Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ - Vistara News

ಕ್ರೈಂ

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Illicit Relationship: ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು.

VISTARANEWS.COM


on

illicit relationship raichur siravara
ದೂರು ನೀಡಿದ ಪ್ಯಾರಿ ಬೇಗಂ, ಆರೋಪಿಗಳಾದ ರಾಜ್‌ ಮೊಹಮ್ಮದ್‌, ಸರಳಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ವಿಚ್ಛೇದಿತ ನರ್ಸ್‌ ಒಬ್ಬಾಕೆಯೊಂದಿಗೆ ಲವ್ವಿ ಡವ್ವಿ (Illicit Relationship) ಹೊಂದಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ (Police constable) ಒಬ್ಬಾತನಿಗೆ ಆತನ ಪತ್ನಿ ಕಾನೂನು ಅಸ್ತ್ರದ ಮೂಲಕ ಪಾಠ ಕಲಿಸಲು ಮುಂದಾಗಿದ್ದಾರೆ. ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

ಸಿರವಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜ್ ಮಹಮ್ಮದ್ ಎಂಬಾತನ ಮೇಲೆ ಆತನ ಪತ್ನಿಯಿಂದ ಕೇಸು ಬಿದ್ದಿದೆ. ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೇದೆ ಆಗಿರುವ ಪ್ಯಾರಿ ಬೇಗಂ ಎಂಬಾಕೆ ಈತನ ಪತ್ನಿ ಹಾಗೂ ದೂರು ಸಲ್ಲಿಸಿದವರು. ರಾಜ್ ಮಹಮ್ಮದ್ ಮತ್ತು ಪ್ಯಾರಿ‌ ಬೇಗಂ ಪ್ರೀತಿಸಿ ಮದುವೆಯಾದವರು. ಆದರೆ ಇತ್ತೀಚೆಗೆ ರಾಜ್‌ ಮಹಮ್ಮದ್‌ ಇನ್ನೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ.

ಕವಿತಾ ಆಸ್ಪತ್ರೆ ನರ್ಸ್ ಸರಳ ಎಂಬಾಕೆಯ ಜೊತೆ ಸುಮಾರು 4-5 ವರ್ಷಗಳಿಂದ ವಿವಾಹೇತರ ಸಂಬಂಧ ನಡೆಸಿದ್ದ. ಇವರಿಬ್ಬರನ್ನೂ ಮನೆಯೊಂದರಲ್ಲಿ ರೆಡ್ ಹ್ಯಾಂಡ್ ಆಗಿ ಪ್ಯಾರಿ ಬೇಗಂ ಹಿಡಿದಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿ ಪತಿ ವಿರುದ್ಧವೇ ಎಸ್ಪಿಗೆ ದೂರು ನೀಡಿದ್ದಾರೆ. ಎಸ್‌ಪಿಯನ್ನು ಭೇಟಿ ಮಾಡಿ, ‌ಬಳಿಕ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಾಜ್ ಮಹಮ್ಮದ್, ರಿಜಿಯಾ ಬೇಗಂ, ಮೈಬೂಬ್ ಮತ್ತು ಸ್ಟಾಫ್ ನರ್ಸ್ ಸರಳ ವಿರುದ್ಧ ರಾಯಚೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗರ್ಭಪಾತ, ವರದಕ್ಷಿಣೆ ಕಿರುಕುಳ (Dowry harassment), ಕೊಲೆ ಯತ್ನ (Murder attempt) ಸೇರಿದಂತೆ ಹಲವು ಆರೋಪಗಳನ್ನು ಗಂಡನ ವಿರುದ್ಧ ಪ್ಯಾರಿ ಬೇಗಂ ನೀಡಿದ್ದಾರೆ.

ವಿದ್ಯಾರ್ಥಿಗಳ ಬಾರ್‌ ನೈಟ್‌ ಆಯೋಜಿಸಿದ್ದ ಬಾರ್‌ ಮಾಲೀಕನ ಮೇಲೆ ಕ್ರಮ

ಮಂಗಳೂರು: ವಿದ್ಯಾರ್ಥಿಗಳು ಕುಡಿದು ಕುಣಿದ ಕುಪ್ಪಳಿಸಲು ಬಾರ್‌ ನೈಟ್‌ (Students Night) ಕಾರ್ಯಕ್ರಮ ಆಯೋಜಿಸಿದ್ದ ಬಾರ್‌ ಮಾಲೀಕರ ಕಾರ್ಯಕ್ರಮವನ್ನು ಪೊಲೀಸರು (Mangalore police) ಬಂದ್‌ ಮಾಡಿಸಿದ್ದಾರೆ. ಇದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ʼಸ್ಟೂಡೆಂಟ್ಸ್ ವೆಡ್‌ನೆಸ್‌ಡೇ ನೈಟ್ʼ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನವನ್ನು ನಗರದ ದೇರೆಬೈಲ್ ಕೊಂಚಾಡಿಯಲ್ಲಿರುವ ಲಿಕ್ಕರ್‌ ಲಾಂಜ್‌ ಎಂಬ ಬಾರ್‌ ನೀಡಿತ್ತು. ಈ ಬಾರ್‌ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ ಲಿಕ್ಕರ್ ಲಾಂಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಸಂಜೆ 7 ಗಂಟೆಯಿಂದ ಮಧ್ಯರಾತ್ರಿ ವರೆಗೆ ಮದ್ಯ ಸಹಿತ ಪಾರ್ಟಿ ಕಾರ್ಯಕ್ರಮವನ್ನು ಆಯೋಜಿಸಲು ಸಮಯ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಆಹಾರ, ಮದ್ಯ, ಮ್ಯೂಸಿಕ್, ಮನೋರಂಜನಾ ಕಾರ್ಯಕ್ರಮಗಳಿರುವುದಾಗಿ ಪ್ರಚಾರ ಮಾಡಲಾಗಿತ್ತು. ಇಷ್ಟು ಮಾತ್ರವಲ್ಲದೆ ವಿದ್ಯಾರ್ಥಿಗಳು ಸ್ಕೂಲ್ ಐಡಿ (ಗುರುತು ಕಾರ್ಡ್) ತೋರಿಸಿದರೆ ಬಿಲ್‌ನಲ್ಲಿ ಶೇ.15ರಷ್ಟು ಕಡಿತದ ಆಫರ್ ನೀಡಲಾಗಿತ್ತು. ಈ ಇವೆಂಟ್‌ಗೆ ವಿದ್ಯಾರ್ಥಿನಿಯರು ಬಂದರೆ ಅವರಿಗೆ ಫ್ರೀ ಶೂಟರ್ಸ್ ಸ್ಪೆಷಲ್ ಆಫರ್ ನೀಡುವ ಭರವಸೆಯನ್ನು ನೀಡಲಾಗಿತ್ತು.

ಕೊಂಚಾಡಿಯ ಬಾರ್‌ನಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದಂತೆ ಸಾರ್ವಜನಿಕರಿಂದ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾವೂರು ಪೊಲೀಸರು ಕಾರ್ಯಕ್ರಮವನ್ನೇ ರದ್ದುಮಾಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಾರ್‌ನ ಮಾಲೀಕರಿಗೆ ಕಾವೂರು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ಮಾತ್ರವಲ್ಲದೆ ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್(ಎಪಿಪಿ)ಗೆ ಪತ್ರ ಬರೆದು ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಪೊಲೀಸ್‌ ಮೂಲಗಳು ಸಲಹೆ ಕೇಳಿದ್ದಾರೆಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಬಾರ್‌ಗೆ ಆಹ್ವಾನಿಸಿ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಹಾಕಿದ್ದಕ್ಕಾಗಿ ಅಬಕಾರಿ ಇಲಾಖೆ ಈಗಾಗಲೇ 7 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೆ ಬಾರ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ನ್ಯಾಯಾಲಯದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಪತ್ರ ಬರೆದಿದ್ದು, ಈ ಘಟನೆಗೆ ಯಾವ ಸೆಕ್ಷನ್‌ನಡಿ ಪ್ರಕರಣ ದಾಖಲಿಸಬಹುದೆಂದು ಮಾಹಿತಿ ಕೇಳಿದ್ದೇವೆ. ಅವರ ಉತ್ತರ ಬಂದ ಕೂಡಲೇ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Atal Setu: ಅಟಲ್‌ ಸೇತು ಮೇಲೆ ಕಾರಿನಲ್ಲಿ ಬಂದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ; ಏನಾಗಿತ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

Renuka swamy Murder case : ರೇಣುಕಾ ಸ್ವಾಮಿ ಕೊಲೆ ಕೇಸ್‌ ಎ1 ಆರೋಪಿ ಆಗಿರುವ ಪವಿತ್ರಾಗೌಡ (Pavitra Gowda) ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ. ಈ ಮೂಲಕ ಪವಿತ್ರಾಗೆ ಜೈಲುವಾಸ ಮುಂದುವರಿದಿದೆ.

