Site icon Vistara News

ಸುರತ್ಕಲ್‌ನಲ್ಲಿ ಫಾಜಿಲ್‌ ಹತ್ಯೆ ಪ್ರಕರಣ: ಎಲ್ಲ ಆರೋಪಿಗಳ ಬಂಧನ

ಫಾಜಿಲ್‌

ಮಂಗಳೂರು: ಸುರತ್ಕಲ್‌ನಲ್ಲಿ ಫಾಜಿಲ್‌ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ದಾಳಿ ನಡೆಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ ೫ಕ್ಕೆ ಏರಿದೆ.
ನಿನ್ನೆ ತಡರಾತ್ರಿ ಎಲ್ಲಾ ಆರೊಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಗೆ ಆರೋಪಿಗಳನ್ನು ಕರೆತರಲಾಗಿದೆ.

ಹಿಂದೂ ಸಂಘಟನೆ ಕೈವಾಡ?: ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ‌ನೆಟ್ಟಾರು ಅವರ ಹತ್ಯೆಯ ಪ್ರತೀಕಾರಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಫಾಜಿಲ್‌ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಪರ ಎನ್ನಲಾಗಿರುವ ಸಂಘಟನೆಯ ‌ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರತೀಕಾರಕ್ಕಾಗಿ ಮೂರು ತಂಡ ರಚಿಸಿದ್ದರು. ಅದರಲ್ಲಿ ಒಂದು ತಂಡದಿಂದ ಫಾಜಿಲ್‌ ಹತ್ಯೆಯಾಗಿದೆ ಎನ್ನಲಾಗಿದೆ.

ಪೊಲೀಸರು ಫಾಜಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಂತಕರು ಬಳಸಿದ್ದ ಕಾರಿನ ಮಾಲೀಕರನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಫಾಜಿಲ್ ಹತ್ಯೆಗೆ ಬಳಸಿದ್ದ ಇಯಾನ್‌ ಕಾರು ಪತ್ತೆ: ಸ್ಥಳಕ್ಕೆ ದೌಡಾಯಿಸಿದ ಪೊಲೀಸರು

Exit mobile version