Chaithra Kundapura : ಅಬ್ಬಾ ಇವಳೆಂಥಾ ವಂಚಕಿ! 5 ಕೋಟಿ ವಂಚಿಸಿದ್ದಷ್ಟೇ ಅಲ್ಲ, ಮರ್ಡರ್‌ ಕೂಡಾ ಮಾಡಿದ್ದಾಳೆ ಚೈತ್ರಾ ಕುಂದಾಪುರ! Vistara News

ಉಡುಪಿ

Chaithra Kundapura : ಅಬ್ಬಾ ಇವಳೆಂಥಾ ವಂಚಕಿ! 5 ಕೋಟಿ ವಂಚಿಸಿದ್ದಷ್ಟೇ ಅಲ್ಲ, ಮರ್ಡರ್‌ ಕೂಡಾ ಮಾಡಿದ್ದಾಳೆ ಚೈತ್ರಾ ಕುಂದಾಪುರ!

Chaithra Kundapura : ಚೈತ್ರಾ ಕುಂದಾಪುರ ಎಂಬ ಭಾಷಣಕಾರ್ತಿ ಅದೆಂಥ ಖತರ್ನಾಕ್‌ ಎಂದರೆ ಐದು ಕೋಟಿ ರೂ. ವಂಚನೆ ಮಾತ್ರವಲ್ಲ, ಇನ್ನೂ ಅನೇಕ ಸಿನಿಮೀಯ ಘಟನೆಗಳನ್ನು ಆಕೆ ಸೃಷ್ಟಿ ಮಾಡಿದ್ದಾಳೆ. ಈ ಘಟನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Chaitra kundapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಫೈರ್‌ ಬ್ರಾಂಡ್‌ ಭಾಷಣಕಾರ್ತಿ ಚೈತ್ರಾ ಕುಂದಾಪುರ (Chaithra Kundapura) ಬೆಂಗಳೂರಿನ ಉದ್ಯಮಿ ಗೋವಿಂದ ಪೂಜಾರಿಯವರಿಗೆ (Govinda Poojari) ಐದು ಕೋಟಿ ರೂ. ವಂಚನೆ (Fraud Case) ಮಾಡಿದ್ದು ಮಾತ್ರವಲ್ಲ, ಈ ವಂಚನೆಯ ಮಹಾಪುರಾಣದ ನಡುವೆ ಒಬ್ಬ ವ್ಯಕ್ತಿಯ ಕೊಲೆಯೂ ನಡೆದು ಹೋಗಿದೆ. ಚೈತ್ರಾ ಕುಂದಾಪುರ ಎಂಡ್‌ ಟೀಮ್‌ ಪ್ರಧಾನಿ ಮೋದಿಯಿಂದ ಹಿಡಿದು ಆರೆಸ್ಸೆಸ್‌ ಪ್ರಚಾರಕರವರೆಗೆ (RSS Pracharak) ಎಲ್ಲರನ್ನೂ ಈ ವಂಚನೆಗೆ ಬಳಸಿಕೊಂಡಿದೆ. ಕೆಲವೊಬ್ಬರನ್ನು ಇವರೇ ಸೃಷ್ಟಿ ಮಾಡಿದ್ದಾರೆ, ಅವರ ರೋಲ್‌ ಮುಗಿದ ಕೂಡಲೇ ಕೊಲೆ ಮಾಡಿದ್ದಾರೆ. ಈ ವಂಚನೆಯ ಕಥೆಯಲ್ಲಿ ಸಾಕಷ್ಟು ತಿರುವುಗಳಿವೆ, ಕಣ್ಣೀರಿದೆ, ಆಕ್ರೋಶವಿದೆ ಮತ್ತು ಯಾವ ಸಿನಿಮಾವನ್ನೂ ಮೀರಿಸಬಲ್ಲ ಅತ್ಯದ್ಭುತ ಚಿತ್ರಕತೆ ಇದೆ. ಈ ಕಥೆಯ ಇಂಚಿಂಚು ವಿವರಗಳನ್ನು ಇಲ್ಲಿ ಹೇಳ್ತಾ ಹೋಗುತ್ತೇವೆ… ಕೇಳುವಂತವರಾಗಿ!

ಈ ಸಿನಿಮಾದ ಕಥಾ ನಾಯಕ ಗೋವಿಂದ ಪೂಜಾರಿ

ಮೂಲತಃ ಕುಂದಾಪುರದವರಾದ ಮತ್ತು ಈಗ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗೋವಿಂದ ಪೂಜಾರಿ ಅವರು ಈ ಸಿನಿಮಾ ಕಥಾ ನಾಯಕ. ಬೆಂಗಳೂರಿನ ಹರಳೂರು ರಸ್ತೆಯಲ್ಲಿ ವಾಸಿಸುವ ಅವರಿಗೆ ಸಮಾಜಸೇವೆ ಆಸಕ್ತಿಯ ಕ್ಷೇತ್ರ. ಕಳೆದ ಏಳು ವರ್ಷಗಳಿಂದ ‘ವರಲಕ್ಷ್ಮಿ- ಚಾರಿಟಬಲ್ ಟ್ರಸ್ಟ್ ಮೂಲಕ ಸಾಮಾಜಿಕ ಸೇವೆ ನಡೆಸುತ್ತಿರುವ ಅವರಿಗೆ ಅವರ ಗೆಳೆಯರು ಮತ್ತು ಹಿತೈಷಿಗಳು ರಾಜಕೀಯ ಸೇರುವಂತೆ ಸಲಹೆ ನೀಡಿದ್ದರು. ಆಗ ಕೆಲವರು ಗೋವಿಂದ ಪೂಜಾರಿ ಅವರಿಗೆ ಹಿಂದೂ ಸಿಂಹಿಣಿ ಎಂದು ಕರೆಸಿಕೊಳ್ಳುವ ಚೈತ್ರಾ ಕುಂದಾಪುರ ಅವರನ್ನು ಪರಿಚಯಿಸುತ್ತಾರೆ. ಇವರು ಈ ಸಿನಿಮಾದ ಹೀರೋಯನ್‌ ಕಂ ವಿಲನ್!

