Crime News : ಹೆಡ್‌ ಮಾಸ್ಟರ್‌ ಅಪಘಾತದಲ್ಲಿ ದುರ್ಮರಣ, ಡಿಆರ್‌ ಪೊಲೀಸ್‌ ಆತ್ಮಹತ್ಯೆ - Vistara News

ಕ್ರೈಂ

Crime News : ಹೆಡ್‌ ಮಾಸ್ಟರ್‌ ಅಪಘಾತದಲ್ಲಿ ದುರ್ಮರಣ, ಡಿಆರ್‌ ಪೊಲೀಸ್‌ ಆತ್ಮಹತ್ಯೆ

Crime News : ರಾಜ್ಯದ ನಾನಾ ಭಾಗಗಳಲ್ಲಿ ಅಪಘಾತ, ಆತ್ಮಹತ್ಯೆಯ ಘಟನೆಗಳು ನಡೆದಿವೆ. ಇದರಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

VISTARANEWS.COM


on

Road accident Suicide
ಅಪಘಾತದಲ್ಲಿ ಮೃತಪಟ್ಟ ಶಿಕ್ಷಕರಾದ ರಾಮಕೃಷ್ಣೇಗೌಡ ಮತ್ತು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಈರಣ್ಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ರಾಜ್ಯದ ಸಚಿವ ಚಲುವರಾಯಸ್ವಾಮಿ (Minister Chaluvaraya Swamy) ಅವರ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ (School Head Master) ದುರ್ಮರಣ ರಾಮಕೃಷ್ಣೇ ಗೌಡ ಅವರು ಅಪಘಾತದಲ್ಲಿ (Road Accident) ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆ (Mandya News) ನಾಗಮಂಗಲ ತಾಲೂಕಿನ H. ಭುವನಹಳ್ಳಿ ಗ್ರಾಮದ ಶಿಕ್ಷಕ ರಾಮಕೃಷ್ಣೇಗೌಡ ಅವರು ಇಜ್ಜಲಘಟ್ಟ ಗ್ರಾಮದಿಂದ ಶಾಲೆ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ (Crime News). ಮನೆಗೆ ಮರಳುವ ವೇಳೆ ಕಾರು ಮತ್ತು ಬೈಕ್‌ ನಡುವೆ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್‌ ದೂರ ಹೋಗಿ ಬಿದ್ದಿದೆ. ರಾಮಕೃಷ್ಣೇಗೌಡ ಅವರು ಅಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕಾರು ಕೂಡಾ ದೂರ ಎಲ್ಲೋ ಹೋಗಿ ನಿಂತಿದ್ದು ಅದರ ಚಾಲಕನಿಗೂ ಗಾಯಗಳಾಗಿವೆ. ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾವೇರಿ: ಡಿಆರ್ ಕಾನ್ಸ್ಟೇಬಲ್ ಆತ್ಮಹತ್ಯೆ

ಹಾವೇರಿ: ಹಾವೇರಿ (Haveri News) ಜಿಲ್ಲಾ ಮೀಸಲು ಪೊಲೀಸ್ ವಿಭಾಗದ ಕಾನ್ಸ್‌ಟೇಬಲ್ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವೇಶ್ವರನಗರ ಸಿ ಬ್ಲಾಕ್ ರೈಲ್ವೆ ಹಳಿ ಸಮೀಪ ಪೊಲೀಸ್‌ ಸಿಬ್ಬಂದಿ ಈರಣ್ಣ ದೊಡ್ಡಬೂದಿಹಾಳ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈರಣ್ಣ ಅವರು ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರನ್ನು ಎಲ್ಲ ಕಡೆ ಹುಡುಕಿದ್ದರೂ ಸಿಕ್ಕಿರಲಿಲ್ಲ. ಇದೀಗ ರೈಲ್ವೇ ಹಳಿ ಸಮೀಪ ಅವರ ಶವ ಸಿಕ್ಕಿದೆ. ಈರಣ್ಣ ಅವರ ಮೃತದೇಹದ ಬಳಿ ಮಾತ್ರೆಗಳು ಪತ್ತೆಯಾಗಿದ್ದು, ಅವರು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : Illicit Relationship : ವಿಜಯಪುರದಲ್ಲಿ ಜೋಡಿ ಕೊಲೆ; ಅಕ್ರಮ ಸಂಬಂಧಕ್ಕಾಗಿ ನಡೆಯಿತಾ ಹತ್ಯೆ?

