Money For Likes ಎಂಬ ಸೈಬರ್ ವಂಚನೆಗೆ 1 ಕೋಟಿ ರೂ. ಕಳೆದುಕೊಂಡ ಸೇನಾ ನಿವೃತ್ತ ಅಧಿಕಾರಿ; ಈ ಜಾಲದ ಬಗ್ಗೆ ಇರಲಿ ಎಚ್ಚರ - Vistara News

ಕ್ರೈಂ

Money For Likes ಎಂಬ ಸೈಬರ್ ವಂಚನೆಗೆ 1 ಕೋಟಿ ರೂ. ಕಳೆದುಕೊಂಡ ಸೇನಾ ನಿವೃತ್ತ ಅಧಿಕಾರಿ; ಈ ಜಾಲದ ಬಗ್ಗೆ ಇರಲಿ ಎಚ್ಚರ

ಸೇನಾ ನಿವೃತ್ತ ಅಧಿಕಾರಿಗೆ ಮೊದಲು ಮಹಿಳೆಯೊಬ್ಬಳು ಟೆಕ್ಸ್ಟ್​ ಮೆಸೇಜ್ ಮಾಡಿದ್ದಾಳೆ. ಅದರಲ್ಲಿ ಅವಳು ಪಾರ್ಟ್​ ಟೈಂ ಉದ್ಯೋಗದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾಳೆ. ಅದರೊಂದಿಗೆ ಆಕೆ ತಾನು ಥೈಲ್ಯಾಂಡ್​ನವಳು ಎಂಬ ವಿವರಣೆ ಕೊಟ್ಟಿದ್ದು, ಜತೆಗೊಂದು ಲಿಂಕ್​ ಕಳಿಸಿದ್ದಾಳೆ. ಆ ಲಿಂಕ್​ನ್ನು ಯಾವಾಗ ಸೇನಾ ನಿವೃತ್ತ ಅಧಿಕಾರಿ ಕ್ಲಿಕ್ ಮಾಡಿದರೋ, ಆಗಲೇ ಅವರು ವಂಚಕರ ಬಲೆಗೆ ಬಿದ್ದರು!

VISTARANEWS.COM


on

Indian Army veteran Lost over Rs 1 crore to Money For Likes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ: ಮಹಾರಾಷ್ಟ್ರದ ಪುಣೆಯ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಆನ್​ಲೈನ್​ ವಂಚನೆ ಜಾಲದಲ್ಲಿ ಸಿಲುಕಿ, ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘Money For Likes’ ಸ್ಕ್ಯಾಮ್​​ ಎಂಬ ಹೊಸಬಗೆಯ ಸೈಬರ್​ ವಂಚನೆಗೆ ಒಳಗಾಗಿ ಅವರು 1.1 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ನಿವೃತ್ತ ಸೇನಾ ಅಧಿಕಾರಿ ಕೊಟ್ಟ ದೂರನ್ನು ದಾಖಲಿಸಿಕೊಂಡ ಪೊಲೀಸರು ಎಫ್​ಐಆರ್ ದಾಖಲಿಸಿ ಈಗ ತನಿಖೆ ನಡೆಸುತ್ತಿದ್ದಾರೆ.

