Atiq Ahmed Shot Dead: ಮಾಧ್ಯಮದವರಂತೆ ಬಂದ ಕೊಲೆಗಾರರು, ಅತೀಕ್‌ ಅಹ್ಮದ್‌ ಶೂಟರ್‌ಗಳ ಚಿತ್ರಗಳು ಇಲ್ಲಿವೆ - Vistara News

ಕ್ರೈಂ

Atiq Ahmed Shot Dead: ಮಾಧ್ಯಮದವರಂತೆ ಬಂದ ಕೊಲೆಗಾರರು, ಅತೀಕ್‌ ಅಹ್ಮದ್‌ ಶೂಟರ್‌ಗಳ ಚಿತ್ರಗಳು ಇಲ್ಲಿವೆ

ದಾಳಿಯ ಸಂದರ್ಭದಲ್ಲಿ ಶೂಟರ್‌ಗಳು ʼಜೈ ಶ್ರೀ ರಾಮ್‌ʼ ಎಂದು ಕೂಗಿದ್ದು ಕೇಳಿಬಂದಿತ್ತು. ಆದರೆ ಇದು ನೋಟಕರ ದಾರಿ ತಪ್ಪಿಸುವ ತಂತ್ರವಾಗಿರುವಂತಿದ್ದು, ಅಪರಾಧಿಗಳು ಸ್ಪಷ್ಟ ಅಪರಾಧಿ ಹಿನ್ನೆಲೆಯವರಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

VISTARANEWS.COM


on

Atiq Ahmed Shot Dead
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ರನ್ನು ಪೊಲೀಸರ ಸಮ್ಮುಖದಲ್ಲಿಯೇ ಗುಂಡಿಕ್ಕಿ ಕೊಂದ ಶೂಟರ್‌ಗಳು ಮಾಧ್ಯಮದವರಂತೆ ಸೋಗು ಹಾಕಿಕೊಂಡು ಆಗಮಿಸಿದ್ದರು ಎಂದು ಗೊತ್ತಾಗಿದೆ. ದೃಶ್ಯ ಮಾಧ್ಯಮದ ವರದಿಗಾರರಂತೆ ವಿಡಿಯೋ ಕ್ಯಾಮೆರಾ ಇಟ್ಟುಕೊಂಡು ಬಂದಿದ್ದ ಇವರು, ಪೊಲೀಸ್‌ ಕಸ್ಟಡಿಯಲ್ಲಿದ್ದ ಅತೀಕ್‌ ಅಹ್ಮದ್‌ ಹಾಗೂ ಅಶ್ರಫ್‌ರ ಮೇಲೆ ಹಿಂದಿನಿಂದ ಸತತವಾಗಿ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಇವೆಲ್ಲವೂ ಪೊಲೀಸರು ಹಾಗೂ ಮಾಧ್ಯಮ ಪ್ರತಿನಿಧಿಗಳ ಸಮ್ಮುಖದಲ್ಲಿಯೇ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಈ ಮೂವರನ್ನು ಲೊವ್ಲೇಶ್‌ ತಿವಾರಿ, ಅರುಣ್‌ ಮೌರ್ಯ ಹಾಗೂ ಸನ್ನಿ ಎಂದು ಗುರುತಿಸಲಾಗಿದೆ. ಮೂವರನ್ನೂ ಪ್ರತ್ಯೇಕವಾಗಿಡಲಾಗಿದ್ದು, ಪ್ರತ್ಯೇಕವಾಗಿ ಹಿರಿಯ ಅಧಿಕಾರಿಗಳಿಂದ ವಿಚಾರಣೆಗೆ ಒಳಪಡಿಸಲಾಗಿದೆ. ಸದ್ಯ ಈ ಪ್ರಕರಣದ ಹಿಂದಿನ ಸೂತ್ರಧಾರಿಗಳು ಯಾರು ಎಂಬುದು ಗೊತ್ತಾಗಿಲ್ಲವಾದರೂ, ಎದುರಾಳಿ ಗ್ಯಾಂಗ್‌ನವರ ಕೃತ್ಯ ಇದೆಂದು ಶಂಕಿಸಲಾಗಿದೆ.