VISTARANEWS.COM


on

By

Renuka Swamy murder case Pavithra Gowdas bail plea rejected
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಪವಿತ್ರಾಗೌಡ (Pavitra Gowda) ಪರ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಜಾಗೊಳಿಸಿ ಸಿಸಿಎಚ್‌ (CCH)57ನೇ ನ್ಯಾಯಾಲಯದ ನ್ಯಾಯಾಧೀಶರಾದ ಜೈ ಶಂಕರ್‌ ಆದೇಶ ಹೊರಡಿಸಿದ್ದಾರೆ. ಎ1 ಆರೋಪಿ‌ ಪವಿತ್ರಾಗೌಡ ಪರ ಅನುಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ.

ದರ್ಶನ್- ಪವಿತ್ರಾ ದೂರದೂರವಾದರೂ ಒಂದಾಯಿತು ಇವರಿಬ್ಬರ ಮನೆಯ ಶ್ವಾನಗಳು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Jail) ಬಳ್ಳಾರಿ ಜೈಲಿಗೆ (Bellary Jail) ನಟ ದರ್ಶನ್ (Actor Darshan) ಸ್ಥಳಾಂತರಗೊಂಡಿದ್ದರೂ ಪವಿತ್ರಾ ಗೌಡ (Pavitra Gowda) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ. ಹೀಗಾಗಿ ದರ್ಶನ್ ಮತ್ತು ಪವಿತ್ರಾ ದೂರದೂರವಾಗಿದ್ದಾರೆ. ಆದರೆ ಇವರಿಬ್ಬರ ಶ್ವಾನಗಳು ಮಾತ್ರ ಇದೀಗ ಒಂದಾಗಿವೆ.

ದರ್ಶನ್ ಮತ್ತು ಪವಿತ್ರ ಗೌಡ ಜೈಲು ಸೇರುತ್ತಿದ್ದ ಹಾಗೆ ಇವರ ಶ್ವಾನಗಳು ಒಂದಾಗಿದ್ದವು. ಪವಿತ್ರಗೌಡ ಮನೆಯಲ್ಲಿದ್ದ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಈಗ ದರ್ಶನ್ ಮತ್ತು ಪವಿತ್ರಾ ಗೌಡ ಮನೆಯ ಶ್ವಾನಗಳು ಸ್ನೇಹಿತರಾಗಿದೆ.


ಪವಿತ್ರಾ ಗೌಡ ಮನೆಯಲ್ಲಿದ್ದ ವೈಟ್ ಫ್ರೆಂಚ್ ಬುಲ್ ಡಾಗ್ ಮತ್ತು ಬೆಲ್ಜಿಯಂ ಮಲಿನಾಯ್ಸ್ ತಳಿಯ ಶ್ವಾನಗಳು ಮನೆಯೊಡತಿ ಇಲ್ಲದೆ ಸೊರಗಿದ್ದವು. ಅವುಗಳನ್ನು ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ರಕ್ಷಣೆ ಮಾಡಿತ್ತು. ಬಳಿಕ ಅಧಿಕಾರಿಗಳು ಅವುಗಳನ್ನು ದರ್ಶನ್ ಮನೆಗೆ ಬಿಟ್ಟಿದ್ದಾರೆ.

ಶ್ವಾನ ಪ್ರೇಮಿಯಾಗಿದ್ದ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಮನೆಯಲ್ಲಿ ವಿವಿಧ ತಳಿಯ 3 ಶ್ವಾನಗಳಿದ್ದವು. ಅವುಗಳಲ್ಲಿ ಒಂದನ್ನು ಕುಟುಂಬಸ್ಥರು ತೆಗೆದುಕೊಂಡು ಹೋಗಿದ್ದಾರೆ. ಒಲಿದ ಎರಡು ಶ್ವಾನಗಳನ್ನು ಪವನ್ ನೋಡಿಕೊಳ್ಳುತ್ತಿದ್ದ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದಾರೆ. ಬಳಿಕ ಶ್ವಾನಗಳನ್ನು ನೋಡಿಕೊಳ್ಳುವವರಿಲ್ಲದೆ ಅವುಗಳು ಸೊರಗಿದ್ದವು.

Actor Darshan
Actor Darshan


ದರ್ಶನ್ ಮನೆಗೆ ಎಂಟ್ರಿ

ಪವಿತ್ರಾ ಮತ್ತು ಪವನ್ ಜೈಲು ಸೇರಿದ್ದರಿಂದ ಸರಿಯಾಗಿ ಆಹಾರ ಇಲ್ಲದೆ ಬಲಹೀನವಾಗಿದ್ದ ಶ್ವಾನಗಳ ದೃಶ್ಯ ಕಣ್ಣೀರು ತರಿಸುವಂತ್ತಿತ್ತು. ಇದನ್ನು ತಿಳಿದು ಅಲರ್ಟ್ ಆದ ಪೀಪಲ್ಸ್ ಫಾರ್ ಅನಿಮಲ್ಸ್ ಟೀಂ ಈ ವಿಚಾರವನ್ನು ಆರ್.ಆರ್. ನಗರದ ಪೊಲೀಸರ ಗಮನಕ್ಕೆ ತಂದಿದ್ದರು.

ಪೀಪಲ್ಸ್ ಫಾರ್ ಅನಿಮಲ್ಸ್ ನ‌ ಲೀನಾ ಮತ್ತು ಹರೀಶ್ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಿಬಿಎಂಪಿ ಪಶುಸಂಗೋಪನಾ‌ ಇಲಾಖೆಗೆ ಮಾಹಿತಿ ನೀಡಿರುವ ಪೊಲೀಸರು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳ ಸಹಾಯದಿಂದ ಪವಿತ್ರಾ ಮನೆಯಲ್ಲಿದ್ದ ಎರಡು ಶ್ವಾನವನ್ನು ದರ್ಶನ್ ಮನೆಗೆ ಸ್ಥಳಾಂತರಿಸಿದ್ದಾರೆ. ದರ್ಶನ್ ಮನೆಯಲ್ಲಿ ಶ್ವಾನಗಳನ್ನು ನೋಡಿಕೊಳ್ಳಲು ಕೇರ್ ಟೇಕರ್ ಗಳು ಇರುವುದರಿಂದ ಈ ಶ್ವಾನಗಳನ್ನು ದರ್ಶನ್ ಮನೆಗೆ ಸ್ಥಳಾಂತರಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Suspected Terrorist: ಬೆಂಗಳೂರು ಏರ್‌ಪೋರ್ಟ್‌ನಿಂದ ಎಸ್ಕೇಪ್‌ ಆಗುತ್ತಿದ್ದ ಶಂಕಿತ ಉಗ್ರ ಅರೆಸ್ಟ್‌

Suspected Terrorist: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನವಾಗಿದೆ. ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Suspected terrorist arrested while escaping from Bengaluru airport
ಸಾಂದರ್ಭಿಕ ಚಿತ್ರ
Koo

ದೇವನಹಳ್ಳಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Suspected Terrorist ) ಶಂಕಿತ ಉಗ್ರನ ಬಂಧನವಾಗಿದೆ. ನಿನ್ನೆ ಶುಕ್ರವಾರ ಬೆಳಗ್ಗೆ ಬಂಧಿಸಿ ಎನ್‌ಐಎ ಅಧಿಕಾರಿಗಳು ಕರೆದೊಗಿದ್ದಾರೆ. ಏರ್‌ಪೋರ್ಟ್‌ನಿಂದ ಸೌದಿಯ ಜಿದ್ದಾಗೆ ಎಸ್ಕೇಪ್ ಆಗುವ ವೇಳೆ‌ ಬಂಧಿಸಿದ್ದಾರೆ. ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿಯಾಗಿದ್ದಾನೆ.

ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಪ್ರಕರಣ; 1205 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಕಳೆದ ಜುಲೈ 24ರಂದು ಬೆಂಗಳೂರಿನ ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಗೆ ನುಗ್ಗಿ ಯುವತಿಯ ಪ್ರಿಯಕರನೇ ಕೊಲೆ ಮಾಡಿದ್ದ. ಬಿಹಾರದ ಕೃತಿ ಕುಮಾರಿ‌ (24) ಮೃತಳು.

