Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು - Vistara News

ಕ್ರೈಂ

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

Dharwad News: ಬಸವ ಜಯಂತಿ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ನಡೆದ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ. ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

Dharwad News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಬಸವ ಜಯಂತಿ (Basava Jayanti) ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಬಸವೇಶ್ವರ ಜಾತ್ರೆಯಲ್ಲಿ ದುರಂತವೊಂದು ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ (Dharwad News). ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ.

ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಯೋಜಿಸಲಾಗಿತ್ತು. ಸಂಜೆ ನಡೆದ ರಥೋತ್ಸವ ವೇಳೆ ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

ಕೆಲವು ದಿನಗಳ ಹಿಂದೆ ಕಲಬುರಗಿಯಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ ಮೃತಪಟ್ಟಿದ್ದರು. ಕಲಬುರಗಿ ನಗರದಲ್ಲಿ ನಡೆದ ಶ್ರೀ ಶರಣ ಬಸವೇಶ್ವರ ಜಾತ್ರಾ ಮಹೋತ್ಸವದ ಭಾಗವಾಗಿ ಆಯೋಜಿಸಿದ್ದ ಉಚ್ಚಾಯಿ ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ, ಬೀದರ್ ಜಿಲ್ಲೆ ಇಟಗಾ ಗ್ರಾಮದ ರಾಮು ಸಿದ್ದಪ್ಪ (28) ದುರ್ಮರಣ ಹೊಂದಿದ್ದರು. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಂಟಾದ ಗದ್ದಲದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕು ಕೊಲೆ‌ ಮಾಡಿರುವ ಘಟನೆ ನಗರದ ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಯೊಬ್ಬ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿವ್ಯಾ (32) ಕೊಲೆಯಾದ ಮಹಿಳೆ. ಮಹಿಳೆಯ ಗಂಡ ಗುರುಮೂರ್ತಿ ಕೆಲಸಕ್ಕೆಂದು ಸಲೂನ್‌ ಹೋಗಿದ್ದರು. ಈ ವೇಳೆ ಆರೋಪಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕದ್ದು ಪರಾರಿಯಾಗಿದ್ದಾನೆ. ಮಹಿಳೆಯ ಮೃತದೇಹವನ್ನು ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ‌

ಕಲಬುರಗಿ: ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಟನೂರು (ಡಿ) ಬಳಿ ಶುಕ್ರವಾರ ನಡೆದಿದೆ. ಪುಷ್ಪಾ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ ಪದವಿ ವ್ಯಾಸಂಗ ಮುಗಿಸಿದ್ದು, ಆಳಂದ ತಾಲೂಕಿನ ಕೌಲಗಾ ಗ್ರಾಮದಿಂದ ಕಲಬುರಗಿ ನಗರಕ್ಕೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಹೀಗಾಗಿ ಕೋಟನೂರು ಬಳಿ ಬಾಡಿಗೆ ರೂಮ್‌ ಪಡೆದು ವಾಸವಾಗಿದ್ದಳು. ಈಕೆಯು ಕಳೆದ ನಾಲ್ಕು‌ ವರ್ಷದಿಂದ ಕಲಬುರಗಿಯ ಗಾಂಧಿನಗರದ ನಿವಾಸಿ ಕಿರಣ್ ಎಂಬುವರೊಂದಿಗೆ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಆಟೋದಲ್ಲಿ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ವಿದ್ಯಾರ್ಥಿನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

By

Physical abuse
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರಲ್ಲೊಂದು ಪೈಶಾಚಿಕ ಕೃತ್ಯ (Physical Abuse) ನಡೆದಿದೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿದೆ. ನಾಗಲ್ಯಾಂಡ್‌ ಮೂಲದ ಯುವತಿಯ ಸ್ಥಿತಿ ತೀರ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ನಿನ್ನೆ ಶನಿವಾರ ಮಧ್ಯರಾತ್ರಿ ಘಟನೆ ನಡೆದಿದೆ. ಆಟೋದಲ್ಲೇ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ಕೋರಮಂಗಲದ ಪಬ್‌ಗೆ ಹೋಗಿ ವಾಪಸ್‌ ಮನೆಗೆ ಆಟೋದಲ್ಲಿ ಬರುವಾಗ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.