ಚಲಿಸುತ್ತಿದ್ದ ರೈಲಿನಡಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ವಿಜಯಪುರ ನಗರದ (vijayapura News) ವಜ್ರ ಹನುಮಾನ್ ಗೇಟ್ ಬಳಿಯ ಹಳಿಯಲ್ಲಿ ವ್ಯಕ್ತಿಯೊಬ್ಬರು ರೈಲು ಬರುವಾಗ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕಾಶ ಬಿರಾದಾರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Train Accident death
Vijaya Nagara Accident

ಕಾರು-ಗೂಡ್ಸ್‌ ವಾಹನದ ನಡುವೆ ಅಪಘಾತ: ಮಹಿಳೆಗೆ ಗಂಭೀರ ಗಾಯ

ವಿಜಯನಗರ: ಕಾರು ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ನಡೆದ ಘಟನೆ ವಿಜಯನಗರ ಜಿಲ್ಲೆಯ (Vijayanagara News) ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ – 67 ಧರ್ಮಸಾಗರ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ.

Vijaya Nagara Accident
Vijaya Nagara Accident

ಬಳ್ಳಾರಿಯಿಂದ ಹೊಸಪೇಟೆಯತ್ತ ಹೊರಟಿದ್ದ ಕಾರು ಮತ್ತು ಹೊಸಪೇಟೆಯಿಂದ ಬಳ್ಳಾರಿಗೆ ಹೊರಟಿದ್ದ ಗೂಡ್ಸ್ ವಾಹನದ ನಡುವೆ ಡಿಕ್ಕಿ ನಡೆದಿದೆ. ಗೂಡ್ಸ್ ವಾಹನ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಸ್ಥಳಕ್ಕೆ ಗಾದಿಗನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಗದಗ

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

Lakshmeshwara Town : ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

VISTARANEWS.COM


on

By

Gosavi samaj lathicharged Sri Ram Sene calls for bandh in Lakshmeshwara town on October 19
Koo

ಗದಗ: ಲಕ್ಷ್ಮೇಶ್ವರ ಪಟ್ಟಣವನ್ನು (Lakshmeshwara Town) ಬಂದ್‌ ಮಾಡುವುದು ಖಚಿತ ಎಂದು ಶ್ರೀರಾಮ ಸೇನೆ ಪಣ ತೊಟ್ಟಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

ಗುರುವಾರ ಗದಗನ ಪತ್ರಿಕಾ ಭವನದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಶ್ರೀರಾಮಸೇನೆ ರಾಜ್ಯ‌ ಕಾರ್ಯದರ್ಶಿ ರಾಜು ಖಾನಪ್ಪನವರ, ದಸರಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆಯಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಆಗಿದೆ. ಇದೆಲ್ಲದಕ್ಕೂ‌ ಕಾರಣ, ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಆಗಿದ್ದು, ಅವರನ್ನು ಕೂಡಲೇ‌ ಅಮಾನತು ಮಾಡುವಂತೆ ಒತ್ತಾಯಿಸಿದರು.

ಇನ್ನು ಈ ಬಂದ್ ಕರೆ ವಿರೋಧಿಸಿ ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ ವಿರೋಧ ಮಾಡಿದ್ದಾರೆ. ಆದರೆ ಅ.19 ರಂದು ಲಕ್ಷ್ಮೇಶ್ವರ ಬಂದ್ ಮಾಡೋದಕ್ಕೆ ಸ್ಥಳಿಯರೇ ನಮಗೆಲ್ಲ ಬೆಂಬಲ ನೀಡುತ್ತಿದ್ದಾರೆ. ಬಂದ್‌ಗೆ ವಿರೋಧಿಸುತ್ತಿರುವವರು ಯಾರೂ ಸಹ ಸ್ಥಳೀಯ ನಾಯಕರಲ್ಲ. ಅವರೆಲ್ಲ ಗ್ಯಾಂಬ್ಲರ್ ಗಳು. ಇವರು ಮಾಡುವ ದಂಧೆಗೆಲ್ಲ ಪಿಎಸ್ಐ ಈರಣ್ಣ ರಿತ್ತಿ ಬೆಂಬಲ ಇದೆ.‌ ಹೀಗಾಗಿ ಪಿಎಸ್‌ಐ ಪರವಾಗಿ ಇವರೆಲ್ಲ ನಿಂತಿದ್ದಾರೆ.‌ ಅದೇನೆ ಇರಲಿ,‌ ನಾವು ಮಾತ್ರ ಬಂದ್ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ್ದರು.

