Mumbai : ಮುಂಬಯಿನಲ್ಲಿ ಜಾಗಿಂಗ್‌ ಮಾಡುತ್ತಿದ್ದ ಟೆಕ್‌ ಕಂಪನಿ ಸಿಇಒಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು - Vistara News

ಕ್ರೈಂ

Mumbai : ಮುಂಬಯಿನಲ್ಲಿ ಜಾಗಿಂಗ್‌ ಮಾಡುತ್ತಿದ್ದ ಟೆಕ್‌ ಕಂಪನಿ ಸಿಇಒಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಮುಂಬಯಿನ (Mumbai) ವರ್ಲಿಯಲ್ಲಿ ಭಾನುವಾರ ಬೆಳಗ್ಗೆ ಜಾಗಿಂಗ್‌ ಮಾಡುತ್ತಿದ್ದ ಟೆಕ್‌ ಕಂಪನಿ ಸಿಇಒ ರಾಜಲಕ್ಷ್ಮಿ ರಾಮಕೃಷ್ಣನ್‌ ಅವರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಚಾಲಕನನ್ನು ಬಂಧಿಸಲಾಗಿದೆ.

VISTARANEWS.COM


on

Jogging
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮುಂಬಯಿನ (Mumbai) ವರ್ಲಿಯಲ್ಲಿ ಭಾನುವಾರ ಬೆಳಗ್ಗೆ ಜಾಗಿಂಗ್‌ ಮಾಡುತ್ತಿದ್ದ ಟೆಕ್‌ ಕಂಪನಿಯೊಂದರ ಸಿಇಒಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಸಿಇಒ ಅನ್ನು ರಾಜಲಕ್ಷ್ಮಿ ರಾಮಕೃಷ್ಣನ್‌ ಎಂದು ಗುರುತಿಸಲಾಗಿದೆ. ಕಾರಿನ ಚಾಲಕ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ರಾಜಲಕ್ಷ್ಮಿ ರಾಮಕೃಷ್ಣನ್

ರಾಜಲಕ್ಷ್ಮಿ ಅವರು ಟೆಕ್ನಾಲಜಿ ಕಂಪನಿಯೊಂದರ ಸಿಇಒ ಆಗಿದ್ದರು. ಫಿಟ್ನೆಸ್‌ ಬಗ್ಗೆ ಕಾಳಜಿ ಹೊಂದಿದ್ದು, ಮುಂಬಯಿನ ಶಿವಾಜಿ ಪಾರ್ಕ್‌ನ ಜಾಗರ್ಸ್‌ ಗ್ರೂಪ್‌ನಲ್ಲಿ ಸಕ್ರಿಯರಾಗಿದ್ದರು. ಭಾನುವಾರ ಬೆಳಗ್ಗೆ ವರ್ಲಿ ಡೇರಿ ಸಮೀಪ ಅಪಘಾತ ಸಂಭವಿಸಿದೆ.

ಪೊಲೀಸರ ಪ್ರಕಾರ ಚಾಲಕ 23 ವರ್ಷ ವಯಸ್ಸಿನ ಸುಮೇರ್‌ ಮರ್ಚೆಂಟ್‌ ಆಗಿದ್ದು, ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ. ಮೂಲಗಳ ಪ್ರಕಾರ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಹೊಡೆದು ಬಳಿಕ ಮಹಿಳೆಗೆ ಡಿಕ್ಕಿಯಾಗಿದೆ. ರಾಜ ಲಕ್ಷ್ಮಿಯವರ ತಲೆಗೆ ತೀವ್ರ ಗಾಯವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Viral News: ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದ ಚಂದ್ರಪ್ರಕಾಶ್ ಮಿಶ್ರಾನನ್ನು ಪತ್ನಿ ಮನೆಯವರು ಕೊಲೆ ಮಾಡಿದ್ದಾರೆ.

