Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ! - Vistara News

ಕ್ರೈಂ

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Anjali Murder Case: ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

VISTARANEWS.COM


on

anjali murder case hubli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ತನ್ನ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಅಂಜಲಿ ಎಂಬಾಕೆಯನ್ನು ಇರಿದು ಬರ್ಬರವಾಗಿ ಕೊಲೆ (Anjali Murder Case) ಮಾಡಿದ ಹಂತಕ ಗಿರೀಶ್‌ನ‌ ಸ್ನೇಹಿತ ಕೂಡ ಕೊಲೆ ಆರೋಪಿ (Murder suspect) ಎಂಬುದು ಬಯಲಿಗೆ ಬಂದಿದೆ. ತನ್ನ ಸ್ನೇಹಿತನಿಂದಲೇ ಈತ ಪ್ರೇರಣೆ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಕೊಲೆ ಪ್ರಕರಣ ಒಂದರಲ್ಲಿ ಗಿರೀಶ್‌ನ ಸ್ನೇಹಿತ ಶಶಿ ಆರೆಸ್ಟ್ ಆಗಿದ್ದಾನೆ. ಶಶಿ ಮತ್ತು ಗಿರೀಶ್ ಇಬ್ಬರೂ ಸ್ನೇಹಿತರು.‌ ಎರಡು ದಿನಗಳ ಹಿಂದೆ ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಕೊಲೆ ನಡೆದಿದ್ದು, ಸದ್ದಾಂ ಎಂಬ ಯುವಕನ ಕೊಲೆಯಾಗಿತ್ತು. ಕೊಲೆ ಮಾಡಿದ್ದ ಪ್ರಕರಣದಲ್ಲಿ ಶಶಿ ಜೈಲು ಪಾಲಾಗಿದ್ದಾನೆ.

ಶಶಿ ಈ ಕೊಲೆ ಮಾಡಿದ ಬಳಿಕ ಅದೇ ರೀತಿ ಅಂಜಲಿಯನ್ನು ಮುಗಿಸಲು ಗಿರೀಶ್‌ ಪ್ಲ್ಯಾನ್ ಮಾಡಿದ್ದ. ತನ್ನ ಸ್ನೇಹಿತ ಮಾಡಿರುವ ಕೊಲೆಯಿಂದಲೇ ಪ್ರೇರಣೆ ಪಡೆದಿದ್ದ ಎಂದು ತರ್ಕಿಸಲಾಗಿದೆ. ಸ್ನೇಹಿತ ಕೊಲೆ ಮಾಡಿದ ಮೂರು ದಿನಗಳ ಬಳಿಕ ಗಿರೀಶನಿಂದ ಕೊಲೆ ಸಂಭವಿಸಿದೆ. ಇವರಿಬ್ಬರೂ‌ ಕೂಡಾ ಬೈಕ್ ಕಳ್ಳತನದ ಆರೋಪಿಗಳಾಗಿದ್ದಾರೆ.

ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಹುಬ್ಬಳ್ಳಿ: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ (Anjali Murder Case) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಕೊಲೆ ಪ್ರಕರಣಕ್ಕೂ ಮೊದಲೇ ಅಂಜಲಿ ಅಜ್ಜಿ, ಬೆಂಡಿಗೇರಿ ಪೊಲೀಸ್ ಠಾಣೆಗೆ ಬಂದು ಬೆದರಿಕೆ ಇದೆ ಎಂದು ದೂರು ನೀಡಿದ್ದರು. ದೂರು ನೀಡಿದರೂ ಪೊಲೀಸರು ನಿರ್ಲಕ್ಷ್ಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಂದ್ರಶೇಖರ್‌ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಅವರನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅಮಾನತು ಮಾಡಿದ್ದಾರೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident: ಟಿಪ್ಪರ್‌ ರೂಪದಲ್ಲಿ ಬಂದ ಯಮ, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ನಜ್ಜುಗುಜ್ಜು

