ಪ್ಲಾಸ್ಟಿಕ್​ ಚೀಲದಲ್ಲಿ ಪತ್ತೆಯಾಯ್ತು ಮಹಿಳೆಯ ಮೃತದೇಹ; 22 ವರ್ಷದ ಮಗಳನ್ನು ಕಸ್ಟಡಿಗೆ ಪಡೆದ ಮುಂಬಯಿ ಪೊಲೀಸ್​ - Vistara News

ಕ್ರೈಂ

ಪ್ಲಾಸ್ಟಿಕ್​ ಚೀಲದಲ್ಲಿ ಪತ್ತೆಯಾಯ್ತು ಮಹಿಳೆಯ ಮೃತದೇಹ; 22 ವರ್ಷದ ಮಗಳನ್ನು ಕಸ್ಟಡಿಗೆ ಪಡೆದ ಮುಂಬಯಿ ಪೊಲೀಸ್​

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಗೂಡ್ಸ್​ ರೈಲು ಪ್ಲಾಟ್​ಫಾರ್ಮ್​​ನಲ್ಲಿ ಒಂದು ನೀಲಿ ಬಣ್ಣದ ಪ್ಲಾಸ್ಟಿಕ್​ ಡ್ರಮ್​​ನಲ್ಲಿ ಯುವತಿಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈಗ ಮುಂಬಯಿಯಲ್ಲಿ ಅಂಥದ್ದೇ ಘಟನೆ ನಡೆದಿದೆ.

VISTARANEWS.COM


on

Decomposed Body Of Woman Found In Plastic In Mumbai Investigation Underway
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮಹಿಳೆಯ ಮೃತದೇಹವಿದ್ದ ಪ್ಲಾಸ್ಟಿಕ್​ ಬ್ಯಾಗ್​ (Decomposed Body Of Woman) ಮುಂಬಯಿಯ ಲಾಲ್​ಬಾಗ್ ಏರಿಯಾದಲ್ಲಿ ಪತ್ತೆಯಾಗಿದ್ದು, ಕಾಲಾಚೌಕಿ ಠಾಣೆ ಪೊಲೀಸರು ಮೃತ ಮಹಿಳೆಯ 22ವರ್ಷದ ಪುತ್ರಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಶವವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಲಾಗಿದೆ. ಹೀಗೆ ಪ್ಲಾಸ್ಟಿಕ್​ ಬ್ಯಾಗ್​​ನಲ್ಲಿ, ಶವದ ರೂಪದಲ್ಲಿ ಪತ್ತೆಯಾದ ಮಹಿಳೆಯ ಹೆಸರು ವೀಣಾ ಪ್ರಕಾಶ್​ ಎಂದಾಗಿದ್ದು, 53 ವರ್ಷ. ಮಹಿಳೆಯ ಕಾಲು, ಕೈಗಳನ್ನು ಕತ್ತರಿಸಿ, ಪ್ಲಾಸ್ಟಿಕ್​ ಬ್ಯಾಗ್​ನಲ್ಲಿ ತುಂಬಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Cow Attack | ಬೀದಿ ದನ ಇರಿದು ಮಹಿಳೆ ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಗೂಡ್ಸ್​ ರೈಲು ಪ್ಲಾಟ್​ಫಾರ್ಮ್​​ನಲ್ಲಿ ಒಂದು ನೀಲಿ ಬಣ್ಣದ ಪ್ಲಾಸ್ಟಿಕ್​ ಡ್ರಮ್​​ನಲ್ಲಿ ಯುವತಿಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ಲಾಟ್​ಫಾರ್ಮ್​ ನಂ.1ರಲ್ಲಿ ಇದ್ದ ಆ ಡ್ರಮ್​ನಲ್ಲಿ ಬಟ್ಟೆಗಳೇ ತುಂಬಿದ್ದವು. ಆದರೆ ಅಲ್ಲಿಂದ ಕೆಟ್ಟ ವಾಸನೆ ಬರುತ್ತಿತ್ತು. ಅಲ್ಲಿ ಕಸಗುಡಿಸುತ್ತಿದ್ದಾಕೆ ಈ ಬಗ್ಗೆ ರೈಲ್ವೆ ಪೊಲೀಸರಿಗೆ ಹೇಳಿದಾಗ ಅವರು ಹೋಗಿ ಪರಿಶೀಲನೆ ನಡೆಸಿದ್ದರು. ಆಗ ಶವ ಪತ್ತೆಯಾಗಿತ್ತು. ಅದಕ್ಕೂ ಮುನ್ನ ಬಂಗಾರಪೇಟೆ-ಎಸ್​ಎಂವಿಟಿ ಬೆಂಗಳೂರು ಎಕ್ಸ್​ಪ್ರೆಸ್​ ರೈಲಿನ ಸೀಟ್​​ವೊಂದರ ಅಡಿಯಲ್ಲಿ ಇದ್ದ ಹಳದಿ ಬಣ್ಣದ ಪ್ಲಾಸ್ಟಿಕ್​ ಚೀಲದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ. ದಾಳಿ ವೇಳೆ ಯಾವುದೇ ಅಕ್ರಮ ಹಣವಾಗಲಿ, ಅಕ್ರಮ ಲಿಕ್ಕರ್ ಆಗಲಿ, ಅಕ್ರಮ ಚಿನ್ನಾಭರಣವಾಗಲೀ ಪತ್ತೆಯಾಗಿಲ್ಲ.

