Couple Death: ಮೊದಲ ರಾತ್ರಿಯೇ ಮಚ್ಚಿನಲ್ಲಿ ಹೊಡೆದಾಟ, ವಧುವಿನ ಜೊತೆಗೆ ವರನೂ ಸಾವು - Vistara News

ಕ್ರೈಂ

Couple Death: ಮೊದಲ ರಾತ್ರಿಯೇ ಮಚ್ಚಿನಲ್ಲಿ ಹೊಡೆದಾಟ, ವಧುವಿನ ಜೊತೆಗೆ ವರನೂ ಸಾವು

Couple Death: ನಿನ್ನೆ ಕೆಜಿಎಫ್ ಆಸ್ಪತ್ರೆಯಲ್ಲಿ ವಧು ಲಿಖಿತಶ್ರೀ (20) ಸಾವನ್ನಪ್ಪಿದ್ದಳು. ಆಸ್ಪತ್ರೆ ಸೇರಿದ್ದ ವರ ನವೀನ್ (28) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ನಿನ್ನೆ ದಾಖಲಾಗಿದ್ದ ನವೀನ್ ಕುಮಾರ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು.

VISTARANEWS.COM


on

couple death kolar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಮದುವೆಯ (Marriage) ಮೊದಲ ರಾತ್ರಿಯೇ ಜಗಳ (Quarrel) ತಾರಕಕ್ಕೇರಿ ಮಚ್ಚಿನಲ್ಲಿ ಪರಸ್ಪರ ಕೊಚ್ಚಿಕೊಂಡಿದ್ದ ವಧು- ವರ ಪ್ರಕರಣದಲ್ಲಿ, ವಧುವಿನ ಜೊತೆಗೆ ವರನೂ (Couple Death) ಮೃತಪಟ್ಟಿದ್ದಾನೆ. ನಿನ್ನೆ ಕೋಲಾರದ (Kolar news) ಕೆಜಿಎಫ್‌ನ ಚಂಬರಸನಹಳ್ಳಿ ಗ್ರಾಮದಲ್ಲಿ ಪ್ರಕರಣ ನಡೆದಿತ್ತು.

ನಿನ್ನೆ ಕೆಜಿಎಫ್ ಆಸ್ಪತ್ರೆಯಲ್ಲಿ ವಧು ಲಿಖಿತಶ್ರೀ (20) ಸಾವನ್ನಪ್ಪಿದ್ದಳು. ಆಸ್ಪತ್ರೆ ಸೇರಿದ್ದ ವರ ನವೀನ್ (28) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ನಿನ್ನೆ ದಾಖಲಾಗಿದ್ದ ನವೀನ್ ಕುಮಾರ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು.

ನಿನ್ನೆ ಬೆಳಗ್ಗೆ ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇಬ್ಬರೂ ಮಚ್ಚು ಹಿಡಿದು ಕೊಚ್ಚಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ವಧು ನಿನ್ನೆಯೇ ಕೊನೆಯುಸಿರೆಳೆದಿದ್ದಳು. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ಇಬ್ಬರ ನಡುವೆ ಜಗಳ ಹುಟ್ಟಿಕೊಂಡಿದೆ ಎಂಬುದು ಗೊತ್ತಾಗಿಲ್ಲ.

ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿ

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿಯಾದ ಘಟನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಬಳಿ ನಡೆದಿದೆ. ನಮಿತಾ (22) ಸ್ಥಳದಲ್ಲೇ ಸಾವನ್ನಪ್ಪಿದ ಗರ್ಭಿಣಿ. ಚೆಕಪ್‌ಗಾಗಿ ಹೋಲಿ ಕ್ರಾಸ್ ಆಸ್ಪತ್ರೆಗೆ ಬದಿದ್ದ ಮಹಿಳೆ, ತಪಾಸಣೆ ಬಳಿಕ ಆಸ್ಪತ್ರೆ ಬಳಿ ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಪಘಾತವಾಗುತ್ತಿದ್ದಂತೆ ಕುಟುಂಬಸ್ಥರು, ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಹೈರಾಣಾದರು. ಅಪಘಾತವಾದ ಬಳಿಕ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming: ಇಬ್ಬರು ಇನ್‌ಸ್ಪೆಕ್ಟರ್‌ಗಳ ಬಳಿಕ ಹೆಡ್‌ಮಾಸ್ಟರ್‌ ಶಾಲೆಯಲ್ಲೇ ಆತ್ಮಹತ್ಯೆ; ಏನಾಗ್ತಿದೆ ರಾಜ್ಯದಲ್ಲಿ?

