Live In Partner Murder | ದೆಹಲಿಯಲ್ಲಿ ಪ್ರೇಯಸಿಯ ಕೊಂದ ಪ್ರಿಯತಮ, ಇದೂ 'ಕಿಲ್‌ ಇನ್‌ ರಿಲೇಷನ್‌ಶಿಪ್‌' ಕೇಸ್‌ - Vistara News

ಕ್ರೈಂ

Live In Partner Murder | ದೆಹಲಿಯಲ್ಲಿ ಪ್ರೇಯಸಿಯ ಕೊಂದ ಪ್ರಿಯತಮ, ಇದೂ ‘ಕಿಲ್‌ ಇನ್‌ ರಿಲೇಷನ್‌ಶಿಪ್‌’ ಕೇಸ್‌

ಲಿವ್‌ ಇನ್‌ ಪಾರ್ಟ್‌ನರ್‌ಗಳನ್ನು ಕೊಲೆ ಮಾಡುವ (Live In Partner Murder) ಕೇಸ್‌ಗಳು ದೇಶದಲ್ಲಿ ಹೆಚ್ಚಾಗುತ್ತಿವೆ. ಶ್ರದ್ಧಾ ವಾಳ್ಕರ್‌ ಕೊಲೆ ಕೇಸ್‌ ಬೆನ್ನಲ್ಲೇ ದೆಹಲಿಯಲ್ಲಿಯೇ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದ ಮತ್ತೊಬ್ಬ ಮಹಿಳೆಯನ್ನು ಹತ್ಯೆ ಮಾಡಲಾಗಿದೆ.

VISTARANEWS.COM


on

Live In Partner Murder In Delhi
ಮನ್‌ಪ್ರೀತ್‌ (ಕುಳಿತವ) ಹಾಗೂ ರೇಖಾ ರಾಣಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಹಲವೆಡೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿರುವ ಯುವತಿಯರನ್ನು ಕೊಲ್ಲುವ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಶ್ರದ್ಧಾ ವಾಳ್ಕರ್‌ ಕೊಲೆ, ಬೆಂಗಳೂರಿನಲ್ಲೂ ಪ್ರೇಯಸಿಯ ಹತ್ಯೆ (Live In Partner Murder) ಪ್ರಕರಣಗಳ ಬೆನ್ನಲ್ಲೇ ದೆಹಲಿಯಲ್ಲಿಯೇ ಮತ್ತೊಬ್ಬ ವ್ಯಕ್ತಿಯು ಲಿವ್‌ ಇನ್‌ನಲ್ಲಿದ್ದ ಮಹಿಳೆಯನ್ನು ಕೊಂದುಹಾಕಿದ್ದಾನೆ. ಹಾಗಾಗಿ, ಯುವತಿಯರು ಲಿವ್‌ ಇನ್‌ ರಿಲೇಷನ್‌ಶಿಪ್‌ಗೆ ಹೂಂ ಎನ್ನುವ ಮುಂಚೆ ೧೦ ಸಲ ಯೋಚನೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ದೆಹಲಿಯ ಗಣೇಶ್‌ ನಗರದಲ್ಲಿ ರೇಖಾ ರಾಣಿ (35) ಎಂಬುವರ ಶವ ಪತ್ತೆಯಾಗಿದ್ದು, ಇವರ ಜತೆ ಲಿವ್‌ ಇನ್‌ನಲ್ಲಿದ್ದ ಮನ್‌ಪ್ರೀತ್‌ ಎಂಬಾತನನ್ನು ಪೊಲೀಸರು ಪಂಜಾಬ್‌ನ ಪಟಿಯಾಲದಲ್ಲಿ ಬಂಧಿಸಿದ್ದಾರೆ. ಡಿಸೆಂಬರ್‌ ೧ರಂದು ಮಹಿಳೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕತ್ತರಿಸಲೆಂದೇ ಚಾಕು ತಂದಿದ್ದ