ಭಾನುವಾರ ಘಟನೆ ಸಂಬಂಧ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಚ್‌ಎಸ್‌ಆರ್‌ ಲೇಔಟ್ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Accident News : ನರಗುಂದಲ್ಲಿ ಭೀಕರ ಅಫಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ದಲಿತನಿಗೆ ಕ್ಷೌರ ಮಾಡಲು ನಿರಾಕರಣೆ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕೊಪ್ಪಳ: ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ (Murder Case) ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ. ಕ್ಷೌರಿಕ ಮುದುಕಪ್ಪ ಹಡಪದ ಕೊಲೆ ಆರೋಪಿಯಾಗಿದ್ದು, ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ತನ್ನ ಕ್ಷೌರ ಮಾಡಲು ಹೇಳಿದ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ಯಮನೂರಸ್ವಾಮಿ ತಮ್ಮ ಕ್ಷೌರ ಮಾಡಲು ಮುದುಕಪ್ಪ ಅವರಿಗೆ ಹೇಳಿದ್ದ. ಆದರೆ ಜಾತಿ ಕಾರಣಕ್ಕೆ ಆ ಕೆಲಸ ಮಾಡಲು ನಿರಾಕರಿಸಿದ್ದ. ಈ ವಿಚಾರದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಜಗಳ ತಾರಕಕ್ಕೇರಿ ಮುದುಕಪ್ಪ ಕೊಲೆ ಮಾಡಿದ್ದಾನೆ.

ಜಾತಿ ನಿಂದನೆ, ಕೊಲೆ

ಯಮನೂರ ಕ್ಷೌರ ಮಾಡಿಸಿಕೊಳ್ಳುವುದಕ್ಕೆ ಹೋಗಿದ್ದಾಗ ಮುದುಕಪ್ಪ ಮೊದಲು ಹಣ ಕೊಡುವಂತೆ ಕೇಳಿದ್ದಾನೆ. ಆದರೆ ಯಮನೂರ ಸ್ವಲ್ಪ ಹೊತ್ತು ಬಿಟ್ಟು ದುಡ್ಡು ಕೊಡುವುದಾಗಿ ಹೇಳಿದ್ದರು. ಮಾದಿಗರಿಗೆ ಕ್ಷೌರ ಮಾಡುವುದು ಕಷ್ಟ. ಅಂಥದ್ದರಲ್ಲಿ ಹಣ ಕೊಡದೇ ಕ್ಷೌರ ಮಾಡುವುದು ಹೇಗೆ ಎಂದು ಮುದುಕಪ್ಪ ಪ್ರಶ್ನಿಸಿದ್ದಾರೆ. ಈ ಮಾತಿಗೆ ಯಮನೂರ ಆಕ್ಷೇಪ ವ್ಯಕ್ತಪಡಿಸಿದ್ದು ಜಾತಿ ನಿಂದನೆ ಮಾಡಬಾರದಾಗಿ ಎಚ್ಚರಿಕೆ ಕೊಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಮುದುಕಪ್ಪ ಯಮನೂರ ಅವರ ಶರ್ಟ್​ ಹಿಡಿದು ಎಳೆದಾಡಿದ್ದ. ಈ ವೇಳೆ ಗಲಾಟೆ ನಡೆದಿದ್ದು ಆರೋಪಿ ತನ್ನ ಕೆಲಸ ಮಾಡುವ ಕತ್ತರಿಯಿಂದಲೇ ಹೊಕ್ಕಳ ಕೆಳಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಎಫ್​ಐಆರ್​ನಲ್ಲಿ ದಾಖಲಾಗಿದೆ.