ನಂಗೆ ಬೈಂದೂರು ಕ್ಷೇತ್ರದ ಟಿಕೆಟ್‌ ಒಂದು ಮಾಡಿಸಿಕೊಡಬಹುದಾ‌ ಮಾರ‍್ರೆ ಎಂದು ಕೇಳಿದಾಗ, ಅದಕ್ಯಾಕೆ ತಲೆ ಕೆಡಿಸಿಕೊಳ್ತೀರಿ ಮಾರ‍್ರೆ.. ನಾನು ಹಿಂದೂ ಸಂಘಟನೆಯಲ್ಲಿರುವುದರಿಂದ ಬಿಜೆಪಿ, ಆರೆಸ್ಸೆಸ್‌ನವರಿಗೆಲ್ಲ ನಾನು ಭಾರಿ ಹತ್ತಿರ. ಪ್ರಧಾನಿ ಕಚೇರಿಯಲ್ಲೂ ನಂಗೆ ಕನೆಕ್ಷನ್‌ ಉಂಟು. ಸುಪ್ರೀಂ ಕೋರ್ಟ್ ಜಡ್ಡುಗಳಿಗೂ ಆಪ್ತಳಾಗಿದ್ದು ಅವರೆಲ್ಲರ ಪ್ರಭಾವ ಬಳಸಿ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳುತ್ತಾರೆ.

ಈಗ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಗನ್‌ ಎಂಟ್ರಿ

ಚೈತ್ರಾ ಕುಂದಾಪುರ ಅವರು ಗೋವಿಂದ ಪೂಜಾರಿ ಅವರಿಗೆ ಟಿಕೆಟ್‌ ಕೊಡಿಸುವ ಪ್ರಕ್ರಿಯೆಯಲ್ಲಿ ಎಂಟ್ರಿ ಪಡೆಯುತ್ತಾರೆ ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಗನ್‌ ಕಡೂರು. 2022ರ ಜುಲೈ 4ರಂದು ಚಿಕ್ಕಮಗಳೂರಿನ ಸರ್ಕಾರಿ ಅತಿಥಿಗೃಹದಲ್ಲಿ ಚೈತ್ರಾ ಕುಂದಾಪುರ ಅವರು ಗಗನ್‌ ಕಡೂರು ಅವರನ್ನು ಭೇಟಿ ಮಾಡಿಸುತ್ತಾರೆ. ಇವರು ಪ್ರಧಾನಿ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳಿಗೆ ಅತ್ಯಂತ ನಿಕಟವರ್ತಿ ಎಂದು ಪರಿಚಯಿಸಲಾಗುತ್ತದೆ.

Chaithra Kundapura fraud

ಗಗನ್ ಕಡೂರು ಅವರು ಮಾತನಾಡುತ್ತಾ, ಬಿಜೆಪಿಯಲ್ಲಿ ಟಿಕೆಟ್‌ ಪಡೆಯಲು ಗಿಟ್ಟಿಸಿಕೊಳ್ಳಲು ಆರೆಸ್ಸೆಸ್‌ನ ರಾಷ್ಟ್ರೀಯ ಪ್ರಮುಖರ ಶಿಫಾರಸು ಬೇಕೇಬೇಕು. ಆದಕ್ಕೆ ನೀವು ತಲೆ ಕೆಡಿಸಿಕೊಳ್ಳಬೇಡಿ. ಸುಮಾರು 45 ವರ್ಷಗಳಿಂದ ಉತ್ತರ ಭಾರತದಲ್ಲಿ ಆರೆಸ್ಸೆಸ್‌ ಹಿರಿಯ ಪ್ರಚಾರಕರಾಗಿರುವ ಚಿಕ್ಕಮಗಳೂರು ಮೂಲದ ವಿಶ್ವನಾಥ್ ಜೀ ಮೂಲಕ ಶಿಫಾರಸು ಮಾಡಿಸುತ್ತೇನೆ ಎನ್ನುತ್ತಾರೆ.

ಮಾತಿನ ಮಧ್ಯೆ, ವಿಶ್ವನಾಥ್‌ಜಿ ಅವರು ಇಲ್ಲೇ ಇದ್ದಾರಂತೆ ಎಂದು ಚೈತ್ರಾ ಹೇಳುತ್ತಾರೆ. ಆಗ ಓ ಹೌದಾ, ದೈವ ಬಲ ಕೂಡಿಬಂದಿದೆ. ಇವತ್ತೇ ಹೋಗಿಬರೋಣ ಎಂದು ಅಂದೇ ವಿಶ್ವನಾಥ್‌ ಜೀ ಅವರ ಮನೆಗೆ ಹೋಗುತ್ತಾರೆ.

ನಾನು ವಿಶ್ವನಾಥ್‌ ಜೀ ಬಿಜೆಪಿ ಕೇಂದ್ರ ಆಯ್ಕೆ ಸಮಿತಿ ಸದಸ್ಯ!

ಚೈತ್ರಾ, ಗಗನ್‌ ಮತ್ತು ಗೋವಿಂದ ಪೂಜಾರಿ ಅವರು ವಿಶ್ವನಾಥ್‌ಜೀ ಅವರನ್ನು ಭೇಟಿ ಮಾಡುತ್ತಾರೆ. ಆಗ ವಿಶ್ವನಾಥ್‌ಜಿ ಅವರು, “ನಾನು ಬಿಜೆಪಿ ಕೇಂದ್ರ ಆಯ್ಕೆ ಸಮಿತಿಯ ಸದಸ್ಯನಾಗಿದ್ದು, RSS ಮತ್ತು ಬಿಜೆಪಿ ನಡುವಿನ ಸಮನ್ವಯಕಾರನಾಗಿದ್ದೇನೆ, ಟಿಕೆಟ್ ವಿಚಾರದಲ್ಲಿ ನನ್ನ ನಿರ್ಧಾರವೇ ಅಂತಿಮವಾಗಿರುತ್ತದೆ ಆದರೆ ಸಾಕಷ್ಟು ಹಣ ನೀಡಿದರೆ ಮಾತ್ರ ಟಿಕೆಟ್ ಸಿಗಬಹುದು” ಎಂದು ಪೀಠಿಕೆ ಹಾಕುತ್ತಾರೆ.

