Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ! - Vistara News

ಕ್ರೈಂ

Honey Trap: ಎಂಎಲ್‌ಎ ಹರೀಶ್‌ ಗೌಡಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗ್‌ ಸೆರೆ, ಇವರ ಖತರ್‌ನಾಕ್‌ ಐಡಿಯಾ ನೋಡಿ!

Honey Trap: ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

VISTARANEWS.COM


on

honey trap harish gowda
ಆರೋಪಿ ಸಂತೋಷ್‌, ಶಾಸಕ ಹರೀಶ್‌ ಗೌಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ ಗೌಡ (MLA Harish Gowda) ಸೇರಿದಂತೆ ಹಲವು ವಿಐಪಿಗಳಿಗೆ ಹನಿಟ್ರ್ಯಾಪ್‌ (Honey Trap) ಗಾಳ ಹಾಕಿದ್ದ ಖತರ್‌ನಾಕ್‌ ಗ್ಯಾಂಗನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಇವರು ವಿಶಿಷ್ಟ ವಿಧಾನ ಅನುಸರಿಸಿ, ಹೋಟೆಲ್‌ಗಳ ರೂಮಿನಲ್ಲಿ ಉಳಿದುಕೊಳ್ಳುತ್ತಿದ್ದ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ (Blackmail) ಮಾಡುತ್ತಿದ್ದರು ಎಂದು ಗೊತ್ತಾಗಿದೆ.

ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದ ಶಾಸಕರು, ಸಚಿವರು, ಉದ್ಯಮಿಗಳು, ವಿಶ್ವ ವಿದ್ಯಾಲಯಗಳ ಕುಲಪತಿಗಳು ಸೇರಿ ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ, ನಂತರ ಅವರದ್ದೇ ವಿಡಿಯೋ ಎನ್ನುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಈ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ.

ಸಮಾಜದ ಗಣ್ಯ ವ್ಯಕ್ತಿಗಳಿಗೆ ಹನಿಟ್ರಾಪ್ ಮೂಲಕ ಬ್ಲಾಕ್ ಮೇಲ್ ಮಾಡ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೀಗೆ, ಹನಿಟ್ರ್ಯಾಪ್ ಮಾಡಿ ಕೋಟ್ಯಾಂತರ ರೂ. ಹಣಕ್ಕೆ ಬೆಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ್ದ ಆರೋಪಿಗಳು ಮೈಸೂರು, ಬೆಂಗಳೂರು ಸೇರಿ ವವಿಧೆಡೆ ಇಂತಹ ಕೃತ್ಯಗಳನ್ನು ಎಸಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಬೆಂಗಳೂರಿನ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕರು ನೀಡಿದ ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ.

ವಿಶ್ವವಿದ್ಯಾಲಯದ ಉಪಕುಲಪತಿಗಳೊಬ್ಬರು ಹೀಗೆ ಬ್ಲಾಕ್‌ಮೇಲ್‌ಗೆ ಒಳಗಾಗಿದ್ದು, ಈ ಬಗ್ಗೆ ಶಾಸಕ ಶಾಸಕ ಹರೀಶ್ ಗೌಡ ಅವರಿಗೆ ಮಾಹಿತಿ ನೀಡಿದ್ದರು. ಉಪಕುಲಪತಿಗಳ ಬೆಂಬಲಕ್ಕೆ ನಿಂತ ಶಾಸಕ ಹರೀಶ್‌ ಗೌಡ, ದೂರು ನೀಡಿ ಧೈರ್ಯ ಹೇಳಿದ್ದರು. ಆರೋಪಿಗಳ ಗ್ಯಾಂಗ್ ಪುನಃ ಶಾಸಕ ಹರೀಶ್‌ ಗೌಡ ವಿರುದ್ಧವೇ ಸುಳ್ಳು ಹನಿಟ್ರ್ಯಾಪ್ ಮಾದರಿ ವಿಡಿಯೋ ಸೃಜಿಸಿ ಬೆದರಿಕೆ ಹಾಕಲು ಮುಂದಾಗಿದೆ. ಈ ಪ್ರಕರಣ ಬೇಧಿಸಿದ ಸಿಸಿಬಿ ಪೊಲೀಸರಿಗೆ ಮೈಸೂರು ಮೂಲದ ಸಂತೋಷ್ ಮತ್ತು ಪುಟ್ಟರಾಜು ಎಂಬ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಗ್ಯಾಂಗ್‌ನಲ್ಲಿ ಒರ್ವ ಯುವತಿ ಕೂಡ ಭಾಗಿಯಾಗಿದ್ದಾಳೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಆರೋಪಿಗಳು ಪ್ರಭಾವಿಗಳ ಸಂಪರ್ಕ ಮಾಡಿ ಅವರನ್ನು ಫಾಲೋ ಮಾಡುತ್ತಿದ್ದರು. ಬಳಿಕ ವಿಐಪಿಗಳನ್ನು ಭೇಟಿ ಮಾಡಿ ನಂಬರ್ ಪಡೆದುಕೊಳ್ಳುತ್ತಿದ್ದರು. ನಂತರ, ವಿಐಪಿಗಳ ಚಲನವಲನದ ಮೇಲೆ ಹದ್ದಿನ ಕಣ್ಣಿಡುತ್ತಿದ್ದ ಆರೋಪಿಗಳು ವಿಐಪಿಗಳು ಉಳಿದುಕೊಳ್ಳುತ್ತಿದ್ದ ಐಷಾರಾಮಿ ಹೋಟೆಲ್‌ಗಳ ರೂಮು ಬುಕಿಂಗ್, ಚೆಕ್-ಇನ್ ಹಾಗೂ ಚೆಕ್-ಔಟ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ವಿಐಪಿಗಳು ಹೋಟೆಲ್‌ನ ರೂಮು ಖಾಲಿ ಮಾಡಿಕೊಂಡು ಹೋದ ನಂತರ ಅವರು ಉಳಿದುಕೊಂಡಿದ್ದ ರೂಮ್ ಅನ್ನು ಬಾಡಿಗೆ ಪಡೆದು ಈ ಆರೋಪಿಗಳು ಅಲ್ಲಿ ಉಳಿದುಕೊಳ್ಳುತ್ತಿದ್ದರು.

ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಯುವತಿಯನ್ನು ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ವಿಐಪಿಗಳು ಉಳಿದುಕೊಂಡ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿರುವ ರೀತಿಯಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದರು. ಬಳಿಕ ಆ ರೂಮಿನಲ್ಲಿ ಉಳಿದುಕೊಂಡಿದ್ದ ವಿಐಪಿ ಈ ಯುವತಿಯನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ರೀತಿಯಲ್ಲಿ ವಿಡಿಯೋ ಕ್ರಿಯೇಟ್ ಮಾಡಿ ಅದನ್ನು ವಿಐಪಿಗಳಿಗೆ ಕಳಿಸುತ್ತಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಾಗೂ ಪೊಲೀಸರಿಗೆ ಕೊಡುವುದಾಗಿ ಬೆದರಿಕೆ ಒಡ್ಡಿ ಹಣ ಪೀಕುತ್ತಿದ್ದರು.

ಇದನ್ನೂ ಓದಿ: Honey trap : ಉದ್ಯಮಿಯ ಬೆತ್ತಲೆ ವಿಡಿಯೊ ತೆಗೆದು Honey trap; ಮುಸ್ಲಿಂ ಮಹಿಳೆ ಸಹಿತ ಮೂವರ ಸೆರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

Road Accident: ಶುಕ್ರವಾರ ರಾತ್ರಿ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ ವೇಯ ಕಡ್ವಾಂಚಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟು, 4 ಮಂದಿ ಗಾಯಗೊಂಡಿದ್ದಾರೆ. ಮುಂಬೈಯಿಂದ ಸುಮಾರು 400 ಕಿ.ಮೀ. ದೂರದಲ್ಲಿ, ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಈ ಅವಘಢ ಸಂಭವಿಸಿದೆ. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಇಂಧನ ತುಂಬಿಸಿಕೊಂಡ ಬಂದ ಸ್ವಿಫ್ಟ್ ಡಿಜೈರ್ ಕಾರು ರಾಂಗ್ ಸೈಡ್‌ನಿಂದ ಹೆದ್ದಾರಿಗೆ ಪ್ರವೇಶಿಸಿ ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದಿದೆ.

VISTARANEWS.COM


on

Road Accident
Koo

ಮುಂಬೈ: ಶುಕ್ರವಾರ ರಾತ್ರಿ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ ವೇ (Mumbai-Nagpur Expressway or Samruddhi Mahamarg)ಯ ಕಡ್ವಾಂಚಿ (Kadwanchi) ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 6 ಮಂದಿ ಮೃತಪಟ್ಟು, 4 ಮಂದಿ ಗಾಯಗೊಂಡಿದ್ದಾರೆ. ಮುಂಬೈಯಿಂದ ಸುಮಾರು 400 ಕಿ.ಮೀ. ದೂರದಲ್ಲಿ, ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದು ಈ ಅವಘಢ ಸಂಭವಿಸಿದೆ (Road Accident).