“ರೇಖಾ ರಾಣಿ ಹಾಗೂ ಮನ್‌ಪ್ರೀತ್‌ ೨೦೧೫ರಿಂದಲೇ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದು, ರೇಖಾ ರಾಣಿಗೆ ೧೬ ವರ್ಷದ ಮಗಳಿದ್ದಾಳೆ. ರೇಖಾ ರಾಣಿ, ಆಕೆಯ ಮಗಳು ಹಾಗೂ ಮನ್‌ಪ್ರೀತ್‌ ಗಣೇಶ್‌ ನಗರದಲ್ಲಿ ವಾಸಿಸುತ್ತಿದ್ದರು. ಆದರೆ, ಈಗಾಗಲೇ ಮನ್‌ಪ್ರೀತ್‌ಗೆ ಬೇರೆ ಮದುವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ, ರೇಖಾ ರಾಣಿಯ ಸಂಬಂಧದಿಂದ ಎಲ್ಲಿ ಪತ್ನಿ ಎದುರು ತನ್ನ ಬಣ್ಣ ಬಯಲಾಗುತ್ತದೆಯೋ ಎಂಬ ಕಾರಣಕ್ಕಾಗಿ ರೇಖಾ ರಾಣಿಯನ್ನು ಹತ್ಯೆಗೈದಿದ್ದಾನೆ. ಈಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಚಾಕುವನ್ನೂ ಖರೀದಿಸಿದ್ದ. ಆದರೆ, ಮಗಳ ಕೈಗೆ ಸಿಕ್ಕಿಹಾಕುತ್ತೇನೆ ಎಂಬ ಭಯದಿಂದ ಕೊಲೆ ಮಾಡಿ ಪರಾರಿಯಾಗಿದ್ದ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ | love murder | ಪ್ರೇಮಿಗಳ ಜಗಳ ಕೊಲೆಯಲ್ಲಿ ಅಂತ್ಯ: ಲಿವ್‌ ಇನ್‌ ರಿಲೇಷನ್‌ಷಿಪ್‌ನಲ್ಲಿದ್ದ ಸುಂದರಿಯನ್ನು ಕೊಂದೇ ಹಾಕಿದ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Viral Video:ಗೋಲ್ಡನ್‌ ರಿಟ್ರೀವರ್‌ ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುವ ವ್ಯಕ್ತಿಯೊಬ್ಬ ಲಿಫ್ಟ್‌ನಲ್ಲಿ ನಾಯಿಯ ಮುಖಕ್ಕೆ ಪದೇ ಪದೇ ಕೈಯಲ್ಲಿದ್ದ ಕೋಲಿನಂತಹ ಸಾಧನದಿಂದ ಹೊಡೆದಿದ್ದಾರೆ. ಬಳಿಕ ಕೈಯಿಂದಲೂ ನಾಯಿ ಬೆನ್ನಿಗೂ ಏಟು ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ನಾಯಿಯ ಮಾಲೀಕರು ಯಾವುದೇ ದೂರು ನೀಡಿಲ್ಲ. ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಆತ ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿಲ್ಲ.

VISTARANEWS.COM


on

Viral Video
Koo

ಗುರುಗ್ರಾಮ: ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುವ ಕೆಲಸದವನು ಅದರ ಮೇಲೆ ಮಾರಣಾಂತಿಕ ಹಲ್ಲೆ(Thrashing pet) ನಡೆಸಿರುವ ಘಟನೆ ಗುರುಗ್ರಾಮ(Gurugram)ದಲ್ಲಿ ನಡೆದಿದೆ. ಅಪಾರ್ಟ್‌ಮೆಂಟ್‌ನ ಲಿಫ್ಟ್‌ವೊಂದರಲ್ಲಿ ಈ ಭೀಕರ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಕಿಡಿಗೇಡಿಯ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿದೆ.