ನಿಮ್ಮ ಪರವಾಗಿ ಬೈಂದೂರು ಕ್ಷೇತ್ರದ ಟಿಕೆಟ್‌ ಪ್ರಕ್ರಿಯೆ ಆರಂಭಿಸಬೇಕಾದರೆ ಮೂರು ದಿನಗಳಲ್ಲಿ ರೂ.50,00,000 (ಐವತ್ತು ಲಕ್ಷ) ಗಗನ್ ಕಡೂರ್ ಅವರ ಕೈಗೆ ನೀಡಬೇಕು. ಆಯ್ಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಇನ್ನುಳಿದ ರೂ.3,00,00,000 (ಮೂರು ಕೋಟಿ ರೂಪಾಯಿ) ನೀಡಬೇಕು ಎಂದು ಹೇಳುತ್ತಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ಸಂಬಂಧ ಈ ಹಣವನ್ನು ಪಡೆಯಲಾಗುತ್ತಿದೆ. ಒಂದು ವೇಳೆ ಟಿಕೆಟ್‌ ಕೊಡಿಸಲು ಸಾಧ್ಯವಾಗದೆ ಇದ್ದರೆ ಸಂಪೂರ್ಣ ಮೊತ್ತವನ್ನು ಹಿಂದಿರುಗಿಸಲಾಗುವುದು ಎಂದು ವಿಶ್ವನಾಥ್ ಜೀ ಭರವಸೆ ನೀಡುತ್ತಾರೆ. ಜತೆಗಿರುವ ಚೈತ್ರಾ ಕುಂದಾಪುರ ಮತ್ತು ಗಗನ್ ಕಡೂರು ಕೂಡಾ ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಹಣದ ವಿಷಯದಲ್ಲಿ ತಾವೂ ಜವಾಬ್ದಾರರಾಗಿರುತ್ತೇವೆ ಎಂದು ವಿವರಿಸುತ್ತಾರೆ.

ಗೋವಿಂದ ಪೂಜಾರಿ ಅವರು ತಾವು ಕೊಟ್ಟ ಮಾತಿನಂತೆ ಜುಲೈ 7, 2022ರಂದು ಪ್ರಸಾದ್‌ ಬೈಂದೂರು ಎಂಬವರ ಮೂಲಕ 50 ಲಕ್ಷ ರೂ.ಯನ್ನು ಗಗನ್‌ ಕಡೂರ್‌ಗೆ ಕೊಡುತ್ತಾರೆ. ಅದಕ್ಕೆ ಸಾಕ್ಷಿಯಾಗುವುದು ಶಿವಮೊಗ್ಗದ ಆರೆಸ್ಸೆಸ್‌ ಕಚೇರಿ!. ನಂತರ ಚೈತ್ರಾ ಕುಂದಾಪುರ ಮತ್ತು ಗಗನ್‌ ಕಡೂರು ಅವರಿಬ್ಬರೂ ಗೋವಿಂದ ಪೂಜಾರಿ ಅವರಿಗೆ ಕರೆ ಮಾಡಿ ನಿಮ್ಮ ಹಣ ತಲುಪಿದೆ. ನಿಮಗೆ ಬೈಂದೂರು ಟಿಕೆಟ್‌ ನೀಡಲು ಕೇಂದ್ರ ಬಿಜೆಪಿ ನಾಯಕರು ಒಪ್ಪಿದ್ದಾರೆ ಎಂಬ ಸಂತಸದ ಸುದ್ದಿಯನ್ನು ನೀಡುತ್ತಾರೆ.

Chaitra Kundapura

ಈಗ ಎಂಟ್ರಿ ಪಡೆಯುವುದು ಹೊಸಪೇಟೆಯ ಅಭಿನವ ಹಾಲಶ್ರೀ ಸ್ವಾಮೀಜಿ!

ಇದಾಗಿ ಎರಡು ತಿಂಗಳು ಸಣ್ಣ ಪುಟ್ಟ ಮಾತುಕತೆ ಬಿಟ್ಟರೆ ಹೆಚ್ಚೇನೂ ಚಟುವಟಿಕೆ ಇಲ್ಲ. 2022ರ ಸೆಪ್ಟೆಂಬರ್ ಮೊದಲ ವಾರದಲ್ಲಿ ವಿಶ್ವನಾಥ್ ಜೀ ಮತ್ತು ಚೈತ್ರಾ ಕುಂದಾಪುರ ಅವರು ಕಾನ್ಫರೆನ್ಸ್ ಕಾಲ್‌ ಮಾಡಿ, ಕರ್ನಾಟಕದ ಬಿಜೆಪಿ ಟಿಕೆಟ್‌ಗೆ ಸಂಬಂಧಿಸಿ ಸಂಸ್ಥಾನ ಮಠ ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಯವರ ಶಿಫಾರಸು ಕೂಡಾ ಮುಖ್ಯವಾಗಿರುತ್ತದೆ. ಹಾಗಾಗಿ ಅವರನ್ನು ಭೇಟಿಯಾಗಿ ಎಂಬ ಸಲಹೆಯನ್ನು ಗೋವಿಂದ ಪೂಜಾರಿ ಅವರಿಗೆ ನೀಡಲಾಗುತ್ತದೆ.

ಒಂದೂವರೆ ಕೋಟಿ ರೂ. ಕೇಳಿದ ಸ್ವಾಮೀಜಿ!