ಪ್ರಕರಣ ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ 1205 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್‌ನಲ್ಲಿ 85 ಸಾಕ್ಷಿದಾರ ಹೇಳಿಕೆ ಉಲ್ಲೇಖ ಮಾಡಲಾಗಿದೆ. ಆರೋಪಿ ಅಭಿಷೇಕ್ ವಿರುದ್ಧ ಕೊಲೆ ನಡೆದ 39 ದಿನದಲ್ಲಿ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಬಿಎನ್‌ಎಸ್ ಜಾರಿಯಾದ ಬಳಿಕ ಬೆಂಗಳೂರು ಪೊಲೀಸರಿಂದ ಕೊಲೆ ಪ್ರಕರಣದಲ್ಲಿ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಇದಾಗಿದೆ.

ಏನಿದು ಪ್ರಕರಣ?

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಳು. ಕೃತ್ಯ ನಡೆದ ಆ ದಿನ ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿತ್ತು. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದಳು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ. ಕೃತ್ಯ ನಡೆದ ಎರಡು ದಿನದ ಹಿಂದೆಯಷ್ಟೇ ಕೃತಿ ಪಿಜಿಗೆ ಸೇರಿದ್ದರು. ಆಕೆ ಪಿಜಿಗೆ ಆಗಮಿಸುವ ವೇಳೆಯೂ ಈ ಯುವಕ ಲಗೇಜ್‌ ತೆಗದುಕೊಂಡು ಬಂದಿದ್ದ. ಆಗ ಯುವಕನನ್ನು ಒಳ ಬಿಡುವುದಿಲ್ಲ ಎಂದು ಪಿಜಿ ಸೆಕ್ಯೂರಿಟಿ ತಡೆದಿದ್ದರು. ಪಿಜಿ ಸೆಕ್ಯುರಿಟಿ ಬಳಿ, ಆತ ತನ್ನ ಸಹೋದರ ಎಂದು ಹೇಳಿ ಬೇಗ ಕಳುಹಿಸುತ್ತೇನೆ ಎಂದು ಕೃತಿ ಒಳ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಮಂಗಳವಾರ ರಾತ್ರಿ ಸುಮಾರು 11.10ಕ್ಕೆ ಆರೋಪಿ ಅಭಿಷೇಕ್‌ ಚಾಕು ಇಟ್ಟುಕೊಂಡು ಕೃತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದೆ ಪಿಜಿ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದೇ ಘಟನೆಗೆ ಕಾರಣ ಎನ್ನುವ ಆರೋಪವೂ ಕೇಳಿ ಬಂದಿತ್ತು. ಇದೀಗ ಆರೋಪಿಯನ್ನು ಬಂಧಿಸಿ ಚಾರ್ಜ್‌ ಶೀಟ್‌ ಸಲ್ಲಿಕೆಯನ್ನು ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

CM Siddaramaiah: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್;​ ವಾದ ಆಲಿಸಿ ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

CM Siddaramaiah: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ವಾದ ಆಲಿಸಿದ ಹೈಕೋರ್ಟ್‌ ಸೆ.2ಕ್ಕೆ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ. ಜತೆಗೆ ರಾಜ್ಯಪಾಲರ ತೀರ್ಮಾನ ಸರಿಯೋ -ತಪ್ಪೋ ಅನ್ನೋದು ತೀರ್ಮಾನ ಮಾಡಬೇಕಿದೆ. ಅಲ್ಲಿಯವರೆಗೂ ಕೆಳ ನ್ಯಾಯಾಲಯದಲ್ಲಿ ವಿಚಾರಣೆ ಅಸಾಧ್ಯ ಎಂದು ಕೋರ್ಟ್‌ ತಿಳಿಸಿದೆ.

VISTARANEWS.COM


on

By

Prosecution against CM Hc adjourns hearing to September 2
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಸಂಬಂಧ ವಾದ ಆಲಿಸಿದ ಹೈಕೋರ್ಟ್‌ ಸೆ.2ಕ್ಕೆ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ. ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯು ವಾದ ಮಂಡನೆ ಬಳಿಕ ಶನಿವಾರ (ಆ.31) ಮಧ್ಯಾಹ್ನ 2:30ಕ್ಕೆ ಮುಂದೂಡಿಕೆಯಾಗಿತ್ತು. ಶನಿವಾರ ಬೆಳಗ್ಗೆ 10:30ಕ್ಕೆ ಶುರುವಾಗಿದ್ದ ವಿಚಾರಣೆಯಲ್ಲಿ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಿಂದ ವಿವೇಚನೆ ಬಳಸಿಯೇ ಅನುಮತಿ ನೀಡಲಾಗಿದೆ ಎಂದು ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದ್ದರು. ಬಳಿಕ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್ ವಾದ ಆರಂಭಿಸಿ, ಸರ್ಕಾರದ ಬದಲು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಬೇಕಿದ್ದು ಮನವಿ ಮಾಡಿದರು. ಮಣೀಂದರ್ ಸಿಂಗ್ ಮುಂದಿನ ವಾದ ಸೋಮವಾರ ಮಂಡಿಸುವುದಾಗಿ ಮನವಿ ಮಾಡಿದಾಗ, ವಿಚಾರಣೆಯನ್ನೂ ಶನಿವಾರ ಮಧ್ಯಾಹ್ನ 2.30 ಕ್ಕೆ ಮುಂದೂಡಿತು. ಮಧ್ಯಾಹ್ನದ ನಂತರ ಪ್ರತಿವಾದಿ ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು.

ಸಿಎಂ ಪಾತ್ರ ಏನು ಎಂದು ಪ್ರಶ್ನಿಸಿದ‌ ಜಡ್ಜ್

ಈ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿಗಳು ಬಹಳ ಜನ ವಾದ ಮಂಡನೆ ಮಾಡಿದ್ದೀರಿ. ಆದರೆ ಇದರಲ್ಲಿ ಸಿಎಂ ಪಾತ್ರ ಏನು ಎಂದು ಯಾರು ಹೇಳಿಲ್ಲ. ಸಿಎಂ ಪಾತ್ರದ ಬಗ್ಗೆ ನೀವು ಉತ್ತರಿಸುತ್ತೀರಾ ಎಂದು ದೂರುದಾರರ ಪರ ವಕೀಲರಿಗೆ ಪ್ರಶ್ನೆ ಮಾಡಿದರು. ಈ ವೇಳೆ ಎಜಿ ಶಶಿಕಿರಣ್ ಶೆಟ್ಟಿ ಮಧ್ಯಪ್ರವೇಶಿಸಿ, ಇವರು ಸಿಎಂ ವಿರುದ್ಧ ಆರೋಪಿಸುವುದಕ್ಕೆ ಏನು ಇಲ್ಲ.. ಹೀಗಾಗಿ ಸಿಎಂ ವಿರುದ್ಧ ಆರೋಪಗಳಿಲ್ಲವೆಂದು ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿಗಳ ಪಾತ್ರ, ಕ್ಯಾಬಿನೆಟ್ ನಿರ್ಣಯದ ಬಗ್ಗೆ ವಾದ ಮಂಡಿಸುತ್ತೇನೆ. ಕೆಲ ಸಂದರ್ಭಗಳಲ್ಲಿ ಕ್ಯಾಬಿನೆಟ್ ರಾಜ್ಯಪಾಲರಿಗೆ ಸಲಹೆ ನೀಡುವ ಅರ್ಹತೆ ಕಳೆದುಕೊಳ್ಳುತ್ತದೆ. ಆರ್.ಎಸ್.ನಾಯಕ್ ಪ್ರಕರಣ ಉಲ್ಲೇಖಿಸಿ ಪ್ರಭುಲಿಂಗ್ ನಾವದಗಿ ವಾದ ಶುರು ಮಾಡಿದರು. ಸಿಎಂ ಸಿದ್ದರಾಮಯ್ಯರನ್ನು ರಕ್ಷಣೆ ಮಾಡುವ ಸಲುವಾಗಿಯೇ ಕ್ಯಾಬಿನೆಟ್‌ ನಿರ್ಣಯವನ್ನು ಮಾಡಲಾಗಿದೆ. ಇಂತಹ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸುವ ಅಗತ್ಯವಿಲ್ಲ.