ಲೈಕ್ಸ್​ಗಾಗಿ ಹಣ ಎಂಬುದು ಒಂದು ಹೊಸ ಮಾದರಿಯ ಸೈಬರ್​ ವಂಚನೆಯಾಗಿದೆ. ಯೂಟ್ಯೂಬ್​, ವಾಟ್ಸ್​ಆ್ಯಪ್​, ಲಿಂಕ್ಡ್​ ಇನ್​ ಗಳಲ್ಲೆಲ್ಲ ಈ ಜಾಲ ಹಬ್ಬಿದೆ. ‘ನೀವು ನಮ್ಮ ಪೋಸ್ಟ್​/ವಿಡಿಯೊಗಳಿಗೆ ಲೈಕ್ಸ್​ ಕೊಟ್ಟರೆ, ನಾವದಕ್ಕೆ ಹಣ ಕೊಡುತ್ತೇವೆ’ ಎಂದು ಇವರ ಮಾತು ಶುರುವಾಗುತ್ತದೆ. ಒಂದು ಲೈಕ್ಸ್​ಗೆ 50/100/150..ಹೀಗೆ ಇಂತಿಷ್ಟು ಎಂದು ಹಣ ಫಿಕ್ಸ್​ ಮಾಡುತ್ತಾರೆ. ಬರುಬರುತ್ತ ಪ್ರೀಪೇಯ್ಡ್​ ಟಾಸ್ಕ್​ಗಾಗಿ ನೀವು ಇಷ್ಟು ಹಣವನ್ನು ನಮಗೆ ಮೊದಲು ಕೊಡಬೇಕು. ನಂತರ ಅದನ್ನೂ ಸೇರಿಸಿ, ನಿಮಗೆ ಹೆಚ್ಚಿನ ಹಣ ಕೊಡುತ್ತೇವೆ ಎಂದು ಹೇಳುತ್ತಾರೆ. ಅದನ್ನು ನಂಬಿ, ಅವರು ಕೊಡುವ ಹಣಕ್ಕಾಗಿ ನೀವೇನಾದರೂ ಅವರ ವಿಡಿಯೊ/ಪೋಸ್ಟ್​ಗಳಿಗೆ ಲೈಕ್ಸ್​ ಬಟನ್​ ಒತ್ತಲು ಶುರು ಮಾಡಿದಿರೋ, ನೀವು ವಂಚನೆಯ ಬಲೆಗೆ ಬಿದ್ದಿರಿ ಎಂದೇ ಅರ್ಥ. ಈ ನಿವೃತ್ತ ಸೇನಾ ಅಧಿಕಾರಿಗೆ ಆಗಿದ್ದೂ ಅದೇ.. 65 ವರ್ಷದ ಅವರು, ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಸೈಬರ್​ ವಂಚಕರಿಗೆ ಸುರಿದಿದ್ದಾರೆ.

ಸೇನಾ ನಿವೃತ್ತ ಅಧಿಕಾರಿಗೆ ಮೊದಲು ಮಹಿಳೆಯೊಬ್ಬಳು ಟೆಕ್ಸ್ಟ್​ ಮೆಸೇಜ್ ಮಾಡಿದ್ದಾಳೆ. ಅದರಲ್ಲಿ ಅವಳು ಪಾರ್ಟ್​ ಟೈಂ ಉದ್ಯೋಗದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾಳೆ. ಅದರೊಂದಿಗೆ ಆಕೆ ತಾನು ಥೈಲ್ಯಾಂಡ್​ನವಳು ಎಂಬ ವಿವರಣೆ ಕೊಟ್ಟಿದ್ದು, ಜತೆಗೊಂದು ಲಿಂಕ್​ ಕಳಿಸಿದ್ದಾಳೆ. ಈ ಲಿಂಕ್ ಓಪನ್​ ಮಾಡಿ, ವಿಡಿಯೊಕ್ಕೆ ಲೈಕ್​ ಕೊಟ್ಟರೆ ನಿಮಗೆ 50 ರೂಪಾಯಿ ಸಿಗುತ್ತದೆ ಎಂದು ಮೆಸೇಜ್​ನಲ್ಲಿ ಒಕ್ಕಣೆ ಬರೆದಿತ್ತು. ಹಾಗೇ, ತನ್ನ ಪ್ರತಿ ವಿಡಿಯೊಕ್ಕೂ ಲೈಕ್ಸ್ ಕೊಡಿ, ನೀವು ಕೊಡುವ ಪ್ರತಿ ಲೈಕ್ಸ್​ಗೂ ತಲಾ 50 ರೂಪಾಯಿ ನೀಡಲಾಗುವುದು. ನೀವು ವಿಡಿಯೊಕ್ಕೆ ಲೈಕ್ಸ್​ ಕೊಟ್ಟ ಸ್ಕ್ರೀನ್​ ಶಾಟ್​, ನಿಮ್ಮ ಬ್ಯಾಂಕ್​ ಅಕೌಂಟ್​ ಮತ್ತು ವಿಳಾಸದ ವಿವರವನ್ನು ನನಗೆ ಕಳಿಸಿಕೊಡಿ ಎಂದೂ ಆ ಮೆಸೇಜ್​ನಲ್ಲಿ ಬರೆಯಲಾಗಿತ್ತು. ಸೇನಾ ನಿವೃತ್ತ ಅಧಿಕಾರಿ ತಕ್ಷಣವೇ ಆ ಲಿಂಕ್​ ಪ್ರೆಸ್ ಮಾಡಿ ಲೈಕ್ಸ್ ಕೊಟ್ಟರು. ಆಕೆ ಕೇಳಿದ್ದನ್ನೆಲ್ಲ ಕೊಟ್ಟರು. ಅವರಿಗೆ 150 ರೂಪಾಯಿ ಸ್ವಾಗತ ಇನಾಮು (Welcome Bonus) ಕೂಡ ಬಂತು. ಅಷ್ಟೇ ಅಲ್ಲ ಅವರು ಕೊಟ್ಟ ಫೋನ್​ನಂಬರ್​ನ್ನು Employee Trial Group ಎಂಬ ಮೆಸೆಂಜರ್​ ಗ್ರೂಪ್​ಗೆ ಸೇರಿಸಲಾಯಿತು. ಅಲ್ಲಿಗೆ ಅವರು ಸಂಪೂರ್ಣವಾಗಿ ನಂಬಿಬಿಟ್ಟರು ಮತ್ತು ಈ ಲೈಕ್ಸ್​ ಜಾಲದ ಮತ್ತಷ್ಟು ಆಳಕ್ಕೆ ಹೋಗಲು ಶುರು ಮಾಡಿದರು.