VISTARANEWS.COM


on

Viral News
Koo

ಲಕ್ನೋ: ಇತ್ತೀಚಿನ ದಿನಗಳಲ್ಲಿ ಸಣ್ಣ-ಪುಟ್ಟ ಕಾರಣಕ್ಕೂ ಜಗಳ ನಡೆಯುವುದು ಸಾಮಾನ್ಯ ಎಂಬಂತಾಗಿದೆ. ಮದುವೆ ಮನೆಯಲ್ಲಿ ನೆಚ್ಚಿನ ತಿಂಡಿ ಬಡಿಸಲಿಲ್ಲ, ಸರಿಯಾಗಿ ಉಪಚಾರ ಮಾಡಲಿಲ್ಲ ಎಂಬಿತ್ಯಾದಿ ಕಾರಣಕ್ಕೆ ಜಗಳ ನಡೆದು ಸಂಭ್ರಮದ ಮನೆ ಸ್ಮಶಾನವಾಗಿ ಮಾರ್ಪಟ್ಟಿದ್ದನ್ನು ನೋಡಿದ್ದೇವೆ. ಇಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಕಲಹ ವ್ಯಕ್ತಿಯೊಬ್ಬನ ಜೀವವನ್ನೇ ಬಲಿ ಪಡೆದಿದೆ. ಉತ್ತರಪ್ರದೇಶದ ಬಾರಾಬಂಕಿ ಗ್ರಾಮದಲ್ಲಿ ಮದುವೆ ಮನೆಯೊಂದರಲ್ಲಿ ಉಡುಗೊರೆ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆ ಮೂಲಕ ಸಂಭ್ರಮದಿಂದ ಕೂಡಿದ್ದ ಮನೆಯಲ್ಲಿ ಈಗ ದುಃಖ ಮಡುಗಟ್ಟಿದೆ (Viral News).

ಘಟನೆ ವಿವರ

ಚಂದ್ರಪ್ರಕಾಶ್ ಮಿಶ್ರಾ (35) ಕೊಲೆಯಾದ ವ್ಯಕ್ತಿ. ತನ್ನ ಸಹೋದರಿಯ ಮದುವೆಯ ಸಂದರ್ಭದಲ್ಲಿ ಆಕೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಲು ಮುಂದಾಗಿದ್ದೇ ಆತ ಮಾಡಿದ ದೊಡ್ಡ ತಪ್ಪು! ಹೌದು, ಚಂದ್ರಪ್ರಕಾಶ್ ಮಿಶ್ರಾ ತನ್ನ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ನೀಡಲು ಚಿಂತನೆ ನಡೆಸಿದ್ದರು. ಇದರಿಂದ ಕೋಪಗೊಂಡ ಆತನ ಪತ್ನಿ ಚಾಬಿ ಈ ವಿಚಾರವನ್ನು ತನ್ನ ಕುಟುಂಬದವರಿಗೆ ತಿಳಿಸಿದ್ದಳು. ಇದರಿಂದ ಅಸಮಾಧಾನಗೊಂಡ ಆಕೆಯ ಮನೆಯವರು ಚಂದ್ರಪ್ರಕಾಶ್ ಮಿಶ್ರಾ ಅವರನ್ನು ಚೆನ್ನಾಗಿ ಥಳಿಸಿದ್ದರು. ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಏಪ್ರಿಲ್‌ 26ಕ್ಕೆ ಚಂದ್ರಪ್ರಕಾಶ್ ಮಿಶ್ರಾ ಅವರ ತಂಗಿಯ ಮದುವೆ ನಿಗದಿಯಾಗಿದೆ. ಹೀಗಾಗಿ ಅವರು ಪ್ರೀತಿಯ ತಂಗಿಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ಕೊಡಲು ಯೋಜನೆ ಹಾಕಿಕೊಂಡಿದ್ದರು. ಅದನ್ನು ಪತ್ನಿ ಚಾಬಿ ಬಳಿ ಹೇಳಿಕೊಂಡಿದ್ದರು. ಆದರೆ ಇದನ್ನು ಕೇಳಿ ಚಾಬಿ ಉರಿದು ಬಿದ್ದಳು. ಈ ವಿಚಾರವಾಗಿ ದಂಪತಿಯ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವೇ ನಡೆಯಿತುʼʼ ಎಂದು ಪೊಲೀಸರು ತಿಳಿಸಿದ್ದಾರೆ.