VISTARANEWS.COM


on

actress amulya father in law election officers ride
Koo

ಬೆಂಗಳೂರು: ನಟಿ ಅಮೂಲ್ಯ (Actress Amulya) ಅವರ ಮಾವ, ಮಾಜಿ ಕಾರ್ಪೊರೇಟರ್‌ (corporater) ಹಾಗೂ ಬಿಜೆಪಿ ಮುಖಂಡ (BJP leader) ಆಗಿರುವ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾ ಅಧಿಕಾರಿಗಳು ನಿನ್ನೆ ತಡರಾತ್ರಿ ದಾಳಿ (Election Officer Raid) ನಡೆಸಿದ್ದಾರೆ. ಆರ್.ಆರ್ ನಗರದಲ್ಲಿರುವ ಅವರ ನಿವಾಸದ ಮೇಲೆ ರಾತ್ರಿ ‌10 ಗಂಟೆ ಸುಮಾರಿಗೆ ದಾಳಿ ನಡೆದಿದ್ದು, ಮುಂಜಾನೆಯವರೆಗೂ ಪರಿಶೀಲನೆ ನಡೆಯಿತು.

10 ವಾಹನಗಳಲ್ಲಿ ಬಂದಿರುವ ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ರಾಮಚಂದ್ರ ಅವರು ನಟಿ ಅಮೂಲ್ಯ ಅವರ ಮಾವನಾಗಿದ್ದು, ಸದ್ಯ ರಾಮಚಂದ್ರ, ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮನೆಯಲ್ಲೇ ಇದ್ದಾರೆ.

ನಿರಂತರ ಪರಿಶೀಲನೆಯ ನಂತರ ಮನೆ ಕೆಲಸದವರನ್ನು ಒಬ್ಬೊಬ್ಬರನ್ನಾಗಿ ಮನೆ ಒಳಗಿನಿಂದ ಹೊರ ಬಿಡಲಾಯಿತು. ಸತತ 4 ಗಂಟೆಗಳ ಕಾಲ‌ ಶೋಧ‌ ಕಾರ್ಯ ನಡೆದ ಬಳಿಕ ಚುನಾವಣಾ ಅಧಿಕಾರಿಗಳ‌ ದಾಳಿ ಅಂತ್ಯ‌ವಾಗಿದ್ದು, ಕೆಲವು ದಾಖಲೆಗಳನ್ನು ಪಡೆದು ಅಧಿಕಾರಿಗಳು ತೆರಳಿದ್ದಾರೆ.

ಚುನಾವಣಾ ಅಧಿಕಾರಿಗಳು, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ ಎಂದು ಗೊತ್ತಾಗಿದೆ. ದಾಳಿ ವೇಳೆ ಯಾವುದೇ ಅಕ್ರಮ ಹಣವಾಗಲಿ, ಅಕ್ರಮ ಲಿಕ್ಕರ್ ಆಗಲಿ, ಅಕ್ರಮ ಚಿನ್ನಾಭರಣವಾಗಲೀ ಪತ್ತೆಯಾಗಿಲ್ಲ.

