Fraud Case : ನಕಲಿ RAW ಅಧಿಕಾರಿ ಅರೆಸ್ಟ್‌; ಆ ವಿದ್ಯಾರ್ಥಿಯಲ್ಲಿತ್ತು ಹಲವು ಐಡಿ ಕಾರ್ಡ್‌, ಪೊಲೀಸ್‌ ಯುನಿಫಾರ್ಮ್‌! - Vistara News

ಕರ್ನಾಟಕ

Fraud Case : ನಕಲಿ RAW ಅಧಿಕಾರಿ ಅರೆಸ್ಟ್‌; ಆ ವಿದ್ಯಾರ್ಥಿಯಲ್ಲಿತ್ತು ಹಲವು ಐಡಿ ಕಾರ್ಡ್‌, ಪೊಲೀಸ್‌ ಯುನಿಫಾರ್ಮ್‌!

Fraud Case : ಅವನೊಬ್ಬ ಕಾಲೇಜು ವಿದ್ಯಾರ್ಥಿ. ಆದರೆ, ಒಮ್ಮೆ ರಾ ಏಜೆಂಟ್‌, ಇನ್ನೊಮ್ಮೆ ಕೃಷಿ ಅಧಿಕಾರಿ, ಮಗದೊಮ್ಮೆ ಪೊಲೀಸ್‌ ಅಧಿಕಾರಿ ಆಗುತ್ತಿದ್ದ. ಇದೀಗ ಈ ವಂಚಕ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ.

VISTARANEWS.COM


on

Fake RAW Agent arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭದ್ರತಾ ಕಣ್ಗಾವಲು ಇಡುವ ʻರಾʼ ಸಂಘಟನೆ (RAW – Research and Analysis wing) ಹೆಸರು ಕೇಳಿದರೆ ಸೇನೆಯ ಹೆಸರು ಕೇಳಿದಷ್ಟೇ ಹೆಮ್ಮೆ ಮೂಡುತ್ತದೆ. ಯಾಕೆಂದರೆ, ಇದು ಬಾಹ್ಯ ಶಕ್ತಿಗಳು ನಡೆಸುತ್ತಿರುವ ಎಲ್ಲ ಸಂಚುಗಳ ಮೇಲೆ ಕಣ್ಣಿಟ್ಟು ಅದನ್ನು ವಿಫಲಗೊಳಿಸುವ ಕೆಲಸವನ್ನು ಮಾಡುತ್ತಿದೆ. ಆದರೆ, ಇಲ್ಲೊಬ್ಬ ಭಂಡ ವಿದ್ಯಾರ್ಥಿ (Student acting as RAW Agent) ಇಂಥ ಗೌರವಾನ್ವಿತ ಸಂಸ್ಥೆಯ ಹೆಸರು ಹೇಳಿಕೊಂಡು ವಂಚನೆ (Fraud Case) ನಡೆಸುತ್ತಿದ್ದು, ಈಗ ಸಿಕ್ಕಿ ಬಿದ್ದಿದ್ದಾನೆ.

ಮಂಗಳೂರಿನಲ್ಲಿ ನರ್ಸಿಂಗ್‌ ವಿದ್ಯಾರ್ಥಿಯಾಗಿರುವ ಕೇರಳದ ಇಡುಕ್ಕಿ ಮೂಲದ ಬೆನೆಡಿಕ್ಟ್‌ ಸಾಬು (24) ಎಂಬಾತನೇ ಈ ರೀತಿ ವಂಚನೆ ಮಾಡಿ ಬಂಧನಕ್ಕೆ ಒಳಗಾದವನು (Fake Raw Agent). ಮಂಗಳೂರಿನ ಯುನಿಟಿ ನರ್ಸಿಂಗ್ ಕಾಲೇಜಿನನಲ್ಲಿ ವಿದ್ಯಾರ್ಥಿಯಾಗಿರುವ ಈತ 6 ತಿಂಗಳ ಹಿಂದಷ್ಟೇ ನರ್ಸಿಂಗ್ ಕಾಲೇಜಿನ ಜಿಎನ್ಎಂ ಕೋರ್ಸ್‌ಗೆ ಸೇರಿದ್ದ.

