Hindu Girl Murder: ಯುವತಿ ಬರ್ಬರ ಕೊಲೆ ಪ್ರಕರಣ; ಹಂತಕ ದಾವೂದ್‌ ಶೇಖ್‌ ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯ ಪತ್ತೆ - Vistara News

ಕ್ರೈಂ

Hindu Girl Murder: ಯುವತಿ ಬರ್ಬರ ಕೊಲೆ ಪ್ರಕರಣ; ಹಂತಕ ದಾವೂದ್‌ ಶೇಖ್‌ ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯ ಪತ್ತೆ

Hindu Girl Murder: ಮುಂಬಯಿಯ ಉರಾನ್‌ನ ಯಶಶ್ರೀ ಶಿಂಧೆ ಕೊಲೆ ಪ್ರಕರಣದ (Murder Case) ತನಿಖೆ ನಡೆಸುತ್ತಿದ್ದ ವೇಳೆ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು, ಇದರಲ್ಲಿ ಯುವತಿಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವುದ್ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

VISTARANEWS.COM


on

Hindu Girl Murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವಿ ಮುಂಬಯಿ: ಯಶಶ್ರೀ ಶಿಂಧೆ ಕೊಲೆ ಪ್ರಕರಣಕ್ಕೆ (Hindu Girl Murder) ಮಹತ್ವದ ಸಾಕ್ಷಿಯೊಂದು ಲಭ್ಯವಾಗಿದೆ. ಆರೋಪಿ ದಾವೂದ್‌ ಶೇಖ್ (Accused Daud Shaikh) ಯುವತಿಯನ್ನು ಹಿಂಬಾಲಿಸುತ್ತಿರುವ ಸಿಸಿಟಿವಿ ದೃಶ್ಯಗಳು (CCTV footage) ಪತ್ತೆಯಾಗಿದೆ. ದಾವುದ್‌ ಶೇಖ್‌ನನ್ನು ಈಗಾಗಲೇ ಕರ್ನಾಟಕದ ಗುಲ್ಬರ್ಗದಲ್ಲಿ ನವಿ ಮುಂಬೈ ಕ್ರೈಂ ಬ್ರಾಂಚ್ (Navi Mumbai Crime Branch) ಘಟಕದ ಪೊಲೀಸರು ಬಂಧಿಸಿದ್ದಾರೆ.

ಉರಾನ್‌ನ 20 ವರ್ಷದ ಯಶಶ್ರೀ ಶಿಂಧೆ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವಾಗ ಹೊಸ ಸಿಸಿಟಿವಿ ದೃಶ್ಯಾವಳಿಗಳು ಕಂಡು ಬಂದಿವೆ. ಇದರಲ್ಲಿ ಯಶಶ್ರೀಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವೂದ್‌ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

Murder Case
Murder Case


ಜುಲೈ 25ರ ಸಿಸಿಟಿವಿ ದೃಶ್ಯಾವಳಿಯಲ್ಲಿ ಯಶಶ್ರೀ ಶಿಂಧೆ ಮುಂಬಯಿಯ ಉರಾನ್ ಮಾರುಕಟ್ಟೆಯ ಹಿಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಕೆಲವೇ ನಿಮಿಷಗಳಲ್ಲಿ ಆರೋಪಿ ದಾವುದ್‌ ಶೇಖ್ ಆಕೆಯನ್ನು ಹಿಂಬಾಲಿಸಿಕೊಂಡು ಅದೇ ಸ್ಥಳದಿಂದ ಹಾದುಹೋಗುವುದನ್ನು ಕಾಣಬಹುದು. ಜುಲೈ 25ರಿಂದ ನಾಪತ್ತೆಯಾಗಿದ್ದ ಯಶಶ್ರೀ ಮೃತ ದೇಹ ಜುಲೈ 27ರ ಮುಂಜಾನೆ ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕರ್ನಾಟಕದಲ್ಲಿ ಆರೋಪಿಯ ಬಂಧನ