Road Accident: ಮೈಸೂರು ರಸ್ತೆ ಗುಡ್ಡದಹಳ್ಳಿ ಬಳಿ ಘೋರ ಅಪಘಾತ ಸಂಭವಿಸಿದೆ. ಮಕ್ಕಳು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಮೇಲೆ ಕುಳಿತು ಆಟವಾಡುತ್ತಿದ್ದರು. ಯಮನಂತೆ ಬಂದ ಟಿಪ್ಪರ್‌ ಇವರನ್ನು ನೆಲಕ್ಕೆ ಕೆಡವಿದೆ. ಮಕ್ಕಳ ಮೇಲೆ ಹರಿದ ಪರಿಣಾಮ ಮಕ್ಕಳು ನಜ್ಜುಗುಜ್ಜಾಗಿದ್ದಾರೆ. ನಿಯಂತ್ರಣಕ್ಕೆ ಸಿಗದ ಟಿಪ್ಪರ್‌ ಐದಾರು ವಾಹನಗಳ ಮೇಲೆ ಹರಿದಿದೆ.

VISTARANEWS.COM


on

tipper road accident
Koo

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ (Varamahalakshmi Festival) ಮರುದಿನವೇ ಬೆಂಗಳೂರಿನ ಮೈಸೂರು ರಸ್ತೆ (Mysore Road) ಸಮೀಪ ದಾರುಣ ದುರಂತ ಘಟಿಸಿದೆ. ಟಿಪ್ಪರ್‌ ಚಾಲಕನೊಬ್ಬ (Tipper Accident) ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ, ಇಬ್ಬರು ಪುಟ್ಟ ಮಕ್ಕಳನ್ನು ಕೊಂದು (Road Accident) ಹಾಕಿದ್ದಾನೆ. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳು ಯಮನ ಬಾಯಿಗೆ ಆಹಾರವಾಗಿದ್ದಾರೆ.

ಮೈಸೂರು ರಸ್ತೆ ಗುಡ್ಡದಹಳ್ಳಿ ಬಳಿ ಘೋರ ಅಪಘಾತ ಸಂಭವಿಸಿದೆ. ಮಕ್ಕಳು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಮೇಲೆ ಕುಳಿತು ಆಟವಾಡುತ್ತಿದ್ದರು. ಯಮನಂತೆ ಬಂದ ಟಿಪ್ಪರ್‌ ಇವರನ್ನು ನೆಲಕ್ಕೆ ಕೆಡವಿದೆ. ಮಕ್ಕಳ ಮೇಲೆ ಹರಿದ ಪರಿಣಾಮ ಮಕ್ಕಳು ನಜ್ಜುಗುಜ್ಜಾಗಿದ್ದಾರೆ. ನಿಯಂತ್ರಣಕ್ಕೆ ಸಿಗದ ಟಿಪ್ಪರ್‌ ಐದಾರು ವಾಹನಗಳ ಮೇಲೆ ಹರಿದಿದೆ.

ಹಾಲೋಬಾಕ್ಸ್ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ನಜ್ಜಗುಜ್ಜಾಗಿರುವ ಮಕ್ಕಳ ಶವಗಳನ್ನು ಆಂಬ್ಯುಲೆನ್ಸ್‌ಗೆ ಹಾಕಿ ಒಯ್ಯಲಾಗಿದೆ. ಅಪಘಾತದ ದಾರುಣತೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಿನ್ನೆಯಷ್ಟೇ ವರಮಹಾಲಕ್ಷ್ಮಿ ಹಬ್ಬದಲ್ಲಿ ಹೊಸ ಬಟ್ಟೆ ತೊಟ್ಟು ಕುಣಿದಾಡಿದ್ದ ಮಕ್ಕಳು ಇಂದು ಶವವಾಗಿದ್ದು, ಇವರ ಕುಟುಂಬಗಳು ಶೋಕದ ಮಡುವಿನಲ್ಲಿವೆ.

ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು

ಉಡುಪಿ: ಆಸ್ಪತ್ರೆ ಬಳಿ ಕಾರಿನ ಎಲ್ಲ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟವರು.

ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು.

ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್‌ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಗಮನಿಸಿ, ಇಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಇಲ್ಲ

ಬೆಂಗಳೂರು: ಕೋಲ್ಕತಾದಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವೈದ್ಯರು ನೀಡಿರುವ ದೇಶವ್ಯಾಪಿ ಪ್ರತಿಭಟನೆಗೆ ರಾಜ್ಯದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ಸೂಚಿಸಿದ್ದಾರೆ. ಇಂದು ಬೆಳಗ್ಗೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳು (OPD) ಬಂದ್‌ ಆಗಿರಲಿವೆ.

ರಾಜಧಾನಿಯ ಫ್ರೀಡಂ ಪಾರ್ಕಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ವೈದ್ಯರ ಪ್ರತಿಭಟನೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಓಪಿಡಿ ಬಂದ್ ಮಾಡಿ ವೈದ್ಯ ಸಮೂಹ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಓಪಿಡಿ ಬಂದ್ ಇರಲಿದೆ.

ಪ್ರತಿಭಟನೆಗೆ ಸರ್ಕಾರಿ ವೈದ್ಯರು ಕೂಡ ಸಾಥ್ ಕೊಟ್ಟಿದ್ದಾರೆ. ಸರ್ಕಾರಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಫ್ರೀಡಂ ಪಾರ್ಕಿನಲ್ಲಿ ಇಂದು ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಹಲವು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಪ್ರತಿಭಟನೆಗೆ ಸಂಸದ ಹಾಗೂ ಖ್ಯಾತ ವೈದ್ಯ ಸಿಎನ್ ಮಂಜುನಾಥ್ ಜೊತೆ ನೀಡಲಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Continue Reading

ಉಡುಪಿ

Udupi News: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು

Udupi news: ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು. ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್‌ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

VISTARANEWS.COM


on

car death udupi news
Koo

ಉಡುಪಿ: ಮಣಿಪಾಲ ಆಸ್ಪತ್ರೆ (Manipal Hospital) ಬಳಿ ಕಾರಿನ ಎಲ್ಲ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ (Death in Car) ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು (Udupi News) ಮೂಲದ ಆನಂದ (37) ಮೃತಪಟ್ಟವರು.

ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಒಳಗೆ ಮಲಗಿದ್ದರು.

ಕಾರಿನ ಎಲ್ಲ ಗ್ಲಾಸುಗಳನ್ನು ಏರಿಸಿಕೊಂಡು ಬಂದ್‌ ಮಾಡಿ ಮಲಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಇಲ್ಲ; ವೈದ್ಯರ ಮುಷ್ಕರಕ್ಕೆ ರಾಜ್ಯದ ಡಾಕ್ಟರ್‌ಗಳ ಸಾಥ್

ಬೆಂಗಳೂರು: ಕೋಲ್ಕತಾದಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವೈದ್ಯರು ನೀಡಿರುವ ದೇಶವ್ಯಾಪಿ ಪ್ರತಿಭಟನೆಗೆ ರಾಜ್ಯದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ ಸೂಚಿಸಿದ್ದಾರೆ. ಇಂದು ಬೆಳಗ್ಗೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳು (OPD) ಬಂದ್‌ ಆಗಿರಲಿವೆ.

ರಾಜಧಾನಿಯ ಫ್ರೀಡಂ ಪಾರ್ಕಿನಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ವೈದ್ಯರ ಪ್ರತಿಭಟನೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ 24 ಗಂಟೆಗಳ ಕಾಲ ಓಪಿಡಿ ಬಂದ್ ಮಾಡಿ ವೈದ್ಯ ಸಮೂಹ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಓಪಿಡಿ ಬಂದ್ ಇರಲಿದೆ.