ಏನಿದು ಘಟನೆ?

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಅಂಗವಾಗಿ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಗೋಸಾವಿ ಸಮುದಾಯ ಸಂಭ್ರಮ ಸಡಗರದಿಂದ ಭಾಗಿಯಾಗಿದ್ದರು. ಈ ವೇಳೆ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್ ಪ್ರದೇಶದಲ್ಲಿ ಮೆರವಣಿಗೆ ಸಾಗುವ ವೇಳೆ,‌ ಅನ್ಯಕೋಮಿನ ಯುವಕರು ಬಂದು ಮೆರವಣಿಗೆಯಲ್ಲಿ ಭಾಗಿಯಾದ ಗೋಸಾವಿ ಯುವಕರ ನಡುವೆ ಗಲಾಟೆಯಾಗಿದೆ. ಆಗ ಗೋಸಾವಿ ಯುವಕರು ಕೇಸರಿ ಶಾಲನ್ನು ಹಿಡಿದು ಹಲ್ಲೆ ಮಾಡಿದ್ದಾರಂತೆ.

ಹೀಗಾಗಿ ಶನಿವಾರ ತಡವಾಗಿದ್ದಕ್ಕೆ ಮರುದಿನ ರವಿವಾರ, ಹಲ್ಲೆಗೊಳಗಾದ ಯುವಕರು ಹಾಗೂ ಗೋಸಾವಿ ಸಮುದಾಯದ ಜನರು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆಗ ಲಕ್ಷ್ಮೇಶ್ವರ ಪೊಲೀಸರು ದೂರು ದಾಖಲು ಮಾಡಿಕೊಳ್ಳದೆ,‌ ಗೋಸಾವಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿದ್ದರಂತೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ, ಗೋಸಾವಿ ಸಮುದಾಯದವರು ಲಕ್ಷ್ಮೇಶ್ವರ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಇನ್ನು ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ ಎಂದು ಗದಗ ಎಸ್ಪಿ ಕಚೇರಿಗೆ ಗೋಸಾವಿ ಸಮುದಾಯದ, ಯುವಕರು, ಮಹಿಳೆಯರು, ಹಿರಿಯರು ಆಗಮಿಸಿದ್ದರು.

ನಾವು ಬಡ ಜನರು, ಉದ್ಯೋಗ ಮಾಡಿಕೊಂಡು ಜೀವನ ನಡೆಸುತ್ತೇವೆ. ನಾವು ಹಿಂದೂಗಳು ಹೀಗಾಗಿ ಎಲ್ಲ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಆದರೆ, ಅನ್ಯಕೋಮಿನ ಯುವಕರು ನಮ್ಮ ಯುವಕರು ಹಾಕಿದ ಕೇಸರಿ ಶಾಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ‌ಗೊಳಗಾದವರು ನ್ಯಾಯ ಕೇಳಲು ಹೋದರೆ ಅವರ ಮೇಲೆಯೇ ಲಾಠಿ ಚಾರ್ಜ್ ಮಾಡಿದ್ದಾರೆ. ಯುವಕರು, ಮಹಿಳೆಯರಿಗೆ ಏಟು ಬಿದ್ದಿವೆ. ನಮಗೆ ನ್ಯಾಯ ಕೊಡಿಸಿ ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯ ಮಾಡಿದ್ದರು.

ಆದರೆ ಪೊಲೀಸರ ಹೇಳಿಕೆ‌ ಪ್ರಕಾರ, ಠಾಣೆ ಎದುರು ಗುಂಪು ಚದುರಿಸುವ ಸಲುವಾಗಿ, ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಾದಿಸಿದ್ದಾರೆ. ಸದ್ಯ ಎರಡು ಕಡೆ ದೂರು- ಪ್ರತಿದೂರು ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಮುಂದುವರೆದ ಭಾಗವಾಗಿ, ಅ.19 ರಂದು ಶ್ರೀರಾಮಸೇನೆ ಸಂಘಟನೆ, ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಕರೆ ನೀಡಿದೆ.

