Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ? - Vistara News

ಕ್ರೈಂ

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಇದಕ್ಕಾಗಿ ಕೆಲವು ಸಲಹೆಗಳು (Driving Tips) ಇಲ್ಲಿವೆ.

VISTARANEWS.COM


on

Driving Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಮಿಳುನಾಡಿನಲ್ಲಿ (tamilnadu) ಇತ್ತೀಚೆಗೆ ನಡೆದ ಭೀಕರ ರಸ್ತೆ (Driving Tips) ಅಪಘಾತದಲ್ಲಿ (Road Accident) ಐದು ಮಂದಿ (five death) ಸಾವನ್ನಪ್ಪಿದ್ದರು. ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು (car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ಐವರು ಪುದುಚೇರಿಯಿಂದ ಹಿಂತಿರುಗುತ್ತಿದ್ದಾಗ ಕಲಾಪಕ್ಕಂನಲ್ಲಿ ಈ ಅಪಘಾತ ಸಂಭವಿಸಿತ್ತು. ಗೋವಾದಲ್ಲಿ (goa) ನಡೆದ ಮತ್ತೊಂದು ಘಟನೆಯಲ್ಲಿ ಮುಖ್ಯರಸ್ತೆಯಲ್ಲಿ ಹಸು ಹಠಾತ್ ಕಾಣಿಸಿಕೊಂಡಿದ್ದರಿಂದ ಕಾರಿಗೆ ಭಾರಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ನೀವು ಕಾರನ್ನು ಓಡಿಸುತ್ತಿದ್ದರೆ ಮತ್ತು ಇದ್ದಕ್ಕಿದ್ದಂತೆ ಪ್ರಾಣಿಯು ನಿಮ್ಮ ಮುಂದೆ ಬಂದರೆ ನೀವು ಈ ಕೆಳಗಿನ ಸಲಹೆಗಳನ್ನು ಅನುಸರಿಸಬಹುದು.


1. ವೇಗದ ಮಿತಿಯಲ್ಲಿ ಚಾಲನೆ

ಅತಿ ವೇಗವಾಗಿ ವಾಹನ ಓಡಿಸುವುದು ಸರಿಯಲ್ಲ. ಇದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ವೇಗದ ವಾಹನ ಚಾಲನೆಗೆ ನಿಯಂತ್ರಣ ಹೇರಿ. ವಿಶೇಷವಾಗಿ ರಸ್ತೆಗಳಲ್ಲಿ ಪ್ರಾಣಿಗಳ ಸಾಧ್ಯತೆಗಳಿರುವ ಪ್ರದೇಶಗಳಲ್ಲಿ ನಿಧಾನವಾಗಿ ವಾಹನ ಚಲಾಯಿಸಿ.

2. ಶಾಂತವಾಗಿರಿ

ಭಯಭೀತರಾಗಬೇಡಿ ಅಥವಾ ಹಠಾತ್ ಚಲನೆಯನ್ನು ಮಾಡಬೇಡಿ. ಅದು ಪ್ರಾಣಿಗಳನ್ನು ಗಾಬರಿಗೊಳಿಸಬಹುದು ಅಥವಾ ನಿಮ್ಮ ಕಾರಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಬಹುದು.

3. ನಿಧಾನಗೊಳಿಸಿ

ಪ್ರಾಣಿಗಳು ಹಠಾತ್ ಎದುರು ಬಂದಾಗ ವೇಗವನ್ನು ತಕ್ಷಣವೇ ಆದರೆ ಕ್ರಮೇಣ ಕಡಿಮೆ ಮಾಡಿ. ಬ್ರೇಕ್‌ಗಳ ಮೇಲೆ ಸ್ಲ್ಯಾಮ್ ಮಾಡುವುದನ್ನು ತಪ್ಪಿಸಿ, ಇದು ನಿಮ್ಮ ಕಾರನ್ನು ಸ್ಕಿಡ್ ಮಾಡಲು ಕಾರಣವಾಗಬಹುದು.