ಇದನ್ನೂ ಓದಿ: Fraud Case: ಜಸ್ಟ್‌ ವಾಟ್ಸ್ಆ್ಯಪ್‌ ಕಾಲ್‌ನಲ್ಲೇ ಲಕ್ಷ ಲಕ್ಷ ಲೂಟಿ ಮಾಡಿದ ಸೈಬರ್‌ ಕಳ್ಳರು; ಏನಿದು ವಂಚನೆ ಕಹಾನಿ?

ವಂಚಕರು ಹೇಗಿದ್ದಾರೆಂದರೆ ಅವರು ತಮ್ಮ ಹೊಸ ‘ಗಿರಾಕಿ’ಯ ನಂಬಿಕೆ ಗಳಿಸಿಕೊಳ್ಳಲು ಖತರ್ನಾಕ್ ಐಡಿಯಾಗಳನ್ನು ಮಾಡಿದರು. Employee Trial Group ಎಂಬ ಗ್ರೂಪ್​ಗೆ ಸೇನಾ ನಿವೃತ್ತ ಅಧಕಾರಿ ಸೇರುತ್ತಿದ್ದಂತೆ ಇನ್ನೂ ಹಲವರು ತಮ್ಮ ತಮ್ಮ ವಿಡಿಯೊಗಳ ಲಿಂಕ್​ ಕಳಿಸಿ, ಲೈಕ್​ ಕೊಡುವಂತೆ ಕೇಳತೊಡಗಿದರು. ಅದಾದ ಮೇಲೆ ಪ್ರೀಪೇಯ್ಡ್​​ಗಾಗಿ 1000 ರೂಪಾಯಿ ತುಂಬಿ, ಅದು ಮುಗಿದ ಬಳಿಕ 1480 ರೂಪಾಯಿ ವಾಪಸ್ ಕೊಡುತ್ತೇವೆ ಎಂದರು. ಅದಕ್ಕೊಪ್ಪಿ ಇವರು ಹಾಗೇ ಮಾಡಿದರು. ಹಣವೂ ಬಂತು. ಕೆಲ ದಿನಗಳ ಬಳಿಕ ನಿವೃತ್ತ ಸೇನಾಧಿಕಾರಿ ಬಳಿ 3000 ರೂಪಾಯಿ ಪಾವತಿಸಿಕೊಂಡು, 4000 ರೂಪಾಯಿ ಮರುಪಾವತಿ ಮಾಡಿದರು. ಅವರನ್ನು ವಿಐಪಿ ಗ್ರೂಪ್​ಗೆ ಸೇರ್ಪಡೆಗೊಳಿಸಿದರು. ಇದೆಲ್ಲವನ್ನೂ ಅವರು ತಮ್ಮಿಂದ ವಂಚನೆಗೆ ಒಳಗಾಗುತ್ತಿರುವವರ ನಂಬಿಕೆ ಗಳಿಸಿಕೊಳ್ಳಲು ಮಾಡುತ್ತಿದ್ದರು. ಹೀಗೆ ತುಂಬ ದಿನ ಕಳೆಯಿತು.