Continue Reading

ಬೆಂಗಳೂರು

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Murder Case: ಮಹಿಳೆಯೊಬ್ಬಳು ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತಿಗೆ ಸಿಕ್ಕಿಬಿದ್ದಿದ್ದಾಳೆ. ಪತ್ನಿಯ ಕಳ್ಳಾಟಕ್ಕೆ ಸಿಟ್ಟಾದ ಪತಿ ಇಬ್ಬರನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.

VISTARANEWS.COM


on

By

A man killed his wife and her lover then committed suicide
Koo

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಪ್ರಿಯಕರನನ್ನು ಕೊಲೆ (Murder case) ಮಾಡಿದ್ದಾನೆ. ಪೈತಮ್ಮ (40), ಗಣೇಶ್ ಕುಮಾರ್ ಕೊಲೆಯಾದವರು. ಗೊಲ್ಲಬಾಬು ಕೊಲೆಗೈದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇವರೆಲ್ಲರೂ ಮೂಲತಃ ಆಂಧ್ರ ಪ್ರದೇಶದವರು ಎಂದು ತಿಳಿದು ಬಂದಿದೆ.

ಪೈತಮ್ಮ (40), ಗೊಲ್ಲಬಾಬು (45) ದಂಪತಿ ಕೆಲಸ ಅರಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದರು. ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಪತ್ನಿ ಪೈತಮ್ಮ ಮೇಲೆ ಆಗಾಗ ಗೊಲ್ಲಬಾಬು ಅನುಮಾನ ವ್ಯಕ್ತ ಪಡಿಸಿದ್ದ. ನಿನ್ನೆ ತಡರಾತ್ರಿಯಲ್ಲಿ ಗಣೇಶ್ ಕುಮಾರ್ ಜತೆಗಿದ್ದಾಗಲೇ ಪೈತಮ್ಮ ಪತಿಗೆ ಸಿಕ್ಕಿಬಿದ್ದಿದ್ದಳು.

ಮತ್ತೊಬ್ಬನೊಟ್ಟಿಗೆ ಪತ್ನಿಯನ್ನು ಕಂಡೊಡನೆ ಸಿಟ್ಟಾದ ಗೊಲ್ಲಬಾಬು ಅಲ್ಲೇ ಇದ್ದ ಮರದ ರಿಪೀಸ್‌ನಿಂದ ಹಲ್ಲೆ ನಡೆಸಿ, ಇಬ್ಬರನ್ನು ಕೊಲೆ ಮಾಡಿದ್ದಾನೆ. ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ ಬಿ ಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯ ನಿರ್ಮಾಣ ಹಂತದ ‌ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ.

ಕೋಣನಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರ ಬೇಲ್‌ ಕನಸು ನಚ್ಚು ನೂರಾಗಿದೆ. ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ 9 ಕಾರಣಗಳನ್ನು ಕೊಟ್ಟಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌ ಆಗಿರುವ ನಟ ದರ್ಶನ್‌‌ (Actor Darshan) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನುನಿನ್ನೆ ಸೋಮವಾರ ಕೋರ್ಟ್‌ ವಜಾಗೊಳಿಸಿತು. ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದಕ್ಕೆ ಕೋರ್ಟ್‌ 9 ಕಾರಣಗಳನ್ನು ನೀಡಿದೆ.

ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಲು ಪ್ರಮುಖ ಕಾರಣಗಳು!