4. ಹಾರ್ನ್ ಬಳಸಿ

ಪ್ರಾಣಿಗಳು ಮತ್ತು ನಿಮ್ಮ ವಾಹನ ಬರುತ್ತಿರುವುದನ್ನು ಇತರ ಚಾಲಕರು ಗಮನ ಹರಿಸುವಂತೆ ಎಚ್ಚರಿಸಲು ವಾಹನದಲ್ಲಿರುವ ಹಾರ್ನ್ ಅನ್ನು ಸದ್ದು ಮಾಡುತ್ತ ಚಲಾಯಿಸಿ.

5. ಏಕಾಏಕಿ ತಿರುಗಿಸಬೇಡಿ

ರಸ್ತೆಯಲ್ಲಿ ವಾಹನವನ್ನು ನೇರವಾಗಿ ಚಲಿಸಲು ಪ್ರಯತ್ನಿಸಿ ಮತ್ತು ಹಠಾತ್ ವಾಹನ ತಿರುಗಿಸಬೇಡಿ. ವಿಶೇಷವಾಗಿ ಹತ್ತಿರದಲ್ಲಿ ಇತರ ವಾಹನಗಳು ಇದ್ದಲ್ಲಿ ಸ್ಟೇರಿಂಗ್ ನಿಯಂತ್ರಣ ಕಷ್ಟವಾದಾಗ ಇತರ ವಸ್ತು ಅಥವಾ ವಾಹನಕ್ಕೆ ಡಿಕ್ಕಿಯಾಗಬಹುದು.

6. ವಾಹನದ ಲೈಟ್‌ಗಳನ್ನು ಫ್ಲ್ಯಾಶ್ ಮಾಡಿ

ಕತ್ತಲೆಯಾಗಿದ್ದರೆ ಅಥವಾ ಗೋಚರತೆ ಕಡಿಮೆಯಿದ್ದರೆ ಪ್ರಾಣಿಗಳು ಮತ್ತು ಇತರ ಚಾಲಕರಿಗೆ ನೀವು ಹೆಚ್ಚು ಗೋಚರಿಸುವಂತೆ ಮಾಡಲು ನಿಮ್ಮ ಕಾರಿನ ಹೆಡ್‌ಲೈಟ್‌ಗಳು ಮತ್ತು ಅಪಾಯದ ದೀಪಗಳನ್ನು ಬೆಳಗಿಸಿ.

ಇದನ್ನೂ ಓದಿ: Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

7. ಪ್ರಾಣಿಗಳು ಹೋಗಲು ಜಾಗ ಬಿಡಿ

ಸಾಧ್ಯವಾದರೆ ಪ್ರಾಣಿಗೆ ರಸ್ತೆಯಿಂದ ದೂರ ಸರಿಯಲು ಸಾಕಷ್ಟು ಜಾಗವನ್ನು ನೀಡಿ. ಅದನ್ನು ಬಲವಂತವಾಗಿ ಅಥವಾ ಹತ್ತಿರ ಹೋಗಲು ಪ್ರಯತ್ನಿಸಬೇಡಿ.

8. ಸಿದ್ಧರಾಗಿರಿ

ಪ್ರಯಾಣ ಮಾಡುವಾಗ ಯಾವಾಗಲೂ ಸುತ್ತಮುತ್ತಲಿನ ಬಗ್ಗೆ ತಿಳಿದುಕೊಂಡಿರಿ. ವಿಶೇಷವಾಗಿ ಪ್ರಾಣಿಗಳು ಮುಕ್ತವಾಗಿ ತಿರುಗಾಡಲು ತಿಳಿದಿರುವ ಪ್ರದೇಶಗಳಲ್ಲಿ ಚಾಲನೆ ಮಾಡುವಾಗ ಜಾನುವಾರುಗಳ ಉಪಸ್ಥಿತಿಯನ್ನು ಸೂಚಿಸುವ ಎಚ್ಚರಿಕೆ ಚಿಹ್ನೆಗಳು ಅಥವಾ ಸಂಕೇತಗಳನ್ನು ಗಮನಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Road Accident : ಅತಿ ವೇಗ ಚಾಲನೆಯು ಬೈಕ್‌ ಸವಾರರಿಬ್ಬರ ಪ್ರಾಣವನ್ನೇ ಕಸಿದಿದೆ. ನಿಂತಿದ್ದ ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಮತ್ತೊಂದು ಕಡೆ ಬೈಕ್‌ ಸ್ಕಿಡ್‌ ಆಗಿ ಮತ್ತೊಬ್ಬ ಸವಾರನ ಪ್ರಾಣಪಕ್ಷಿ ಹಾರಿಹೋಗಿದೆ.

