ಉತ್ತರ ಪ್ರದೇಶದಲ್ಲಿ ಶಿಕ್ಷಕನ ಬೆನ್ನಟ್ಟಿ ಹೋಗಿ ಮೂರು ಬಾರಿ ಗುಂಡು ಹಾರಿಸಿದ 10ನೇ ಕ್ಲಾಸ್​ ವಿದ್ಯಾರ್ಥಿ - Vistara News

ಕ್ರೈಂ

ಉತ್ತರ ಪ್ರದೇಶದಲ್ಲಿ ಶಿಕ್ಷಕನ ಬೆನ್ನಟ್ಟಿ ಹೋಗಿ ಮೂರು ಬಾರಿ ಗುಂಡು ಹಾರಿಸಿದ 10ನೇ ಕ್ಲಾಸ್​ ವಿದ್ಯಾರ್ಥಿ

ಶಾಲೆಯಲ್ಲಿ ಶಿಕ್ಷಕರು ಬೈಯುವುದೆಲ್ಲ ಸಾಮಾನ್ಯ. ಹಾಗೇ ಈ ಶಿಕ್ಷಕರೂ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಜಗಳವಾದಾಗ ಅದನ್ನು ಸುಧಾರಿಸಿದ್ದರು. ಈ ವೇಳೆ ರೇಗಾಡಿದ್ದರು.

VISTARANEWS.COM


on

Class 10 Student Shoots Teacher In Uttar Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆ ಮೂರು ಬಾರಿ ಗುಂಡು ಹಾರಿಸಿದ್ದಾನೆ. ಶಿಕ್ಷಕನಿಗೆ ತೀವ್ರ ಗಾಯಗಳಾಗಿದ್ದರೂ, ಜೀವಕ್ಕೇನೂ ಅಪಾಯ ಇಲ್ಲ ಎನ್ನಲಾಗಿದೆ. ಈ ಹುಡುಗ ಮತ್ತು ಇನ್ನೊಬ್ಬ ವಿದ್ಯಾರ್ಥಿ ನಡುವೆ ಶಾಲೆಯಲ್ಲಿ ಗಲಾಟೆಯಾಗಿತ್ತು. ಆಗ ಶಿಕ್ಷಕ ಇನ್ನೊಬ್ಬ ಹುಡುಗನ ಪರ ವಹಿಸಿ, ಈತನನ್ನು ನಿಂದಿಸಿದ್ದರು. ಅದೇ ಸಿಟ್ಟಿಗೆ ಹುಡುಗ ಶೂಟ್​ ಮಾಡಿದ್ದಾನೆ ಎಂದು ಹೇಳಲಾಗಿದೆ.

