Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ? - Vistara News

ಕ್ರೈಂ

Actor Darshan: ಆ ಭೀಕರ ಶೆಡ್‌ನಲ್ಲಿ ಇನ್ನೂ ಹಲವರ ರಕ್ತದ ಕಲೆ ಪತ್ತೆ! ಏನ್‌ ನಡೆದಿತ್ತು ಇಲ್ಲಿ?

Actor Darshan: ದರ್ಶನ್‌ ಮತ್ತು ಗ್ಯಾಂಗ್‌ನ ಕರಾಳ ಹಿನ್ನೆಲೆಗೆ ಈ ಶೆಡ್‌ನಲ್ಲಿ ಸಿಗುತ್ತಿರುವ ಸಾಕ್ಷ್ಯಗಳು ಮತ್ತಷ್ಟು ಪೂರಕವಾಗಲಿವೆ. ಪಟ್ಟಣಗೆರೆ ಶೆಡ್‌ನಲ್ಲಿ ವಿಧಿವಿಜ್ಞಾನ ಪರಿಶೀಲನೆಗೆ ಎಫ್ಎಸ್ಎಲ್ ಟೀಮ್‌ ಹೋದಾಗ ಬೇರೆಯವರ ರಕ್ತದ ಕಲೆಗಳು ಸಿಕ್ಕಿದ್ದು, ಇವು ಯಾರವು ಎಂದು ಪತ್ತೆ ಹಚ್ಚುವ ತಲೆನೋವು ಕೂಡ ಎಸ್‌ಐಟಿ ಹೆಗಲೇರಿದೆ.

VISTARANEWS.COM


on

pattanagere shed actor darshan renuka swamy murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಆರೆಸ್ಟ್ ಆಗಿರುವ ನಟ ದರ್ಶನ್ (Actor Darshan) ವಿಚಾರಣೆಯ ಜೊತೆಜೊತೆಗೇ, ಹಲ್ಲೆ ನಡೆಸಲಾಗಿರುವ ಪಟ್ಟಣಗೆರೆಯ ಶೆಡ್‌ನ (Pattanagere Shed) ಬಗ್ಗೆ ಇನ್ನಷ್ಟು ಭೀಕರ ಸತ್ಯಗಳು ಅನಾವರಣವಾಗುತ್ತಿವೆ. ಶೆಡ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧವಿಲ್ಲದ ಇನ್ನಷ್ಟು ಮಂದಿಯ ರಕ್ತದ ಕಲೆಗಳು (blood stains) ಪತ್ತೆಯಾಗಿದ್ದು, ಇನ್ನಷ್ಟು ಹಲ್ಲೆ- ಕೊಲೆ (Assault) ಪ್ರಕರಣಗಳು ಇಲ್ಲಿ ನಡೆದಿರಬಹುದು ಎಂಬ ತರ್ಕಕ್ಕೆ ಪುಷ್ಟಿ ನೀಡಿವೆ.

ದರ್ಶನ್‌ ಮತ್ತು ಗ್ಯಾಂಗ್‌ನ ಕರಾಳ ಹಿನ್ನೆಲೆಗೆ ಈ ಶೆಡ್‌ನಲ್ಲಿ ಸಿಗುತ್ತಿರುವ ಸಾಕ್ಷ್ಯಗಳು ಮತ್ತಷ್ಟು ಪೂರಕವಾಗಲಿವೆ. ಪಟ್ಟಣಗೆರೆ ಶೆಡ್‌ನಲ್ಲಿ ವಿಧಿವಿಜ್ಞಾನ ಪರಿಶೀಲನೆಗೆ ಎಫ್ಎಸ್ಎಲ್ ಟೀಮ್‌ ಹೋದಾಗ ಬೇರೆಯವರ ರಕ್ತದ ಕಲೆಗಳು ಸಿಕ್ಕಿದ್ದು, ಇವು ಯಾರವು ಎಂದು ಪತ್ತೆ ಹಚ್ಚುವ ತಲೆನೋವು ಕೂಡ ಎಸ್‌ಐಟಿ ಹೆಗಲೇರಿದೆ.