Fake RAW Agent

ಈತ ಎಷ್ಟೊಂದು ಖತರ್ನಾಕ್‌ ಇದ್ದಾನೆಂದರೆ ತಾನೊಬ್ಬ ರಾ ಅಧಿಕಾರಿ ಎಂದು ನಕಲಿ ಐಡಿ ಮಾಡಿಕೊಂಡಿದ್ದ. ಅದನ್ನು ಬೇರೆ ಬೇರೆಯವರಿಗೆ ತೋರಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದ. ಈ ಮಾಹಿತಿಗಳನ್ನು ಆತ ದುರುಪಯೋಗ ಮಾಡಿಕೊಂಡಿದ್ದಾನೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.

ನಿಜವೆಂದರೆ ಈಗ ಒಬ್ಬ ಪಕ್ಕಾ ವಂಚಕ. ಆತ ಒಂದು ಕಾಲೇಜಿನ ಪ್ರಿನ್ಸಿಪಾಲ್‌ಗೆ ತಾನೊಬ್ಬ ಅಗ್ರಿಕಲ್ಚರ್‌ ಅಧಿಕಾರಿ ಎಂದು ಪರಿಚಯ ಮಾಡಿಕೊಂಡು ಮಾತುಕತೆ ನಡೆಸಿದ್ದ. ಇನ್ನೊಬ್ಬರ ಜತೆ ಕೇರಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಎಂದು ಹೇಳಿ ಕೊಂಡಿದ್ದ.

ಡ್ರಗ್‌ ಜಾಗೃತಿ ಕಾರ್ಯಕ್ರಮದಲ್ಲಿ ಬಂಡವಾಳ ಬಯಲು

ಬೆನೆಡಿಕ್ಟ್‌ ಸಾಬು ನಾನಾ ಕಾರ್ಯಕ್ರಮಗಳಿಗೆ ಹೋಗಿ ತನ್ನನ್ನು ಅಧಿಕಾರಿ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದ. ಅಧಿಕಾರಿಗಳನ್ನು ಪರಿಚಯ ಮಾಡಿಕೊಳ್ಳುತಿದ್ದ. ಇತ್ತೀಚೆಗೆ ಒಂದು ಡ್ರಗ್‌ ಜಾಗೃತಿ ಕಾರ್ಯಕ್ರಮ ನಡೆದಿತ್ತು. ಅದರಲ್ಲಿ ಈತನ ಎಲ್ಲ ಬಂಡವಾಳ ಬಯಲಾಗಿದೆ.

ಅಲ್ಲಿಗೆ ಹೋಗಿದ್ದ ಆತ ಅಲ್ಲಿನ ಪೊಲೀಸ್‌ ಆಫೀಸರ್‌ಗಳ ಜತೆ ನಾನೊಬ್ಬ ಸದ್ಯ RAW ಫೀಲ್ಡ್ ಏಜೆಂಟ್ ಆಗಿ ಇರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದ. ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಮಾತನಾಡಿದ ಆತ ಅವರ ಜತೆ ದೊಡ್ಡ ಅಧಿಕಾರಿಯಂತೆ ಚರ್ಚೆ ಮಾಡಿದ್ದ.

ಕೆಲವು ಅಧಿಕಾರಿಗಳು ತುಂಬ ಭಕ್ತಿ ಭಾವದಿಂದ ಅವನೊಂದಿಗೆ ನಡೆದುಕೊಂಡಿದ್ದರು. ಆದರೆ, ಕೆಲವರಿಗೆ ಆತನ ಬಗ್ಗೆ ಸಂಶಯ ಬಂದಿತ್ತು. ಕೂಡಲೇ ಉರ್ವ ಪೊಲೀಸರು ಆತನನ್ನು ಕರೆಸಿಕೊಂಡು ಆತನ ಹಿನ್ನೆಲೆಯಲ್ಲಿ ವಿಚಾರಿಸಿದರು. ಮೊದಲು ರಾ ಏಜೆಂಟ್‌ ಎಂಬಂತೆಯೇ ಗೌರವಪೂರ್ವಕವಾಗಿ ಮಾತನಾಡಿದ ಅವರು, ಆತನ ಎಲ್ಲ ವಿಚಾರಗಳನ್ನು ತಿಳಿದುಕೊಂಡರು.

