Swati Maliwal | ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್‌ ಮೇಲೆಯೇ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ - Vistara News

ಕ್ರೈಂ

Swati Maliwal | ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್‌ ಮೇಲೆಯೇ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ

ದೆಹಲಿಯಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲ ಎಂಬ ಮಾತುಗಳು ಹಲವು ವರ್ಷಗಳಿಂದ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್‌ (Swati Maliwal) ಅವರ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.

VISTARANEWS.COM


on

Swati Maliwal Sexually Harassed
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್.‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹೆಚ್ಚಾಗಿ ನಡೆಯುತ್ತವೆ. ಹೆಣ್ಣುಮಕ್ಕಳ ರಕ್ಷಣೆಗಾಗಿ ಮಹಿಳಾ ಆಯೋಗವನ್ನು ಸ್ಥಾಪಿಸಲಾಗಿದೆ. ಆದರೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್‌ (Swati Maliwal) ಅವರ ಮೇಲೆಯೇ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದಾಗಿ, ದೆಹಲಿಯಲ್ಲಿ ಯಾವ ಹೆಣ್ಣುಮಕ್ಕಳಿಗೂ ಸುರಕ್ಷತೆ ಇಲ್ಲ ಎಂಬುದು ಸಾಬೀತಾಗಿದೆ.

ಸ್ವಾತಿ ಮಾಲಿವಾಲ್‌ ಅವರು ಗುರುವಾರ ಬೆಳಗಿನ ಜಾವ ಏಮ್ಸ್‌ ಆಸ್ಪತ್ರೆಯ ಎರಡನೇ ಗೇಟ್‌ ಬಳಿ ಬೆಳಗಿನ ಜಾವ 3.11ರ ಸುಮಾರಿಗೆ ನಿಂತಿದ್ದಾರೆ. ಇದೇ ವೇಳೆ, ಕಾರಿಲ್ಲಿ ಬಂದ ಹರೀಶ್‌ ಚಂದ್ರ (47) ಎಂಬಾತ ಕಾರಿನ ಗ್ಲಾಸು ಇಳಿಸಿದವನೇ ಸ್ವಾತಿ ಮಾಲಿವಾಲ್‌ ಕೈ ಹಿಡಿದು ಎಳೆದಿದ್ದಾನೆ. ಕಾರಿನಲ್ಲಿ ಕುಳಿತುಕೋ ಎಂದು ಬಲವಂತ ಮಾಡಿದ್ದಾನೆ. ಇದಕ್ಕೆ ಪ್ರತಿರೋಧ ಒಡ್ಡಿದರೂ ಕಿಟಕಿಯಿಂದ ಸ್ವಾತಿ ಮಾಲಿವಾಲ್‌ ಕೈಹಿಡಿದು 10-15 ಮೀಟರ್‌ ಎಳೆದಿದ್ದಾನೆ. ಬಳಿಕ ಅಧ್ಯಕ್ಷೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರೀಶ್‌ ಚಂದ್ರನು ಕುಡಿದ ಮತ್ತಿನಲ್ಲಿ ಸ್ವಾತಿ ಮಾಲಿವಾಲ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಹರೀಶ್‌ ಚಂದ್ರ ಹಾಗೂ ಸ್ವಾತಿ ಮಾಲಿವಾಲ್‌ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ದೇವರೇ ಕಾಪಾಡಿದ ಎಂದ ಸ್ವಾತಿ
ಘಟನೆ ಕುರಿತು ಸ್ವಾತಿ ಮಾಲಿವಾಲ್‌ ಪ್ರತಿಕ್ರಿಯಿಸಿದ್ದು, “ಏಮ್ಸ್‌ ಆಸ್ಪತ್ರೆಯಲ್ಲಿ ಮಹಿಳೆಯರ ರಕ್ಷಣೆ ಕುರಿತು ಪರಿಶೀಲನೆ ನಡೆಸಲು ಹೋದಾಗ ಕಾರಿನಲ್ಲಿ ಬಂದ ವ್ಯಕ್ತಿಯು ನನ್ನ ಕೈ ಹಿಡಿದು ಎಳೆದಿದ್ದಾನೆ. ಹಾಗೆ ನೋಡಿದರೆ, ನನ್ನನ್ನು ದೇವರೇ ಕಾಪಾಡಿದ್ದಾನೆ. ಮಹಿಳಾ ಆಯೋಗದ ಅಧ್ಯಕ್ಷೆಗೇ ಸುರಕ್ಷತೆ ಇಲ್ಲ ಎಂದರೆ ದೆಹಲಿಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಊಹಿಸಿಕೊಳ್ಳಬಹುದು” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ | Sexual harrassment | 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದುಷ್ಕರ್ಮಿಗೆ ಪತ್ನಿಯಿಂದಲೂ ಬೆಂಬಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading

ಕರ್ನಾಟಕ

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Murder Case: ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Murder Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ (Murder Case) ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಂಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

