Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ - Vistara News

ಕ್ರೈಂ

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Bomb Hoax: ಇಂದು ಬೆಳಗ್ಗೆ ಏಳೂವರೆಗೆ ಶಾಲಾ ಸಿಬ್ಬಂದಿ ಕಚೇರಿ ಒಪನ್‌ ಮಾಡಿದ್ದರು. ಈ ವೇಳೆ ಮೇಲ್ ಬಂದಿರುವುದು ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ.

VISTARANEWS.COM


on

Hoax Bomb Threat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಇಮೇಲ್‌ (Bomb Hoax, bomb threat Email) ಬಂದಿದೆ. ಅಮೃತಹಳ್ಳಿಯ ಕೆಂಪಾಪುರದಲ್ಲಿರುವ ಜೈನ್ ಹೆರಿಟೇಜ್‌ ಶಾಲೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ನಿನ್ನೆ ಮಧ್ಯರಾತ್ರಿ ಬಾಂಬ್ ಬೆದರಿಕೆ ಇಮೇಲ್ ಅನ್ನು ದುಷ್ಕರ್ಮಿಗಳು (miscreants) ಕಳಿಸಿದ್ದಾರೆ.

ಇಂದು ಬೆಳಗ್ಗೆ ಏಳೂವರೆಗೆ ಶಾಲಾ ಸಿಬ್ಬಂದಿ ಕಚೇರಿ ಒಪನ್‌ ಮಾಡಿದ್ದರು. ಈ ವೇಳೆ ಮೇಲ್ ಬಂದಿರುವುದು ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ. ಶಾಲೆಗೆ ಸ್ಥಳೀಯ ಪೊಲೀಸರು, ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಸದ್ಯ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ. ಪರಿಶೀಲನೆಯಲ್ಲಿ ಇದೊಂದು ಹುಸಿ ಬಾಂಬ್ ಮೇಲ್ ಎನ್ನುವುದು ಧೃಢವಾಗಿದೆ.

ಕಳೆದ ವರ್ಷ ಹಲವು ಪ್ರತಿಷ್ಠಿತ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಇದು ಕೂಡ ಹುಸಿಯಾಗಿತ್ತು. ಇತ್ತೀಚೆಗೆ ಹೊಸದಿಲ್ಲಿಯ ಹತ್ತಾರು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದು, ಆ ಎಲ್ಲ ಶಾಲೆಗಳ ಮಕ್ಕಳಿಗೂ ರಜೆ ನೀಡಿ ಆವರಣ ತಲಾಶ್‌ ಮಾಡಲಾಗಿತ್ತು. ಇದು ಕೂಡ ಹುಸಿ ಎಂದು ಕಂಡುಬಂದಿತ್ತು. ಹೀಗೆ ಬೆದರಿಕೆ ಇಮೇಲ್‌ ಮಾಡಿದ ವ್ಯಕ್ತಿ ಅಪ್ರಾಪ್ತ ವಯಸ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇತ್ತೀಚೆಗೆ ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಹೀಗೆ ಬೆದರಿಕೆ ಮೇಲ್‌ ಮಾಡುತ್ತಿರುವವರ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ದೇಶದ ಸರ್ವರ್‌ ಕನೆಕ್ಷನ್‌ ತಪ್ಪಿಸಿ ವಿಪಿಎನ್‌ ಮೂಲಕ ಕಾರ್ಯಾಚರಿಸಿ ವಿದೇಶಗಳ ಸರ್ವರ್‌ನಿಂದ ಬಂದಂತೆ ತೋರಿಸುವ ಕಲೆಯಲ್ಲಿ ನಿಷ್ಣಾತರಾಗಿದ್ದಾರೆ. ಹೀಗಾಗಿ ಇದನ್ನು ಭೇದಿಸುವುದು ಪೊಲೀಸರಿಗೆ ಕಷ್ಟವಾಗುತ್ತಿದೆ. ಒಂದು ಶಾಲೆಗೆ ಮಾತ್ರ ಬೆದರಿಕೆ ಮೇಲ್‌ ಬಂದಿರುವ ಹಿನ್ನೆಲೆಯಲ್ಲಿ, ವೈಯಕ್ತಿಕ ದ್ವೇಷ ಕಾರ್ಯಾಚರಿಸಿರಬಹುದು ಎಂದು ಶಂಕಿಸಲಾಗಿದೆ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ (Actor Darshan) ರಾಜಾತಿಥ್ಯ ಕೇಸ್ ಸಂಬಂಧ ತನಿಖೆಯು ಕ್ಲೈ ಮ್ಯಾಕ್ಸ್ ಹಂತದಲ್ಲಿದ್ದು, ಇದೀಗ ಜೈಲಿನೊಳಗಿನ ಅಂದರ್ ಕಿ ದರ್ಬಾರ್ ಬೆಳಕಿಗೆ ಬಂದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ನಟ ದರ್ಶನ್ (Actor Darshan) ಇದ್ದ ವೇಳೆ ಸಿಕ್ಕ ರಾಜಾತಿಥ್ಯದ ತನಿಖೆ ಕೊನೆಗೂ ಮುಕ್ತಾಯದ ಹಂತ ತಲುಪಿದೆ. ವಿಶೇಷ ಸವಲತ್ತುಗಳ ಜಾಡು ಹಿಡಿದ ಖಾಕಿಗೆ ರಾಜಾತಿಥ್ಯದ ಪಿನ್ ಟು ಪಿನ್ ಸಾಕ್ಷಿ ದೊರೆತಿದ್ದು, ಇದರ ಹೊರತಾಗಿ ಜೈಲಿನಲ್ಲಿ ಸಿಗುವ ಮದ್ಯದ ಬಾಟೆಲ್‌ಗಳ ಮತ್ತೊಂದು ಕಹಾನಿ ಬೆಳಕಿಗೆ ಬಂದಿದೆ.

