Accident case: ಭೀಕರ ರಸ್ತೆ ಅಪಘಾತ: ಮಹಿಳೆ ಸಾವು, ಐವರು ಗಂಭೀರ - Vistara News

ಕ್ರೈಂ

Accident case: ಭೀಕರ ರಸ್ತೆ ಅಪಘಾತ: ಮಹಿಳೆ ಸಾವು, ಐವರು ಗಂಭೀರ

ಧಾರವಾಡ ಜಿಲ್ಲೆಯ ಕಲಘಟಗಿಯ ತಡಸ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ (Accident case) ಓರ್ವ ಮಹಿಳೆ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಟಾಟಾ ಏಸ್ ಮಹಿಳೆಯರು ಗಾರ್ಮೆಟ್ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

VISTARANEWS.COM


on

Accident case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ (Accident case) ಓರ್ವ ಮಹಿಳೆ ಸಾವನ್ನಪ್ಪಿದ್ದು (death), ಐವರು ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆ (Dharwad District) ಕಲಘಟಗಿಯ ತಡಸ ಕ್ರಾಸ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಟಾಟಾ ಏಸ್ ಮಹಿಳೆಯರು ಗಾರ್ಮೆಟ್ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ವೇಗವಾಗಿ ಬಂದು ಲಾರಿ ಟಾಟಾ ಏಸ್‌ಗೆ ಡಿಕ್ಕಿಯಾಗಿದೆ.

Accident case
Accident case


ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಶಾಲೆ ವಾಹನಕ್ಕೆ ಲಾರಿ ಡಿಕ್ಕಿ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ವಾಹನಕ್ಕೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 44 ರ ಪೂಲವಾರಪಲ್ಲಿ ಕ್ರಾಸ್ ಬಳಿ ಬುಧವಾರ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಕ್ರಾಸ್ ಬಳಿ ತಿರುವು ಪಡೆದುಕೊಳ್ಳುತ್ತಿರುವಾಗ ಈ ಅಪಘಾತ ಸಂಭವಿಸಿದೆ.

ಸತ್ಯಸಾಯಿ ಶಾಲೆಯ ಬಸ್ ನಲ್ಲಿ ಮಕ್ಕಳನ್ನು ಬೆಳಗ್ಗೆ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ ಮಕ್ಕಳನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಪಲ್ಟಿ

ಇನ್ನೊಂದು ಪ್ರಕರಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಹೂಕೋಸು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಹೊರ ವಲಯದಲ್ಲಿ ನಡೆದಿದೆ.

ಲಾರಿ ಚಾಲಕ ಮತ್ತು ಕ್ಲೀನರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಪಲ್ಟಿಯಾದ ಹಿನ್ನಲೆಯಲ್ಲಿ 5 ಲಕ್ಷ ಮೌಲ್ಯದ 25 ಟನ್ ಹೂಕೋಸು ಬೆಳೆ ನಷ್ಟವಾಗಿದೆ. ಹಾವೇರಿಯಿಂದ ಕೊಲ್ಕತ್ತಾ ಕಡೆಗೆ ಹೂಕೋಸ್ ಅನ್ನು ಸಾಗಿಸಲಾಗುತ್ತಿತ್ತು.

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನಾ ಸ್ಥಳಕ್ಕೆ ಚಳ್ಳಕೆರೆ ಪಿಎಸ್ ಐ ದೇಸಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಳುತ್ತಿದ್ದ ರೈತ ಟ್ರ್ಯಾಕ್ಟರ್‌ ಅಡಿಗೆ ಸಿಲುಕಿ ಸಾವು

ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಂಕರ್ ರೆಡ್ಡಿ (40) ಮೃತ ದುರ್ದೈವಿ.

ಶಂಕರ್‌ ರೆಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಾ ಕೆಸರು ಗದ್ದೆ ಉಳುಮೆ ಮಾಡುತ್ತಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ ಮೇಲೆತ್ತಲು ಪ್ರಯತ್ನ ಪಟ್ಟಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಅಡಿ ಸಿಲುಕಿ ಮೃತಪಟ್ಟರು. ಅಲ್ಲಿದ್ದವರು ಸ್ಥಳೀಯರು ಜೆಸಿಬಿ ಮೂಲಕ ಟ್ರ್ಯಾಕ್ಟರ್‌ನಡಿಯಲ್ಲಿದ್ದ ಮೃತ ದೇಹವನನ್ನು ಹೊರತೆಗೆದಿದ್ದಾರೆ.