10ನೇ ತರಗತಿ ಹುಡುಗ ಪಿಸ್ತೂಲ್​​ ಹಿಡಿದು, ಶಿಕ್ಷಕನನ್ನು ಬೆನ್ನತ್ತಿ ಹೋಗಿ ಗುಂಡು ಹಾರಿಸಿದ್ದಾನೆ. ಆ ಜಾಗದಲ್ಲಿ ಇಬ್ಬರು-ಮೂವರು ಇದ್ದರೂ ಅವರಿಗೆ ಬಳಿ ಬರಲು ಭಯವಾಗಿ ದೂರದಲ್ಲೇ ಇದ್ದರು. ಒಬ್ಬಳಂತೂ ಅಲ್ಲಿನ ದೃಶ್ಯ ನೋಡಿಯೇ ಓಡಿ ಹೋಗಿದ್ದಾಳೆ. ಕೊನೆಯಲ್ಲಿ ಆ ಹುಡುಗನನ್ನು ಗಟ್ಟಿಯಾಗಿ ಹಿಡಿದು, ಶಿಕ್ಷಕನನ್ನು ಬಿಡಿಸಲಾಗಿದೆ. ಈ ದೃಶ್ಯಗಳೆಲ್ಲ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಪ್ರಾರಂಭ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಪೊಲೀಸ್ ಅಧಿಕಾರಿ ರಾಜೀವ್ ದೀಕ್ಷಿತ್, ‘ಹುಡುಗ ಮೂರು ಬಾರಿ ಗುಂಡು ಹಾರಿಸಿದರೂ, ಅದೃಷ್ಟಕ್ಕೆ ಶಿಕ್ಷಕನ ಸೂಕ್ಷ್ಮ ಅಂಗಗಳಿಗೆ ತಾಗಲಿಲ್ಲ. ಹೀಗಾಗಿ ಜೀವಕ್ಕೇನೂ ಅಪಾಯ ಇಲ್ಲದಂತಾಗಿದೆ. ಆದರೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೆ, ಲಖನೌ ಹಾಸ್ಪಿಟಲ್​ಗೆ ಕರೆದೊಯ್ಯಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿಕ್ಷಕ ‘ನಾನು ವಿದ್ಯಾರ್ಥಿಗೆ ಬೈದಿದ್ದರಿಂದ ಆತ ಇಷ್ಟೆಲ್ಲ ಸಿಟ್ಟಾಗಿದ್ದಾನೆ ಎಂದುಕೊಂಡಿರಲಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ವಲಸೆ ಕಾರ್ಮಿಕನನ್ನು ಕೊಂದ ಉಗ್ರರು; ಮಧ್ಯರಾತ್ರಿ ಗುಂಡಿನ ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Psycho Killer: ಕುಡಿದು ಬರ್ತಾನೆ, ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸ್ತಾನೆ! ಕಿಲ್ಲರ್‌ ಅಂದರ್‌!

Psycho Killer: ಈತ ಕುಡಿದು ಬರ್ತಾನೆ, ಬೀದಿ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸುತ್ತಾನೆ. ಅಲ್ಲಿಂದ ಪರಾರಿಯಾಗ್ತಾನೆ! ಒಂದೇ ವಾರದಲ್ಲಿ ಆರೋಪಿ ಗಿರೀಶ್ ಎರಡು ಕೊಲೆ ಮಾಡಿದ್ದಾನೆ.ಈಗ ಸೈಕೋ ಕಿಲ್ಲರ್‌ನಂತೆ ವರ್ತನೆ ಮಾಡಿದ್ದ ಆರೋಪಿ ಗಿರೀಶ್‌ ಅರೆಸ್ಟ್‌ ಆಗಿದ್ದಾನೆ.

VISTARANEWS.COM


on

Psycho Killer Girish throws a stone on the head of the sleeping person and kills
ಆರೋಪಿ ಗಿರೀಶ್
Koo

ಬೆಂಗಳೂರು: ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದ (Psycho Killer)ನಟೋರಿಯಸ್ ಕೊಲೆಗಾರನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ನಿವಾಸಿ ಗಿರೀಶ್ (Psycho Killer Girish) ಬಂಧಿತ‌ ಆರೋಪಿ. ಈ ಕೊಲೆಗಾರನ ಕೃತ್ಯ ಕೇಳಿದರೆ ಗಾಬರಿ ಆಗೋದು ಗ್ಯಾರಂಟಿ. ಈತ ಕುಡಿದು ಬರ್ತಾನೆ, ಬೀದಿ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸುತ್ತಾನೆ. ಅಲ್ಲಿಂದ ಪರಾರಿಯಾಗ್ತಾನೆ! ಒಂದೇ ವಾರದಲ್ಲಿ ಆರೋಪಿ ಗಿರೀಶ್ ಎರಡು ಕೊಲೆ ಮಾಡಿದ್ದಾನೆ.

ಏನಿದು ಪ್ರಕರಣ?

ಮೇ.12 ರಂದು ಜಯನಗರ 7ನೇ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರ ಕೊಲೆಯಾಗಿತ್ತು. ಶವ ನೋಡಿದಾಗ ಯಾರೋ ಎಳೆದು ತಂದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದಂತೆ ಕಂಡಿತ್ತು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಮೇ.18 ರಂದು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್‌ನಲ್ಲಿ ಇದೇ ರೀತಿಯೇ ಮತ್ತೊಂದು ಕೊಲೆ ಆಗಿತ್ತು. ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು.