ಗೋವಿಂದ ಪೂಜಾರಿ ಅವರು ಬೆಂಗಳೂರಿನಿಂದ ಹೊಸಪೇಟೆಗೆ ಹೋಗಿ ಅಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯ ಮುಂದೆ ಕುಕ್ಕರುಗಾಲಲ್ಲಿ ಕೂರುತ್ತಾರೆ. ಆಗ ಸ್ವಾಮೀಜಿಯವರು, ʻʻಗೋವಿಂದ ಪೂಜಾರಿಯವರೇ ವಿಶ್ವನಾಥಜೀ ಅವರು ಎಲ್ಲ ವಿಷಯ ತಿಳಿಸಿದ್ದಾರೆ. ಅವರು ಆಯ್ಕೆ ಸಮಿತಿಯಲ್ಲಿ ಹಿರಿಯ ಸದಸ್ಯರಾಗಿದ್ದಾರೆ. ಅವರೇ ನನಗೆ ಕರ್ನಾಟಕದ ಜವಾಬ್ದಾರಿ ಕೊಟ್ಟಿದ್ದು. ನನಗೆ ಪ್ರಧಾನಿ ಮೋದಿಯವರ ಜೊತೆಗೂ ನನಗೆ ನಿಕಟ ಸಂಪರ್ಕ ಇದೆ. ಖಂಡಿತ ಟಿಕೆಟ್‌ ಕೊಡಿಸೋಣ. ಆದರೆ, ಮುಂದಿನ ಪ್ರಕ್ರಿಯೆ 1,50,00,000 ರೂ. (1.5 ಕೋಟಿ ರೂ.) ಬೇಕಾಗುತ್ತದೆ ಎಂದರು. ಗೋವಿಂದ ಪೂಜಾರಿ ಅವರು ಸ್ವಲ್ಪ ಕಾಲಾವಕಾಶ ಕೇಳುತ್ತಾರೆ. ಕೊನೆಗೆ 2023ರ ಜನವರಿ 16ರಂದು ಬೆಂಗಳೂರಿನ ಜಯನಗರದಲ್ಲಿರುವ ಸ್ವಾಮೀಜಿ ಮನೆಗೆ ತೆರಳಿ 1.5 ಕೋಟಿ ರೂ.ಯನ್ನು ನೀಡುತ್ತಾರೆ ಗೋವಿಂದ ಪೂಜಾರಿ. ಟಿಕೆಟ್‌ ಸಿಗದಿದ್ದರೆ ಹಣ ವಾಪಸ್‌ ಎಂಬ ಭರವಸೆ!

ಬೆಂಗಳೂರಿನಲ್ಲಿ ಕೇಂದ್ರ ನಾಯಕರ ಭೇಟಿ!

ಅವರ ನಡುವೆಯೇ ಇನ್ನೊಂದು ಘಟನೆ ನಡೆಯುತ್ತದೆ. ಒಂದು ದಿನ ವಿಶ್ವನಾಥ್ ಜಿ, ಗಗನ್ ಕಡೂರು ಮತ್ತು ಚೈತ್ತಾ, ಕುಂದಾಪುರ ಅವರು ಗೋವಿಂದ ಪೂಜಾರಿ ಅವರಿಗೆ ಕಾನ್ಫರೆನ್ಸ್‌ ಕಾಲ್‌ನಲ್ಲಿ ಮಾತನಾಡಿ, 23.10.2022ರಂದು ಬಿಜೆಪಿಯ ಕೇಂದಿಯ ಚುನಾವಣಾ ಸಮಿತಿಯ ಪ್ರಮುಖರು ಬೆಂಗಳೂರಿಗೆ ಆಗಮಿಸಲಿದ್ದಾರೆ. ನೀವು ಬೆಂಗಳೂರಿನ ಕುಮಾರ ಕೃಪಾಕ್ಕೆ ಬನ್ನಿ ಎಂದಿದ್ದಾರೆ. ಅಲ್ಲಿ ಹೋದಾಗ ʻನಾಯ್ಕ್‌ʼ ಎಂಬವರು ನಾನು ದೆಹಲಿ ಚುನಾವಣಾ ಸಮಿತಿ ಸದಸ್ಯ ಎಂದು ಪರಿಚಯಿಸಿಕೊಂಡು ನಿಮ್ಮ ಹೆಸರನ್ನು ಕೇಂದ್ರೀಯ ಚುನಾವಣಾ ಸಮಿತಿ ಅಂತಿಮಗೊಳಿಸಿದೆ. ಹೀಗಾಗಿ ಮಾತುಕತೆಯಾದ ಬಾಕಿ ಮೊತ್ತ 3,00,00,000 (ಮೂರು ಕೋಟಿ ರೂಪಾಯಿ) ಹಣವನ್ನು ಗಗನ್ ಕಡೂರ್ ಹೇಳಿದ ಜಾಗಕ್ಕೆ ತಲುಪಿಸಬೇಕು ಎಂದು ಸೂಚಿಸುತ್ತಾರೆ. ಹೀಗೆ 29.10.2022ರಂದು ಮಂಗಳೂರಿನ ಒಂದು ಜಾಗದಲ್ಲಿ ಹಣದ ಹಸ್ತಾಂತರ ನಡೆಯುತ್ತದೆ.

ಈಗ ಶುರುವಾಗುತ್ತದೆ ನೋಡಿ ನಾಟಕ ಮತ್ತು ಒಂದು ಕೊಲೆ!

ಈ ನಡುವೆ 7.3.2023ರಂದು ಗಗನ್‌ ಕಡೂರು ಅವರು ಗೋವಿಂದ ಪೂಜಾರಿ ಅವರಿಗೆ ಕರೆ ಮಾಡಿ, ಸರ್‌ ನಮ್ಮ ವಿಶ್ವನಾಥ್‌ ಜೀ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಶ್ಮೀರದಲ್ಲಿರುವ ವೇಳೆ ಉಸಿರುಗಟ್ಟಿದೆ ಎನ್ನುತ್ತಾರೆ. ಮರುದಿನ ಗೋವಿಂದ ಪೂಜಾರಿ ಅವರೇ ವಿಶ್ವನಾಥ್‌ ಜೀ ಅವರು ಹೋಗಿಬಿಟ್ರು ಅನ್ನುತ್ತಾರೆ.

ಇದನ್ನು ಕೇಳಿದ ಗೋವಿಂದ ಪೂಜಾರಿ ಅವರಿಗೆ ಲೈಫಲ್ಲಿ ಮೊದಲ ಸಲ ಸಣ್ಣ ಸಂಶಯವೊಂದು ಕಾಡಲು ಶುರುವಾಗುತ್ತದೆ. ಅವರು ಕಾಶ್ಮೀರದಲ್ಲಿರುವ ತಮ್ಮ ಪರಿಚಿತರಾದ ನಿವೃತ್ತ ಸೇನಾಧಿಕಾರಿ ಯೋಗೇಶ್ ಎಂಬವರಿಗೆ ಕರೆ ಮಾಡುತ್ತಾರೆ. ಆಗ ಅವರು ವಿಶ್ವನಾಥ್ ಜಿ ಹೆಸರಿನ ಹಿರಿಯ ಪ್ರಚಾರಕರು ಯಾರೂ ಇಲ್ಲ ಎನ್ನುತ್ತಾರೆ. ಇದನ್ನು ಕೇಳಿದ ಗೋವಿಂದ ಪೂಜಾರಿ ಅವರು ಚೈತ್ರಾ ಕುಂದಾಪುರ ಹಾಗೂ ಗಗನ್ ಕಡೂರು ಇಬ್ಬರನ್ನೂ ಮಾತುಕತೆಗೆ ಬರುವಂತೆ ಹೇಳುತ್ತಾರೆ.