ಮುಖ್ಯಮಂತ್ರಿಗಳ ವಿರುದ್ಧ ಆರೋಪ ಬಂದಾಗ ಅದರ ವಿರುದ್ಧ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರ ರಾಜ್ಯಪಾಲರಿಗಿದೆ. ಕ್ಯಾಬಿನೆಟ್ ನಿರ್ಣಯ ವಿರುದ್ಧ ರಾಜ್ಯಪಾಲರು ಕ್ರಮ ಜರಗಿಸಿದ್ದಾರೆ ಅನ್ನೋದು ಸರಿಯಲ್ಲ . ಸಿಎಂ ವಿರುದ್ಧ ಬಂದ ದೂರಿಗೆ ಕ್ರಮ ಕೈಗೊಳ್ಳುವ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವ ಅಧಿಕಾರ ಸರ್ಕಾರಕ್ಕಿದೆ. ಸಿಎಂ ಪ್ರಾಸಿಕ್ಯೂಷನ್ ವಿಚಾರದಲ್ಲಿ ಕ್ಯಾಬಿನೆಟ್ ನಿರ್ಧಾರ ಸಮಂಜಸವಲ್ಲಎಂದು ಸುಪ್ರೀಂಕೋರ್ಟ್‌ನ ಎ.ಕೆ.ಕ್ರೈಪಾಕ್ ಕೇಸ್ ಉಲ್ಲೇಖಿಸಿದರು. ಸಂವಿಧಾನದ 163 ಅಡಿಯಲ್ಲಿ ಸಿಎಂ ಕೂಡಾ ಕ್ಯಾಬಿನೆಟ್‌ನ ಭಾಗವಾಗಿದ್ದಾರೆ. ಹೀಗಾಗಿ ಸಿಎಂ ಹೊರತಾದ ಕ್ಯಾಬಿನೆಟ್ ಇರಲು ಸಾಧ್ಯವಿಲ್ಲ. ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸಬೇಕಿಲ್ಲ.

2018ರಲ್ಲಿ ಪಿಸಿ ಆಕ್ಟ್ ಸೆ.17 ಎ ಮತ್ತು 19 ತಿದ್ದುಪಡಿ ಮಾಡಲಾಗಿದೆ. ಆದರೆ ಸೆ.17 ಎ ನಲ್ಲಿ ಆರೋಪಿಗೆ ನೋಟಿಸ್ ನೀಡಲು ಅವಕಾಶವಿಲ್ಲ. ಸೆ.19 ಅಡಿಯಲ್ಲಿ ನೋಟಿಸ್ ನೀಡಲು ಅವಕಾಶವಿದೆ. ಆರೋಪಿಗೆ ನೋಟಿಸ್ ನೀಡಿ ತನಿಖೆಗೆ ಅವಕಾಶ ನೀಡಬಾರದು. ನೋಟಿಸ್ ನೀಡಿದರೆ ತನಿಖೆಯೇ ಪೂರ್ವಾಗ್ರಹಕ್ಕೊಳಗಾಗಲಿದೆ. 17 ಎ ಹಂತದಲ್ಲಿ ರಾಜ್ಯಪಾಲರ ಕ್ರಮ ಪ್ರಶ್ನಿಸಲು ಆರೋಪಿಗೆ ಅವಕಾಶವಿಲ್ಲ. ಎಫ್‌ಐಆರ್ ದಾಖಲಾದ ಬಳಿಕವಷ್ಟೇ ಆರೋಪಿಗೆ ಅದನ್ನು ಪ್ರಶ್ನಿಸುವ ಹಕ್ಕು ಬರಲಿದೆ. ಮುಡಾ ಅಕ್ರಮದ ಕುರಿತು ಮಾಧ್ಯಮಗಳಲ್ಲಿ ಬಂದ ಸುದ್ದಿ ಆಧರಿಸಿ ತನಿಖೆಗಾಗಿ ಏಕಸದಸ್ಯ ಆಯೋಗ ರಚನೆಗೆ ಸೂಚಿಸಿದ್ದಾರೆ. ಅದರಲ್ಲಿ ಇದರಲ್ಲಿ ಸಿಎಂ ಮೇಲೆ ಆರೋಪ ಬಂದಿದೆ, ಹೀಗಾಗಿ ಅವರು ರಚಿಸಿರುವ ಕಮಿಟಿಯಿಂದ ತನಿಖೆ ಆಗಬಾರದು.

ಕಾನೂನಿನ ಪ್ರಕಾರವೇ ಈ ಕೇಸ್‌ ತನಿಖೆ ಆಗಬೇಕು . ನಿವೇಶನಗಳ ಹಂಚಿಕೆ ಬಗ್ಗೆ ಅನುಮಾನ ಸರ್ಕಾರಕ್ಕೂ ಇದೆ ತನಿಖಾ ತಂಡದ ಕಾರ್ಯವ್ಯಾಪ್ತಿಯಲ್ಲಿ ನಿಯಮ 6,7,8ರ ಬಗ್ಗೆ ಆಕ್ಷೇಪಣೆಗಳಿವೆ. ಮೇಲ್ನೋಟಕ್ಕೆ ಅಕ್ರಮವನ್ನು ಪರಿಗಣಿಸಲಾಗಿದೆ ಎನ್ನುವ ಅಂಶ ಸರ್ಕಾರದ ಆದೇಶಗಳಲ್ಲಿ ಇರುವ ಬಗ್ಗೆ ನಾವದಗಿ ನ್ಯಾಯಾಲಯದ ಗಮನ ಸೆಳೆದರು. ಇದನ್ನು ಸ್ಕ್ಯಾಮ್ ಅಂತ ಹೇಳಲ್ಲ ಆದರೆ ಕಾನೂನು ಮೀರಿ ನಡೆದಿರುವುದು ತನಿಖೆ ಆಗಬೇಕು ಎಂದು ಪ್ರತಿವಾದಿಸಿದರು.

ಎಸ್ ಆರ್ ಬೊಮ್ಮಯಿ ಕೇಸ್ ಪ್ರಸ್ತಾಪ ಮಾಡಿದ ಪ್ರಭುಲಿಂಗ ನಾವದಗಿ, ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ. ರಾಜ್ಯಪಾಲರ ಅಧಿಕಾರ ಚಲಾಯಿಸಲು ಕ್ಯಾಬಿನೆಟ್ ಸಲಹೆ ಅವಶ್ಯಕತೆ ಇಲ್ಲ ಎಂದು ಉಲ್ಲೇಖಿಸಿದರು. ಟಾಡಾ ಪ್ರಕರಣದಲ್ಲೂ ಕೇಸ್ ಹಾಕುವ ಮುನ್ನ ಪೂರ್ವಾನುಮತಿ ಬೇಕಿತ್ತು. ಆದರೆ ಮೌಖಿಕ ಅನುಮತಿಯೂ ಸಾಕೆಂದು ಸುಪ್ರೀಂಕೋರ್ಟ್ ಹೇಳಿದೆ. ಹೀಗಾಗಿ ಹಲವು ಪ್ರಕರಣಗಳಲ್ಲಿ ಅನುಮತಿ ಪರವಾದ ತೀರ್ಪುಗಳಿವೆ. ಬಿ.ಎಸ್.ಯಡಿಯೂರಪ್ಪ ಅವರ ಕೇಸ್‌ ಅನ್ನು ಪರಿಗಣಿಸಲು ಸಾಧ್ಯವಿಲ್ಲ. ಎಸ್ಒಪಿ ಪಾಲನೆ ಮಾಡಬೇಕಿರುವುದು ಕೇವಲ ಸಿಬಿಐ ಕೇಸ್‌ನಲ್ಲಿ ಮಾತ್ರ. ಹೀಗಾಗಿ ಆ ತೀರ್ಪನ್ನು ಪರಿಗಣನೆಗೆ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆಗ ಸಚಿವ ಸಂಪುಟ ನೀಡಿದ್ದ ಸೂಚನೆಯನ್ನು ರಾಜ್ಯಪಾಲರು ಉಲ್ಲೇಖಿಸಿರಲಿಲ್ಲ. ಹೀಗಾಗಿ ವಿಭಾಗೀಯ ಪೀಠ ಅದನ್ನು ರಾಜ್ಯಪಾಲರ ಮರುಪರಿಶೀಲನೆಗೆ ಸೂಚಿಸಿತ್ತು ಎಂದು ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು.