ಈ ಘಟನೆ ಸಂಬಂಧ ಕೊಲೆ ಪ್ರಕರಣವನ್ನು ಮಾರ್ಕೆಟ್ ಪೊಲೀಸರು ದಾಖಲಿಸಿಕೊಂಡಿದ್ದರು. ಈ ರೀತಿ ಎರಡು ಪ್ರಕರಣ ಆದ ಬೆನ್ನಲ್ಲೇ ಬನಶಂಕರಿ ಹಾಗೂ ಕೆ.ಆರ್.ಮಾರ್ಕೆಟ್ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಯ ಹುಡುಕಾಟ ನಡೆಸಿದ್ದರು. ಈಗ ಸೈಕೋ ಕಿಲ್ಲರ್‌ನಂತೆ ವರ್ತನೆ ಮಾಡಿದ್ದ ಆರೋಪಿ ಗಿರೀಶ್‌ ಅರೆಸ್ಟ್‌ ಆಗಿದ್ದಾನೆ.

ಇದನ್ನೂ ಓದಿ: Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಗಿರೀಶ್ ಬನಶಂಕರಿ ನಿವಾಸಿ. ಕುಡಿದು ಬಂದು , ಬೀದಿ ಬದಿ ಮಲಗಿದ್ದವರ ತಲೆಮೇಲೆ ಕಲ್ಲೆಸೆದು ಸಾಯಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಒಂದೇ ವಾರದಲ್ಲಿ ಎರಡೆರಡು ಕೊಲೆ ಮಾಡಿದ್ದ ಆಸಾಮಿ ಕೊನೆಗೂ ಅಂದರ್ ಆಗಿದ್ದಾನೆ.

ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಹಾಸನ ಹೊರವಲಯದ ಈಚನಹಳ್ಳಿ (Ichanahalli Village) ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ (ಮೇ.26) ಸಂಭವಿಸಿದೆ. ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು (Five died on the spot) ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ (Hassan Accident Terrible accident) ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿರುವುದಾಗಿ ತಿಳುದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Continue Reading

ಕ್ರೈಂ

Self Harming: ಮದುವೆಗೆ ಪ್ರೇಯಸಿ ಕುಟುಂಬಸ್ಥರ ವಿರೋಧ; ನೊಂದ ಪ್ರಿಯಕರ ಆತ್ಮಹತ್ಯೆ

Self Harming: ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರ ಪಟ್ಟಣದಲ್ಲಿ ನಡೆದಿದೆ. ಈತ ಕೆಲ ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ.

VISTARANEWS.COM


on

opposition of the girl friend family to the marriage Suicide of a offended lover
Koo

ಬಸವಕಲ್ಯಾಣ: ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಜಯ್ ಮನೋಹರ ಸೂರ್ಯವಂಶಿ (22) ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ. ಕೆಲ ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಚಾಮರಾಜನಗರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಇದನ್ನೂ ಓದಿ: Fire Accident: ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 7 ಮಂದಿ ದಾರುಣ ಸಾವು

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Engineers Suspended: ಸರ್ಕಾರಿ ಐಬಿಯಲ್ಲಿ ಕುಡಿದು ಮಜಾ ಮಾಡಿದ್ದ ಐವರು ಜಿಪಂ ಎಂಜಿನಿಯರ್‌ಗಳ ಅಮಾನತು

Engineers Suspended: ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸರ್ಕಾರಿ ಐಬಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

