Site icon Vistara News

Accident Case : ಹಾಸನದಲ್ಲಿ ಕರೆಂಟ್‌ ಶಾಕ್‌ಗೆ ಎಲೆಕ್ಟ್ರಿಷಿಯನ್ ಬಲಿ; ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸವಾರ ಸಾವು

Electrician dies of electric shock And Rider dead in bike accident

ಹಾಸನ: ಕರೆಂಟ್ ಶಾಕ್‌ಗೆ ಯುವಕ ಬಲಿಯಾಗಿರುವ (electric shock) ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ (Accident Case) ನಡೆದಿದೆ. ಮುಂಜಾಮಲ್ (28) ಮೃತ ದುರ್ದೈವಿ.

ಕಲ್ಕರೆ ಗ್ರಾಮದಲ್ಲಿ ನಡೆಯುತ್ತಿದ್ದ ತೇರು ನಿಲ್ಲಿಸುವ ಮನೆಯ ಕಾಮಗಾರಿಗೆ ಮುಂಜಾಮಿಲ್‌ ಡ್ರಿಲ್ಲಿಂಗ್ ಮಾಡುತ್ತಿದ್ದ. ಈ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚನ್ನರಾಯಪಟ್ಟಣದ ನಿವಾಸಿಯಾಗಿರುವ ಮುಂಜಾಮಿಲ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಅತಿ ವೇಗ ಬೈಕ್‌ ಚಾಲನೆಗೆ ಸವಾರ ಸಾವು

ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ರಕ್ತಕಾರಿ ಮೃತಪಟ್ಟಿದ್ದಾರೆ. ಧಾರವಾಡ ನಗರದ ಸಪ್ತಾಪುರ ಬಡಾವಣೆಯಲ್ಲಿ ಘಟನೆ ನಡೆದಿದೆ. ಸಾಯಿರಾಂ (27)ಮೃತ ದುರ್ದೈವಿ.

ಧಾರವಾಡ ನಗರ ನಿವಾಸಿಯಾಗಿರುವ ಸಾಯಿರಾಂ, ವೇಗವಾಗಿ ಬೈಕ್‌ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಿಂದ ಕೆಳಗೆ ಹಾರಿ ಬಿದ್ದ ಸಾಯಿರಾಂ ತಲೆಗೆ ತೀವ್ರ ಪೆಟ್ಟಾಗಿದ್ದು, ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version