  • -ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ
  • -ರೇಣುಕಾಸ್ವಾಮಿ ಮೃತದೇಹದ ಗುರುತು ಪತ್ತೆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ತಡವಾಗಿಲ್ಲ.
  • -ದರ್ಶನ್ ಟ್ರಯಲ್ ಆರಂಭವಾದ ಬಳಿಕ ಆರೋಪಿಗಳ ಹೇಳಿಕೆಯ ಬಗ್ಗೆ ತಿಳಿಯುತ್ತದೆ.
  • -ದರ್ಶನ್ ಕ್ರಾಸ್ ಎಕ್ಸಾಮಿನ್ ಮಾಡಿದಾಗ ರಿಕವರಿಯ ಅಂಶಗಳ ಬಗ್ಗೆ ತಿಳಿಯುತ್ತದೆ
  • -ಸಿಡಿಆರ್ ನಲ್ಲಿ ಎ೨ ಆರೋಪಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ
  • -ಈ ಹಂತದಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ
  • -ಡಿ ಎನ್ ಎ ಟೆಸ್ಟ್‌ ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ
  • -ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ರೇಣುಕಾಸ್ವಾಮಿ ಯ ಕೊಲೆಯ ಕ್ರೂರತೆ ಬಗ್ಗೆ ತಿಳಿಸಿದೆ
  • -ಸಮಾಜದಲ್ಲಿ ದರ್ಶನ್ ರೋಲ್ ಮಾಡೆಲ್ ಆಗಿದ್ದು, ಸಾಕಷ್ಟು ಜನ್ರು ಪ್ರಭಾವಿತರಾಗಿರ್ತಾರೆ

ಹತ್ಯೆ ಕೇಸ್‌ ಆರೋಪಿ ದರ್ಶನ್‌ಗೆ ಮತ್ತಷ್ಟು ದಿನ ಜೈಲುವಾಸವೇ ಫಿಕ್ಸ್ ಆಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಆರೋಪಿ ದರ್ಶನ್‌ಗೆ ನ್ಯಾಯಾಲಯ ಬಿಗ್‌ ಶಾಕ್‌ ನೀಡಿದೆ. ಸ್ಯಾಂಡಲ್‌‌ವುಡ್ ಜಗ್ಗುದಾದಾನ ಬೇಲ್‌ ಅರ್ಜಿ ವಜಾಗೊಳಿಸಿರುವ ಕೋರ್ಟ್‌, ಜಾಮೀನು ನಿರಾಕರಣೆಗೆ ಹಲವು ಕಾರಣ ನೀಡಿದೆ. ವಿಸ್ತಾರ ನ್ಯೂಸ್‌ಗೆ ಬೇಲ್‌ ರಿಜೆಕ್ಟ್‌‌ ಬಗ್ಗೆ ಕೋರ್ಟ್‌ ಉಲ್ಲೇಖಿಸಿದ ಅಂಶಗಳ ಪಿನ್‌ ಟು ಪಿನ್‌ ಮಾಹಿತಿ ಲಭ್ಯವಾಗಿದೆ. ಸದ್ಯ ಜೈಲಲ್ಲಿರುವ ದರ್ಶನ್‌ಗೆ ಜಾಮೀನು ಅನ್ನೋದು ಮರೀಚಿಕೆ ಆಗಿದೆ. ನ್ಯಾಯಾಲಯ ಉಲ್ಲೇಖಿಸಿದ ಅಂಶಗಳ ನೋಡಾದಾದರೆ, ಕೊಲೆ ಕೇಸಲ್ಲಿ ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ ಅಂತಾ ಆದೇಶದಲ್ಲಿ ತಿಳಿಸಲಾಗಿದೆ.

ದರ್ಶನ್‌ ಪರ ವಕೀಲರ ಆರೋಪದಂತೆ ರೇಣುಕಾಸ್ವಾಮಿ ಮೃತದೇಹ ಗುರುತಿನ ಬಳಿಕ ಮರಣೋತ್ತರ ಪರೀಕ್ಷೆ ತಡವಾಗಿಲ್ಲ, ದರ್ಶನ್ ಟ್ರಯಲ್ ಆರಂಭ ಬಳಿಕ ಆರೋಪಿಗಳ ಹೇಳಿಕೆ ತಿಳಿಯುತ್ತದೆ. ದರ್ಶನ್ ಕ್ರಾಸ್ ಎಕ್ಸಾಮ್‌‌‌‌‌‌ ಮಾಡಿದಾಗ ರಿಕವರಿ ಅಂಶ ತಿಳಿಯುತ್ತದೆ. ಸಿಡಿಆರ್‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ ಅಂತಾ ಬೇಲ್‌ ಅರ್ಜಿ ವಜಾಗೊಳಿಸಿದೆ. ಮಾತ್ರವಲ್ಲ ಕೊಲೆ ಕೇಸಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ, DNA ಟೆಸ್ಟ್‌‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ. ಪೋಸ್ಟ್‌‌ಮಾರ್ಟಂ ವರದಿ ರೇಣುಕಾಸ್ವಾಮಿ ಕೊಲೆಯ ಕ್ರೂರತೆ ತಿಳಿಸಿದೆ ಎಂದಿರುವ ಕೋರ್ಟ್‌, ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದು, ಬೇಲ್ ಅರ್ಜಿ ವಜಾಗೊಳಿಸಿದೆ.