ದಾಳಿ ಮಾಹಿತಿ ತಿಳಿದು ಬಿಜೆಪಿ ಕಾರ್ಯಕರ್ತರು ಮನೆ ಬಳಿ ಜಮಾಯಿಸಿದ್ದರು. ದಾಳಿ‌ ಮುಗಿಸಿ ಹೊರಟ ಅಧಿಕಾರಿಗಳಿಗೆ “ಚೊಂಬು ಸಿಗ್ತಾ, ಚೊಂಬು- ಡಿಕೆ ಚೊಂಬು” ಎಂದು ಬಿಜೆಪಿ ಕಾರ್ಯಕರ್ತರು ವ್ಯಂಗ್ಯ ಮಾಡಿದರು. ಮನೆ ಮುಂದೆ ಜಮಾಯಿಸಿದ್ದ ಕಾರ್ಯಕರ್ತರು ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿ‌ ಅಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನಿಂದ ಅಧಿಕಾರ ದುರುಪಯೋಗ

ಕಾಂಗ್ರೆಸ್‌ನವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮನೆ ಮೇಲೆ ದಾಳಿ ಮಾಡಿಸಿದ್ದಾರೆ” ಎಂದು ಬಿಜೆಪಿ ಮುಖಂಡ‌ ರಾಮಚಂದ್ರ ಈ ಕುರಿತು ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ನವರು ಈ ಭಾಗದಲ್ಲಿ ಇಂದು ಹಣ ಹಂಚಿಕೆ‌ ಮಾಡ್ತಿದ್ರು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಅಂತ ನಮ್ಮ ಮನೆ ಮೇಲೆ‌ ದಾಳಿ ಮಾಡಿದ್ದಾರೆ. ದಾಳಿ ವೇಳೆ ಆರ್‌ಓಗೆ ಪದೇ ಪದೆ ಪೋನ್ ಬರ್ತಾನೆ ಇತ್ತು. ಅವ್ರನ್ನು ಎರಡು ದಿನಕ್ಕಾದ್ರು ಒಳಕ್ಕೆ ‌ಹಾಕಿಸಿ ಅಂತ ಫೋನ್‌ನಲ್ಲಿ ಹೇಳ್ತಿದ್ರು” ಎಂದು ರಾಮಚಂದ್ರ ಹೇಳಿದ್ದಾರೆ.

“ಏನೋ‌ ದೊಡ್ಡದಾಗಿ‌ ಸಿಗುತ್ತೆ, ಕೂಲ್ ಆಗುತ್ತೆ ಅಂತ ಬಂದ್ರು, ಹಾಟ್ ಆಗಿ ಹೋದ್ರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕಾಗಿ ಲಿಕ್ಕರ್ ತರಿಸಿದ್ದೆ. ‌‌ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಮಾಡಬಾರದು ಅಂತಾ ಸುಮ್ನೇ ಇದ್ದೆವು. ಅದನ್ನು ವಶಕ್ಕೆ ಪಡೆದಿದ್ದಾರೆ. ಏನು ವಶಕ್ಕೆ ಪಡೆದಿದ್ದೇವೆ ಅಂತ ಒಂದು ಸಹಿ ಪಡೆದಿದ್ದಾರೆ” ಎಂದಿದ್ದಾರೆ. “ಈ ಭಾಗದಲ್ಲಿ ಬಿಜೆಪಿಗೆ ಲೀಡ್ ಬರುತ್ತೆ. ಕಳೆದ ಬಾರಿ 18 ಸಾವಿರ ಲೀಡ್ ಬಂದಿತ್ತು. ಅದನ್ನು ಸಹಿಸಲಾಗದೆ ಅಧಿಕಾರ ಮಿಸ್‌ಯೂಸ್ ಮಾಡಿದ್ದಾರೆ” ಎಂದು ರಾಮಚಂದ್ರ ಆರೋಪಿಸಿದರು.

ಇದನ್ನೂ ಓದಿ: Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

Continue Reading

ತುಮಕೂರು

Road Accident: ದ್ರಾಕ್ಷಿ ತುಂಬಿಕೊಂಡು ಬರುತ್ತಿದ್ದ ಬೊಲೆರೋ ಲಾರಿಗೆ ಡಿಕ್ಕಿ, ಇಬ್ಬರು ಸಾವು

Road Accident: ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು.