ಎಲ್ಲಾ ಹಣ ವಿಶ್ವನಾಥ್‌ಜೀ ಅವರಲ್ಲಿದೆ ಎನ್ನುವ ಚೈತ್ರಾ!

24.04.2023ರಂದು ಬೊಮ್ಮನಹಳ್ಳಿಯಲ್ಲಿರುವ ಗೋವಿಂದ ಪೂಜಾರಿ ಅವರ ಕಚೇರಿಯಲ್ಲಿ ಮಾತುಕತೆ ನಡೆಯುತ್ತದೆ. ಗೋವಿಂದ ಪೂಜಾರಿಯವರು ನನಗೆ ಟಿಕೆಟ್‌ ಬೇಡ, ದಯವಿಟ್ಟು ಹಣ ವಾಪಸ್‌ ಕೊಡಿ ಎಂದು ಕೇಳುತ್ತಾರೆ. ಆಗ ಚೈತ್ರಾ ಕುಂದಾಪುರ ನೀವು ಕೊಟ್ಟ ಎಲ್ಲಾ ಮೂರುವರೆ ಕೋಟಿ ರೂ. ವಿಶ್ವನಾಥಜಿ ಬಳಿ ಇದೆ. ಅವರೀಗ ವಿಧಿವಶರಾಗಿದ್ದಾರೆ ಏನು ಮಾಡೋಣ ಎಂಬ ನಾಟಕ ಮಾಡುತ್ತಾಳೆ.

ಆಗ ನಿಜ ಬಣ್ಣ ಬಯಲು ಮಾಡುತ್ತಾರೆ ಗೋವಿಂದ ಪೂಜಾರಿ

ನೋಡಿ.. ನನಗೆ ಎಲ್ಲಾ ವಿಷಯ ಗೊತ್ತಾಗಿದೆ. ನಿಮ್ಮದು ಎಲ್ಲಾ ಮೋಸ. ವಿಶ್ವನಾಥ್‌ಜೀ ಎಂಬ ಯಾವ ಪ್ರಚಾರಕರೂ ಇಲ್ಲೆ ಎನ್ನುವುದನ್ನು ದೃಢಪಡಿಸಿಕೊಂಡಿದ್ದೇನೆ ಎನ್ನುತಾರೆ. ನಾನು ಪೊಲೀಸ್‌ ಕಂಪ್ಲೇಂಟ್‌ ಕೊಡುತ್ತೇನೆ ಎಂದು ಹೇಳುತ್ತಾರೆ. ಆಗ ಚೈತ್ರಾ ಕುಂದಾಪುರ ವಿಷದ ಬಾಟಲಿ ತೋರಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಾಳೆ ಮತ್ತು ಹಣ ವಾಪಸ್‌ ಮಾಡಲು ಕಾಲಾವಕಾಶ ಕೇಳುತ್ತಾಳೆ. ಓಕೆ ಅಂತಾರೆ ಗೋವಿಂದ ಪೂಜಾರಿ. (ನಾವು ಆರಂಭದಲ್ಲಿ ಚೈತ್ರಾ ಕುಂದಾಪುರ ಅವರು ಒಂದು ಕೊಲೆ ಕೂಡಾ ಮಾಡಿದ್ದಾರೆ ಎಂದಿದ್ದು ಇದೇ ವಿಶ್ವನಾಥ್‌ಜೀ ಪ್ರಕರಣವನ್ನು. ಒಂದು ಪಾತ್ರವನ್ನು ಸೃಷ್ಟಿಸಿ, ಅದನ್ನು ಸಾಯಿಸಿದ ರೀತಿ ಭಯಾನಕವಾಗಿದೆ)

1.5 ಕೋಟಿ ರೂ. ವಾಪಸ್‌ ಕೊಡ್ತೇನೆ ಎಂದ ಹಾಲಶ್ರೀ ಸ್ವಾಮೀಜಿ

ಈ ನಡುವೆ, 25.04.2023ರಂದು ಗೋವಿಂದ ಪೂಜಾರಿ ಅವರು ಅಭಿನವ ಹಾಲಶ್ರೀ ಸ್ವಾಮೀಜಿಯ ಬೆಂಗಳೂರಿನ ಜಯನಗರದಲ್ಲಿರುವ ನಿವಾಸಕ್ಕೆ ಹೋಗುತ್ತಾರೆ. ಇವರನ್ನು ಕಂಡು ಹೆದರಿದ ಸ್ವಾಮೀಜಿ, ನನಗೆ ವಿಶ್ವನಾಥ್ ಜಿ ಯಾರೆಂದು ಸರಿಯಾಗಿ ಗೊತ್ತಿಲ್ಲ. ನಾನು ಪಡೆದಿರುವ 1.5 ಕೋಟಿ ರೂಪಾಯಿ ಹಣವನ್ನು ಒಂದು ತಿಂಗಳೊಳಗೆ ವಾಪಸ್‌ ನೀಡುತ್ತೇವೆ. ಈ ವಿಚಾರದಲ್ಲಿ ತಮ್ಮನ್ನು ಬಿಟ್ಟು ಬಿಡಿ’ ಎಂದು ಗೋಗರೆಯುತ್ತಾರೆ. 3.5 ಕೋಟಿ ರೂ. ಚೈತ್ರಾ ಕುಂದಾಪುರ ಬಳಿಯೇ ಇದೆ ಎಂಬ ಸತ್ಯವನ್ನು ಅವರು ಬಿಚ್ಚಿಡುತ್ತಾರೆ.

ಹಾಗಿದ್ದರೆ ಈ ವಿಶ್ವನಾಥ್‌ ಜೀ ಯಾರು?

