Site icon Vistara News

Horrible Accident: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

railway track horrible accident

ಕೊಪ್ಪಳ: ರೇಲ್ವೆ ಟ್ರ್ಯಾಕ್ (Railway Track) ಮೇಲೆ ಮದ್ಯ ಸೇವಿಸಿ (Liquor) ಅಲ್ಲೇ ಮಲಗಿದ್ದ ಯುವಕರ‌ ಮೇಲೆ ರೈಲು (Train Accident) ಹರಿದಿದ್ದು, ಸ್ಥಳದಲ್ಲಿಯೇ ಮೂರು ಜನ ಯುವಕರು ಸಾವಿಗೀಡಾಗಿದ್ದಾರೆ. ಈ ಘೋರ ದುರಂತ (Horrible Accident) ಕೊಪ್ಪಳ ಜಿಲ್ಲೆ (Koppala news) ಗಂಗಾವತಿ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತ ಯುವಕರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದೆ. ಮೂವರೂ ಗಂಗಾವತಿಯವರಾಗಿದ್ದಾರೆ. ಇವರು ಕುಡಿದ ಮತ್ತಿನಲ್ಲಿ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು ಎಂಬುದಕ್ಕೆ ಸ್ಥಳದಲ್ಲಿದ್ದ ಮದ್ಯದ ಬಾಟಲಿಗಳು ಸಾಕ್ಷಿಯಾಗಿವೆ. ರೈಲು ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿತ್ತು. ಮದ್ಯದ ಅಮಲಿನಲ್ಲಿ ರೈಲಿನ ಆಗಮನ ಯುವಕರಿಗೆ ಗೊತ್ತಾಗಿರಲಿಕ್ಕಿಲ್ಲ ಎನ್ನಲಾಗಿದೆ. ದೇಹಗಳು ಛಿದ್ರಛಿದ್ರವಾಗಿವೆ. ಗದಗ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ (Haveri news) ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇವರ ತಾಯಿ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಂಜಾ ನಶೆಯಲ್ಲಿ ಬಾಲಕಿಯರನ್ನು ಬೆದರಿಸಿದ ಪುಂಡರು

ಬೆಂಗಳೂರು: ಕಾರಿನಲ್ಲಿ ಬಂದ ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿ ಬಂದ ಪುಂಡರ ಗುಂಪೊಂದು, ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ (Bangalore News). ಇನ್ನೋವಾ ಕಾರಿನಲ್ಲಿ ಬಂದಿದ್ದ ಪುಂಡರು ಕೃತ್ಯ ಎಸಗಿದ್ದು ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀರ ಮೇಲೂ ದಾಳಿ ಮಾಡಿದ್ದಾರೆ. ಬೆಂಗಳೂರಿನ ಎಚ್​ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ.

ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್​ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ ವರ್ತನೆ ತೋರಿದ್ದಾನೆ. ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್​ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್​​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Exit mobile version