Atiq Ahmed Shot Dead

ಅಪರಾಧ ನಡೆದ ರೀತಿ ನೋಡಿದರೆ ಇವರು ಶಾರ್ಪ್‌ ಶೂಟರ್‌ಗಳು ಎಂಬುದು ಗೊತ್ತಾಗುವಂತಿದೆ. ಪೊಲೀಸರ ಸಮ್ಮುಖದಲ್ಲಿಯೇ ಮೀಡಿಯಾದವರಂತೆ ವೇಷ ಮರೆಸಿಕೊಂಡು ಬಂದು ನಿಖರ ದಾಳಿ ನಡೆಸಿರುವುದು ನೋಡಿದರೆ ಇವರು ಅಪರಾಧ ಜಗತ್ತಿಗೆ ಹೊಸಬರಲ್ಲ ಎಂದು ತಿಳಿದುಬರುವಂತಿದೆ. ಅತೀಕ್‌ ಅಹ್ಮದ್‌ ಆಗಮನಕ್ಕೆ ಅರ್ಧ ಗಂಟೆಗೂ ಮುನ್ನ ದ್ವಿಚಕ್ರ ವಾಹನಗಳಲ್ಲಿ ಬಂದು ಕಾದಿದ್ದ ಇವರು ಪಿಸ್ತೂಲ್‌ಗಳ ಮೂಲಕ 14 ಸುತ್ತು ಗುಂಡು ಹಾರಿಸಿದ್ದಾರೆ.

ಅತೀಕ್‌ ಅಹ್ಮದ್‌ಗೆ ಹೆಚ್ಚಿನ ಗುಂಡುಗಳು ಬಿದ್ದಿವೆ. ದಾಳಿಕೋರರು ಸಾಕಷ್ಟು ಮದ್ದುಗುಂಡು ಹೊಂದಿಯೇ ಬಂದಿದ್ದು, ಯಾವ ಕಾರಣಕ್ಕೂ ಆತ ತಪ್ಪಿಸಿಕೊಳ್ಳಬಾರದು ಎಂದು ನಿರ್ಧರಿಸಿಯೇ ಬಂದಿದ್ದರು. ಅತೀಕ್‌ ಹಣೆಗೆ ಬಹಳ ಹತ್ತಿರದಿಂದ ಬಿದ್ದ ಮೊದಲ ಗುಂಡೇ ನಿಖರವಾಗಿದ್ದು ಆತನ ಪ್ರಾಣ ತೆಗೆದಿತ್ತು. ಆದರೆ ನಂತರವೂ ದಾಳಿಕೋರರು ಗುಂಡಿನ ಮಳೆಗರೆದಿದ್ದಾರೆ. ಇದು ಹಳೆಯ ದ್ವೇಷ ಹಾಗೂ ನುರಿತ ಅಪರಾಧ ಹಿನ್ನೆಲೆಗಳನ್ನು ಸೂಚಿಸುವಂತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಶೂಟರ್‌ಗಳು ʼಜೈ ಶ್ರೀ ರಾಮ್‌ʼ ಎಂದು ಕೂಗಿದ್ದು ಕೇಳಿಬಂದಿತ್ತು. ಆದರೆ ಇದು ನೋಟಕರ ದಾರಿ ತಪ್ಪಿಸುವ ತಂತ್ರವಾಗಿರುವಂತಿದ್ದು, ಅಪರಾಧಿಗಳು ಸ್ಪಷ್ಟ ಅಪರಾಧಿ ಹಿನ್ನೆಲೆಯವರಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ನಿನ್ನ ರಾತ್ರಿ ಅತೀಕ್‌ ಅಹ್ಮದ್‌ ಹಾಗೂ ಅಶ್ರಫ್‌ ಅಹ್ಮದ್‌ರ ವೈದ್ಯಕೀಯ ತಪಾಸಣೆಗಾಗಿ ಪೊಲೀಸರು ವಾಹನದಲ್ಲಿ ಕರೆದುಕೊಂಡು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದರು. ಪ್ರಯಾಗ್‌ರಾಜ್‌ ಮೆಡಿಕಲ್‌ ಕಾಲೇಜಿಗೆ ವಾಹನ ತೆರಳುತ್ತಲೇ ಅತೀಕ್‌ ಹಾಗೂ ಅಶ್ರಫ್‌ ವಾಹನದಿಂದ ಕೆಳಗಿಳಿದು ಮಾಧ್ಯಮಗಳ ಜತೆ ಮಾತನಾಡುತ್ತ ನಡೆಯುತ್ತಿದ್ದಾಗ ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ: Atiq Ahmed Shot Dead: ರಾಜಕಾರಣ ಬಿಟ್ಟು ಗ್ಯಾಂಗ್‌ಸ್ಟರ್‌ ಆದ ಅತೀಕ್‌, ಕುಟುಂಬವನ್ನು ಬಲಿ ಕೊಟ್ಟಿದ್ದೇ ದುರಂತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಈ ನಡುವೆ ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದ್ದು, ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

