Chaitra Kundapura : ಆರೆಸ್ಸೆಸ್‌ ಪ್ರಚಾರಕನ ಪಾತ್ರ ಮಾಡಲು 10 ಲಕ್ಷ ಕೊಟ್ಟಿದ್ದ ಚೈತ್ರಾ ಕುಂದಾಪುರ! ಕಬಾಬ್‌ ಮಾರೋನು ಬಿಜೆಪಿ ಲೀಡರ್!‌ - Vistara News

ಉಡುಪಿ

Chaitra Kundapura : ಆರೆಸ್ಸೆಸ್‌ ಪ್ರಚಾರಕನ ಪಾತ್ರ ಮಾಡಲು 10 ಲಕ್ಷ ಕೊಟ್ಟಿದ್ದ ಚೈತ್ರಾ ಕುಂದಾಪುರ! ಕಬಾಬ್‌ ಮಾರೋನು ಬಿಜೆಪಿ ಲೀಡರ್!‌

Chaitra Kundapura: ಚೈತ್ರಾ ಕುಂದಾಪುರ ಎಂಥ ಖತರ್ನಾಕ್‌ ಎಂದರೆ ಆಕೆ ಆರೆಸ್ಸೆಸ್‌ ಪ್ರಚಾರಕ್‌ ವಿಶ್ವನಾಥ್‌ಜಿ ಪಾತ್ರವನ್ನು ನಕಲಿಯಾಗಿ ಸೃಷ್ಟಿಸಿದ್ದಳು. ಇದಕ್ಕೆ ಆಕೆ ಹೂಡಿದ ಹಣದ ಮೊತ್ತ 10 ಲಕ್ಷ ರೂ. ಹಾಗಿದ್ದರೆ ಆ ಪಾತ್ರ ಮಾಡಿದವರು ಯಾರು

VISTARANEWS.COM


on

Chaitra Kundapura with Ramesh and Dhanaraj
ವಿಶ್ವನಾಥ್‌ಜಿ ಪಾತ್ರ ಮಾಡಿದ ರಮೇಶ್‌ ಮತ್ತು ಧನರಾಜ್‌. ಮಧ್ಯೆ ಚೈತ್ರಾ ಕುಂದಾಪುರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ ಚಿಕ್ಕಮಗಳೂರು: ಚೈತ್ರಾ ಕುಂದಾಪುರ (Chaitra Kundapura) ಎಂಬ ಬೆಂಕಿ ಭಾಷಣಕಾರ್ತಿ ಬೈಂದೂರು ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಹೇಳಿ ಗೋವಿಂದ ಬಾಬು ಪೂಜಾರಿ (Govinda Poojari) ಎಂಬವರಿಂದ ಐದು ಕೋಟಿ ರೂ. ವಸೂಲಿ ಮಾಡಿ ವಂಚಿಸಿದ ಪ್ರಕರಣದಲ್ಲಿ ಹಲವು ರೋಚಕ ಘಟನೆಗಳಿವೆ. ಈ ವಂಚನೆಯ ಜಾಲದಲ್ಲಿ (Fraud Case) ಬರುವ ಆರೆಸ್ಸೆಸ್‌ ಪ್ರಚಾರಕ ವಿಶ್ವನಾಥ್‌ಜೀ (RSS Pracharak Vishwanathji) ಎಂಬ ಪಾತ್ರವನ್ನು ಸೃಷ್ಟಿ ಮಾಡಲು ಚೈತ್ರಾ ಕುಂದಾಪುರ ಕೊಟ್ಟಿರುವ ದುಡ್ಡು 10 ಲಕ್ಷ ರೂ.!

ಚಿಕ್ಕಮಗಳೂರಿನ ಒಬ್ಬ ಸಾಮಾನ್ಯ ಅಂಗಡಿಕಾರನನ್ನು ಸೆಲೂನ್‌ಗೆ ಕರೆದುಕೊಂಡು ಹೋಗಿ ವಿಶ್ವನಾಥ್‌ಜೀಯಾಗಿ ಬದಲಾಯಿಸಿದ ಚೈತ್ರಾ, ಬೆಂಗಳೂರಿನ ಒಬ್ಬ ಕಬಾಬ್‌ ವ್ಯಾಪಾರಿಯನ್ನು ಬಿಜೆಪಿಯ ಚುನಾವಣಾ ಸಮಿತಿ ಸದಸ್ಯ ಎಂದು ಪಾರ್ಟ್‌ ಮಾಡಿಸಿದ್ದಳು!

ಗೋವಿಂದ ಪೂಜಾರಿ ಅವರು ಬೈಂದೂರು ಟಿಕೆಟ್‌ ಕೊಡಿಸುವಂತೆ ಮೊದಲು ಚೈತ್ರಾ ಕುಂದಾಪುರಳನ್ನು ಕೇಳುತ್ತಾರೆ. ಆಕೆ ಓಕೆ ಸಾರ್‌ ಮಾಡಿಕೊಡೋಣ ಎಂದು ಭರವಸೆ ನೀಡುತ್ತಾಳೆ. ಬಳಿಕ ಅವಳು ಚರ್ಚೆ ಮಾಡುವುದು ಚಿಕ್ಕಮಗಳೂರಿನ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಗನ್‌ ಕಡೂರುನನ್ನು. ಗೋವಿಂದ ಪೂಜಾರಿ ಅವರಿಗೆ ತಾವು ಟಿಕೆಟ್‌ಗಾಗಿ ದೊಡ್ಡ ದೊಡ್ಡ ವ್ಯಕ್ತಿಗಳ ಜತೆ ಸಮಾಲೋಚನೆಯಲ್ಲಿದ್ದೇವೆ ಎನ್ನುವುದನ್ನು ತೋರಿಸುವುದಕ್ಕಾಗಿ ಚೈತ್ರಾ ಕುಂದಾಪುರ ಮತ್ತು ಗಗನ್‌ ಕಡೂರು ಸೃಷ್ಟಿ ಮಾಡುವ ಎರಡು ಪಾತ್ರಗಳೇ ಆರೆಸ್ಸೆಸ್‌ ಪ್ರಚಾರಕ್‌ ವಿಶ್ವನಾಥ್‌ಜೀ ಮತ್ತು ಬಿಜೆಪಿಯ ಚುನಾವಣಾ ಮಂಡಳಿಯ ಹಿರಿಯ ಸದಸ್ಯ ನಾಯ್ಕ್‌!