ಪ್ರಕರಣದ ತನಿಖೆ ನಡೆಸಿಕೊಂಡು ಕರ್ನಾಟಕಕ್ಕೆ ಬಂದ ನವಿ ಮುಂಬಯಿ ಅಪರಾಧ ವಿಭಾಗದ ಕೇಂದ್ರ ಘಟಕವು 24 ವರ್ಷದ ದಾವುದ್ ಶೇಖ್‌ನನ್ನು ಗುಲ್ಬರ್ಗ ಜಿಲ್ಲೆಯ ಶಾಹಪುರ್ ಬೆಟ್ಟದ ಪ್ರದೇಶದಿಂದ ಬಂಧಿಸಿದೆ.

2019ರಲ್ಲಿ ಯಶಶ್ರೀಯ ಬಗ್ಗೆ ತಿಳಿದಿದ್ದ ಶೇಖ್ ಆಕೆಯೊಂದಿಗೆ ಸ್ನೇಹ ನಡೆಸಲು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಸಂತ್ರಸ್ತೆಯ ತಂದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಅನಂತರ ಬಂಧಿಸಲಾಗಿತ್ತು. ಸುಮಾರು ಆರು ತಿಂಗಳು ಜೈಲಿನಲ್ಲಿದ್ದ ಶೇಖ್ ಬಿಡುಗಡೆಯಾದ ಬಳಿಕ ತನ್ನ ತವರೂರು ಕರ್ನಾಟಕಕ್ಕೆ ಬಂದು ಡ್ರೈವರ್ ಕೆಲಸ ಮಾಡಿಕೊಂಡಿದ್ದ.

ತ್ರಿಕೋನ ಪ್ರೇಮ

ಪೊಲೀಸರ ಪ್ರಕಾರ ತ್ರಿಕೋನ ಪ್ರೇಮದಿಂದಾಗಿ ಶೇಖ್ ಮತ್ತು ಶಿಂಧೆ ನಡುವಿನ ಸಂಬಂಧವು ಹದಗೆಡಲು ಪ್ರಾರಂಭಿಸಿತು. ಸಂತ್ರಸ್ತೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದ್ದು, ಇದು ಶೇಖ್‌ನನ್ನು ಕೆರಳಿಸಿತು ಎನ್ನಲಾಗಿದೆ. ಜುಲೈ 22ರಂದು ಕರೆ ದಾಖಲೆಗಳ ಪ್ರಕಾರ ಶೇಖ್ ಉರಾನ್‌ಗೆ ಬಂದು ಜುಲೈ 25ರಿಂದ ಫೋನ್ ಸ್ವಿಚ್ ಆಫ್ ಮಾಡಿದ್ದ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಶೇಖ್ ಹತಾಶೆಗೊಂಡಿರುವುದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಸ್ಪಷ್ಟವಾಗಿದೆ. ಜುಲೈ 25ರಂದು ಶಿಂಧೆಯನ್ನು ಇರಿದು ಕೊಲೆ ಮಾಡಲು ಕಾರಣವಾದ ನಿಖರವಾದ ಘಟನೆಗಳು ಇನ್ನೂ ತಿಳಿದು ಬರಬೇಕಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ನವಿ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: Brutal Murder: ಮುಂಬಯಿ ಯುವತಿಯನ್ನು ಬರ್ಬರವಾಗಿ ಕೊಂದ ಪಾತಕಿ ದಾವೂದ್ ಯಾದಗಿರಿಯಲ್ಲಿ ಆರೆಸ್ಟ್‌