ಆರ್ಚಿಡ್‌ ಗಾರ್ಡನ್ಸ್‌ ಸೊಸೈಟಿಯ ಸೆಕ್ಟರ್‌ 54ರಲ್ಲಿ ಈ ಘಟನೆ ನಡೆದಿದ್ದು, ಗೋಲ್ಡನ್‌ ರಿಟ್ರೀವರ್‌ ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುವ ವ್ಯಕ್ತಿಯೊಬ್ಬ ಲಿಫ್ಟ್‌ನಲ್ಲಿ ನಾಯಿಯ ಮುಖಕ್ಕೆ ಪದೇ ಪದೇ ಕೈಯಲ್ಲಿದ್ದ ಕೋಲಿನಂತಹ ಸಾಧನದಿಂದ ಹೊಡೆದಿದ್ದಾರೆ. ಬಳಿಕ ಕೈಯಿಂದಲೂ ನಾಯಿ ಬೆನ್ನಿಗೂ ಏಟು ಕೊಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ನಾಯಿಯ ಮಾಲೀಕರು ಯಾವುದೇ ದೂರು ನೀಡಿಲ್ಲ. ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಆತ ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿಲ್ಲ.

ಇದನ್ನೂ ಓದಿ:Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

ಇಂತಹದ್ದೇ ಒಂದು ಘಟನೆ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ನಡೆದಿತ್ತು. ನಾಯಿ ಬೊಗಳಿದ್ದಕ್ಕೆ ನೆರೆಮನೆಯ ವ್ಯಕ್ತಿಯೊಬ್ಬ ನಾಯಿ ಹಾಗೂ ಅದರ ಮಾಲೀಕನಿಗೆ ಕಬ್ಬಿಣದ ರಾಡ್​ನಿಂದ ಹೊಡೆದ ಆಘಾತಕಾರಿ ಘಟನೆ ದೆಹಲಿಯ ಪಶ್ಚಿಮ ವಿಹಾರ್​ ಪ್ರದೇಶದಲ್ಲಿ ನಡೆದಿತ್ತು. ಪಶ್ಚಿಮ ವಿಹಾರ್ ಏರಿಯಾದಲ್ಲಿರುವ ನಿವಾಸಿಯೊಬ್ಬರು ನಾಯಿಯನ್ನು ಸಾಕಿದ್ದರು. ಅದೇ ಏರಿಯಾದಲ್ಲಿದ್ದ ಪಕ್ಕದ ಮನೆಯ ವ್ಯಕ್ತಿಯೊಬ್ಬ ನಾಯಿ ಬೊಗಳುತ್ತೆ ಎಂಬ ಕಾರಣಕ್ಕೆ ನೇರವಾಗಿ ಬಂದು ನಾಯಿಯ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದಿದ್ದಾನೆ. ಈ ವೇಳೆ ತಡೆಯಲು ಬಂದ ನಾಯಿಯ ಮಾಲೀಕನಿಗೂ ರಾಡ್​ನಿಂದ ಹೊಡೆದಿದ್ದಾನೆ. ಇನ್ನು ರಾಡ್​ನಿಂದ ಗಂಭೀರ ಗಾಯಗೊಂಡ ನಾಯಿ ಹಾಗೂ ಆತನ ಮಾಲೀಕ ನೆಲದ ಮೇಲೆ ಕುಸಿದು ಬಿದ್ದಿದ್ದರು.. ತಕ್ಷಣವೇ ಮತ್ತೊಬ್ಬ ಇದನ್ನು ತಡೆಯಲು ಬಂದಿದ್ದಾನೆ. ತುಂಬಾ ಸಮಯದವರೆಗೂ ಗಲಾಟೆ ನಡೆದಿದೆ. ಈ ವೇಳೆ ತಡೆಯಲು ಬಂದ ಮತ್ತೊಬ್ಬ ವ್ಯಕ್ತಿಯ ತಲೆಗೂ ಗಂಭೀರವಾಗಿ ಹಲ್ಲೆ ಮಾಡಿದ್ದ.