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಇಂಧನ ತುಂಬಿಸಿಕೊಂಡ ಬಂದ ಸ್ವಿಫ್ಟ್ ಡಿಜೈರ್ ಕಾರು ರಾಂಗ್ ಸೈಡ್‌ನಿಂದ ಹೆದ್ದಾರಿಗೆ ಪ್ರವೇಶಿಸಿ ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸ ಎಷ್ಟು ತೀವ್ರವಾಗಿತ್ತೆಂದರೆ ಎರ್ಟಿಗಾ ಕಾರು ಮತ್ತು ಅದರಲ್ಲಿದ್ದ ಪ್ರಯಾಣಿಕರು ಗಾಳಿಯಲ್ಲಿ ಹಾರಿ ರಸ್ತೆಗೆ ಎಸೆಯಲ್ಪಟ್ಟರೆ ಸ್ವಿಫ್ಟ್ ಡಿಜೈರ್ ಗುರುತೇ ಸಿಗದಂತೆ ನಜ್ಜುಗುಜ್ಜಾಗಿದೆ.

ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಸಮೃದ್ಧಿ ಹೆದ್ದಾರಿ ಪೊಲೀಸರು ಮತ್ತು ಜಲ್ನಾ ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರೇನ್‌ ಸಹಾಯದಿಂದ ಕಾರನ್ನು ಹಿಂತೆಗೆದಿದ್ದಾರೆ.

ಸಮೃದ್ಧಿ ಮಹಾಮಾರ್ಗ ಎಂದೂ ಕರೆಯಲ್ಪಡುವ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ ವೇ ಆರು ಪಥ ಮತ್ತು 701 ಕಿ.ಮೀ ಉದ್ದ ಹೊಂದಿದ್ದು, ಅತೀ ಹೆಚ್ಚು ವಾಹನ ಸಂಚರಿಸುವ ಹೆದ್ದಾರಿಗಳಲ್ಲಿ ಒಂದು ಎನಿಸಿಕೊಂಡಿದೆ. ಜತೆಗೆ ಇದು ಮುಂಬೈ ಮತ್ತು ರಾಜ್ಯದ ಮೂರನೇ ಅತಿದೊಡ್ಡ ನಗರ ನಾಗ್ಪುರವನ್ನು ಸಂಪರ್ಕಿಸುವ ದೇಶದ ಅತಿ ಉದ್ದದ ಗ್ರೀನ್ ಫೀಲ್ಡ್ ರಸ್ತೆ ಯೋಜನೆಗಳಲ್ಲಿ ಒಂದಾಗಿದೆ.

ಹಾವೇರಿಯಲ್ಲಿ ಭಯಾನಕ ಅಪಘಾತ: ಲಾರಿಗೆ ಟಿಟಿ ಡಿಕ್ಕಿ, 13 ಜನರ ಸಾವು

ಹಾವೇರಿ: ಹಾವೇರಿಯ ಬ್ಯಾಡಗಿಯಲ್ಲಿ (Haveri Accident) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident), ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟಿದ್ದಾರೆ. ಈ ದುರಂತ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಪೊಲೀಸರು ಮೃತರ ಹಿನ್ನಲೆ ಪತ್ತೆ ಹಚ್ಚುತ್ತಿದ್ದಾರೆ.

ಇದನ್ನೂ ಓದಿ: Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ 13 ಮಂದಿಯಲ್ಲಿ ಒಂದು ಮಗು ಸಹ ಇದೆ. ಸ್ಥಳಕ್ಕೆ ಹಾವೇರಿ ಎಸ್‌ಪಿ ಅಂಶುಕುಮಾರ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಟಿಟಿ ವಾಹನದಿಂದ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಹೊರತೆಗೆದಿದ್ದು, ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 13 ಜನರ ಸಾವಿನ ಸುದ್ದಿ ಕೇಳಿ ಎಮ್ಮೆಹಟ್ಟಿ ಗ್ರಾಮದ ಜನತೆ ಶಾಕ್ ಆಗಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

Continue Reading

ಕ್ರೈಂ

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Physical Abuse: ಬಾಲಕಿಯ ಮನೆಗೆ ಆರೋಪಿ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

physical Abuse
Koo

ಕಲಬುರಗಿ: ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ (Physical Abuse) ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