ಶಿಂಧೆಯ ಹತ್ಯೆಯನ್ನು ‘ಕ್ರೂರ’ ಎಂದು ವಿವರಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸುಳ್ಳು ಎಂದು ವಲಯ I ರ ಉಪ ಪೊಲೀಸ್ ಆಯುಕ್ತ ವಿವೇಕ್ ಪನ್ಸಾರೆ ಸ್ಪಷ್ಟಪಡಿಸಿದ್ದಾರೆ. ಶಿಂಧೆಯವರನ್ನು ಇರಿದು ಸಾಯಿಸಲಾಗಿದೆ. ಆದರೆ ಆಕೆಯ ಖಾಸಗಿ ಅಂಗಗಳಿಗೆ ಗಾಯವಾಗಿದೆ. ಆಕೆಯ ತಲೆಯನ್ನು ಒಡೆದು ಹಾಕಲಾಗಿದೆ, ಆಕೆಯ ಸ್ತನಗಳು, ಕೈಗಳನ್ನು ಕತ್ತರಿಸಲಾಗಿದೆ ಎಂಬ ಹೇಳಿಕೆಗಳು ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಮಾಹಿತಿ. ಕೊಲೆಯ ಹಿಂದಿನ ಉದ್ದೇಶ ತ್ರಿಕೋನ ಪ್ರೇಮವೇ ಹೊರತು ಲವ್ ಜಿಹಾದ್ ಅಲ್ಲ ಎನ್ನುವುದು ಪೊಲೀಸರ ಹೇಳಿಕೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

ತೆಲಂಗಾಣದಲ್ಲಿ ಕಳೆದ 24 ಗಂಟೆಯಲ್ಲಿಯೇ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಜಾಬ್‌ ಸಿಕ್ಕ ಖುಷಿಯಲ್ಲಿ ಪಾರ್ಟಿ ಕೊಟ್ಟ ಗೆಳತಿ ಮೇಲೆಯೇ ಇಬ್ಬರು ಗೆಳೆಯರು ಅತ್ಯಾಚಾರ ಎಸಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಖಾಸಗಿ ಬಸ್‌ನಲ್ಲಿ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಸ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Girl
Koo

ಹೈದರಾಬಾದ್:‌ ಹೆಣ್ಣುಮಕ್ಕಳಿಗೆ ಮನೆಯ ಹೊರಗೆ ಬಿಡಿ ಮನೆಯ ಒಳಗೆ ಕೂಡ ರಕ್ಷಣೆ ಇಲ್ಲದಂತಾಗಿದೆ. ಅಪರಿಚಿತರು ಬಿಡಿ ಸಂಬಂಧಿಕರನ್ನೇ ನಂಬದಂತಹ ಸ್ಥಿತಿ ಎದುರಾಗಿದೆ. ಮಧ್ಯಪ್ರದೇಶದ ರೇವಾದಲ್ಲಿ 13 ವರ್ಷದ ಬಾಲಕನು 9 ವರ್ಷದ ತಂಗಿಯ ಮೇಲೆಯೇ ಅತ್ಯಾಚಾರ (Rape Case) ಎಸಗಿ, ಕೊಲೆ ಮಾಡಿದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಇಂತಹ ಪ್ರಕರಣಗಳು ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಭಯ ಹುಟ್ಟಿಸುತ್ತಿವೆ. ಇದರ ಬೆನ್ನಲ್ಲೇ, ಹೈದರಾಬಾದ್‌ನಲ್ಲಿ (Hyderabad) ಒಬ್ಬ ಬಾಲ್ಯ ಸ್ನೇಹಿತ ಸೇರಿ ಇಬ್ಬರು ಯುವಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಹೈದರಾಬಾದ್‌ ಯುವತಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಾಬ್‌ ಸಿಕ್ಕಿದ್ದು, ಬಾಲ್ಯದ ಸ್ನೇಹಿತನಾದ ಗೌತಮ್‌ ರೆಡ್ಡಿಗೆ ವಿಷಯ ತಿಳಿಸಿದ್ದಾಳೆ. ಆಗ ಗೆಳೆಯನು ಪಾರ್ಟಿ ಕೊಡಿಸು ಎಂದಿದ್ದಾನೆ. ಜಾಬ್‌ ಸಿಕ್ಕ ಖುಷಿಯಲ್ಲಿದ್ದ ಯುವತಿಯು ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಕೊಡಿಸುವುದಾಗಿ ಒಪ್ಪಿಕೊಂಡಿದ್ದಾಳೆ. ಸೋಮವಾರ (ಜುಲೈ 29) ಸಂಜೆ ಗೌತಮ್‌ ರೆಡ್ಡಿಯು ತನ್ನ ಮತ್ತೊಬ್ಬ ಸ್ನೇಹಿತನೊಂದಿಗೆ ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್‌ಗೆ ತೆರಳಿದ್ದಾನೆ. ಅಲ್ಲಿ, ಯುವತಿ, ಗೌತಮ್‌ ರೆಡ್ಡಿ ಹಾಗೂ ಆತನ ಗೆಳೆಯ ಸೇರಿ ಪಾರ್ಟಿ ಮಾಡಿದ್ದಾರೆ. ಅದಾದ ಬಳಿಕ ಇಬ್ಬರೂ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