Chaithra Kundapura fraud

ಗೋವಿಂದ ಪೂಜಾರಿ ಅವರಿಗೆ ಈ ವ್ಯಕ್ತಿಗಳನ್ನು ಭೇಟಿ ಮಾಡಿಸಬೇಕು ಎಂದಾದಾಗ ಗಗನ್‌ ಕಡೂರ್‌ಗೆ ಹೊಳೆಯುವ ಐಡಿಯಾವೇ ತನ್ನ ಪರಿಚಯದವನೇ ಆದ ಧನರಾಜ್‌. ಧನರಾಜ್‌ ಕಡೂರಿನಲ್ಲಿ ಇನ್ನೋವಾ ವಾಹನ ಬಾಡಿಗೆ ಮಾಡುವ ಒಬ್ಬ ವ್ಯಕ್ತಿ. ಅದೊಂದು ದಿನ ಚೈತ್ರಾ ಧನರಾಜ್‌ನನ್ನು ಗಗನ್‌ ಕಡೂರು ಮನೆಗೆ ಕರೆಸಿಕೊಂಡು ಮಾತನಾಡುತ್ತಾಳೆ. ಕರಾವಳಿಯ ಚುನಾವಣಾ ಟಿಕೆಟ್‌ ವಿಚಾರವನ್ನು ಮಾತನಾಡುತ್ತಾಳೆ. ಗೋವಿಂದ ಪೂಜಾರಿಯವರಿಗೆ ಟಿಕೆಟ್‌ ಸಿಗೋದು ಗ್ಯಾರಂಟಿ ಆಗಿದೆ. ನಾವೇ ನಿಂತು ಎಲ್ಲ ಮಾಡಿಸಿದ್ದೇವೆ. ಆದರೆ, ಒಂದೊಮ್ಮೆ ಟಿಕೆಟ್‌ ಸಿಕ್ಕಿದರೆ ಅದು ತನಗೆ ಹೊಸಪೇಟೆಯ ಹಿರೇಹಡಗಲಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗಳೇ ಮಾಡಿಸಿದ್ದಾರೆ ಎಂದು ತಿಳಿಯುತ್ತಾರೆ. ನಾವು ಇಷ್ಟೆಲ್ಲ ಕಷ್ಟಪಟ್ಟಿದ್ದು ವೇಸ್ಟ್‌ ಆಗುತ್ತದೆ. ಹೀಗಾಗಿ ವಿಶ್ವನಾಥ್‌ಜೀ ಎನ್ನುವ ವ್ಯಕ್ತಿ ಬೇಕಲ್ಲ ಎಂದು ಕೇಳುತ್ತಾಳೆ. ಇದರಲ್ಲಿ ಏನೂ ಡೇಂಜರ್‌ ಇಲ್ಲ, ಸಹಕಾರ ನೀಡಿದರೆ ನಿಮಗೂ ಲಾಭವಾಗುತ್ತದೆ, ನಮಗೂ ಲಾಭವಾಗುತ್ತದೆ ಎನ್ನುತ್ತಾಳೆ.

ದುಡ್ಡಿನಾಸೆಗೆ ಬೀಳುವ ಧನರಾಜ್‌ ಆಯ್ತು ಮಾಡಿಸೋಣ ಅಂತಾನೆ. ಆಗ ಅವನ ತಲೆಗೆ ಹೊಳೆದಿರುವ ಹೆಸರು ರಮೇಶ್‌! ರಮೇಶ್‌ ಮೂಲತಃ ಚಳ್ಳಕೆರೆಯವನು. ಕಡೂರಿನಲ್ಲಿ ಸಣ್ಣ ಪುಟ್ಟ ವ್ಯವಹಾರ ಮಾಡಿಕೊಂಡಿದ್ದಾನೆ.

Chaitra Kundapura Case
ಧನರಾಜ್‌ ಮತ್ತು ರಮೇಶ್‌

ಸೆಲೂನ್‌ನಲ್ಲೇ ರೆಡಿ ಆದ್ರು ಆರೆಸ್ಸೆಸ್‌ ಪ್ರಚಾರಕ ವಿಶ್ವನಾಥ್‌ ಜಿ!