ಡಾಬಾದಿಂದ ಲೋಕಲ್ ಬ್ರಾಂಡ್​ ಎಣ್ಣೆ ಕದಿಯುತ್ತಿದ್ದವನ ಮುಖ ಸಿಸಿಟಿವಿಯಲ್ಲಿ ಸೆರೆ

ರಾಯಚೂರು : ಡಾಬಾವೊಂದಕ್ಕೆ ನುಗ್ಗಿ ಪ್ರತಿನಿತ್ಯ ಲೋಕಲ್ ಎಣ್ಣೆ ಕದಿಯುತ್ತಿದ್ದ ವ್ಯಕ್ತಿಯೊಬ್ಬನ ಮುಖ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಯ ಕುರಿತು ಡಾಬಾ ಮಾಲೀಕರು ಮುದ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎಣ್ಣೆ ಆಸೆಗೆ ಬಂದಿದ್ದ ಆತ ಮುಖಕ್ಕೆ ಮುಸುಕು ಧರಿಸಿರಲಿಲ್ಲ. ಹೀಗಾಗಿ ಕ್ಯಾಮೆರಾದಲ್ಲಿ ಆತನ ಚಹರೆ ಸಂಪೂರ್ಣವಾಗಿ ಸೆರೆಯಾಗಿದೆ. ಹೀಗಾಗಿ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸುವ ಸಾಧ್ಯತೆಗಳಿವೆ.

ಆರೋಪಿಗೆ ಡಾಬಾಕ್ಕೆ ನುಗ್ಗಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕದಿಯುವ ಚಾಳಿ ಶುರುವಾಗಿತ್ತು. ಅಲ್ಲಿ ಹಣ ಇದ್ದರೂ ಅದನ್ನು ಮುಟ್ಟೇ ಕೇವಲ ಒಟಿ, ಚಾಯ್ಸ್ ಸೇರಿದಂತೆ ಲೋಕಲ್ ಬ್ರಾಂಡ್​ನ ಮದ್ಯ ಎತ್ತಿಕೊಂಡು ಪರಾರಿಯಾಗುತ್ತಿದ್ದ. ಲಿಂಗಸಗೂರು ತಾಲೂಕಿನ ಮಾಕಾಪೂರ ಗ್ರಾಮದಲ್ಲಿರುವ ಡಾಬಾದ ಮಾಲೀಕರು ಇದರಿಂದ ಬೇಸತ್ತಿದ್ದರು. ಮಾಲೀಕ ಬಸವರಾಜ್ ಅವರು ಆರೋಪಿಯನ್ನು ಹಿಡಿಯುವ ಉದ್ದೇಶದಿಂದ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಿದ್ದರು. ಆರೋಪಿ ಈ ಬಗ್ಗೆ ಅರಿಯದೇ ಒಳಗೆ ನುಗ್ಗಿ ಮತ್ತೆ ಎಣ್ಣೆಗಾಗಿ ತಡಕಾಡಿದಾಗ ಆತನ ಮುಖ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Murder Case : ದಲಿತನಿಗೆ ಕ್ಷೌರ ಮಾಡಲು ನಿರಾಕರಣೆ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Murder case :

VISTARANEWS.COM


on

Murder case
Koo

ಕೊಪ್ಪಳ: ಕ್ಷೌರ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ದಲಿತರೊಬ್ಬರನ್ನು ಕೊಲೆ ಮಾಡಿರುವ (Murder Case) ಘಟನೆ ಯಲಬುರ್ಗಾದ ಸಂಗನಾಳದಲ್ಲಿ ನಡೆದಿದೆ. ಕ್ಷೌರಿಕ ಮುದುಕಪ್ಪ ಹಡಪದ ಕೊಲೆ ಆರೋಪಿಯಾಗಿದ್ದು, ಯಮನೂರಸ್ವಾಮಿ ಬಂಡಿಹಾಳ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ತನ್ನ ಕ್ಷೌರ ಮಾಡಲು ಹೇಳಿದ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ಯಮನೂರಸ್ವಾಮಿ ತಮ್ಮ ಕ್ಷೌರ ಮಾಡಲು ಮುದುಕಪ್ಪ ಅವರಿಗೆ ಹೇಳಿದ್ದ. ಆದರೆ ಜಾತಿ ಕಾರಣಕ್ಕೆ ಆ ಕೆಲಸ ಮಾಡಲು ನಿರಾಕರಿಸಿದ್ದ. ಈ ವಿಚಾರದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಜಗಳ ತಾರಕಕ್ಕೇರಿ ಮುದುಕಪ್ಪ ಕೊಲೆ ಮಾಡಿದ್ದಾನೆ.