ಇದೇ ವೇಳೆ, ಆರ್‌ಎಸ್‌ಎಸ್‌ ಪ್ರಚಾರಕರೆಂದು ಪರಿಚಯಿಸಿಕೊಂಡ ವಿಶ್ವನಾಥ್ ಜೀ ಯಾರು ಎಂದು ಹುಡುಕಲು ಶುರು ಮಾಡುತ್ತಾರೆ ಗೋವಿಂದ ಪೂಜಾರಿ. ಅವರು ಚಿಕ್ಕಮಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತ ಮಂಜು ಅವರನ್ನು ಸಂಪರ್ಕಿಸುತ್ತಾರೆ. ಅವರಲ್ಲಿ ವಿಷಯ ತಿಳಿಸಿದಾಗ ಅವರು ಕೆಲವು ದಿನಗಳ ಹಿಂದೆ ನಡೆದ ಒಂದು ಘಟನೆಯನ್ನು ನೆನಪು ಮಾಡಿಕೊಂಡರು. ಅದಕ್ಕೂ ವಿಶ್ವನಾಥ್‌ಜೀ ಪ್ರಕರಣಕ್ಕೂ ಸಾಮ್ಯತೆ ಕಂಡುಬಂದಿತ್ತು.

ಕಡೂರಿನ ಸೆಲೂನ್‌ನಲ್ಲಿ ಸೃಷ್ಟಿಯಾಯಿತು ವಿಶ್ವನಾಥ್‌ಜಿ ಪಾತ್ರ!

ಆವತ್ತು ಮಂಜು ಅವರು ಕಡೂರಿನ ಸೆಲೂನ್‌ನಲ್ಲಿದ್ದಾಗ ಸ್ಥಳೀಯ ವ್ಯಕ್ತಿಯೊಬ್ಬನನ್ನು ಕರೆದುಕೊಂಡು ಬಂದು ಆರೆಸ್ಸೆಸ್‌ ಪ್ರಚಾರಕರ ರೀತಿ ಮೇಕಪ್‌ ಮಾಡಿಸಲಾಗಿತ್ತು. ಆ ಸಲೂನ್‌ಗೆ ತೆರಳಿ ವಿಚಾರಿಸಿದ ಆವತ್ತು ಬಂದವರು ಧನರಾಜ್ ಹಾಗೂ ರಮೇಶ್‌ ಎಂದು ತಿಳಿಯಿತು. ರಮೇಶ್‌ ಎಂಬಾತನಿಗೆ ವಿಶ್ವನಾಥ್‌ಜಿ ವೇಷ ಹಾಕಿಸಲಾಗಿತ್ತು. ಈ ರೀತಿ RSS ಪ್ರಚಾರಕರಂತೆ ನಟಿಸಲು ಗಗನ್ ಕಡೂರ್ ಮತ್ತು ಚೈತ್ರಾ ಕುಂದಾಪುರ ತರಬೇತಿ ನೀಡಿದ್ದಲ್ಲದೆ, 1.2 ಲಕ್ಷ ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ನಾಟಕವಾಡುವಾಗ ಆರೆಸ್ಸೆಸ್ ವಾಹನವಾಗಿ ಬಳಸಲು ಗಾಡಿ ಕೊಟ್ಟಿದ್ದು ಧನರಾಜ್‌. ಅವನಿಗೆ ಪಾವತಿಯಾದ ಮೊತ್ತ ರೂ. 2,50,000!

ಕೆಆರ್‌ ಮಾರ್ಕೆಟ್‌ನ ಕಬಾಬ್‌ ವ್ಯಾಪಾರಿಯೇ ಬಿಜೆಪಿ ಕೇಂದ್ರ ಸಮಿತಿ ಸದಸ್ಯ

ಇನ್ನು ಬೆಂಗಳೂರಿನಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರೆಂದು ಹೇಳಿಕೊಂಡ ನಾಯ್ಕ ಯಾರು ಎಂದು ಧನರಾಜ್‌ ಬಳಿ ವಿಚಾರಿಸಿದಾಗ ಆತ ಬೆಂಗಳೂರಿನ ಕೆ.ಆರ್. ಮಾರ್ಕೆಟ್‌ ಬಳಿ ಚಿಕನ್ ಕಬಾಬ್ ತಯಾರಿಸುವ ಬೀದಿ ವ್ಯಾಪಾರಿ ಎಂಬುದು ಗೊತ್ತಾಯಿತು. ಅವನನ್ನು ಭೇಟಿಯಾದಾಗ ಬಿಜೆಪಿ ನಾಯಕನಾಗಿ ಪಾತ್ರ ಮಾಡಲು ತನಗೆ ಗಗನ್ ಕಡೂರು 93,000 ರೂ. ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಇಷ್ಟೆಲ್ಲದರ ನಡುವೆ ಈ ವಿಚಾರವನ್ನ ಯಾರ ಮುಂದೆಯೂ ಬಾಯಿ ಬಿಡಬಾರದು. ಬಿಟ್ಟರೆ ಭೂಗತ ಪಾತಕಿಗಳ ಮೂಲಕ ಕೊಲೆ ಮಾಡಿಸಲಾಗುವುದು ಎಂಬ ಬೆದರಿಕೆಯನ್ನೂ ಒಡ್ಡಲಾಗಿದೆ ಎಂದು ಗೋವಿಂದ ಪೂಜಾರಿ ಹೇಳಿದ್ದಾರೆ! ಈ ಎಲ್ಲ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ತನ್ನಿಂದ ಲೂಟಿ ಮಾಡಿರುವ ಐದು ಕೋಟಿ ರೂ.ಯನ್ನು ವಾಪಸ್‌ ಕೊಡಿಸಬೇಕು ಎಂದು ಗೋವಿಂದ ಪೂಜಾರಿ ಆಗ್ರಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌!

Karnataka Weather Forecast : ತಿಂಗಳಾಂತ್ಯದವರೆಗೆ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather forecast Heavy rain alert
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ

ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ

ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ಕರ್ನಾಟಕದಲ್ಲಿ ಇಂದಿನಿಂದ ಡಿಸೆಂಬರ್‌ 3ರವರೆಗೆ ಮಳೆ ಸಾಧ್ಯತೆ!