Engineers suspended
Koo

ಬಾಗಲಕೋಟೆ: ಸರ್ಕಾರಿ ಪ್ರವಾಸಿ ಮಂದಿರದಲ್ಲಿ (ಐಬಿ) ಕುಡಿದು ಮಜಾ ಮಾಡಿದ್ದ ಐವರು ಜಿಪಂ ಎಂಜಿ‌ನಿಯರ್‌ಗಳನ್ನು ಅಮಾನತು (Engineers suspended) ಮಾಡಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಆದೇಶ ಹೊರಡಿಸಿದ್ದಾರೆ. ನೀತಿ‌ಸಂಹಿತೆ ಇದ್ದರೂ ಸರ್ಕಾರಿ ಐಬಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಜಿಪಂ ಜಮಖಂಡಿ ವಿಭಾಗದ ಎಇಇ ಎಮ್.ಎಸ್ ನಾಯಕ, ಸಹಾಯಕ ಎಂಜಿನಿಯರ್‌ಗಳಾದ ರಾಮಪ್ಪ ರಾಠೋಡ್, ಜಗದೀಶ್ ನಾಡಗೌಡ, ಗಜಾನನ ಪಾಟಿಲ್, ಎಸ್.ಆರ್‌‌.ಜಂಬಗಿ ಅಮಾನತುಗೊಂಡವರು.

ಇದನ್ನೂ ಓದಿ | Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; 10 ಮಂದಿ ವಶಕ್ಕೆ

ಜಮಖಂಡಿಯ ಸರ್ಕಾರಿ ಐಬಿ ರಮಾ ನಿವಾಸದಲ್ಲಿ ಇತ್ತೀಚೆಗೆ ಜಮಖಂಡಿ ವಿಭಾಗದ ಜಿಪಂ ಎಂಜಿನಿಯರ್‌ಗಳು ಗುತ್ತಿಗೆದಾರರೊಂದಿಗೆ ಸೇರಿ ಹಾಡಹಗಲೇ ಎಣ್ಣೆ ಪಾರ್ಟಿ ಮಾಡಿದ್ದರು. ಇದರ ವಿಡಿಯೊ ವೈರಲ್ ಆಗಿತ್ತು. ಹೀಗಾಗಿ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದಾರೆ.

ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Fake Intelligence Bureau officer arrested

ಬಾಗಲಕೋಟೆ: ಊರಲ್ಲಿ ಗೌರವ ಸಿಗಬೇಕು, ನನ್ನ ನೋಡಿದರೆ ಒಂದು ಹವಾ ಇರಬೇಕೆಂದು ಯುವಕನೊರ್ವ ನಕಲಿ ಅಧಿಕಾರಿ ವೇಷ ಹಾಕಿ ಸಿಕ್ಕಿಬಿದ್ದಿದ್ದಾನೆ. ಸಂಗಮೇಶ್ ಲಕ್ಕಪ್ಪಗೋಳ (19) ಎಂಬಾತ ಇಂಟಲಿಜೆನ್ಸ್‌ ಬ್ಯೂರೋ (Fake Intelligence Officer) ಅಧಿಕಾರಿ ವೇಷ ಧರಿಸಿದವನು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿಯಲ್ಲಿ ಘಟನೆ ನಡೆದಿದೆ.

ಇಂಟಲಿಜೆನ್ಸ್ ಬ್ಯೂರೋದ ನಕಲಿ ಐಡಿ ಕಾರ್ಡ್, ಕ್ಯಾಪ್ ಹೊಂದಿದ್ದ ಸಂಗಮೇಶ್‌ ಬೈಕ್ ಮೇಲೂ ಐಬಿ ಲೋಗೋ ಹಾಕಿಕೊಂಡಿದ್ದ.‌ ಟಾಯ್ ಗನ್, ವಾಕಿಟಾಕಿ ಕೂಡಾ ಇಟ್ಟಕೊಂಡು ಪೋಸ್ ಕೊಡುತ್ತಿದ್ದ. ಸದ್ಯ ಆರೋಪಿ ಸಂಗಮೇಶನನ್ನು ಬನಹಟ್ಟಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

ಹಿಪ್ಪರಗಿ ಗ್ರಾಮದ ಸಂಗಮೇಶ್ ಲಕ್ಕಪ್ಪಗೋಳ ಜತೆಗೆ ಇನ್ನೂ ಎಂಟು ಮಂದಿ ಯುವಕರು ಇದ್ದಾರೆ ಎನ್ನಲಾಗಿದೆ. ಸದ್ಯ ಸಂಗಮೇಶನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗೊಳಪಡಿಸಿದ್ದಾರೆ. ಇಂಟಲಿಜೆನ್ಸ್‌ ಬ್ಯೂರೋ ಹೆಸರಲಿನಲ್ಲಿ ಯಾರಿಗಾದರೂ ಮೋಸ ಮಾಡಿ, ಹಣ ಪಡೆದಿದ್ದನಾ ಎಂಬ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ.