ಇದನ್ನೂ ಓದಿ | vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಕಾರವಾರ/ಉಡುಪಿ: ಭಾರಿ ಮಳೆ ಎಫೆಕ್ಟ್‌ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಬೃಹತ್ ಮರ (Road Accident) ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ ಘಟನೆ ನಡೆದಿದೆ. ಅನಿಲಗೋಡ ಗ್ರಾಮದ ಸವಾರ ಬಾಬು ನಾಯ್ಕ(52), ಭಾಗೀರಥಿ ನಾಯ್ಕ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಈ ದಂಪತಿ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಬೈಕ್‌ನಲ್ಲಿ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಏಕಾಏಕಿ ಬೃಹತ್‌ ಮರವು ಇವರಿಬ್ಬರ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸವಾರರನ್ನು ಕೂಡಲೇ ಸ್ಥಳೀಯರು ಹಾಗೂ ಭಟ್ಕಳದ ಬಿಜೆಪಿ ಮುಖಂಡರು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಡರಾತ್ರಿ ಹೊತ್ತಿ ಉರಿದ ಕಾರು

Road Accident Car Fire

ತಡರಾತ್ರಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಉಡುಪಿಯ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ಘಟನೆ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ರಿಡ್ಜ್ ಕಾರು ಬೆಂಕಿಗಾಹುತಿ ಆಗಿದೆ. ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕಾರಿನ ಬಾನೆಟ್‌ನಲ್ಲಿ ಹೊಗೆ ಕಂಡು ಕಾರು ಚಾಲಕ ಹೊರಬಂದಿದ್ದು, ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಮಾಲೀಕನ ಮಾಹಿತಿ ಮೇಲೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Continue Reading

ಪ್ರಮುಖ ಸುದ್ದಿ

BS Yediyurappa: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

BS Yediyurappa: ಮಾಜಿ ಸಿಎಂ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಮಧ್ಯಂತರ ಜಾಮೀನು ವಿಸ್ತರಿಸಿ, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆವರೆಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಜೂನ್‌ 14ರಂದು ಹೈಕೋರ್ಟ್‌ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಬಿ.ಎಸ್‌. ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ. ಅಲ್ಲದೇ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿದೆ.

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.

ಇದನ್ನೂ ಓದಿ | vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Prajwal Revanna Case

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌ ಸಿಕ್ಕಿದೆ. ತಮ್ಮ ಮೇಲೆ ಯಾವುದೇ ಆರೋಪವಿಲ್ಲದಿದ್ದರೂ ಕೇಸ್ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ ಪ್ರಶ್ನಿಸಿ ಪ್ರೀತಂ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್‌, ಪ್ರೀತಂ ಗೌಡರನ್ನು ಬಂಧಿಸದೆ, ತನಿಖೆ ಮುಂದುವರಿಸಲು ಎಸ್ಐಟಿಗೆ ಸೂಚನೆ ನೀಡಿದೆ.

ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಗರದ ಸಿಐಡಿ ಸೈಬರ್ ಠಾಣೆಯಲ್ಲಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ, ಕಿರಣ್​, ಶರತ್​ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ), 354 (ಡಿ), 354 ಬಿ, 506 ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಯಾವುದೇ ಆರೋಪವಿಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಜನ ಮಾತನಾಡುತ್ತಿದ್ದಾರೆಂಬ ಆಧಾರದ ಮೇಲೆ ಕೇಸ್ ಹಾಕಿದ್ದಾರೆ ಎಂದು ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಇದಕ್ಕೆ ಎಸ್‌ಪಿಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿ, ಆರೋಪಿ ವಿರುದ್ಧ ಸಂತ್ರಸ್ತೆಯ ವಿಡಿಯೊ ಹಂಚಿದ ಗಂಭೀರ ಆರೋಪವಿದೆ. ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದರು. ಈ ವೇಳೆ ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಮಾತನಾಡಿ, ಜನ ಮಾತನಾಡಿಕೊಳ್ಳುತ್ತಿರುವ ಕಾರಣಕ್ಕೆ ದೂರು ನೀಡಿದ್ದಾರೆ. ಸರ್ಕಾರದವರೇ 3 ಲಕ್ಷ ಪೆನ್ ಡ್ರೈವ್ ಹಂಚಿದ್ದಾರೆಂದು ಜನ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಸರ್ಕಾರದವರ ಮೇಲೂ ಎಫ್ಐಆರ್ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ವಾದ-ಪ್ರತಿವಾದ ಆಲಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರು, ವಿಡಿಯೊ ಹಂಚುವುದರಿಂದ ಮಹಿಳೆಯ ಗೌರವಕ್ಕೆ ಹಾನಿಯಾಗುತ್ತದೆ. ಇದು ಗಂಭೀರ ಅಪರಾಧವಾಗಿದೆ. ಆದರೆ, ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಎಸ್‌ಐಟಿ ಬಂಧಿಸದೇ, ತನಿಖೆ ಮುಂದುವರಿಸಬೇಕು. ಅಲ್ಲದೇ ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಸೂಚಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Prajwal Revanna Case: ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಕೇಸ್‌ ದಾಖಲಾಗಿತ್ತು. ಆದರೆ, ಕೇಸ್‌ನಲ್ಲಿ ಪ್ರೀತಂ ಗೌಡರನ್ನು ಬಂಧಿಸದೇ ವಿಚಾರಣೆ ನಡೆಸಲು ಎಸ್‌ಐಟಿಗೆ ಹೈಕೋರ್ಟ್‌ ಸೂಚಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌ ಸಿಕ್ಕಿದೆ. ತಮ್ಮ ಮೇಲೆ ಯಾವುದೇ ಆರೋಪವಿಲ್ಲದಿದ್ದರೂ ಕೇಸ್ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ ಪ್ರಶ್ನಿಸಿ ಪ್ರೀತಂ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್‌, ಪ್ರೀತಂ ಗೌಡರನ್ನು ಬಂಧಿಸದೆ, ತನಿಖೆ ಮುಂದುವರಿಸಲು ಎಸ್ಐಟಿಗೆ ಸೂಚನೆ ನೀಡಿದೆ.

ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಗರದ ಸಿಐಡಿ ಸೈಬರ್ ಠಾಣೆಯಲ್ಲಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ, ಕಿರಣ್​, ಶರತ್​ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ), 354 (ಡಿ), 354 ಬಿ, 506 ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಯಾವುದೇ ಆರೋಪವಿಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಜನ ಮಾತನಾಡುತ್ತಿದ್ದಾರೆಂಬ ಆಧಾರದ ಮೇಲೆ ಕೇಸ್ ಹಾಕಿದ್ದಾರೆ ಎಂದು ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಇದಕ್ಕೆ ಎಸ್‌ಪಿಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿ, ಆರೋಪಿ ವಿರುದ್ಧ ಸಂತ್ರಸ್ತೆಯ ವಿಡಿಯೊ ಹಂಚಿದ ಗಂಭೀರ ಆರೋಪವಿದೆ. ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದರು. ಈ ವೇಳೆ ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಮಾತನಾಡಿ, ಜನ ಮಾತನಾಡಿಕೊಳ್ಳುತ್ತಿರುವ ಕಾರಣಕ್ಕೆ ದೂರು ನೀಡಿದ್ದಾರೆ. ಸರ್ಕಾರದವರೇ 3 ಲಕ್ಷ ಪೆನ್ ಡ್ರೈವ್ ಹಂಚಿದ್ದಾರೆಂದು ಜನ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಸರ್ಕಾರದವರ ಮೇಲೂ ಎಫ್ಐಆರ್ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ವಾದ-ಪ್ರತಿವಾದ ಆಲಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರು, ವಿಡಿಯೊ ಹಂಚುವುದರಿಂದ ಮಹಿಳೆಯ ಗೌರವಕ್ಕೆ ಹಾನಿಯಾಗುತ್ತದೆ. ಇದು ಗಂಭೀರ ಅಪರಾಧವಾಗಿದೆ. ಆದರೆ, ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಎಸ್‌ಐಟಿ ಬಂಧಿಸದೇ, ತನಿಖೆ ಮುಂದುವರಿಸಬೇಕು. ಅಲ್ಲದೇ ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಸೂಚಿಸಿದ್ದಾರೆ.

Continue Reading
Advertisement
Actor Darshan Renuka Swamy case In colorskannada shantam Paapam
ಸ್ಯಾಂಡಲ್ ವುಡ್5 mins ago

Actor Darshan: ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Isha Ambani
ವಾಣಿಜ್ಯ16 mins ago

Isha Ambani: ತಾನು ಅವಳಿ ಮಕ್ಕಳಿಗೆ ತಾಯಿಯಾಗಿದ್ದು ಐವಿಎಫ್ ಮೂಲಕ ಎಂದ ಇಶಾ ಅಂಬಾನಿ

Road Accident
ದೇಶ22 mins ago

Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

IND vs SA Final
ಕ್ರಿಕೆಟ್34 mins ago

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

Job Alert
ಉದ್ಯೋಗ1 hour ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್1 hour ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ1 hour ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ1 hour ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ1 hour ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್1 hour ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