Physical Abuse: ರಾಬರಿ ಎಂದು ದೂರು ಕೊಟ್ಟವನೇ ಕಾಮುಕ; ತಾನು ತೋಡಿದ ಹಳ್ಳಕ್ಕೆ ತಾನೇ ಬಿದ್ದ ಆಟೋ ಚಾಲಕ! - Vistara News

ಕ್ರೈಂ

Physical Abuse: ರಾಬರಿ ಎಂದು ದೂರು ಕೊಟ್ಟವನೇ ಕಾಮುಕ; ತಾನು ತೋಡಿದ ಹಳ್ಳಕ್ಕೆ ತಾನೇ ಬಿದ್ದ ಆಟೋ ಚಾಲಕ!

Physical Abuse: ಯುವತಿಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲು ಹೋಗಿ ಮಚ್ಚಿನೇಟು ತಿಂದ ಆಟೋ ಚಾಲಕ, ಪೊಲೀಸರಿಗೆ ದೂರು ನೀಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಹಲ್ಲೆ ಮಾಡಿದ ಯುವಕ ಕೂಡ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

VISTARANEWS.COM


on

Physical Abuse
ಆಟೋ ಚಾಲಕ ರಾಜು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಅಪರಿಚಿತ ಊರಿಗೆ ತೆರಳಬೇಕಾಗಿದ್ದರೆ ಎಷ್ಟು ಎಚ್ಚರಿಕೆದಿಂದ ಇರುತ್ತೇವೋ ಅಷ್ಟು ಒಳ್ಳೆಯದು‌. ಇಲ್ಲದಿದ್ದಲ್ಲಿ ಎಂತಹ ಅನಾಹುತ ಆಗ ಬಲ್ಲದು ಎಂಬುವುದಕ್ಕೆ ಈ ಘಟನೆ ಸಾಕ್ಷಿ‌. ಮನೆ ಬಿಟ್ಟು ಓಡಿ ಬಂದಿದ್ದ ಯುವಕ-ಯುವತಿಗೆ ಬಾಡಿಗೆ ಮನೆ ಹುಡುಕಿಕೊಡುತ್ತೇನೆ ಎಂದು ಹೇಳಿ, ಯುವತಿ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ಆಟೋ ಚಾಲಕ ಹಾಗೂ ಆತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಯುವಕ ಜೈಲು ಪಾಲಾಗಿದ್ದಾರೆ.

ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕ ರಾಜು ಹಾಗೂ ಹಲ್ಲೆ ಮಾಡಿದ ಯುವಕ ಮಹಮ್ಮದ್ ಅನ್ಸರ್ ಎಂಬುವರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಪಿಳ್ಳಗಾನಹಳ್ಳಿಯ ಕೃಷ್ಣಪ್ಪ ಲೇಔಟ್ ನಿವಾಸಿಯಾಗಿರುವ ಆಟೋ ಚಾಲಕ ರಾಜುವಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗಳಿದ್ದಾಳೆ‌. ಗಂಡು ಮಕ್ಕಳು ಆಟೋ ಓಡಿಸಿದರೆ ಮಗಳಿಗೆ ಮದುವೆ ಆಗಿದೆ. ಆದರೂ ಮಗಳ ವಯಸ್ಸಿನ ಹೆಣ್ಣು ಮಗಳ ಜತೆ ಸರಸವಾಡಲು ಹೋಗಿ ತಲೆಗೆ ಮಚ್ಚೇಟು ತಿಂದಿದ್ದಲ್ಲದೇ ಜೈಲು ಪಾಲಾಗಿದ್ದಾನೆ.

ಇದನ್ನೂ ಓದಿ | Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

ಇನ್ನು ಪರಾರಿಯಾಗಿದ್ದ ಜೋಡಿ ಈ ಬಗ್ಗೆ ದೂರು ನೀಡಿರಲಿಲ್ಲ. ಆದರೆ ತನ್ನ ತಪ್ಪನ್ನು ಮುಚ್ಚಿ ಹಾಕಲು ಆಟೋ ಚಾಲಕ ರಾಜು, ತನ್ನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ರಾಬರಿ ಮಾಡಿದ್ದಾರೆಂದು ಹೇಳಿ ಕೊಲೆ ಯತ್ನ ಕೇಸು ದಾಖಲಿಸಿದ್ದ. ಇದೇ ಆತನಿಗೆ ಮುಳುವಾಗಿತ್ತು.