VISTARANEWS.COM


on

By

Road Accident
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್‌ ಸವಾರರು ರಸ್ತೆ ಅಪಘಾತದಲ್ಲಿ (Road Accident ) ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜರ್ನಾಧನ (25) ಮೃತ ದುರ್ದೈವಿ.

ತಡರಾತ್ರಿ 2.30ರ ಸಮಯಕ್ಕೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಜರ್ನಾಧನ ರಸ್ತೆ ಬದಿ ನಿಂತಿದ್ದ ಕಾಂಕ್ರೀಟ್ ಮಿಕ್ಸಿಂಟ್ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಹಾರಿ ಕೆಳಗೆ ಬಿದ್ದ ಜರ್ನಾಧನನ ತಲೆಗೆ ಗಂಭೀರ ಪೆಟ್ಟಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜನಾರ್ಧನನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಬೆಂಗಳೂರಿನ ಮುತ್ಯಾಲ ನಗರ ನಿವಾಸಿಯಾಗಿರುವ ಜರ್ನಾಧನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Self Harming : ಸಾಲದ ಸುಳಿಗೆ ಸಿಲುಕಿ ಯುವಕನೊರ್ವ ಡೆತ್‌ನೋಟ್‌ (Death note) ಬರೆದಿಟ್ಟು, ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್‌ ಬರೆದಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಮೈಸೂರು: ಸಾಲಬಾಧೆಗೆ ಹೆದರಿದ ಯುವಕನೊರ್ವ ಆತ್ಮಹತ್ಯೆಗೆ (Self Harming) ಶರಣಾಗಿದ್ದಾನೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಘಟನೆ ನಡೆದಿದೆ. ಯತೀಕ್ (25) ಮೃತ ದುರ್ದೈವಿ.

ಕೆಆರ್‌ ತಾಲೂಕಿನ ಹೆಬ್ಬಾಳು ಕೊಪ್ಪಲು ಗ್ರಾಮದ ನಿವಾಸಿಯಾದ ಯತೀಕ್‌ ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಮನೆಯಲ್ಲಿ ಹಣಕಾಸಿನ ಸಮಸ್ಯೆ ಎಂದು ಕ್ರೆಡಿಟ್ ಕಾರ್ಡ್ ಜತೆಗೆ ಸಾಲ ಪಡೆದಿದ್ದ.

ಸಾಲ ತೀರಿಸಲು ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಯತೀಕ್‌, ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಷೇರು ಮಾರ್ಕೆಟ್‌ನಲ್ಲೂ ಹಣ ಹೂಡಿಕೆ ಮಾಡಿದ್ದ. ಆದರೆ ಮಾಡಿದ್ದ ಸಾಲಕ್ಕೆ ಇಎಂಐ ಕಟ್ಟಲು ಸಾಧ್ಯವಾಗದೆ ಮನನೊಂದಿದ್ದ. ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಡೆತ್ ನೋಟ್‌ ಬರೆದಿದ್ದಾನೆ.

ಇತ್ತ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ತಂದೆ ಎಚ್ ಟಿ ರಮೇಶ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

ದೊಡ್ಡಬಳ್ಳಾಪುರ: ಸಾಲ ಮಾಡಿ ಬಡ್ಡಿ ಕಟ್ಟಲಾಗದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪರ್ವೀಜ್ ಪಾಷ (38) ಆತ್ಮಹತ್ಯೆಗೆ ಶರಣಾದವರು.