ಜೈಲಿನೊಳಗೆ ದರ್ಶನ್‌ಗೆ ಸಿಕ್ಕ ರಾಜಾತಿಥ್ಯದ ಸಂಬಂಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ನಡೆಸಿದ ತನಿಖೆ ವೇಳೆ ರಾಜಾತಿಥ್ಯದ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ. ಜತೆಗೆ ಇದಕ್ಕೆ ಕಾರಾಗೃಹದ ಸಿಬ್ಬಂದಿ ಸಹಕರಿಸಿರುವ ಸಂಗತಿ ಸಹ ಬಯಲಾಗಿದೆ. ಸದ್ಯ ಈ ಎಲ್ಲಾ ಮಾಹಿತಿಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಿರುವ ಪೊಲೀಸರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸುವ ತಯಾರಿಯಲ್ಲಿದ್ದಾರೆ.

ಜೈಲಿನ ಒಳಗಡೆ ದರ್ಶನ್ ರೌಂಡ್ ಟೇಬಲ್‌ನಲ್ಲಿ ಟೀ ಪಾರ್ಟಿ ಮಾಡಿದ್ದು, ಜೈಲಿನೊಳಗೆ ಹೊರಗಿನ ವ್ಯಕ್ತಿ ಜತೆ ವಿಡಿಯೊ ಕಾಲ್ ಸಂಭಾಷಣೆ ನಡೆಸಿದ್ದ ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು, ಪೊಲೀಸರು ಅಂತಿಮ ಪರಾಮರ್ಶೆಗೆಂದು ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಈ ಮೂಲಕ ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಜೈಲಿನಲ್ಲಿರುವ ರೌಡಿಗಳಿಗೆ ಸಪ್ಲೈ ಆಗುತ್ತಿದೆಯಾ ಕಾಸ್ಟ್ಲಿ ಡ್ರಿಂಕ್ಸ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಸಿಕ್ಕಿದ್ದ ರಾಜಾತಿಥ್ಯ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಈಗ ಹೊಸದಂದು ಸಂಗತಿ ಕೇಳಿ ಬಂದಿದೆ. ಜೈಲಿನಲ್ಲಿರುವ ಕೆಲ ರೌಡಿಗಳಿಗೆ ಕಾಸ್ಟ್ಲಿ ಡ್ರಿಂಕ್ಸ್ ಸರಬರಾಜು ಆಗುತ್ತಿದೆ ಎನ್ನಲಾಗಿದೆ. ಅದು ಮೂರು ಹಂತಗಳಲ್ಲಿ ಹೊರಗಿನಿಂದ ಜೈಲಿನೊಳಗೆ ಮದ್ಯ ತಲುಪುತ್ತಿದೆ ಎನ್ನಲಾಗಿದೆ. ಇನ್ನು ಮದ್ಯದ ಬಾಟಲ್‌ನ ಅಸಲಿ ಬೆಲೆ 2 ಸಾವಿರ ಇದ್ದರೆ ಅದನ್ನು ಜೈಲಿನೊಳಗೆ ಕೊಡಲು 25 ಸಾವಿರ ನೀಡಲಾಗುತ್ತಿದೆ ಎನ್ನಲಾಗಿದೆ.