17-a ಭ್ರಷ್ಟಾಚಾರ ತಡೆ ಕಾಯಿದೆ ಬಗ್ಗೆ ಮಾಹಿತಿ ನೀಡುತ್ತಾ ಇದರಲ್ಲಿ ಸಿಎಂ ಪಾತ್ರದ ಬಗ್ಗೆ ಮನವರಿಕೆ ಮಾಡಿದ್ದರು. ಆಗ 17-A ಹೇಳೋದು ಯಾವುದಾದರೂ ಹಣ ಪಡೆದಿದ್ದರಾ ಅಥವಾ ಕೊಟ್ರಾ, ಶಿಫಾರಸು ಮಾಡಿದ್ರಾ ಅನ್ನೋ ಬಗ್ಗೆ ಎಂದು ಜಡ್ಜ್ ಪ್ರಶ್ನೆ ಮಾಡಿದಾಗ ಶಿಫಾರಸು ಮಾಡಬೇಕು ಅಂತ ಇಲ್ಲ. ಮೌಖಿಕ ಸೂಚನೆ ಕೊಟ್ಟರು ಸಾಕು ಅದು 17-a ಕೆಳಗಡೆ ಬರುತ್ತದೆ. ಇವರು ಅಧಿಕಾರ ಬಳಸಿ ಕೆಲಸ ಮಾಡಿಸಿರಬಹುದು. ಸಾರ್ವಜನಿಕ ಸೇವಕ ಮೌಖಿಕವಾಗಿ ಶಿಫಾರಸ್ಸು ಮಾಡಿದ್ದರೂ ತನಿಖೆಗೊಳಪಡುತ್ತಾರೆ. ಪಿಸಿ ಆಕ್ಟ್ ಅಡಿ ತನಿಖೆಗೆ ಒಳಪಡಿಸಬಹುದು. ಎಫ್ಐಆರ್ ದಾಖಲಾದ ಬಳಿಕವೂ ಸಿಎಂಗೆ ಎಫ್‌ಐಆರ್ ಪ್ರಶ್ನಿಸಲು ಅವಕಾಶ ದೊರೆಯುತ್ತದೆ. ಹೀಗಾಗಿ ರಾಜ್ಯಪಾಲರ ಆದೇಶ ರದ್ದುಪಡಿಸದಂತೆ ಮನವಿ ಮಾಡಿ ಎಂದು ವಾದ ಮುಕ್ತಾಯಗೊಳಿಸಿದರು. ಇದೇ ವೇಳೆ ನನ್ನ ವಾದವೂ ಸಹ ತುಷಾರ ಮೆಹ್ತಾ ವಾದವೇ .. ಹೀಗಾಗಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ತಿರಸ್ಕರಿಸಿ ಕೆಳ ನ್ಯಾಯಾಲಯ ತೀರ್ಪು ಕೊಡಲು ಅವಕಾಶ ಕೊಡಿ ಎಂದು ಪ್ರದೀಪ್‌ ಮನವಿ ಮಾಡಿದರು.‌

ಇದನ್ನೂ ಓದಿ: CM Siddaramaiah : ಮುಡಾ ಕೇಸ್‌; ಹೈಕೋರ್ಟ್‌ನಲ್ಲಿ ಸಿಎಂ ಭವಿಷ್ಯ ನಿರ್ಧಾರ! ಹೇಗಿತ್ತು ರಾಜ್ಯಪಾಲರ ಪರ ತುಷಾರ್ ಮೆಹ್ತಾ ವಾದ

ಠಾಣೆಯಲ್ಲಿ ದೂರು ದಾಖಲಿಸಲು ಹಿಂದೇಟು

ಪ್ರಭುಲಿಂಗ ನಾವದಗಿ ಬಳಿಕ ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡನೆ ಶುರು ಮಾಡಿದರು.
ನಾನು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದೇನೆ, ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದೇನೆ
ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದೇನೆ ಎಂದರು. ಈ ಕೇಸ್‌ನಲ್ಲಿ ಮೊದಲಿಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರು ದಾಖಲು ಮಾಡದ ಹಿನ್ನೆಲೆ ರಾಜ್ಯಪಾಲರ ಅನುಮತಿ ಕೇಳಲಾಯಿತು. ಡಾ.ಅಶೋಕ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ನೀಡಿದೆ. 17 ಎ ಅಡಿ ಖಾಸಗಿ ದೂರುದಾರರು ಅನುಮತಿ ಪಡೆಯಬಹುದು. ಹೀಗಾಗಿ ರಾಜ್ಯಪಾಲರ ಅನುಮತಿ ಪಡೆದು ದೂರು ದಾಖಲಿಸಲಾಗಿದೆ ಎಂದರು.

ಭೂ ಸ್ವಾಧೀನ ಪ್ರಕ್ರಿಯೆ ಹಾಗೂ ಲ್ಯಾಂಡ್ ಕನ್ವರ್ಷನ್ ಅಕ್ರಮಗಳ ಬಗ್ಗೆ ಉಲ್ಲೇಖಿಸಿ ವಾದ ಮುಂದುವರಿಸಿದ ಅವರು, ಮೂಡಾ ಮೂರನೇ ಹಂತದಲ್ಲಿ ವಶಪಡಿಸಿಕೊಂಡ ಭೂಮಿಯೇ ಇಲ್ಲ. ದೇವನೂರು ಬಡವಾಣೆ ಮಾಡಿದ ಸ್ಥಳದಲ್ಲಿ ಕೆಸರೆ ಗ್ರಾಮದ ಆಸ್ತಿಯನ್ನು ತೋರಿಸಿದ್ದಾರೆ. ಇಲ್ಲಿ ನಡೆದಿರುವ ಕೃಷಿ ಭೂಮಿಯ ಭೂ ಪರಿವರ್ತನೆಯೂ ಅಕ್ರಮವಾಗಿರುತ್ತದೆ.

ಕೆಸರೆ ಗ್ರಾಮದ ಜಮೀನಿನ ಬಗ್ಗೆ ವಿವರಣೆ ನೀಡಿದ ರಂಗನಾಥ ರೆಡ್ಡಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಮಾಹಿತಿ ನೀಡಿದರು. 2005 ಕನ್ವರ್ಸನ್‌ ನಿವೇಶನ ಹಂಚಿಕೆ ಬಳಿಕ ಮಲ್ಲಿಕಾರ್ಜುನ ಸ್ವಾಮಿಗೆ ಮಾರಿದ್ದಾರೆ. ಇಲ್ಲದೆ ಇರುವ ಜಮೀನನ್ನು ಗಿಫ್ಟ್ ಡೀಡ್ ಮಾಡಿದ್ದಾರೆ, ಜಮೀನು ಇಲ್ಲದ ಮೇಲೆ ಗಿಫ್ಟ್ ಡೀಡ್ ಹೇಗೆ ವ್ಯಾಲ್ಯೂಡ್ ಆಗುತ್ತೆ ಎಂದರು. ಆಗ ನ್ಯಾಯಮೂರ್ತಿಗಳು ಲ್ಯಾಂಡ್ ಡಿನೋಟಿಫೈ ಮಾಡಿದ ಮೇಲೆ ಆ ಜಮೀನು ಮೂಲ ಮಾಲೀಕನಿಗೆ ಹೋಗಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು. ಆಗ ರಂಗನಾಥ್‌ರೆಡ್ಡಿ ಆ ಜಮೀನು ಅವರಿಗೆ ಹೋಗಿಲ್ಲ. ಎಲ್ಲದರಲ್ಲೂ ಮೈಲಾರಯ್ಯ ಹೆಸರು ಮಾತ್ರ ಬಂದಿದೆ. ಅಲ್ಲಿ ಜಮೀನೇ ಇಲ್ಲದೇ ಇಷ್ಟು ವ್ಯವಹಾರ ಮಾಡಿದ್ದಾರೆ ಎಂದು ಲಿಖಿತ ವಾದ ಮಂಡಿಸಿದ್ದರು.

ಮುಡಾ ಹೆಸರಿಗೆ ಕಂದಾಯ ದಾಖಲೆಗಳಿವೆ. 2004 ರವರೆಗೆ ಹಲವು ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ.
ಕೆಸರೆ ಗ್ರಾಮ ದೇವನೂರು ಬಡಾವಣೆಯಾಗಿ ಬದಲಾದ ನಂತರ ಮಾರಾಟ ಮಾಡಲಾಗಿದೆ. ಕೃಷಿ ಜಮೀನೆಂದು ದೇವರಾಜು ಎಂಬುವರಿಂದ ಕ್ರಯ ಮಾಡಲಾಗಿದೆ . ಕೆಸರೆ ಗ್ರಾಮದ 464 ಸರ್ವೆ ನಂಬರಿನ ಖುಷ್ಕಿ ಜಮೀನೆಂದು ಉಲ್ಲೇಖಸಿದ್ದಾರೆ. ಅಷ್ಟರಲ್ಲಾಗಲೇ ದೇವನೂರು ಬಡಾವಣೆಯಾಗಿ ನಿವೇಶನ ಹಂಚಲಾಗಿತ್ತು. 2004ರಲ್ಲಿ ಸಿಎಂ ಮೈದುನ ಮಲ್ಲಿಕಾರ್ಜುನಸ್ವಾಮಿ ಎಂಬುವರು ಖರೀದಿ ಮಾಡಿದ್ದರು. ಅಸ್ತಿತ್ವವೇ ಇಲ್ಲದ ಕೃಷಿ ಭೂಮಿಗೆ 15 ಜುಲೈ 2005 ರಂದು ತಹಸೀಲ್ದಾರ್, ಡಿಸಿ ಸ್ಥಳ ಪರಿಶೀಲನೆ ಮಾಡಿ ಭೂಪರಿವರ್ತನೆ ಮಾಡಲಾಗಿದೆ. ಕೃಷಿಯೇತರ ವಾಸದ ಉದ್ದೇಶಕ್ಕೆ ಪರಿವರ್ತನೆ ಮಾಡಲಾಗಿದೆ. ಆಗಿನ ಜಿಲ್ಲಾಧಿಕಾರಿ ಕುಮಾರ್ ನಾಯಕ್ ಭೂಪರಿವರ್ತನೆ ವರದಿ ನೀಡಿದ್ದಾರೆ.