ದೊಡ್ಡಬಳ್ಳಾಪುರ ನಗರದ ರೋಜಿಪುರ ಬಡಾವಣೆಯ ನಿವಾಸಿಯಾದ ಪರ್ವೀಜ್ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಕ್ಯಾನಿಕ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪರ್ವೀಜ್‌ ಈ ಹಿಂದೆ ಹಲವು ವ್ಯಕ್ತಿಗಳ ಬಳಿ ಬಡ್ಡಿಗೆ ಸಾಲ ಪಡೆದಿದ್ದ. ಸಾಲಗಾರರ ಕಾಟ ತಡೆಯಲಾರದೇ ಮನನೊಂದಿದ್ದ.

ಸಾಲ ತೀರಿಸಲು ದಿಕ್ಕು ದೋಚದೆ ಮೂರು ದಿನ ಊಟ ಬಿಟ್ಟಿದ್ದ. ನಂತರ ಅಂಗಡಿ ಮುಂದೆ ಸಾಲಗಾರರ ಕಾಟ ಹೆಚ್ಚಾದಾಗ ಕಳೆದ ಭಾನುವಾರ ಮನೆಗೆ ಬಂದವರೇ ಇಲಿ ಪಾಷಣ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪರ್ವೀಜ್‌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಪರ್ವೀಜ್‌ ಸಾವನ್ನಪ್ಪಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Self harming

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೋಜಿಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Physical Abuse : 6 ವರ್ಷದ ಪುಟ್ಟ ಬಾಲಕಿಯನ್ನು ಮನೆಗೆ ಕರೆದೊಯ್ದ 17 ವರ್ಷದ ಬಾಲಕ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ನರಳಾಟ ಕಂಡು ಪೋಷಕರು ಗಮನಿಸಿದಾಗ ತೀವ್ರ ರಕ್ತಸ್ರಾವವಾಗಿರುವುದು ಕಂಡಿದೆ. ಆಕೆಯನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

VISTARANEWS.COM


on

By

Physical Abuse
ಸಾಂದರ್ಭಿಕ ಚಿತ್ರ
Koo

ಚಿಕ್ಕಬಳ್ಳಾಪುರ: ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಕರೆದೊಯ್ದ 17 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ (Physical Abuse ) ಎಸಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಒಬ್ಬಳೇ ಆಟವಾಡುತ್ತಿದ್ದನ್ನು ಗಮನಿಸಿದ 17ರ ಪೋರ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿದ್ದಾನೆ. ತಿಂಡಿ ಆಸೆಗೆ ಆತನೊಂದಿಗೆ ಬಾಲಕಿ ಹೋಗಿದ್ದಾಳೆ. ಆದರೆ ಅಂಗಡಿ ಕರೆದುಕೊಂಡು ಹೋಗದೇ ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ವಾಪಸ್‌ ಬಾಲಕಿಯನ್ನು ಕಳಿಸಿದ್ದಾನೆ.

ಆದರೆ ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಗಮನಿಸಿದ ಪೋಷಕರು ವಿಚಾರಿಸಿದ್ದಾರೆ. ಆಗ ಈ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ಬಾಲಕಿ ಪೋಷಕರು ದೂರು ನೀಡಿದ್ದು, ಅತ್ಯಾಚಾರವೆಸಗಿದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

ಮೃತ್ಯುಕೂಪವಾದ ಎನ್‌ಎಚ್‌ 50 ರಸ್ತೆ

ವಿಜಯನಗರದ ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯುಕೂಪವಾಗಿ (Road Accident) ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ.

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕತ್ತು ಕೊಯ್ದರೂ ಬದುಕುಳಿದ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿ ಕುಡಿದು ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಕುಡಿದ ಅಮಲಿನಲ್ಲಿ ತೃತೀಯ ಲಿಂಗಿ ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ತೃತೀಯ ಲಿಂಗಿ ಮತ್ತು ವ್ಯಕ್ತಿಯೊಬ್ಬ ಸೇರಿ ಕತ್ತು ಕೊಯ್ದರೂ ಅದೃಷ್ಟವಶಾತ್‌ ನೌಷದ್ ಎನ್ನುವ ವ್ಯಕ್ತಿ ಬದುಕುಳಿದಿದ್ದಾನೆ.

ಆರೋಪಿಗಳಾದ ಶಕೀಲ ಹಾಗೂ ಸಾದಿಕ್.