ಘಟನೆ ನಡೆದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಇನ್ನು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ನಾಯಿ ಹಾಗೂ ಅದರ ಮಾಲೀಕರನ್ನ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಈ ಘಟನೆಯ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಸಂಬಂಧ ನಾಯಿಯ ಮಾಲೀಕ ರಕ್ಷಿತ್ ಎಂಬುವವರು ಪಶ್ಚಿಮ ವಿಹಾರ್​ ಪೊಲೀಸ್​ ಠಾಣೆಯಲ್ಲಿ ಹಲ್ಲೆ ಮಾಡಿದ ವ್ಯಕ್ತಿಯ ಮೇಲೆ ದೂರು ನೀಡಿದ್ದರು. ದೂರಿನನ್ವಯ ಹಲ್ಲೆ ಮಾಡಿದ ವ್ಯಕ್ತಿ ಮೇಲೆ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Continue Reading

ಬಾಲಿವುಡ್

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Salman Khan: ಕೆಲವು ದಿನಗಳ ಹಿಂದೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆ ಮುಂದೆ ಫೈರಿಂಗ್‌ ಮಾಡಿದ ಪ್ರಕರಣದಲ್ಲಿ ಪೊಲೀಸರು 6ನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನನ್ನು ಹರಿಯಾಣದ ಫತೇಹಾಬಾದ್‌ನಿಂದ ವಶಕ್ಕೆ ಪಡೆಯಲಾಗಿದ್ದು, ಈತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರನೇ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಲಾಗಿದೆ. ತನಿಖೆ ನಡೆಸುತ್ತಿರುವ ಮುಂಬೈ ಕ್ರೈಂ ಬ್ರ್ಯಾಂಚ್‌ ಹರಿಯಾಣದ ಫತೇಹಾಬಾದ್‌ನಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನಾದ ಆರನೇ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ.

ʼʼಹರ್ಪಾಲ್‌ ಸಿಂಗ್‌ನನ್ನು ಆತನ ಊರಾದ ಫತೇಹಾಬಾದ್‌ನಿಂದ ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್‌ನ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಆಗಮಿಸಿದ ಆತನನ್ನು ವಶಕ್ಕೆ ಪಡೆದುಕೊಂಡಿದೆʼʼ ಎಂದು ಮೂಲಗಳು ತಿಳಿಸಿವೆ. ಹರ್ಪಾಲ್‌ ಸಿಂಗ್‌ನನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗಿದ್ದು, ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ 6 ಮಂದಿಯನ್ನು ಬಂಧಿಸಿದಂತಾಗಿದೆ.

ಈ ಹಿಂದೆ ಆರಂಭದಲ್ಲಿ ಪೊಲೀಸರು ಪಂಜಾಬ್‌ ಮೂಲದ ಇಬ್ಬರನ್ನು ಬಂಧಿಸಿದ್ದರು. ಬಳಿಕ ಗುಜರಾತ್‌ನಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ರಾಜಸ್ಥಾನದ ಓರ್ವ ಬಲೆಗೆ ಬಿದ್ದಿದ್ದ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

Continue Reading

ಕ್ರೈಂ

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Bomb Hoax: ಇಂದು ಬೆಳಗ್ಗೆ ಏಳೂವರೆಗೆ ಶಾಲಾ ಸಿಬ್ಬಂದಿ ಕಚೇರಿ ಒಪನ್‌ ಮಾಡಿದ್ದರು. ಈ ವೇಳೆ ಮೇಲ್ ಬಂದಿರುವುದು ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ.

VISTARANEWS.COM


on

bomb hoax bengaluru
Koo

ಬೆಂಗಳೂರು: ರಾಜಧಾನಿಯ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಇಮೇಲ್‌ (Bomb Hoax, bomb threat Email) ಬಂದಿದೆ. ಅಮೃತಹಳ್ಳಿಯ ಕೆಂಪಾಪುರದಲ್ಲಿರುವ ಜೈನ್ ಹೆರಿಟೇಜ್‌ ಶಾಲೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ನಿನ್ನೆ ಮಧ್ಯರಾತ್ರಿ ಬಾಂಬ್ ಬೆದರಿಕೆ ಇಮೇಲ್ ಅನ್ನು ದುಷ್ಕರ್ಮಿಗಳು (miscreants) ಕಳಿಸಿದ್ದಾರೆ.