Self Harming: ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದೆ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ತೀವ್ರ ಕಿರುಕುಳ ನೀಡುತ್ತಿದ್ದು, ಕಿರುಕುಳ ಸಹಿಸಲಾಗದೆ ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಿರುವ ಕುಟುಂಬಸ್ಥರು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

VISTARANEWS.COM


on

head master self harming
Koo

ವಿಜಯಪುರ: ಸರಕಾರಿ ಅಧಿಕಾರಿಗಳ (Govt Officers) ಸಾಲು ಸಾಲು ಆತ್ಮಹತ್ಯೆಗಳು (Self Harming) ರಾಜ್ಯದಲ್ಲಿ ಕಳವಳ ಮೂಡಿಸುತ್ತಿವೆ. ಇದೀಗ ವಿಜಯಪುರದಲ್ಲಿ ಮುಖ್ಯೋಪಾಧ್ಯಾಯರೊಬ್ಬರು (Head Master) ಶಾಲೆಯ ಸ್ಟಾಕ್ ರೂಂನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರ ಕಿರುಕುಳದ ಬಗ್ಗೆ ದೂರಲಾಗಿದೆ.

ವಿಜಯಪುರ (Vijayapura news) ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ಸ್ಟಾಕ್‌ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯ ಸಿ.ಎಸ್ ಹಡಪದ ಅವರ ಶವ ಪತ್ತೆಯಾಗಿದೆ. ಇವರು ಕಳೆದ ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಶಾಲಾ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸಾವಿನ ಕುರಿತು ಕುಟುಂಬಸ್ಥರು ಹಾಗೂ ಶಿಕ್ಷಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದೆ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ತೀವ್ರ ಕಿರುಕುಳ ನೀಡುತ್ತಿದ್ದು, ಕಿರುಕುಳ ಸಹಿಸಲಾಗದೆ ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಿರುವ ಕುಟುಂಬಸ್ಥರು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಸರಕಾರಿ ಅಧಿಕಾರಿಗಳು ಅನುಮಾನಾಸ್ಪದ ಆತ್ಮಹತ್ಯೆಗಳ ಸರಣಿಗೆ ಇದು ಸೇರ್ಪಡೆಯಾಗಿದೆ. ಎರಡು ತಿಂಗಳ ಹಿಂದೆ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬವರ ಆತ್ಮಹತ್ಯೆ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ವಾರದ ಹಿಂದೆ ಯಾದಗಿರಿ ಪಿಎಸ್‌ಐ ಪರಶುರಾಮ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರ ಭ್ರಷ್ಟಾಚಾರ, ಲಂಚದ ಒತ್ತಡದ ಆರೋಪವಿದೆ. ನಂತರ ಬಿಡದಿಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ತಿಮ್ಮೇಗೌಡ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

ಸಿಸಿಬಿ ಇನ್‌ಸ್ಪೆಕ್ಟರ್‌ ಆತ್ಮಹತ್ಯೆ

ಎರಡು ತಿಂಗಳ ಹಿಂದೆ ಸಿಸಿಬಿಗೆ (CCB) ಟ್ರಾನ್ಸ್‌ಫರ್‌ (Tarnsfer) ಆಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ತಿಮ್ಮೇಗೌಡ (Thimmegowda) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಡದಿಯಲ್ಲಿ ಆತ್ಮಹತ್ಯೆಗೆ (Self harming) ಶರಣಾಗಿದ್ದಾರೆ.

ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಿಮ್ಮೇಗೌಡ ಸಾವಿಗೆ ಶರಣಾಗಿದ್ದಾರೆ. ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ.