ಇದನ್ನೂ ಓದಿ: Physical Abuse: ಸ್ನೇಹದ ನೆಪದಲ್ಲಿ ನೆರೆಮನೆಗೆ ತೆರಳಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಕಾಮುಕನ ಬಂಧನ

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕು ದಿಗವ ಪ್ಯಯಲವಾರಪಲ್ಲಿ ದುರ್ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ (Murder Case) ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ನವ್ಯಾ(25) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್‌ ಕೊಲೆಗೈದ ಆರೋಪಿಯಾಗಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ (Murder Case) ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ನವ್ಯಾ (25) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್‌ ಕೊಲೆಗೈದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಪತ್ನಿಯ ಶೀಲ ಶಂಕಿಸಿ, ಆಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿ, ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಕೆಂಗೇರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆಗೈದ ಆರೋಪಿ ಕಿರಣ್‌ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಬರ್ಬರ ಹತ್ಯೆ; ಹೆಂಡ್ತಿ ಜತೆಗೆ ಅನೈತಿಕ ಸಂಬಂಧವೇ ಕಾರಣ

ಪತ್ನಿಯ ಜತೆ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯು, ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಏರ್‌ಪೋರ್ಟ್ ಟರ್ಮಿನಲ್‌ನಲ್ಲಿ ಜರುಗಿದೆ.

ರಾಮಕೃಷ್ಣ(45) ಮೃತ ದುರ್ದೈವಿ. ರಮೇಶ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಧುಗಿರಿಯ ತಿಮ್ಮನಹಳ್ಳಿ ಮೂಲದ ಆರೋಪಿ ರಮೇಶ್‌ ತನ್ನ ಪತ್ನಿಯ ಜತೆ ರಾಮಕೃಷ್ಣ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ, ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದರು. ಆರೋಪಿಯು ಪರಾರಿಯಾಗುವ ವೇಳೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಪಾಪಿ ಪುತ್ರನೊಬ್ಬ ಬುದ್ದಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಪಾಪಿ ಪುತ್ರನಾಗಿದ್ದಾನೆ.

ನಿನ್ನೆ ಪಕ್ಕದ ಮನೆಯವರ ಜತೆ ಸಿದ್ಧಲಿಂಗ ಅಗಡಿ ಜಗಳ ಮಾಡಿಕೊಂಡಿದ್ದ‌.‌ ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು. ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ ಪುತ್ರ, ತಾಯಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

ಮಾನಸಿಕ ಅಸ್ವಸ್ಥ ಸಹೋದರನ ಮಾತು ನಂಬದ ಅಕ್ಕಂದಿರು, ಬಳಿಕ ಪೊಲೀಸರು ಮಾಹಿತಿ ನೀಡಿದ ಬಳಿಕ ಓಡೋಡಿ ಬಂದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

Continue Reading

ಕ್ರೈಂ

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ಬೆಂಗಳೂರು ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಗ್ಗೆ 6.30ರ ಸುಮಾರಿಗೆ 75 ವರ್ಷದ ಮಹಿಳೆ ಮೇಲೆ ಸುಮಾರು ಏಳೆಂಟು ಬೀದಿ ನಾಯಿಗಳು ಹಠಾತ್ ದಾಳಿ (Stray Dogs Attack) ನಡೆಸಿದ್ದು, ತಲೆ ಹಿಂಬದಿ, ಮುಖ, ಕೈ, ಕತ್ತಿನ ಭಾಗವನ್ನು ಶ್ವಾನಗಳು ಕಚ್ಚಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

VISTARANEWS.COM


on

By

Stray Dogs Attack
Koo

ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರು ( retired teacher) ಬುಧವಾರ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ (Stray Dogs Attack) ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (bengaluru) ನಡೆದಿದೆ.

ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ವಾಯುಸೇನೆ ಸಿಬ್ಬಂದಿಯ ಅತ್ತೆ, 75 ವರ್ಷದ ರಾಜ್ದುಲಾರಿ ಸಿನ್ಹಾ ಅವರ ಮೇಲೆ ಸುಮಾರು ಏಳೆಂಟು ಬೀದಿ ನಾಯಿಗಳು ಹಠಾತ್ ದಾಳಿ ನಡೆಸಿದ್ದು, ತಲೆ ಹಿಂಬದಿ, ಮುಖ, ಕೈ, ಕತ್ತಿನ ಭಾಗವನ್ನು ಶ್ವಾನಗಳು ಕಚ್ಚಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯ ಅಳಿಯ ಏರ್ ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ ಮತ್ತು ಮಗಳನ್ನು ನೋಡಲು ಮಹಿಳೆ ಬಿಹಾರದಿಂದ ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು.

ಈ ಹಿಂದೆಯೂ ಇದೇ ಕ್ಯಾಂಪಸ್ ನಲ್ಲಿ ನಾಲ್ಕೈದು ಜನರ ಮೇಲೆ ನಾಯಿಗಳು ದಾಳಿ ನಡೆಸಿತ್ತು.

ಈ ಕುರಿತು ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


ಘಟನೆಯ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದು, ಇದು ಬುಧವಾರ ಬೆಳಗ್ಗೆ ನಡೆದ ಒಂದು ದುರಂತ ದೃಶ್ಯವಾಗಿದೆ.ವಿದ್ಯಾರಣ್ಯಪುರದ ಜಾಲಹಳ್ಳಿಯ ಏರ್‌ಫೋರ್ಸ್ ಆಟದ ಮೈದಾನದಲ್ಲಿ ಹಲವು ಬೀದಿನಾಯಿಗಳು ಮಹಿಳೆಯ ಮೇಲೆ ದಾಳಿ ಮಾಡಿವೆ. ನಾನು ಅಸಹಾಯಕ ಪ್ರತ್ಯಕ್ಷದರ್ಶಿಯಾಗಿದ್ದೆ. ಅವರ ದೊಡ್ಡ ಗೋಡೆಯಿಂದಾಗಿ ನಾನು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ನಾನು ಕೂಗಿ ಕೆಲವು ಜನರನ್ನು ಕರೆದಿದ್ದೇನೆ ಮತ್ತು ಅವರು ಅವಳನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಸಾವು

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಘಟನೆಯಿಂದ ಶಾಲಾ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಶಾಲಾ ಆವರಣದಲ್ಲಿ ಸೇರಿದ್ದರಿಂದ ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಎಂ.ಬಿ. ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಉಂಟಾಯಿತು.

ಇನ್ಸ್ ಪೆಕ್ಟರ್ ಮನವೊಲಿಕೆಗೆ ಬಗ್ಗದ ಗ್ರಾಮಸ್ಥರು ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸುವವರೆಗೂ ಶವಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.

Continue Reading

ಗದಗ

Murder Case: ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಪಾಪಿ ಪುತ್ರನೊಬ್ಬ ಬುದ್ಧಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ (Murder Case) ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಪುತ್ರ ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

VISTARANEWS.COM


on

Murder Case
Koo

ಗದಗ: ಪಾಪಿ ಪುತ್ರನೊಬ್ಬ ಬುದ್ಧಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ (Murder Case) ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಪುತ್ರ ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: Accident case: ಭೀಕರ ರಸ್ತೆ ಅಪಘಾತ: ಮಹಿಳೆ ಸಾವು, ಐವರು ಗಂಭೀರ

ನಿನ್ನೆ ಪಕ್ಕದ ಮನೆಯವರ ಜತೆ ಸಿದ್ಧಲಿಂಗ ಅಗಡಿ ಜಗಳ ಮಾಡಿಕೊಂಡಿದ್ದ‌.‌ ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು. ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ ಪುತ್ರ, ತಾಯಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಮಾನಸಿಕ ಅಸ್ವಸ್ಥ ಸಹೋದರನ ಮಾತು ನಂಬದ ಅಕ್ಕಂದಿರು, ಬಳಿಕ ಪೊಲೀಸರು ಮಾಹಿತಿ ನೀಡಿದ ಬಳಿಕ ಓಡೋಡಿ ಬಂದಿದ್ದಾರೆ.