ಇಂದು ಬೆಳಗ್ಗೆ ಏಳೂವರೆಗೆ ಶಾಲಾ ಸಿಬ್ಬಂದಿ ಕಚೇರಿ ಒಪನ್‌ ಮಾಡಿದ್ದರು. ಈ ವೇಳೆ ಮೇಲ್ ಬಂದಿರುವುದು ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ. ಶಾಲೆಗೆ ಸ್ಥಳೀಯ ಪೊಲೀಸರು, ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಸದ್ಯ ಪೊಲೀಸರಿಂದ ಪರಿಶೀಲನೆ ಮುಂದುವರಿದಿದೆ. ಪರಿಶೀಲನೆಯಲ್ಲಿ ಇದೊಂದು ಹುಸಿ ಬಾಂಬ್ ಮೇಲ್ ಎನ್ನುವುದು ಧೃಢವಾಗಿದೆ.

ಕಳೆದ ವರ್ಷ ಹಲವು ಪ್ರತಿಷ್ಠಿತ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಇದು ಕೂಡ ಹುಸಿಯಾಗಿತ್ತು. ಇತ್ತೀಚೆಗೆ ಹೊಸದಿಲ್ಲಿಯ ಹತ್ತಾರು ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದು, ಆ ಎಲ್ಲ ಶಾಲೆಗಳ ಮಕ್ಕಳಿಗೂ ರಜೆ ನೀಡಿ ಆವರಣ ತಲಾಶ್‌ ಮಾಡಲಾಗಿತ್ತು. ಇದು ಕೂಡ ಹುಸಿ ಎಂದು ಕಂಡುಬಂದಿತ್ತು. ಹೀಗೆ ಬೆದರಿಕೆ ಇಮೇಲ್‌ ಮಾಡಿದ ವ್ಯಕ್ತಿ ಅಪ್ರಾಪ್ತ ವಯಸ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇತ್ತೀಚೆಗೆ ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ. ಹೀಗೆ ಬೆದರಿಕೆ ಮೇಲ್‌ ಮಾಡುತ್ತಿರುವವರ ತಂತ್ರಜ್ಞಾನದಲ್ಲಿ ಪರಿಣಿತರಾಗಿದ್ದು, ದೇಶದ ಸರ್ವರ್‌ ಕನೆಕ್ಷನ್‌ ತಪ್ಪಿಸಿ ವಿಪಿಎನ್‌ ಮೂಲಕ ಕಾರ್ಯಾಚರಿಸಿ ವಿದೇಶಗಳ ಸರ್ವರ್‌ನಿಂದ ಬಂದಂತೆ ತೋರಿಸುವ ಕಲೆಯಲ್ಲಿ ನಿಷ್ಣಾತರಾಗಿದ್ದಾರೆ. ಹೀಗಾಗಿ ಇದನ್ನು ಭೇದಿಸುವುದು ಪೊಲೀಸರಿಗೆ ಕಷ್ಟವಾಗುತ್ತಿದೆ. ಒಂದು ಶಾಲೆಗೆ ಮಾತ್ರ ಬೆದರಿಕೆ ಮೇಲ್‌ ಬಂದಿರುವ ಹಿನ್ನೆಲೆಯಲ್ಲಿ, ವೈಯಕ್ತಿಕ ದ್ವೇಷ ಕಾರ್ಯಾಚರಿಸಿರಬಹುದು ಎಂದು ಶಂಕಿಸಲಾಗಿದೆ.

ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Continue Reading

ಪ್ರಮುಖ ಸುದ್ದಿ

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

‌Prajwal Revanna Case: ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್‌ ಡ್ರೈವ್‌ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ.