ಬಾಟಲ್‌ನ ಓರ್ವ ಹೊರಗಡೆಯಿಂದ ತಂದರೆ, ಅದನ್ನು ಜೈಲಿನ ಒಳಗೆ ತೆಗೆದುಕೊಂಡು ಹೋಗುವವನು ಮತ್ತೊಬ್ಬನಂತೆ.. ಬಳಿಕ ಅದನ್ನು ರೌಡಿಗೆ ತಲುಪಿಸುವವನು ಮತ್ತೋಬ್ಬ.. ಇನ್ನು ಈ ಸರಬರಾಜು ಪ್ರಕ್ರಿಯೆಯಲ್ಲಿ ಜೈಲಿನ ಕೆಲ ಸಿಬ್ಬಂದಿ ಹಾಗೂ ಕೆಲ ಸಜಾ ಬಂಧಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹೀಗೆ ಒಳಗೆ ಸಪ್ಲೈ ಮಾಡಿ ಎಣ್ಣೆಗೆ ಹಣ ಹೊರಗಡೆಯೇ ಪಡೆಯಲಾಗುತ್ತಿದೆ. ಯಾರ್ಯಾರು ಎಣ್ಣೆ ತಂದು ಕೊಡುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಇದೆಲ್ಲದರ ನಡುವೆ ನಗರ ಪೊಲೀಸ್ ಆಯುಕ್ತರು ಜೈಲಿನ ರಾಜಾತಿಥ್ಯದ ಬಗ್ಗೆ ವರದಿ ನೀಡುವಂತೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾರಿಮಾಗೆ ಸೂಚಿಸಿದ್ದರು. ಅದರಂತೆ ತನಿಖೆ ವೇಳೆ ಕಂಡು ಬಂದ ಅಂಶಗಳ ಸಹಿತ ರಾಜಾತಿಥ್ಯದ ವರದಿ ನಗರ ಪೊಲೀಸ್ ಆಯುಕ್ತರಿಗೆ ಸಲ್ಲಿಸಿದ್ದಾರೆ. ಸದ್ಯ ರಾಜಾತಿಥ್ಯದ ತನಿಖೆ ಕೈಗೊಂಡಿದ್ದ ಪೊಲೀಸರು ಬಹುತೇಕ ತನಿಖೆ ಮುಕ್ತಾಯಗೊಳಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಆ ಬಳಿಕ ಜೈಲಿನ ಅಕ್ರಮ ಚಟುವಟಿಕೆಗಳ ಮತ್ತಷ್ಟು ಸಂಗತಿ ಬಯಲಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನವಾಗಿದೆ. ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬವನ್ನು ಪೀಣ್ಯ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