ಇದನ್ನೂ ಓದಿ: Kempegowda International Airport: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕನಿಷ್ಠ ದರದಲ್ಲಿ ರೈಲು ಸೇವೆ ಇದ್ದರೂ ಬಳಸುವವರಿಲ್ಲ

ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

Continue Reading

ಕ್ರೈಂ

Murder Attempt: ಬುಲೆಟ್ ಹಾರಿಸಿ, ಬಾಂಬ್ ಎಸೆದು ಟಿಎಂಸಿ ಕಾರ್ಯಕರ್ತರಿಂದ ಕೊಲೆ ಯತ್ನ: ಬಿಜೆಪಿ ನಾಯಕ ಆರೋಪ

ಬಿಜೆಪಿ ನಾಯಕರ ಮೇಲೆ ಪಶ್ಚಿಮ ಬಂಗಾಳದಲ್ಲಿ ದಾಳಿ (Murder Attempt) ನಡೆಸಲಾಗುತ್ತಿದ್ದು, ಇಂದು ಬೆಳಗ್ಗೆ ತಮ್ಮ ಕಾರಿನ ಮೇಲೆ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ನಾಯಕಅರ್ಜುನ್ ಸಿಂಗ್ ಆರೋಪಿಸಿದ್ದಾರೆ. ‘ನಬಣ್ಣ ಅಭಿಜನ್’ ಪ್ರತಿಭಟನಾ ರಾಲಿಯಲ್ಲಿ ಪೊಲೀಸರ ಬಲಪ್ರಯೋಗವನ್ನು ವಿರೋಧಿಸಿ ಬಿಜೆಪಿ 12 ಗಂಟೆಗಳ ಬಂಗಾಳ ಬಂದ್‌ಗೆ ಕರೆ ನೀಡಿದ ಬಳಿಕ ಈ ದಾಳಿ ನಡೆದಿದೆ.

VISTARANEWS.COM


on

By

Murder Attempt
Koo

ಪಶ್ಚಿಮ ಬಂಗಾಳದ (West Bengal) ಉತ್ತರ 24 ಪರಗಣ ಜಿಲ್ಲೆಯ ಭಟ್ಪರಾದಲ್ಲಿ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು ತಮ್ಮ ಕಾರಿನ ಮೇಲೆ ದಾಳಿ (Murder Attempt) ನಡೆಸಿರುವುದಾಗಿ ಬಿಜೆಪಿ ನಾಯಕ (BJP Leader) ಅರ್ಜುನ್ ಸಿಂಗ್ ಆರೋಪಿಸಿದ್ದಾರೆ. ಬುಧವಾರ ಬೆಳಗ್ಗೆ ಮನೆಯಿಂದ ಹೊರಟ ಕೇವಲ ಮೂರು ನಿಮಿಷಗಳ ಬಳಿಕ ಬಾಂಬ್ ದಾಳಿಯಾಗಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮನೆಯಿಂದ ಬೆಳಗ್ಗೆ 8.15ಕ್ಕೆ ಹೊರಟಿದ್ದು, ಕೇವಲ ಮೂರು ನಿಮಿಷಗಳ ದೂರದಲ್ಲಿ ಜೆಟ್ಟಿಂಗ್ ಯಂತ್ರದಿಂದ ರಸ್ತೆಯನ್ನು ನಿರ್ಬಂಧಿಸಲಾಗಿತ್ತು. ಆಗ ಸುಮಾರು 50 -60 ಜನರು ನನ್ನ ವಾಹನವನ್ನು ಗುರಿಯಾಗಿಸಿಕೊಂಡು ಬಾಂಬ್ ಎಸೆದರು. ಅನಂತರ 6- 7 ಸುತ್ತು ಗುಂಡು ಹಾರಿಸಿದರು ಎಂದು ತಿಳಿಸಿದ್ದಾರೆ.

ಕಾರಿನ ಮೇಲೆ ಏಳು ಬುಲೆಟ್‌ಗಳು ಹಾರಿದ್ದು, ಬಂಗಾಳದ ಹಿರಿಯ ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲಿ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

‘ನಬಣ್ಣ ಅಭಿಜನ್’ ಪ್ರತಿಭಟನಾ ರಾಲಿಯಲ್ಲಿ ಪೊಲೀಸರ ಬಲಪ್ರಯೋಗವನ್ನು ವಿರೋಧಿಸಿ ಬಿಜೆಪಿ 12 ಗಂಟೆಗಳ ಬಂಗಾಳ ಬಂದ್‌ಗೆ ಕರೆ ನೀಡಿದ ಬಳಿಕ ಈ ದಾಳಿ ನಡೆದಿದೆ.