VISTARANEWS.COM


on

HD Deve gowda prajwal revanna case
Koo

ಬೆಂಗಳೂರು: ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರು ಇಂದು ಜಾಮೀನಿನಲ್ಲಿ ಬಿಡುಗಡೆ ಆಗುತ್ತಿದ್ದು, ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕುಟುಂಬಕ್ಕೆ ಆಗಿರುವ ಅವಮಾನದ ಸೇಡು ತೀರಿಸಿಕೊಳ್ಳಲು ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Deve Gowda) ಸಜ್ಜಾಗಿದ್ದಾರೆ. ಸದಾ ನೀಟ್‌ ಶೇವ್‌ ಮಾಡಿಕೊಳ್ಳುವ ದೇವೇಗೌಡರು ಮಗ ಜೈಲುಪಾಲಾದ ಬಳಿಕ ಮೊದಲ ಬಾರಿಗೆ ಗಡ್ಡ ಬಿಟ್ಟಿದ್ದು, ಇದೀಗ ಎದುರಾಳಿಗಳನ್ನು ಎದುರಿಸಲು ಎದ್ದು ಕೂತಿದ್ದಾರೆ.

ಇಂದು ರೇವಣ್ಣ ಮನೆಗೆ

ಹನ್ನೊಂದು ದಿನಗಳ ಹಿಂದೆ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲೇ ಆರೆಸ್ಟ್ ಆಗಿದ್ದ ಎಚ್‌.ಡಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ಸಿಗುವವರೆಗೂ ಬಿಡುಗಡೆ ದೊರೆಯುವುದಿಲ್ಲ. ಬೆಳಿಗ್ಗೆ ಹತ್ತುವರೆಗೆ ಕೋರ್ಟ್ ಕಲಾಪ ಆರಂಭವಾಗಲಿದ್ದು, ಹತ್ತುವರೆಗೆ ಪರಪ್ಪನ ಅಗ್ರಹಾರ ಜೈಲಿಗೆ ಜೈಲರ್‌ ಬರಲಿದ್ದಾರೆ. ರೇವಣ್ಣ ಪರ ವಕೀಲರಿಂದ ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ನೀಡಿ ಹನ್ನೊಂದು ಗಂಟೆ ಬಳಿಕ ಬಿಡುಗಡೆ ಸಾಧ್ಯತೆ ಇದೆ. ಬಹುತೇಕ ಅಭಿಜಿನ್ ಮುಹೂರ್ತ 11.40ರ ಸಮಯದಲ್ಲಿ ಬಿಡುಗಡೆ ಸಾಧ್ಯತೆ ಇದೆ.

ರೇವಣ್ಣ ಬಿಡುಗಡೆ ಬಳಿಕ ನೇರವಾಗಿ ಪದ್ಮನಾಭ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ರೇವಣ್ಣ ಬಿಡುಗಡೆಯಿಂದ ಗೌಡರ ಕುಟುಂಬದಲ್ಲಿ ಸಂತೋಷ ಮೂಡಿದ್ದು, ಬಿಡುಗಡೆ ‌ಬಳಿಕ ತಂದೆ ದೇವೇಗೌಡರು, ಹೆಚ್‌ಡಿಕೆ ಸೇರಿ ಕುಟುಂಬ ಸದಸ್ಯರ ಜೊತೆಗೆ ರೇವಣ್ಣ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಾಜಿ ಪಿಎಂ ಎಚ್.ಡಿ ದೇವೇಗೌಡರ ಆಶೀರ್ವಾದ ಪಡೆದು ಬಳಿಕ ಮುಂದಿನ ಕೆಲಸಗಳಿಗಾಗಿ ಹಾಸನ ಕಡೆ ಹೊರಡಲಿದ್ದಾರೆ.

