Site icon Vistara News

Crime News : ಏನಿತ್ತೋ ನೋವು? ಎದೆಗೇ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡ ಯುವಕ

Crime News Self Harming kodagu

ಮಡಿಕೇರಿ: ಯುವಕನೊಬ್ಬ ತನ್ನ ಎದೆಗೆ ತಾನೇ ಗುಂಡು ಹೊಡೆದುಕೊಂಡು ಪ್ರಾಣ ಕಳೆದುಕೊಂಡ (Self Harming) ದಾರುಣ ಘಟನೆ ಕೊಡಗು ಜಿಲ್ಲೆಯಲ್ಲಿ (Crime News) ನಡೆದಿದೆ. ಕೊಡಗು ಜಿಲ್ಲೆ (Kodagu News) ಸೋಮವಾರಪೇಟೆ ತಾಲೂಕಿನ ಮಾದಪುರ ಸಮೀಪದ ಮುವತ್ತೋಕ್ಲುವಿನಲ್ಲಿ ನಡೆದ ಘಟನೆ ಇದಾಗಿದ್ದು, ಮೃತ ಯುವಕನನ್ನು ಪ್ರವೀಣ್ (28) ಎಂದು ಗುರುತಿಸಲಾಗಿದೆ.

ಆಗ ಸಿಂಗಲ್ ಬ್ಯಾರಲ್ ಗನ್ ನಿಂದ ಎದೆಗೆ ಗುಂಡು ಹೊಡೆದುಕೊಂಡು (Fires bullet into his own chest) ಪ್ರಾಣ ಬಿಟ್ಟಿದ್ದಾನೆ. ಮೃತದೇಹವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮಾದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇರೆ ಕಡೆ ಉದ್ಯೋಗದಲ್ಲಿರುವ ಪ್ರವೀಣ್‌ ಕೆಲವು ದಿನಗಳ ಹಿಂದೆ ಊರಿಗೆ ಬಂದಿದ್ದ. ಆತ ಕೆಲವು ದಿನದಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಆತ ಯಾವುದೋ ನೋವಿನಲ್ಲಿ ಇದ್ದು ಹೊರಬರಲಾಗದೆ ಸಂಕಷ್ಟದಲ್ಲಿದ್ದ ಎಂಬಂತೆ ಕಂಡುಬಂದಿದೆ. ಅಥವಾ ಯಾವುದೋ ದೊಡ್ಡ ಸಮಸ್ಯೆಯಿಂದ ಬಳಲುತ್ತಿರುವ ಸಾಧ್ಯತೆಯೂ ಇದೆ.

ಕಾರಿನಲ್ಲಿ ಬಂದವರಿಂದ ಯುವಕನ ಮರ್ಡರ್

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದಲ್ಲಿ ಕಾರಿನಲ್ಲಿ ಬಂದ ವ್ಯಕ್ತಿಗಳು ಯುವಕನೊಬ್ಬನನ್ನು ಕೊಂದು ಎಸೆದು ಪರಾರಿಯಾಗಿದ್ದಾರೆ. ಶವದ ಮುಖದ ಭಾಗವನ್ನು ಸಂಪೂರ್ಣ ಜಜ್ಜಲಾಗಿದ್ದು, ಗುರುತು ಪತ್ತೆ ಹಚ್ಚಲಾಗಿದೆ. ಆರೋಪಿಗಳು ಅತ್ಯಂತ ವೇಗವಾಗಿ ಬಂದು, ಕೊಲೆ ಮಾಡಿ ಎಸೆದು ಅದಕ್ಕಿಂತಲೂ ವೇಗವಾಗಿ ಹೋಗಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿದ್ದಾರೆ. ಸಿಸಿ ಟಿವಿ ಫೂಟೇಜ್‌ಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಲಿಸುತ್ತಿರುವ ಟಿಪ್ಪರ್ ಲಾರಿ ಕೆಳಗೆ ಬಿದ್ದು ವ್ಯಕ್ತಿ ಸಾವು

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕಿನ ಜೂಲಪಾಳ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿರುವ ಗೋಪಾಲಯ್ಯ ಎಂಬವರು ಚಲಿಸುತ್ತಿರುವ ಟಿಪ್ಪರ್‌ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಗೋಪಾಲಯ್ಯ ಅವರು ಟಿಪ್ಪರ್‌ನಲ್ಲಿ ಸಾಗುತ್ತಿದ್ದರು. ಆಗ ದುರಂತ ನಡೆದಿದೆ. ಸ್ಥಳಕ್ಕೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೇಟಿ ನೀಡಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಮಾತೀರದ ಆಲಮೇಲದಲ್ಲಿ ಓರ್ವನ ಬರ್ಬರ ಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಬಬಲೇಶ್ವರ ರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಆಯುಧದಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪರಶುರಾಮ ಮ್ಯಾಕೇರಿ (22) ಎಂಬಾತನ ಕೊಲೆಯಾದವನು.

ಬಡ್ಡಿ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ಇದ್ದು, ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ಋಷಿಕೇಶ್ ಸೋನವಾಣೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : Road Accident: ಸ್ಕೂಟಿಗೆ ಬಸ್‌ ಡಿಕ್ಕಿ; ಹೆದ್ದಾರಿಯಲ್ಲೇ ಒದ್ದಾಡಿ ಪ್ರಾಣ ಬಿಟ್ಟ ತಾಯಿ, ಮಗಳು

ಖಾಸಗಿ ಬಸ್- ಕಾರಿನ ನಡುವೆ ಭೀಕರ ಅಪಘಾತ

ಕೋಲಾರ : ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರೊಂದು ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶಿವಪುರ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಳುಗಳು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರಿನಲ್ಲಿದ್ದವರು ಶ್ರೀನಿವಾಸಪುರ ತಾಲ್ಲೂಕಿನ ರೋಜೊರನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಆಂಧ್ರ ಪ್ರದೇಶದ ಕದರಿಗೆ ಹೋಗಿ ವಾಪಸ್‌ ಸ್ವಗ್ರಾಮಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version