Deepfake Video: ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ಪ್ರಕರಣ; ನಾಲ್ವರು ಶಂಕಿತರ ವಿಚಾರಣೆ - Vistara News

ಕ್ರೈಂ

Deepfake Video: ರಶ್ಮಿಕಾ ಮಂದಣ್ಣ ಡೀಪ್‌ಫೇಕ್‌ ಪ್ರಕರಣ; ನಾಲ್ವರು ಶಂಕಿತರ ವಿಚಾರಣೆ

Deepfake Video: ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೊ ಪ್ರಕರಣದ ನಾಲ್ವರು ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

VISTARANEWS.COM


on

deefake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಕೆಲವು ದಿನಗಳ ಹಿಂದೆ ಬಹುಭಾಷಾ ನಟಿ, ಕನ್ನಡ ಮೂಲದ ರಶ್ಮಿಕಾ ಮಂದಣ್ಣ (Rashmika Mandanna) ಅವರ ನಕಲಿ ವಿಡಿಯೊ ಭಾರೀ ವೈರಲ್‌ ಆಗಿತ್ತು. ಆಂಗ್ಲೋ ಇಂಡಿಯನ್ ಯುವತಿ ಝರಾ ಪಟೇಲ್ (Zara Patel) ಅವರ ಹಾಟ್ ವಿಡಿಯೊಗೆ ರಶ್ಮಿಕಾ ಮಂದಣ್ಣ ಮುಖ ಅಂಟಿಸಿ ವೈರಲ್ ಮಾಡಲಾಗಿತ್ತು. ಡೀಪ್‌ಫೇಕ್‌ ತಂತ್ರಜ್ಞಾನದ ನೆರವಿನಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದರು. ಇದೀಗ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೊ (Deepfake Video) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರು ಶಂಕಿತರನ್ನು ವಿಚಾರಣೆ ನಡೆಸಿದ್ದಾರೆ. ನಟಿಯ ಡೀಪ್‌ಫೇಕ್‌ ವಿಡಿಯೊವನ್ನು ಈ ನಾಲ್ವರು ಅಪ್‌ಲೋಡ್‌ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇವರ ಮಾಹಿತಿಯನ್ನು ಮೆಟಾ ಒದಗಿಸಿತ್ತು.

ರಶ್ಮಿಕಾ ಅವರ ಡೀಪ್‌ಫೇಕ್ ವಿಡಿಯೊಗಳನ್ನು ನಕಲಿ ಗುರುತು ಮತ್ತು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (Virtual Private Network-VPN) ಬಳಸಿ ಅಪ್ ಲೋಡ್ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈ ಶಂಕಿತರು ಡೀಪ್‌ಫೇಕ್ ವಿಡಿಯೊವನ್ನು ಸೃಷ್ಟಿಸಿಲ್ಲ. ಕೇವಲ ಅಪ್‌ಲೋಡ್‌ ಮಾಡಿದ್ದಾರೆ. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಏನಿದು ಪ್ರಕರಣ?

ರಶ್ಮಿಕಾ ಮಂದಣ್ಣ ಅವರ ಮಾರ್ಫಿಂಗ್ ವಿಡಿಯೊ ಕಳೆದ ತಿಂಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಡಿಯೊದಲ್ಲಿ ರಶ್ಮಿಕಾ ಅವರ ಮುಖವನ್ನು ಹೊಂದಿರುವ, ಟೈಟ್‌ ಫಿಟ್ ಉಡುಪನ್ನು ಧರಿಸಿರುವ ಮಹಿಳೆ ಲಿಫ್ಟ್‌ ಹತ್ತುತ್ತಿರುವುದು ಕಂಡುಬಂದಿತ್ತು. ಬಳಿಕ ಈ ವಿಡಿಯೊ ಡೀಪ್‌ಫೇಕ್ ಎನ್ನುವುದು ತಿಳಿದುಬಂತು. ಸೂಪರ್ ಸ್ಟಾರ್ ಅಮಿತಾಭ್‌ ಬಚ್ಚನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಧ್ವನಿ ಎತ್ತಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ ನಂತರ ಇದು ಎಲ್ಲರ ಗಮನ ಸೆಳೆಯಿತು. ಬಳಿಕ ಕಲಾವಿದರಾದ ನಾನಿ, ವಿಜಯ್ ದೇವರಕೊಂಡ, ನಾಗ ಚೈತನ್ಯ ಮತ್ತು ಮೃಣಾಲ್ ಠಾಕೂರ್ ಮತ್ತಿತರರು ಡೀಪ್‌ಫೇಕ್‌ ವಿಡಿಯೊ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ರಶ್ಮಿಕಾ ಮಂದಣ್ಣ ಕೂಡ ತಮ್ಮ ವೈರಲ್ ಡೀಪ್‌ಫೇಕ್ ವಿಡಿಯೊದಿಂದ ಆಘಾತಗೊಂಡಿದ್ದರು. ಇದನ್ನು ‘ಭಯಾನಕ’ ಎಂದು ಕರೆದಿದ್ದರು.