ಇತ್ತ ಧನರಾಜ್‌ ರಮೇಶ್‌ನ ಜತೆ ಮಾತನಾಡುತ್ತಾನೆ. ರಮೇಶ್‌ ಕೂಡಾ ಏನೇನೋ ವೇಷ ಮಾಡಿಲ್ವಾ? ಇದನ್ನೂ ಮಾಡೋಣ ಬಿಡು ಅಂತಾನೆ. ಅದೊಂದು ದಿನ ಗೋವಿಂದ ಪೂಜಾರಿ ಅವರು ಚಿಕ್ಕಮಗಳೂರಿಗೆ ಬರಲು ದಿನ ನಿಗದಿಯಾಗುತ್ತದೆ. ಆವತ್ತು ರಮೇಶ್‌ನನ್ನು ಕಡೂರಿನ ಒಂದು ಸೆಲೂನ್‌ಗೆ ಕರೆದುಕೊಂಡು ಹೋಗಿ ಚಂದ ಕಟ್ಟಿಂಗ್‌ ಮಾಡಿಸಿ ಡ್ರೆಸ್‌ ಹಾಕಿಸಿ ವಿಶ್ವನಾಥ್‌ ಜೀ ಮಾಡಲಾಗುತ್ತದೆ.

ಅದಕ್ಕಿಂತ ಮೊದಲು ಆರೆಸ್ಸೆಸ್‌ ಪ್ರಚಾರಕ್‌ ಎಂದರೆ ಏನು? ಅವರು ಹೇಗಿರುತ್ತಾರೆ? ಹೇಗೆ ಮಾತನಾಡುತ್ತಾರೆ? ಹೇಗ ಸಿಂಪಲ್‌ ಆಗಿರುತ್ತಾರೆ ಎನ್ನುವುದೆಲ್ಲವನ್ನೂ ಚೈತ್ರಾ ಕುಂದಾಪುರ ರಮೇಶ್‌ಗೆ ವಿವರಣೆ ಕೊಟ್ಟಿದ್ದಳು. ಹಾಗೆ ಆ ದಿನ ಬಂತು ಗೋವಿಂದ ಪೂಜಾರಿ ಅವರು ಬಂದು ವಿಶ್ವನಾಥ್‌ ಜೀ ಎಂಬ ನಕಲಿ ಆರೆಸ್ಸೆಸ್‌ ಪ್ರಚಾರಕರನ್ನು ಭೇಟಿ ಮಾಡುತ್ತಾರೆ. ಆಗ 50 ಲಕ್ಷದ ಡೀಲ್‌ ಕುದುರುತ್ತದೆ!

ಇದನ್ನೂ ಓದಿ: Chaithra Kundapura : ಮುಸ್ಲಿಮರ ಮೇಲೆ ಬೆಂಕಿ ಉಗುಳುವ ಚೈತ್ರಾ ಕುಂದಾಪುರ ಅಡಗಿ ಕುಳಿತದ್ದು ಮುಸ್ಲಿಮ್‌ ಫ್ರೆಂಡ್‌ ಮನೆಯಲ್ಲಿ!

ಕಬಾಬ್‌ ವ್ಯಾಪಾರಿ ಬಿಜೆಪಿಯ ಹಿರಿಯ ಲೀಡರ್‌ ಆಗಿದ್ದು ಹೀಗೆ!

ಅಂದ ಹಾಗೆ, ಚಿಕ್ಕಮಗಳೂರಿನಲ್ಲಿ ಪ್ರಚಾರಕ ವಿಶ್ವನಾಥ್‌ಜೀ ಪಾತ್ರ ಸೃಷ್ಟಿ ಮಾಡಿದಂತೆಯೇ ಬೆಂಗಳೂರಿನಲ್ಲಿ ಬಿಜೆಪಿಯ ಚುನಾವಣಾ ಮಂಡಳಿಯ ಹಿರಿಯ ಸದಸ್ಯ ನಾಯ್ಕ್‌ ಪಾತ್ರವನ್ನು ಸೃಷ್ಟಿ ಮಾಡಲಾಗುತ್ತದೆ. ಅಲ್ಲಿ ಚೈತ್ರಾ ಕೈಗೆ ಸಿಕ್ಕಿದವನು ಕೆ.ಆರ್‌. ಮಾರ್ಕೆಟ್‌ನಲ್ಲಿ ಕಬಾಬ್‌ ವ್ಯಾಪಾರಿಯಾಗಿರುವ ಒಬ್ಬ ವ್ಯಕ್ತಿ. ಬಿಜೆಪಿಯ ಹಿರಿಯ ನಾಯಕರು ಬೆಂಗಳೂರಿಗೆ ಬಂದಿದ್ದಾರೆ. ಕುಮಾರಕೃಪಾ ಗೆಸ್ಟ್‌ ಹೌಸ್‌ನಲ್ಲಿರುತ್ತಾರೆ ಎಂದು ಗೋವಿಂದ ಪೂಜಾರಿ ಅವರಿಗೆ ಹೇಳುತ್ತಾಳೆ ಚೈತ್ರಾ. ಆವತ್ತು ಗೋವಿಂದ ಪೂಜಾರಿ ಅವರು ಬಂದಾಗ ನಕಲಿ ನಾಯ್ಕ್‌ ಭೇಟಿಯಾಗುತ್ತಾರೆ. ನಿಮ್ಮ ಟಿಕೆಟ್‌ ಫೈನಲ್‌ ಆಗಿದೆ. ನೀವು ಮೂರು ಕೋಟಿ ಅಮೌಂಟ್‌ ಕೂಡಾ ರೆಡಿ ಮಾಡಿ ಎಂದು ಕಬಾಬ್‌ ವ್ಯಾಪಾರಿ ಸ್ಟೈಲಾಗಿ ಹೇಳುತ್ತಾನೆ. ಗೋವಿಂದ ಪೂಜಾರಿ ಅವರು ಇದನ್ನು ನಂಬಿಕೊಂಡು ಹೋಗುತ್ತಾರೆ.