VISTARANEWS.COM


on

By

Bengaluru News
Koo

ಬೆಂಗಳೂರು: ಬೆಂಗಳೂರಿನ ಪೀಣ್ಯದಲ್ಲಿದ್ದ (Bengaluru News) ಒಂದೇ ಕುಟುಂಬದ ಮೂವರು ಪಾಕ್ ಪ್ರಜೆಗಳನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ತಾರಿಖ್ ಸಯೀದ್(ಪತಿ), ಅನಿಲ ಸಯೀದ್ (ಪತ್ನಿ), ಇಶ್ರತ್ ಸಯೀದ್ (ಮಗಳು) ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುಟುಂಬ ಮೆಹದಿ ಫೌಂಡೇಶನ್‌ಗೆ ಸೇರಿದ್ದರು. ಪಾಕಿಸ್ತಾನದಿಂದ ಬಾಂಗ್ಲಾಗೆ ಸುಮಾರು ಹದಿನೈದಕ್ಕೂ ಹೆಚ್ಚು ಮಂದಿ ಬಂದಿದ್ದರು, ಅದರಲ್ಲಿ ಈ ಪಾಕ್ ಕುಟುಂಬವಿತ್ತು. ಅಲ್ಲಿಂದ ದೆಹಲಿಗೆ ಅಕ್ರಮವಾಗಿ ಪ್ರವೇಶಿಸಿ, ಭಾರತ ದೇಶದ ನಕಲಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್ ಮಾಡಿಕೊಂಡಿದ್ದರು. ಅಲ್ಲಿಂದ ನೇರ ಕೇರಳಕ್ಕೆ ಹೋಗಿದ್ದರು. ಕೇರಳದಿಂದ ದಾವಣಗೆರೆಗೆ ಬಂದಿದ್ದ ಪಾಕ್ ಕುಟುಂಬ, ದಾವಣಗೆರೆಯಲ್ಲಿ ಒಂದು ವರ್ಷಗಳ ಕಾಲ ವಾಸ ಮಾಡುತ್ತಿತ್ತು.

ಇದನ್ನೂ ಓದಿ:Jigani Police: ಉಲ್ಫಾ ಉಗ್ರ ಬಂಧನ ಬೆನ್ನಲ್ಲೆ ನಾಲ್ವರು ವಿದೇಶಿಗರು ಸೇರಿ ‌ಓರ್ವ ಪಾಕಿಸ್ತಾನ ಪ್ರಜೆ ಬಂಧನ

ಕಳೆದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ಪೀಣ್ಯಗೆ ಆಗಮಿಸಿದ್ದರು. ಪೀಣ್ಯದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಕುಟುಂಬ ಮೆಹದಿ ಫೌಂಡೇಶನ್‌ನ ಧರ್ಮ ಮತ್ತು ಧರ್ಮ ಗುರುಗಳ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದರು. ಜಿಗಣಿಯಲ್ಲಿ ಪಾಕ್ ಪ್ರಜೆ ರಷೀದ್ ಫ್ಯಾಮಿಲಿ ಬಂಧನವಾಗಿದ್ದರು. ರಷೀದ್ ತನಿಖೆಯ ವೇಳೆ ಪೀಣ್ಯದಲ್ಲಿ ಮತ್ತೊಂದು ಪಾಕ್ ಫ್ಯಾಮಿಲಿ ಇರುವುದಾಗಿ ಬಾಯಿಬಿಟ್ಟಿದ್ದರು. ಹೀಗಾಗಿ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ರಾತ್ರಿ ಪೀಣ್ಯದಿಂದ ಬಂಧನ ಮಾಡಿ ಕರೆತಂದಿದ್ದ ಪೊಲೀಸರು ಮೂವರಿಗೂ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೆಡಿಕಲ್ ಚೆಕಪ್ ಮುಗಿಸಿ ಮತ್ತೆ ಪೊಲೀಸ್ ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Continue Reading

ಬೆಂಗಳೂರು

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

MLA Muniratna: ಶಾಸಕ ಮುನಿರತ್ನ ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಸಂತ್ರಸ್ತೆಯೊಂದಿಗೆ ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದರು.