Crime Scene
Crime Scene

“ಗೌತಮ್‌ ರೆಡ್ಡಿ ಹಾಗೂ ಯುವತಿಯು 2ನೇ ಕ್ಲಾಸ್‌ನಿಂದ 10ನೇ ತರಗತಿವರೆಗೆ ಒಂದೇ ಶಾಲೆಯಲ್ಲಿ ಓದಿದ್ದಾರೆ. ಜಾಬ್‌ ಸಿಕ್ಕ ಖುಷಿಯಲ್ಲಿ ಯುವತಿಯು ಪಾರ್ಟಿಗೆ ಕರೆದಿದ್ದಾಳೆ. ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ ಬಳಿಕ ಕುಡಿದ ಮತ್ತಿನಲ್ಲಿ ಯುವತಿಯನ್ನು ಇಬ್ಬರೂ ಕೋಣೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇಬ್ಬರೂ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ವನಸ್ಥಲಿಪುರಂ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿ ಜಲೇಂದರ್‌ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ತೆಲಂಗಾಣದಲ್ಲಿಯೇ ಮಂಗಳವಾರ (ಜುಲೈ 30) ಬಸ್‌ನಲ್ಲಿ ಮಹಿಳೆ ಮೇಲೆ ಬಸ್‌ ಚಾಲಕನು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿರ್ಮಲ್‌ದಿಂದ ಖಾಸಗಿ ಬಸ್‌ನಲ್ಲಿ ಪ್ರಕಾಶಂ ಜಿಲ್ಲೆಗೆ ಮಹಿಳೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Continue Reading

ಕರ್ನಾಟಕ

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

Puneeth Kerehalli: ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಈ ವೇಳೆ ಪೊಲೀಸರು ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.

VISTARANEWS.COM


on

Puneeth Kerehalli
Koo

ಬೆಂಗಳೂರು: ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣದಲ್ಲಿ ಬಂಧನವಾಗಿದ್ದ ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಗೆ (Puneeth Kerehalli) ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪರಿಶೀಲನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಅರೆಸ್ಟ್‌ ಅಗಿದ್ದ ಪುನೀತ್‌ ಕೆರೆಹಳ್ಳಿಗೆ ಜುಲೈ 27ರಂದು ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಇದರ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.

ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ದೇಶಬಿಟ್ಟು ಹೋಗಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಮತ್ತೆ ಇಂತಹದ್ದೆ ಅಪರಾಧ ಕೃತ್ಯದಲ್ಲಿ ಭಾಗಿ ಆಗಬಾರದು ಎಂದು ಕೋರ್ಟ್‌ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿ, ಮಾಂಸವನ್ನು ವಶಪಡಿಸಿಕೊಂಡಿದ್ದರು. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿದ್ದವು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ದಾಳಿ ಮಾಡಿತ್ತು. ಆದರೆ, ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಂಸದ ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ಆದರೆ, ಅದು ಮೇಕೆ ಮಾಂಸ ಎಂದು ವರದಿಯಲ್ಲಿ ಬಂದಿರುವುದಾಗಿ ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದರು.

ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

murder case
murder case

ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್‌ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.

ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.

ಮದುವೆಯಾದ್ಮೇಲೆ ಪ್ರಕಾಶ್‌ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.

ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.

ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್‌ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.

ಇದನ್ನೂ ಓದಿ: Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್‌ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕ್ರೈಂ

Murder Attempt: ದಟ್ಟ ಅರಣ್ಯದಲ್ಲಿ ಮಹಿಳೆಯನ್ನು ಸರಪಳಿಯಿಂದ ಕಟ್ಟಿ ಪರಾರಿಯಾದ ಮಾಜಿ ಪತಿ!

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೋನುರ್ಲಿ ಗ್ರಾಮದ ಕಾಡಿನಲ್ಲಿ 50 ವರ್ಷದ ಅಮೆರಿಕನ್ ಮಹಿಳೆಯೊಬ್ಬರನ್ನು ಆಕೆಯ ಮಾಜಿ ಪತಿ ಮರಕ್ಕೆ ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಿ (Murder Attempt) ಹೋಗಿದ್ದಾಗಿ ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಾಗಿ ತಮಿಳುನಾಡು, ಗೋವಾದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

VISTARANEWS.COM


on

By

Murder Attempt
Koo

ಮುಂಬಯಿ: ದಟ್ಟವಾದ ಅರಣ್ಯದಲ್ಲಿ (forest area) ಅಮೆರಿಕನ್ ಮಹಿಳೆಯೊಬ್ಬರನ್ನು (American woman) ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿ (Murder Attempt) ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಾರಾಷ್ಟ್ರ ಪೊಲೀಸರು (Maharashtra Police) ಆಕೆಯನ್ನು ರಕ್ಷಿಸಿದ್ದಾರೆ. ಆಕೆಯ ಮಾಜಿ ಪತಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೋನುರ್ಲಿ ಗ್ರಾಮದ ಕಾಡಿನಲ್ಲಿ 50 ವರ್ಷದ ಲಲಿತಾ ಕಯಿ ಕುಮಾರ್ ಎಂಬಾಕೆಯನ್ನು ಮರಕ್ಕೆ ಕಬ್ಬಿಣದ ಸರಪಳಿಯಿಂದ ಕಟ್ಟಿಹಾಕಲಾಗಿತ್ತು. ತನ್ನ ಮಾಜಿ ಪತಿ ತನ್ನನ್ನು ಕಬ್ಬಿಣದ ಸರಪಳಿಯಿಂದ ಕಟ್ಟಿ ಹಾಕಿ ಹೋಗಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ ಎನ್ನಲಾಗಿದೆ.

ಮಹಿಳೆಯ ಕೂಗು ಕೇಳಿದ ಕುರುಬನೊಬ್ಬ ಸರಪಳಿಯಲ್ಲಿ ಸಿಲುಕಿ ಸಂಕಷ್ಟದಲ್ಲಿರುವ ಆಕೆಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರಿಗೆ ಆಕೆಯ ಬಳಿ ಆಧಾರ್ ಕಾರ್ಡ್‌ ಸಿಕ್ಕಿದ್ದು, ಇದರಿಂದ ಆಕೆಯ ತಮಿಳುನಾಡು ವಿಳಾಸ ಸಿಕ್ಕಿದೆ. ಜೊತೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಪಾಸ್‌ಪೋರ್ಟ್‌ನ ಫೋಟೋಕಾಪಿಯೂ ದೊರೆತಿದೆ ಎಂದು ಪೊಲೀಸರು ಹೇಳಿದ್ದಾರೆ.

