Site icon Vistara News

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್‌ ರನ್‌, ಟೆಕ್ಕಿ ಸಾವು

hit and run bangalore

hit and run bangalore

ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದುದರಿಂದ ಗಾಯಗೊಂಡ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಾಹನ ಸ್ಥಳದಿಂದ ಪರಾರಿಯಾಗಿದೆ.

ಸರ್ಜಾಪುರ ರಸ್ತೆಯ ದೊಡ್ಡಕನ್ನಲ್ಲಿ ಬಳಿಯ ಎಇಟಿ ಕಾಲೇಜು ಬಳಿ ಸೋಮವಾರ ರಾತ್ರಿ ಘಟನೆ ನಡೆದಿದೆ. ಮಧ್ಯರಾತ್ರಿ ಕೆಲಸ ಮುಗಿಸಿ ಬಂದು ವಾಕ್ ಮಾಡುತ್ತಿದ್ದ ಟೆಕ್ಕಿ ವಿಶ್ವನಾಥ್ ಗೌಡ ಅವರಿಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕೆಳ ಬಿದ್ದ ವಿಶ್ವನಾಥ್ ಗೌಡ ಮೇಲೆ ವಾಹನ ಹರಿದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿಶ್ವನಾಥ ಗೌಡ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ. ಹೆಚ್‌ಎಸ್ಆರ್ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಟ್ ಅಂಡ್ ರನ್ ಮಾಡಿರುವ ಅಪರಿಚಿತ ವಾಹನ ಪತ್ತೆಗೆ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ | 24 ಗಂಟೆಯಲ್ಲಿ 3ನೇ ಹಿಟ್‌ ಆ್ಯಂಡ್‌ ರನ್‌ ಇದು; ಪೊಲೀಸ್‌ ಕಾನ್‌ಸ್ಟೆಬಲ್‌ ಮೇಲೆ ಟ್ರಕ್‌ ಹಾಯಿಸಿದ ಚಾಲಕ

Exit mobile version