ಆದರೆ, ಏನೇ ಕೇಳಿದರೂ ಅತ್ಯಂತ ಕರಾರುವಕ್ಕಾಗಿ ವಿವರಣೆ ನೀಡುತ್ತಿದ್ದ ಆತನನ್ನು ಇನ್ನಷ್ಟು ಅಡ್ಡಾದಿಡ್ಡಿ ಪ್ರಶ್ನೆಗಳಿಗೆ ಒಳಪಡಿಸಿದಾಗ ಆತ ತನ್ನ ಮೂಲವನ್ನು ಬಿಚ್ಚಿಟ್ಟ. ಕೊನೆಗೆ ಆತ ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳ ನಕಲಿ ಗುರುತು ಚೀಟಿ ಮಾಡಿಕೊಂಡು ವಂಚನೆ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

ಇವನು ಕೇವಲ ಪೊಲೀಸ್‌ ಅಧಿಕಾರಿ, ಕೃಷಿ ಅಧಿಕಾರಿ, ರಾ ಏಜೆಂಟ್‌ ಎಂದೆಲ್ಲ ಹೇಳಿಕೊಂಡು ತಿರುಗುತ್ತಿದ್ದುದಲ್ಲ. ಬದಲಾಗಿ ಎಲ್ಲ ಹುದ್ದೆಗಳಿಗೆ ಸೂಕ್ತವಾದ ನಕಲಿ ಐಡಿ ಕಾರ್ಡ್‌, ವಿಸಿಟಿಂಗ್‌ ಕಾರ್ಡ್‌ ಬಳಸುತ್ತಿದ್ದ. ಆತ ಪೊಲೀಸ್‌ ಅಧಿಕಾರಿಗಳ ಸಮವಸ್ತ್ರವನ್ನು ಕೂಡಾ ಹೊಲಿಸಿಕೊಂಡಿದ್ದ.

ಇದನ್ನೂ ಓದಿ : Fraud Case: ಷೇರು ಮಾರುಕಟ್ಟೆ ಲಾಭದ ಆಸೆ ತೋರಿಸಿ ಬೆಂಗಳೂರಿನಲ್ಲಿ ಜನರಿಗೆ ವಂಚಿಸುತ್ತಿದ್ದ ಕೇರಳದ ಖತರ್ನಾಕ್‌ ದಂಪತಿ ಅರೆಸ್ಟ್‌

ಈಗ ಆತನಿಂದ ನಕಲಿ‌ ಐಡಿ ಕಾರ್ಡ್ ಗಳು, ಪೊಲೀಸ್ ಸಮವಸ್ತ್ರ, ಮೊಬೈಲ್ ಫೋನ್, ಲ್ಯಾಪ್ ಟಾಪ್ ವಶಪಡಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ ಈ ಹುದ್ದೆಗಳ ಹೆಸರು ಹೇಳಿ ಯಾರಿಗಾದರೂ ವಂಚನೆ ಮಾಡಿದ್ದಾನೆಯೇ ಅಥವಾ ಕೇವಲ ಶೋಕಿಗಾಗಿ ಈ ರೀತಿ ಮಾಡುತ್ತಿದ್ದನೇ ಎನ್ನುವುದು ಬಯಲಾಗಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Rain News: ಬೆಂಗಳೂರಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಇಂದು ಕರಾವಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯ ಉತ್ತರಕನ್ನಡದಲ್ಲಿ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

Dengue Scare: ಸಣ್ಣ ವಯಸ್ಸಿನ ಮಕ್ಕಳಿಗೂ ಡೆಂಗ್ಯೂ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಗ್ಯೂ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು ಎಂದು ಆರ್.ಅಶೋಕ್‌ ಒತ್ತಾಯಿಸಿದರು.

VISTARANEWS.COM


on

Dengue Scare
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ (Dengue Cases) 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ, “ರಾಜ್ಯ ಸರ್ಕಾರವೇ ಜನರಿಗೆ ಉಚಿತವಾಗಿ ಡೆಂಗ್ಯೂ ಪರೀಕ್ಷೆ (Dengue Scare) ಮಾಡಿಸಬೇಕು” ಎಂಬುದಾಗಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಆಗ್ರಹಿಸಿದ್ದಾರೆ.