ಚಿಕ್ಕಮಗಳೂರು ಮೂಲದ ಯುವತಿ ತ್ರಿಷಾ ಹಾಗೂ ಕೇರಳ ಮೂಲದ ಯುವಕ ಮಹಮ್ಮದ್ ಅನ್ಸರ್ ಮನೆ ಬಿಟ್ಟು ಬೆಂಗಳೂರಿಗೆ ಓಡಿ ಬಂದಿದ್ದರು. ಚೇತನ್ ಎಂಬಾತ ಸಹಾಯ ಮಾಡುತ್ತಾನೆ ಎಂದು ನಂಬಿ ಜಯನಗರದ ಮೆಟ್ರೋ ಸ್ಟೇಷನ್ ಬಳಿ ಕಾದು ಕೂತಿದ್ದರು. ಎಷ್ಟೇ ಕಾದರೂ ಚೇತನ್ ಬಂದಿರಲಿಲ್ಲ. ಕಾಲ್ ಮಾಡಿದರೆ ಸ್ವಿಚ್ ಆಫ್ ಬರ್ತಿತ್ತು. ಇದನ್ನು ಗಮನಿಸಿದ್ದ ಆಟೋ ಚಾಲಕ ರಾಜು, ನೇರವಾಗಿ ಜೋಡಿಯ ಬಳಿ ಬಂದು ಹೋಗಬೇಕಾದ ಜಾಗದ ಬಗ್ಗೆ ಕೇಳಿದಕ್ಕೆ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ಎಂದಿದ್ದರು. ಸರಿ ಎಂದು ಕೂರಿಸಿಕೊಂಡು ಹೋಗುವಾಗ ಮನೆ ಬಾಡಿಗೆಗೆ ಬೇಕಾ ಎಂದಿದ್ದಾನೆ. ಇದಕ್ಕೆ ಒಪ್ಪಿ ಬೇಕು ಎಂದಿದಕ್ಕೆ ನನ್ನದೇ ಮನೆ ಬಾಡಿಗೆಗೆ ಇದೆ‌, ಇಷ್ಟವಾದರೆ ತೆಗೆದುಕೊಳ್ಳಿ ಎಂದಿದ್ದ.

ಸ್ವಲ್ಪ ದೂರ ಹೋದ ಬಳಿಕ ತನ್ನ ಬಾಡಿಗೆ ಮನೆ ದೂರ ಇದೆ. ಇಲ್ಲೆ ಪಿಳ್ಳಗಾನಹಳ್ಳಿಯಲ್ಲಿ ನನ್ನ ಸ್ಚಂತ ಮನೆ ಇದೆ. ಇವತ್ತು ಇದ್ದು, ನಾಳೆ ಹೋಗುವಂತೆ ಹೇಳಿದಕ್ಕೆ ಅದಕ್ಕೆ ಆ ಜೋಡಿ ಒಪ್ಪಿದ್ದರು. ದಾರಿ ಮಧ್ಯೆ ಆರೋಪಿ ಆಟೋ ಚಾಲಕ ರಾಜು ಮದ್ಯ ಖರೀದಿ ಮಾಡಿದ್ದ. ನಂತರ ಸೀದಾ ಮನೆಗೆ ಬಂದವನೇ ಅನ್ಸರ್‌ಗೆ ಸ್ವಲ್ಪ ಕುಡಿಸಿ ಮಲಗಿಸಿದ್ದ. ಸ್ವಲ್ಪ ಸಮಯದ ಬಳಿಕ ಯುವತಿಯನ್ನು ಅಡುಗೆ ಮನೆಗೆ ಎಳೆದೊಯ್ದು ತನ್ನ ಜತೆ ಮಲಗುವಂತೆ ಒತ್ತಾಯಿಸಿ ಚುಂಬಿಸಿದ್ದನಂತೆ. ಇದರಿಂದ ಯುವತಿ ಕಿರುಚಿದಾಗ ಅನ್ಸರ್ ಒಳ ಓಡಿ ಬಂದಿದ್ದ. ಆಗ ರಾಜು ಮಚ್ಚು ತೋರಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿ ಮಚ್ಚು ಅಲ್ಲೆ ಪಕ್ಕ ಇಟ್ಟು ಮತ್ತೆ ತನ್ನ ಕಾಮುಕತನ ಮುಂದುವರಿಸಿದ್ದ. ಅಷ್ಟರಲ್ಲಿ ಅನ್ಸರ್ ಅಲ್ಲೇ ಇದ್ದ ಮಚ್ಚಿನಿಂದ ರಾಜುವಿನ ತಲೆಗೆ ಹೊಡೆದು ಯುವತಿಯ ಜತೆ ಹೊರಗೆ ಓಡಿ ಬಂದಿದ್ದ. ನಂತರ ಗೂಗಲ್ ಮ್ಯಾಪ್ ನೋಡಿ ಯಾರ್ಯಾರೋ ಕೈ ಕಾಲು ಹಿಡಿದು ಮೆಜೆಸ್ಟಿಕ್ ಬಂದಿದ್ದರು. ಆದರೆ ದೂರು ನೀಡಿರಲಿಲ್ಲ. ಇವರಿಂತ ಮುಂಚೆ ರಾಜು ಕೊಲೆ ಯತ್ನದ ದೂರು ನೀಡಿದಾಗ ಜೋಡಿಯನ್ನು ಟ್ರೇಸ್ ಮಾಡಿದಾಗ ಅಸಲಿ ಸಂಗತಿ ಹೊರ ಬಿದ್ದಿದೆ.