Continue Reading

ಕರ್ನಾಟಕ

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; 10 ಮಂದಿ ವಶಕ್ಕೆ

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ‌ ನಡೆಸಿದ ಕಿಡಿಗೇಡಿಗಳ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ಇದೀಗ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Lockup Death
Koo

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಟ್ಕಾ ದಂಧೆ ಆರೋಪಿ ಆದಿಲ್‌ನನ್ನು ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ಸಾವನ್ನಪ್ಪಿದ‌ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿ, ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಹೀಗಾಗಿ ಆದಿಲ್ ಅಂತ್ಯ ಸಂಸ್ಕಾರದವರೆಗೂ ಸೈಲೆಂಟ್ ಆಗಿದ್ದ ಪೊಲೀಸರು, ಸಂಜೆಯಿಂದ ಕಿಡಿಗೇಡಿಗಳ ಹೆಡಿಮುರಿ ಕಟ್ಟಲು ಮುಂದಾಗಿದ್ದಾರೆ.

ಯುವಕನ ಲಾಕಪ್‌ ಡೆತ್‌ ಆಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಸಿಸಿ ಕ್ಯಾಮೆರಾ, ಮೊಬೈಲ್ ಚಿತ್ರೀಕರಣದ ವಿಡಿಯೊ ಮತ್ತು ಮೊಬೈಲ್ ಲೊಕೇಶನ್ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ | ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಹಾಲಿವುಡ್ ಸಿನಿಮಾ ಸ್ಟೈಲಲ್ಲಿ ಕಳ್ಳತನ; ರೋಚಕ Video ಇಲ್ಲಿದೆ!

ಕಲ್ಲು ತೂರಾಟ‌ ನಡೆಸಿದ ಕಿಡಿಗೇಡಿಗಳ ಪತ್ತೆಗೆ ಐದು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ವಿಡಿಯೊಗಳನ್ನು ಪರಿಶೀಲನೆ ಮಾಡಿ 40 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪೊಲೀಸರು ಗುರುತಿಸಿದ್ದಾರೆ. ಇದುವರೆಗೂ ಹತ್ತು ಜನರನ್ನು ಬಂಧಿಸಿರುವ ಪೊಲೀಸರು ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.

ನನ್ನ ಗಂಡನನ್ನು ಪೊಲೀಸರೇ ಹೊಡೆದು ಕೊಂದಿದ್ದಾರೆ: ಪತ್ನಿ ಆಕ್ರೋಶ

ದಾವಣಗೆರೆ: ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣದಲ್ಲಿ ಮೃತ ಯುವಕ ಆದಿಲ್ ಪತ್ನಿ ಹೀನಾಬಾನು ಪೊಲೀಸರ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ನನ್ನ ಗಂಡ ಮಟ್ಕಾ ಆಡಿಸುತ್ತಿದ್ದದ್ದು ಸತ್ಯ. ಆದರೆ, ಪೊಲೀಸರು ಪ್ರತಿ ತಿಂಗಳು ಕಮಿಷನ್ ವಸೂಲು ಮಾಡುತ್ತಿದ್ದರು. ಒಂದು ತಿಂಗಳು ಕೊಡದೆ ಇದಿದ್ದಕ್ಕೆ ಸಿವಿಲ್ ಡ್ರೆಸ್‌ನಲ್ಲಿ ಬಂದು ಪೊಲೀಸರು ಕರೆದುಕೊಂಡು ಹೋದರು. ನೆನ್ನೆ ಸಂಜೆ ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಾ ಎಂದರೆ ಹೇಳಲಿಲ್ಲ. ನನ್ನ ಗಂಡನನ್ನು ಪೊಲೀಸರೇ ಹೊಡೆದಿದ್ದಾರೆ. ನನ್ನ ಗಂಡನ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.