ಆರ್‌.ಅಶೋಕ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಡೆಂಗ್ಯೂ ರೋಗಿಗಳನ್ನು ಭೇಟಿ ಮಾಡಿ, ಸೌಲಭ್ಯ ಪರಿಶೀಲಿಸಿದ ಬಳಿಕ ಮಾತನಾಡಿದರು. “ಡೆಂಗ್ಯೂ ರೋಗ ಹೀಗೆ ಹರಡುವಾಗ ಸರ್ಕಾರ ಪ್ರತಿ ತಾಲೂಕಿನಲ್ಲಿ ಟಾಸ್ಕ್‌ ಫೋರ್ಸ್‌ ರಚಿಸಿ ಔಷಧಿ ಪೂರೈಸುವ, ರೋಗ ನಿಯಂತ್ರಿಸುವ ಕ್ರಮಗಳನ್ನು ವಹಿಸಬೇಕಿತ್ತು. ಇವ್ಯಾವುದನ್ನೂ ಸರ್ಕಾರ ಮಾಡಿಲ್ಲ. ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಡೆಂಗ್ಯೂಗೆ ಒಳಗಾಗಿದ್ದಾರೆ. ಇವರಿಗೆ ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ತೈಲ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸರ್ಕಾರ ಹಾಕಿರುವಾಗ ಜನರಿಗೆ ಉಚಿತ ಪರೀಕ್ಷೆ ಮಾಡಿಸಲು ಸಾಧ್ಯವಿಲ್ಲವೇ? ಉಚಿತ ಪರೀಕ್ಷೆ ಮಾಡಿದರೆ ಸುಮಾರು 10 ಕೋಟಿ ರೂ. ಖರ್ಚಾಗಬಹುದು. ಅಷ್ಟು ಹಣವನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲವೇ? ಅದಕ್ಕೂ ತೆರಿಗೆ ಹಾಕಬೇಕೆ? ಕೆಲ ಆರೋಗ್ಯ ಕೇಂದ್ರಗಳು 1,000 ರೂ.ವರೆಗೂ ಪರೀಕ್ಷಾ ಶುಲ್ಕ ವಿಧಿಸುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ವೆಚ್ಚವನ್ನು ಭರಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಡೆಂಗ್ಯೂ ರೋಗ ವೇಗವಾಗಿ ಹರಡುತ್ತಿದ್ದು, ಪ್ರತಿ ದಿನ ಮೂರರಿಂದ ನಾಲ್ಕು ಜನರು ಸಾವಿಗೀಡಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲ ಭಾಗಗಳಲ್ಲಿ ಜನರು ಭಯಕ್ಕೊಳಗಾದರೂ ಸರ್ಕಾರಕ್ಕೆ ಇದರ ಭಯ ಬಂದಿಲ್ಲ. 100 ಮಾದರಿ ಪರೀಕ್ಷೆ ಮಾಡಿದರೆ 13-14 ರಲ್ಲಿ ಡೆಂಗ್ಯೂ ಲಕ್ಷಣ ಕಂಡುಬರುತ್ತಿದೆ. ಬೇರೆ ರೋಗಗಳಿರುವ ವ್ಯಕ್ತಿಗಳಿಗೆ ಡೆಂಗ್ಯೂ ಬಂದರೆ ಸಾವಿನ ಸಾಧ್ಯತೆ ಹೆಚ್ಚಿರುತ್ತದೆ. ಎಲ್ಲೆಡೆ ಕಸದ ರಾಶಿ ಇದೆ, ಮಳೆಯಿಂದಾಗಿ ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿದೆ. ಆದರೂ ಸರ್ಕಾರ ಏನೂ ಕ್ರಮ ವಹಿಸಿಲ್ಲ ಎಂದು ದೂರಿದರು.

