Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್! - Vistara News

ಕ್ರೈಂ

Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ.

VISTARANEWS.COM


on

Actor Darshan case Jaggesh reaction about this
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭವನ್ನು (Actor Darshan) ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ ಕುಮಾರ್‌, ಜಗ್ಗೇಶ್‌ , ಸಾಧು ಕೋಕಿಲಾ ಸೇರದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಜಗ್ಗೇಶ್, ಚಿತ್ರರಂಗದ ಕೆಲಸಗಳನ್ನು ಪಟ್ಟು ಹಿಡಿದು ಮಾಡಿಸಬೇಕು, ಸಿದ್ದರಾಮಯ್ಯ ಅವರು ಬಂದಾಗ ಹೇಳಿ ಸುಮ್ಮನಾಗುವುದಲ್ಲ ಆಗಾಗ್ಗೆ ಹೋಗಿ ಅವರ ತಲೆ ನಿನ್ನುತ್ತಿರಬೇಕು, ಸಿಎಂ ಅವರಿಗೆ ಕೆಲಸದ ಭಾರ ತುಂಬಾ ಇರುತ್ತದೆ. ಒಟಿಟಿ ಎಂಬುದು ಒಳ್ಳೆಯ ಯೋಜನೆ. ಇದನ್ನು ಸರ್ಕಾರ ಮಾಡಿದ್ರೆ ಪ್ರಾಫಿಟ್‌ ತಂದು ಕೊಡುತ್ತದೆ. ಈಗಾಗಲೇ ಮಲ್ಟಿ ನ್ಯಾಷನಲ್ ಕಂಪನಿ ಮಾಡಿಕೊಂಡಿದೆ. ನಮ್ಮ ದುಡ್ಡು ಹೊರ ರಾಜ್ಯಕ್ಕೆ ಹೋಗ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

ಸಿನಿಮಾ ರಂಗದ ಇತ್ತೀಚಿನ ಬೆಳವಣಿಗೆ ಬಗ್ಗೆ ಜಗ್ಗೇಶ್‌ ಮಾತನಾಡಿ ಪರೋಕ್ಷವಾಗಿ ʻʻ ನಿರ್ಮಾಪಕರು ಸಿನಿಮಾ ನಾಯಕನ ಹಿಂದೆ ಹೋಗಿ ಸಿನಿಮಾ ಮಾಡಬೇಡಿ. ಕಥೆ ಹಿಂದೆ ಹೋಗಿ ಸಿನಿಮಾ ಮಾಡಿ. ಇವತ್ತು ನಾಯಕರ ಹಿಂದೆಯೇ ಹೋದಾಗಲೇ ನಿರ್ಮಾಪಕರಿಗೆ ಸಮಸ್ಯೆ ಆಗಿದೆ. ಹಿಂದೆ ಕಥೆ ಹಿಂದೆ ಹೋದಾಗ ನಿರ್ಮಾಪಕರು ಚನ್ನಾಗಿದ್ದರುʼʼಎಂದರು.

ಈ ವೇಳೆ ನಟ ಶಿವರಾಜ್‌ಕುಮಾರ್‌ ಕೂಡ ಭಾಗಿಯಾಗಿದ್ದರು. ಈ ವೇಳೆ ದರ್ಶನ್‌ (Actor Darshan) ಕುರಿತಾಗಿ ಮಾತನಾಡಿದರು. ಶಿವಣ್ಣ ಮಾತನಾಡಿ ʻʻಈ ವಿಚಾರದ ಬಗ್ಗೆ ಬೇಸರ ಆಗತ್ತೆ. ಅದೆಲ್ಲ ಹಣೆಬರಹ. ಹಣೆ ಬರಹ ಅನ್ನೋದು ಒಂದು ಇರುತ್ತೆ. ಏನೇ ಮಾತನಾಡಿದರೂ ಅದು ಸರಿನಾ ಎಂದು ಯೋಚನೆ ಮಾಡಬೇಕು. ನಾವು ಬಂದರೋದು ಎದುರಿಸಲೇ ಬೇಕು. ಈಗಾಗಲೇ ತನಿಖೆ ಆಗುತ್ತಿದೆ. ಯಾಕಪ್ಪ ಹೀಗೆ ಆಯ್ತು ಅಂತ ಬೇಜಾರ ಆಗುತ್ತೆ. ಎರಡೂ ಕುಟಂಬಗಳು ಬೇಜಾರಿನ ಲ್ಲಿದೆ. ನ್ಯಾಯ ಎಲ್ಲಿದೆ ಮುಂದೆ ಗೊತ್ತಾಗತ್ತೆʼʼಎಂದರು.

 ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

Student Death : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿಯೊಬ್ಬಳು ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

VISTARANEWS.COM


on

By

Student death
Koo

ಚಿತ್ರದುರ್ಗ: ಅಪ್ರಾಪ್ತೆಯೊಬ್ಬಳು ಅನುಮಾನಾಸ್ಪದವಾಗಿ (Student Death) ಮೃತಪಟ್ಟಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಂಜನಾ (14) ಮೃತ ದುರ್ದೈವಿ.

ಹಳವುದರ ಲಂಬಾಣಿಹಟ್ಟಿ ಗ್ರಾಮದ ಬೇಬಿಬಾಯಿ ಹಾಗೂ ಉಮ್ಯಾನಾಯ್ಕ್ ದಂಪತಿಯ ಪುತ್ರಿ ಸಂಜನಾ ಕರಿಯಮ್ಮನ ಹಟ್ಟಿ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಬಾಲಕಿ ಆತ್ಮಹತ್ಯೆ ಕುರಿತು ಪೋಷಕರು ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಭರಮಸಾಗರ ಠಾಣೆ ಪೊಲೀಸರು ಮೃತದೇಹವನ್ನು ಸಿರಿಗೆರೆ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಭರಮಸಾಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಬಾಲಕಿ ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಳು, ಯಾರಾದರೂ ಪ್ರಚೋದನೆ ನೀಡಿದ್ದರಾ ಎಂಬ ಎಲ್ಲ ಆಯಾಮದಲ್ಲೂ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಪ್ರೌಢ ಶಾಲಾ ಶಿಕ್ಷಕನಿಂದ ಬಾಲಕಿಗೆ ಲೈಂಗಿಕ ಕಿರುಕುಳದ (Physical Abuse) ಆರೋಪ ಕೇಳಿ ಬಂದಿದೆ. ಕಳೆದ ಶನಿವಾರ ಕಮಲಾನಗರದ ಶಾಲೆಯೊಂದರಲ್ಲಿ ಇಂತಹ ಅನಾಚಾರ ನಡೆದಿದೆ.

ಮಗಳ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಬಾಲಕಿ ತಂದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜತೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಾಗಿದೆ.

ಕಾಮುಕನ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕಿಯ ತಂದೆ ಮನವಿ ಮಾಡಿದ್ದಾರೆ. ಕಾಮುಕ ಶಿಕ್ಷಕ ಶಾಲೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಮೇಲೆ ಎರಗಿದ್ದಾನೆ. ಬಳಿಕ ಈ ವಿಷಯವನ್ನು ಹೊರಗೆ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಶಿಕ್ಷಕನ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಇತರೆ ಪೋಷಕರು ಹಿಂದೇಟು ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

Theft case : ಪ್ರತ್ಯೇಕ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ವರದಿ ಆಗಿವೆ. ಆನೇಕಲ್‌ನಲ್ಲಿ ಕೆಲಸಗಾರನೊಬ್ಬ ಅನ್ನ ಹಾಕಿದ ಮನೆಗೆ ಕನ್ನ ಹಾಕಿದ್ದಾನೆ. ಬೆಂಗಳೂರಲ್ಲಿ ಬೈಕ್‌ನಲ್ಲಿ ಬಂದ ಕಳ್ಳರು ಆಟೋ ಚಾಲಕನ ಚಿನ್ನದ ಸರವನ್ನು ಎಗರಿಸಿದ್ದಾರೆ. ರಾಯಚೂರಲ್ಲಿ ಮಂಕಿ ಕ್ಯಾಪ್‌ ಕಳ್ಳರ ಕಾಟ ಹೆಚ್ಚಾಗಿದೆ.