ಹನ್ನೊಂದು ದಿನಗಳ ಸಂಕಷ್ಟದ ಮೂಡ್‌ನಿಂದ ಇಂದು ಹೊರಬಂದಿರುವ ದೇವೇಗೌಡರು, ನಿನ್ನೆ ರಾತ್ರಿ ಒಂದು ಗಂಟೆವರೆಗೂ ತಮ್ಮ ಮಕ್ಕಳೊಂದಿಗೆ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಮಾಜಿ ಸಿಎಂ ಎಚ್‌ಡಿಕೆ ಸೇರಿದಂತೆ ದೇವೇಗೌಡರ ಪುತ್ರಿಯರು ಸಹ ಇದರಲ್ಲಿ ಭಾಗಿಯಾಗಿದ್ದರು. ಇಂದು ಮನೆಯಲ್ಲಿ ಹಬ್ಬದ ವಾತಾವರಣವಿದ್ದು, ನಿನ್ನೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

“ಪೆನ್ ಡ್ರೈವ್ ಪ್ರಕರಣದಿಂದ ಈಗಾಗಲೇ ನಮ್ಮ ಕುಟುಂಬದ ಮಾನ ಬೀದಿಗೆ ಬಂದಿದೆ. ಲೋಕಸಭೆ ‌ಚುನಾವಣೆ ಹೊತ್ತಿನಲ್ಲಿ ಇಕ್ಕಟ್ಟಿಗೆ ಸಿಲುಕಿದ್ದೇವೆ. ಈ ಹೊತ್ತಲ್ಲಿ ರಾಜಕೀಯ ಹೇಳಿಕೆ ಸೇರಿದಂತೆ ಯಾವುದಕ್ಕೂ ಹೇಳಿಕೆ ನೀಡಬೇಡಿ. ಹೆಚ್ಚು ಮಾತನಾಡಬೇಡಿ” ಎಂದು ದೇವೇಗೌಡರು ಮಕ್ಕಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಎಚ್ಚರಿಸಿದ್ದಾರೆ.

ಸರ್ಕಾರದ ವಿರುದ್ಧ ಯಾವ ಅಸ್ತ್ರ?

ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್‌ ಡ್ರೈವ್‌ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ.

ಈ ನಿಟ್ಟಿನಲ್ಲಿ ತಂತ್ರ ರೆಡಿಯಾಗುತ್ತಿದ್ದು, ರಾಜಕೀಯ, ಸಾಮಾಜಿಕ ಎಲ್ಲ ನೆಲೆಗಳಲ್ಲೂ ಎದುರಾಳಿಗಳಿಗೆ ಕೌಂಟರ್‌ ಕೊಡಲು ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೂರು ಅಸ್ತ್ರಗಳು ತಯಾರಾಗುತ್ತಿವೆ ಎನ್ನಲಾಗಿದೆ.

ಅಸ್ತ್ರ – 1: ಡಿಕೆಶಿ ಸಿದ್ದರಾಮಯ್ಯ ವಿರುದ್ಧ ಪ್ರಯೋಗ

ಒಕ್ಕಲಿಗ ಸಮುದಾಯದ ಮುಂದೆ ಡಿಕೆಶಿಯನ್ನು ವಿಲನ್ ಮಾಡುವುದು, ದೇವೇಗೌಡರ ಫ್ಯಾಮಿಲಿಯನ್ನು ಜೈಲಿಗೆ ಕಳುಹಿಸಿದ್ದೇ ಡಿಕೆಶಿ ಹಾಗೂ ಸಿದ್ದರಾಮಯ್ಯ ಅಂತ ಬಿಂಬಿಸುವುದು ಈ ಅಸ್ತ್ರ. ಡಿಕೆಶಿಗೆ ದೇವೇಗೌಡರ ಕುಟುಂಬ ನೋಡಿದರೆ ಆಗಲ್ಲ. ಹೀಗಾಗಿ ಪೆನ್ ಡ್ರೈವ್ ಕೇಸ್‌ನಲ್ಲಿ ನಮ್ಮನ್ನು ಸಿಕ್ಕಿ ಹಾಕಿಸಿದ್ದಾರೆ. ಸಿದ್ದರಾಮಯ್ಯಗೆ ಒಕ್ಕಲಿಗ ಸಮುದಾಯ ಕಂಡರೆ ಆಗಲ್ಲ ಅಂತ ಬಿಂಬಿಸುವುದು, ರಾಜ್ಯಾದ್ಯಂತ ಸರ್ಕಾರದ ನಡೆ ವಿರುದ್ಧ ಮೈತ್ರಿ ಪಕ್ಷದ ಜತೆ ಜನಾಭಿಪ್ರಾಯ ಸಂಗ್ರಹಿಸುವುದು, ಇವರ ತಪ್ಪು ಮರೆ ಮಾಚಲು ಪೆನ್ ಡ್ರೈವ್ ಪ್ರಕರಣ ತಂದರು ಅಂತ ಪ್ರಚಾರ ಮಾಡುವುದು ಇತ್ಯಾದಿಗಳ ಮೂಲಕ ಮುಗಿಬೀಳುವುದು.