ಒಂದು ದಿನ ಪ್ರೀಪೇಯ್ಡ್​ಗಾಗಿ ದೊಡ್ಡಮೊತ್ತದ ಹಣವನ್ನು ವಂಚಕರು ಕೇಳಿದರು. ಇಷ್ಟು ದಿನ ಹಣ ವಾಪಸ್​ ಬಂದಿತ್ತಲ್ಲ, ಸೇನಾ ನಿವೃತ್ತಾಧಿಕಾರಿ ಕಣ್ಮುಚ್ಚಿ ಅದನ್ನು ಪಾವತಿಸಿದರು. ಆದರೆ ನಂತರ ಅದನ್ನು ಮರುಪಾವತಿ ಮಾಡುವ ಸಂದರ್ಭದಲ್ಲಿ ಏನೋ ತಾಂತ್ರಿಕ ತೊಂದರೆಯ ನೆಪ ಹೇಳಿದ ವಂಚಕರು ಇನ್ನಷ್ಟು ಹಣ ಪಾವತಿ ಮಾಡುವಂತೆ ಹೇಳಿದರು. ಸುಮಾರು ಒಂದು ವಾರ ಅವರು ಹೀಗೇ ಮಾಡಿದರು. ಪ್ರತಿಸಲವೂ ಅವರು ಬೇರೆಬೇರೆ ಬ್ಯಾಂಕ್​ ಅಕೌಂಟ್ ನಂಬರ್ ಕೊಡುತ್ತಿದ್ದರು. ಸೇನಾ ನಿವೃತ್ತಾಧಿಕಾರಿ ಒಂದು ವಾರದಲ್ಲಿ 13 ಬ್ಯಾಂಕ್​ ಅಕೌಂಟ್​ಗಳಿಗೆ 26 ಬಾರಿ ಹಣ ಹಾಕಿದ್ದಾರೆ. ಈ ಮೂಲಕ 1.1 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ತಮಗೆ ವಂಚನೆಯಾಗಿದೆ ಎಂದು ಅವರಿಗೆ ಅರ್ಥವಾಗುವಷ್ಟರಲ್ಲಿ ಜೀವಮಾನದ ಉಳಿತಾಯವನ್ನು ಕಳೆದುಕೊಂಡಿದ್ದರು. ಇಷ್ಟೆಲ್ಲ ಆಗಿ, ಕಳೆದ ತಿಂಗಳು ಅಂದರೆ ಫೆಬ್ರವರಿ ಕೊನೆಯಲ್ಲಿ ಸೇನಾ ನಿವೃತ್ತ ಅಧಿಕಾರಿ ಠಾಣೆ ಮೆಟ್ಟಿಲೇರಿದ್ದಾರೆ. ಪೊಲೀಸರು ತನಿಖೆ ಶುರು ಮಾಡಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

Pune Porsche accident: ಭಾನುವಾರ ಮುಂಜಾನೆ ಕಲ್ಯಾಣಿನಗರದ ಬಳಿ ಬಿಲ್ಡರ್‌ ಮಗನಾದ 17 ವರ್ಷದ ಬಾಲಕ ಕಾರು ಯದ್ವಾತದ್ವಾ ಚಲಾಯಿಸಿ ಮೋಟಾರ್‌ಸೈಕಲ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದ. ಬೈಕ್‌ನಲ್ಲಿದ್ದ ಇಬ್ಬರು ಯುವ ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟ ಸಾವನ್ನಪ್ಪಿದ್ದರು.