ಆಕೆಯ ವೀಸಾ ಅವಧಿ ಮುಗಿದಿದೆ ಮತ್ತು ಆಕೆಯ ರಾಷ್ಟ್ರೀಯತೆಯನ್ನು ಖಚಿತಪಡಿಸಿಕೊಳ್ಳಲು ಆಕೆಯ ಎಲ್ಲಾ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪೊಲೀಸರಿಗೆ ದೊರೆತ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ. ಮಹಿಳೆ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇರಲಿಲ್ಲ. ಒಂದೆರಡು ದಿನಗಳಿಂದ ಏನನ್ನೂ ಸೇವಿಸದ ಕಾರಣ ಮತ್ತು ಈ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ದುರ್ಬಲವಾಗಿದ್ದಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕೆಯನ್ನು ಮೊದಲು ಕೊಂಕಣ ಪ್ರದೇಶದ ಸಾವಂತವಾಡಿಯ ಆಸ್ಪತ್ರೆಗೆ ಸೇರಿಸಿ ಬಳಿಕ ಸಿಂಧುದುರ್ಗದ ಓರೋಸ್‌ಗೆ ಕರೆದೊಯ್ಯಲಾಯಿತು. ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಹೆಚ್ಚಿನ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಆಕೆ ಅಪಾಯದಿಂದ ಪಾರಾಗಿದ್ದಾಳೆ. ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಆಕೆಯ ಬಳಿ ವೈದ್ಯಕೀಯ ಪ್ರಿಸ್ಕ್ರಿಪ್ಷನ್‌ಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಮಹಿಳೆ ಬರೆದಿರುವ ಟಿಪ್ಪಣಿಯನ್ನು ಆಧರಿಸಿ ಆಕೆಯ ಮಾಜಿ ಪತಿ ವಿರುದ್ಧ ಕೊಲೆ ಯತ್ನ, ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯ ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ ಅಕ್ರಮ ಬಂಧನದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಿಂಧುದುರ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಅಗರವಾಲ್ ಹೇಳಿದ್ದಾರೆ.

ಮಹಿಳೆಯ ಹೇಳಿಕೆಯನ್ನು ಇನ್ನೂ ಅಧಿಕೃತವಾಗಿ ದಾಖಲಿಸಿಕೊಳ್ಳಬೇಕಾಗಿದೆ. ಆದರೆ ಪ್ರಕರಣದ ದಾಖಲಾದ ಅನಂತರ, ಪೊಲೀಸ್ ತಂಡಗಳು ತನಿಖೆಯನ್ನು ಪ್ರಾರಂಭಿಸಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: Murder Case : ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

ಪೊಲೀಸರು ಆಕೆಯಿಂದ ವಶಪಡಿಸಿಕೊಂಡಿರುವ ಪ್ರಿಸ್ಕ್ರಿಪ್ಷನ್‌ಗಳು ಆಕೆ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಳು ಎಂದು ಸೂಚಿಸುತ್ತದೆ. ಆಕೆಯ ಪತಿ ಮತ್ತು ಇತರ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ಪ್ರಸ್ತುತ ತಮಿಳುನಾಡು ಮತ್ತು ಗೋವಾದಲ್ಲಿವೆ ಎಂದು ಅವರು ಹೇಳಿದರು. ತನಿಖೆಯ ಭಾಗವಾಗಿ ಆಕೆಯ ಸಂಬಂಧಿಕರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ತಮಿಳುನಾಡು, ಗೋವಾ ಮತ್ತು ಇತರ ಕೆಲವು ಸ್ಥಳಗಳಿಗೆ ತೆರಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Continue Reading

Latest

Viral Video: ಸಿಬ್ಬಂದಿಗೆ ಗನ್ ತೋರಿಸಿ ಆಭರಣ ಅಂಗಡಿ ದರೋಡೆ ಮಾಡಿದ ಹೆಲ್ಮೆಟ್‌ಧಾರಿಗಳು; ವಿಡಿಯೊ ನೋಡಿ