VISTARANEWS.COM


on

By

theft Case
Koo

ಆನೇಕಲ್: ಅನ್ನ ಹಾಕಿದ ಮನೆಗೆ ಕೆಲಸಗಾರನೊಬ್ಬ ಕನ್ನ (Theft case) ಹಾಕಿದ್ದಾನೆ. ಬೆಂಗಳೂರಿನ ಜಿಗಣಿ ಸಂತೆ ಬೀದಿ ಬಳಿ ಇರುವ ಮನಿ ಟ್ರಾನ್ಸ್‌ಫರ್‌ ಅಂಗಡಿಯಲ್ಲಿ ಸಂಗ್ರಹವಾಗಿದ್ದ 9 ಲಕ್ಷಕ್ಕೂ ಹೆಚ್ಚು ಹಣವನ್ನು ಕೆಲಸಗಾರನೇ ಕಳವು ಮಾಡಿದ್ದಾನೆ. ರಾಜು ಎಂಬುವವರಿಗೆ ಸೇರಿದ ಮನಿ ಟ್ರಾನ್ಸ್‌ಫರ್‌ ಅಂಗಡಿಯಲ್ಲಿ ಬಿಹಾರ ಮೂಲದ ದಿಲೀಪ್ ಎಂಬಾತ ಕೆಲಸ ಮಾಡುತ್ತಿದ್ದ.

ಐದಾರು ತಿಂಗಳ ಹಿಂದೆ ಕೆಲಸ ಬಿಟ್ಟು ವಾಪಸ್ ಬಿಹಾರಕ್ಕೆ ತೆರಳಿದ್ದ. ಆದರೆ ತಿಂಗಳ ಹಿಂದೆ ವಾಪಸ್ ಕೆಲಸಕ್ಕೆ ಬಂದಿದ್ದ. ಹೀಗೆ ಬಂದವನು ನಿನ್ನೆ ಸೋಮವಾರ ಸಂಜೆ ಸಿಸಿ ಕ್ಯಾಮೆರಾ ಆಫ್‌ ಮಾಡಿ ಮನಿ ಟ್ರಾನ್ಸ್‌ಫರ್‌ನಿಂದ ಸಂಗ್ರಹವಾಗಿದ್ದ ಹಣ ಕದ್ದು ಎಸ್ಕೇಪ್ ಆಗಿದ್ದಾನೆ. ಪ್ರಕರಣ ಸಂಬಂಧ ಬೆಂಗಳೂರಿನ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಆಟೋ ಚಾಲಕನ ಸರ ಕಿತ್ತು ಪರಾರಿಯಾದ ಕಳ್ಳರು

ಬೆಂಗಳೂರಿನ ಗಿರಿನಗರದ ವಿವೆರಕಾನಂದ ಪಾರ್ಕ್ ಬಳಿ ಆಟೋ ರಿಕ್ಷಾ ಬಾಡಿಗೆ ಕೇಳುವ ನೆಪದಲ್ಲಿ ಸರಗಳ್ಳತನ ನಡೆದಿದೆ. ಬೈಕ್‌ನಲ್ಲಿ ಬಂದಿದ್ದ ಕಳ್ಳರಿಬ್ಬರು, ಬನಶಂಕರಿ ಕಡೆಗೆ ಬರುತ್ತೀರಾ ಎಂದು ಕೇಳಿದ್ದಾರೆ. ಈ ವೇಳೆ ಆಟೋ ಚಾಲಕ ಆ ಕಡೆಗೆ ಬರುವುದಿಲ್ಲ ಎಂದಾಗ ಬೈಕ್‌ನ ಹಿಂಬದಿ ಕುಳಿತ್ತಿದ್ದ ಕಿರಾತಕ ಚಾಕು ತೋರಿಸಿ ಸುಲಿಗೆ ಮಾಡಿದ್ದಾನೆ. ಸುಮಾರು 12 ಲಕ್ಷ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದಾರೆ. ಕೂಡಲೇ ಆಟೋ ಚಾಲಕ ಈ ಸಂಬಂಧ ದೂರು ನೀಡಿದ್ದರು. ದೂರು ದಾಖಲಾದ ಕೂಡಲೆ ಸಿಸಿಟಿವಿ ಆಧರಿಸಿ ಪರಿಶೀಲನೆ ನಡೆಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse : ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