“ಅತಿ ಸಣ್ಣ ವಯಸ್ಸಿನ ಮಕ್ಕಳಿಗೂ ಡೆಂಗ್ಯೂ ರೋಗ ಬರುತ್ತಿದೆ. ಅಧಿಕಾರಿಗಳು ಕೊಠಡಿ ಬಿಟ್ಟು ಹೊರಗೆ ಬರುತ್ತಿಲ್ಲ. ಸರ್ಕಾರ ಡೆಂಗ್ಯೂ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರೆ ಮಾತ್ರ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ. ಬೆಂಗಳೂರು ಸೇರಿದಂತೆ ಅನೇಕ ಕಡೆ ಕಸದ ರಾಶಿ ಬಿದ್ದಿದೆ. ಅದನ್ನು ಸ್ವಚ್ಛ ಮಾಡಲು ಸರ್ಕಾರ ಗಮನಹರಿಸಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರನ್ನು ಬಳಸಿಕೊಂಡು ಮನೆ ಮನೆಗೆ ಹೋಗಿ ಪರೀಕ್ಷೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಒಂದು ವಾರ್ಡ್‌ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಆತಂಕ ನಿವಾರಿಸಿ

“ಜನರಲ್ಲಿ ಡೆಂಗ್ಯೂ ಬಗ್ಗೆ ಉಂಟಾಗಿರುವ ಆತಂಕವನ್ನು ನಿವಾರಿಸಲು ಸರ್ಕಾರ ಜಾಗೃತಿ ಮೂಡಿಸಬೇಕು. ಉದ್ಯಾನ, ಸಾರ್ವಜನಿಕ ಸ್ಥಳ, ನೀರು ನಿಲ್ಲುವ ಸ್ಥಳ ಸೇರಿದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಮಾಡಿಸಬೇಕು. ಆರೋಗ್ಯ ಸಚಿವರು ಎಲ್ಲ ಜಿಲ್ಲೆಗಳಿಗೆ ಹೋಗಿ ಜನರನ್ನು ಭೇಟಿ ಮಾಡಬೇಕು. ಕಾಂಗ್ರೆಸ್‌ನ ಎಲ್ಲ ಸಚಿವರು, ಶಾಸಕರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಬೇಕು” ಎಂದು ಸಲಹೆ ನೀಡಿದರು.

“ಇದರ ಜತೆಗೆ ಝೀಕಾ, ಕಾಲರಾ ಕೂಡ ಕಂಡುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಜನರು ಕಲುಷಿತ ನೀರು ಕುಡಿದು ಸತ್ತಿದ್ದಾರೆ. ಈ ಮೂರು ರೋಗಗಳಿಂದ ಜನರನ್ನು ಕಾಪಾಡಲು ಸರ್ಕಾರ ಹೆಚ್ಚು ಗಮನಹರಿಸಬೇಕು. ಬಿಬಿಎಂಪಿ ಆಯುಕ್ತರಿಗೇ ಸೊಳ್ಳೆ ಕಚ್ಚಿ ಡೆಂಗ್ಯೂ ಬಂದಿರುವುದಾಗ ಬಿಬಿಎಂಪಿ ಬೇರೆಯವರನ್ನು ಕಾಪಾಡಲು ಸಾಧ್ಯವಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸಭೆ ಮಾಡುವುದರಿಂದ ಏನೂ ಆಗುವುದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಕೆಲಸ ಮಾಡಬೇಕು. ನಗರದಲ್ಲಿ ಬಿದ್ದಿರುವ ರಾಶಿ ಕಸವನ್ನು ವಿಲೇವಾರಿ ಮಾಡಲು ಅಭಿಯಾನದ ಮಾದರಿಯಲ್ಲಿ ಕೆಲಸ ಮಾಡಬೇಕು. ಹೆಚ್ಚು ಹಣ ನೀಡಬೇಕು” ಎಂದರು.

ಇದನ್ನೂ ಓದಿ: Dengue Scare: ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಡೆಂಗ್ಯೂ; ನೂರಾರು ಮಂದಿ ಆಸ್ಪತ್ರೆಗೆ ದಾಖಲು

Continue Reading

ಕೊಡಗು

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Elephant attack : ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಮಕ್ಕಳು ಸೇರಿ ನಾಲ್ವಾರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Elephant attack car in Kodagu‌ four people escape
Koo

ಕೊಡಗು: ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild animal attack) ಉಪಟಳ ಹೆಚ್ಚಾಗುತ್ತಿದ್ದು, ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ (Elephant attack) ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿ ಮಾಡಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಸೆರೆಹಿಡಿಯದೆ ಸುಮ್ಮನಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ

ರಾಯಚೂರು: ಕಾಡುಪ್ರಾಣಿಗಳ ಹಾವಳಿ (Wild Animal Attack) ಹೆಚ್ಚಾಗಿದ್ದು, ಜನ-ಸಾಮಾನ್ಯರು ಆತಂಕದಲ್ಲೇ ಓಡಾಡುವಂತಾಗಿದೆ. ಆಹಾರ ಅರಸಿ ನಾಡಿಗೆ ಕಾಲಿಡುತ್ತಿರುವ ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಜತೆಗೆ ಸಾಕುಪ್ರಾಣಿಗಳನ್ನು ಕೊಂದು ಎತ್ತಿಕೊಂಡು ಹೋಗುತ್ತಿವೆ. ಸದ್ಯ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿದೆ.

ಚಿರತೆ ದಾಳಿಯಿಂದಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮಲ್ಲಣ್ಣ, ರಂಗನಾಥ್‌, ಹನಮೇಶ ಕಮದಾಳ ಗಾಯಾಳುಗಳು. ಸದ್ಯ ಗಾಯಾಳುಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೂವರು ಜಮೀನಿಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಚಿರತೆಯು ಮೂವರ ಮೇಲೂ ಎರಗಿ ದಾಳಿ ಮಾಡಿ ಗಾಯಗೊಳಿಸಿದೆ.

ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Bengaluru News : ಬೇರೆ ಬೇರೆ ನಂಬರ್‌ಗಳಿಂದ ಸಿಕ್ಕ ಸಿಕ್ಕವರಿಗೆ ಫೋನ್‌ ಮಾಡಿ ಹುಡುಗ ಹಾಗೂ ಹುಡುಗಿಯರ ಸರ್ವೀಸ್ ಬೇಕಾ ಅಂತ ಕಿರಿಕಿರಿ ನೀಡುತ್ತಿದ್ದ ದುಷ್ಟನನ್ನು (Physical Abuse) ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Bengaluru News Physical Abuse
Koo

ಬೆಂಗಳೂರು: ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕಾ ಎಂದು ಯುವಕ-ಯುವತಿಯರಿಗೆ ಮಸೇಜ್‌ ಮಾಡುತ್ತಿದ್ದ‌ (Physical Abuse) ಕಿರಾತಕನನ್ನು (Bengaluru News) ಖಾಕಿ ಪಡೆ ಬಂಧಿಸಿದೆ. ಪೂರ್ವ ವಿಭಾಗ ಸೆನ್ ಪೊಲೀಸರು ಆನಂದ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ.

ಈ ದುಷ್ಟ ಬೇರೆ ಬೇರೆ ನಂಬರ್‌ಗಳನ್ನು ಬಳಸಿ ಫೋನ್‌ ಮಾಡಿ ಹುಡುಗಿಯರ ಸರ್ವಿಸ್ ಬೇಕಾ ಎಂದು ಕರೆ ಮಾಡುತ್ತಿದ್ದ. ಸುಭಿ ಎಂಬಾಕೆಗೂ ಕರೆ ಮಾಡಿ ಟಾರ್ಚರ್‌ ಕೊಟ್ಟಿದ್ದ. ಹೀಗಾಗಿ ಆಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಆರೋಪಿ ಆನಂದ್‌ ಶರ್ಮಾನನ್ನು ಪೂರ್ವ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂ ವಿ ಸ್ಟೇಜ್ ಪಿಜಿ ಬಳಿ ಆರೋಪಿಯನ್ನು ಬಂಧಿಸಿ, ಆತ ಬಳಿಯಿದ್ದ ಮೊಬೈಲ್ ಫೋನ್ ವಶಪಡಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
karnataka weather Forecast
ಮಳೆ19 mins ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Vastu Tips
ಧಾರ್ಮಿಕ49 mins ago

Vastu Tips: ಮನೆಯಲ್ಲಿ ನೆಮ್ಮದಿ ನೆಲೆಸಬೇಕೆ? ಹಾಗಿದ್ದರೆ ಅಡುಗೆ ಒಲೆಯ ದಿಕ್ಕು ಸರಿಯಾಗಿರಲಿ!

dina Bhavishya
ಭವಿಷ್ಯ2 hours ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

School Principal
ದೇಶ7 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ7 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ7 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ7 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ8 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ8 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest9 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ13 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ14 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