Viral Video: ಹೆಲ್ಮೆಟ್ ಧರಿಸಿದ ಮೂವರು ವ್ಯಕ್ತಿಗಳು ಆಭರಣದ ಅಂಗಡಿಗೆ ಪ್ರವೇಶಿಸಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ, ನಂತರ ದರೋಡೆಕೋರರು ಆಭರಣಗಳನ್ನು ದೋಚಿದ್ದಲ್ಲದೆ, ಆಭರಣ ಅಂಗಡಿಯ ಸಿಬ್ಬಂದಿಯೊಬ್ಬರು ಅಲಾರಂ ಆನ್ ಮಾಡಲು ಪ್ರಯತ್ನಿಸಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಂಗಡಿಯನ್ನು ಲೂಟಿ ಮಾಡಿದ ನಂತರ, ಸಿಬ್ಬಂದಿ ಅಲಾರಂ ಆನ್ ಮಾಡುವ ಮೂಲಕ ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದಂತೆ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

VISTARANEWS.COM


on

Viral Video
Koo


ಚಿನ್ನದ ಬೆಲೆ ಏರುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಲೂಟಿ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ಮನೆಗಳಲ್ಲಿ, ಆಭರಣ ಅಂಗಡಿಗಳಲ್ಲಿ ಹೀಗೆ ಎಲ್ಲೆಂದರಲ್ಲಿ ಚಿನ್ನವನ್ನು ಲೂಟಿ ಮಾಡುತ್ತಿದ್ದಾರೆ. ಅದಕ್ಕಾಗಿ ಜನರ ಪ್ರಾಣವನ್ನು ಕೂಡ ತೆಗೆಯುತ್ತಿದ್ದಾರೆ. ಇದೀಗ ಅಂತಹದೊಂದು ದರೋಡೆ ಪ್ರಕರಣ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನವೀ ಮುಂಬೈನಲ್ಲಿ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಮಳಿಗೆಯನ್ನು ಲೂಟಿ ಮಾಡಿದ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಜುಲೈ 28ರ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆದರೆ ಅದರ ವಿಡಿಯೊ ಜುಲೈ 29 ರಂದು ಆನ್‍ಲೈನ್‍ನಲ್ಲಿ ಕಾಣಿಸಿಕೊಂಡಿದೆ. 2 ನಿಮಿಷ 20 ಸೆಕೆಂಡುಗಳ ಈ ವಿಡಿಯೊ ಕ್ಲಿಪ್‍ನಲ್ಲಿ ಹೆಲ್ಮೆಟ್ ಧರಿಸಿದ ಮೂವರು ವ್ಯಕ್ತಿಗಳು ಆಭರಣದ ಅಂಗಡಿಗೆ ಪ್ರವೇಶಿಸಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ, ನಂತರ ದರೋಡೆಕೋರರು ಆಭರಣಗಳನ್ನು ದೋಚಿದ್ದಲ್ಲದೆ, ಆಭರಣ ಅಂಗಡಿಯ ಸಿಬ್ಬಂದಿಯೊಬ್ಬರು ಅಲಾರಂ ಆನ್ ಮಾಡಲು ಪ್ರಯತ್ನಿಸಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಂಗಡಿಯನ್ನು ಲೂಟಿ ಮಾಡಿದ ನಂತರ, ಸಿಬ್ಬಂದಿ ಅಲಾರಂ ಆನ್ ಮಾಡುವ ಮೂಲಕ ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದಂತೆ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಆರೋಪಿಗಳು ಆಭರಣ ಅಂಗಡಿಯಿಂದ 11 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಲೂಟಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ನವೀ ಮುಂಬೈ ಪೊಲೀಸರ ತಂಡವು ಸ್ಥಳಕ್ಕೆ ತಲುಪಿ ತನಿಖೆಯನ್ನು ಪ್ರಾರಂಭಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ದರೋಡೆಕೋರರು ರಾತ್ರಿ 10.30 ರ ಸುಮಾರಿಗೆ ಬಿಎಂ ಜ್ಯುವೆಲ್ಲರ್ ಗೆ ನುಗ್ಗಿದ್ದಾರೆ. ಮತ್ತು ಅಲ್ಲಿ ಅನೇಕ ಬಾರಿ ಗುಂಡು ಹಾರಿಸಿದ್ದಾರೆ. ಕೆಲವು ಕ್ಷಣಗಳ ನಂತರ, ಅವರು ಬೈಕ್‍ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ, ಮತ್ತು ಸ್ಥಳೀಯರು ಅವರನ್ನು ಬೆನ್ನಟ್ಟಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: 20ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಚಿನ್ನಾಭರಣ ಎಗರಿಸಿದ್ದ ವಂಚಕ ಪೊಲೀಸ್‌ ಬಲೆಗೆ ಬಿದ್ದಿದ್ದು ಹೇಗೆ?