ಹೈಕೋರ್ಟ್‌ನತ್ತ ದಚ್ಚು-ಪವಿ ಬೇಲ್‌ ಅರ್ಜಿ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದರ್ಶನ್‌, ಜಾಮೀನು ಪಡೆದು ಹೊರಬರುವ ದಿನಕ್ಕಾಗಿ ಕಾಯುತ್ತಾ ಇದ್ದರು. ಆದರೆ ಸ್ಯಾಂಡಲ್‌ವುಡ್ ಕಾಟೇರನ ಬೇಲ್‌‌ ಕನಸು ನುಚ್ಚು ನೂರಾಯಿತು. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ನಿನ್ನೆ ಬೇಲ್ ಆದೇಶ ಹೊರಬಿದ್ದಿದ್ದು, ದರ್ಶನ್​ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರ ತಂಡ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ.

ಸೆಷನ್‌ ಕೋರ್ಟ್‌ನ ಆದೇಶ ಪ್ರತಿ ಸೇರಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲು ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಮತ್ತೊಂದೆಡೆ ಸದ್ಯಕ್ಕೆ ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ, ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ.

ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ದರ್ಶನ್‌ಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ. ಅನಾರೋಗ್ಯದ ನೆಪದಲ್ಲಾದರೂ ಚಾಲೆಂಜಿಂಗ್‌ ಸ್ಟಾರ್‌, ಬೆಂಗಳೂರು ಜೈಲು ಸೇರುವ ಯತ್ನ ನಡೆಸ್ತಿದ್ದಾರೆ ಎನ್ನಲಾಗ್ತಿದೆ. ಈ ಮಧ್ಯೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ಮತ್ತೊಂದೆಡೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡಗೂ ಬೇಲ್‌ ಸಿಕ್ಕಿಲ್ಲ. ಹೀಗಾಗಿ ಜೈಲುಹಕ್ಕಿ, ದರ್ಶನ್ ಗೆಳತಿ ಪವಿತ್ರಾ ಕೂಡ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದಾರೆ. ಪವಿತ್ರಾ ಗೌಡ ಪರ ವಕೀಲರ ತಂಡ, ಬೇಲ್‌‌ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಈವರೆಗೆ ಐವರಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳಿಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಹತ್ಯೆ ಕೇಸ್‌ನ ಎ8 ರವಿಶಂಕರ್ ಹಾಗೂ ಎ13 ದೀಪಕ್‌ಗೆ ಬೇಲ್ ನೀಡಿದ ಕೋರ್ಟ್‌ ಆದೇಶಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಐವರಿಗೆ ಜಾಮೀನು ಸಿಕ್ಕಿದ್ದು, ಇದೀಗ ಮತ್ತಿಬ್ಬರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮರ್ಡರ್‌ ಕೇಸ್‌ನ ಎ8 ಆಗಿರುವ ರವಿಶಂಕರ್ ಕ್ಯಾಬ್‌ವೊಂದರ ಚಾಲಕನಾಗಿರುವ ಹಿನ್ನೆಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ಸ್ವಾಮಿಯನ್ನು ಕರೆತಂದಿದ್ದ ಅಷ್ಟೇ ಎಂದು ವಕೀಲರು ವಾದ ಮಾಡಿದ್ದು, ಹತ್ಯೆ ಕೇಸಲ್ಲಿ ರವಿಶಂಕರ್ ಒಳಸಂಚು ಮೇಲ್ನೋಟಕ್ಕೆ ಕಾಣದ ಹಿನ್ನೆಲೆ ಬೇಲ್ ನೀಡುವಂತ ಮನವಿ ಕೂಡ ಮಾಡಲಾಗಿತ್ತು.