ಜಾತಿ ನಿಂದನೆ, ಕೊಲೆ

ಯಮನೂರ ಕ್ಷೌರ ಮಾಡಿಸಿಕೊಳ್ಳುವುದಕ್ಕೆ ಹೋಗಿದ್ದಾಗ ಮುದುಕಪ್ಪ ಮೊದಲು ಹಣ ಕೊಡುವಂತೆ ಕೇಳಿದ್ದಾನೆ. ಆದರೆ ಯಮನೂರ ಸ್ವಲ್ಪ ಹೊತ್ತು ಬಿಟ್ಟು ದುಡ್ಡು ಕೊಡುವುದಾಗಿ ಹೇಳಿದ್ದರು. ಮಾದಿಗರಿಗೆ ಕ್ಷೌರ ಮಾಡುವುದು ಕಷ್ಟ. ಅಂಥದ್ದರಲ್ಲಿ ಹಣ ಕೊಡದೇ ಕ್ಷೌರ ಮಾಡುವುದು ಹೇಗೆ ಎಂದು ಮುದುಕಪ್ಪ ಪ್ರಶ್ನಿಸಿದ್ದಾರೆ. ಈ ಮಾತಿಗೆ ಯಮನೂರ ಆಕ್ಷೇಪ ವ್ಯಕ್ತಪಡಿಸಿದ್ದು ಜಾತಿ ನಿಂದನೆ ಮಾಡಬಾರದಾಗಿ ಎಚ್ಚರಿಕೆ ಕೊಟ್ಟಿದ್ದರು. ಇದರಿಂದ ಸಿಟ್ಟಿಗೆದ್ದ ಮುದುಕಪ್ಪ ಯಮನೂರ ಅವರ ಶರ್ಟ್​ ಹಿಡಿದು ಎಳೆದಾಡಿದ್ದ. ಈ ವೇಳೆ ಗಲಾಟೆ ನಡೆದಿದ್ದು ಆರೋಪಿ ತನ್ನ ಕೆಲಸ ಮಾಡುವ ಕತ್ತರಿಯಿಂದಲೇ ಹೊಕ್ಕಳ ಕೆಳಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಎಫ್​ಐಆರ್​ನಲ್ಲಿ ದಾಖಲಾಗಿದೆ.

ಇದನ್ನೂ ಓದಿ: Accident News : ನರಗುಂದಲ್ಲಿ ಭೀಕರ ಅಫಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ಡಾಬಾದಿಂದ ಲೋಕಲ್ ಬ್ರಾಂಡ್​ ಎಣ್ಣೆ ಕದಿಯುತ್ತಿದ್ದವನ ಮುಖ ಸಿಸಿಟಿವಿಯಲ್ಲಿ ಸೆರೆ

ರಾಯಚೂರು : ಡಾಬಾವೊಂದಕ್ಕೆ ನುಗ್ಗಿ ಪ್ರತಿನಿತ್ಯ ಲೋಕಲ್ ಎಣ್ಣೆ ಕದಿಯುತ್ತಿದ್ದ ವ್ಯಕ್ತಿಯೊಬ್ಬನ ಮುಖ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಯ ಕುರಿತು ಡಾಬಾ ಮಾಲೀಕರು ಮುದ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎಣ್ಣೆ ಆಸೆಗೆ ಬಂದಿದ್ದ ಆತ ಮುಖಕ್ಕೆ ಮುಸುಕು ಧರಿಸಿರಲಿಲ್ಲ. ಹೀಗಾಗಿ ಕ್ಯಾಮೆರಾದಲ್ಲಿ ಆತನ ಚಹರೆ ಸಂಪೂರ್ಣವಾಗಿ ಸೆರೆಯಾಗಿದೆ. ಹೀಗಾಗಿ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸುವ ಸಾಧ್ಯತೆಗಳಿವೆ.