ಅಸ್ತ್ರ – 2: ಭ್ರಷ್ಟಾಚಾರದ ಪ್ರಸ್ತಾಪ

ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿಚಾರಗಳನ್ನು ಪ್ರಸ್ತಾಪ ಮಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಈ ಹಿಂದೆ ಸರ್ಕಾರದ ಸಚಿವರ ವರ್ಗಾವಣೆ ದಂಧೆ ಸಂಬಂಧ ಇದೆ ಎನ್ನಲಾದ ಪೆನ್ ಡ್ರೈವ್ ಅಸ್ತ್ರ ಪ್ರಯೋಗ ಮಾಡುವುದು ಪ್ಲಾನ್‌ನಲ್ಲಿದೆ.

ಅಸ್ತ್ರ – 3: ಕಾನೂನು ಅಸ್ತ್ರಗಳು

ಡಿಕೆಶಿ ವಿರುದ್ಧ ಇರುವ, ಕೇಂದ್ರ ತನಿಖಾ ಏಜೆನ್ಸಿಗಳ ಮುಂದೆ ದಾಖಲಾಗಿರುವ ಪ್ರಕರಣಗಳಿಗೆ ಮರುಜೀವ ಕೊಡಿಸುವುದು, ಡಿಕೆಶಿಗೆ ಐಟಿ, ಇಡಿ, ಸಿಬಿಐ ಸಂಕಷ್ಟ ಎದುರಾಗುವಂತೆ ನೋಡಿಕೊಳ್ಳುವುದು, ಈ ಬಗ್ಗೆ ಕೇಂದ್ರದ ಮುಂದೆ ಇನ್ನಷ್ಟು ದಾಖಲೆ ನೀಡಿ ಮೈತ್ರಿ ಪಕ್ಷದ ಬೆಂಬಲ ಪಡೆಯುವುದು ಈ ಪ್ಲಾನ್‌ನಲ್ಲಿದೆ.

ಇದನ್ನೂ ಓದಿ: HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Continue Reading
Advertisement
T20 World Cup 2024
ಕ್ರಿಕೆಟ್2 mins ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Davanagere News Marriage at an early age
ದಾವಣಗೆರೆ2 mins ago

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Ramayana Movie
ಸಿನಿಮಾ3 mins ago

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

gold rate today
ಚಿನ್ನದ ದರ12 mins ago

Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

pm narendra modi nomination varanasi
ಪ್ರಮುಖ ಸುದ್ದಿ51 mins ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

karnataka Rain Effected
ಬೆಂಗಳೂರು60 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್1 hour ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್1 hour ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ1 hour ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Narendra Modi
ದೇಶ1 hour ago

Narendra Modi Live: ವಾರಾಣಸಿಯಲ್ಲಿ ನಮೋ ನಾಮಿನೇಶನ್‌; ಹ್ಯಾಟ್ರಿಕ್‌ ಗೆಲುವಿನ ಹುಮ್ಮಸ್ಸಿನಲ್ಲಿ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು60 mins ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ8 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ18 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ18 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ19 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ19 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