FSL Report : ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್‌ ತಿರುಗೇಟು - Vistara News

ಕ್ರೈಂ

FSL Report : ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್‌ ತಿರುಗೇಟು

FSL Report : ರಾಜ್ಯಸಭಾ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ವಿಧಾನ ಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದು ನಿಜ ಎಂಬ ಖಾಸಗಿ ಎಫ್‌ಎಸ್‌ಎಲ್‌ ವರದಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಆದರೆ, ಗೃಹ ಸಚಿವ ಜಿ. ಪರಮೇಶ್ವರ್‌ ಇದನ್ನು ತಿರಸ್ಕರಿಸಿದ್ದಾರೆ.

VISTARANEWS.COM


on

FSL REPORT BJP G Parameshwar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಸಭಾ ಚುನಾವಣೆಯ (Rajya sabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ವಿಜಯೋತ್ಸವದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲಾಗಿದೆ ಎಂಬ ವಿದ್ಯಮಾನಕ್ಕೆ ಸಂಬಂಧಿಸಿ ಬಿಜೆಪಿ ಬಿಡುಗಡೆ ಮಾಡಿದ ಖಾಸಗಿ ಎಫ್‌ಎಸ್‌ಎಲ್‌ ವರದಿಯ (FSL Report) ಬಗ್ಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್‌ ಹುಸೇನ್‌ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad) ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ (BJP Karnataka) ಖಾಸಗಿ ಎಫ್‌ಎಸ್‌ಎಲ್‌ ವರದಿಯನ್ನು (FSL Report) ಬಿಡುಗಡೆ ಮಾಡಿದೆ. ಈ ವರದಿಯು ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಮಾಡಿದ್ದನ್ನು ಸಮರ್ಥಿಸುತ್ತಿದೆ ಎಂದು ಬಿಜೆಪಿ ಟ್ವೀಟ್‌ನಲ್ಲಿ ಹೇಳಿದೆ.

ಖಾಸಗಿ ವಿಧಿ ವಿಜ್ಞಾನ ತಜ್ಞರಾದ ಫಣೀಂದ್ರ ಬಿ.ಎನ್‌ ಅವರು ನೀಡಿರುವ ಎಫ್‌ಎಸ್‌ಎಲ್‌ ವರದಿಯನ್ನು ಟ್ವೀಟ್‌ ಮಾಡಿರುವ ಬಿಜೆಪಿ, ಇದರಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿರುವುದನ್ನು ದೃಢಪಡಿಸಲಾಗಿದೆ ಎನ್ನುವುದನ್ನು ಉಲ್ಲೇಖಿಸಿದೆ. ಇದನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಮಲಪಕ್ಷ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ : Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ಟೋಪಿವಾಲಾ 50 ಗಂಟೆ ಕಳೆದರೂ ಸಿಕ್ಕಿಲ್ಲ!

ಆಕ್ಷೇಪ ವ್ಯಕ್ತಪಡಿಸಿದ ಗೃಹ ಸಚಿವ ಜಿ. ಪರಮೇಶ್ವರ್‌

ರಾಜ್ಯ ಸರಕಾರ ವಿವಾದಿತ ವಿಡಿಯೊದ ಎಫ್‌ಎಸ್‌ಎಲ್‌ ವಿಶ್ಲೇಷಣೆಗೆ ಕಳುಹಿಸಿಕೊಟ್ಟಿದ್ದು, ಅದರ ವರದಿ ಇನ್ಎನೂ ಬಂದಿಲ್ಲ. ಈಗ ಬಿಜೆಪಿ ಬಿಡುಗಡೆ ಮಾಡಿರುವ ಖಾಸಗಿ ವರದಿ ಅಧಿಕೃತವಲ್ಲ ಎಂದು ಸೋಮವಾರ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದರು.