ಈ ಹಿಂದೆ ಇದೇ ಶೆಡ್‌ನಲ್ಲಿ ದರ್ಶನ್‌, ತನ್ನ ಇತರ ವಿರೋಧಿಗಳನ್ನೂ ಕರೆಸಿ ಹಲ್ಲೆ ನಡೆಸುತ್ತಿದ್ದುದರ ಬಗ್ಗೆ ಪುಕಾರುಗಳಿವೆ. ಬಂಧಿತ ಆರೋಪಿಗಳಲ್ಲೇ ಹಲವರು ಈ ವಿಚಾರ ಬಾಯ್ಬಿಟ್ಟಿದ್ದಾರೆ. ಹೀಗಾಗಿ, ವಿನಯ್ ಆಂಡ್ ಗ್ಯಾಂಗ್‌ನಿಂದ ಈ ಶೆಡ್‌ನಲ್ಲಿ ರೇಣುಕಾಸ್ವಾಮಿ ಅಲ್ಲದೆ ಬೇರೆಯವರ ಮೇಲೆಯೂ ಹಲ್ಲೆ ನಡೆದಿತ್ತು; ವ್ಯವಹಾರದ ವಿಚಾರವಾಗಿ ಹಲವರ ಮೇಲೆ ಹಲ್ಲೆ ಮಾಡಿದ್ದರ ಬಗ್ಗೆಯೂ ಇದೀಗ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಈಗ ರೇಣುಕಾಸ್ವಾಮಿಯ ರಕ್ತದ ಕಲೆಗಳಲ್ಲದೆ, ಮೂರರಿಂದ ನಾಲ್ಕು ತಿಂಗಳ ಹಿಂದಿನ ಬ್ಲಡ್ ಗುರುತುಗಳು ಕೂಡ ಪತ್ತೆಯಾಗಿವೆ. ಆದರೆ ಹಲ್ಲೆಗೊಳಗಾದ ಬಗ್ಗೆ ಯಾರೂ ಸಹ ದೂರು ನೀಡಲು ಮುಂದೆ ಬಂದಿಲ್ಲ. ಹಲ್ಲೆಗೊಳಗಾಗಿದ್ದರೂ ದರ್ಶನ್‌ಗೆ ಹೆದರಿಕೊಂಡು ಸುಮ್ಮನಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆಯೂ ಆರೋಪಿಗಳನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ನಿರ್ಮಾಪಕರಿಗೂ ಗೂಸಾ!

ರೇಣುಕಾಸ್ವಾಮಿ ಕೊಲೆಯಾದ ಪಟ್ಟಣಗೆರೆಯ ಆ ಶೆಡ್ ಬಗ್ಗೆ ಇದೀಗ ಇನ್ನಿತರ ಕೆಲವು ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಇಲ್ಲಿ ಅದೆಷ್ಟೋ ಕನ್ನಡ ಚಿತ್ರ ನಿರ್ಮಾಪಕರು ಕೂಡ ಗೂಸಾ ತಿಂದಿದ್ದಾರೆ ಎಂಬುದು ಬಯಲಾಗಿದೆ. ತನಗೆ ಆಗದವರು, ತನ್ನ ವಿರೋಧಿಗಳು ಹಾಗೂ ಪೇಮೆಂಟ್‌ ಮಾಡದ ನಿರ್ಮಾಪಕರನ್ನು ಅಟ್ಯಾಕ್ ಮಾಡಲು ದರ್ಶನ್‌ ಬಳಸುತ್ತಿದ್ದ ಜಾಗವೇ ಈ ಶೆಡ್ ಎನ್ನಲಾಗಿದೆ.

ನಟ ದರ್ಶನ್ ಎಷ್ಟೋ ಮಂದಿಗೆ ಇಲ್ಲೇ ಹಲ್ಲೆ ಮಾಡಿ, 2ರಿಂದ 3 ದಿನಗಳ ಕಾಲ ಇಲ್ಲೇ ಇರಿಸಿಕೊಳ್ಳುತ್ತಿದ್ದ. ಕಳಿಸಿಕೊಡುವಾಗ ಬ್ಯಾಂಡೇಜ್ ಹಾಕಿಸಿ ಕೈಗೆ ಹಣ ಕೊಟ್ಟು ಕಳುಹಿಸುತ್ತಿದ್ದ ಎಂದು ಕೆಲವರು ಇದೀಗ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ದರ್ಶನ್‌ ಕಾರು ಇಲ್ಲಿಗೆ ಆಗಾಗ ಬಂದು ಹೋಗುತ್ತಿದ್ದುದನ್ನು ಕೆಲವು ಸ್ಥಳೀಯರು ಗಮನಿಸಿದ್ದಾರೆ. ದರ್ಶನ್‌ಗೆ ಇನ್ನೆಷ್ಟು ಕರಾಳ ಮುಖಗಳಿವೆ ಎಂದು ಪೊಲೀಸರೇ ಇದೀಗ ಬೆಚ್ಚಿ ಬೀಳುವಂತಾಗಿದೆ.