ರಾಯಚೂರಿನಲ್ಲಿ ಮಂಕಿ ಕ್ಯಾಪ್‌ ಗ್ಯಾಂಗ್‌ ಹಾವಳಿ

ರಾಯಚೂರು ನಗರದ ಮಂತ್ರಾಲಯ ರೋಡ್‌ನಲ್ಲಿರೋ ಟ್ರೆಂಡ್ಸ್ ಮಾಲ್‌ನಲ್ಲಿ ಕಳ್ಳತನ ನಡೆದಿದೆ. ಗುರುತು ಸಿಗಬಾರೆಂದು ಮಂಕಿ ಕ್ಯಾಪ್ ಹಾಗೂ ಹ್ಯಾಂಡ್‌ ಗ್ಲೌಸ್‌ ಧರಿಸಿ ಬಂದಿದ್ದ ಕಳ್ಳರು ಮಾಲ್‌ನ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಕಳ್ಳರ ಕೃತ್ಯ ಮಾಲ್‌ನಲ್ಲಿದ್ದ ಸಿಸಿಟಿವಿಯಲ್ಲಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೊದಲು ಕಬ್ಬಿಣದ ರಾಡ್‌ನಿಂದ ಬೀಗ ಮುರಿದು ಮಾಲ್ ಒಳಗೆ ಎಂಟ್ರಿ ಕೊಟ್ಟ ಕಳ್ಳರು ಕ್ಯಾಶ್ ಕೌಂಟರ್‌ನಲ್ಲಿದ್ದ 65 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಕದ್ದು ಪರಾರಿ ಆಗಿದ್ದಾರೆ. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದಲ್ಲಿ ಟಾಟಾ ಹಿಟಾಚಿ ಕಂಪನಿಯಲ್ಲಿ ಕಳ್ಳತನ

ಧಾರವಾಡ ತಾಲೂಕಿನ ಗರಗ್ ಗ್ರಾಮದ ಬಳಿ ಇರುವ ಟಾಟಾ ಹಿಟಾಚಿ ಕಂಪನಿಯಲ್ಲಿ ಕಳ್ಳತನ ನಡೆದಿತ್ತು. ಕಳ್ಳತನವಾಗಿದ್ದ ರೂ. 10 ಲಕ್ಷ ಮೌಲ್ಯದ ಟೈರ್ ಮತ್ತು ಬ್ಯಾಟರಿ, 5.5 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಕಳ್ಳತನ ಮಾಡಿದ್ದ ಮೂವರನ್ನು ಬಂಧನ ಮಾಡಲಾಗಿದೆ. ಕಂಪನಿ ನೌಕರನಿಂದಲೇ ಕಳ್ಳತನ ನಡೆದಿರುವುದು ತಿಳಿದು ಬಂದಿದೆ. ಬಸವರಾಜ ಶಿಪ್ರಿ ಎಂಬಾತ ಅಭಿಷೇಕ ಕಂಬಾರ, ಉಮೇಶ ಜೈನರ್ ಜತೆ ಸೇರಿ ಕಳ್ಳತನ ನಡೆಸಿ ಪೊಲೀಸರಿಗೆ ಲಾಕ್‌ ಆಗಿದ್ದಾರೆ. ಗರಗ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರಲ್ಲಿ ಡ್ರಗ್‌ ಪೆಡ್ಲರ್‌ ಬಂಧನ