ಮೊದಲಿಗೆ 60-40 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಲು ನಗರಾಭಿವೃದ್ಧಿ ಇಲಾಖೆಯಿಂದ ನಿರ್ಧಾರ ಮಾಡಿತ್ತು. ನಂತರ 50- 50 ಅನುಪಾತದಲ್ಲಿ ನಿವೇಶನಗಳ ಹಂಚಿಕೆ ಮಾಡಿದೆ. ಸುಮಾರು 20 ನಿವೇಶನಗಳನ್ನು ಹಂಚಿಕೆ‌ ಮಾಡಿದ್ದಾರೆ. ಅರ್ಜಿದಾರನ ಪತ್ನಿ ಮಾಲೀಕರಲ್ಲದ ಮೇಲೆ ಯಾವ ರೀತಿ ನಿವೇಶನ ಪಡೆದರು. ಅಧಿಕಾರ ಬಳಸಿದ್ದಾರೆ ಅನ್ನೋದು ಬಿಟ್ರೆ ಬೇರೆ ಯಾವ ದಾಖಲೆಗಳು ಇಲ್ಲ ಎಂದು ರಂಗನಾಥ್‌ ವಾದಿಸಿದ್ದರು. ಈ ವೇಳೆ ಮುಡಾ ಕೃಷಿ ಜಮೀನಿನಲ್ಲಿ ನಿವೇಶನ ಹಂಚಿಕೆ ಮಾಡಿದೆ. ಬೇಕಿದ್ದರೆ ದಾನಪತ್ರವನ್ನು ಪ್ರಶ್ನಿಸಲಿ ಎಂದು ಸಿಎಂ ಪರ ವಕೀಲರು ಉತ್ತರಿಸಿದರು . ದಾನಪತ್ರ ಇಬ್ಬರು ವ್ಯಕ್ತಿಗಳ ನಡುವಿನ ಹಸ್ತಾಂತರ ಹೇಗೆ ಪ್ರಶ್ನಿಸುತ್ತಾರೆ ನ್ಯಾಯಮೂರ್ತಿಗಳು ಮರುಪ್ರಶ್ನೆ ಹಾಕಿದರು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯಗೆ ಮುಡಾ ಪರೀಕ್ಷೆ! ಸರ್ಕಾರದ ಬದಲು ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ದೂರದಾರರಿಂದ ಒತ್ತಾಯ

ಸಿಎಂ ಮಗನ ಮೇಲೆ ಯಾಕಿಲ್ಲ ಕೇಸ್‌

ಜತೆಗೆ ಡಿನೋಟಿಫಿಕೇಷನ್ ಆದಾಗ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. ಲ್ಯಾಂಡ್ ಕನ್ವರ್ಷನ್ ಆದಾಗಲೂ ಸಿದ್ದರಾಮಯ್ಯ ಡಿಸಿಎಂ ಆಗಿದ್ದರು. 50- 50 ಹಂಚಿಕೆ ಕೇಳಿದಾಗ ಸಿದ್ದರಾಮಯ್ಯ ಸಿಎಂ ಆಗಿದ್ದರು. ಈ ಬೆಳವಣಿಗೆ ನಡೆದಾಗಲೆಲ್ಲಾ ಸಿದ್ದರಾಮಯ್ಯ ಡಿಸಿಎಂ ಅಥವಾ ಸಿಎಂ ಆಗಿದ್ದರು ಎಂಬುವುದು ನಿಮ್ಮ ಆರೋಪವೇ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ರಂಗನಾಥ್‌ ರೆಡ್ಡಿ ಮುಖ್ಯಮಂತ್ರಿಗಳು ತಮ್ಮ ಅಧಿಕಾರ ಬಳಸಿ ಇದೆಲ್ಲಾ ಮಾಡಿದ್ದಾರೆ. ಕೆಸರೆ ಗ್ರಾಮ 20 ವರ್ಷಗಳ ಹಿಂದೆ ಡಿಲಿಟ್ ಮಾಡಿದ್ದಾರೆ. ಬಳಿಕ‌ ದೇವನೂರು ಬಡಾವಣೆ ಆಗಿದೆ. 2021ರಲ್ಲಿ ಸಿಎಂ ಪುತ್ರ ಯತೀಂದ್ರ ಮುಡಾ ಸದಸ್ಯರಾಗಿದ್ದರು. ಪರಿಹಾರದ ನಿವೇಶನಗಳನ್ನು ನೀಡುವ ಕುರಿತಾದ ನಿರ್ಣಯಗಳನ್ನು ಕೈಗೊಳ್ಳುವ ಸಭೆಗಳಲ್ಲಿಯೂ ಯತೀಂದ್ರ ಇದ್ದರು. ಇದರ ಹಿಂದೆ ಅವರಿದ್ದಾರೆ ಎಂದಾಗ, ನ್ಯಾಯಮೂರ್ತಿಗಳು ಮತ್ತೆ ಸಿಎಂ ಬಿಟ್ಟು ಮಗನ ಮೇಲೆ ಯಾಕೆ ಕೇಸ್ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಅಸ್ತಿತ್ವದಲ್ಲಿಯೇ ಇಲ್ಲದ ಭೂಮಿಗೆ ಮುಡಾದಲ್ಲಿ ದಾಖಲೆಗಳಿವೆ. ಭೂಮಿಗೆ ಪರಿಹಾರವಾಗಿ ಮುಖ್ಯಮಂತ್ರಿಯವರ ಪತ್ನಿಗೆ 14 ನಿವೇಶನಗಳನ್ನು ನೀಡಲಾಗಿದೆ. ಮುಖ್ಯಮಂತ್ರಿಯವರ ಕಚೇರಿಯ ಪಾತ್ರ ವಿವಿಧ ಹಂತಗಳಲ್ಲಿ ಇದೆ ಎಂದು ವಾದಿಸಿದರು.

ರಂಗನಾಥರೆಡ್ಡಿಗೆ ರಾಜ್ಯಪಾಲರು ಒಂದುವರೆ ಗಂಟೆ ಸಮಯ ಕೊಟ್ರಾ

25.10.2021 ರಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಮನವಿ ಮಾಡಲಾಗಿದೆ. ಸಿಎಂ ಪುತ್ರ ಇದ್ದ ಮುಡಾ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ನಂತರ ಸಿಎಂ ಪತ್ನಿಗೆ 25.11.21 ರಲ್ಲಿ ಹಕ್ಕು ಬಿಡುಗಡೆ ಮಾಡಿದ್ದಾರೆ. ನಂತರ ಸಿಎಂ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಟಿ.ಜೆ.ಅಬ್ರಹಾಂ ಪರ ವಕೀಲ ರಂಗನಾಥರೆಡ್ಡಿ ವಾದ ಮಂಡಿಸಿದ್ದರು. ಮುಂದುವರಿದು, ರಾಜ್ಯಪಾಲರು ನನ್ನನ್ನು ಕರೆದು ಒಂದುವರೆ ಗಂಟೆ ಮಾಹಿತಿ ಪಡೆದಿದ್ದಾರೆ. ನಾನು ಕೊಟ್ಟ ದಾಖಲೆ ಪರಿಶೀಲನೆಗೆ ಕರೆದಿದ್ದರು. ಕ್ಲಾರಿಫಿಕೇಷನ್ ಸಹ ತೆಗೆದುಕೊಂಡರು ಎಂದು ರಂಗನಾಥ್‌ರೆಡ್ಡಿ ಹೇಳಿದರು. ಈ ವೇಳೆ ಆಶ್ಚರ್ಯದೊಂದಿಗೆ ನ್ಯಾಯಮೂರ್ತಿಗಳು ರಾಜ್ಯಪಾಲರು ನಿಮಗೆ ಒಂದುವರೆ ಗಂಟೆ ಸಮಯ ಕೊಟ್ರಾ ಎಂದು ಕೇಳಿದರು.