ಪ್ರಮುಖ ಸಾಕ್ಷಿಗಳೇ ನಾಶ, ಸಿಸಿಟಿವಿ ರೆಕಾರ್ಡ್‌ ಡಿಲೀಟ್‌

ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ದರ್ಶನ್‌ (Actor Darshan) ನಡೆಸಿದ ಕರಾಳ ಕೃತ್ಯದ ನಂತರ ಕಳೆದ ಒಂದು ವರ್ಷದ ಸಿಸಿಟಿವಿ ದಾಖಲಾತಿಗಳನ್ನು ಡಿಲೀಟ್‌ ಮಾಡಲಾಗಿದೆ ಎಂಬ ಎಕ್ಸ್‌ಕ್ಲೂಸಿವ್‌ ಮಾಹಿತಿ ವಿಸ್ತಾರ ನ್ಯೂಸ್‌ಗೆ ದೊರೆತಿದೆ.

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಇದನ್ನೂ ಓದಿ: Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Attica Babu: ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ಅಟ್ಟಿಕಾ ಆಬು ವಿರುದ್ಧ ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ.

VISTARANEWS.COM


on

Attica Babu
Koo

ತುಮಕೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್‌ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು (Turuvekere Police) ಬುಧವಾರ (ಜೂನ್‌ 26) ಬಂಧಿಸಿದ್ದಾರೆ. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ (Bengaluru) ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಹಗಲು ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

ಶಾರದಾ ಮೂಲಕ ಜಿಗಣಿಯಲ್ಲಿರುವ ಅಟ್ಟಿಕಾ ಗೋಲ್ಡ್‌ ಕಂಪನಿಯಲ್ಲಿ ಉದಯ್‌ ಅಲಿಯಾಸ್‌ ಅಶೋಕ್‌ ಮಾರಾಟ ಮಾಡಿಸಿದ್ದ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ಮಾಡಿದ್ದರು. ಕಳ್ಳತನ ಮಾಡಿದ ಚಿನ್ನಾಭರಣವನ್ನು ಖರೀದಿಸಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರ ತಂಡವು ಬೆಂಗಳೂರಿಗೆ ಆಗಮಿಸಿ, ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ. ಪೊಲೀಸರು ಅಟ್ಟಿಕಾ ಬಾಬು ಅವರನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

2022ರಲ್ಲೂ ಬಂಧಿಸಲಾಗಿತ್ತು

ಎರಡನೇ ಮದುವೆಯಾಗಿ, ಮೋಸ ಮಾಡಿದ್ದಾರೆ ಎಂಬುದಾಗಿ ಮಹಿಳೆಯೊಬ್ಬರು ದೂರು ನೀಡಿದ ಕಾರಣ 2022ರಲ್ಲೂ ಅಟ್ಟಿಕಾ ಬಾಬು ಅವರನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದರು. ಶೇಖ್‌ ಮಿನಾಜ್‌ ಎಂಬ ಮಹಿಳೆಯು ಹಲ್ಲೆ ಹಾಗೂ ಮೋಸ ಮಾಡಿದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಿದ್ದರು. ಮಹಿಳೆ ದೂರಿನ ಹಿನ್ನೆಲೆಯಲ್ಲಿ ಅಟ್ಟಿಕಾ ಬಾಬು ವಿರುದ್ಧ ಹಲ್ಲೆ, ವರದಕ್ಷಿಣೆ ಕಿರುಕುಳದ ಪ್ರಕರಣ ಕೂಡ ದಾಖಲಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಅಟ್ಟಿಕಾ ಬಾಬು ಬಿಡುಗಡೆಯಾಗಿದ್ದರು.