VISTARANEWS.COM


on

road accident tumkur news
Koo

ತುಮಕೂರು: ಲಾರಿಯ ಹಿಂಬದಿಗೆ ವೇಗವಾಗಿ ಬಂದ ಬೊಲೆರೋ (Lorry Bolero Hit) ವಾಹನ ಡಿಕ್ಕಿಯಾಗಿ (Road Accident) ಇಬ್ಬರು (two death) ಸಾವಿಗೀಡಾಗಿದ್ದಾರೆ. ತುಮಕೂರು (tumkur news) ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (NH 48) ಈ ದುರ್ಘಟನೆ ನಡೆದಿದೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತರು. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

ಬೊಲೆರೋದಲ್ಲಿ ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆ ಬರುವಾಗ ಅಪಘಾತ ನಡೆದಿದೆ. ಬೊಲೆರೋ ವಾಹನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಡುರಾತ್ರಿ ಲಾರಿಯ ವೇಗ ಗೊತ್ತಾಗದೆ ಬೊಲೆರೋ ವಾಹನ ಚಾಲಕ ಹಿಂದಿನಿಂದ ಬಂದು ಅಪ್ಪಳಿಸಿದ್ದಾನೆ ಎಂದು ಶಂಕಿಸಲಾಗಿದೆ.

ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ರಾಯಚೂರು: ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಬೈಕ್ ಸವಾರರು ದುರ್ಮರಣ ಹೊಂದಿದ ಘಟನೆ (Road Accident) ಜಿಲ್ಲೆಯ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ನಿವಾಸಿಗಳಾದ ಗುತ್ತೆಪ್ಪ (45), ಜಗದೀಶ್ (50) ಮೃತರು. ದೇವದುರ್ಗ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು 10 ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 10 ಕುರಿಗಳು ಮೃತಪಟ್ಟ ಘಟನೆ ಜಿಲ್ಲೆಯ ದೇವರ ಹಿಪ್ಪರಗಿಯ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಸುಬ್ಬರಾಯ ನಾಟೀಕಾರ ಎಂಬುವವರ 10 ಕುರಿಗಳು ಮೃತಪಟ್ಟಿವೆ. ಜಮೀನಿನಲ್ಲಿ ಕುರಿಗಳು ಮೇಯಲು ಹೋದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.

ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road accident in Ankola The biker was burnt to death

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

Continue Reading

ಕ್ರೈಂ

Murder Case: ಕರಗ ಉತ್ಸವದ ವೇಳೆ ಅಣ್ಣಮ್ಮ ದೇವಾಲಯದ ಮುಂದೆ ಹಲ್ಲೆ, ಯುವಕ ಸಾವು

Murder Case: ಏಪ್ರಿಲ್‌ 24ರ ಬೆಳಿಗ್ಗೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಹಲ್ಲೆ ನಡೆದಿದೆ.

VISTARANEWS.COM


on

murder case bengaluru karaga
Koo

ಬೆಂಗಳೂರು: ನಿನ್ನೆ ನಡೆದ ಬೆಂಗಳೂರಿನ ಐತಿಹಾಸಿಕ ಕರಗ (Bengaluru karaga) ಮೆರವಣಿಗೆಯ ಸಂದರ್ಭದಲ್ಲಿಯೇ ಯುವಕನೊಬ್ಬನ ಕೊಲೆ (Murder Case) ಆಗಿದೆ. ಮೆರವಣಿಗೆ ವೇಳೆ ಯುವಕರ ನಡುವೆ ಸೃಷ್ಟಿಯಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿದೆ.

ವಿವಿ ಗಿರಿ ಕಾಲೋನಿಯ ಯುವಕ ಡಿ.ಸಾರದಿ, ಕೊಲೆಯಾದ ಯುವಕ. ಏಪ್ರಿಲ್‌ 24ರ ಬೆಳಿಗ್ಗೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಈ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಹಲ್ಲೆ ನಡೆದಿದೆ.

ಈ ವೇಳೆ ಸಾರದಿ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗಿದೆ. ತಕ್ಷಣವೇ ಸಾರದಿಯನ್ನು ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾರದಿ ಮೃತಪಟ್ಟಿದ್ದಾನೆ.

ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಕೊಪ್ಪಳ: ʼಜೈ ಶ್ರೀರಾಮ್ʼ ಎಂದ (Jai Sriram Slogan) ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ (Assault Case) ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕೊಪ್ಪಳ (Koppal news) ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ಶೈನ್ ಬಾರ್‌ನಲ್ಲಿ ಈ ಘಟನೆ (Crime news) ನಡೆದಿದ್ದು, ಮದ್ಯ ಸೇವನೆಯ ವೇಳೆ ʼಜೈ ಶ್ರೀರಾಮ್‌ʼ ಎಂದಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬುದು ಆರೋಪ.

ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿರುವ ಕುಮಾರ್ ರಾಠೋಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾರ್‌ನಲ್ಲಿ ʼಜೈ ಶ್ರೀರಾಮ್‌ʼ ಎಂದು ಕೂಗಿದಾಗ 20 ಜನ ಮುಸ್ಲಿಂ ಯುವಕರು ಘೇರಾಯಿಸಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶ್ರೀರಾಮನವಮಿ (Sri Ram Navami) ಸಂದರ್ಭದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದ ಯುವಕರನ್ನು ಅಡ್ಡಗಟ್ಟಿ ಕೆಲ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿದ್ದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿತ್ತು. ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೆಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

Continue Reading

ಕರ್ನಾಟಕ

Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

Road Accident: ರಾಯಚೂರು ಜಿಲ್ಲೆಯ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಸವಾರರು ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Road Accident
Koo

ರಾಯಚೂರು: ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಬೈಕ್ ಸವಾರರು ದುರ್ಮರಣ ಹೊಂದಿದ ಘಟನೆ (Road Accident) ಜಿಲ್ಲೆಯ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ನಿವಾಸಿಗಳಾದ ಗುತ್ತೆಪ್ಪ (45), ಜಗದೀಶ್ (50) ಮೃತರು. ದೇವದುರ್ಗ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು 10 ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 10 ಕುರಿಗಳು ಮೃತಪಟ್ಟ ಘಟನೆ ಜಿಲ್ಲೆಯ ದೇವರ ಹಿಪ್ಪರಗಿಯ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಸುಬ್ಬರಾಯ ನಾಟೀಕಾರ ಎಂಬುವವರ 10 ಕುರಿಗಳು ಮೃತಪಟ್ಟಿವೆ. ಜಮೀನಿನಲ್ಲಿ ಕುರಿಗಳು ಮೇಯಲು ಹೋದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ | Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road accident in Ankola The biker was burnt to death

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

Continue Reading
Advertisement
IPL 2024
ಕ್ರೀಡೆ5 mins ago

IPL 2024: ಧೋನಿ, ಚೆನ್ನೈ ಪಂದ್ಯ ನೋಡಲು ದೆಹಲಿ ವರೆಗೂ ನಡೆದುಕೊಂಡು ಹೋಗುವೆ ಎಂದ ಶತಾಯುಷಿ ಅಭಿಮಾನಿ; ವಿಡಿಯೊ ವೈರಲ್​

Break Up
ದೇಶ13 mins ago

ಇದ್ದರೂ ಜತೆಗೆ, ಸತ್ತರೂ ಜತೆಗೆ; ಅಪಘಾತದಲ್ಲಿ ಪತ್ನಿ ಸಾವು, ನೊಂದ ಪತಿ ನೇಣಿಗೆ ಶರಣು

IPL 2024
ಕ್ರೀಡೆ42 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಆರ್​ಸಿಬಿ

Pakistan Teen
ದೇಶ42 mins ago

ಪಾಕಿಸ್ತಾನದ ಯುವತಿಯ ಪ್ರಾಣ ಉಳಿಸಿತು ಭಾರತದ ಹೃದಯ; ‘ಹಾರ್ಟ್‌’ ಟಚಿಂಗ್ ಸ್ಟೋರಿ ಇದು!

Comedy Khiladigalu Premier League From 27th April On Zee Kannada
ಕಿರುತೆರೆ43 mins ago

Comedy Khiladigalu Premier League: ಹೇಗಿರಲಿದೆ ಹೊಸ ಶೋ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼ?

Pushpa The Rule first single on May 1
ಟಾಲಿವುಡ್1 hour ago

Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

actress amulya father in law election officers ride
ಕ್ರೈಂ1 hour ago

Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

Rahul Gandhi
ದೇಶ1 hour ago

Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

IPL 2024
ಕ್ರೀಡೆ1 hour ago

IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

Amitabh Bachchan, AR Rahman honoured with Deenanath Mangeshkar award
ಸಿನಿಮಾ2 hours ago

Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