VISTARANEWS.COM


on

Prajwal Revanna Case Prajwal never boarded a flight from Germany
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್‌ ಟೇಕ್‌ ಆಫ್‌ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್‌ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.

ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.

ಬುಕ್ ಮಾಡಿದ್ದ ಲುಫ್ತಾನ್ಸಾ ಫ್ಲೈಟ್‌ ಹತ್ತದ ಪ್ರಜ್ವಲ್ ರೇವಣ್ಣ!

ಲುಫ್ತಾನ್ಸಾ ಏರ್‌ಲೈನ್ಸ್ ಫ್ಲೈಟ್ LH764 ರಲ್ಲಿ ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್‌ ಅನ್ನು ಪ್ರಜ್ವಲ್‌ ರೇವಣ್ಣ ಬುಕ್ ಮಾಡಿದ್ದರು. ಈ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಸಹ ಇದ್ದವು. ಆದರೆ, ಎಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ಕಳ್ಳಾಟ ಆಡಲು ಶುರು ಮಾಡಿದರೋ, ಅದೀಗ ಎಸ್‌ಐಟಿ ತಂಡವನ್ನು ಗರಂ ಆಗಿಸಿದೆ. ಒಂದು ಕಡೆ ಕಾನೂನಿಗೆ ತಲೆಬಾಗುತ್ತೇನೆ ಎಂದು ಪ್ರಜ್ವಲ್ ಅಪ್ಪ ಎಚ್.ಡಿ. ರೇವಣ್ಣ ಹೇಳುತ್ತಾರೆ. ಆದರೆ, ಇನ್ನೊಂದು ಕಡೆ ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿತ್ತು.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ಬುಧವಾರ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು. ಆದರೆ, ಟಿಕೆಟ್‌ ಬುಕ್‌ ಮಾಡಿದ್ದ ಪ್ರಜ್ವಲ್‌ ಮಾತ್ರ ಇತ್ತ ಸುಳಿಯಲೇ ಇಲ್ಲ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎಂದೇ ಭಾವಿಸಲಾಗಿತ್ತು.

Continue Reading

ಕರ್ನಾಟಕ

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

B C Mylarappa: ಅಕ್ರಮ ಭೂ ವ್ಯವಹಾರ ಆರೋಪದಲ್ಲಿ ಬಂಧನವಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್‌ ಬಿ.ಸಿ.ಮೈಲಾರಪ್ಪ ಅವರನ್ನು ಅಮಾನತು ಮಾಡಲು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

VISTARANEWS.COM


on

B C Mylarappa
Koo

ಬೆಂಗಳೂರು: ಅಕ್ರಮ ಭೂ ವ್ಯವಹಾರ ಆರೋಪದಲ್ಲಿ ಬಂಧನವಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರೊಫೆಸರ್‌ ಬಿ.ಸಿ.ಮೈಲಾರಪ್ಪ (B C Mylarappa) ಅವರನ್ನು ಅಮಾನತು ಮಾಡುವಂತೆ ಬೆಂಗಳೂರು ವಿವಿ ಕುಲಸಚಿವರಿಗೆ ಉನ್ನತ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.