ಇದನ್ನೂ ಓದಿ: Actor Darshan: ಪ್ರಥಮ್‌, ಉಮಾಪತಿಗೆ ಬೆದರಿಕೆ ಹಾಕಿದ ಡಿ ಬಾಸ್‌ ಫ್ಯಾನ್‌ ಬಂಧನ

Continue Reading

ಸ್ಯಾಂಡಲ್ ವುಡ್

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Actor Darshan: ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

VISTARANEWS.COM


on

Actor Darshan Full aggressive mode while he drunk
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಆದ ಬಳಿಕ ರೇಣುಕಾಸ್ವಾಮಿ ನಿವಾಸಕ್ಕೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಭೇಟಿ ನೀಡಿ, ಮೃತ ರೇಣುಕಾ ಸ್ವಾಮಿಯ ಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಮಾತ್ರವಲ್ಲ ಹಲವು ಮಾಧ್ಯಮಗಳಿಗೆ ಈ ಬಗ್ಗೆ ಹೇಳಿಕೆ (Actor Darshan) ನೀಡಿದ್ದಾರೆ. ಆದರೀಗ ವಿಸ್ತಾರ ನ್ಯೂಸ್‌ನಲ್ಲಿ ಭಾವನಾ ಬೆಳಗೆರೆ ಅವರು ʻಕುಡಿದಾಗ ಮಾತ್ರ ದರ್ಶನ್‌ ಅಗ್ರೆಸ್ಸಿವ್‌ ಆಗಿ ಮಾತಾಡಡುತ್ತಾರೆ. ಹಾಗೇ ಈ ಕೃತ್ಯ ಕುಡಿದಾಗಲೇ ಮಾಡಿರಬಹುದುʼʼಎಂದು ಹೇಳಿಕೆ ನೀಡಿದ್ದಾರೆ.

ಭಾವನಾ ಬೆಳಗೆರೆ ಮಾತನಾಡಿ ʻʻದರ್ಶನ್‌ ಅವರು ಕುಡಿದು ಮಾತನಾಡುವಾಗ ಅಗ್ರೆಸಿವ್‌ ಆಗಿ ಮಾತಾಡ್ತಾರೆ. ಇಲ್ಲ ಅಂದರೆ ಆರಾಮಾಗಿ ಮಾತನಾಡುತ್ತಾರೆ. ಪ್ರತಿ ಬಾರಿ ಮಾತನಾಡುವಾಗ ಅಲ್ವಾ! ಎಂಬ ಉತ್ತರಕ್ಕೆ ಕಾಯುತ್ತಾರೆ. ಮಿಕ್ಕಿದ ದಿನದಲ್ಲಿ ಕ್ಯಾಮೆರಾಗೆ ಅಟ್ಯಾಕ್‌ ಮಾಡಲು ಬರುತ್ತಾರೆ. ಕುಡಿದಿದ್ದಾಗ ಯಾರು ಏನೇ ಹೇಳಿದ್ದರೂ ಒಪ್ಪಿಕೊಳ್ಳಲ್ಲ. ಇಂದು ನಾನು ತಂದೆಯವರೆ ಹಿಸ್ಟರಿ ಇಟ್ಟುಕೊಂಡು ಮಾತಾಡ್ತಾ ಇಲ್ಲ. ನನ್ನ ಸ್ವತಃ ಅಣುಭವ ಹಂಚಿಕೊಳ್ಳುತ್ತಿರುವೆʼʼಎಂದರು.

ಇದನ್ನೂ ಓದಿ: ‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

ʻʻಆಗಿನ ಕಾಲದ ನಟರನ್ನು ನಾವು ಪೂಜಿಸುತ್ತಿದ್ದೇವು. ಅಣ್ಣಾವ್ರ ಆಗಲಿ ಹಲವು ನಟರು ಇಷ್ಟವಾಗುತ್ತಿದ್ದರು. ಆದರೆ ಆಗ ಅಭಿಮಾನಿಗಳ ನಡುವೆ ಜಿದ್ದಾ ಜಿದ್ದಿ ಇರಲಿಲ್ಲ. ಆದರೆ ಈಗ ದರ್ಶನ್‌ ಅಥವಾ ಅಪ್ಪು, ಸುದೀಪ್‌ ಈ ರೀತಿ ಅಭಿಮಾನಿಗಳು ಮಾತನಾಡಲು ಶುರು ಮಾಡಿದ್ದಾರೆ. ಮುಂಚೆ ಎಲ್ಲರೂ ಒಟ್ಟಿಗೆ ನಿಂತು ಬೆಳೆಸುತ್ತಿದ್ದರು. ಆದರೀಗ ಒಬ್ಬರ ಫ್ಯಾನ್ಸ್‌ ಇನ್ನೊಬ್ಬರ ಸಿನಿಮಾ ಕೂಡ ನೋಡುತ್ತಿಲ್ಲʼʼಎಂದರು.