ಇದನ್ನೂ ಓದಿ | Viral Video: ಮೈದುನನ ಇಬ್ಬರು ಮಕ್ಕಳನ್ನು ವಿಷವಿಕ್ಕಿ ಕೊಂದಳು, ಮೂರನೇ ಮಗುವನ್ನು ಕೊಲ್ಲುವಾಗ ಸಿಕ್ಕಿ ಬಿದ್ದಳು!

ಇನ್ನು ರಾಜು ನೀಡಿದ ದೂರಿನ ಅನ್ವಯ ಯುವಕ ಮಹಮ್ಮದ್ ಅನ್ಸರ್‌ನ ಬಂಧನ ಮಾಡಿದಲ್ಲದೆ ಯುವತಿ ನೀಡಿದ ದೂರಿನ ಮೇಲೆ ಆಟೋ ಚಾಲಕ ರಾಜುವನ್ನು ಬಂಧನ ಮಾಡಲಾಗಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ರಸ್ತೆಯಲ್ಲೇ ಸಿಸಿಟಿವಿ ಕ್ಯಾಮೆರಾ ಅಳವಡಿಗೆ- ಸೇನಾ ಮಾಹಿತಿ ಪಾಕಿಸ್ತಾನಕ್ಕೆ ರವಾನೆ-ಆರೋಪಿ ಬಂಧನ

VISTARANEWS.COM


on

ಪಂಜಾಬ್‌ನ ಪಠಾಣ್‌ಕೋಟ್‌ನ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಬಯಲಿಗೆಳೆದಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಚಕ್ ಧಾರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಬಂಧಿತ ಆರೋಪಿ.ಈತ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನಗಳ ಮೇಲೆ ಕಣ್ಣಿಡಲು ರಾಷ್ಟ್ರೀಯ ಹೆದ್ದಾರಿ-44 ರ ಪಠಾಣ್‌ಕೋಟ್-ಜಮ್ಮು ಪ್ರದೇಶದ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ ಎಂದು ಪೋಲಿಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