ಸ್ಟೂಡೆಂಟ್ ವೀಸಾದಲ್ಲಿ ಬಂದು ಡ್ರಗ್ ಪೆಡ್ಲರ್ ಆದ ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಮೋಜು-‌ಮಸ್ತಿಗಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಗೋವಾ, ‌ಮುಂಬೈ ಹಾಗು ದೆಹಲಿಯಲ್ಲಿ ವಾಸವಾಗಿರುವ ತಮ್ಮದೇ ದೇಶದ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ ಸುಮಾರು 12 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Latest

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Police Arrest: ಪೊಲೀಸರೆಂದರೆ ಕಳ್ಳರನ್ನು ಹಿಡಿದು ತಕ್ಕ ಶಿಕ್ಷೆ ನೀಡುತ್ತಾರೆ ಎಂಬ ನಂಬಿಕೆ ಜನರಿಗೆ. ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿಯೊಂದು ನಿರ್ಮಾಣವಾಗಿದೆ. ಅದೇನೆಂದರೆ, ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

VISTARANEWS.COM


on

Police Arrest
Koo

ಅಹಮದಾಬಾದ್: ಪೊಲೀಸ್ ಅಧಿಕಾರಿಗಳೆಂದರೆ ಕಳ್ಳತನ, ಸುಲಿಗೆ, ದರೋಡೆ ಮಾಡುವಂತಹ ದುಷ್ಟರನ್ನು ಹಿಡಿದು ಜನರಿಗೆ ನ್ಯಾಯ ಕೊಡಿಸುವವರು ಎಂಬ ಭಾವನೆ ಜನರಲ್ಲಿದೆ. ಆದರೆ ಗುಜರಾತ್‌ನ ಕಚ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಪೊಲೀಸ್ ವೃತ್ತಿಗೆ ಅಪಖ್ಯಾತಿ ತರುವಂತದಾಗಿದೆ. ಯಾಕೆಂದರೆ ಮಹಿಳಾ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸ್ ಅಧಿಕಾರಿಯೊಬ್ಬರು ಮದ್ಯವನ್ನು ಸಾಗಿಸುವ ಪ್ರಯತ್ನದಲ್ಲಿ ಕಳ್ಳಸಾಗಣೆದಾರನಿಗೆ ಸಹಾಯ ಮಾಡಿ ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ (Police arrest).