ಹೆತ್ತ ತಾಯಿಯ ಮೇಲೆಯೇ ಮಗ ಹಲ್ಲೆ; ಅನ್ನ, ನೀರು ಕೊಡದೆ ಹಿಂಸೆ

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಹೆತ್ತ ಮಕ್ಕಳಿಗೆ ಚಿತ್ರ ಹಿಂಸೆ ಕೊಟ್ಟಿರೋದನ್ನು ನೋಡಿದ್ದೆವು. ಆದರೆ ಈಗ ಹೆತ್ತ ತಾಯಿಯನ್ನೇ ಹೊಡೆಯುವ ಮೂಲಕ ಮಗ ಅಮಾನವೀಯವಾಗಿ ನಡೆದುಕೊಂಡಿರುವುದು ಕಂಡುಬಂದಿದೆ.

ಚಂದ್ರಮ್ಮ (75) ಹಲ್ಲೆಗೊಳಗಾದವರು. ಮುನಿರತ್ನ (45) ಹಲ್ಲೆ ಮಾಡಿದ ಮಗ. ಕತ್ತರಿಗುಪ್ಪೆಯ ಶ್ರೀನಿವಾಸ ನಗರದಲ್ಲಿ ಘಟನೆ ನಡೆದಿದೆ. ಒಂದು ವರ್ಷದಿಂದ ಮನೆಯ ಹೊರಗಡೆ ತಾಯಿ ಮಲಗಿಸುತ್ತಿದ್ದ ಮಗ, ಆಕೆಗೆ ಸರಿಯಾಗಿ ಊಟ ಕೂಡ ನೀಡದೆ ಹಿಂಸೆ ನೀಡುತ್ತಿದ್ದ. ಕಾರಣ ಕೇಳಿದರೆ ಮೂತ್ರ ವಿಸರ್ಜನೆ ಮಾಡಿಕೊಳ್ಳುತ್ತಿರುವ ಕಾರಣ ಹೊರಗೆ ಮಲಗಿಸುತ್ತಿರುವುದಾಗಿ ಮಗ ಹೇಳಿದ್ದಾನೆ.

ಇವರು ತಿರುಪತಿ ಮೂಲದವರಾಗಿದ್ದು, ಮುನಿರತ್ನ ತನ್ನ ಮದುವೆಗೂ ಮುನ್ನ ತಾಯಿಯನ್ನು ಅಡುಗೆ ಮಾಡಲು ಮನೆಗೆ ಕರೆತಂದಿದ್ದ. ಮದುವೆಯಾದ ಬಳಿಕ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ. ಬೆಂಗಳೂರಿನ ಕತ್ತರಿಗುಪ್ಪೆಯ ಶ್ರೀನಿವಾಸ ನಗರಕ್ಕೆ ಬಂದು 2 ವರ್ಷವಾಗಿದೆ. ಸೊಸೆ ಸ್ವಂತ ತಾಯಿಯಂತೆ ನೋಡಿಕೊಳ್ಳುತ್ತಿದ್ದಳು. ಆದರೆ ಮಗ ತಾಯಿಗೆ ಚಿತ್ರ ಹಿಂಸೆ ನೀಡುತ್ತಿದ್ದ. ಹೀಗಾಗಿ ಮನೆಯ ಅಂಗಳದಲ್ಲಿ ತಾಯಿ ಇರುತ್ತಿದ್ದಳು.

ಇದನ್ನೂ ಓದಿ | Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

ಸೊಸೆ ತಾಯಿಯನ್ನು ನೋಡಿಕೊಳ್ಳುತ್ತಿದ್ದಳು ಎನ್ನುವ ಕಾರಣಕ್ಕೆ ಹೆಂಡತಿಯ ಜತೆಗೂ ಜಗಳವಾಡುತ್ತಿದ್ದ. 2 ದಿನದ ಹಿಂದೆ ಹೆಂಡತಿ ಜಗಳವಾಡಿ ತವರುಮನೆಗೆ ಹೋಗಿದ್ದಳು. ಹೀಗಾಗಿ ತಾಯಿ ಚಂದ್ರಮ್ಮನ ಮೇಲೆ ಮಗ ಹಲ್ಲೆ ಮಾಡಿದ್ದಾನೆ, 2 ದಿನದಿಂದ ತಾಯಿಗೆ ಅನ್ನ, ನೀರು ನೀಡಿಲ್ಲ. ನಶೆಯಲ್ಲಿ ಇಲ್ಲದ ಸಮಯದಲ್ಲೂ ಇದೆ ಸ್ಥಿತಿಯಲ್ಲಿ ಮುನಿರತ್ನ ಇರುತ್ತಿದ್ದ ಎನ್ನಲಾಗಿದೆ.