ಒಳಸಂಚು ನಡೆಸಿದ್ದಾಗಿ ಆರೋಪ

ಜಮೀನಿನ ಎಲ್ಲ ಪ್ರಕ್ರಿಯೆಗಳು ಆಗುವಾಗ ಅರ್ಜಿದಾರರು ಅಧಿಕಾರದಲ್ಲಿದ್ದರು. ಉನ್ನತ ಹುದ್ದೆ ಅಲಂಕರಿಸಿದ್ದಾಗ ಅವರು ಪ್ರಭಾವ ಬೀರಿ ಈ ಕೆಲಸ ಆಗಿದೆ . 1998ರಿಂದ 2024 ವರೆಗೂ ಆಗಿರುವ ಬೆಳವಣಿಗೆಗಳಲ್ಲಿ ಇವರು ಹಿಂದೆ ಇದ್ದಾರೆ. ಒಳಸಂಚು ನಡೆಸಿ ಪಡೆದಿದ್ದಾರೆ ಎಂದು ರಂಗನಾಥ್‌ ರೆಡ್ಡಿ ವಾದಿಸಿದರು. ಯಾವುದೇ ಜಮೀನು ಕಳೆದುಕೊಳ್ಳದೇ ಸಿಎಂ ಪತ್ನಿ ಪರಿಹಾರ ಪಡೆದಿದ್ದಾರೆ ಎಂದು ಟಿ.ಜೆ.ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದಮಂಡನೆ ಅಂತ್ಯಗೊಳ್ಳಿಸಿದರು. ಕೊನೆಯಲ್ಲಿ ರಂಗನಾಥ ರೆಡ್ಡಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಎರಡು ಪ್ರಕರಣ ಬಾಕಿ ಇದೆ ಎಂದಾಗ, ನನ್ನ ಮುಂದೆ ಪ್ರಕರಣ ವಿಚಾರಣೆ ನಡೆಯುತ್ತಿದೆ. ಇಲ್ಲಿ ಇತ್ಯಾರ್ಥವಾಗದೇ ಬೇರೆ ವಿಚಾರಣೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮನವಿ ತಿರಸ್ಕರಿಸಿದರು.

ತಾತ್ಕಾಲಿಕ ತಡೆಯಾಜ್ಞೆ ತೆಗೆಯುವಂತೆ ವಕೀಲ ರಂಗನಾಥ್‌ರೆಡ್ಡಿ ಮನವಿ ಮಾಡಿದಾಗ ನಾನು ಇಲ್ಲಿ ವಿಚಾರಣೆ ಮಾಡಬೇಕಾದರೆ ಹೇಗೆ ಕೆಳ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಆಗುತ್ತೆ. ಇಂತಹ ಸಬ್ ಮಿಷನ್ ಮಾಡಬೇಡಿ, ಅರ್ಜಿ ಇತ್ಯರ್ಥ ಮಾಡಬೇಕಿರುವುದು ಹೈಕೋರ್ಟ್.. ರಾಜ್ಯಪಾಲರ ತೀರ್ಮಾನ ಸರಿಯೋ -ತಪ್ಪೋ ಅನ್ನೋದು ತೀರ್ಮಾನ ಮಾಡಬೇಕಿದೆ. ಹೀಗಾಗಿ ಅಲ್ಲಿಯವರೆಗೂ ಕೆಳ ನ್ಯಾಯಾಲಯದಲ್ಲಿ ವಿಚಾರಣೆ ಅಸಾಧ್ಯ ಎಂದು ಸೆ.2 ಸೋಮವಾರ ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಸಿದ್ದರಾಮಯ್ಯಗೆ ಮುಡಾ ಪರೀಕ್ಷೆ! ಸರ್ಕಾರದ ಬದಲು ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ದೂರದಾರರಿಂದ ಒತ್ತಾಯ

CM Siddaramaiah: 2004 ರಲ್ಲಿ 3.24 ಲಕ್ಷ ರೂ. ಇದ್ದ ಜಮೀನಿನ ಮೌಲ್ಯ ಈಗ 55 ಕೋಟಿ ರೂ. ಇದೆ. ಹೀಗಾಗಿ ಅಕ್ರಮವೆಸಗಲು ಸಂಚು ನಡೆದಿದೆ. ಜನರ ಹಣವನ್ನು ಜನಸೇವಕನೇ ಲೂಟಿ‌ ಮಾಡುವ ಸಂಚು ನಡೆದಿದೆ ಎಂದು ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್ ವಾದ ಮಂಡಿಸಿದರು.

VISTARANEWS.COM


on

By

CM Siddaramaiah MUDA case Complainants demand probe by independent agency instead of govt
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ (High Court) ಶನಿವಾರ (ಆ.31) ಸುದೀರ್ಘವಾಗಿ ಮುಂದುವರಿದಿತ್ತು. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿತು. ಮೊದಲಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಲಾ ಪಾಯಿಂಟ್‌ಗಳನ್ನು ಹಾಕಿ ತಮ್ಮ ವಾದ ಮಂಡಿಸಿದ್ದರು.

ಬಳಿಕ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್ ವಾದ ಆರಂಭಿಸಿ, ಸರ್ಕಾರದ ಬದಲು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಬೇಕಿದ್ದು ಮನವಿ ಮಾಡಿದರು. 1992 ಲ್ಯಾಂಡ್ ಅಕ್ವಿಜೇಷನ್ ಪ್ರಕ್ರಿಯೆ ಶುರುವಾಗಿದೆ. ಅಂತಿಮ ನೋಟಿಫಿಕೇಷನ್ 1997ರಲ್ಲಿ ಮುಗಿದಿದೆ. ಲ್ಯಾಂಡ್ ಅಕ್ವಿಜೇಷನ್, ಪರಿಹಾರದ ಹಣ, ನಂತರದ‌ ಬೆಳವಣಿಗೆಗಳನ್ನು ಉಲ್ಲೇಖಿಸಿ ಮಣೀಂದರ್ ಸಿಂಗ್ ವಾದ ಶುರು ಮಾಡಿದರು. ಆಕ್ಷೇಪಾರ್ಹವಾದ 3.16 ಎಕರೆ ಭೂಮಿ ವರ್ಗಾವಣೆಯ ಕುರಿತು ವಿವರಣೆ ನೀಡಿದರು. 1997ರಲ್ಲಿ ಅಂತಿಮ ನೋಟಿಫಿಕೇಷನ್ ಆಗಿದ್ದು ವಶಕ್ಕೆ ಪಡೆಯಲಾಗಿದೆ.

1998ರಲ್ಲಿ ಈ ಭೂಮಿ ಮುಡಾ ವಶದಲ್ಲಿ ಇತ್ತು. ಇದು ರೆವಿನ್ಯೂ ರೆಕಾರ್ಡ್‌ನಲ್ಲಿ ಎಂಟ್ರಿ ಆಗಿದೆ. ಎಲ್ಲ ಪ್ರಕ್ರಿಯೆಗಳು ಕಾನೂನು ಬಾಹಿರವಾಗಿದೆ. ಇದೆಲ್ಲಾ ತನಿಖೆಯಿಂದ ಹೊರಬರಬೇಕಿದೆ. 2001-02 ರಲ್ಲಿ ಬಡಾವಣೆ ಅಭಿವೃದ್ಧಿ ಪಡಿಸಲಾಗಿದೆ. ಸೈಟ್‌ಗಳನ್ನು ಮಾರಾಟ ಮಾಡಲಾಗಿದೆ. ಸ್ವಾಧೀನವಾದ ಜಮೀನಿನಲ್ಲಿ 2001, 2004 ನಡುವೆ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಕ್ಯಾಬಿನೆಟ್ ನೋಟ್‌ನಲ್ಲಿ ರಿಟ್ ಅರ್ಜಿ ಎಂದು ಉಲ್ಲೇಖಿಸಲಾಗಿದೆ. ಸಿಎಂ ಪತ್ನಿಗೆ 14 ನಿವೇಶನ ಹಂಚಲು ಬೇರೆ ಕೇಸ್ ಗಳ ಹೈಕೋರ್ಟ್ ಆದೇಶ ಉಲ್ಲೇಖಿಸಿದ್ದಾರೆ. ಆದರೆ ರಿಟ್ ಅರ್ಜಿಗಳ ಸಂಪೂರ್ಣ ವಿವರಗಳೇ ಇದರಲ್ಲಿ ಇಲ್ಲ.