ಭಚೌ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ, ಮದ್ಯ ಕಳ್ಳಸಾಗಣೆಯನ್ನು ತಡೆಯಲು ಕಚ್(kutch) ನ ಭಚೌ ಪೊಲೀಸ್ ಠಾಣೆ ಪ್ರದೇಶದ ಚೋಪ್ಡ್ವಾ(chopdwa) ಸೇತುವೆಯ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಬಿಳಿ ಥಾರ್ ವಾಹನವೊಂದು ಪೊಲೀಸ್ ತಪಾಸಣೆಯನ್ನು ಕಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿತು. ಮತ್ತೊಂದು ಪೊಲೀಸ್ ಬೆಂಗಾವಲು ವಾಹನ ಅವರನ್ನು ಹಿಂಬಾಲಿಸಿ ತಡೆದರು. ನಂತರ ಪೊಲೀಸರು ವಾಹನವನ್ನು ಶೋಧಿಸಿದಾಗ ಅದರಲ್ಲಿ 16 ಬಾಟಲಿ ಮದ್ಯ ಮತ್ತು ಎರಡು ಕ್ಯಾನ್ ಬಿಯರ್ ಪತ್ತೆಯಾಗಿದೆ. ನಂತರ ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳು ಕಚ್ ಪೂರ್ವ ಸಿಐಡಿಯ ಅಧಿಕಾರಿ ನೀತಾ ಚೌಧರಿ ಮತ್ತು ಕಳ್ಳಸಾಗಣೆದಾರನನ್ನು ಯುವರಾಜ್ ಸಿಂಗ್ ಎಂದು ಪತ್ತೆ ಮಾಡಲಾಗಿದೆ. ಇವರಿಬ್ಬರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 307 ಮತ್ತು 427 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಯುವರಾಜ್ ಸಿಂಗ್ ಈ ಹಿಂದೆ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೊಲೆ ಯತ್ನ ಸೇರಿದಂತೆ 6 ಪ್ರಕರಣಗಳಲ್ಲಿ ಬೇಕಾಗಿದ್ದಾನೆ ಎನ್ನಲಾಗಿದೆ. ಮತ್ತು ಪೊಲೀಸ್ ಅಧಿಕಾರಿ ನೀತಾ ಚೌಧರಿ ಅವರು ಪೊಲೀಸ್ ಸಮವಸ್ತ್ರದಲ್ಲಿ ನೃತ್ಯ ವೀಡಿಯೊಗಳನ್ನು ಮಾಡುವುದು ಸೇರಿದಂತೆ ತನ್ನ ಅಸಾಂಪ್ರದಾಯಿಕ ನಡವಳಿಕೆಗಾಗಿ ಅವರು ಈ ಹಿಂದೆ ವಿವಾದದಲ್ಲಿ ಸಿಲುಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ಈ ಹಿಂದೆ, ಗುಜರಾತ್ ನಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದ್ದರೂ ಕೆಲವು ಪೊಲೀಸ್ ಅಧಿಕಾರಿಗಳು ಕಳ್ಳಸಾಗಾಣಿಕೆದಾರರಿಗೆ ಸಹಾಯ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ತಿಳಿದುಬಂದಿತ್ತು. ಅಲ್ಲದೇ ಗುಜರಾತ್‌ನ ಭೋಪಾಲ್ ಮತ್ತು ಅಹಮದಾಬಾದ್‌ನಲ್ಲಿ ನಡೆದ ಅಪಘಾತಕ್ಕೀಡಾದ ವಾಹನದಲ್ಲಿ ಮದ್ಯ ನಿಷೇಧದ ಹೊರತಾಗಿಯೂ ಹಲವಾರು ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂಬುದಾಗಿ ತಿಳಿದುಬಂದಿದೆ.

Continue Reading

ದೇಶ

Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

Allahabad High Court: ಮತಾಂತರರವನ್ನು ನಿಯಂತ್ರಿಸದಿದ್ದರೆ ಸ್ತುತ ದೇಶದಲ್ಲಿರುವ ಬಹುಸಂಖ್ಯಾತರು ಕ್ರಮೇಣ ಅಲ್ಪಸಂಖ್ಯಾತರಾಗಬಹುದು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮತಾಂತರ ನಡೆಸಲು ಯತ್ನಿಸಿ 2021ರ ಮತಾಂತರ ನಿಷೇಧ ಕಾಯಿದೆಯಡಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ ಕೈಲಾಶ್‌ ಎಂಬಾತನ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾ. ರೋಹಿತ್‌ ರಂಜನ್‌ ಅಗರವಾಲ್‌ ನೇತೃತ್ವದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

VISTARANEWS.COM


on

Allahabad High Court
Koo

ಲಕ್ನೋ: ಮತಾಂತರ (Religious conversion)ಗಳನ್ನು ನಡೆಸುವ ಧಾರ್ಮಿಕ ಸಭೆಗಳನ್ನು ನಿಯಂತ್ರಿಸದಿದ್ದರೆ ಪ್ರಸ್ತುತ ದೇಶದಲ್ಲಿರುವ ಬಹುಸಂಖ್ಯಾತರು ಕ್ರಮೇಣ ಅಲ್ಪಸಂಖ್ಯಾತರಾಗಬಹುದು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ (Allahabad High Court) ಕಳವಳ ವ್ಯಕ್ತಪಡಿಸಿದೆ.

ಮತಾಂತರ ನಡೆಸಲು ಯತ್ನಿಸಿ 2021ರ ಮತಾಂತರ ನಿಷೇಧ ಕಾಯಿದೆಯಡಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ ಕೈಲಾಶ್‌ ಎಂಬಾತನ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾ. ರೋಹಿತ್‌ ರಂಜನ್‌ ಅಗರವಾಲ್‌ ನೇತೃತ್ವದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಭಾರತದ ಸಂವಿಧಾನದ 25ನೇ ವಿಧಿಯು ಧಾರ್ಮಿಕ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದೂ ತಿಳಿಸಿದೆ.