ಆರೋಪಿಗೆ ಡಾಬಾಕ್ಕೆ ನುಗ್ಗಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕದಿಯುವ ಚಾಳಿ ಶುರುವಾಗಿತ್ತು. ಅಲ್ಲಿ ಹಣ ಇದ್ದರೂ ಅದನ್ನು ಮುಟ್ಟೇ ಕೇವಲ ಒಟಿ, ಚಾಯ್ಸ್ ಸೇರಿದಂತೆ ಲೋಕಲ್ ಬ್ರಾಂಡ್​ನ ಮದ್ಯ ಎತ್ತಿಕೊಂಡು ಪರಾರಿಯಾಗುತ್ತಿದ್ದ. ಲಿಂಗಸಗೂರು ತಾಲೂಕಿನ ಮಾಕಾಪೂರ ಗ್ರಾಮದಲ್ಲಿರುವ ಡಾಬಾದ ಮಾಲೀಕರು ಇದರಿಂದ ಬೇಸತ್ತಿದ್ದರು. ಮಾಲೀಕ ಬಸವರಾಜ್ ಅವರು ಆರೋಪಿಯನ್ನು ಹಿಡಿಯುವ ಉದ್ದೇಶದಿಂದ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಿದ್ದರು. ಆರೋಪಿ ಈ ಬಗ್ಗೆ ಅರಿಯದೇ ಒಳಗೆ ನುಗ್ಗಿ ಮತ್ತೆ ಎಣ್ಣೆಗಾಗಿ ತಡಕಾಡಿದಾಗ ಆತನ ಮುಖ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Continue Reading

ವೈರಲ್ ನ್ಯೂಸ್

Dog Attack: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಗೋರಖ್‌ಪುರದ ಶಹಪುರದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ಹುಚ್ಚು ನಾಯಿಯೊಂದು ದಾಳಿ (Dog Attack) ನಡೆಸಿದೆ. ಇದರ ಭಯಾನಕ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೋರಖ್‌ಪುರದ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ದುರ್ಗೇಶ್ ಮಿಶ್ರಾ ಅವರು, ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಅಭಿಯಾನವನ್ನು ನಾವು ನಿಯಮಿತವಾಗಿ ನಡೆಸುತ್ತಿದ್ದೇವೆ. ಪ್ರಾಣಿ ಜನನ ನಿಯಂತ್ರಣ ಕೇಂದ್ರವನ್ನು ಸಹ ನಿರ್ಮಿಸಲಾಗುತ್ತಿದೆ. ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಚುಚ್ಚು ಮದ್ದು ನೀಡಲಾಗುತ್ತಿದೆ ಎಂದಿದ್ದಾರೆ.

VISTARANEWS.COM


on

By

Dog attack
Koo

ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 17 ಮಂದಿಯ ಮೇಲೆ ಉತ್ತರ ಪ್ರದೇಶದ (uttarpradesh) ಗೋರಖ್‌ಪುರದ ಶಹಪುರದಲ್ಲಿ ಆಗಸ್ಟ್ 14ರಂದು ಹುಚ್ಚು ನಾಯಿಯೊಂದು ದಾಳಿ (Dog Attack) ನಡೆಸಿದೆ. ಇದರ ಭಯಾನಕ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆವಾಸ್ ವಿಕಾಸ್ ಕಾಲೋನಿಯಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ 22 ವರ್ಷದ ಆಶಿಶ್ ಯಾದವ್ ಮೇಲೆ ನಾಯಿಯು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಿಬಿಎ ವಿದ್ಯಾರ್ಥಿಯಾಗಿರುವ ಆಶಿಶ್ ಯಾದವ್ ಅವರು ರಾತ್ರಿ 9.45ರ ಸುಮಾರಿಗೆ ಮನೆಯ ಹೊರಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ನಾಯಿ ಏಕಾಏಕಿ ಅವರ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದೆ.