ಘಟನೆಯ ಬಗ್ಗೆ ಮಾತನಾಡಿದ ನವೀ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು, “ಕಪ್ಪು ಬಟ್ಟೆ ಮತ್ತು ರಿವಾಲ್ವರ್‌ಗಳನ್ನು ಹೊಂದಿದ್ದ ಮೂವರು ಅಂಗಡಿಗೆ ಪ್ರವೇಶಿಸಿ, ಸಿಬ್ಬಂದಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ 11.80 ಲಕ್ಷ ರೂ.ಮೌಲ್ಯದ ಆಭರಣಗಳನ್ನು ಲೂಟಿ ಮಾಡಿದ್ದಾರೆ. ಮೂರು ನಿಮಿಷಗಳಲ್ಲಿ, ಅವರು ನಾಲ್ಕರಿಂದ ಐದು ಸುತ್ತು ಗುಂಡು ಹಾರಿಸಿದರು, ಆದರೆ ಯಾರೂ ಗಾಯಗೊಂಡಿಲ್ಲ. ಡಕಾಯಿತಿ ಮತ್ತು ಇತರ ಅಪರಾಧಗಳಿಗಾಗಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಲು ಪ್ರಯತ್ನ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ16 seconds ago

Paris Olympics 2024 : 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ ಫೆನ್ಸಿಂಗ್​ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಪಂದ್ಯ ಗೆದ್ದ ಈಜಿಫ್ಟ್​​ನ ನಾದಾ ಹಫೀಜ್​

karnataka Rain
ಮಳೆ22 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ35 mins ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ41 mins ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ45 mins ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

8th Pay Commission
ದೇಶ51 mins ago

8th Pay Commission: 8ನೇ ವೇತನ ಆಯೋಗ ಜಾರಿಯಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

Richest Cricketers
ಕ್ರಿಕೆಟ್51 mins ago

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

Puneeth Kerehalli
ಕರ್ನಾಟಕ57 mins ago

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

IPL 2025
ಕ್ರಿಕೆಟ್58 mins ago

IPL 2025: ಬಿಸಿಸಿಐ ಈ ನಿಯಮ ಜಾರಿಗೆ ತಂದರೆ ಧೋನಿ ಮುಂದಿನ ಐಪಿಎಲ್​ ಆಡುವುದು ಅನುಮಾನ!

Dinesh Mongia
ಪ್ರಮುಖ ಸುದ್ದಿ1 hour ago

Dinesh Mongia : ಭಾರತ ತಂಡದ ಮಾಜಿ ಆಟಗಾರ ದಿನೇಶ್ ಮೋಂಗಿಯಾ ಗೋವಾ ಕ್ರಿಕೆಟ್​ ತಂಡದಲ್ಲಿ ಹೊಸ ಜವಾಬ್ದಾರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ24 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