ಧನರಾಜ್‌ಗೆ ಕೊಟ್ಟಿದ್ದು 10 ಲಕ್ಷ ರೂ.!

ನಕಲಿ ವಿಶ್ವನಾಥ್‌ ಜೀ ಸೃಷ್ಟಿಯ ನಾಟಕದ ಪಾತ್ರಧಾರಿಗಳಾದ ಧನರಾಜ್‌ ಮತ್ತು ರಮೇಶ್‌ಗೆ ಚೈತ್ರಾ ಕುಂದಾಪುರ ಯಾವ ಮೋಸವನ್ನೂ ಮಾಡಿಲ್ಲ! ಯಾಕೆಂದರೆ ಒಂದು ಸಣ್ಣ ಆಕ್ಟ್‌ಗೆ 10 ಲಕ್ಷ ರೂ. ಕೊಟ್ಟಿದ್ದಾಳೆ ಎಂದು ಸ್ವತಃ ಧನರಾಜ್‌ ಹೇಳಿದ್ದಾನೆ!

ಇದನ್ನೂ ಓದಿ: Chaithra Kundapura : ಅಬ್ಬಾ ಇವಳೆಂಥಾ ವಂಚಕಿ! 5 ಕೋಟಿ ವಂಚಿಸಿದ್ದಷ್ಟೇ ಅಲ್ಲ, ಮರ್ಡರ್‌ ಕೂಡಾ ಮಾಡಿದ್ದಾಳೆ ಚೈತ್ರಾ ಕುಂದಾಪುರ!

ಹಾಗಿದ್ದರೆ ಧನರಾಜ್‌ ಮತ್ತು ರಮೇಶ್‌ ಹೇಳಿದ್ದೇನು?

ಈ ಪ್ರಕರಣದಲ್ಲಿ ತಮ್ಮ ಪಾತ್ರವೇನು? ತಮ್ಮ ನಿಲುವೇನು ಎನ್ನುವುದನ್ನು ಧನರಾಜ್‌ ಮತ್ತು ರಮೇಶ್‌ ವಿಡಿಯೊ ಮೂಲಕ ಹೇಳಿದ್ದಾರೆ.

ʻʻಇಷ್ಟೊಂದು ದೊಡ್ಡ ಮಟ್ಟದ ವ್ಯವಹಾರ ಎಂದು ನಮ್ಗೆ ಗೊತ್ತಿರಲಿಲ್ಲ. ನಿಮಗೂ ಅನುಕೂಲ ಆಗುತ್ತೆ ಎಂದಿದ್ದಕ್ಕೆ ನಾವು ಒಪ್ಪಿಕೊಂಡಿದ್ದೀವಿ. ನಾನು ಹೇಳಿದಾಗಿ ನೀವು ನಟಿಸಿ ಎಂದು ಹೇಳಿದ್ರು. ನಾವು ಹಾಗೇ ಮಾಡಿದ್ವಿ ಅಷ್ಟೇ. ದೊಡ್ಡ ವ್ಯವಹಾರ ಬಗ್ಗೆ ಮಾಹಿತಿ ಇಲ್ಲʼʼ ಎಂದು ಧನರಾಜ್‌ ಮತ್ತು ರಮೇಶ್‌ ಹೇಳಿದ್ದಾರೆ.

ʻʻಎಲ್ಲಾ ಕ್ರಿಯೆಟ್ ಮಾಡಿದ್ದು ಗಗನ್. ಆ ರೀತಿ ನಾವು ನಟನೆ ಮಾಡಿದ್ವಿ ಅಷ್ಟೇ. ಟಿಕೆಟ್ ನೀಡಿದ್ರೆ ಅವರು ಗೆಲ್ಲುತ್ತಾರೆ.‌ ಆಗ ನಿಮಗೂ ಹೆಲ್ಪ್ ಆಗುತ್ತದೆ ಎಂದಿದ್ರು. ನಮಗೆ ಒಟ್ಟು 10 ಲಕ್ಷ ರೂ. ಕೊಟ್ಟಿದ್ದಾರೆʼʼ ಎಂದು ಧನರಾಜ್‌ ಹೇಳಿದ್ದಾನೆ. ಜತೆಗೆ ಈ ವಿಚಾರವನ್ನು ಬಾಯಿ ಬಿಟ್ಟರೆ ಹುಷಾರ್‌ ಎನ್ನುವ ಬೆದರಿಕೆಯನ್ನೂ ಹಾಕಿದ್ದಾಳಂತೆ ಚೈತ್ರಾ.

ಧನರಾಜ್‌, ರಮೇಶ್‌ ಪಾತ್ರವನ್ನು ಪತ್ತೆ ಹಚ್ಚಿದ್ದೇ ಗೋವಿಂದ ಪೂಜಾರಿ, ಹೇಗೆ?

ನಿಜವೆಂದರೆ, ವಿಶ್ವನಾಥ್‌ಜಿ ಒಂದು ನಕಲಿ ಪಾತ್ರ. ಅದನ್ನು ಮಾಡಿದ್ದು ಧನರಾಜ್‌ ಮತ್ತು ರಮೇಶ್‌ ಎಂದು ತನಿಖೆ ಮೂಲಕ ಪತ್ತೆ ಹಚ್ಚಿದ್ದೇ ಗೋವಿಂದ ಪೂಜಾರಿ.