ಆಶಿಶ್ ನಾಯಿಯನ್ನು ಹಿಮ್ಮೆಟ್ಟಿಸಲು ಮತ್ತು ಅದರ ಮೇಲೆ ಪ್ರತಿ ದಾಳಿ ನಡೆಸಲು ಪ್ರಯತ್ನಿಸಿದ್ದಾರೆ. ಆದರೆ ಅದು ಬೊಗಳುವುದು ಮತ್ತು ಕಚ್ಚುವುದನ್ನು ನಿಲ್ಲಿಸಲಿಲ್ಲ. ಆಶಿಶ್ ನೆಲಕ್ಕೆ ಬೀಳುತ್ತಿದ್ದಂತೆ ಅದು ಅವರ ಕಾಲಿಗೆ ಕಚ್ಚಿದೆ. ಅಲ್ಲದೇ ಜಿಗಿದು ಮುಖದ ಮೇಲೂ ಕಚ್ಚಿದೆ. ನಾಯಿಯ ದಾಳಿಯಿಂದ ಅವರ ಬಾಯಿ, ಕಣ್ಣು ಮತ್ತು ತುಟಿಗಳಿಂದ ರಕ್ತಸ್ರಾವವಾಗುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದಾದ ನಂತರ ಇನ್ನೊಂದು ಮನೆಯ ಗೇಟ್‌ ಬಳಿ ನಿಂತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿದ ನಾಯಿ ಆಕೆಯ ಕಾಲನ್ನು ಕಚ್ಚಿದೆ. ಇದರಿಂದ ಆಕೆಗೆ ಆಳವಾದ ಗಾಯವಾಗಿದ್ದು, ಹಲವಾರು ಹೊಲಿಗೆಗಳನ್ನು ವೈದ್ಯರು ಹಾಕಿದ್ದಾರೆ ಎನ್ನಲಾಗಿದೆ. ಅನಂತರ ಮನೆಯ ಹೊರಗೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರ ಮೇಲೂ ನಾಯಿ ದಾಳಿ ಮಾಡಿದೆ.

ಆಶಿಶ್ ಅವರನ್ನು ರೇಬಿಸ್ ಲಸಿಕೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ಔಷಧ ಖಾಲಿಯಾಗಿತ್ತು ಎಂದು ಆಶಿಶ್ ತಂದೆ ವಿಜಯ್ ಯಾದವ್ ಹೇಳಿದ್ದಾರೆ. ಬೀದಿ ನಾಯಿಗಳ ಹಾವಳಿ ಬಗ್ಗೆ ನಗರಸಭೆಗೆ ಮಾಹಿತಿ ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ ಎಂದು ನಾಯಿ ದಾಳಿಯಿಂದ ಗಾಯಗೊಂಡಿರುವ ಅನೇಕರು ದೂರಿದ್ದಾರೆ.

ಇದನ್ನೂ ಓದಿ: Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

ಈ ಕುರಿತು ಪ್ರತಿಕ್ರಿಯಿಸಿರುವ ಗೋರಖ್‌ಪುರದ ಹೆಚ್ಚುವರಿ ಮುನ್ಸಿಪಲ್ ಕಮಿಷನರ್ ದುರ್ಗೇಶ್ ಮಿಶ್ರಾ ಅವರು, ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದರು. ಬೀದಿ ನಾಯಿಗಳ ಸಂತಾನಹರಣ ಅಭಿಯಾನವನ್ನು ನಾವು ನಿಯಮಿತವಾಗಿ ನಡೆಸುತ್ತಿದ್ದೇವೆ. ಪ್ರಾಣಿ ಜನನ ನಿಯಂತ್ರಣ ಕೇಂದ್ರವನ್ನು ಸಹ ನಿರ್ಮಿಸಲಾಗುತ್ತಿದೆ. ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಚುಚ್ಚು ಮದ್ದು ನೀಡಲಾಗುತ್ತಿದೆ ಮತ್ತು ಸಾಕು ನಾಯಿಗಳಿಗೆ ಲಸಿಕೆ ಹಾಕಲು ನಾವು ಜಾಗೃತಿ ಅಭಿಯಾನವನ್ನು ನಡೆಸುತ್ತೇವೆ ಎಂದು ಹೇಳಿದರು.