1998ರ ರೂರಲ್ ಬ್ಯಾಚ್ ಇನ್ಸ್‌ಪೆಕ್ಟರ್ ತಿಮ್ಮೇಗೌಡ, ಚನ್ನಪಟ್ಟಣದ ಹಳ್ಳಿಯೊಂದರ ನಿವಾಸಿ. ಗ್ರಾಮೀಣ ಕೃಪಾಂಕದಲ್ಲಿ ಆಯ್ಕೆಯಾಗಿದ್ದ ತಿಮ್ಮೇಗೌಡ ವಿಧಾನಸಭೆ ಚುನಾವಣೆ ವೇಳೆಗೆ ಬಿಡದಿಯಿಂದ ಅತ್ತಿಬೆಲೆಗೆ ವರ್ಗಾವಣೆಯಾಗಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಬಳಿಕ ಆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ನಂತರ ಕುಂಬಳಗೋಡು ಠಾಣೆಗೆ ವರ್ಗಾವಣೆಯಾಗಿದ್ದು, ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು.

ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Continue Reading

ಕರ್ನಾಟಕ

Police Raid: ಸ್ಕೂಟರ್‌ನಲ್ಲಿ ಬರುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್‌ ಪೇದೆ!

Police Raid: ಕೊರಟಗೆರೆ ಪೊಲೀಸ್ ಠಾಣೆಯ ಪೇದೆಯೊಬ್ಬರು ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Koo

ತುಮಕೂರು: ಜಿಲ್ಲೆಯ ಪೊಲೀಸ್‌ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ (Police Raid) ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ಪೇದೆ ಸೆರೆ ಹಿಡಿದಿದ್ದಾರೆ.

ಕಳ್ಳ ಮಂಜ ಮತ್ತು ಪೊಲೀಸ್‌ ಪೇದೆ ದೊಡ್ಡಲಿಂಗಯ್ಯ

ಸಿಗ್ನಲ್‌ನಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಕಳ್ಳನನ್ನು ಪೇದೆ ಅಡ್ಡಗಟ್ಟಿದ್ದಾರೆ. ಆದರೂ ಅವರನ್ನು ಎಳೆದುಕೊಂಡು ಕಳ್ಳ ಮುಂದೆ ಸಾಗಿದ್ದಾನೆ. ಪಟ್ಟು ಬಿಡದ ಪೊಲೀಸ್‌, ಕಳ್ಳನನ್ನು ಬೆನ್ನಟ್ಟಿ ಕಾಲನ್ನು ಹಿಡಿದು ನೆಲಕ್ಕೆ ಬೀಳಿಸಿದ್ದಾರೆ. ಬಳಿಕ ಅಲ್ಲಿದ್ದ ಟ್ರಾಫಿಕ್‌ ಪೊಲೀಸರು ಕಳ್ಳನನ್ನು ಹಿಡಿಯಲು ನೆರವಾಗಿದ್ದಾರೆ. ನಂತರ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿ ಕಳ್ಳನಿಗೆ ಹಿಗ್ಗಾಮುಗ್ಗಾ ಬಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಖತರ್ನಾಕ್ ಕಳ್ಳನಿಗೆ ಚಿನ್ನದ ಸರ ಹಾಕಿರುವ ವೃದ್ಧೆಯರೇ ಟಾರ್ಗೆಟ್. ವೃದ್ಧೆಯರನ್ನೇ ಟಾರ್ಗೆಟ್ ಮಾಡಿ, ಪಿಂಚಣಿ, ಸರ್ಕಾರದ ಸವಲತ್ತು ಕೊಡಿಸುತ್ತೇನೆಂದು ನಂಬಿಸಿ, ಚಿನ್ನದ ಸರ ಕದ್ದು ಖತರ್ನಾಕ್ ಮಂಜ ಪರಾರಿಯಾಗುತ್ತಿದ್ದ. ಈತನ ವಿರುದ್ಧ ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಹೆಬ್ಬೂರು ಪೊಲೀಸ್ ಠಾಣೆ ಸೇರಿ ಸುಮಾರು 10ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದ್ದವು.

ಸುಮಾರು 1 ತಿಂಗಳಿಂದ ಪೊಲೀಸರ ಕೈಗೆ ಸಿಗದೇ ಕಣ್ತಪ್ಪಿಸಿ ಓಡಾಡುತ್ತಿದ್ದ 420 ಮಂಜ, ಬೆಂಗಳೂರಿನ ಮತ್ತಿಕೆರೆ ಕಡೆಯಿಂದ ಸದಾಶಿವನಗರ ಪೊಲೀಸ್ ಠಾಣೆ ಕಡೆಗೆ, ಬಿಳಿ ಬಣ್ಣದ ಹೋಂಡಾ ಆ್ಯಕ್ಟಿವಾ ಸ್ಕೂಟರ್‌ನಲ್ಲಿ ಬರುತ್ತಿರುವ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದರು. ಸದಾಶಿವನಗರ ಠಾಣೆ ಸಿಗ್ನಲ್ ಬಳಿ 420 ಮಂಜನನ್ನು ಹಿಡಿಯಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ದೊಡ್ಡಲಿಂಗಯ್ಯ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನ ಹಿಡಿದಿದ್ದಾರೆ.

Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

couple's fight

ಸದ್ಯ ಖತರ್ನಾಕ್ ಕಳ್ಳ 420 ಮಂಜನನ್ನು ಬಂಧಿಸಿ ಕೊರಟಗೆರೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ತನಿಖೆ ಮುಂದುವರಿದಿದೆ.

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

couple's fight
couple's fight

ಕೋಲಾರ: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು (Couple’s fight), ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೌದು, ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ.

ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ ಅದೇನಾಯಿತೋ ಗೊತ್ತಿಲ್ಲ, ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಧು ಕೊನೆಯುಸಿರೆಳೆದಿದ್ದಾಳೆ.

ಇದನ್ನೂ ಓದಿ | Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ವರ ನವೀನ್ ಸ್ಥಿತಿ ಕೂಡ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ಕರ್ನಾಟಕ

Couple’s fight: ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

Couple’s fight: ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ.

VISTARANEWS.COM


on

couple's fight
Koo

ಕೋಲಾರ: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು (Couple’s fight), ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೌದು, ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ.

ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ ಅದೇನಾಯಿತೋ ಗೊತ್ತಿಲ್ಲ, ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಧು ಕೊನೆಯುಸಿರೆಳೆದಿದ್ದಾಳೆ.

ವರ ನವೀನ್ ಸ್ಥಿತಿ ಕೂಡ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿ

Murder case

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿಯಾದ ಘಟನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಬಳಿ ನಡೆದಿದೆ. ನಮಿತಾ (22) ಸ್ಥಳದಲ್ಲೇ ಸಾವನ್ನಪ್ಪಿದ ಗರ್ಭಿಣಿ. ಚೆಕಪ್‌ಗಾಗಿ ಹೋಲಿ ಕ್ರಾಸ್ ಆಸ್ಪತ್ರೆಗೆ ಬದಿದ್ದ ಮಹಿಳೆ, ತಪಾಸಣೆ ಬಳಿಕ ಆಸ್ಪತ್ರೆ ಬಳಿ ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಪಘಾತವಾಗುತ್ತಿದ್ದಂತೆ ಕುಟುಂಬಸ್ಥರು, ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಹೈರಾಣಾದರು. ಅಪಘಾತವಾದ ಬಳಿಕ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

ಪತ್ನಿಯನ್ನು ಕೊಂದು ಪರಾರಿಯಾದ, ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಸತ್ತ!

Murder case
Murder case

ಕೋಲಾರ: ಪತ್ನಿಯನ್ನು ಕೊಂದು (Murder Case) ಪರಾರಿಯಾಗಿದ್ದ ಪಾತಕಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ತೀವ್ರವಾಗಿ ಗಾಯಗೊಂಡು ಸತ್ತುಹೋಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ (Bangalore Crime) ಪತ್ನಿಯನ್ನು ಕೊಂದಿದ್ದ (husband killed wife) ಆರೋಪಿ, ಕೋಲಾರದಲ್ಲಿ (Kolar News) ಸಾವಿಗೀಡಾಗಿದ್ದಾನೆ.

ಕೊಲೆ ನಡೆದ ಐದು ದಿನದ ಬಳಿಕ, ಆರೋಪಿ ತಬ್ರೇಝ್ ಪಾಷಾನ ಬೆನ್ನು ಹತ್ತಿದ ಪೊಲೀಸರಿಗೆ ಆತನ ಹೆಣ ಎದುರಾಗಿದೆ. ಫೇಸ್‌ಬುಕ್ ಲೈವ್ ಮಾಡುತ್ತಲೇ ಪತ್ನಿಯ ಹತ್ಯೆ ಮಾಡಿದ್ದ ಪಾತಕಿ, ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಜೀವ ಕಳೆದುಕೊಂಡಿದ್ದಾನೆ.