ಯಾವಾಗ ಚೈತ್ರಾ ಕುಂದಾಪುರ ಹಣ ಪಡೆದುಕೊಂಡ ಆರೆಸ್ಸೆಸ್‌ ಪ್ರಚಾರ ವಿಶ್ವನಾಥ್‌ಜಿ ಮೃತಪಟ್ಟರು ಎಂದು ಹೇಳಿದಳೋ ಆಗ ಗೋವಿಂದ ಪೂಜಾರಿ ಅವರು ಮೊದಲ ಬಾರಿಗೆ ಸಂಶಯ ಪಟ್ಟು ಹುಡುಕಲು ಶುರು ಮಾಡುತ್ತಾರೆ. ಮೊದಲು ವಿಶ್ವನಾಥ್‌ಜೀ ಎಂಬ ಪ್ರಚಾರಕರೇ ಇಲ್ಲ ಎನ್ನುವುದನ್ನು ದೃಢಪಡಿಸಿಕೊಳ್ಳುವ ಅವರು ನಂತರ ಚಿಕ್ಕಮಗಳೂರಿನ ಹಿಂದೂ ಸಂಘಟನೆ ಕಾರ್ಯಕರ್ತರ ಮಂಜು ಎಂಬವರನ್ನು ಸಂಪರ್ಕಿಸಿ ಚಿಕ್ಕಮಗಳೂರಿನಲ್ಲಿರುವ ʻಆ ಸಂಘದ ಪ್ರಚಾರಕ ವಿಶ್ವನಾಥ್‌ಜಿʼ ಯಾರು ಎಂದು ಪ್ರಶ್ನಿಸುತ್ತಾರೆ. ಆಗ ಮಂಜು ಕಡೂರಿನ ಆ ಸೆಲೂನ್‌ನಲ್ಲಿ ನಡೆದ ವಿದ್ಯಮಾನವನ್ನು ನೆನಪಿಸಿಕೊಳ್ಳುತ್ತಾರೆ. ಗೋವಿಂದ ಪೂಜಾರಿ ಅವರು ಆ ಸೆಲೂನ್‌ಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲಾಗುತ್ತದೆ. ಅಲ್ಲಿಗೆ ಧನರಾಜ್‌ ಮತ್ತು ರಮೇಶ್‌ ಆವತ್ತೇ ಗೋವಿಂದ ಪೂಜಾರಿ ಕೈಗೆ ಸಿಕ್ಕಿಬಿದ್ದಿದ್ದರು. ಮತ್ತು ಚೈತ್ರಾ ಕುಂದಾಪುರಳ ಸಮಸ್ತ ವಂಚನೆ ಬಿಚ್ಚಿಕೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Weather Forecast: ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡಿಗೆ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯೊಂದಿಗೆ, ವ್ಯಾಪಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ. ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಸುತ್ತಮುತ್ತ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಡಗು, ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್‌ ನೀಡಲಾಗಿದೆ. ಜತೆಗೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ಕರಾವಳಿ, ಮಲೆನಾಡು ಸುತ್ತಮುತ್ತ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಜತೆಗೆ ವ್ಯಾಪಕ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ ಮತ್ತು ಹಾವೇರಿ, ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮೇಘ ಸ್ಫೋಟ

ಪಶ್ಚಿಮ ಘಟ್ಟದ ತಪ್ಪಲು ಉಡುಪಿಯ ಹೆಬ್ರಿಯಲ್ಲಿ ಮೇಘ ಸ್ಫೋಟಗೊಂಡಿದೆ. ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಭಾರೀ ಮಳೆ ಸುರಿದಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದಿದೆ.

ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಎರಡು ಬೈಕ್‌ಗಳು ಭಾರೀ ನೆರೆಯಿಂದ ಕೊಚ್ಚಿ ಹೋಗಿದೆ. ಮೊದಲು ಕೇರಳ ಮೂಲದ ವ್ಯಕ್ತಿಗೆ ಸೇರಿದ್ದ ರಬ್ಬರ್ ತೋಟ ಜಲಾವೃತಗೊಂಡಿದೆ. ಬಳಿಕ ಮನೆಗೆ ನುಗ್ಗಿ ಅಂಗಳದಲ್ಲಿ ನಿಲ್ಲಿಸಿದ್ದ ಆಕ್ಟೋ ಕಾರು ಹಾಗೂ ಎರಡು ಬೈಕ್ ನೀರು ಪಾಲಾಗಿದೆ. ಹೊಸಕಂಬೃ ಕೃಷ್ಣ ಪೂಜಾರಿ ಎಂಬವರ ಮನೆಯಲ್ಲಿ ನಿಲ್ಲಿಸಿದ್ದ ಓಮ್ಮಿ ಕಾರು ನೀರುಪಾಲಾಗಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ವಿಜಯನಗರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಸಾವು

ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬಣಕಾರ್ ನಾರಪ್ಪ (58), ಬಣಕಾರ್ ಪ್ರಶಾಂತ್ (40) ಮೃತ ದುರ್ದೈವಿ. ಹಗರಿಬೊಮ್ಮನಹಳ್ಳಿ ತಹಸೀಲ್ದಾರ್ ಕವಿತಾ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸತತ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧ ಸಾವು

Karnataka Rain : ದಾವಣಗೆರೆಯಲ್ಲಿ ಸತತ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ವಿಜಯನಗರದಲ್ಲಿ ಮಳೆಯಿಂದಾಗಿ ಮನೆಗಳಿಗೆ ಹಾನಿಯಾಗಿವೆ.