Continue Reading

Latest

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

Murder Case: ಪಶ್ಚಿಮ ಬಂಗಾಳದಲ್ಲಿ 25 ವರ್ಷದ ಯುವತಿಯ ತಲೆ ಕಡಿದ ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟುಹಾಕಿದೆ. ಯುವತಿ ಬಾತ್‌ ರೂಮ್‌ಗೆ ಹೋಗಿ ಬರುತ್ತಿರುವುದಾಗಿ ಹೇಳಿ ಹೋಗಿದ್ದಳು. ನಂತರ ನಾಪತ್ತೆಯಾಗಿದ್ದಳು. ಈ ಪ್ರಕರಣ ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರುವ ಕೊಲೆ, ಹಿಂಸಾಚಾರ ಪ್ರಕರಣಕ್ಕೆ ಮತ್ತೊಂದು ಸೇರ್ಪಡೆಯಾದಂತಾಗಿದೆ.

VISTARANEWS.COM


on

Murder Case
Koo


ಒಂದು ಕಾಲದಲ್ಲಿ ಶಾಂತಿಯುತವಾದ ಗ್ರಾಮ ಎಂದು ಕರೆಸಿಕೊಂಡ ಶಕ್ತಿಗಢದ ನಾಡುರ್ ಝಪನತಾಲಾ ಆದಿವಾಸಿ ಪ್ಯಾರಾ ಎಂಬ ಗ್ರಾಮದಲ್ಲಿ (ಪಶ್ಚಿಮ ಬಂಗಾಲ) ಈಗ ಹಿಂಸಾಚಾರದ ಕೃತ್ಯಗಳೇ ನಡೆಯುತ್ತಿವೆ. ಈ ಗ್ರಾಮದಲ್ಲಿ 25 ವರ್ಷದ ಪ್ರಿಯಾಂಕಾ ಹನ್ಸ್ಡಾ ಎಂಬ ಯುವತಿಯ ತಲೆ ಕಡಿದ (Murder Case) ರಕ್ತಸಿಕ್ತ ದೇಹವು ಅವರ ಕುಟುಂಬದ ಹೊಲದಲ್ಲಿ ಪತ್ತೆಯಾಗಿದೆ. ಇದು ಅಲ್ಲಿನ ಜನರಲ್ಲಿ ಆಘಾತವನ್ನುಂಟು ಮಾಡಿದೆ. ಈ ಪ್ರದೇಶದ ಮಹಿಳೆಯರ ಸುರಕ್ಷತೆಯ ಬಗ್ಗೆ ಕಳವಳಗಳನ್ನು ಹುಟ್ಟು ಹಾಕಿದೆ.

ವರದಿ ಪ್ರಕಾರ, ಇತ್ತೀಚೆಗೆ ಬೆಂಗಳೂರಿನಿಂದ ಮನೆಗೆ ಮರಳಿದ್ದ ಪ್ರಿಯಾಂಕಾ, ಬಾತ್‍ರೂಂಗೆ ಹೋಗುತ್ತಿರುವುದಾಗಿ ಕುಟುಂಬದವರಿಗೆ ತಿಳಿಸಿದ್ದಳು. ನಂತರ ನಾಪತ್ತೆಯಾಗಿದ್ದಳು. ಅವಳು ಹಿಂತಿರುಗಿ ಬರದಿದ್ದಾಗ, ಚಿಂತೆಗೀಡಾದ ಅವಳ ತಾಯಿ ಅವಳನ್ನು ಹುಡುಕಲು ಪ್ರಾರಂಭಿಸಿದರು. ಆದರೆ ಪ್ರಿಯಾಂಕಾ ಅವಳ ನಿರ್ಜೀವ ದೇಹವು ಕುಟುಂಬದವರ ಹೊಲದಲ್ಲೇ ಬಿದ್ದಿತ್ತು. ಅವಳ ಕುತ್ತಿಗೆಯನ್ನು ಕತ್ತರಿಸಲಾಗಿತ್ತು. ಈ ಭಯಾನಕ ದೃಶ್ಯವು ಅವಳ ಕುಟುಂಬವನ್ನು ಆಘಾತಕ್ಕೀಡುಮಾಡಿದೆ. ಈ ಬಗ್ಗೆ ಅವಳ ಸಮುದಾಯವು ಆಕ್ರೋಶಗೊಂಡಿದೆ.