ʻʻನಾವು ಖಾಸಗಿ ಸಂಸ್ಥೆ ವರದಿ ಗಣನೆಗೆ ತೆಗೆದುಕೊಳ್ಳಲ್ಲ. ಸರ್ಕಾರದ ಎಫ್‌ಎಸ್‌ಎಲ್‌, ಗೃಹ ಇಲಾಖೆಯ ಫಾರೆನ್ಸಿಕ್ ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪಾಸಿಟಿವ್ ಆಗಿ, ಕೂಗಿರೋದು ದೃಢ ಅಂದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆʼʼ ಎಂದು ಜಿ. ಪರಮೇಶ್ವರ್‌ ಹೇಳಿದ್ದಾರೆ.

ಸರ್ಕಾರ ವರದಿಯನ್ನು ಮುಚ್ಚಿಡುತ್ತಿದೆ ಎನ್ನುವ ಬಿಜೆಪಿ ಆರೋಪ, ಘಟನೆಯ ಮರುದಿನವೇ ಪ್ರಿಯಾಂಕ್ ಖರ್ಗೆ ವರದಿ ಬಂದಿದೆ ಎಂದು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ಅಧಾರದ ಮೇಲೆ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇದು ನಮ್ಮ‌ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳ್ತೀನಿ ಎಂದು ಹೇಳಿದರು.

ಎಫ್‌ಎಸ್‌ಎಲ್‌ ವರದಿ ಬಿಡುಗಡೆ ಮಾಡಲು ಖಾಸಗಿಯವರು ಯಾರು? ಅವರಿಗೆ NOC ಯಾರು ಕೊಟ್ಟಿದ್ದಾರೆ. ಅವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ.? ಎಲ್ಲವನ್ನೂ ಚೆಕ್ ಮಾಡ್ತೀನಿ ಎಂದು ಹೇಳಿದರು.

ಇದನ್ನೂ ಓದಿ : ವಿಧಾನಸೌಧದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ನಿಜ; ಎಫ್‌ಎಸ್‌ಎಲ್‌ ತಜ್ಞ ಫಣೀಂದ್ರ ಹೇಳಿಕೆ

ಬಿಜೆಪಿ ಟ್ವೀಟ್‌ನಲ್ಲಿ ಹೇಳಿದ್ದೇನು?

BJP Karnataka Pakistan zindabad

ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಬಿಜೆಪಿ ತನ್ನ ಟ್ವೀಟ್‌ನಲ್ಲಿ ಹೇಳಿದೆ.

ರಾಷ್ಟ್ರ ವಿರೋಧಿ ಧೋರಣೆಯ ಕರ್ನಾಟಕ ಕಾಂಗ್ರೆಸ್‌ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

ಫಣೀಂದ್ರ ಅವರು ನೀಡಿದ ವರದಿಯಲ್ಲಿ ಏನಿದೆ?

ನಿರ್ದಿಷ್ಟ ವಿಡಿಯೊದಲ್ಲಿ ಹೇಳಿದ್ದು ನಾಸಿರ್‌ ಖಾನ್‌ ಜಿಂದಾಬಾದ್‌ ಎಂದು ಹೇಳಿದ್ದೇ ಅಥವಾ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಹೇಳಿದ್ದೇ ಎಂಬ ಸೀಮಿತ ವಿಚಾರದಲ್ಲಿ ಪರಿಶೀಲಿಸಿದಾಗ ಬಹುಪಾಲು ಇದು ಪಾಕಿಸ್ತಾನ್‌ ಜಿಂದಾಬಾದ್‌ ಎಂದೇ ಹೇಳಿದಂತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

HD Revanna Case Jailed: ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿದ ನಾಲ್ವರ ಬಂಧನ; ಕಾರ್ತಿಕ್‌ ಬಂಧನಕ್ಕೂ ಕ್ಷಣಗಣನೆ

HD Revanna Case Jailed: ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

VISTARANEWS.COM


on

hd revanna jailed prajwal revanna case
Koo

ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್‌ (Kidnap case) ಮಾಡಿಸಲಾಗಿದೆ ಎನ್ನಲಾದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಎಸ್ಐಟಿ (SIT) ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ರೇವಣ್ಣ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ (HD Revanna Case Jailed) ಜೈಲಿನಲ್ಲಿದ್ದಾರೆ.