ʼʼಅಷ್ಟಕ್ಕೇ ಸುಮ್ಮನಾಗದ ಚಾಬಿ ತನ್ನ ಸಹೋದರರನ್ನು ಕರೆದು ಚಂದ್ರಪ್ರಕಾಶ್‌ಗೆ ಪಾಠ ಕಲಿಸುವಂತೆ ಹೇಳಿದ್ದಾಳೆ. ತಂಗಿಯ ಕರೆಗೆ ಓಗೊಟ್ಟು ಬಂದ ಚಾಬಿಯ ಸಹೋದರರು ಚಂದ್ರಪ್ರಕಾಶ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಕೋಲುಗಳಿಂದ ಥಳಿಸಿದ್ದಾನೆ. ಕೊನೆಗೆ ಚಂದ್ರಪ್ರಕಾಶ್‌ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದರೆ ಆಸ್ಪತ್ರೆಯಲ್ಲಿ ನಿಧನರಾದರುʼʼ ಎಂದು ಅಧಿಕಾರಿಗಳು ಘಟನೆಯನ್ನು ವಿವರಿಸಿದ್ದಾರೆ.

ಸದ್ಯ ಪೊಲೀಸರು ಘಟನೆಯ ಸಂಬಂಧ ಐವರನ್ನು ಬಂಧಿಸಿದ್ದಾರೆ. ಚಾಬಿ ಮತ್ತು ಆಕೆಯ ಸಹೋದರರು ಸೇರಿ 5 ಮಂದಿಯ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಮದುವೆ ಮನೇಲಿ ರಸಗುಲ್ಲಾಗಾಗಿ ಹೊಡೆದಾಟ; ಆರು ಮಂದಿಯ ಪರಿಸ್ಥಿತಿ ಗಂಭೀರ!

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ವಿವಾಹ ವಾರ್ಷಿಕೋತ್ಸವದ ಉಡುಗೊರೆಯನ್ನು ನೀಡದ ಕಾರಣಕ್ಕೆ ಕೋಪಗೊಂಡ ಮಹಿಳೆಯೊಬ್ಬಳು ತನ್ನ ಪತಿಗೆ ಚಾಕುವಿನಿಂದ ಇರಿದಿದ್ದಳು. ಕೂಡಲೇ ಎಚ್ಚೆತ್ತುಕೊಂಡ ಆತ ತಪ್ಪಿಸಿಕೊಂಡು ಪಾರಾಗಿದ್ದ. ಬಳಿಕ ನೆರೆಮನೆಯವರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ತನ್ನ ಅಜ್ಜ ನಿಧನ ಹೊಂದಿದ್ದರಿಂದ ಪತ್ನಿಗೆ ಉಡುಗೊರೆ ನೀಡಿರಲಿಲ್ಲ. ಇದೇ ಕಾರಣಕ್ಕೆ ಆಕೆ ಹಲ್ಲೆ ನಡೆಸಿದ್ದಳು ಎಂದು ಬಳಿಕ ಆತ ದೂರು ನೀಡಿದ್ದ.

Continue Reading

ವಿದೇಶ

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

Noida Scrap Mafia: ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಕ್ರ್ಯಾಪ್ ಮೆಟಲ್ ಮಾಫಿಯಾ ತಂಡದ ಮುಖ್ಯಸ್ಥ ಮತ್ತು ಗ್ಯಾಂಗ್‌ಸ್ಟರ್‌ ರವಿ ಕಾನಾ ಹಾಗೂ ಆತನ ಗೆಳತಿ ಕಾಜಲ್ ಝಾ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಲೆ ಮರೆಸಿಕೊಂಡಿದ್ದ ಅವರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ಜನವರಿಯಲ್ಲಿ ಕಾನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ರವಿ ಕಾನಾ ಆಲಿಯಾಸ್‌ ರವೀಂದ್ರ ನಗರ್ 16 ಸದಸ್ಯರ ಗ್ಯಾಂಗ್ ಹೊಂದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲವು ಪ್ರಕರಣಗಳ ಆರೋಪಿಯಾದ ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದರು.