ಏನಿದು ಪ್ರಕರಣ?

ಆರೋಪಿ ಕೈಲಾಶ್‌ ದೆಹಲಿಯಲ್ಲಿ ಧಾರ್ಮಿಕ ಸಭೆ ಆಯೋಜಿಸಿ ಅದರಲ್ಲಿ ಭಾಗವಹಿಸುವಂತೆ ಆಗ್ರಹಿಸಿ ತನ್ನ ಹಳ್ಳಿಯಿಂದ ಅನೇಕರನ್ನು ಕರೆದೊಯ್ದಿದ್ದಾನೆ. ಈ ಪೈಕಿ ಹೆಚ್ಚಿನವರು ಮನೆಗೆ ಮರಳಲಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಅಲ್ಲಿ ಆತ ಮುಗ್ಧ ಜನರನ್ನು ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರ ಮಾಡಿದ್ದಾನೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.

ವಾದ ವಿವಾದ ಆಲಿಸಿದ ಕೋರ್ಟ್‌, “ಕೈಲಾಶ್ ನವದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಗಳಿಗೆ ಹಾಜರಾಗಲು ಜನರನ್ನು ಕರೆದೊಯ್ಯುತ್ತಿದ್ದ ಮತ್ತು ಅಲ್ಲಿ ಅವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗುತ್ತಿತ್ತು ಎನ್ನುವುದು ಸ್ಪಷ್ಟವಾಗಿದೆ. ಇದೇ ರೀತಿ ಮುಂದುವರಿದರೆ ದೇಶದಲ್ಲಿರುವ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುವ ದಿನ ದೂರವಿಲ್ಲ. ಕೂಡಲೇ ಮತಾಂತರವನ್ನು ನಿಲ್ಲಿಸಬೇಕುʼʼ ಎಂದು ಸೂಚಿಸಿದೆ.

“ಉತ್ತರ ಪ್ರದೇಶದಾದ್ಯಂತ ಎಸ್‌ಸಿ / ಎಸ್‌ಟಿ ಮತ್ತು ಇತರ ಜಾತಿಗಳ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಕಾನೂನುಬಾಹಿರವಾಗಿ ಮತಾಂತರಿಸುವುದು ವ್ಯಾಪಕವಾಗಿದೆ ಎಂಬುದು ನ್ಯಾಯಾಲಯದ ಗಮನಕ್ಕೆ ಬಂದಿದೆ” ಎಂದ ನ್ಯಾ. ರೋಹಿತ್‌ ರಂಜನ್‌ ಅಗರವಾಲ್‌ ಅವರು ಆರೋಪಿಗೆ ಜಾಮೀನು ನಿರಾಕರಿಸಿದರು.

ವಾದದ ವೇಳೆ ಆರೋಪಿ ಪರ ವಕೀಲ ಸಾಕೇತ್ ಜೈಸ್ವಾಲ್, ಸಂತ್ರಸ್ತ ರಾಮ್‌ಪಾಲ್‌ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿಲ್ಲ ಅಥವಾ ಅವರು ಕ್ರಿಶ್ಚಿಯನ್ ಅಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಲು ಮುಂದಾದರು. ಅವರು ಇತರರೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗಿದ್ದರಷ್ಟೆ. ಅಲ್ಲದೆ ಧಾರ್ಮಿಕ ಸಭೆಗಳನ್ನು ನಡೆಸುತ್ತಿದ್ದ ಸೋನು ಪಾಸ್ಟರ್‌ಗೆ ಈಗಾಗಲೇ ಜಾಮೀನು ನಿಡಲಾಗಿದೆ ಎಂದು ತಿಳಿಸಿದರು. ಆದರೂ ಕೈಲಾಶ್‌ಹೆ ಜಾಮೀನು ನಿರಾಕರಿಸಲಾಯಿತು.

