Site icon Vistara News

Crime News : ರಾತ್ರಿ ಕಾಣೆಯಾದವಳು ಬೆಳಗ್ಗೆ ಮನೆ ಮುಂದೆ ಶವವಾಗಿ ಪತ್ತೆ!

A Girl Mahanandha Found As a dead

ಬೆಂಗಳೂರು: ಮಹದೇವಪುರ ಲಕ್ಷ್ಮಿಸಾಗರ ಲೇಔಟ್‌ನಲ್ಲಿ ಯುವತಿಯೊಬ್ಬಳು ಶವವಾಗಿ (Dead body Found) ಪತ್ತೆ ಆಗಿದ್ದಾಳೆ. ಮಹಾನಂದ (21) ಮೃತ ದುರ್ದೈವಿ.

ಮಹಾನಂದ ಕಾಣೆಯಾಗಿದ್ದಾಳೆ (Missing Case) ಎಂದು ಪರಿಚಯಸ್ಥರು ಪೊಲೀಸ್ ಠಾಣೆಗೆ ಗುರುವಾರ ರಾತ್ರಿ ದೂರು ನೀಡಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮಹಾನಂದ ಶವವಾಗಿ ಪತ್ತೆ ಆಗಿದ್ದಾಳೆ. ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಮನೆ ಮುಂದೆಯೇ ಮೃತದೇಹವು ಪತ್ತೆ ಆಗಿದೆ.

ಕಲಬುರಗಿ ಮೂಲದ ಮಹಾನಂದ ಬೆಂಗಳೂರಲ್ಲಿ ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಸದ್ಯ ವಿಷಯ ತಿಳಿದು ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಯುವತಿ ಸಾವಿನ ಕುರಿತು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ‌

ಸದ್ಯ ಮಹದೇವಪುರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:Murder Case: ರೀಲ್ಸ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು; ಗಂಡನಿಂದ ಕೊಲೆ, ಹೆಣ ಸಾಗಿಸಿದ ತಂದೆ!

ತುಂಗಾ ನದಿಯಲ್ಲಿ ವೃದ್ಧೆಯ ಶವ ಪತ್ತೆ

ಶಿವಮೊಗ್ಗ ನಗರದ ಕೋರ್ಪಳಯ್ಯನ ಛತ್ರ ಬಳಿ ಇರುವ ನದಿಯಲ್ಲಿ ವೃದ್ಧೆಯ ಶವ ಪತ್ತೆ ಆಗಿದೆ. ವೃದ್ಧೆ ಪ್ರತಿನಿತ್ಯ ಅದೇ ಪರಿಸರದಲ್ಲಿ ತಿರುಗಾಡುತ್ತಿದ್ದರು. ದೇಗುಲಗಳಿಗೆ ಭೇಟಿ ನೀಡುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಹೊರಗೆ ಎಳೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲಿಗೆ ತಲೆಕೊಟ್ಟು ವ್ಯಕ್ತಿ ಸಾವು

ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ಸ್ಟೇಷನ್ ಬಳಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಚಾಮರಾಜನಗರಕ್ಕೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲಿಗೆ ಸುಮಾರು 35 ವರ್ಷದ ವ್ಯಕ್ತಿ ತಲೆಕೊಟ್ಟಿದ್ದಾನೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತಪಟ್ಟವನ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version