ಯುವ ಜನತಾದಳ‌ ಮಾಜಿ ಅಧ್ಯಕ್ಷ ಎಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು,‌ ವಕೀಲ‌ ತಿಮ್ಮಪ್ಪ ಎಂಬವರನ್ನು ಬಂಧಿಸಲಾಗಿದೆ. ಇವರು ಸಂತ್ರಸ್ತ ಮಹಿಳೆಯ ಕಿಡ್ನಾಪ್‌ಗೆ ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ. ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಾಲ್ವರೂ ನಿನ್ನೆ ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿ ಪೊಲೀಸರು ತಾರತಮ್ಯ ಎಸಗುತ್ತಿರುವ ಕುರಿತು ಆರೋಪಿಸಿದ್ದರು.

ಕಾರ್ತಿಕ್‌ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು (Hassan MP Prajwal revanna case) ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ (viral video) ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬಳಿಕ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ಬಂಧನ ಭೀತಿ ಎದುರಾಗಿದೆ. ಕಾರ್ತಿಕ್, ಪುಟ್ಟಿ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗು ಚೇತನ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಎಡಿಟ್ ಮಾಡಿ ಸಂಸದ ಪ್ರಜ್ವಲ್ ಅವರ ಅಶ್ಲೀಲ ಫೋಟೋ ವೀಡಿಯೋ ಸೃಷ್ಟಿ ಮಾಡಿ ಪೆನ್ ಡ್ರೈವ್ ಮೂಲಕ ಹಂಚಿಕೊಂಡ ಆರೋಪವಿದೆ. ಕಾರ್ತಿಕ್, ಪುಟ್ಟರಾಜ್, ನವೀನ್ ಗೌಡ, ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್‌ ದೂರು ಕೊಟ್ಟಿತ್ತು.

ನವೀನ್ ಗೌಡ ಮತ್ತು ಇತರರು ಎಂದು ಸೆನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ನ್ಯಾಯಾಲಯಕ್ಕೆ ರಿಮೈಂಡರ್ ಅರ್ಜಿ ಮೂಲಕ ಕಾರ್ತಿಕ್, ಪುಟ್ಟರಾಜು ಹಾಗೂ ಚೇತನ್ ಎಂಬ ಹೆಸರು ಉಲ್ಲೇಖಿಸಿ ಮಾಹಿತಿ ರವಾನಿಸಿದ್ದರು. ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಲೆ ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿನ್ನೆ ಹಾಸನದ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಅರ್ಜಿ ವಜಾ ಆಗಿದೆ.

ಅರ್ಜಿ ವಜಾ ಬೆನ್ನಲ್ಲೇ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಪೆನ್ ಡ್ರೈವ್ ವೈರಲ್ ಆರೋಪ ಪ್ರಕರಣ ಇನ್ನೂ ಎಸ್ಐಟಿಗೆ ಹಸ್ತಾಂತರ ಆಗಿಲ್ಲ. ಈ ಹಿನ್ನೆಲೆಯಲ್ಲಿ ಹಾಸನ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇಂದು ರೇವಣ್ಣ ಮತ್ತೊಂದು ಜಾಮೀನು ಅರ್ಜಿ ವಿಚಾರಣೆ

ಮಹಿಳೆ ಅಪಹರಣ (kidnap) ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಇನ್ನೊಂದು ಜಾಮೀನು ಅರ್ಜಿ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಲಿದೆ. ಮಗ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೇವಣ್ಣ ಅವರಿಗೆ ನಿನ್ನೆಯ ವಿಚಾರಣೆಯಲ್ಲಿ ಬೇಲ್‌ ಸಿಕ್ಕಿಲ್ಲ.

ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ. ನಾಲ್ಕು ದಿನಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ. ಕಸ್ಟಡಿ ವೇಳೆ ಅನಾರೋಗ್ಯದ ಸಮಸ್ಯೆ ಎದುರಿಸಿದ್ದಾರೆ ಎಂಬ ಮಾಹಿತಿಯಿದೆ. ಹೊಟ್ಟೆ ಉರಿ ಸಮಸ್ಯೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದರು. ಇಂದು ಇದೇ ವಿಚಾರವನ್ನು ಮತ್ತೆ ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಕೀಲರು ಉಲ್ಲೇಖ ಮಾಡಲಿದ್ದಾರೆ. ಹಲವಾರು ವರ್ಷ ರಾಜ್ಯ ಸಚಿವರಾಗಿದ್ದು ಸೇವೆ ಸಲ್ಲಿಸಿರುವ ರೇವಣ್ಣ, ಪ್ರಕರಣದ ಗುರುತ್ವ ಅರಿತು ತನಿಕೆಗೆ ಸಹಕಾರ ಒದಗಿಸುತ್ತಿದ್ದಾರೆ. ಈ ಎಲ್ಲ ವಿಚಾರಗಳಿಂದ ಹೆಚ್.ಡಿ ರೇವಣ್ಣಗೆ ಬೇಲ್ ಸಿಗಬೇಕು ಎಂದು ವಾದಿಸುವ ಸಾಧ್ಯತೆ ಇದೆ.

ಎಸ್ಐಟಿ ಮತ್ತೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದೆ. ಈಗಾಗಲೇ ರೇವಣ್ಣ ತನಿಖೆ ಸರಿಯಾಗಿ ಸಹಕರಿಸಿಲ್ಲ ಎಂದು ಎಸ್‌ಐಟಿ ಹೇಳಿದೆ. ಸಮರ್ಪಕವಾಗಿ ವಿಚಾರಣೆ ಆಗಿಲ್ಲ. ಮತ್ತೊಂದು ಕಡೆ ಹೆಚ್. ಡಿ ರೇವಣ್ಣ ಮಾಜಿ ಸಚಿವ, ಶಾಸಕ ಹಾಗೂ ಪ್ರಭಾವ ಉಳ್ಳ ವ್ಯಕ್ತಿಯಾಗಿದ್ದಾರೆ. ಹೊರ ಬಂದ ಮೇಲೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ, ಸಂತ್ರಸ್ತೆಯರನ್ನು ಕಾಂಟ್ಯಾಕ್ಟ್ ಮಾಡುವ ಸಾಧ್ಯತೆ ಇದೆ. ಈ ಅಂಶಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

Continue Reading

ಕ್ರೈಂ

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

Crime News: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ. ಪತಿಯ ಕಿರುಕುಳದಿಂದ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆರೋಪಿಸಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ (Crime News).

ʼʼಅಶ್ವಿನಿ ಆತ್ಮಹತ್ಯೆ ಮಾಡುವ ಮುನ್ನ ಮಕ್ಕಳಿಗೆ ವಿಷ ನೀಡಿದ್ದಾರೆʼʼ ಎಂದು ಪೊಲೀಸರು ತಿಳಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಶ್ವಿನಿ ಕೋನಾರ್ಕ್‌ ನಗರದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆ ಸ್ಥಳಕ್ಕೆ ತಲುಪಿದ ಪೊಲೀಸರಿಗೆ ಬಳಿಕ ಆಕೆಯ ಮಕ್ಕಳ ಶವವೂ ಕಂಡು ಬಂದಿತ್ತು. ಈ ವೇಳೆ ಆಕೆಯ ಪತಿ ಊರಿನಲ್ಲಿ ಇರಲಿಲ್ಲ. ಹೀಗಾಗಿ ಆಕೆಯೇ ಮಕ್ಕಳಿಗೆ ವಿಷ ಉಣಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಊಹಿಸಿದ್ದಾರೆ.