Continue Reading

ಕರ್ನಾಟಕ

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀ‌ನ್ ತಾಹ ಮತ್ತು ಮುಸಾವೀರ್ ಹುಸೇನ್‌ಗೆ ಎನ್.ಐ.ಎ ವಿಶೇಷ ನ್ಯಾಯಾಲಯ 2 ವಾರ ನ್ಯಾಯಾಂಗ ಬಂಧನ ವಿಧಿಸಿದೆ.

VISTARANEWS.COM


on

Rameshwaram Cafe blast
Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದ (Rameshwaram Cafe Blast) ಇಬ್ಬರು ಆರೋಪಿಗಳಿಗೆ ಎನ್.ಐ.ಎ ವಿಶೇಷ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಎನ್‌ಐಎ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಶಂಕಿತ ಉಗ್ರರನ್ನು ಎನ್.ಐ.ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆ ಆರೋಪಿಗಳಾದ ಅಬ್ದುಲ್ ಮತೀ‌ನ್ ತಾಹ ಮತ್ತು ಮುಸಾವೀರ್ ಹುಸೇನ್‌ಗೆ ಎರಡು ವಾರ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಸೋಮವಾರ ಎನ್‌ಐಎ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಪ್ರಕರಣಕ್ಕೆ ಅಚ್ಚರಿಯ ತಿರುವು; ಅವರು ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಸುಪ್ರೀಂ ಆದೇಶದಂತೆ ಕೋರ್ಟ್‌ಗೆ ಶರಣಾದ ಮುರುಘಾ ಶ್ರೀ; ಮತ್ತೆ 1 ತಿಂಗಳು ಜೈಲು

Murugha Seer

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ ಆದೇಶದಂತೆ ಮುರುಘಾ ಶರಣರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಶ್ರೀಗಳಿಗೆ (Murugha Seer) ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಏ.23ರಂದು ರದ್ದು ಮಾಡಿ, ಶರಣಾಗತಿಯಾಗುವಂತೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಚಿತ್ರದುರ್ಗ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಸೋಮವಾರ ಶರಣಾಗಿದ್ದಾರೆ. ಅವರಿಗೆ ಮೇ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶ ಎಸ್.ಎನ್.ಕಲ್ಕಣಿ ಆದೇಶ ನೀಡಿದ್ದಾರೆ.

ಪೋಕ್ಸೋ ಕೇಸ್ ವಿಚಾರಣೆ ಮುಗಿದು ತೀರ್ಪು ಬರುವವರೆಗೂ ಮುರುಘಾ ಶ್ರೀಗಳನ್ನು ನ್ಯಾಯಾಂಗ ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿ, ಒಂದು ವಾರದೊಳಗೆ ಶರಣಾಗತಿ ಆಗುವಂತೆ ಶ್ರೀಗಳಿಗೆ ಸೂಚಿಸಿತ್ತು. ಹೀಗಾಗಿ ಶ್ರೀಗಳು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದು, ವೈದ್ಯಕೀಯ ಪರೀಕ್ಷೆ ಬಳಿಕ ಅವರನ್ನು ಪೊಲೀಸರು ಜೈಲಿಗೆ ಕರೆದೊಯ್ಯಲಿದ್ದಾರೆ.

2022 ಆಗಸ್ಟ್‌ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್‌ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ್ದರಿಂದ ಇದೀಗ ಶ್ರೀಗಳು ಮತ್ತೆ ಜೈಲು ಸೇರುವಂತಾಗಿದೆ.

ಇದನ್ನೂ ಓದಿ | Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು

ನಾಲ್ಕು ತಿಂಗಳಲ್ಲಿ ವಿಚಾರಣೆ ಮುಗಿಸಲು ಚಿತ್ರದುರ್ಗದ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಈಗಾಗಲೇ ಸೂಚನೆ ನೀಡಿದ್ದು, ಸಾಕ್ಷ್ಯಗಳ ವಿಚಾರಣೆ ಮುಗಿಯುವ ತನಕ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರಬೇಕು ಎಂದು ತಿಳಿಸಿತ್ತು.

Continue Reading

ತುಮಕೂರು

Road Accident: ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಕಾರು; ಚಾಲಕ ಸ್ಥಳದಲ್ಲೇ ಸಾವು

Road Accident: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

VISTARANEWS.COM


on

car crossed the divider and collided with a lorry Driver death
Koo

ಶಿರಾ: ಅತಿ ವೇಗದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ (Road Accident) ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಳ್ಳಂಬೆಳ್ಳ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ನೆಲಮಂಗಲದ ಅರುಣ್ (35) ಮೃತಪಟ್ಟ ವ್ಯಕ್ತಿ. ತಾಲೂಕಿನ ಕಳ್ಳಂಬೆಳ್ಳ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48 ರ ತರೂರ್‌ ಗೇಟ್ ಬಳಿ ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ ಕೆಳಗೆ ಬಿದ್ದ ಪರಿಣಾಮ ಆತನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿ ನರಹರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Patanjali
ದೇಶ5 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ12 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ32 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ33 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ43 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ1 hour ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ1 hour ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