ಫಾತಿಮಾ‌ (34) ಪತಿಯಿಂದ ಕೊಲೆಯಾದ ಮಹಿಳೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಝ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಪದೇ ಪದೆ ಮನೆಗೆ ಬರುವಂತೆ ಕಿರುಕುಳ ಕೊಡುತ್ತಿದ್ದ.

ಇತ್ತೀಚೆಗೆ ರಸ್ತೆಯಲ್ಲಿ ಆಕೆಯನ್ನು ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಝ್, ಕೊಲೆ ಮಾಡುತ್ತೇನೆ ಎಂದು ಬೆದರಿಸಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಝ್ ಏನಾದರೂ ಮಾಡುತ್ತಾನೆ ಎಂಬ ಆತಂಕದಿಂದ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.

ಮನೆಗೆ ಬರುವ ಮುನ್ನ ಹಾಗೂ ಹತ್ಯೆಯ ವೇಳೆ ತನ್ನ ಕೃತ್ಯವನ್ನು ಈ ಪಾತಕಿ ಫೇಸ್‌ಬುಕ್‌ ಲೈವ್ ಮಾಡಿದ್ದ. ಕೊಲೆಯ ಬಳಿಕ ಕೋಲಾರಕ್ಕೆ ಕಾಲ್ಕಿತ್ತಿದ್ದ. ಮೊಬೈಲ್ ಬಳಸದೇ ಕೋಲಾರದ ಮಸೀದಿಯಲ್ಲಿ ನಾಲ್ಕು ದಿನ ಉಳಿದುಕೊಂಡಿದ್ದ. ಬಳಿಕ ನಿನ್ನೆ ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿದ್ದ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

ಆರೋಪಿಯನ್ನು ಬಂಧಿಸಲು ಕೋಲಾರಕ್ಕೆ ತೆರಳಿದ್ದ ಚಾಮರಾಜಪೇಟೆ ಪೊಲೀಸರ ತಂಡ ಚಿಕ್ಕಮ್ಮನ ಮನೆಗೆ ಪ್ರವೇಶಿಸಿದಾಗ, ತಪ್ಪಿಸಿಕೊಳ್ಳುವ ಭರದಲ್ಲಿ ಸುಮಾರು 12 ಅಡಿ ಎತ್ತರದ ಮನೆಯ ಟೆರೇಸ್‌ನಿಂದ ಈತ ಜಿಗಿದಿದ್ದಾನೆ. ಆಗ ಬಿದ್ದು ಅಸ್ವಸ್ಥನಾಗಿದ್ದ. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಸಾವಿಗೀಡಾಗಿದ್ದಾನೆ.

Continue Reading

ಕ್ರೈಂ

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

Actor Darshan: ಆಗಸ್ಟ್ 20ಕ್ಕೆ ದರ್ಶನ್ ಮನೆಯೂಟ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಲಿದ್ದು, ಈ ನಡುವೆ ಅರ್ಜಿ ಬಗ್ಗೆ ಜೈಲಾಧಿಕಾರಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕೋರ್ಟ್‌ಗೆ ನೀಡಲು ಜೈಲಾಧಿಕಾರಿಗಳು ವರದಿ ಸಿದ್ಧಪಡಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ (Actor Darshan) ಮನೆಯೂಟ ನೀಡಲು ಜೈಲಾಧಿಕಾರಿಗಳು ನಿರಾಕರಿಸಿದ್ದಾರೆ. ಮನೆಯೂಟ ನೀಡುವ ಬಗ್ಗೆ 10 ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೈಕೋರ್ಟ್ ಸೂಚಿಸಿತ್ತು. ಆದರೆ, ಕೊಲೆ ಆರೋಪಿಗೆ ಕಾನೂನಿನಲ್ಲಿ ಮನೆಯೂಟಕ್ಕೆ ಅವಕಾಶ ಇಲ್ಲವೆಂದು ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆ.

ಆಗಸ್ಟ್ 20ಕ್ಕೆ ದರ್ಶನ್ ಮನೆಯೂಟ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಲಿದ್ದು, ಈ ನಡುವೆ ಅರ್ಜಿ ಬಗ್ಗೆ ಜೈಲಾಧಿಕಾರಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕೋರ್ಟ್‌ಗೆ ನೀಡಲು ಜೈಲಾಧಿಕಾರಿಗಳು ವರದಿ ಸಿದ್ಧಪಡಿಸಿದ್ದಾರೆ.