ಡೆತ್‌ನೋಟ್‌ ಪತ್ತೆ

ಪರಿಶೀಲನೆ ವೇಳೆ ಪೊಲೀಸರಿಗೆ ಅಶ್ವಿನಿ ಬರೆದಿದ್ದಾಳೆ ಎನ್ನಲಾದ ಡೆತ್‌ನೋಟ್‌ ಪತ್ತೆಯಾಗಿದೆ. ಇದರಲ್ಲಿ ಆಕೆ ಪತಿ ಸ್ವಪ್ನಿಲ್‌ ಕಿರುಕುಳ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾಳೆ.‌ ಜತೆಗೆ ಸಾಯುವ ಮುನ್ನ ವಿಡಿಯೊವನ್ನು ರೆಕಾರ್ಡ್‌ ಮಾಡಿದ್ದಾಳೆ. ಸ್ವಪ್ನಿಲ್‌ ನಿರಂತರ ಹಿಂಸೆ ನೀಡುತ್ತಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಆಕೆ ತನ್ನ ಸಂಬಂಧಿಕರಿಗೆ ಕಳುಹಿಸಿದ ವಿಡಿಯೊದಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಕೃತ್ಯ ನಡೆಯುವ ವೇಳೆ ಸ್ವಪ್ನಿಲ್‌ ಕೆಲಸದ ನಿಮಿತ್ತ ಪುಣೆಗೆ ತೆರಳಿದ್ದರು. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆ

ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಹಿನ್ನೆಲೆಯಲ್ಲಿ ಕೊರಗಿನಿಂದ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್‌ 27ರಂದು ಹರಿಯಾಣದಲ್ಲಿ ನಡೆದಿತ್ತು. ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಘಟನೆಯ ಬಗ್ಗೆ ಮನೆಯವರು ತಿಳಿಸಿದ್ದರು. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ಹೇಳಿದ್ದರು. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಳು. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಳು.

Continue Reading

ಕ್ರೈಂ

Murder Case: ಪಾರ್ಟಿ ಮಾಡಿ ಮಲಗಿದ ಯುವಕನ ಕೊಲೆ, ಜೊತೆಗಿದ್ದ ಸ್ನೇಹಿತರಿಗೆ ಗೊತ್ತೇ ಆಗಲಿಲ್ಲ!

Murder Case: ಹೈದರ್ ನಗರ ತಾಂಡಾದ ಮೂವರು ಗೆಳೆಯರು ಊರಿನ ಹೊರವಲಯದಲ್ಲಿ ರಾತ್ರಿ ಪಾರ್ಟಿ ಮಾಡಿ ಮಲಗಿದ್ದಾರೆ. ನಡುರಾತ್ರಿ ಎದ್ದು ನೋಡಿದಾಗ ಸುಭಾಷ್ ಕೊಲೆಯಾಗಿದ್ದಾನೆ. ಗಾಬರಿಗೊಂಡ ಯುವಕರು ತಾಂಡಾಕ್ಕೆ ಹೋಗಿ ವಿಷಯ ತಿಳಿಸಿದ್ದಾರೆ.

VISTARANEWS.COM


on

gadag crime murder case
Koo

ಗದಗ: ಮುಂಡರಗಿ ಪಟ್ಟಣದಲ್ಲಿ ಯುವಕನೊಬ್ಬನ ಭೀಕರ ಹತ್ಯೆ (Murder Case) ಆಗಿದೆ. ರಾತ್ರಿ ಮೂವರು ಗೆಳೆಯರು ಭರ್ಜರಿ ಎಣ್ಣೆ ಪಾರ್ಟಿ ಮಾಡಿ ನಿದ್ರೆ ಹೋಗಿದ್ದು, ನಡು ರಾತ್ರಿಯಲ್ಲಿ ಓರ್ವನ ಹತ್ಯೆಯಾಗಿದೆ. ಪಾರ್ಟಿ ಮಾಡಿದ ಗೆಳೆಯರು ಕಂಗಾಲಾಗಿ ಊರಿಗೆ ಬಂದು ವಿಷಯ ತಿಳಿಸಿದ್ದಾರೆ.