ದೂರು ದಾಖಲು

ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 (ಫೋರ್ಜರಿ), 469 (ವ್ಯಕ್ತಿಯ ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದ ಫೋರ್ಜರಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ದೆಹಲಿ ಪೊಲೀಸರ ಐಎಫ್ಎಸ್ಒ ಘಟಕದಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ನಟಿಯ ಡೀಪ್‌ಫೇಕ್‌ ವಿಡಿಯೊ ಯಾವ ಖಾತೆಯಿಂದ ಬಂದಿದೆ ಎಂಬುದರ ಯುಆರ್‌ಎಲ್‌ ಒದಗಿಸುವಂತೆ ದೆಹಲಿ ಪೊಲೀಸರು ಮೆಟಾಗೆ ಪತ್ರ ಬರೆದಿದ್ದರು. ಅದರಂತೆ ಮೆಟಾ ಮಾಹಿತಿ ಹಂಚಿಕೊಂಡಿತ್ತು.

ಇದನ್ನೂ ಓದಿ: Deepfake: ಡೀಪ್‌ಫೇಕ್‌ ವಿಡಿಯೊ ಮಾಡುವವರೇ ಎಚ್ಚರ; ಕಠಿಣ ಕ್ರಮಕ್ಕೆ ಕೇಂದ್ರ ನಿರ್ಧಾರ

ಡೀಪ್‌ಫೇಕ್‌ ಅಂದರೇನು?

‘ಡೀಪ್‌ಫೇಕ್’ ಕೃತಕ ಬುದ್ಧಿಮತ್ತೆಯ ಸಹಾಯದಿಂದ ಮಾಡಿದ ವಿಡಿಯೊಗಳು. ಇವು ನೈಜವಾಗಿಯೇ ಕಾಣಿಸುತ್ತವೆ. ಡೀಪ್‌ಫೇಕ್ ವಿಡಿಯೊದಲ್ಲಿ ಸಾಮಾನ್ಯವಾಗಿ ಬೇರೆ ಬೇರೆ ವ್ಯಕ್ತಿಗಳ ದೇಹ ಮತ್ತು ಮುಖವನ್ನು ಡಿಜಿಟಲ್ ಮ್ಯಾನಿಪುಲೇಟ್ ಮಾಡಿ ಜೋಡಿಸಿ ಒರಿಜಿನಲ್‌ ಆಗಿ ಕಾಣುವಂತೆ ಮಾಡಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

Crime News: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಭೋಪಾಲ್‌: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ (Crime News).

ಬೋಡಾಲ್ ಕಛರ್ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಮಹುಲ್ಜಿರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಘಟನೆ ಕಾರಣ ಇದುವರೆಗೆ ತಿಳಿದು ಬಂದಿಲ್ಲ. ತನಿಖೆ ಆರಂಭಿಸಲಾಗಿದೆʼʼ ಎಂದು ಅವರು ಹೇಳಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಈ ಗ್ರಾಮಕ್ಕೆ ಚಿಂದ್ವಾರಾ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.

ಆರೋಪಿ ಮಾನಸಿಕ ಅಸ್ವಸ್ಥ?

ʼʼಮಾನಸಿಕ ಅಸ್ವಸ್ಥನಾಗಿದ್ದ ಕುಟುಂಬದ ಸದಸ್ಯನೊಬ್ಬ ಈ ಕೊಲೆ ಮಾಡಿದ್ದಾನೆʼʼ ಎಂದು ಚಿಂದ್ವಾರದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ಅಂದಾಜಿಸಿದ್ದಾರೆ. ʼʼತನ್ನ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಅವರು ತಿಳಿಸಿದ್ದಾರೆ. ʼʼಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದ ಆತ ಮಂಗಳವಾರ ರಾತ್ರಿ ತನ್ನ ಕುಟುಂಬದ ಮೇಲೆ ದಾಳಿ ನಡೆಸಿ, ತನ್ನ ಸಹೋದರ, ಅತ್ತಿಗೆ, ಪತ್ನಿ, ಚಿಕ್ಕ ಮಗು ಮತ್ತಿತರರನ್ನು ಕೊಂದಿದ್ದಾನೆ. ಬಳಿಕ ಆತ ಗ್ರಾಮದಿಂದ ಸುಮಾರು 100 ಮೀಟರ್ ದೂರದಲ್ಲಿರುವ ಚರಂಡಿಯ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಘಟನೆಯ ಭೀಕರತೆಯನ್ನು ತೆರೆದಿಟ್ಟಿದ್ದಾರೆ. ಈ ಪೈಕಿ ಮಗುವೊಂದು ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು

ಇದೇ ಮಾದರಿಯ ಘಟನೆ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು. ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪಾಲಾಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ 5 ಸದಸ್ಯರನ್ನು ಕ್ರೂರವಾಗಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ. ಮಾನಸಿಕ ಅಸ್ವಸ್ಥನಾಗಿದ್ದ ಆರೋಪಿ ಮೊದಲು ಗುಂಡಿಕ್ಕಿ ತನ್ನ ತಾಯಿಯನ್ನು ಕೊಂದಿದ್ದ. ಬಳಿಕ ಚೂರಿ ಇರಿದು ಪತ್ನಿಯನ್ನು ಹತ್ಯೆ ಮಾಡಿದ್ದ. ನಂತರ ತನ್ನ ಮೂವರು ಮಕ್ಕಳನ್ನು ಟೆರೇಸ್‌ನಿಂದ ಎಸೆದು ಕೊಂದಿದ್ದ. ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿತ್ತು. ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು‌ ಪತ್ತೆಯಾಗಿದ್ದವು. ರಾಜೇಶ್ವರಿ (45), ವಸಂತಾ (22) ಹಾಗೂ ಸಾಯಿ (4) ಮೃತ ದುರ್ದೈವಿಗಳು.

ಹಂತಕರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸೋಮವಾರ ರಾತ್ರಿ ತಾಯಿ ರಾಜೇಶ್ವರಿಗೆ ಮತ್ತೊಬ್ಬ ಮಗಳು ಫೋನ್ ಮಾಡಿದ್ದಾಳೆ. ಆದರೆ ಯಾರು ಫೋನ್‌ ರಿಸೀವ್ ಮಾಡಿರಲಿಲ್ಲ, ಮನೆಯ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮುಂಜಾನೆ ಬಂದು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬೆಡ್ ರೂಮ್‌ನಲ್ಲಿ ಮಲಗಿದ್ದಲ್ಲಿ ಅಜ್ಜಿ ಮತ್ತು ಮೊಮ್ಮಗನ ಶವಗಳು ಪತ್ತೆಯಾದರೆ, ಮಗಳು ವಸಂತಾಳ ಶವ ಅಡುಗೆ ಮನೆಯಲ್ಲಿತ್ತು.

Continue Reading

ಕ್ರೈಂ

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Assault Case: ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

VISTARANEWS.COM


on

belluru assault case
Koo

ಮಂಡ್ಯ: ಮಂಡ್ಯ ಜಿಲ್ಲೆಯ (Mandya news) ಬೆಳ್ಳೂರು (Belluru Assault case) ಪಟ್ಟಣದಲ್ಲಿ ಹಿಂದೂ ಯುವಕನ (Hindu youth) ಮೇಲೆ ಅನ್ಯ ಕೋಮಿನ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್‌ಐ ಅನ್ನು ಅಮಾನತು (Suspend) ಮಾಡಲಾಗಿದೆ. ಕರ್ತವ್ಯ ಲೋಪ ಕಾರಣ ನೀಡಿ ಬೆಳ್ಳೂರು ಠಾಣೆ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಿ ಮಂಡ್ಯ ಎಸ್‌ಪಿ ಎನ್. ಯತೀಶ್ ಆದೇಶ ಹೊರಡಿಸಿದ್ದಾರೆ.

ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಪ್ರಕರಣ?

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ (ಮೇ 27) ಸಂಜೆ ಅಭಿಲಾಷ್​ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿತ್ತು. ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದರು.

ದೊಡ್ಡ ಗುಂಪು ಹಲ್ಲೆ ಮಾಡಿದ್ದ ಅಭಿಲಾಷ್​ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿತ್ತು. ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದಾರೆ.