VISTARANEWS.COM


on

By

karnataka rain
Koo

ದಾವಣಗೆರೆ: ಸತತ ಮಳೆಯಿಂದ ಗೋಡೆ ಕುಸಿದು ವೃದ್ಧ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕುಳಗಟ್ಟೆ ಬಸವರಾಜಪ್ಪ (81) ಗೋಡೆ ಬಿದ್ದು ಮೃತಪಟ್ಟವರು. ದಾವಣಗೆರೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಪುಷ್ಕರಣಿ ಬೀದಿಯ ಮನೆಯ ಗೋಡೆ ಕುಸಿದಿದೆ. ರಾತ್ರಿ ಗೋಡೆ ಒಂದು ಕಡೆ ವಾಲುತ್ತಿದ್ದ ವೇಳೆ ಬಸವರಾಜಪ್ಪ ಅವರ ಮಗ-ಸೊಸೆ ಮನೆ ಹೊರಗೆ ಬಂದಿದ್ದಾರೆ. ಬಸವರಾಜಪ್ಪ ಹೊರ ಬರುವಷ್ಟರಲ್ಲೇ ಗೋಡೆ ಕುಸಿದಿದೆ.

ಗೋಡೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತೀವ್ರ ಗಾಯಗೊಂಡು ವೃದ್ಧ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಚನ್ನಗಿರಿ ತಹಶೀಲ್ದಾರ್ ರುಕ್ಮಿಣಿಬಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಚೆಕ್‌ ಅನ್ನು ತಹಸೀಲ್ದಾರ್ ನೀಡಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

50ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ವಿಜಯನಗರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು, ಸುಮಾರು 49 ಮನೆಗಳಿಗೆ ಹಾನಿಯಾಗಿದೆ. ಆರು ತಾಲೂಕುಗಳ ಪೈಕಿ, ಕೂಡ್ಲಿಗಿ ತಾಲ್ಲೂಕಿನಲ್ಲಿ 42 ಮನೆ ಸೇರಿ ಜಿಲ್ಲೆಯಲ್ಲಿ 49 ಮನೆಗಳಿಗೆ ಹಾನಿಯಾಗಿದೆ. ಹೊಸಪೇಟೆಯಲ್ಲಿ ಒಂದು ಮನೆಗೆ ಭಾಗಶಃ ಹಾನಿಯಾಗಿದೆ. ಹಡಗಲಿ, ಹರಪನಹಳ್ಳಿ ತಾಲೂಕುಗಳಲ್ಲಿ ತಲಾ ಒಂದೊಂದು ಮನೆ, ಕೊಟ್ಟೂರು ತಾಲೂಕಿನಲ್ಲಿ 4 ಮನೆಗೆ ಹಾನಿಯಾಗಿದೆ. ಹಡಗಲಿ ತಾಲೂಕಿನ ಕೆಂಚಮನಹಳ್ಳಿ ಗ್ರಾಮದಲ್ಲಿ ಎರಡು ಕುರಿಗಳು ಮೃತಪಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Rain : ಬೆಂಗಳೂರಿನಲ್ಲಿ ಮಳೆ ಬಂದೋಯ್ತು, ಯಡವಟ್ಟು ಆಯ್ತು; ಜನರಿಗೆ ತಲೆ ಕೆಟ್ಟು ಹೋಯಿತು

Karnataka Rain : ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ನಿನ್ನೆ (ಅ.5) ಸುರಿದ ಭಾರಿ ಮಳೆಗೆ (Bengaluru Rain) ಬೆಂಗಳೂರಿನ ಮಲ್ಲೇಶ್ವರದ 13ನೇ ಕ್ರಾಸ್‌ನಲ್ಲಿ ರಸ್ತೆ ಕುಸಿದಿದೆ. ಎರಡು ವಾರದ ಹಿಂದೆ ಗುಂಡಿ ಮುಚ್ಚಲು ಹಾಕಿದ್ದ ಟಾರು ಮಳೆಯಿಂದಾಗಿ (Karnataka Rain) ಕುಸಿದು ಬಿದ್ದಿದೆ. ಕಳಪೆ ಕಾಮಗಾರಿ ಹಿನ್ನೆಲೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ರಸ್ತೆಗಳಲ್ಲೇ ನೀರು ನಿಂತಿದ್ದರಿಂದ ಹಲವು ಕಡೆಗಳಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಕೋಗಿಲು ಕ್ರಾಸ್ ಬಳಿ ತಡೆಗೋಡೆ ಕುಸಿದು ಅಪಾರ್ಟ್‌ಮೆಂಟ್‌ ಒಳಗೆ ನೀರು ನುಗ್ಗಿದೆ. ಬಿನ್ನಿಪೇಟೆ ಬಳಿ ಚೇಂಬರ್ ಕಾಂಪೌಂಡ್ ಕುಸಿದು ಇಪ್ಪತ್ತಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದೆ. ಹಲವು ಮನೆಗಳಿಗೆ ನೀರು ನುಗ್ಗಿದೆ. ಬಸವೇಶ್ವರ ನಗರ, ಪುಟ್ಟೇನಹಳ್ಳಿ ಯಲಹಂಕಾ ಸೇರಿದಂತೆ ಹಲವೆಡೆ ಮನೆಗಳಿಗೆ ಜಲಕಂಟಕ ಎದುರಾಗಿದೆ. ನಗರದಲ್ಲಿ ಸರಾಸರಿ 36 ಮಿ.ಮೀ ಮಳೆ ದಾಖಲಾಗಿದೆ. ಕೊಟ್ಟಿಗೆ ಪಾಳ್ಯದಲ್ಲಿ 113 ಮಿ.ಮೀ ದಾಖಲೆಯ ಮಳೆಯಾದರೆ, ಹಂಪಿನಗರ, ನಾಗಪುರಗಳಲ್ಲಿ 10 ಸೆಂ.ಮೀಗಿಂತಲೂ ಮಳೆಯಾಗಿದೆ.