ರಾಜ್ಯದಲ್ಲಿ ಅಕ್ರಮ ಮತಾಂತರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕ್ರಿಶ್ಚಿಯನ್ ಮಿಷನರಿಗಳು ಮತ್ತು ಮುಸ್ಲಿಂ ಸಂಘಟನೆಗಳು ಬಹುಸಂಖ್ಯಾತ ಹಿಂದೂಗಳಿಗೆ ಆಮಿಷ ಒಡ್ಡಿ ಮತಾಂತರ ನಡೆಸುತ್ತಿರುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: Religious Conversion: ಶಿವಮೊಗ್ಗದಲ್ಲಿ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ; ಪಾದ್ರಿ ಸೇರಿ ಹಲವರು ಪೊಲೀಸ್‌ ವಶಕ್ಕೆ

ಪಾದ್ರಿ ಸೇರಿ 10 ಮಂದಿಯ ಬಂಧನ

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಆಮಿಷದ ಮೂಲಕ ಹಿಂದೂಗಳ ದೊಡ್ಡ ಗುಂಪೊಂದನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಿದ ಆರೋಪದ ಮೇಲೆ ಚರ್ಚ್ ಪಾದ್ರಿ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿತ್ತು. ಬಳಿಕ ರಾಜ್ಯದ ಮತಾಂತರ ತಡೆ ಕಾನೂನು ಪ್ರಕಾರ (Anti-conversion law) ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಚರ್ಚ್‌ನ ಪಾದ್ರಿ ಫಾದರ್‌ ಡೊಮೆನಿಕ್‌, ಸರ್ಜು ಪ್ರಸಾದ್‌ ಗೌತಮ್‌, ಪವನ್‌ ಕುಮಾರ್‌, ಸುನಿಲ್‌ ಪಾಸಿ, ಘನಶ್ಯಾಮ್‌ ಗೌತಮ್‌, ಸುರೇಂದ್ರ ಪಾಸ್ವಾನ್‌, ರಾಹುಲ್‌ ಪಾಸ್ವಾನ್‌, ರಾಮಚಂದ್ರನ್‌ ರಾವತ್‌, ಧರ್ಮೇಂದ್ರ ಕೋರಿ ಮತ್ತು ಸೂರಜ್‌ ಗೌತಮ್‌ ಬಂಧಿತರು.

Continue Reading
Advertisement
karnataka cm mallikarjun kharge siddaramiah dk shivakumar
ಪ್ರಮುಖ ಸುದ್ದಿ11 mins ago

Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

Student death
ಚಿತ್ರದುರ್ಗ23 mins ago

Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

MUDA site Cm Siddaramaiah says his wife was given MUDA site during BJP regimescandal
ಕರ್ನಾಟಕ44 mins ago

MUDA site scandal: ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

Highest Collection Movie
ಸಿನಿಮಾ55 mins ago

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Narendra Modi
ರಾಜಕೀಯ56 mins ago

Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

theft Case
ಕ್ರೈಂ1 hour ago

Theft case : ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಕೆಲಸಗಾರ; ರಾಯಚೂರಲ್ಲಿ ಬೀಡುಬಿಟ್ಟ ಮಂಕಿ ಕ್ಯಾಪ್‌ ಗ್ಯಾಂಗ್‌!

AR Rahman
ಕ್ರೀಡೆ1 hour ago

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

Press Day celebration Programme in hosapete
ವಿಜಯನಗರ1 hour ago

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Police Arrest
Latest1 hour ago

Police Arrest: ಅಕ್ರಮ ಮದ್ಯ ಸಾಗಿಸಲು ಸಹಾಯ; ಸಿಕ್ಕಿ ಬಿದ್ದ ಸಿಐಡಿ ಲೇಡಿ ಆಫೀಸರ್!

Turbulence
ದೇಶ1 hour ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಲಗೇಜ್‌ ಕಂಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ ವ್ಯಕ್ತಿ-ವಿಡಿಯೋ ಇದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ21 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