ಪ್ರತಿಭಟನೆಗೆ ಸರ್ಕಾರಿ ವೈದ್ಯರು ಕೂಡ ಸಾಥ್ ಕೊಟ್ಟಿದ್ದಾರೆ. ಸರ್ಕಾರಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಣೆ ಮಾಡಲಿದ್ದಾರೆ. ಫ್ರೀಡಂ ಪಾರ್ಕಿನಲ್ಲಿ ಇಂದು ಖಾಸಗಿ ಆಸ್ಪತ್ರೆಯ ವೈದ್ಯರು ಸೇರಿದಂತೆ ಹಲವು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಪ್ರತಿಭಟನೆಗೆ ಸಂಸದ ಹಾಗೂ ಖ್ಯಾತ ವೈದ್ಯ ಸಿಎನ್ ಮಂಜುನಾಥ್ ಜೊತೆ ನೀಡಲಿದ್ದಾರೆ.

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ

ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲು ಭಾರತೀಯ ವೈದ್ಯಕೀಯ ಸಂಘವು ಆ.17ರಂದು ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ (Doctors Protest) ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪತ್ರ ಬರೆದಿದೆ. ವೈದ್ಯಾಧಿಕಾರಿಗಳು ದಿನದ 24/7 ಗಂಟೆ ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಹಾಗೂ ಕೋವಿಡ್ -19 ನಂತಹ ಸಾಂಕ್ರಾಮಿಕ ರೋಗವು ಇಡೀ ಪ್ರಪಂಚವನ್ನೇ ಬಾಧಿಸಿದ ಸಂದರ್ಭದಲ್ಲಿ ವೈದ್ಯರು ಹಗಲಿರುಳು ಎನ್ನದೇ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿದ್ದರು.

ಆದರೆ ಆ.9 ರಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಘೋರ ಅಪರಾಧವಾಗಿದ್ದು, ಇದು ಕಾನೂನಿನ ವೈಫಲ್ಯವನ್ನು ಎತ್ತಿ ಹಿಡಿಯುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರ ಮನೋಸ್ಥೈರ್ಯವನ್ನು ಕುಗ್ಗುವಂತೆ ಮಾಡಿದ್ದು, ಇದನ್ನು ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Continue Reading

ಕ್ರೈಂ

Viral Video: ಕಬ್ಬನ್‌ ಪಾರ್ಕ್‌ನಲ್ಲಿ ಕಾಮುಕ! ಚಪಲ ಚೆನ್ನಿಗರಾಯ ವೃದ್ಧನಿಂದ ಸ್ತ್ರೀಯರ ಎದುರು ಹಸ್ತಮೈಥುನ

Viral Video: ವೈರಲ್‌ ಆಗಿರುವ ಈ ವಿಡಿಯೋದಲ್ಲಿ ವೃದ್ಧ ಮರದಡಿ ಕುಳಿತಿದ್ದು, ಯಾರೂ ತನ್ನನ್ನು ನೋಡುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡು ಹಸ್ತಮೈಥುನ ಮಾಡಿಕೊಳ್ಳುತ್ತಾನೆ. ನಂತರ ಆತನನ್ನು ಮಹಿಳೆಯೊಬ್ಬರು ಖಡಕ್ಕಾಗಿ ಪ್ರಶ್ನಿಸಿದ್ದು, ವೃದ್ಧ ಇದರಿಂದ ಗಾಬರಿಯಾಗಿ ಎದ್ದು ಅಲ್ಲಿಂದ ಓಡಿಹೋಗುತ್ತಿದ್ದಾನೆ.

VISTARANEWS.COM


on

viral video cubbon park
Koo

ಬೆಂಗಳೂರು: ರಾಜಧಾನಿಯ ಹೃದಯ ಭಾಗದಲ್ಲಿರುವ ಕಬ್ಬನ್‌ ಪಾರ್ಕ್‌ (Cubbon Park) ಕೂಡ ಕಾಮುಕರಿಂದ, ಪೋಲಿಗಳಿಂದ ಹೊರತಾಗಿಲ್ಲ ಎಂಬುದು ರುಜುವಾತಾಗಿದೆ. ಬೆಂಗಳೂರಿನ ವಿಡಿಯೋ ಒಂದು ವೈರಲ್ (Viral video) ಆಗಿದೆ. ಅದರಲ್ಲಿ, ಕಬ್ಬನ್ ಪಾರ್ಕ್‌ನಲ್ಲಿ ಮಹಿಳೆಯರ ಬಳಿ ಸುಳಿದಾಡಿ ಹಸ್ತಮೈಥುನ (Misbehave) ಮಾಡಿಕೊಳ್ಳುತ್ತಿದ್ದ ವೃದ್ಧನೊಬ್ಬ ರೆಡ್‌ ಹ್ಯಾಂಡಾಗಿ (Bangalore Crime News) ಸಿಕ್ಕಿಬಿದ್ದಿದ್ದಾನೆ.