ಸುಭಾಷ್ ನಾಯಕ್ (23) ಕೊಲೆಯಾದ ಯುವಕ. ಗದಗ (Gadag news) ಜಿಲ್ಲೆಯ ಮುಂಡರಗಿ ಪಟ್ಟಣದ ಹೊಸ ಹುಡ್ಕೋ ಕಾಲೋನಿಯಲ್ಲಿ ಘಟನೆ ನಡೆದಿದೆ. ಕೊಲೆಯಾದ ಯುವಕ ಹೈದರ್ ನಗರ ತಾಂಡಾದ ನಿವಾಸಿ. ಹೈದರ್ ನಗರ ತಾಂಡಾದ ಮೂವರು ಗೆಳೆಯರು ಊರಿನ ಹೊರವಲಯದಲ್ಲಿ ರಾತ್ರಿ ಪಾರ್ಟಿ ಮಾಡಿ ಮಲಗಿದ್ದಾರೆ. ನಡುರಾತ್ರಿ ಎದ್ದು ನೋಡಿದಾಗ ಸುಭಾಷ್ ಕೊಲೆಯಾಗಿದ್ದಾನೆ. ಗಾಬರಿಗೊಂಡ ಯುವಕರು ತಾಂಡಾಕ್ಕೆ ಹೋಗಿ ವಿಷಯ ತಿಳಿಸಿದ್ದಾರೆ.

ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಶಂಕೆ ಮೂಡಿದೆ. ಜೊತೆಗಿದ್ದ ಗೆಳೆಯರು ನೀಡುತ್ತಿರುವ ಮಾಹಿತಿ ಗೊಂದಲಕಾರಿಯಾಗಿದ್ದು, ಅನುಮಾನ ಮೂಡಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಫಾರೆನ್ಸಕ್‌ ತಂಡದಿಂದ ಪರಿಶೀಲನೆ ನಡೆದಿದೆ.

ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಕೇಸ್

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಮುಸ್ಲಿಂ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯು ಇಸ್ಲಾಂಅನ್ನು ಅನುಸರಿಸಬೇಕು ಎಂದು ಒತ್ತಾಯಿಸುವ ಮೂಲಕ ಹೀನ ಕೃತ್ಯ ಎಸಗಿದ್ದಾನೆ. ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಇನ್ನು, ಕೃತ್ಯ ಬಯಲಾಗುತ್ತಲೇ ಇಬ್ರಾಹಿಂ ಖಾನ್‌ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

6 ತಿಂಗಳಿಂದ ನಿರಂತರ ಕಿರುಕುಳ

14 ವರ್ಷದ ಬಾಲಕಿ ಹಾಗೂ ಆಕೆಯ ಸಹೋದರಿಯ ತಂದೆ-ತಾಯಿ ತೀರಿಕೊಂಡ ಕಾರಣ 2023ರ ಕಾಶಿಗಾಂವ್‌ಗೆ ಇಬ್ಬರೂ ಸ್ಥಳಾಂತರಗೊಂಡಿದ್ದಾರೆ. ಸಂಬಂಧಿಕರ ಮನೆಯಲ್ಲಿ ಇಬ್ಬರೂ ಆಶ್ರಯ ಪಡೆದಿದ್ದಾರೆ. ಇದೇ ಕಾಶಿಗಾಂವ್‌ ನಿವಾಸಿಯಾದ ಇಬ್ರಾಹಿಂ ಖಾನ್‌, ಬಾಲಕಿಯನ್ನು ಗಮನಿಸಿದ್ದಾನೆ. ಪದೇಪದೆ ಬಾಲಕಿಯನ್ನು ಮಾತನಾಡಿಸುವುದು, ನಗುವುದು, ನೀನೇ ನನ್ನ ಜೀವನ ಎಂದು ಕಿಚಾಯಿಸುವುದು ಸೇರಿ ಹಲವು ರೀತಿಯಲ್ಲಿ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ.