VISTARANEWS.COM


on

By

MLA Muniratna
Koo

ಬೆಂಗಳೂರು: ಶಾಸಕ ಮುನಿರತ್ನ (MLA Muniratna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಮುಂದುವರಿದಿದೆ. ಸುದೀರ್ಘವಾಗಿ ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿದ್ದು, ಈಗಾಗಲೇ ಮೊಬೈಲ್ ಸೀಜ್ ಮಾಡಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಅಧಿಕಾರಿಗಳಿಗೆ ಕೆಲ ವಿಡಿಯೊಗಳು ಮತ್ತು ಕೆಲ ದಾಖಲೆಗಳನ್ನು ಸಂತ್ರಸ್ತೆ ನೀಡಿದ್ದಾರೆ.

ಈ ಹಿಂದೆ ಅತ್ಯಾಚಾರ ಆರೋಪದ ಬೆನ್ನಲ್ಲೇ ಕಗ್ಗಲೀಪುರ ಪೊಲೀಸರು ಈ ಹಿಂದೆಯೇ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಇದೀಗ ಗುರುವಾರ ಜೆಪಿ ಪಾರ್ಕ್‌ನ ಗೋಡೌನ್‌, ರಾಮಯ್ಯ ಸಮಾಧಿ ಬಳಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರ್‌ ಮಾಡಿದರು. ಹನಿಟ್ರ್ಯಾಪ್‌ ಮಾಡಿದ್ದ ಜೆಪಿ ಪಾರ್ಕ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ಸಂತ್ರಸ್ತೆ ಕರೆತಂದು ಮಹಜರ್‌ ನಡೆಸಿದರು.

ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ಮುನಿರತ್ನ ಸಂಬಂಧಿತ ಕೆಲ ದಾಖಲೆಗಳನ್ನು ಕೊಟ್ಟಿದ್ದಾರೆ ಎನ್ನಲಾಗಿದೆ. ಜತೆಗೆ ಮುನಿರತ್ನ ಆಪ್ತ ಸಹಾಯಕನ ವಿಚಾರಣೆ ನಡೆಸಲಾಗಿದ್ದು, ಸಂತ್ರಸ್ತೆ ಪರಿಚಿತೆ ಈ ರೀತಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಆರು ಮಂದಿ ನಾಪತ್ತೆ

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕಳೆದ ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಒಟ್ಟು ಏಳು ಜನರ ಆರೋಪಿಗಳ‌ ಹೆಸರು ದಾಖಲಾಗಿದೆ. ಸದ್ಯ ಮುನಿರತ್ನರನ್ನು ಬಂಧನ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಎಸ್‌ಐಟಿ ಮುಂದೆ ಮುನಿರತ್ನ ನಂಗೇನು ಗೊತ್ತಿಲ್ಲ ಎಂದಿದ್ದಾರೆ. ಇನ್ನು ಇದುವರೆಗೂ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ. ಪ್ರಕರಣ ದಾಖಲಾಗಿ 15 ದಿನ ಕಳೆದರೂ ಆರು ಜನ ಆರೋಪಿಗಳು ಪತ್ತೆಯಾಗಿದ್ದಾರೆ. ಮುನಿರತ್ನ‌ ನಾಯ್ಡು ಸೇರಿದಂತೆ ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ್ ಮತ್ತು ಲೋಕಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ನಾಪತ್ತೆಯಾಗಿರುವ ಆರು ಜನ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮುನಿರತ್ನರಿಗೆ ಡಿಎನ್‌ಎ ಟೆಸ್ಟ್‌