ವೈರಲ್‌ ಆಗಿರುವ ಈ ವಿಡಿಯೋದಲ್ಲಿ ವೃದ್ಧ ಮರದಡಿ ಕುಳಿತಿದ್ದು, ಯಾರೂ ತನ್ನನ್ನು ನೋಡುತ್ತಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಂಡು ಹಸ್ತಮೈಥುನ ಮಾಡಿಕೊಳ್ಳುತ್ತಾನೆ. ನಂತರ ಆತನನ್ನು ಮಹಿಳೆಯೊಬ್ಬರು ಖಡಕ್ಕಾಗಿ ಪ್ರಶ್ನಿಸಿದ್ದು, ವೃದ್ಧ ಇದರಿಂದ ಗಾಬರಿಯಾಗಿ ಎದ್ದು ಅಲ್ಲಿಂದ ಓಡಿಹೋಗುತ್ತಿದ್ದಾನೆ. ಆರಂಭದಲ್ಲಿ ಆತನ ಮುಖವನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ಈತ ಕಬ್ಬನ್ ಪಾರ್ಕ್‌ನಲ್ಲಿ ಮಹಿಳೆಯರು ಕುಳಿತುಕೊಳ್ಳುವ ಜಾಗಕ್ಕೆ ಬಂದು ಹಸ್ತಮೈಥುನ ಮಾಡಿಕೊಳ್ಳುತ್ತಾನೆ ಎಂದು ಅನೇಕ ಮಹಿಳೆಯರು ಆರೋಪ ಮಾಡಿದ್ದಾರೆ ಎಂದು ವಿಡಿಯೋಗೆ ಶೀರ್ಷಿಕೆ ಹಾಕಲಾಗಿದೆ. ಏನು ಮಾಡ್ತಿದ್ದೀ ಎಂದು ಮಹಿಳೆ ಆತನನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಆತ ಏನು ಎನ್ನುತ್ತಾನೆ. ಸೆಕ್ಯುರಿಟಿ ಕರೆಯಬೇಕಾ ಎಂದು ಮಹಿಳೆ ಕೇಳ್ತಿರೋದನ್ನು ನೀವು ವಿಡಿಯೋದಲ್ಲಿ ನೋಡಬಹುದು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಅದಕ್ಕೆ ಬೆಂಗಳೂರು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಯಾವಾಗ ನಡೆದಿದ್ದು ಎಂಬುದು ಸ್ಪಷ್ಟವಾಗಿಲ್ಲ.

ಸಿಟಿಯಲ್ಲಿ ಕದ್ದು ಕಾಡಿನಲ್ಲಿರುತ್ತಿದ್ದ ನಟೋರಿಯಸ್ ಕಳ್ಳ; 50ಕ್ಕೂ ಹೆಚ್ಚು ಕೇಸ್‌ಗಳ ಆರೋಪಿ ಅರೆಸ್ಟ್!