ಕೆಲ ತಿಂಗಳ ಹಿಂದೆ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಇಬ್ರಾಹಿಂ ಖಾನ್‌ ಬಾಲಕಿಯ ಮನೆಗೆ ನುಗ್ಗಿದ್ದಾನೆ. ಆಗ ಬಾಲಕಿಯ ಎದುರು ಪ್ರೇಮ ನಿವೇದನೆ ಮಾಡಿದ ಆತ, ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆಕೆಯ ಮನೆಗೆ ಹೋಗುವುದು, ಲೈಂಗಿಕ ದೌರ್ಜನ್ಯ ಎಸಗುವುದು ಹಾಗೂ ಇಸ್ಲಾಂ ರೀತಿ-ರಿವಾಜುಗಳನ್ನು ಅನುಸರಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾನೆ. ಇಬ್ರಾಹಿಂ ಖಾನ್‌ನಿಂದ ನಿರಂತರವಾಗಿ ಕಿರುಕುಳಕ್ಕೊಳಗಾದ ಬಾಲಕಿಯು ಮೇ 3ರಂದು ಹಿರಿಯರೊಂದಿಗೆ ತೆರಳಿ ದೂರು ದಾಖಲಿಸಿದ್ದಾಳೆ. ಇದಾದ ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

“ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನುಗ್ಗುತ್ತಿದ್ದ ಆತ, ನನ್ನನ್ನು ಮದುವೆಯಾಗುತ್ತೇನೆ ಎಂಬುದಾಗಿ ಹೇಳು ಎಂದು ಒತ್ತಾಯಿಸುತ್ತಿದ್ದ. ನನಗೆ ನನ್ನ ತಂದೆ-ತಾಯಿ ಜತೆ ಇರಲು ಇಷ್ಟವಿಲ್ಲ. ನಿನ್ನೊಂದಿಗೆ ನಾನು ಬದುಕಲು ಇಷ್ಟ. ಇಬ್ಬರೂ ಬೇರೆ ಕಡೆ ಬಾಡಿಗೆ ಮನೆ ಮಾಡೋಣ. ಅಲ್ಲಿ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಇಬ್ಬರೂ ಜತೆಯಾಗಿರೋಣ ಎಂದು ಹೇಳಿದ. ಇದಕ್ಕೆ ನಾನು ಒಪ್ಪದಿದ್ದಾಗ ದೌರ್ಜನ್ಯ ಎಸಗಿದ” ಎಂಬುದಾಗಿ ಎಫ್‌ಐಆರ್‌ನಲ್ಲಿ ಬಾಲಕಿಯ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Continue Reading

ಕ್ರೈಂ

HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

HD Revanna Jailed: ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ.

VISTARANEWS.COM


on

hd revanna jailed 2
Koo

ಬೆಂಗಳೂರು: ಮಹಿಳೆ ಅಪಹರಣ (kidnap) ಕೇಸ್‌ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ (HD Revanna Jailed) ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರ ಇನ್ನೊಂದು ಜಾಮೀನು ಅರ್ಜಿ (Bail plea) ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ (peoples representative court) ವಿಚಾರಣೆಗೆ ಒಳಗಾಗಲಿದೆ. ಮಗ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Case) ಪ್ರಕರಣದಲ್ಲಿಯೂ ಆರೋಪಿಯಾಗಿರುವ ರೇವಣ್ಣ ಅವರಿಗೆ ನಿನ್ನೆಯ ವಿಚಾರಣೆಯಲ್ಲಿ ಬೇಲ್‌ ಸಿಕ್ಕಿಲ್ಲ.