ಪೊಲೀಸರಿಂದ ನನ್ನ ಗಂಡ ಸಾಕಷ್ಟು ಕಿರುಕುಳ ಅನುಭವಿಸಿದ್ದಾನೆ. ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಬೇಕಾಬಿಟ್ಟಿ ಹೊಡೆದಿದ್ದಾರೆ. ಹೊಡೆದಾದ ಮೇಲೆ ಮೂರ್ಛೆ ರೋಗ ಎಂದು ಸುಳ್ಳು ಹೇಳಿದ್ದಾರೆ. ಈಗ ನನ್ನ ಮಕ್ಕಳು, ನನಗೆ ಯಾರು ಗತಿ? ಪೊಲೀಸರು ನನ್ನ ಗಂಡನ ಬದುಕಿಸಿ ಕೊಡ್ತಾರಾ? ಇಡೀ ಮನೆ ಹುಡುಕಿದರೂ ಒಂದು ಗುಳಿಗೆ ಸಿಗಲ್ಲ. ನನ್ನ ಗಂಡನಿಗೆ ಯಾವುದೇ ರೋಗ ಇರಲಿಲ್ಲ ಎಂದು ಪತ್ನಿ ಹೀನಾಬಾನು ಹೇಳಿದ್ದಾರೆ.

ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

ದಾವಣಗೆರೆ: ಆದಿಲ್ ಲಾಕಪ್ ಡೆತ್ ಪ್ರಕರಣಕ್ಕೆ (Lockup Death) ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ವಿಚಾರಣೆ ವೇಳೆ ಪೊಲೀಸರ ಹಲ್ಲೆಯಿಂದ ಯುವಕ ಮೃತಪಟ್ಟಿದ್ದ ಎಂಬ ಆರೋಪಗಳು ಕೇಳಿಬಂದಿದ್ದರಿಂದ ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು ಆಗಿತ್ತು. ಆದರೆ, ಮೊದಲಿಗೆ ಮಗನದ್ದು ಲಾಕಪ್‌ ಡೆತ್‌ ಅಲ್ಲ, ಲೋ ಬಿಪಿಯಿಂದ ಮೃತಪಟ್ಟಿದ್ದಾನೆ ಎಂದು ಹೇಳಿದ್ದ ಮೃತ ಯುವಕ ಆದಿಲ್‌ ತಂದೆ ಖಲೀಮುಲ್ಲಾ, ಇದೀಗ ಮತ್ತೆ ಉಲ್ಟಾ ಹೊಡೆದಿದ್ದಾರೆ.

ಆದಿಲ್ ಸಾವು ಪ್ರಕರಣದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ್ದ ಖಲೀಮುಲ್ಲಾ ಅವರು, ಮೊದಲಿಗೆ ಮಗ ಕಡಿಮೆ ರಕ್ತದೊತ್ತಡದಿಂದ (Low Blood Pressure) ಮೃತಪಟ್ಟಿದ್ದಾನೆ. ಅವನಿಗೆ ಯಾವುದೇ ರೀತಿಯಾದ ಮೂರ್ಛೆ ರೋಗ ಇರಲಿಲ್ಲ. ಆತನ ಸಾವಿನ ಬಗ್ಗೆ ನಮಗೆ ಯಾವುದೇ ರೀತಿ ಅನುಮಾನ ಇಲ್ಲ. ನನ್ನ ಮಗ ಕಾರ್ಪೇಂಟರ್ ಕೆಲಸ ಮಾಡಿಕೊಂಡಿದ್ದ. ಯಾವುದೇ ಮಟ್ಕಾ ದಂಧೆ ಮಾಡುತ್ತಿರಲಿಲ್ಲ. ನೆನ್ನೆ ಮಗ ಸಾವನ್ನಪ್ಪಿದ್ದಕ್ಕೆ ನ್ಯಾಯ ಕೇಳಲು ಪೊಲೀಸ್‌ ಠಾಣೆಗೆ ಹೋಗಿದ್ದೆವು. ಆದರೆ, ಯಾರು ಕಲ್ಲು ಹೊಡೆದಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದರು.

ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಈ ವಯಸ್ಸಲ್ಲಿ ನನಗೆ ದುಡಿಯೋಕೆ ಆಗುತ್ತಾ? ಸರ್ಕಾರ ನನಗೆ ಪರಿಹಾರ ಕೊಡಬೇಕು ಎಂದ ಮೃತ ಆದಿಲ್ ತಂದೆ ಖಲೀಮುಲ್ಲಾ ಮನವಿ ಮಾಡಿದ್ದರು. ಆದರೆ, ಇದೀಗ ತಾವು ಗಾಬರಿಯಲ್ಲಿ ಬೆಳಗ್ಗೆ ಏನೇನೋ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ನಾನು ಗಾಬರಿಗೊಂಡು ಆ ರೀತಿ ಹೇಳಿದ್ದೆ, ಉಲ್ಟಾ ಹೊಡೆದ ತಂದೆ

ಮೊದಲಿಗೆ ಮಗನದ್ದು ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಆದಿಲ್‌ ತಂದೆ ಖಲೀಮುಲ್ಲಾ, ಮತ್ತೆ ಉಲ್ಟಾ ಹೊಡೆದಿದ್ದಾರೆ. ಇದೀಗ ನನ್ನ ಮಗ ಲೋ ಬಿಪಿಯಿಂದ ಸಾವನ್ನಪ್ಪಿಲ್ಲ, ನಾನು ಗಾಬರಿಗೊಂಡು ಆ ರೀತಿ ಬೆಳಗ್ಗೆ ಹೇಳಿದ್ದೆ. ನನ್ನ ಮಗ ಲಾಕಪ್ ಡೆತ್‌ನಿಂದ ಸಾವನ್ನಪ್ಪಿರುವ ಬಗ್ಗೆ ಅನುಮಾನ ಇದೆ. ನನ್ನ ಬಿಪಿಯನ್ನು ನನ್ನ ಮಗನಿಗೆ ಇದೆ ಎಂದು ಹೇಳಿದೆ. ಮಗನ ಸಾವಿನಿಂದ ದಿಗ್ಭ್ರಮೆ ಆಗಿದೆ. ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ

ನನ್ನ ಮಗನಿಗೆ ಮಟ್ಕಾ ದಂಧೆ ಜತೆ ಸಂಬಂಧ ಇಲ್ಲ, ಬಡಗಿ ಕೆಲಸ ಮಾಡುತ್ತಿದ್ದ. ನನ್ನ ಸೊಸೆ ಗಾಬರಿಯಿಂದ ಮಟ್ಕಾ ಆಡುತ್ತಿದ್ದ ಎಂದು ಹೇಳಿದ್ದಾಳೆ ಎಂದು ತಂದೆ ಹೇಳಿದ್ದಾರೆ.

Continue Reading
Advertisement
Hardik Pandya
ಕ್ರೀಡೆ4 mins ago

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ34 mins ago

Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Psycho Killer Girish throws a stone on the head of the sleeping person and kills
ಕ್ರೈಂ39 mins ago

Psycho Killer: ಕುಡಿದು ಬರ್ತಾನೆ, ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸ್ತಾನೆ! ಕಿಲ್ಲರ್‌ ಅಂದರ್‌!

Malaysia Masters final
ಕ್ರೀಡೆ43 mins ago

Malaysia Masters final: ಪ್ರಶಸ್ತಿ ಬರ ನೀಗಿಸುವ ನಿರೀಕ್ಷೆಯಲ್ಲಿ ಪಿ.ವಿ.ಸಿಂಧು; ಇಂದು ಫೈನಲ್​

Accident
ದೇಶ59 mins ago

Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್1 hour ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ1 hour ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ2 hours ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ2 hours ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ2 hours ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