ಬೆಂಗಳೂರು: ನಗರದಲ್ಲಿ ಕಳ್ಳತನ ಮಾಡಿ, ಕಾಡನ್ನು ವಾಸಸ್ಥಾನ ಮಾಡಿಕೊಂಡಿದ್ದ ನಟೋರಿಯಸ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಆಭರಣಗಳೊಂದಿಗೆ ಕಾಡಿಗೆ ಎಸ್ಕೇಪ್ ಆಗುತ್ತಿದ್ದ ಆಸಾಮಿ, ಪೊಲೀಸರು ಬೆನ್ನತ್ತಿದಾಗ ಚಾಲೆಂಜ್ ಮಾಡಿ ಪರಾರಿಯಾಗುತ್ತಿದ್ದ. ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ (Notorious Thief) ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಗಿರಿನಗರ ಪೊಲೀಸರಿಂದ ನೆಲಮಂಗಲದ ಸೋಲೂರು ಮೂಲದ ಆರೋಪಿ ನರಸಿಂಹ ರೆಡ್ಡಿ ಬಂಧನವಾಗಿದೆ. ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆಸಾಮಿ, ಇತ್ತೀಚಿಗೆ ಗಿರಿನಗರ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿದ್ದ. ಕದ್ದ ಆಭರಣ ಸಮೇತ ಕಾಡಿಗೆ ಎಸ್ಕೇಪ್ ಆಗಿದ್ದ.

ನೆಲಮಂಗಲ ಬಳಿಯ ಗುಡೇಮಾರನಹಳ್ಳಿ ಹಾಗೂ ಕೃಷ್ಣಗಿರಿಯ ಫಾರೆಸ್ಟ್‌ನಲ್ಲಿರುತ್ತಿದ್ದ ಈತ, ಕಾಡಿನ ಬಂಡೆಗಳ ಮೇಲೆ ಮಲಗುತ್ತಿದ್ದ. ಪೊಲೀಸರು ಬೆನ್ನತ್ತಿದರೆ ಚಾಲೆಂಜ್ ಮಾಡಿ ಪರಾರಿಯಾಗುತ್ತಿದ್ದ. ಪೊಲೀಸರು ನನ್ನ ಹಿಂದೆ ಬರಬೇಕು, ಬೆನ್ನತ್ತಬೇಕು ಅಂತ ಚಾಲೆಂಜ್ ಮಾಡಿ ಹೋಗುತ್ತಿದ್ದ. ಹೀಗೆ ಗುಡೇಮಾರನಹಳ್ಳಿ ಕಾಡಿನಲ್ಲಿದ್ದ ವೇಳೆ ಆರೋಪಿಯನ್ನು ಬಂಧಿಸಲಾಗಿದೆ. ಆತನಿಂದ 70 ಲಕ್ಷ ಮೌಲ್ಯದ ಒಂದು ಕೆ.ಜಿ. ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ | False Case: ಪಿಎಸ್ಐ ಮನೆಯಲ್ಲಿ 12 ಲಕ್ಷ ಕಳವು ಕೇಸ್; ತನಿಖೆ ವೇಳೆ ಬಯಲಾಯ್ತು ನಕಲಿ ದೂರಿನ‌ ಅಸಲಿ ಕತೆ!

Continue Reading

ದೇಶ

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Kolkata Doctor murder case: ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಖಾಂತ ಮಜುಮ್ದಾರ್‌, ಬಿಜೆಪಿ ನಾಯಕ ಅಗ್ನಿಮಿತ್ರ ಪೌಲ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಕೊನೆಗೆ ಸುಖಾಂತ ಮಜುಮ್ದಾರ್‌ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರು ವಾಹನ ಹರಿಸಲು ಯತ್ನಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಕೋಲ್ಕತಾದಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ವಿರುದ್ಧ ಭುಗಿಲೆದ್ದಿರುವ ವೈದ್ಯರ ಸಮೂಹದ ಆಕ್ರೋಶ, ಇದೀಗ ರಾಜ್ಯ ಸರಕಾರದ ವಿರುದ್ಧ ತಿರುಗಿದೆ. ವೈದ್ಯರ ಪ್ರತಿಭಟನೆಗೆ ಇದೀಗ ಬಿಜೆಪಿ ಮುಖಂಡರು(BJP Leaders) ಮತ್ತು ಕಾರ್ಯಕರ್ತರು ಕೈ ಜೋಡಿಸಿದ್ದು, ಮಮತಾ ಬ್ಯಾನರ್ಜಿ(Mamata Banerjee) ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಖಾಂತ ಮಜುಮ್ದಾರ್‌, ಬಿಜೆಪಿ ನಾಯಕ ಅಗ್ನಿಮಿತ್ರ ಪೌಲ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಕೊನೆಗೆ ಸುಖಾಂತ ಮಜುಮ್ದಾರ್‌ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರು ವಾಹನ ಹರಿಸಲು ಯತ್ನಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