ಹೈದರಬಾದ್‌ನ ಜ್ಯುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಕೆ. ಶಶಿಧರ್ ರೆಡ್ಡಿ ಎಂಬುವರು 2023ರ ಫೆ. 15ರಂದು ನೀಡಿದ್ದ ದೂರಿನ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು, 2024ರ ಮಾ.22ರಂದು ಮೈಲಾರಪ್ಪ ಸೇರಿ ಪ್ರಕರಣದ ಇತರ ಆರೋಪಿಗಳಾದ ಕೊರಟಗೆರೆ ಕೃಷ್ಣಪ್ರಸಾದ್, ಆರ್. ಜಗನ್ನಾಥ್, ಸುರೇಂದರ್ ರೆಡ್ಡಿ ಅವರನ್ನು ಬಂಧಿಸಿದ್ದರು.

ಮೈಲಾರಪ್ಪ ಅವರ ಬಂಧನದ ಬಗ್ಗೆ ತೆಲಂಗಾಣ ಪೊಲೀಸರು ಬೆಂಗಳೂರು ವಿವಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಂತರ ನೀತಿ ಸಂಹಿತೆ ಜಾರಿಯಾದ ಕಾರಣ ವಿವಿಯ ಸಿಂಡಿಕೇಟ್‌ ಸಭೆ ಕರೆದು ತೀರ್ಮಾನ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಅಭಿಪ್ರಾಯ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯನ್ನು ಕೋರಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಪತ್ರ ಬರೆದಿದ್ದು, ಮೈಲಾರಪ್ಪ ಅವರು 48 ಗಂಟೆಗೂ ಅಧಿಕ ಕಾಲ ಕಾರಾಗೃಹ ವಾಸದಲ್ಲಿದ್ದುದರಿಂದ ಬಂಧಿಸಲಾದ ದಿನಾಂಕದಿಂದ (ಮಾ.22) ಪೂರ್ವಾನ್ವಯ ಆಗುವಂತೆ ಅಮಾನತಿನಲ್ಲಿಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಏನಿದು ಪ್ರಕರಣ?

ಶಶಿಧರ್‌ ರೆಡ್ಡಿ ತಮ್ಮ ಒಡೆತನದ ಶ್ರಿವೆನ್‌ ಇನ್‌ಫ್ರಾ ಹೆಸರಿನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಮುಂದಾಗಿದ್ದರು. ಅವರಿಗೆ ಯಲಹಂಕದ ಹೊಸಹಳ್ಳಿಯಲ್ಲಿ ಕೃಷ್ಣಪ್ರಸಾದ್ ಎಂಬುವವರಿಗೆ ಸೇರಿದ ಜಮೀನು ಕೊಡಿಸುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 5 ಕೋಟಿ ರೂ. ಮುಂಗಡ ಹಣವನ್ನು ಆರೋಪಿಗಳು ಪಡೆದಿದ್ದರು. ಆ ಜಮೀನು ಕೃಷ್ಣಪ್ರಸಾದ್ ಅವರಿಗೆ ಸೇರಿಲ್ಲ ಎಂದು ತಿಳಿದ ಹಿನ್ನೆಲೆಯಲ್ಲಿ ಮುಂಗಡ ಹಣ ವಾಪಸ್ ನೀಡುವಂತೆ ಶಶಿಧರ್ ರೆಡ್ಡಿ ಕೇಳಿದ್ದರು. ಆಗ ಪ್ರೊ. ಮೈಲಾರಪ್ಪ ಕರೆ ಮಾಡಿ ತನಗೆ ಸರ್ಕಾರದ ಮಟ್ಟದಲ್ಲಿ ಉತ್ತಮ ಸಂಪರ್ಕವಿದೆ, ಹಣಕ್ಕಾಗಿ ಆರೋಪಿಗಳ ಮೇಲೆ ಒತ್ತಡ ಹೇರಬೇಡಿ ಎಂದು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಆ ಬಳಿಕ ಈ ಜಮೀನನ್ನು ಸರ್ಕಾರವು ವೈಎಎಸ್ ಚಾರಿಟಬಲ್ ಟ್ರಸ್ಟ್ ಮತ್ತು ಕೊಡವ ಸಮಾಜಕ್ಕೆ ಹಂಚಿಕೆ ಮಾಡಿರುವುದು ಶಶಿಧರ್ ರೆಡ್ಡಿ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಣ ವಾಪಸ್ ನೀಡುವಂತೆ ಕೇಳಿದಾಗ ಬೆದರಿಕೆ ಮತ್ತು ನಿರ್ಲಕ್ಷ್ಯ ತೋರಿದ್ದಾರೆ ಎಂದು ಶಶಿಧರ್ ರೆಡ್ಡಿ ತಮ್ಮ ದೂರಿನಲ್ಲಿ ತಿಳಿಸಿದ್ದರು.