ಎಸ್‌ಐಟಿ ಅಧಿಕಾರಿಗಳು ಗುರುವಾರ 42ನೇ ಎಸಿಎಂಎಂ ಕೋರ್ಟ್‌ಗೆ ಶಾಸಕ ಮುನಿರತ್ನರನ್ನು ಹಾಜರು ಪಡಿಸಿದರು. ಇದೆ ವೇಳೆ ಎಸ್‌ಐಟಿ ಅಧಿಕಾರಿಗಳು ಡಿಎನ್‌ಎ ಟೆಸ್ಟ್ ಮಾಡಿಸಲು ಅನುಮತಿ ಕೇಳಿದರು. ಈ ವೇಳೆ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿ ನ್ಯಾಯಾಧೀಶರು ಆದೇಶಿಸಿದರು. ಇದಕ್ಕೂ ಮೊದಲು ಪೊಲೀಸರಿಂದ ಏನಾದರೂ ಸಮಸ್ಯೆ ಆಯಿತಾ ಎಂದು ಮುನಿರತ್ನರನ್ನು ನ್ಯಾಯಾಧೀಶರು ಕೇಳಿದರು. ಯಾವುದೇ ಸಮಸ್ಯೆ ಇಲ್ಲ, ಆದರೆ ಇದೊಂದು ಪಿತೂರಿ‌ ಎಂದು ಅಳಲು ತೋಡಿಕೊಂಡರು.

ವೈದ್ಯರೊಂದಿಗೆ ಹಾಜರಾಗಿದ್ದ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ಮುನಿರತ್ನರ ರಕ್ತದ ಮಾದರಿ ಸಂಗ್ರಹ ಮಾಡಲು ಮುಂದಾದರು. ಈ ವೇಳೆ ಮುನಿರತ್ನ ತಮ್ಮ ವಕೀಲರು ಬರಬೇಕು. ಅವರ ಮುಂದೆ ಸ್ಯಾಂಪಲ್ಸ್ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಮನವಿಯನ್ನ ಪುರಸ್ಕರಿಸಿ ವಕೀಲರು ಬಂದ ಮೇಲೆ ಸ್ಯಾಂಪಲ್ಸ್ ತೆಗೆದುಕೊಳ್ಳಲು ಎಸ್ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಕ್ತದ ಮಾದರಿ ಸಂಗ್ರಹಿಸುವ ಸಂಬಂಧ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ರಾಜ್ಯದಲ್ಲಿ ಕೆಲವೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಕ್ತದ ಮಾದರಿ ಸಂಗ್ರಹಿಸಲು ನಮ್ಮದು ಅಭ್ಯಂತರ ಇಲ್ಲ. ಆದರೆ ಯಾವ ಕಾರಣಕ್ಕಾಗಿ ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಕಾರಣ ಬೇಕು. ಘಟನೆ ನಡೆದು ವರ್ಷಗಳೆ ಕಳೆದಿದೆ. ಎಫ್ಎಸ್‌ಎಲ್‌ಗೆ ರವಾನೆ ಮಾಡಲು ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳಲಿ. ಸ್ಟೇಟ್ ಏಜೆನ್ಸಿ ಹೊರತು ಪಡಿಸಿ ಸೆಂಟ್ರಲ್ ಏಜೆನ್ಸಿಗೆ ಪರೀಕ್ಷೆ ನಡೆಸಲು ರವಾನಿಸಬೇಕು. ಬ್ಲಡ್ ಸ್ಯಾಂಪಲ್ಸ್ ತೆಗೆದುಕೊಳ್ಳುವ ಮುನ್ನ ನಮ್ಮ ಗಮನಕ್ಕೆ ತರಬೇಕಿತ್ತು ಎಂದು ವಾದಿಸಿದರು.

ಪ್ರಕರಣ ತನಿಖಾ ಹಂತದಲ್ಲಿದೆ. ಅದರಲ್ಲೂ ಆರೋಪಿ ತನಿಖಾ ತಂಡದ ಕಸ್ಟಡಿಯಲ್ಲಿದ್ದಾರೆ. ಆ ಸಂದರ್ಭದಲ್ಲಿ ತನಿಖಾಧಿಕಾರಿಗಳ ಮನವಿಗೆ ಸ್ಪಂದಿಸಿ, ಆದೇಶ ಮಾಡಲಾಗಿದೆ. ನೀವು ಆಕ್ಷೇಪಣೆ ಸಲ್ಲಿಸುವುದಾದರೆ ಸಲ್ಲಿಕೆ ಮಾಡಿ ಎಂದು ಬ್ಲಡ್ ಸ್ಯಾಂಪಲ್ಸ್ ಸಂಗ್ರಹಿಸುವ ಪ್ರಕ್ರಿಯೆಯನ್ನು ನಾಳೆ ಶುಕ್ರವಾರ ಬೆಳಗ್ಗೆಗೆ ಮುಂದೂಡಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಮಧ್ಯಾಹ್ನದ ನಂತರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರಿಗೆ ಸೂಚನೆ ನೀಡಿದರು.