ಕೇಂದ್ರ ಸಚಿವ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಬಂಧನದ ಕುರಿತು ಬಿಜೆಪಿ ಮುಖಂಡ ಅಗ್ನಿಮಿತ್ರ ಪಾಲ್, “ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ, ಇಂದು ಕೇಂದ್ರ ಸಚಿವರನ್ನು ಹತ್ಯೆ ಮಾಡಿದ ಸಹೋದರಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಬಂಧಿಸಲಾಗಿದೆ. ಇಂದು ಮುಖ್ಯಮಂತ್ರಿ ನಾಟಕ ಮಾಡುತ್ತಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

Continue Reading
Advertisement
Subramanian Swamy
ದೇಶ1 min ago

Subramanian Swamy: ರಾಹುಲ್‌ ಗಾಂಧಿಯ ಭಾರತೀಯ ಪೌರತ್ವ ರದ್ದುಗೊಳಿಸಿ; ಹೈಕೋರ್ಟ್‌ಗೆ ಮೊರೆ ಹೋದ ಸುಬ್ರಮಣಿಯನ್ ಸ್ವಾಮಿ

Pro Kabaddi 2024
ಕ್ರೀಡೆ6 mins ago

Pro Kabaddi 2024: ಈ ಬಾರಿ ಬೆಂಗಳೂರು ಬುಲ್ಸ್​ ತಂಡ ಹೇಗಿದೆ?

Stree 2 Box Office Day 2 Shraddha Kapoor-Rajkummar Rao Film Creates History
ಬಾಲಿವುಡ್15 mins ago

Stree 2 Box Office: ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಎರಡೇ ದಿನದಲ್ಲಿ 100 ಕೋಟಿ ರೂ. ಭರ್ಜರಿ ಕಲೆಕ್ಷನ್‌!

tipper road accident
ಬೆಂಗಳೂರು19 mins ago

Road Accident: ಟಿಪ್ಪರ್‌ ರೂಪದಲ್ಲಿ ಬಂದ ಯಮ, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳು ನಜ್ಜುಗುಜ್ಜು

car death udupi news
ಉಡುಪಿ44 mins ago

Udupi News: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು

Robin Uthappa
ಕ್ರೀಡೆ50 mins ago

Robin Uthappa: ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್; ಜಾಮೀನು ರಹಿತ ವಾರೆಂಟ್​ಗೆ ಹೈಕೋರ್ಟ್ ತಡೆ

Kolkata Doctor Murder Case
ದೇಶ54 mins ago

Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Kannada New Movie Langoti man trailer Out d k shivakumar invite
ಸ್ಯಾಂಡಲ್ ವುಡ್1 hour ago

Kannada New Movie: ಆಗಸ್ಟ್ 19 ರಂದು ʻಲಂಗೋಟಿ ಮ್ಯಾನ್ʼ ಚಿತ್ರದ ಟ್ರೈಲರ್‌ ಬಿಡುಗಡೆ ಸಮಾರಂಭ; ಡಿ.ಕೆ.ಶಿವಕುಮಾರ್‌ಗೆ ಆಹ್ವಾನ ಕೊಟ್ಟ ಚಿತ್ರತಂಡ!

doctors strike opd close
ಕರ್ನಾಟಕ1 hour ago

Doctors Strike: ಗಮನಿಸಿ, ಇಂದು ಯಾವುದೇ ಆಸ್ಪತ್ರೆಯಲ್ಲಿ ಒಪಿಡಿ ಇಲ್ಲ

Raksha Bandhan 2024
Latest1 hour ago

Raksha Bandhan 2024: ರಕ್ಷಾ ಬಂಧನದ ಹಿನ್ನೆಲೆ ಏನು? ರಾಖಿ ಕಟ್ಟಲು ಯಾವುದು ಶುಭ ಮುಹೂರ್ತ?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