Karnataka Weather Forecast : ಇಂದಿನಿಂದ (ನ.28) ಡಿ.3ರ ವರೆಗೂ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Girl plying in Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ (Karnataka Weather Forecast) ಆಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 17.2 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

ಒಳನಾಡು ಹಾಗೂ ಕರಾವಳಿ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೊಮ್ಮೆ ಸಾಧಾರಣದಿಂದ ಜೋರು ಮಳೆ ಸುರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 19 ಡಿ.ಸೆ ಇರಲಿದೆ.

ನ.28 ರಿಂದ ಡಿ.3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Child trade : ಮಕ್ಕಳ ಮಾರಾಟದ ಬೃಹತ್‌ ಜಾಲ ಪತ್ತೆ;‌ ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!

ಒಣ ಹವೆ ಮುಂದುವರಿಕೆ

ಬೀದರ್‌, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಚಾಮರಾಜನಗರ, ಹಾಸನ, ಮೈಸೂರಿಗೆ ಯಾವುದೇ ಮಳೆಯ ಸೂಚನೆ ಇಲ್ಲ. ಬದಲಿಗೆ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 19ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉಡುಪಿ

Road Accident : ಅಜ್ಜನ ಸಾವಿನ ಸುದ್ದಿ ಕೇಳಿ ಅವಸರದಲ್ಲಿ ಹೊರಟಿದ್ದ ಮೊಮ್ಮಗ ಸಾವು!

Road Accident : ಅಜ್ಜನ ಸಾವಿನ ಸುದ್ದಿ ಕೇಳಿ ಅವಸರದಲ್ಲೇ ಬೈಕ್‌ ಏರಿ ಮನೆಗೆ ಹೊರಟಿದ್ದ ಮೊಮ್ಮಗ ‌ಸಾವಿನ ಮನೆ ಸೇರಿದ್ದಾನೆ. ಅಪಘಾತದಲ್ಲಿ ಮೆಡಿಕಲ್‌ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟಿದ್ದಾನೆ.

VISTARANEWS.COM


on

By

Road Accident in Chamarajanagar
Koo

ಚಾಮರಾಜನಗರ/ಉಡುಪಿ: ಅಜ್ಜನ ಸಾವಿನ ಸುದ್ದಿ ಕೇಳಿ ಅಂತಿಮ ದರ್ಶನಕ್ಕೆ ತೆರಳುತ್ತಿದ್ದ ಮೆಡಿಕಲ್‌ ವಿದ್ಯಾರ್ಥಿ ಅಪಘಾತದಲ್ಲಿ (Road Accident) ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.

ಉಡುಪಿ ಜಿಲ್ಲೆ ಹೆಬ್ರಿ ಮೂಲದ ನಿತೀಶ್ ಪೂಜಾರಿ ಮೃತ ದುರ್ದೈವಿ ಆಗಿದ್ದಾನೆ. ಚಾಮರಾಜನಗರದಲ್ಲಿ ನಿತೀಶ್‌ ಪೂಜಾರಿ ಮೆಡಿಕಲ್‌ ವಿದ್ಯಾಭ್ಯಾಸ ಮಾಡುತ್ತಿದ್ದ. ನಿನ್ನೆ ಭಾನುವಾರ ವಯೋಸಹಜ ಕಾಯಿಲೆಯಿದ್ದ ಅಜ್ಜ ಮೃತಪಟ್ಟಿದ್ದಾಗಿ ಕುಟುಂಬಸ್ಥರು ವಿಷಯ ಮುಟ್ಟಿಸಿದ್ದರು.

ಹೀಗಾಗಿ ಬಾರದ ನೋವಿನಲ್ಲೇ ಬಸ್‌ ಬದಲಿಗೆ ಭಾನುವಾರ ತಡರಾತ್ರಿ ಬೈಕ್‌ ಮೂಲಕ ಊರಿಗೆ ಹೊರಟಿದ್ದ. ಆದರೆ ಅವಸರದಲ್ಲಿದ್ದ ಆತನಿಗೆ ರಸ್ತೆಯಲ್ಲಿದ್ದ ಹಂಪ್ಸ್ ಕಾಣದೆ ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳಗೆ ಬಿದ್ದಿದ್ದಾನೆ. ಬೈಕ್‌ ವೇಗವಾಗಿ ಇದ್ದ ಕಾರಣಕ್ಕೆ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಮರಾಜನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿದ್ದು, ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಮನೆಯ ಹಿರಿಯ ಸದಸ್ಯನನ್ನು ಕಳೆದುಕೊಂಡ ದುಃಖದಲ್ಲಿದ್ದ ಆ ಕುಟುಂಬಕ್ಕೆ, ಇದೀಗ ಮನೆ ಮಗನು ಇನ್ನಿಲ್ಲ ಎಂಬ ಸುದ್ದಿ ಕೇಳಿ ಬರಸಿಡಿಲು ಬಡಿದಂತಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Self Harming: ಒಂದೇ ಕುಟುಂಬದ ಐವರ ಆತ್ಮಹತ್ಯೆಗೆ ಬಿಗ್‌ ಟ್ವಿಸ್ಟ್;‌ ಬಡ್ಡಿ ದಂಧೆ ಕರಾಳತೆ ಬಯಲು

ಅಪಘಾತ ಬಳಿಕ ವ್ಯಕ್ತಿಯ ಜೀವ ಉಳಿಸಿದ ಮೊಹಮ್ಮದ್‌ ಶಮಿ; ಎಷ್ಟು ಸಲ ಹೃದಯ ಗೆಲ್ತೀರಿ ಎಂದ ಜನ

ಡೆಹ್ರಾಡೂನ್:‌ ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವಕಪ್‌ ಟೂರ್ನಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಮೊಹಮ್ಮದ್‌ ಶಮಿ ಅವರು ದೇಶದ ಶತಕೋಟಿ ಜನರ ಮನಗೆದ್ದಿದ್ದಾರೆ. ಅವರ ಮೊನಚಾದ ಬೌಲಿಂಗ್‌, ಸೆಮಿಫೈನಲ್‌ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಅದ್ಭುತ ಪ್ರದರ್ಶನದ ಕುರಿತು ಈಗಲೂ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ, ಅಪಘಾತದ ಬಳಿಕ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬರ ಪ್ರಾಣವನ್ನು ಉಳಿಸುವ ಮೂಲಕ ಮೊಹಮ್ಮದ್‌ ಶಮಿ ಅವರು ಮಾನವೀಯತೆ ಮೆರೆದಿದ್ದಾರೆ.