ಮತ್ತೊಂದೆಡೆ ಎ13 ದೀಪಕ್ ವಿರುದ್ಧ ಸಾಕ್ಷ್ಯ ನಾಶ ಮಾಡಿರುವ ಆರೋಪ ಕೇಳಿ ಬಂದಿತ್ತು. ಆದರೆ ದೀಪಕ್‌‌ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದಿರುವ ವಕೀಲರು, ಜಾಮೀನು ಕೋರಿ ಮನವಿ ಮಾಡಿದ್ದು, ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಆಕ್ಷೇಪ ವ್ಯಕ್ತಪಡಿಸದ ಹಿನ್ನೆಲೆ ಜಾಮೀನು ಸಿಕ್ಕಿದ್ದು, ಇಬ್ಬರಿಗೂ ರಿಲೀಫ್ ಸಿಕ್ಕಿದೆ. ಇಬ್ಬರು ಆರೋಪಿಗಳ ವಿರುದ್ಧವೂ ಜಾಮೀನು ನೀಡಬಹುದಾದ ಪ್ರಕರಣ ಹಿನ್ನೆಲೆ ನ್ಯಾಯಾಲಯ ಬೇಲ್ ನೀಡಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ರಿಲೀಸ್ ಆಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Murder Case : ಕುಡಿದ ಅಮಲಿನಲ್ಲಿ ಬಾಟೆಲ್‌ನಿಂದ ಸ್ನೇಹಿತನ ಕುತ್ತಿಗೆ ಚುಚ್ಚಿ‌ ಕೊಲೆ ಮಾಡಿದ ಕುಚಿಕು ಗೆಳೆಯ

Murder Case : ಕುಡಿದ ಅಮಲಿನಲ್ಲಿ ಬಾಟೆಲ್‌ನಿಂದ ಸ್ನೇಹಿತನ ಕತ್ತಿಗೆ ಚುಚ್ಚಿ‌ ಕುಚಿಕು ಗೆಳೆಯನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

murder case
ಕೊಲೆ ಆರೋಪಿ ಉಮೇಶ್‌
Koo

ಬೆಂಗಳೂರು: ಬೆಂಗಳೂರಿನಲ್ಲಿ ಕುಚಿಕು ಗೆಳೆಯನಿಂದಲೇ ಯುವಕನೊರ್ವ (Murder case) ಕೊಲೆಯಾಗಿದ್ದಾನೆ. ಬೆಂಗಳೂರಿನ ಸ್ಯಾಟ್‌ಲೈಟ್ ನಿಲ್ದಾಣದ ಬಳಿಯ ಕಲಾ ವೈನ್ಸ್ ಬಾರ್‌ನಲ್ಲಿ ಘಟನೆ ನಡೆದಿದೆ. ಕಸ್ತೂರಿ ನಗರದ ನಿವಾಸಿ ಸೋನು (25) ಕೊಲೆಯಾದವನು.

ಸೋನು ತನ್ನ ಕುಚಿಕು ಗೆಳೆಯನ ಜತೆಯಲ್ಲಿ ಕೂತು ಮದ್ಯ ಸೇವಿಸುತ್ತಿದ್ದ. ಈ ವೇಳೆ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಬಾರ್‌ನಲ್ಲೇ ಸೋನುನನ್ನು ಕೊಂದು ಹಾಕಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಈ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಭಾನುವಾರ ರಾತ್ರಿ 10:45ರ ಸುಮಾರಿಗೆ ಘಟನೆ ನಡೆದಿದೆ. ಆರೋಪಿ ಮತ್ತು ಕೊಲೆಯಾದವನು ಸ್ನೇಹಿತರು. ಇಬ್ಬರು ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಹಳೇ ಜಗಳದ ವಿಚಾರದ ತೆಗೆದು ಗಲಾಟೆಯಾಗಿದೆ. ಬಾಟಲ್‌ನಿಂದ ಸೋನು ಕತ್ತಿಗೆ ಚುಚ್ಚಿ‌ ಕೊಲೆ ಮಾಡಿದ್ದಾನೆ. ಉಮೇಶ್ (28) ಕೊಲೆ ಮಾಡಿದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ8 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು11 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ11 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು14 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ14 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ14 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ2 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