Karnataka Rain
Karnataka Rain

ಯಾವ್ಯಾವ ಭಾಗದಲ್ಲಿ ಎಷ್ಟು ಮಳೆ?

ಕೊಟ್ಟಿಗೆಪಾಳ್ಯ : 113 ಮಿ.ಮೀ
ಹಂಪಿನಗರ : 108 ಮಿ.ಮೀ
ನಾಗಪುರ : 107.5 ಮಿ.ಮೀ
ಚೌಡೇಶ್ವರಿ : 79.5 ಮಿ.ಮೀ
ಮಾರುತಿಮಂದಿರ : 75.5 ಮಿ.ಮೀ
ನಂದಿನಿ ಲೇಔಟ್ : 71.5 ಮಿ.ಮೀ
ರಾಜಾಜಿನಗರ : 59 ಮಿ.ಮೀ
ನಾಯಂಡಹಳ್ಳಿ : 46 ಮಿ.ಮೀ
HAL ಏರ್ಪೋರ್ಟ್ : 45 ಮಿ.ಮೀ
ವಿದ್ಯಾರಣ್ಯಪುರ : 45 ಮಿ.ಮೀ
ಪುಟ್ಟೇನಹಳ್ಳಿ : 42.5 ಮಿ.ಮೀ
RR ನಗರ : 42.5 ಮಿ.ಮೀ
ರಾಜಮಹಲ್ ಗುಟ್ಟಹಳ್ಳಿ : 42.5 ಮಿ.ಮೀ

ಸೇರಿದಂತೆ ಸರಾಸರಿ 36 ಮಿ.ಮೀ ಮಳೆ ದಾಖಲು

Karnataka Rain

ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತ

ಬೆಂಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಜಲಾವೃತಗೊಂಡಿದೆ. ಅಪಾರ್ಟ್‌ಮೆಂಟ್‌ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ಅಪಾರ್ಟ್‌ಮೆಂಟ್‌ ಆವರಣಕ್ಕೆ ನೀರು ನುಗ್ಗಿದೆ. ಸುಮಾರು 20 ವರ್ಷಕ್ಕೂ ಹಿಂದಿನ ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದಿದೆ. ಒಂಭತ್ತು ಎಕರೆ ವಿಸ್ತೀರ್ಣವುಳ್ಳ ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ಆವರಣದಲ್ಲಿ 603 ಫ್ಲಾಟ್‌ನಲ್ಲಿ ಎರಡು ಸಾವಿರ ಮಂದಿ ವಾಸವಿದ್ದಾರೆ. ಕೇಂದ್ರಿಯ ವಿಹಾರ ಅಪಾರ್ಟ್‌ಮೆಂಟ್‌ ನಿವಾಸಿಗಳು ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದ್ದಾರೆ. ಟ್ರ್ಯಾಕ್ಟರ್ ಮೂಲಕ ಅಪಾರ್ಟ್‌ಮೆಂಟ್‌ ನಿವಾಸಿಗಳನ್ನು ಕರೆದೊಯ್ದಬೇಕಾಯಿತು.

Karnataka Rain
Karnataka Rain

ಅಗ್ನಿಶಾಮಕದಳ ಸಿಬ್ಬಂದಿಯಿಂದ ನಿರಂತರವಾಗಿ ನೀರನ್ನು ಹೊರಹಾಕುವ ಕಾರ್ಯ ನಡೆಯಿತು. 80ಕ್ಕೂ ಹೆಚ್ಚು ಕಾರು ನೂರಕ್ಕೂ ಹೆಚ್ಚು ಬೈಕ್ ಭಾಗಶ: ನೀರಿನಲ್ಲಿ ಮುಳುಗಡೆಯಾಗಿದೆ. ಟ್ರ್ಯಾಕ್ಟರ್ ಹಾಗೂ ಬೋಟ್ ಮೂಲಕ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ಹಿರಿಯ ನಾಗರೀಕರು ಮತ್ತು ಮಕ್ಕಳನ್ನು ಕರೆದೊಯ್ಯಲು ನಿವಾಸಿಗಳು ಪರದಾಡಿದರು.

ಕೆರೆಯಂತಾದ ಕ್ರೀಡಾಂಗಣ

ರಾತ್ರಿ ಸುರಿದ ಮಳೆಗೆ ಕ್ರೀಡಾಂಗಣ ಜಲಾವೃತವಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿನ ತಾಲೂಕು ಮಟ್ಟದ ಕ್ರೀಡಾಂಗಣವು ಕೆರೆಯಂತೆ ಭಾಸವಾಗುತ್ತಿದೆ. ಪ್ರತಿಬಾರಿ ಮಳೆ ಬಂದಾಗ ಕ್ರೀಡಾಂಗಣ ಜಲಾವೃತಗೊಳ್ಳುತ್ತದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಕ್ರೀಡಾಂಗಣವು ಕ್ರೀಡಾ ಇಲಾಖೆ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅವ್ಯವಸ್ಥೆ ಆಗಿದೆ. ಸರಿಯಾದ ನಿರ್ವಹಣೆ ಇಲ್ಲದೆ ಕ್ರೀಡಾಂಗಣ ಹಾಳಾಗಿದೆ.