40 ಸಾವಿರ ಆಸೆಗೆ ಭಾರತೀಯ ಸೇನಾ ಮಾಹಿತಿ ರವಾನೆ

ಪಾಕಿಸ್ತಾನ ಮತ್ತು ವಿದೇಶದಲ್ಲಿರುವವರಿಗೆ ಸಿಸಿಟಿವಿ ಕಣ್ಗಾವಲು ಮಾಹಿತಿಯನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ರವಾನಿಸಲಾಗುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ದಲ್ಜಿಂದರ್ ಸಿಂಗ್ ಧಿಲ್ಲೋನ್ ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಸಿಂಗ್ ಜನವರಿಯಲ್ಲಿ ಸುಜನ್‌ಪುರ ಬಳಿಯ ಹೆದ್ದಾರಿಯಲ್ಲಿರುವ ಅಂಗಡಿಯಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಜೊತೆಗೆ ದುಬೈನಲ್ಲಿರುವ ಅಪರಿಚಿತ ವ್ಯಕ್ತಿಯಿಂದ ನಿರ್ದೇಶನ ಬರುತ್ತಿದ್ದು, 40,000ರೂ.ಗಳನ್ನು ಪಡೆದಿರುವುದಾಗಿ ಪೊಲೀಸ್‌ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಸದ್ಯ ಬಂಧಿತನಿಂದ ಸಿಸಿಟಿವಿ ಕ್ಯಾಮೆರಾ, ಇಂಟರ್‌ನೆಟ್‌ ವೈಫೈ ರೂಟರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣ ಸಂಬಂಧ ನಾಲ್ವರು ಆರೆಸ್ಟ್

ಪಠಾಣ್‌ಕೋಟ್-ಜಮ್ಮು ಹೆದ್ದಾರಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ಸುಜನ್‌ಪುರ ಪೊಲೀಸರು, ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು, ವಿಕ್ರಮ್‌ಜಿತ್ ಸಿಂಗ್ ಅಲಿಯಾಸ್ ವಿಕ್ಕಾ, ಬಲ್ವಿಂದರ್ ಸಿಂಗ್ ಅಲಿಯಾಸ್ ವಿಕ್ಕಿ ಮತ್ತು ತರಣ್‌ಪ್ರೀತ್ ಸಿಂಗ್ ಅಲಿಯಾಸ್ ತನ್ನು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಗಳು ಅಪರಾಧ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳಿಗೆ ವಿವರಣೆ ನೀಡಲಾಗಿದ್ದು, ಬೇಹುಗಾರಿಕೆಯ ಹಿಂದಿನ ಹಣಕಾಸಿನ ಮೂಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

Latest

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

VISTARANEWS.COM


on

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದ ವೇಳೆ ಭಾರಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರವಿಶಂಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ್ದರು. ಎಚ್‌ಎಎಲ್‌ ನಿಂದ ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಮೋದಿ ತೆರಳಿದ್ದರು. ಇದೇ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೋದಿ ತೆರಳುವ ಮಾರ್ಗದಿಂದ 50 ಮೀಟರ್‌ ದೂರದಲ್ಲಿ ಈ ಜಿಲೆಟಿನ್‌ ಕಡ್ಡಿಗಳು ಸಿಕ್ಕಿವೆ. ಮೋದಿ ಆಗಮನದ ವೇಳೆ ಭಾರಿ ಅವಘಡಕ್ಕೆ ಸಂಚು ರೂಪಿಸಲಾಗಿತ್ತೇ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಪ್ರಧಾನಮಂತ್ರಿ ಪ್ರಯಾಣಿಸುವ ಮಾರ್ಗದಲ್ಲಿ ಸ್ಫೋಟಿಸಲು ಇಡಲಾಗಿತ್ತೇ? ಘಟನೆ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೋರಮಂಗಲ ಠಾಣೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ವಿವಿಧ ಪ್ರದೇಶಗಳಲ್ಲಿ ಸ್ಫೋಟದ ಬೆದರಿಕೆ ನೀಡಿದ್ದಾರೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕರೆ ಬಂದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. HAL ಪ್ರದೇಶದಲ್ಲಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading

ಕ್ರೈಂ

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರಬೀಳ್ತಿದ್ದಂತೆ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದ್ರೀಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಮಿಸ್‌‌ ಆಗಿ ಆಪ್ತನ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟೌಟ್‌‌ ಮಾಡಿದ್ದಾರೆ.

Continue Reading
Advertisement
Latest17 hours ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest19 hours ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest19 hours ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest21 hours ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest23 hours ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest23 hours ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest24 hours ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

Latest24 hours ago

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

Latest2 days ago

ಇಂದು ಸಂಜೆ ಒಳಗೆ ಖಾತೆ ಹಂಚಿಕೆ : ಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

Latest2 days ago

ರಾಜ್ಯ ವಿಧಾನಸಭೆ ಸ್ಪೀಕರ್ ಆಯ್ಕೆ ಕಸರತ್ತು: ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಹೆಸರುಗಳು ಮುಂಚೂಣಿಯಲ್ಲಿ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