ಈ ಕುರಿತು ಮೊಹಮ್ಮದ್‌ ಶಮಿ ಅವರೇ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಅಪ್‌ಲೋಡ್‌ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. “ಒಂದು ಜೀವ ಉಳಿಸಿದ ಖುಷಿ ನನ್ನದಾಯಿತು. ಈ ವ್ಯಕ್ತಿ ತುಂಬ ಅದೃಷ್ಟವಂತ. ಉತ್ತರಾಖಂಡದ ನೈನಿತಾಲ್‌ ಬಳಿ ಈಗಷ್ಟೇ ಕಾರೊಂದು ಬೆಟ್ಟದಿಂದ ಕೆಳಗೆ ಬಿತ್ತು. ಕಾರಿನಲ್ಲಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಇದರಿಂದ ಕಾರಿನಲ್ಲಿದ್ದ ವ್ಯಕ್ತಿಗೆ ಮರು ಜನ್ಮ ಸಿಕ್ಕಂತಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಜನರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಮೊಹಮ್ಮದ್‌ ಶಮಿ ಅವರು ಮೈದಾನದಲ್ಲಿ ಭಾರತ ತಂಡವನ್ನು ರಕ್ಷಿಸುತ್ತಾರೆ. ಹಾಗೆಯೇ, ಮೈದಾನದ ಹೊರಗೆ ದೇಶದ ಜನರನ್ನು ರಕ್ಷಿಸುತ್ತಾರೆ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. “ಮೊಹಮ್ಮದ್‌ ಶಮಿ ಅವರೇ, ಇರೋ ಒಂದು ಹೃದಯವನ್ನು ಎಷ್ಟು ಬಾರಿ ಗೆಲ್ಲುತ್ತೀರಿ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “ಮೈದಾನದ ಹೊರಗಾಗಲಿ, ಮೈದಾನದ ಒಳಗಾಗಲಿ, ಮೊಹಮ್ಮದ್‌ ಶಮಿ ಹೀರೊ” ಎಂದು ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ಹೀಗೆ ನೂರಾರು ಜನ ಮೊಹಮ್ಮದ್‌ ಶಮಿ ಅವರ ಮಾನವೀಯ ಗುಣವನ್ನು ಕೊಂಡಾಡಿದ್ದಾರೆ.

ವಿಶ್ವಕಪ್‌ನಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ

ಕೆಲ ದಿನಗಳ ಹಿಂದಷ್ಟೇ ಮುಕ್ತಾಯಗೊಂಡ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಮೊಹಮ್ಮದ್‌ ಶಮಿ ಅವರು 24 ವಿಕೆಟ್‌ಗಳನ್ನು ಪಡೆಯುವ ಮೂಲಕ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್‌ ತೆಗೆದುಕೊಂಡ ಬೌಲರ್‌ ಎನಿಸಿದರು. ಅದರಲ್ಲೂ, ಸೆಮಿಫೈನಲ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ತಂಡ ಗೆಲುವು ಸಾಧಿಸುವಲ್ಲಿ ಶಮಿ ನಿರ್ಣಾಯಕ ಪಾತ್ರ ನಿರ್ವಹಿಸಿದ್ದರು. ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ತಂಡ ಸೋತು ನಿರಾಸೆ ಅನುಭವಿಸಿದ ಬಳಿಕ ಮೊಹಮ್ಮದ್‌ ಶಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಂತೈಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather: ಅಲ್ಪ ವಿರಾಮ ಕೊಟ್ಟ ಮಳೆರಾಯ; ಮತ್ತೆ ಯಾವಾಗ ಭಾರಿ ಮಳೆ!

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರವು ಕಡಿಮೆ ಆಗಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಿದ್ದು, ಚಳಿ ತೀವ್ರತೆ ಹೆಚ್ಚಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕಳೆದೊಂದು ವಾರದಿಂದ ವಾತಾವರಣ (Karnataka Weather Forecast) ಇಂದು ಬದಲಾಗಿದೆ. ರಾಜ್ಯದಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯೇ ಮುಂದುವರಿಯಲಿದೆ. ಕೆಲವು ಕಡೆ ಥಂಡಿ ಗಾಳಿ ಬೀಸಲಿದ್ದು, ಚಳಿಯು ಮೈ ನಡುಗಿಸುತ್ತದೆ.

ಬೆಂಗಳೂರಿನ ಸುತ್ತಮುತ್ತ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ ಇರಲಿದೆ.

ನವೆಂಬರ್‌ 30ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಅಲ್ಲಲ್ಲಿ ಅತ್ಯಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸೂಚನೆ ಇದೆ. ಉಳಿದಂತೆ ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗದಲ್ಲಿ ಮಳೆಯ ಸಿಂಚನವಾದರೆ, ತುಮಕೂರು, ವಿಜಯನಗರ ಬಳ್ಳಾರಿ, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ.

ಇದನ್ನೂ ಓದಿ: Electric Shock: ಅಥಣಿಯಲ್ಲಿ ವಿದ್ಯುತ್ ಪ್ರವಹಿಸಿ ತಂದೆ-ಮಗ ಸಾವು

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉಳಿದಂತೆ ಉತ್ತರ ಒಳನಾಡಲ್ಲಿ ಒಣಹವೆ ಇತ್ತು. ಶಿವಮೊಗ್ಗದ ತಾಳಗುಪ್ಪದಲ್ಲಿ 4, ತುಮಕೂರಿನ ಗುಬ್ಬಿ, ಹಾಸನದ ಕೊಣನೂರು, ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 17.1 ಡಿ.ಸೆ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19ಡಿ.ಸೆ
ಗದಗ: 32 ಡಿ.ಸೆ – 21 ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 25 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Fashion Show
ದೇಶ11 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ11 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ11 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ14 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ27 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ38 mins ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ43 mins ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್55 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ1 hour ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ1 hour ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