Murder Attempt
Murder Attempt


ಬಿಜೆಪಿ ನಾಯಕನ ಹತ್ಯೆಯ ಪ್ರಯತ್ನ

ನಮ್ಮ ಪಕ್ಷದ ನಾಯಕ ಪ್ರಿಯಾಂಗು ಪಾಂಡೆ ಅವರ ಹತ್ಯೆ ಪ್ರಯತ್ನ ನಡೆದಿದೆ. ಅವರ ಕಾರಿನ ಮೇಲೆ ಫೈರಿಂಗ್ ಮಾಡಲಾಗಿದೆ. ಚಾಲಕನ ಮೇಲೂ ಗುಂಡು ಹಾರಿಸಲಾಗಿದೆ. ಪ್ರಿಯಾಂಗು ಪಾಂಡೆಯನ್ನು ಕೊಲ್ಲಲು ಯೋಜನೆ ರೂಪಿಸಲಾಗಿದೆ. ಟಿಎಂಸಿಗೆ ಯಾವುದೇ ಸಮಸ್ಯೆ ಇಲ್ಲ. ಆದ್ದರಿಂದ ಅವರು ಈ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅರ್ಜುನ್ ಸಿಂಗ್ ತಿಳಿಸಿದ್ದಾರೆ.

ಈ ದಾಳಿಯ ಹಿಂದೆ ತೃಣಮೂಲ ನಾಯಕರಾದ ತರುಣ್ ಸೌ ಮತ್ತು ಶಾಸಕ ಸೋಮನಾಥ್ ಶ್ಯಾಮ್ ಅವರ ಕೈವಾಡವಿದೆ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದು, ದುಷ್ಕರ್ಮಿಗಳನ್ನು ಕಾಕಿನಾರಾದಿಂದ ಕರೆತರಲಾಗಿದೆ ಎಂದು ದೂರಿದ್ದಾರೆ.

ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯದಲ್ಲಿ ತೃಣಮೂಲ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯದಲ್ಲಿ ಹಿಂಸಾಚಾರವನ್ನು ತಡೆಯಲು ಪಶ್ಚಿಮ ಬಂಗಾಳ ಪೊಲೀಸರು ಭಾರೀ ಭದ್ರತೆಯನ್ನು ಕೈಗೊಂಡಿರುವುದಾಗಿ ಉತ್ತರ ದಿನಾಜ್‌ಪುರದ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಸ್‌ಪಿ) ಡೆಂಡೂಪ್ ಶೆರ್ಪಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿಯನ್ನು ಎಲ್ಲೆಡೆ ನಿಯೋಜಿಸಲಾಗಿದೆ. ಕೋಲ್ಕತ್ತಾದ ಸರ್ಕಾರಿ ಬಸ್‌ ಚಾಲಕರು ಮತ್ತು ಕಂಡಕ್ಟರ್‌ಗಳು ಹೆಲ್ಮೆಟ್ ಧರಿಸುವಂತೆ ರಾಜ್ಯ ಆಡಳಿತ ಸೂಚನೆ ನೀಡಿದೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಉತ್ತರ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆಯ (ಎನ್‌ಬಿಎಸ್‌ಟಿಸಿ) ಬಸ್‌ಗಳ ಅನೇಕ ಚಾಲಕರು ರಾಜ್ಯಾದ್ಯಂತ ಹೆಲ್ಮೆಟ್ ಧರಿಸಿದ್ದರು.

ಇದನ್ನೂ ಓದಿ: Crimes Against Women: ಮಹಿಳೆಯರ ವಿರುದ್ಧದ ಅಪರಾಧ ಆರೋಪ: ಪ.ಬಂಗಾಳದ ಶಾಸಕ, ಸಂಸದರೇ ಹೆಚ್ಚು!

ಕೋಲ್ಕತ್ತಾದ ಬೀದಿಗಳಲ್ಲಿ ಮಂಗಳವಾರ ಘರ್ಷಣೆಗಳು ನಡೆದಿದ್ದು, ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌, ನೀರಿನ ಫಿರಂಗಿಗಳನ್ನು ಬಳಸಿದರು ಹೌರಾ ಸೇತುವೆಯ ಮೇಲೆ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಲಾಯಿತು.

ಈ ಅವ್ಯವಸ್ಥೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರಣ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.

Continue Reading
Advertisement
Hair Combing
ಆರೋಗ್ಯ51 mins ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ51 mins ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ2 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು11 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು12 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್13 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ13 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು13 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ13 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