ರವಲ್ಲ ದೆಹಲಿ-ಎನ್ಸಿಆರ್, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಈ ಹಗರಣ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಡೇಟಿಂಗ್ ಅಪ್ಲಿಕೇಶನ್‌ಗಳಲ್ಲಿ ಪುರುಷರು ಮಾತ್ರ ಗುರಿಯಾಗುತ್ತಿಲ್ಲ. ಈ ತಿಂಗಳ ಆರಂಭದಲ್ಲಿ, ಡೇಟಿಂಗ್ ಅಪ್ಲಿಕೇಶನ್‌ಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ಮತ್ತು ಅವರ ಮನೆಗಳಲ್ಲಿ ದರೋಡೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಇಬ್ಬರು ಪುರುಷರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

(ಇಲ್ಲಿ ಬಳಸಿರುವುದು ಸಾಂದರ್ಭಿಕ ಚಿತ್ರ)

Continue Reading

ಪ್ರಮುಖ ಸುದ್ದಿ

Suraj Revanna Case: ಸೂರಜ್ ರೇವಣ್ಣ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ; ವಕೀಲ ದೇವರಾಜೇಗೌಡಗೆ ಜಾಮೀನು

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 8 ದಿನ ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಸೂರಜ್ ರೇವಣ್ಣನನ್ನು ಹಾಜರುಪಡಿಸಲಾಗಿತ್ತು. ಅವರಿಗೆ ಮತ್ತೆ 2 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣನನ್ನು (Suraj Revanna Case) ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಆದೇಶ ನೀಡಿದ್ದಾರೆ. ಮತ್ತೊಂದೆಡೆ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ವಕೀಲ ದೇವರಾಜೇಗೌಡಗೆ ಜಾಮೀನು ಸಿಕ್ಕಿದೆ.

ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಅರೋಪದಡಿ ದಾಖಲಾದ ಪ್ರಕರಣದಲ್ಲಿ ಜೂನ್‌ 22ರಂದು ಸೂರಜ್‌ ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಸೂರಜ್‌ನ ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಮತ್ತೆ ಆರು ದಿನ ಕಸ್ಟಡಿಗೆ ನೀಡುವಂತೆ ಎಸ್‌ಪಿಪಿ ಅಶೋಕ್ ನಾಯಕ್ ಮನವಿ ಮಾಡಿದರು. ವಾಯ್ಸ್ ಸ್ಯಾಂಪಲ್ಸ್ ಸಂಗ್ರಹ ಮಾಡಬೇಕಿದೆ, ಪ್ರತಿನಿತ್ಯ ಏನೆಲ್ಲಾ ತನಿಖೆ ನಡೆದಿದೆ, ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಎಂಟು ದಿನ ಕಸ್ಟಡಿಯಲ್ಲಿದ್ದಾಗ ಏನಾದೂ ತೊಂದರೆ ನೀಡಿದರಾ ಎಂದು ಸೂರಜ್‌ಗೆ ಜಡ್ಜ್ ಪ್ರಶ್ನೆ ಕೇಳಿದರು. ಯಾವುದೇ ತೊಂದರೆ ನೀಡಿಲ್ಲ ಎಂದು ಸೂರಜ್ ಉತ್ತರಿಸಿದ್ದಾರೆ. ಬಳಿಕ 2 ದಿನ ಕಸ್ಟಡಿ ವಿಸ್ತರಿಸಲು ನ್ಯಾಯಾಧೀಶರು ಸೂಚಿಸಿದ್ದಾರೆ.

ಇದನ್ನೂ ಓದಿ | New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

ವಕೀಲ ದೇವರಾಜೇಗೌಡಗೆ ಜಾಮೀನು

Prajwal Revanna case Devaraje Gowda should be given mental treatment says Congress

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಇದೀಗ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ನೀಡಲಾಗಿದೆ.

ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದರು. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿದೆ.

ವಕೀಲ ದೇವರಾಜೇಗೌಡ ಬಂಧನವಾಗಿದ್ದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

Continue Reading
Advertisement
Team India Coach
ಕ್ರೀಡೆ5 mins ago

Team India Coach: ಟೀಮ್​ ಇಂಡಿಯಾ ಕೋಚ್​ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಜಯ್‌ ಶಾ

kannada marathi row
ಪ್ರಮುಖ ಸುದ್ದಿ22 mins ago

Kannada- Marathi Row: ಮಹಾರಾಷ್ಟ್ರ ಸದನದಲ್ಲಿ ಕನ್ನಡ ಪರ ದನಿ, ಗಡಿಯಲ್ಲಿ ಮರಾಠಿ ದಬ್ಬಾಳಿಕೆಗೆ ಪ್ರತಿಭಟನೆ

Food for Concentration
ಆರೋಗ್ಯ35 mins ago

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Grand Marriage
Latest35 mins ago

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ರಾಜಮಾರ್ಗ ಅಂಕಣ virat kohli rohit sharma
ಅಂಕಣ54 mins ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ1 hour ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ1 hour ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ITR Filing
ಮನಿ-ಗೈಡ್2 hours ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

karnataka weather Forecast
ಮಳೆ2 hours ago

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Mosquito Repellents
ಆರೋಗ್ಯ3 hours ago

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