ಇದನ್ನೂ ಓದಿ | Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Continue Reading

ಕ್ರೈಂ

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Love Jihad: ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

VISTARANEWS.COM


on

love jihad kasaragod 2
Koo

ಮಂಗಳೂರು: ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ (Kasaragod) ಮತ್ತೆ ಲವ್ ಜಿಹಾದ್ (Love Jihad) ಸದ್ದು ಮಾಡುತ್ತಿದೆ. ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು (Hindu woman) ಮುಸ್ಲಿಂ ಯುವಕ (Muslim man) ಸದ್ದಿಲ್ಲದೆ ಮದುವೆ (Marriage) ಆಗಿದ್ದು, ಮುಸ್ಲಿಂ ಲೀಗ್ (Muslim league) ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಸರಗೋಡಿನ ಬದಿಯಡ್ಕದಲ್ಲಿ ʼಲವ್‌ ಜಿಹಾದ್ʼ (love jihad) ಎನ್ನಲಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ (Vishwa Hindu Parishad) ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

love jihad kasaragod 2

ಆದರೆ ಈ ʼಲವ್ ಜಿಹಾದ್ʼ ಹಿಂದೆ ಕೇರಳದ ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರವಿದೆ; ಮುಸ್ಲಿಂ ಲೀಗ್ ನೇತಾರನೊಬ್ಬ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾನೆ. ಆ ನೆಪದಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ನೇಹಾಳ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ, ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು. ಮೇ.23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದಳು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿದೆ. ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ನೇಹಾ ಮತ್ತು ಮಿರ್ಶಾದ್, ಮದುವೆಯಾಗಿ ಮೇ.27ರಂದು ಬದಿಯಡ್ಕ ಠಾಣೆಗೆ ಹಾಜರಾಗಿದ್ದರು.

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಆರ್ಥಿಕವಾಗಿ ಹಿಂದುಳಿದ ಹಿಂದೂ ಯುವತಿಯರನ್ನು ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ. ಹಿಂದೂ ಯುವತಿಯರ ಲವ್ ಜಿಹಾದ್, ಮತಾಂತರಕ್ಕೆ ಮುಸ್ಲಿಂ ಲೀಗ್ ಕುಮ್ಮಕ್ಕು ನೀಡುತ್ತಿದೆ. ಲವ್ ಜಿಹಾದ್‌ಗೆ ಬದಿಯಡ್ಕ ಪೊಲೀಸರು ಸಹ ಸಾಥ್ ನೀಡುತ್ತಿದ್ದಾರೆ ಎಂದು ವಿಎಹಿಂಪ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Continue Reading

ಪ್ರಮುಖ ಸುದ್ದಿ

Prajwal Revanna Case: ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

Prajwal Revanna Case: ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ.

VISTARANEWS.COM


on

Prajwal Revanna case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP ‌Prajwal Revanna Case) ಭಾರತಕ್ಕೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿರುವ ಎಸ್‌ಐಟಿ (SIT) ತಂಡ, ಏರ್‌ಪೋರ್ಟ್‌ನಲ್ಲಿಯೇ (Kempegowda International Airport – KIA) ಸದ್ಯ ಠಿಕಾಣಿ ಹಾಕಿದೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಅದಕ್ಕೂ ಮುನ್ನವೇ, ಅಂದರೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ಆರೆಸ್ಟ್‌ ಮಾಡಲು ಎಸ್‌ಐಟಿ ಸಜ್ಜಾಗಿದೆ.

ನಾಳೆ ರಾತ್ರಿ 12.35ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಜರ್ಮನಿಯಿಂದ ಬರಲಿರುವ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್‌ ಲ್ಯಾಂಡ್ ಆಗಲಿದ್ದಾರೆ ಎಂದು ಗೊತ್ತಾಗಿದೆ. ವಿಮಾನದಿಂದ ಇಳಿದ ಬಳಿಕ ಪ್ರಜ್ವಲ್‌ ಇಮಿಗ್ರೇಷನ್‌‌‌‌‌ ಡೆಸ್ಕ್‌‌ಗೆ ಬರಬೇಕು. ಪಾಸ್‌ಪೋರ್ಟ್‌ಗೆ ಸ್ಟಾಂಪ್‌‌‌ ಹಾಕಿಸಬೇಕು. ಈಗ ಲುಕೌಟ್‌ ನೋಟೀಸ್‌ ಇರುವುದರಿಂದ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಿದ್ದಾರೆ. ಏರ್‌‌ಪೋರ್ಟ್‌ ಅಧಿಕಾರಿಗಳಿಂದ SITಗೆ ಪ್ರಜ್ವಲ್ ಹಸ್ತಾಂತರ ನಡೆಯಲಿದೆ.

ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್‌ ಟಿಕೆಟ್ ಕಾಯ್ದಿರಿಸಿರುವುದರಿಂದ ಅಲರ್ಟ್ ಆಗಿರುವ ಎಸ್ಐಟಿ ತಂಡ, ಏರ್‌ಪೋರ್ಟ್‌ನಲ್ಲಿಯೇ ಠಿಕಾಣಿ ಹೂಡಿದೆ. ಎರಡು ಮೂರು ಬಾರಿ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿ‌ ಕೊನೆ ಗಳಿಗೆಯಲ್ಲಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಏರ್ಪೋರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ. 31ರಂದು ಬರುದಾಗಿ ಹೇಳಿ ಒಂದು ದಿನ ಮುಂಚಿತವಾಗಿಯೇ ಬಂದ್ರೆ ಕಷ್ಟ ಎಂದು ಏರ್ಪೋರ್ಟ್‌ನಲ್ಲಿ ಎರಡೆರಡು ತಂಡಗಳು ಕಾಯುತ್ತಿವೆ.

ಬಂದ ಬಳಿಕ ಏನೇನು?

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಬಳಿಕ ಮೆಡಿಕಲ್ ಟೆಸ್ಟ್‌ ಮತ್ತಿತರ ಅಗತ್ಯ ವಿಧಿವಿಧಾನಗಳು ನಡೆಯಲಿವೆ. ನಂತರ ತನಿಖೆ ನಡೆಸಲು ಎಸ್ಐಟಿ ತಯಾರಿ ಮಾಡಿಕೊಳ್ಳುತ್ತಿದೆ. ಎರಡು ಕೋನಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಎರಡು ತರಹದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದ್ದು, ತಪ್ಪು ಒಪ್ಪಿಕೊಳ್ಳಬಹುದು ಅಥವಾ ತಾನು ಮಾಡಿಯೇ ಇಲ್ಲ ಅನ್ನಬಹುದು. ಈ ಎರಡೂ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ಮಾಡಬೇಕಿದೆ.

ಪ್ರಜ್ವಲ್ ರೇವಣ್ಣ ತಪ್ಪು ಒಪ್ಪಿಕೊಂಡರೆ ಎಸ್‌ಐಟಿ ಕೆಲಸ ಸರಾಗವಾಗಲಿದೆ. ಆರೋಪಿತನ ಹೇಳಿಕೆ ದಾಖಲಿಸಿಕೊಂಡು ಸ್ಥಳ ಮಹಜರು ಮಾಡಲಾಗುತ್ತದೆ. ಎಲ್ಲೆಲ್ಲಿ ಕೃತ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ನೀಡಿರುವ ಹೇಳಿಕೆ ಆಧಾರದಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡುತ್ತಾರೆ. ಎಂಪಿ ಗೆಸ್ಟ್ ಹೌಸ್, ಹೊಳೆನರಸೀಪುರದ ಫಾರ್ಮ್ ಹೌಸ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ.

ಪ್ರಜ್ವಲ್‌ ತಮ್ಮ ಮೇಲಿರುವ ಆರೋಪ ತಳ್ಳಿ ಹಾಕಿದರೆ ಸಂತ್ರಸ್ತೆ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ. ಆಕೆಯ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ನಡೆಯುತ್ತದೆ. ಈಗಾಗಲೇ ಸಂತ್ರಸ್ತೆ ಹೇಳಿಕೆ ದಾಖಲಿಸಿರುವ ಎಸ್ಐಟಿ, ಜೊತೆಗೆ ಸ್ಥಳ ಮಹಜರು ನಡೆಸಿ ಒಂದಷ್ಟು ಸಾಕ್ಷ್ಯಗಳನ್ನು ಕಲೆಹಾಕಿದೆ. ಇದರ ಜೊತೆಗೆ ಆರೋಪಿ ಹೇಳಿಕೆಯನ್ನೂ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

Continue Reading
Advertisement
Crime News
ಕ್ರೈಂ7 mins ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ9 mins ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ10 mins ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Viral Video
ವೈರಲ್ ನ್ಯೂಸ್25 mins ago

Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

India Highest Paid Item Girl not Malaika Nora, Katrina, Sunny
ಸಿನಿಮಾ30 mins ago

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

Job Alert
ಉದ್ಯೋಗ51 mins ago

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

love jihad kasaragod 2
ಕ್ರೈಂ56 mins ago

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Kannada New Movie Aditya Shashikumar Kaadaadi Movie Lyrical song out
ಸ್ಯಾಂಡಲ್ ವುಡ್1 hour ago

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Viral Video
ವೈರಲ್ ನ್ಯೂಸ್1 hour ago

Viral Video: ಭಾರತ-ಚೀನಾ ಯೋಧರ ನಡುವೆ ಹಗ್ಗಜಗ್ಗಾಟ; ಗೆದ್ದವರು ಯಾರು? ವಿಡಿಯೊ ನೋಡಿ!

Aditi Prabhudeva is returning to reality show judge
ಕಿರುತೆರೆ2 hours ago

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ16 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