Continue Reading

ಕೋಲಾರ

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Blackmail Case: ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

VISTARANEWS.COM


on

blackmail case kgf
Koo

ಕೋಲಾರ: ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ (gram Panchayat) ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು (romance) ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ (Blackmail Case) ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಬೇತಮಂಗಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೋದಾಗ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆಯಿತು. ತನ್ನ ಮಗನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗದಂತೆ ಆರೋಪಿಯ ತಾಯಿ ಪೊಲೀಸರ ಜೀಪ್‌ ಮುಂದೆ ಅಡ್ಡಲಾಗಿ ಮಲಗಿ ತಡೆ ಒಡ್ಡಿದರು. ಕೊನೆಗೆ ಪೊಲೀಸರು ಅವರನ್ನು ಪಕ್ಕಕ್ಕೆ ಸರಿಸಿ ಆರೋಪಿಯನ್ನು ಕರೆದೊಯ್ದರು.

ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಮಸಾಗರ ಗ್ರಾಮ ಪಂಚಾಯಿತಿಯ 14 ಸದಸ್ಯರು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಹರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆಯನ್ನು ಸೇವೆಯಿಂದ ಅಮಾನತು ಮಾಡಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿರುವುದಾಗಿ ಹರ್ತಿ ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸೈಬರ್ ಇನ್‌ಸ್ಪೆಕ್ಟರ್ ಲಕ್ಷ್ಮಿನಾರಾಯಣ ನಡೆಸುತ್ತಿದ್ದಾರೆ.

ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

ಪಂಚಾಯತಿ ಸಿಬ್ಬಂದಿಯ ಈ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಹಾಗೂ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿವೆ. ಆರೋಪಿ ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿರೋಧಿಸಿದಾಗ, ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ. ತನಗೆ ಮುತ್ತಿಡುವುದಕ್ಕೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ. ನಂತರದ ದಿನಗಳಲ್ಲಿ ಲೈಂಗಿಕವಾಗಿ ಸಹಕರಿಸುವಂತೆ, ಇಲ್ಲದಿದ್ದರೆ ಕೆಲಸದಿಂದ ತೆಗೆದುಹಾಕುತ್ತೇನೆ ಎಂದು ಬೆದರಿಸಿದ್ದಾನೆ. ಮುತ್ತು ಕೊಡುವ ಕ್ಷಣಗಳ ಫೋಟೋ ವೈರಲ್‌ ಮಾಡಡುತ್ತೇನೆ ಎಂದು ಬೆದರಿಸಿದ್ದಾನೆ. ಆತನ ಕಿರುಕುಳದಿಂದ ನನ್ನ ಸಂಸಾರ ಹಾಗೂ ಜೀವನಕ್ಕೆ ಮುಳುವಾಗಿದೆ. ಈಗ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Continue Reading

ರಾಜಕೀಯ

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Prajwal Revanna Case: ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಸಾಹಿತಿಗಳು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ ಎಂದೂ ಹೇಳಿದ್ದಾರೆ.

VISTARANEWS.COM


on

Prajwal Revanna Case Can women trust your government Writers open letter to Siddaramaiah
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿಗಳು, ಮಹಿಳಾ ಸಂಘಟನೆಗಳವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕೇಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಈ ಸಂಬಂಧ 16 ಬೇಡಿಕೆಗಳನ್ನು ಮುಂದಿಡಲಾಗಿದೆ.

ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿಗಳಾದ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಜನರಿಂದ ಈ ಪತ್ರವನ್ನು ಬರೆಯಲಾಗಿದೆ. ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ ಎಂದು ಬರೆದುಕೊಳ್ಳಲಾಗಿದೆ.

ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಕುಟುಂಬದ ಬಗ್ಗೆ ಬೇಸರ

ಪ್ರಜಲ್ ರೇವಣ್ಣ ಅವರ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ, ತಮ್ಮ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲ ಹುದ್ದೆಗಳನ್ನು, ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬವು ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ಧಿರಿಸು ಧರಿಸಿಕೊಂಡಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳು ಆರೋಪಿಯನ್ನು ಸ್ವತಂತ್ರವಾಗಿ ಬಿಡಲಾಗಿದೆ. ಆತನ ಮೇಲೆ ಕಣ್ಗಾವಲನ್ನು ಹಾಕಿಲ್ಲ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ, ವಿಡಿಯೊಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

ಸರ್ಕಾರಕ್ಕೆ ಸಲ್ಲಿಸಿದ ಪ್ರಮುಖ ಬೇಡಿಕೆಗಳು ಏನು?

  • ಆರೋಪಿಯನ್ನು ಕೂಡಲೇ ಬಂಧಿಸಬೇಕು,ಐಟಿ, ಐಪಿಸಿ ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ಹೂಡಬೇಕು
  • ಸಂತ್ರಸ್ತ‌ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು
  • ತನಿಖೆ ಪೂರ್ಣಗೊಳ್ಳುವವರೆಗೆ ಎಚ್.ಡಿ. ರೇವಣ್ಣ ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು
  • ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡವಳಿಕೆಗೆ ಕಡಿವಾಣ ಹಾಕಬೇಕು
  • ಎಸ್‌ಐಟಿ ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು
  • ಪ್ರಜ್ವಲ್ ಚಾಲಕ ಕಾರ್ತಿಕ್ ನನ್ನ ಕೂಡಲೇ ಬಂಧಿಸಬೇಕು
  • ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು
  • ವಿಡಿಯೊಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು
  • ಹಳೇ ವಿಡಿಯೊ ಎಂದು ರೇವಣ್ಣ ಹೇಳಿದ್ದಾರೆ, ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲ ಸದಸ್ಯರನ್ನು Accomplice ಗಳೆಂದು ಪರಿಗಣಿಸಿ
  • ಅವರ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ದಮೆ ಹೂಡಬೇಕು
  • ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ
  • ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು
Continue Reading
Advertisement
Kannada New Movie swapna mantapa shooting compleated
ಸ್ಯಾಂಡಲ್ ವುಡ್4 mins ago

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

ಫ್ಯಾಷನ್4 mins ago

Star saree fashion: ಯುವತಿಯರನ್ನು ಸೆಳೆಯುತ್ತಿದೆ ನಟಿ ಭಾವನಾ ರಾವ್‌ ಸ್ಯಾಟೀನ್‌ ಸಿಲ್ಕ್‌ ಸೀರೆ

Google
ವಿದೇಶ18 mins ago

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Crazy MS Dhoni fan
ಕ್ರಿಕೆಟ್18 mins ago

Crazy MS Dhoni fan: 2100 ಕಿ.ಮೀ ದೂರ ಸೈಕಲ್​ ತುಳಿದು ದಿಲ್ಲಿಯಿಂದ ಚೆನ್ನೈಗೆ ಬಂದ ಧೋನಿ ಅಭಿಮಾನಿ; 23 ದಿನಗಳಲ್ಲಿ ಮಿಷನ್​ ಕಂಪ್ಲೀಟ್​

Money Guide
ಮನಿ-ಗೈಡ್20 mins ago

Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಬ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Prajwal Revanna Case Prajwal never boarded a flight from Germany
ಕ್ರೈಂ23 mins ago

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

B C Mylarappa
ಕರ್ನಾಟಕ25 mins ago

B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

Job Alert
ಉದ್ಯೋಗ27 mins ago

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

House of the Dragon season 2 new trailer hints at a bloody
ಸಿನಿಮಾ40 mins ago

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

Google Update
ತಂತ್ರಜ್ಞಾನ40 mins ago

Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202424 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