ಜಾಮೀನು ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಗುರುವಾರ ನಡೆಯಿತು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇಂದು ಗುರುವಾರ (ಅ.3) ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಮತ್ತೊಂದು ಸುತ್ತಿನ ವಾದ ಮಂಡಿಸಿದರು. ಎಸ್‌ಐಟಿ ಪರ ಎಸ್‌ಪಿಪಿ ಪ್ರದೀಪ್ ಹಾಜರಾಗಿದ್ದರು. ಸೆಕ್ಷನ್ 376(2)n ಸಂಬಂಧಿಸಿದಂತೆ ಹಲವು ಕೋರ್ಟ್ ಆದೇಶಗಳ ಉಲ್ಲೇಖಿಸಿ ಅಶೋಕ್ ಹಾರನಹಳ್ಳಿ ವಾದ ಮಾಡಿದರು. ಎಸ್‌ಪಿಪಿ ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನಾಳೆ ಶುಕ್ರವಾರ 2:45ಕ್ಕೆ ವಿಚಾರಣೆ ಮುಂದೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Drugs Mafia: ಕೊಡಗು ಪೊಲೀಸರಿಂದ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾ ಬಯಲಿಗೆ ಬಂದಿದ್ದು, ರಣರೋಚಕ ಕಾರ್ಯಾಚರಣೆ ನಡೆಸಿ ಏರ್‌ಪೋರ್ಟ್‌ನಲ್ಲಿ ಪೆಡ್ಲರ್ ಅರೆಸ್ಟ್ ಮಾಡಿದ್ದಾರೆ. ಬರೋಬ್ಬರಿ 3 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Drugs Mafia
Koo

ಕೊಡಗು: ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾಗೆ (Drugs Mafia) ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಇಂಟರೆಸ್ಟಿಂಗ್ ಆ್ಯಂಡ್ ಚಾಲೆಂಜಿಂಗ್ ಪ್ರಕರಣ ಭೇದಿಸಿರುವ ಕೊಡಗು ಪೊಲೀಸರು ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ರೋಚಕ ಕಾರ್ಯಾಚರಣೆಯಲ್ಲಿ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಕೊಡಗು ಜಿಲ್ಲಾ ಪೊಲೀಸ್ ತಂಡ ಭೇದಿಸಿದೆ.

Drugs mafia
Drugs mafia

ಥೈಲ್ಯಾಂಡ್‌ನಲ್ಲಿ ತಯಾರಾರುವ ಹೈಡ್ರೋಪೋನಿಕ್ ಗಾಂಜಾವನ್ನು ದುಬೈಗೆ ಸಪ್ಲೆ ಮಾಡೋಕೆ ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಗ್ಯಾಂಗ್‌ ಅನ್ನು ಕೊಡಗು‌ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಥೈಲ್ಯಾಂಡ್‌ನಿಂದ ವಿಮಾನದ ಮೂಲಕವೇ ಭಾರತಕ್ಕೆ ಅಂದರೆ ಬೆಂಗಳೂರಿಗೆ ತಂದು, ಅಲ್ಲಿಂದ‌ ಬೆಂಗಳೂರು ನಗರ, ಕೊಡಗು,‌ ಕೇರಳದಲ್ಲಿ ಇಟ್ಟು ದುಬೈನಲ್ಲಿ ಕಸ್ಟಮರ್ ಸಿಕ್ಕಿದ್ಮೇಲೆ ಇಂಡಿಯಾದಿಂದ ದುಬೈಗೆ ವಿಮಾನದ ಮೂಲಕವೇ ಈ‌ ಗ್ಯಾಂಗ್ ಸಪ್ಲೆ ಮಾಡುತಿತ್ತು.