VISTARANEWS.COM


on

Noida Scrap Mafia
Koo

ನವದೆಹಲಿ: ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಕ್ರ್ಯಾಪ್ ಮೆಟಲ್ ಮಾಫಿಯಾ ತಂಡದ ಮುಖ್ಯಸ್ಥ ಮತ್ತು ಗ್ಯಾಂಗ್‌ಸ್ಟರ್‌ (Noida Scrap Mafia) ರವಿ ಕಾನಾ (Ravi Kana) ಹಾಗೂ ಆತನ ಗೆಳತಿ ಕಾಜಲ್ ಝಾ (Kajal Jha) ಅವರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ನೋಯ್ಡಾ ಪೊಲೀಸರು ಥೈಲ್ಯಾಂಡ್‌ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಕಾನಾಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಅವರಿಗೆ ನೀಡಿದ್ದರು. ಈ ಕಾರಣದಿಂದ ಇಬ್ಬರು ಸಿಕ್ಕಿಬಿದ್ದಿದ್ದಾರೆ. ಜನವರಿಯಲ್ಲಿ ಕಾನಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಜನವರಿ 2ರಂದು ಗ್ರೇಟರ್ ನೋಯ್ಡಾದಲ್ಲಿ ಪೊಲೀಸರು ರವಿ ಕಾನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ನಂತರ ಆತನ ವಿರುದ್ಧ ಕಠಿಣ ಉತ್ತರ ಪ್ರದೇಶ ಗ್ಯಾಂಗ್​ಸ್ಟರ್ ಮತ್ತು ಸಾಮಾಜಿಕ ವಿರೋಧಿ ಚಟುವಟಿಕೆಗಳ ತಡೆಗಟ್ಟುವಿಕೆ (Uttar Pradesh Gangsters and Anti-Social Activities (Prevention) Act) ಕಾಯ್ದೆಯಡಿ ದೂರು ದಾಖಲಿಸಲಾಗಿತ್ತು.

ರವಿ ಕಾನಾ ಆಲಿಯಾಸ್‌ ರವೀಂದ್ರ ನಗರ್ 16 ಸದಸ್ಯರ ಗ್ಯಾಂಗ್ ಹೊಂದ್ದಾನೆ. ಈ ಗ್ಯಾಂಗ್‌ ರೀಬಾರ್ ಮತ್ತು ಸ್ಕ್ರ್ಯಾಪ್ ವಸ್ತುಗಳ ಅಕ್ರಮ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿದೆ. ಸ್ಕ್ರ್ಯಾಪ್ ಡೀಲರ್ ಆಗಿದ್ದ ಕಾನಾ ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಸ್ಕ್ರ್ಯಾಪ್ ವಸ್ತುಗಳನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಮತ್ತು ಮಾರಾಟ ಮಾಡಲು ಪ್ರಾರಂಭಿಸಿದ ಬಳಿಕ ಕೋಟ್ಯಧಿಪತಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 2023ರ ಡಿಸೆಂಬರ್ 28ರಂದು ಕಾನಾ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣವೂ ದಾಖಲಾಗಿತ್ತು.

ಈ ಮೊದಲೇ ರವಿ ಮತ್ತು ಆತನ ಗುಂಪಿನ ವಿರುದ್ಧ ಸುಮಾರು 11 ಕೇಸ್‌ಗಳು ದಾಖಲಾಗಿದ್ದವು. ಇವರ ವಿರುದ್ಧ ಅಪಹರಣ, ದರೋಡೆ ಸೇರಿದಂತೆ ವಿವಿಧ ಪ್ರಕರಣಗಳಿವೆ ಎಂದು ಗ್ರೇಟರ್‌ ನೋಯ್ಡಾದ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಗ್ರೇಟರ್ ನೋಯ್ಡಾ ಮತ್ತು ನೋಯ್ಡಾದಾದ್ಯಂತ ಗ್ಯಾಂಗ್ ಬಳಸುತ್ತಿದ್ದ ಹಲವು ಸ್ಕ್ರ್ಯಾಪ್ ಗೋದಾಮುಗಳ ಮೇಲೆ ಈಗಾಗಲೇ ದಾಳಿ ನಡೆಸಿ ಬೀಗಮುದ್ರೆ ಜಡಿಯಲಾಗಿದೆ. 