ಅನೇಕ ವಿಐಪಿ ವಿಚಾರಣಾಧೀನ ಬಂಧಿಗಳಿಗೆ ಮನೆಯೂಟ ನಿರಾಕರಣೆ ಮಾಡಲಾಗಿದೆ ಎಂದು ಕೋರ್ಟ್ ಆದೇಶ ನೀಡಿದರೂ ಜೈಲು ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದರು. ಜೈಲಿನಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ಬಂಧಿಗಳಿದ್ದಾರೆ. ಒಬ್ಬೊಬ್ಬರಿಗೂ ಮನೆಯೂಟಕ್ಕೆ ಅವಕಾಶ ನೀಡಿದರೆ, ಜೈಲಿನ ಊಟ ಮಾಡುವವರು ಇರುವುದಿಲ್ಲ. ಎಲ್ಲರೂ ಮನೆ ಊಟ ಕೇಳುವ ಸ್ಥಿತಿ ಉದ್ಭವ ಆಗಲಿದೆ. ಹೀಗಾಗಿ ಮನೆ ಊಟ ನೀಡುವ ವಿಚಾರದಲ್ಲಿ ಮರು ಪರಿಶೀಲಿಸಲು ಕೋರ್ಟ್‌ಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇತರರಂತೆ ನಟ ದರ್ಶನ್ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯುತ್ತದೆ. ನಟ ದರ್ಶನ್‌ಗೆ ಮನೆ ಊಟ ಅಗತ್ಯವಿಲ್ಲ, ಜೈಲಿನಲ್ಲಿ ಗುಣಮಟ್ಟದ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಂದ ಕೋರ್ಟ್‌ಗೆ ವರದಿ ಸಲ್ಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ | Viral Video: 11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ (Actor Darshan) ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ.

ಇದನ್ನೂ ಓದಿ | Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

ಎಫ್‌ಎಸ್‌ಎಲ್ ವರದಿಯಲ್ಲಿ ಭಯಾನಕ ಸತ್ಯ ಹೊರಬಿದ್ದಿದೆ. ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ರೌಂಡ್ ನೆಕ್ ಶರ್ಟ್ ಅನ್ನು ಎಫ್‌ಎಸ್‌ಎಲ್‌ಗೆ ಪೊಲೀಸರು ಕಳುಹಿಸಿದ್ದರು. ಪರಿಶೀಲನೆಯಲ್ಲಿ ದರ್ಶನ್ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವು ರೇಣುಕಾಸ್ವಾಮಿಯ ದೇಹದ ರಕ್ತ ಎಂಬುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡವಾಗಿದೆ ಎನ್ನಲಾಗಿದೆ.

Continue Reading
Advertisement
Vinay Rajkumar pepe preset Vinay Rajkumar Shreelesh S Nair
ಸ್ಯಾಂಡಲ್ ವುಡ್4 mins ago

Vinay Rajkumar: ʻಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್: ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ!

Mary Kom
ಕ್ರೀಡೆ8 mins ago

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Repo Rate
ವಾಣಿಜ್ಯ11 mins ago

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Naga Chaitanya Nagarjuna Called Sobhita Dhulipala Hot
ಟಾಲಿವುಡ್18 mins ago

Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

Henna Jihad
ದೇಶ29 mins ago

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

lalbagh flower show 2024
ಪ್ರಮುಖ ಸುದ್ದಿ33 mins ago

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Gold Rate Today
ಚಿನ್ನದ ದರ39 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

ಉದ್ಯೋಗ44 mins ago

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details

Actor Yash journey begins Yash Gave Update On Toxic Movie
ಸ್ಯಾಂಡಲ್ ವುಡ್47 mins ago

Actor Yash:  ʻಟಾಕ್ಸಿಕ್‌ʼ ಪಯಣ ಶುರುವಾಗಿದೆ ಎಂದು ಗುಡ್‌ ನ್ಯೂಸ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

head master self harming
ಕ್ರೈಂ56 mins ago

Self Harming: ಇಬ್ಬರು ಇನ್‌ಸ್ಪೆಕ್ಟರ್‌ಗಳ ಬಳಿಕ ಹೆಡ್‌ಮಾಸ್ಟರ್‌ ಶಾಲೆಯಲ್ಲೇ ಆತ್ಮಹತ್ಯೆ; ಏನಾಗ್ತಿದೆ ರಾಜ್ಯದಲ್ಲಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ7 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