ಕೇರಳ ಮೂಲದ ಮಹಮ್ಮದ್ ಅನೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿದ್ದ. ಈತ ಕೇರಳದ ಕಾಸರಗೋಡಿನ ಮೆಹರೂಫ್, ವಿರಾಜಪೇಟೆಯ ರವೂಫ್, ನಾಸೀರುದ್ದೀನ್, ವಾಜೀದ್, ನಾಪೋಕ್ಲುವಿನ ಯಾಹಿಯಾ, ಅಕನಾಸ್, ಅಜ್ಜಲ್, ಕೇರಳದ ರಿಯಾಜ್ ಇವರೊಂದಿಗೆ ತಂಡವನ್ನು ಕಟ್ಟಿಕೊಂಡು ಅಲ್ಲಿಂದ ಹೈಡೋಪೋನಿಕ್ ರೀತಿಯಲ್ಲಿ ಬೆಳೆದಿರುವ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ.

ಅದರ ಭಾಗವಾಗಿ ಯಾಹ್ಯಾ ಎಂಬಾತ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಥೈಲ್ಯಾಂಡ್‌‌ನಿಂದ ತಂದ ಗಾಂಜಾವನ್ನು ಈ ತಂಡ ಕೊಡಗಿಗೆ ತರುತ್ತಿದ್ದರು. ಇದೇ ವೇಳೆ ಕೇರಳದ ಮೆಹರೂಫ್‌ನ ಮುಂದಿನ ನಿರ್ದೇಶನಕ್ಕಾಗಿ ಈ ತಂಡ ಕಾಯುತ್ತಿದ್ದಾಗ ಕೊಡಗು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಂತರ ಈ ಪ್ರಕರಣದ ಕಿಂಗ್ ಪಿನ್ ಮೆಹರೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್‌ಗೆ ಪರಾರಿಯಾಗಲು ಯತ್ನಿಸುತ್ತಿರುವಾಗ ಕೇರಳದ ಕೊಚ್ಚಿನ್ ಏರ್ ಪೋರ್ಟ್‌ನಲ್ಲಿ ಕೊಡಗು ಪೊಲೀಸರು ಬಂಧಿಸಿದ್ದಾರೆ.

ಈ ಮಾದಕ ವಸ್ತು ಥೈಲ್ಯಾಂಡ್ ಭಾರತ ಹಾಗೂ ದುಬೈ ವಿಮಾನ‌ ನಿಲ್ದಾಣದಲ್ಲಿ ಹೇಗೆ ಪಾಸ್ ಆಗುತ್ತಿತ್ತು ಎನ್ನುವುದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.‌ ಸದ್ಯ ಈ ಬಗ್ಗೆ ಕೂಡ ಕೊಡಗು ಪೊಲೀಸರು ತನಿಖೆಯ ಒಂದು ಭಾಗವಾಗಿ ಮಾಡೋ ಸಾಧ್ಯತೆ ಇದೆ. ಒಟ್ಟಾರೆ ಥೈಲ್ಯಾಂಡ್‌ನಿಂದ ಮಾದಕ ವಸ್ತುವನ್ನು ದುಬೈಗೆ ತಲುಪಿಸಲು ಮಾಡ್ಕೊಂಡಿದ್ದ ಭಾರತದ ಲಿಂಕ್ ಇದೀಗ ಕಟ್ ಆಗಿದೆ. ಈ ನಿಟ್ಟಿನಲ್ಲಿ ಕೊಡಗು ಪೊಲೀಸರು ಮಾಡಿರೋ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka Weather Forecast
ಮಳೆ2 ನಿಮಿಷಗಳು ago

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ17 ನಿಮಿಷಗಳು ago

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Action Prince Dhruva Sarja much awaited film Martin to hit the screens on October 11
ಸಿನಿಮಾ10 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು11 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು13 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು14 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ14 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು15 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು17 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು17 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ10 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