ಘಟನೆ ಹಿನ್ನಲೆ

ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿಯ ಬಾರ್‌ನಲ್ಲಿ ಕುಡಿದು ಗ್ಯಾಂಗ್ ಗಲಾಟೆ ಮಾಡಿಕೊಂಡಿತ್ತು. ಈ ವೇಳೆ ಮಂಗಳಮುಖಿ ಶಕೀಲ ಹಾಗೂ ಸಾದಿಕ್ ಸೇರಿ ನೌಷದ್ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದರು. ಅವರು ಹರಿತವಾದ ಚಾಕುವಿನಿಂದ ನೌಷದ್ ಕತ್ತು ಕೊಯ್ದಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸದ್ಯ ನೌಷದ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆ ಯತ್ನ ನಡೆಸಿದ ಶಕೀಲ ಹಾಗು ಸಾದಿಕ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

Road Accident: ವಿಜಯನಗರದ ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

VISTARANEWS.COM


on

Road Accident
Koo

ವಿಜಯನಗರ: ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ (Road Accident).

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯತ್ನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿ ಕುಡಿದು ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಕುಡಿದ ಅಮಲಿನಲ್ಲಿ ತೃತೀಯ ಲಿಂಗಿ ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ತೃತೀಯ ಲಿಂಗಿ ಮತ್ತು ವ್ಯಕ್ತಿಯೊಬ್ಬ ಸೇರಿ ಕತ್ತು ಕೊಯ್ದರೂ ಅದೃಷ್ಟವಶಾತ್‌ ನೌಷದ್ ಎನ್ನುವ ವ್ಯಕ್ತಿ ಬದುಕುಳಿದಿದ್ದಾನೆ.

ಆರೋಪಿಗಳಾದ ಶಕೀಲ ಹಾಗೂ ಸಾದಿಕ್.

ಘಟನೆ ಹಿನ್ನಲೆ

ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿಯ ಬಾರ್‌ನಲ್ಲಿ ಕುಡಿದು ಗ್ಯಾಂಗ್ ಗಲಾಟೆ ಮಾಡಿಕೊಂಡಿತ್ತು. ಈ ವೇಳೆ ಮಂಗಳಮುಖಿ ಶಕೀಲ ಹಾಗೂ ಸಾದಿಕ್ ಸೇರಿ ನೌಷದ್ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದರು. ಅವರು ಹರಿತವಾದ ಚಾಕುವಿನಿಂದ ನೌಷದ್ ಕತ್ತು ಕೊಯ್ದಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸದ್ಯ ನೌಷದ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆ ಯತ್ನ ನಡೆಸಿದ ಶಕೀಲ ಹಾಗು ಸಾದಿಕ್‌ನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

Continue Reading
Advertisement
Mann Ki Baat
ದೇಶ5 mins ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Road Accident
ಬೆಂಗಳೂರು10 mins ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Hardik Pandya
ಕ್ರೀಡೆ11 mins ago

Hardik Pandya: ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಕರೆ ಮಾಡಿದ್ದು ಯಾರಿಗೆ?; ನೆಟ್ಟಿಗರ ಉತ್ತರವೇನು?

Kamal Haasan on limited screen time in 'Kalki 2898 AD
ಟಾಲಿವುಡ್31 mins ago

Kamal Haasan: ನನ್ನ ಪಾತ್ರ ಚಿಕ್ಕದಿರಬಹುದು ಆದರೆ ಇದು ಆರಂಭವಷ್ಟೇ ಎಂದು ಕಲ್ಕಿ ಭಾಗ- 2ರ ಸುಳಿವು ಕೊಟ್ಟ ಕಮಲ್‌ ಹಾಸನ್‌!

T20 World Cup 2024
ಕ್ರೀಡೆ35 mins ago

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Self Harming
ಮೈಸೂರು41 mins ago

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Jay Shah Promise
ಪ್ರಮುಖ ಸುದ್ದಿ53 mins ago

Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

snake Bite
ಕಲಬುರಗಿ1 hour ago

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

T20 World Cup 2024 prize money
ಕ್ರೀಡೆ1 hour ago

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

Text Book
ಕರ್ನಾಟಕ1 hour ago

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ20 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