1998ರಲ್ಲಿ ಭೂಮಿ ಸ್ವಾಧೀನ ಬಳಿಕ ಮುಡಾ ಮಾಲೀಕತ್ವದಲ್ಲಿತ್ತು. ಭೂಸ್ವಾಧೀನವನ್ನು ಯಾರೂ ಪ್ರಶ್ನಿಸಿ ಕೋರ್ಟ್‌ಗೆ ಹೋಗಿಲ್ಲ. ಪರಿಹಾರವನ್ನೂ ನಿಗದಿಪಡಿಸಿ ಆದೇಶ ಮಾಡಲಾಗಿತ್ತು. ಇದಾದ ಮೇಲಿನ ಡಿನೋಟಿಫಿಕೇಷನ್ ಭೂಮಿ ಕಬಳಿಸಲು ಮಾಡಿದ ವಂಚನೆ ಯಾಗಿತ್ತು. ಆಗ ಆ ಜಮೀನಿನ ಮೌಲ್ಯ ಕೇವಲ 3 ಲಕ್ಷ 24 ಸಾವಿರ ಮೌಲ್ಯವಾಗಿತ್ತು ಎಂದು ಮಣೀಂದರ್ ಸಿಂಗ್ ವಾದಿಸಿದರು. ನಮ್ಮ ವಾದ ಈ ಮುಡಾ ಹಗರಣದ ಕುರಿತು ತನಿಖೆ ನಡೆಸಬೇಕು ಎಂಬುದಕಷ್ಟೇ. ಪ್ರಕರಣದ ಪ್ರೈಮಾಫಸಿಯನ್ನು ಪರಿಗಣಿಸಿ ತನಿಖೆಗೆ ಅವಕಾಶ ಕೊಡುವಂತೆ ಮನವಿ ಮಾಡಿದರು.

ರೆವಿನ್ಯು ಭೂಮಿ ಹೇಗಾಯಿತು?

ಈ ವೇಳೆ ಲಿಖಿತ ವಾದವನ್ನು ಮಂಡಿಸುತ್ತಿದ್ದೀರಾ ಎಂದು ಮಣೀಂದರ್ ಸಿಂಗ್‌ಗೆ ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದರು. ಅಭಿವೃದ್ಧಿಪಡಿಸಿದ ಭೂಮಿ, ರೆವಿನ್ಯು ಭೂಮಿ ಹೇಗಾಯಿತು?ಎಂದು ಜಡ್ಜ್‌ ಪ್ರಶ್ನಿಸಿದಾಗ, ಅದು ಮ್ಯಾಜಿಕ್.. ಹೇಗೆ ಆಯಿತು ಎಂಬುದು ತನಿಖೆಯಿಂದ ತಿಳಿಯಬೇಕು ಎಂದು ಮಣೀಂದರ್ ಸಿಂಗ್ ಉತ್ತರಿಸಿದರು. ಭೂಮಿಯ ಪ್ರಾಥಮಿಕ ಅಧಿಸೂಚನೆಯಾಗದೆ ಕೇಸ್‌ನ ತೀರ್ಪನ್ನು ಈ ಕೇಸ್‌ಗೆ ಬಳಸಲಾಗಿದೆ. ಸ್ವಾಧೀನವೇ ಆಗದೇ ಜಮೀನು ಬಳಸಿಕೊಳ್ಳುವುದಕ್ಕೂ, ಪ್ರಕ್ರಿಯೆ ಪಾಲಿಸಿ ಸ್ವಾಧೀನಕ್ಕೂ ವ್ಯತ್ಯಾಸವಿದೆ. ಅಲ್ಲಿ ಬಳಸಿದ ಮಾನದಂಡವನ್ನು ಈ ಕೇಸ್‌ಗೆ ಬಳಸಿಕೊಳ್ಳಲಾಗಿದೆ ಎಂದು ಮಣೀಂದರ್ ಸಿಂಗ್ ವಾದಿಸಿದ್ದರು.

ತನಿಖಾಧಿಕಾರಿ ಸಮರ್ಥವಾಗಿದ್ದರೆ ಕಂಡುಹಿಡಿಯಬಹುದು. ಕ್ಯಾಬಿನೆಟ್ ಇಂತಹ ಕೃತ್ಯಕ್ಕೆ ಸಮರ್ಥನೆ ನೀಡುತ್ತಿದೆ.
ತನಿಖೆ ನಡೆಯದಿದ್ದರೆ ಇದು ದೊಡ್ಡ ದುರಂತವಾಗಲಿದೆ. 2004 ರಲ್ಲಿ 3.24 ಲಕ್ಷ ರೂ. ಇದ್ದ ಜಮೀನಿನ ಮೌಲ್ಯ ಈಗ 55 ಕೋಟಿ ರೂ. ಇದೆ. ಹೀಗಾಗಿ ಅಕ್ರಮವೆಸಗಲು ಸಂಚು ನಡೆದಿದೆ. ಜನರ ಹಣವನ್ನು ಜನಸೇವಕನೇ ಲೂಟಿ‌ ಮಾಡುವ ಸಂಚು ನಡೆದಿದೆ ಎಂದು ಕಟುವಾಗಿ ವಾದ ಮಂಡಿಸಿದರು.

ಮುಲಾಯಂ ಸಿಂಗ್ ಪ್ರಕರಣದ ತೀರ್ಪು ಸೇರಿದಂತೆ ಹಲವು ತೀರ್ಪುಗಳ ಉಲ್ಲೇಖಿಸಿದ ಮಣೀಂದರ್ ಸಿಂಗ್ ವಾದ ಮಂಡನೆ ಮುಂದುವರಿಸಿದರು. ಸರ್ಕಾರ ಈಗಾಗಲೇ ಈ ಕೇಸ್ ಸಂಬಂಧ ಒಂದು ನಿಲುವು ತೆಗೆದುಕೊಂಡಿದೆ. ಹೀಗಾಗಿ ರಾಜ್ಯ ಸರ್ಕಾರದ ಅಡಿಯ ತನಿಖಾಧಿಕಾರಿಯಿಂದ ಈ ಕೇಸ್ ತನಿಖೆ ನಡೆಸುವುದು ಸಾಧ್ಯವೇ? ಸ್ವತಂತ್ರ ತನಿಖೆ ನಡೆಯಬೇಕಾದಷ್ಟು ಅಂಶಗಳು ಈ ಕೇಸಿನಲ್ಲಿವೆ. ಜನಸಾಮಾನ್ಯರೂ ಕೂಡಾ ಭೂಸ್ವಾಧೀನದಿಂದ ಬಿಡಿಸಿಕೊಳ್ಳಲು ಪರದಾಡುತ್ತಾರೆ. ಶಾಲೆ ಇದ್ದರೂ ಭೂಸ್ವಾಧೀನದಿಂದ ಬಿಡುಗಡೆ ಮಾಡುವುದಿಲ್ಲ. ಆದರೆ ಈ ಕೇಸಿನಲ್ಲಿ ಮೂಡಾ ಬಡಾವಣೆ ಅಭಿವೃದ್ದಿಯಾಗಿದ್ದರೂ ಸ್ವಾಧೀನದಿಂದ ಕೈಬಿಟ್ಟಿದ್ದಾರೆ. ಒಂದು ಬಾರಿ ಭೂಸ್ವಾಧೀನ ಅಂತಿಮಗೊಂಡಾಗ ಬದಲಿ ಜಮೀನಿಗೆ ಅವಕಾಶವಿಲ್ಲ. ಪರಿಹಾರದ ಹಣಕ್ಕೆ 9 ಪರ್ಸೆಂಟ್ ಬಡ್ಡಿ ಪಡೆಯಲು ಮಾತ್ರ ಅವಕಾಶವಿದೆ ಎಂದು ಇಂದೋರ್ ಡೆವಲಪ್ಮೆಂಟ್ ಕೇಸ್ ಉಲ್ಲೇಖಿಸಿ ಮಣೀಂದರ್ ಸಿಂಗ್ ಮಾತಿಗಿಳಿದರು.

ಬಳಿಕ ಮಣೀಂದರ್ ಸಿಂಗ್ ಮುಂದಿನ ವಾದ ಸೋಮವಾರ ಮಂಡಿಸುವುದಾಗಿ ಮನವಿ ಮಾಡಿದರು. ಹೀಗಾಗಿ ಮುಂದಿನ ವಿಚಾರಣೆಯನ್ನೂ ಹೈಕೋರ್ಟ್ ಮಧ್ಯಾಹ್ನ 2.30 ಕ್ಕೆ ಮುಂದೂಡಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಭವಿಷ್ಯ18 mins ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ8 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ9 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ10 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ10 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು10 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ10 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ10 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Renuka Swamy murder case Pavithra Gowdas bail plea rejected
ಸ್ಯಾಂಡಲ್ ವುಡ್11 hours ago

Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

D.K. Shivakumar
ಬೆಂಗಳೂರು11 hours ago

D.K. Shivakumar: ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್15 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