ಸ್ಥಳೀಯ ಪೊಲೀಸರು ಈ ಪ್ರಕರಣದ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಕ್ರೂರ ದಾಳಿಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾದಂತಾಗಿದೆ. ಅಪರಾಧಿಗಳನ್ನು ಕೂಡಲೇ ಕಂಡುಹಿಡಿದು ಶಿಕ್ಷಿಸುವಂತೆ ಜನಾಗ್ರಹ ಕೇಳಿ ಬರುತ್ತಿದೆ. ಪ್ರಿಯಾಂಕಾ ಅವರ ಹತ್ಯೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳೆಯರನ್ನು ರಕ್ಷಿಸುವ ಮಮತಾ ಬ್ಯಾನರ್ಜಿ ಅವರ ರಾಜ್ಯ ಸರ್ಕಾರದ ಬದ್ಧತೆಯನ್ನು ಜನರು ಪ್ರಶ್ನಿಸುತ್ತಿದ್ದಾರೆ.

ಈ ನಡುವೆ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಅವಳು ಕೊನೆಯದಾಗಿ ಚಾಟ್ ಮಾಡಿದ ಮತ್ತು ಅವಳು ಮನೆಯಿಂದ ಹೊರಟಾಗ ಕರೆ ಮಾಡಿದ ಜನರನ್ನು ಪತ್ತೆ ಹಚ್ಚಿದ್ದಾರೆ. ಜಿಲ್ಲಾ ಪೊಲೀಸರ ಅಧಿಕಾರಿಗಳ ಪ್ರಕಾರ, ಮನೆಯಿಂದ ಹೊರಡುವ ಮೊದಲು ಸಂತ್ರಸ್ತೆಗೆ ಬಂದ ಕರೆ ಅವಳಿಗೆ ಚೆನ್ನಾಗಿ ತಿಳಿದಿರುವ ವ್ಯಕ್ತಿಯಿಂದ ಬಂದಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

ಆಗಸ್ಟ್ 12ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಕ್ರೂರ ಸಾವಿನ ಬಗ್ಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ. ವೈದ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ. ಕೋಲ್ಕತಾ ಹೈಕೋರ್ಟ್‍ನ ಆದೇಶದ ಮೇರೆಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಯನ್ನು ವಹಿಸಿಕೊಂಡಿದೆ.

Continue Reading
Advertisement
Rishabh Pant
ಕ್ರಿಕೆಟ್3 mins ago

Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​

Physical abuse
ಬೆಂಗಳೂರು12 mins ago

Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

P Susheela hospitalized Legendary playback singer
ಸ್ಯಾಂಡಲ್ ವುಡ್12 mins ago

P Susheela: ಖ್ಯಾತ ಗಾಯಕಿ ಪಿ. ಸುಶೀಲಾ ಆಸ್ಪತ್ರೆಗೆ ದಾಖಲು

Gold Rate Today
ಚಿನ್ನದ ದರ29 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Bigg boss Hindi list of contestants
ಬಿಗ್ ಬಾಸ್36 mins ago

Bigg boss Hindi: ಬಿಗ್ ಬಾಸ್ 18ರ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ; ಯಾವಾಗಿಂದ ಶುರು? 

karnataka weather Forecast
ಮಳೆ46 mins ago

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

TNIT Media Awards
ಕರ್ನಾಟಕ48 mins ago

TNIT Media Award : ವಿಸ್ತಾರ ನ್ಯೂಸ್​​ಗೆ ಟಿಎನ್​ಐಟಿ ಸೌತ್ ಇಂಡಿಯಾ ಮೀಡಿಯಾ ಅವಾರ್ಡ್ಸ್​​ನ 3 ಪ್ರಶಸ್ತಿಗಳ ಗರಿ

ಕ್ರೀಡೆ56 mins ago

WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸಬೇಕಿದ್ದರೆ ಭಾರತಕ್ಕೆ ಇನೆಷ್ಟು ಗೆಲುವು ಬೇಕು?

Doctors Strike
ದೇಶ1 hour ago

Doctors Strike: ನಾವು ಮುಂದಿನ ಸಂತ್ರಸ್ತರಾಗಲು ಬಯಸುವುದಿಲ್ಲ; ಪ್ರತಿಭಟನಾನಿರತ ವೈದ್ಯರ ಕಿಡಿನುಡಿ

Dina Bhavishya
ಭವಿಷ್ಯ1 hour ago

Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