ನಮ್ಮ ತಂದೆ ಅವತ್ತು ಬುದ್ಧಿ ಹೇಳಿದ್ದೇ ತಪ್ಪಾ?

ʻʻನನ್ನ ತಂದೆ ದರ್ಶನ್‌ ಅವರಿಗೆ ವಿಜಯಲಕ್ಷ್ಮಿ ಅವರನ್ನು ಹೊಡೆಯಬೇಡ ಎಂದಿದ್ದಾಗ, ದರ್ಶನ್‌ ನನ್ನ ಹೆಂಡತಿ ಅವಳು ಹೊಡತ್ತೀನಿ, ನೀನು ಯಾರು ಎಂದು ಕೇಳಿದ್ದರು. ಆದರೆ ನನ್ನ ತಂದೆ ಬುದ್ಧಿ ಮಾತು ಹೇಳಿದ್ದರು. ಕುಡಿದಾಗ ಮಾತ್ರ ದರ್ಶನ್‌ ಹೀಗೆ. ಆದರೆ ಬೇರೆ ಸಮಯದಲ್ಲಿ ತುಂಬ ಸಾಫ್ಟ್‌. ಈ ಕೃತ್ಯ ಆದಾಗ ಅವರು ಕುಡಿದಾಗಲೇ ಮಾಡಿರೋದು. ಆದರೆ ಈಗ ಕಾನೂನು ಒಂದೇ. ಕುಡಿದು ಮಾಡಿದೆ ಅಂತ ಕ್ಷಮೆ ಏನು ಕಡಿಮೆ ಆಗಲ್ಲ. ಆದರೆ ದರ್ಶನ್‌ ಯಾವಾಗ ಈ ರೀತಿಯ ಗೂನವನ್ನು ಸರಿ ಮಾಡ್ಕೋತ್ತಾರೆ? ಆದರೆ ಮುಂದೆ ಏನಾಗುತ್ತೆ ಎನ್ನುವುದು ಗೊತ್ತಿಲ್ಲʼʼಎಂದರು.

ರೇಣುಕಾ ಸ್ವಾಮಿ ಚಿತ್ರದುರ್ಗದವರಾಗಿದ್ದು ಬಡ ಮಧ್ಯಮ ಕುಟುಂಬದವರಾಗಿದ್ದಾರೆ. ಕಳೆದ ವರ್ಷ ಇದೇ ತಿಂಗಳು ಮದುವೆಯಾಗಿದ್ದ ರೇಣುಕಾ ಸ್ವಾಮಿಯ ಪತ್ನಿ ಐದು ತಿಂಗಳ ಗರ್ಭಿಣಿ. ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿಯನ್ನು ಶನಿವಾರ ಅಪಹರಣ ಮಾಡಿದ್ದ ನಟ ದರ್ಶನ್ ಸಹಚರರು ಪಟ್ಟಣಗೆರೆಯ ಶೆಡ್​ನಲ್ಲಿ ಕೂಡಿಹಾಕಿ ಹೊಡೆದು, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಚರಂಡಿಗೆ ಎಸಗಿ ಹೋಗಿದ್ದರು.

Continue Reading

ಕರ್ನಾಟಕ

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Prajwal Revanna Case: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾ ಮಾಡಿದೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಇದರಿಂದ ಸದ್ಯ ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ.

ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

prajwal revanna case 4th


ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

Continue Reading

ಕರ್ನಾಟಕ

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

Renuka Swamy Murder: ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್‌ನ ನಾಲ್ವರು ಆರೋಪಿಗಳನ್ನು ಬೆಂಗಳೂರಿನಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

VISTARANEWS.COM


on

Renuka Swamy Murder
Koo

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan support by anchor hemalatha

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading
Advertisement
Attica Babu
ಕರ್ನಾಟಕ1 min ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Terrorists Killed
ಪ್ರಮುಖ ಸುದ್ದಿ40 mins ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ1 hour ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ1 hour ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ1 hour ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು1 hour ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು1 hour ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ2 hours ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ2 hours ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ2 hours ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