ಕಾನಾ ಮತ್ತು ಆತನ ಸಹಚರರ 120 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ನೋಯ್ಡಾ ಪೊಲೀಸರು ಹೇಳಿದ್ದಾರೆ. ಕಾನಾ ತನ್ನ ಗೆಳತಿ ಕಾಜಲ್‌ ಝಾಗೆ ದಕ್ಷಿಣ ದೆಹಲಿಯ ಐಷರಾಮಿ ಏರಿಯಾ ನ್ಯೂ ಫ್ರೆಂಡ್ಸ್‌ ಕಾಲನಿಯಲ್ಲಿ ಮೂರು ಅಂತಸ್ತಿನ ಬಂಗಲೆಯನ್ನು ಉಡುಗೊರೆಯಾಗಿ ಕೊಡಿಸಿದ್ದ. ಅದರ ಬೆಲೆ ಬರೋಬ್ಬರಿ 100 ಕೋಟಿ ರೂ. ಜನವರಿಯಲ್ಲಿ ಪೊಲೀಸರು ಆ ಐಷಾರಾಮಿ ಬಂಗಲೆಯ ಮೇಲೆ ದಾಳಿ ಬೀಗ ಜಡಿದು ಸೀಲ್‌ ಹಾಕಿದ್ದರು.

ಇದನ್ನೂ ಓದಿ: Kajal Jha: ಕಾಜಲ್‌ಗೆ ಸೇರಿದ 100 ಕೋಟಿ ರೂ. ಮೌಲ್ಯದ ಬಂಗಲೆ ಮೇಲೆ ಪೊಲೀಸರ ದಾಳಿ

ಕಾಜಲ್‌ ಝಾ ಕೆಲಸ ಹುಡುಕಿಕೊಂಡು ಬಂದು ರವಿ ಕಾನಾ ಗುಂಪು ಸೇರಿದ್ದಳು. ಕೆಲವೇ ದಿನಗಳಲ್ಲಿ ಆ ಗ್ಯಾಂಗ್‌ನ ಮುಖ್ಯ ಅಂಗವಾಗಿ ಬದಲಾದ ರೀತಿಯೇ ರೋಚಕ. ರವಿಗೆ ಸೇರಿದ ಎಲ್ಲ ಬೇನಾಮಿ ಆಸ್ತಿಯ ಲೆಕ್ಕಪತ್ರಗಳನ್ನು ಕಾಜಲ್‌ ಝಾ ನೋಡಿಕೊಳ್ಳುತ್ತಿದ್ದಳು. ರವಿಯ ಗ್ಯಾಂಗ್‌ ಜತೆಗೆ ಮನಸ್ಸಿನೊಳಗೂ ಜಾಗ ಪಡೆದಿದ್ದ ಕಾಜಲ್‌ ಅಪಾರ ಪ್ರಮಾಣದ ಆಸ್ತಿಯ ಒಡತಿಯೂ ಆಗಿದ್ದಳು. 

Continue Reading

ಸಿನಿಮಾ

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Harshika Poonacha: ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

VISTARANEWS.COM


on

Harshika Poonacha bhuvan ponnanna met pralhad joshi
Koo

ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಏ.24) ಹುಬ್ಬಳ್ಳಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದೊರಕಿಸಿ ಕೊಡುವಂತೆ ಸಚಿವರೆದುರು ಮೊರೆ ಇಟ್ಟರು. ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.

ʻʻನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ಗಲಾಟೆ ಮಾಡಿದವರ ಮುಖಚರ್ಯೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆʼʼ ಎಂದು ಸಚಿವರೆದುರು ಹೇಳಿದರು.

ʻʻನಮಗೆ ಆದಂತೆ ಬೇರೆ ಯಾರಿಗೂ ಈ ಘಟನೆ ಸಂಭವಿಸಿಬಾರದು. ಹೀಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆʼʼ ಎಂದು ಹರ್ಷಿಕಾ ಪೂಣಚ್ಚ ಮಾಧ್ಯಮಗಳಿಗೆ ತಿಳಿಸಿದರು.

ಇದನ್ನೂ ಓದಿ: Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

ಏನಿದು ಘಟನೆ?

ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಪತಿ ನಟ ಭುವನ್ ಮೇಲೆ ಹಲ್ಲೆ ನಡೆದಿತ್ತು. ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದು ಚಿನ್ನದ ಸರ ಕದಿಯಲು ಆರೋಪಿಗಳು ಯತ್ನಿಸಿದ್ದರು. ಫ್ರೆಜರ್ ಟೌನ್ ಪುಲಕೇಶಿ ನಗರದಲ್ಲಿ ಘಟನೆ ನಡೆದಿತ್ತು. ಚಿನ್ನದ ಸರ ಕದಿಯಲು ಯತ್ನಿಸಿದ್ದಲ್ಲದೇ ಕನ್ನಡದಲ್ಲಿ ಮಾತನಾಡಬೇಡಿ ಎಂದು ಆರೋಪಿಗಳು ದರ್ಪ ತೋರಿದ್ದರು ಹರ್ಷಿಕಾ ಪೂಣಚ್ಚ ಹಲ್ಲೆ ನಡೆದ ವಿಡಿಯೊವನ್ನು ಚಿತ್ರೀಕರಿಸಿ, ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಕುರಿತು ಹರ್ಷಿಕ ಪೂಣಚ್ಚ ಅವರು ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಈ ಘಟನೆ ವಿರುದ್ಧ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಈ ಸುದ್ದಿ ವೈರಲ್‌ ಆಗಿತ್ತು. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲೂ ಘಟನೆಯ ಕುರಿತು ವರದಿಯಾಗಿತ್ತು.

Continue Reading

Lok Sabha Election 2024

IED Blast: ಎರಡನೇ ಹಂತದ ಮತದಾನಕ್ಕೆ ದಿನಗಣನೆ; ಮಣಿಪುರದ ಸೇತುವೆ ಮೇಲೆ ಐಇಡಿ ಸ್ಫೋಟ

IED Blast: ಎರಡನೇ ಹಂತದ ಮತದಾನ ನಡೆಯಲು ಎರಡೇ ದಿನ ಬಾಕಿ ಉಳಿದಿದ್ದು, ಮಣಿಪುರದ ಇಂಫಾಲ ಮತ್ತು ನಾಗಾಲ್ಯಾಂಡ್‌ನ ದಿಮಾಪುರವನ್ನು ಸಂಪರ್ಕಿಸುವ ಸೇತುವೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 2ರ ಮಣಿಪುರದ ಕುಬ್ರುನಲ್ಲಿರುವ ಸೇತುವೆ ವೇಳೆ ಈ ಸ್ಫೋಟ ನಡೆದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.

VISTARANEWS.COM


on

IED Blast
Koo

ಇಂಫಾಲ: ಎರಡನೇ ಹಂತದ ಮತದಾನ ನಡೆಯಲು ಎರಡೇ ದಿನ ಬಾಕಿ ಉಳಿದಿದ್ದು, ಮಣಿಪುರದ ಇಂಫಾಲ ಮತ್ತು ನಾಗಾಲ್ಯಾಂಡ್‌ನ ದಿಮಾಪುರವನ್ನು ಸಂಪರ್ಕಿಸುವ ಸೇತುವೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದೆ (IED Blast). ರಾಷ್ಟ್ರೀಯ ಹೆದ್ದಾರಿ 2ರ ಮಣಿಪುರದ ಕುಬ್ರುನಲ್ಲಿರುವ ಸೇತುವೆ ವೇಳೆ ಈ ಸ್ಫೋಟ ನಡೆದಿದೆ. ʼʼಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮಧ್ಯಮ ತೀವ್ರತೆಯ ಸ್ಫೋಟ ನಡೆದು ಸೇತುವೆಗೆ ಹಾನಿ ಉಂಟಾಗಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಮಂಗಳವಾರ ಮಧ್ಯರಾತ್ರಿ 12.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಪೊಲೀಸರ ಪ್ರಕಾರ, ಸ್ಫೋಟದ ಪರಿಣಾಮವಾಗಿ ಸೇತುವೆಯ ಮಧ್ಯದಲ್ಲಿ ಮೂರು ಕುಳಿಗಳು, ಎರಡೂ ತುದಿಗಳಲ್ಲಿ ಬಿರುಕುಗಳು ಉಂಟಾಗಿವೆ. ಮತದಾನಕ್ಕೆ ದಿನಗಣನೆ ಇರುವಾಗ ಸಂಭವಿಸಿದ ಈ ಸ್ಫೋಟ ಆತಂಕ ಹೆಚ್ಚಿಸಿದೆ.

