Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ? - Vistara News

ಕ್ರೈಂ

Hassan Pen Drive Case: ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

Hassan Pen Drive Case: ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

VISTARANEWS.COM


on

Hassan Pen Drive Case Prajwal Revanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ (Karnataka politics) ಅತೀವ ಕೋಲಾಹಲ ಸೃಷ್ಟಿಸಿರುವ ಹಾಸನದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟೀಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟೀಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೊಟೀಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಹಾಗೂ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತೀಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

ಅವಿಭಾಗೀಕೃತ

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

VISTARANEWS.COM


on

ಮುಂಬೈ: ಮಹಿಳಾ ಮೀಸಲಾತಿ ಕುರಿತು ಮುಂಬೈನಲ್ಲಿ ಬಿಜೆಪಿ ಪ್ರತಿಭಟನ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರನ್ನು ಮಹಿಳೆಯೊಬ್ಬರು ಸಚಿವರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾಕಷ್ಟು ವೈರಲ್‌ ಆಗಿದೆ.
ಮುಂಬೈನ ವೊರ್ಲಿ ಪ್ರದೇಶದಲ್ಲಿ ಸಚಿವ ಗಿರೀಶ್ ಮಹಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಅಡಚಣೆ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಈ ಮಹಿಳೆ ಸಚಿವರನ್ನು ಉದ್ದೇಶಿಸಿ ನಿಮ್ಮಿಂದಲೇ ಟ್ರಾಫಿಕ್ ಜ್ಯಾಮ್ ಉಂಟಾಗುತ್ತಿದ್ದು,ಫ್ರೆಂ ಹಿಯರ್.. ಗೆಟ್‌ ಔಟ್‌ ಎಂದು ನಿಂದಿಸಿದ್ದಾರೆ.
ಈ ರೀತಿ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಬದಲು ಸಮೀಪದ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಈ ಮಹಿಳೆಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ ಮಾತನಾಡಲು ನಿರಾಕರಿಸಿದ ಮಹಿಳೆ ತನ್ನೊಂದಿಗೆ ಯಾರೂ ಮಾತನಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಈ ವಿಡಿಯೊವನ್ನು ಹಂಚಿಕೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರ್ಷವರ್ಧನ್ ಸಪ್ನಲ್, ಮಹಿಳಾ ಮೀಸಲಾತಿ ಕುರಿತು ಆಡಳಿತ ಪಕ್ಷದ ಅಭಿಯಾನದ ನೈಜ ಮುಖವನ್ನು ಬಹಿರಂಗಪಡಿಸಿದೆ ಎಂದು
ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು ಅದಕ್ಕಾಗಿ ಮಹಿಳಾ ಮೀತಿ ವಿಷಯವನ್ನು ಒಂದು ಸಾಧನವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

Latest

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

VISTARANEWS.COM


on

ಬೆಂಗಳೂರು: ನನ್ನ ಮೇಲೆ ನಡೆದ ಇಡಿ ದಾಳಿಗೂ ನನ್ನ ತಂದೆ, ಶಾಸಕ ಬಿಡಿಎ ಅಧ್ಯಕ್ಷರೂ ಆದ ಎನ್.ಎ. ಹ್ಯಾರಿಸ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ನನ್ನ ತಮ್ಮನ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ನಳಪಾಡ್‌ ಸ್ಪಷ್ಟಪಡಿಸಿದ್ದಾರೆ. ಶ್ರೀಕಿ ಜತೆ ಬಿಟ್‌ ಕಾಯಿನ್‌ ಅವ್ಯವಹಾರ ನಡೆಸಿರುವುದಕ್ಕೆ ಸಂಬಂಧಪಟ್ಟಂತೆ ನಿನ್ನೆ ನಳಪಾಡ್‌ ಅವರ ಮೇಲೆ ಜಾರಿ ನಿರ್ಧೇಶನಾಲಯ ದಾಳಿ ನಡೆಸಿತ್ತು. ಇಂದು ಪ್ರತಿಕ್ರಿಯೆ ನೀಡಿದ ಅವರು, ಶ್ರೀಕಿ ನನಗೆ ಪರಿಚಯ ಇಲ್ಲ ಎಂದು ಹೇಳುವುದಿಲ್ಲ. ಶ್ರೀಕಿ ಜತೆಯಲ್ಲಿ ಕುಳಿತು ಊಟ ಮಾಡಿರಬಹುದು ಅಷ್ಟೇ. ನನ್ನ ತಂದೆ ಹ್ಯಾರಿಸ್‌ ಅವರಿಗೆ ಸಚಿವ ಹುದ್ದೆ ತಪ್ಪಿಸಲು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಹೇಳಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Latest24 minutes ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest6 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest7 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest1 day ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