ಕೆಸರು ಗದ್ದೆಯಾದ ರಸ್ತೆ

ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಯು ಕೆಸರು ಗದ್ದೆಯಾಗಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ ನಿವಾಸಿಗಳು ಪರದಾಡುತ್ತಿದ್ದಾರೆ. ಆನೇಕಲ್‌ನ ಚಂದಾಪುರ ಪುರಸಭೆ ವಾರ್ಡ್ ನಂಬರ್ 20ರಲ್ಲಿ ಘಟನೆ ನಡೆದಿದೆ. ಹೆಡ್ ಮಾಸ್ಟರ್ ಲೇಔಟ್‌ಗೆ ಸಂಪರ್ಕ್ ಕಲ್ಪಿಸುವ ರಸ್ತೆ ಇದಾಗಿದೆ. ಮಳೆ ಬಂದಾಗ ರಸ್ತೆ ಜಲಾವೃತಗೊಂಡು ಸಂಪೂರ್ಣ ಕೆಸರುಮಯವಾಗಿದೆ. ನಿತ್ಯ ಓಡಾಡುವ ಜನರಿಗೆ ಈ ರಸ್ತೆಯಲ್ಲಿ ಸಂಚರಿಸುವುದೆ ನರಕಯಾತನೆ ಆಗಿದೆ. ಮಳೆ ಬಂದಾಗ ಕೆಸರು ಗದ್ದೆ, ಬಿಸಿಲಿನ ಸಮಯದಲ್ಲಿ ಧೂಳಿನ ಸಮಸ್ಯೆ ಎದುರಾಗಿದೆ. ರಸ್ತೆಯಲ್ಲಿ ಹಳ್ಳಗುಂಡಿಗಳು ಕಾಣದೆ ಬಿದ್ದು ನಿವಾಸಿಗಳು ಆಸ್ಪತ್ರೆ ಪಾಲಾಗುತ್ತಿದ್ದಾರೆ. ಚಂದಾಪುರ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Congress alliance wins in Kashmir Haryana poll survey Calculations turned upside down
ದೇಶ39 ನಿಮಿಷಗಳು ago

Jammu-Kashmir Election: ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯ ಕಮಾಲ್, ಚೇತರಿಸಿಕೊಂಡ ಕಮಲ ಪಡೆ; ತಲೆಕೆಳಗಾಯ್ತು ಹರಿಯಾಣ ಚುನಾವಣೆ ಸಮೀಕ್ಷೆ ಲೆಕ್ಕಾಚಾರ

Pink Strong walkathon to raise awareness among people about breast cancer
ಬೆಂಗಳೂರು2 ಗಂಟೆಗಳು ago

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

Road Accident
ಬೆಂಗಳೂರು3 ಗಂಟೆಗಳು ago

Road Accident : ಮಹಿಳೆಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌; ಕೆಳಗೆ ಬಿದ್ದವಳ ತಲೆ ಮೇಲೆ ಹರಿದ ಕಾರು

Theft case
ಬೆಂಗಳೂರು4 ಗಂಟೆಗಳು ago

Theft Case : ಪಿಜಿ, ಬ್ಯಾಚುಲರ್‌ ರೂಂಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದ ಖದೀಮರು ಲಾಕ್‌

Casteist slur case filed against comedian Huli Karthik for insulting Bovi community
ಬೆಂಗಳೂರು5 ಗಂಟೆಗಳು ago

Huli karthik : ಬೋವಿ ಜನಾಂಗಕ್ಕೆ ಅವಮಾನ, ಹಾಸ್ಯ ನಟ ಹುಲಿ ಕಾರ್ತಿಕ್‌ ವಿರುದ್ಧ ಜಾತಿ ನಿಂದನೆ ಕೇಸ್; ಅಂದು ‘ಬಿಗ್ ಬಾಸ್’ ಇಂದು ‘ಅನುಬಂಧ’!

actor darshan
ಬೆಂಗಳೂರು6 ಗಂಟೆಗಳು ago

Actor Darshan : ಕೊನೆಗೂ ಪೊಲೀಸರ ಕೈಸೇರಿದ ದರ್ಶನ್, ಪವಿತ್ರಾಗೌಡರ ಮೊಬೈಲ್ ರಿಪೋರ್ಟ್! ಸಿಕ್ಕಿ ಬಿಡ್ತು ಮಹತ್ವದ ಸಾಕ್ಷ್ಯ?

Karnataka Weather Forecast
ಮಳೆ12 ಗಂಟೆಗಳು ago

Karnataka Weather : ಬಿರುಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ12 ಗಂಟೆಗಳು ago

Dina Bhavishya : ಈ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನಾಡಬೇಡಿ

dasara 2024
ದಸರಾ ಸಂಭ್ರಮ1 ದಿನ ago

Dasara 2024 : ಮೈಸೂರು ದಸರಾ ಉತ್ಸವದಲ್ಲಿ ಕಣ್ಮನ ಸೆಳೆಯುತ್ತಿದೆ ಹೊಯ್ಸಳ ದೇವಾಲಯದ ಮಾದರಿ ಪ್ರದರ್ಶನ

53rd KVS National Games Kolkata Region School children win final match
ಬೆಂಗಳೂರು1 ದಿನ ago

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ5 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