ʼʼಈವರೆಗೆ ಯಾವುದೇ ಗುಂಪು ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿಲ್ಲ. ಘಟನೆಯ ಸಮಗ್ರ ತನಿಖೆ ನಡೆಸಲಾಗುತ್ತಿದೆʼʼ ಎಂದು ಅಧಿಕಾರಿಗಳು ಹೇಳಿದ್ದಾರೆ. ಭದ್ರತಾ ಪಡೆಗಳು ಹತ್ತಿರದ ಪ್ರದೇಶಗಳನ್ನು ಸುತ್ತುವರಿದಿದ್ದು, ಬಿಗಿ ತಪಾಸಣೆ ಕೈಗೊಳ್ಳಲಾಗಿದೆ. ಆದಾಗ್ಯೂ ಕೆಲವು ದ್ವಿಚಕ್ರ ವಾಹನಗಳು ಇಂದು ಬೆಳಿಗ್ಗೆ ಸೇತುವೆಯ ಮೇಲೆ ಚಲಿಸುತ್ತಿರುವುದು ಕಂಡುಬಂದಿದೆ.

ಮತದಾನದ ವೇಳೆ ಸಂಘರ್ಷ

ಶುಕ್ರವಾರ (ಏಪ್ರಿಲ್‌ 19) ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದಲ್ಲಿ ಗುಂಡಿನ ದಾಳಿ ನಡೆದಿತ್ತು. ಮಣಿಪುರದ ಇಂಫಾಲದ ಪೂರ್ವ ಜಿಲ್ಲೆಯ ಮೊಯಿರಂಗ್ಕಂಪು ಸಜೆಬ್‌ನಲ್ಲಿ ಈ ಘಟನೆ ನಡೆದಿತ್ತು. ಗುಂಡಿನ ದಾಳಿಯ ನಂತರ ಮೂವರು ಸ್ಥಳದಿಂದ ಪರಾರಿಯಾಗಿದ್ದರು. ಅವರನ್ನು ಶುಕ್ರವಾರ ಸಂಜೆ ಘಟನಾ ಸ್ಥಳದಿಂದ 5 ಕಿ.ಮೀ. ದೂರದಲ್ಲಿ ಬಂಧಿಸಲಾಗಿತ್ತು. ಬಂಧಿತರಿಂದ ಒಂದು ಪಿಸ್ತೂಲ್, ಮದ್ದುಗುಂಡು ಮತ್ತು 1.5 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: Lok Sabha Election 2024: ಮೊದಲ ಹಂತದ ಮತದಾನ ವೇಳೆ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

ಗುಂಡಿನ ದಾಳಿ ಮತದಾನದ ಹಕ್ಕನ್ನು ಚಲಾಯಿಸಲು ಸಾಲುಗಟ್ಟಿ ನಿಂತಿದ್ದ ಮತದಾರರಲ್ಲಿ ಭೀತಿಯನ್ನುಂಟು ಮಾಡಿತ್ತು. ಮತದಾನ ಪ್ರದೇಶದಲ್ಲಿ ಸುಮಾರು 10 ಸೆಕೆಂಡುಗಳ ಕಾಲ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ ಸಾವು ನೋವು ವರದಿಯಾಗಿಲ್ಲ. ಮಣಿಪುರದಲ್ಲಿ ಶೇ. 68ರಷ್ಟು ಮತದಾನವಾಗಿದೆ.

Continue Reading
Advertisement
Viral News
ವೈರಲ್ ನ್ಯೂಸ್20 mins ago

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Rajkumar Birth Anniversary ​​Jaggesh said that Rajkumar blessed him when he was admitted due to suicide attempt
ಸ್ಯಾಂಡಲ್ ವುಡ್23 mins ago

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

World Chess Championship
ಕ್ರೀಡೆ26 mins ago

World Chess Championship: ಡಿ.ಗುಕೇಶ್‌-ಲಿರೆನ್‌ ನಡುವಣ ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ಮುಹೂರ್ತ ಫಿಕ್ಸ್​

VVPAT Verification
ದೇಶ43 mins ago

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

Sunita Williams
ದೇಶ43 mins ago

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Marcus Stoinis
ಕ್ರಿಕೆಟ್53 mins ago

IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

Areca Price
ಪರಿಸರ55 mins ago

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

Veteran journalist Arjun Deva passes away
ಶ್ರದ್ಧಾಂಜಲಿ57 mins ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ1 hour ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ1 hour ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