ಬೆಳಗ್ಗೆ ಹನ್ನೊಂದು ಗಂಟೆ ನಂತರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಲಿದ್ದಾರೆ. 65 ವರ್ಷದವರಾಗಿರುವ ಹೆಚ್.ಡಿ ರೇವಣ್ಣ ಈಗಾಗಲೇ ಪ್ರಕರಣ, ಮಗನ ಮೇಲಿನ ಆರೋಪದಿಂದ ಮಾನಸಿಕವಾಗಿ ನೊಂದಿದ್ದಾರೆ. ನಾಲ್ಕು ದಿನಗಳ ಕಾಲ ಕಸ್ಟಡಿಯಲ್ಲಿದ್ದು ವಿಚಾರಣೆ ಎದುರಿಸಿದ್ದಾರೆ. ಕಸ್ಟಡಿ ವೇಳೆ ಅನಾರೋಗ್ಯದ ಸಮಸ್ಯೆ ಎದುರಿಸಿದ್ದಾರೆ ಎಂಬ ಮಾಹಿತಿಯಿದೆ. ಹೊಟ್ಟೆ ಉರಿ ಸಮಸ್ಯೆ ಎಂದು ನ್ಯಾಯಾಧೀಶರ ಮುಂದೆ ಅಳಲು ತೋಡಿಕೊಂಡಿದ್ದರು. ಇಂದು ಇದೇ ವಿಚಾರವನ್ನು ಮತ್ತೆ ಜನಪ್ರತಿನಿಧಿ ನ್ಯಾಯಾಲಯದಲ್ಲಿ ವಕೀಲರು ಉಲ್ಲೇಖ ಮಾಡಲಿದ್ದಾರೆ. ಹಲವಾರು ವರ್ಷ ರಾಜ್ಯ ಸಚಿವರಾಗಿದ್ದು ಸೇವೆ ಸಲ್ಲಿಸಿರುವ ರೇವಣ್ಣ, ಪ್ರಕರಣದ ಗುರುತ್ವ ಅರಿತು ತನಿಕೆಗೆ ಸಹಕಾರ ಒದಗಿಸುತ್ತಿದ್ದಾರೆ. ಈ ಎಲ್ಲ ವಿಚಾರಗಳಿಂದ ಹೆಚ್.ಡಿ ರೇವಣ್ಣಗೆ ಬೇಲ್ ಸಿಗಬೇಕು ಎಂದು ವಾದಿಸುವ ಸಾಧ್ಯತೆ ಇದೆ.

ಎಸ್ಐಟಿ ಮತ್ತೆ ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲಿದೆ. ಈಗಾಗಲೇ ರೇವಣ್ಣ ತನಿಖೆ ಸರಿಯಾಗಿ ಸಹಕರಿಸಿಲ್ಲ ಎಂದು ಎಸ್‌ಐಟಿ ಹೇಳಿದೆ. ಸಮರ್ಪಕವಾಗಿ ವಿಚಾರಣೆ ಆಗಿಲ್ಲ. ಮತ್ತೊಂದು ಕಡೆ ಹೆಚ್. ಡಿ ರೇವಣ್ಣ ಮಾಜಿ ಸಚಿವ, ಶಾಸಕ ಹಾಗೂ ಪ್ರಭಾವ ಉಳ್ಳ ವ್ಯಕ್ತಿಯಾಗಿದ್ದಾರೆ. ಹೊರ ಬಂದ ಮೇಲೆ ತಮ್ಮ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ, ಸಂತ್ರಸ್ತೆಯರನ್ನು ಕಾಂಟ್ಯಾಕ್ಟ್ ಮಾಡುವ ಸಾಧ್ಯತೆ ಇದೆ. ಈ ಅಂಶಗಳ ಹಿನ್ನೆಲೆಯಲ್ಲಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

ಎಚ್‌ಡಿ ರೇವಣ್ಣ ಈಗ ಕೈದಿ ನಂಬರ್‌ 4567

ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದು, ಅವರ ನಂಬರ್‌ 4567 ಆಗಿದೆ. ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದ ರೇವಣ್ಣ ನಿದ್ರಿಸದೆ ಮೌನಿಯಾಗಿ ಯೋಚಿಸುತ್ತಾ ಕುಳಿತಿದ್ದರು ಎಂದು ತಿಳಿದುಬಂದಿದೆ. ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ. ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಒಂದು ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Continue Reading
Advertisement
SSLC Result 2024 what is the reason for most of the students fail in SSLC
ಕರ್ನಾಟಕ22 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್31 mins ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sslc exam Result 2024
ಶಿಕ್ಷಣ33 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

T20 World Cup 2024
ಕ್ರೀಡೆ38 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ47 mins ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್49 mins ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

SSLC Result 2024 secret behind 20 percent grace marks
ಕರ್ನಾಟಕ60 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ1 hour ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

SSLC Result 2024 78 schools get zero results in SSLC exams
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

Viral video
ವೈರಲ್ ನ್ಯೂಸ್1 hour ago

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ22 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ33 mins ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ60 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