VISTARANEWS.COM


on

Pune Porsche accident
Koo

ಪುಣೆ: ಪುಣೆ ನಗರದಲ್ಲಿ ಐಷಾರಾಮಿ ಪೋರ್ಷೆ ಕಾರನ್ನು (Pune Porsche accident) ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು (IT Engineers) ಸಾಯಿಸಿದ 17 ವರ್ಷದ ಬಾಲಕನ (juvenile) ಅಜ್ಜ (grandfather) ಸುರೇಂದ್ರ ಕುಮಾರ್ ಅಗರ್ವಾಲ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ತಪ್ಪು ಮಾಹಿತಿ ನೀಡಿ ಕುಟುಂಬದ ಚಾಲಕನನ್ನು (Driver) ತಪ್ಪಾಗಿ ಬಂಧನಕ್ಕೆ ಒಳಪಡಿಸಿದ್ದಕ್ಕಾಗಿ ಅಜ್ಜನನ್ನು ಬಂಧಿಸಲಾಗಿದೆ. ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಆರೋಪಿಗಳಲ್ಲಿ ಬಾಲಕನ ತಂದೆಯ ಹೆಸರೂ ಇದೆ.

ಭಾನುವಾರ ಮುಂಜಾನೆ ಕಲ್ಯಾಣಿನಗರದ ಬಳಿ ಬಿಲ್ಡರ್‌ ಮಗನಾದ 17 ವರ್ಷದ ಬಾಲಕ ಕಾರು ಯದ್ವಾತದ್ವಾ ಚಲಾಯಿಸಿ ಮೋಟಾರ್‌ಸೈಕಲ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದ. ಬೈಕ್‌ನಲ್ಲಿದ್ದ ಇಬ್ಬರು ಯುವ ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟ ಸಾವನ್ನಪ್ಪಿದ್ದರು. ಬಾಲಕ ಕಾರನ್ನು ಓಡಿಸಿಲ್ಲ, ಚಾಲಕ ಓಡಿಸಿದ್ದಾನೆ ಎಂದು ತನಿಖೆಯ ದಿಕ್ಕನ್ನು ತಪ್ಪಿಸಲು ಬಾಲಕ ಕುಟುಂಬದವರು ಯತ್ನಿಸಿದ್ದಾರೆ ಎಂದು ಶುಕ್ರವಾರ ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಬಾಲಾಪರಾಧಿಯ ಕುಟುಂಬದ ಚಾಲಕನ ದೂರಿನ ಆಧಾರದ ಮೇಲೆ, ಯರವಾಡ ಪೊಲೀಸರು ಅಪ್ರಾಪ್ತನ ಅಜ್ಜ ಮತ್ತು ತಂದೆಯ ವಿರುದ್ಧ ಐಪಿಸಿ ಸೆಕ್ಷನ್ 365 (ಒಬ್ಬ ವ್ಯಕ್ತಿಯನ್ನು ರಹಸ್ಯವಾಗಿ ಮತ್ತು ತಪ್ಪಾಗಿ ಬಂಧಿಸುವ ಉದ್ದೇಶದಿಂದ ಅಪಹರಣ) ಮತ್ತು 368 (ಬಚ್ಚಿಡುವುದು ಅಥವಾ ವ್ಯಕ್ತಿಯನ್ನು ಸೆರೆಯಲ್ಲಿಡುವುದು) ಅಡಿಯಲ್ಲಿ ಪ್ರತ್ಯೇಕ ಅಪರಾಧಗಳನ್ನು ದಾಖಲಿಸಿದ್ದಾರೆ.

“ಅಪಘಾತದ ನಂತರ, ಅಪ್ರಾಪ್ತನ ಅಜ್ಜ ಮತ್ತು ತಂದೆ ಚಾಲಕನ ಫೋನ್ ತೆಗೆದುಕೊಂಡು, ಮೇ 19ರಿಂದ ಮೇ 20ರವರೆಗೆ ತಮ್ಮ ಬಂಗಲೆಯ ಆವರಣದಲ್ಲಿರುವ ಅವರ ಮನೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಚಾಲಕನನ್ನು ಅವನ ಹೆಂಡತಿ ಬಿಡುಗಡೆ ಮಾಡಿದ್ದಾಳೆ” ಎಂದು ಪೊಲೀಸರು ಹೇಳಿದ್ದಾರೆ. ಚಾಲನೆ ಸಮಯದಲ್ಲಿ ಬಾಲಕ ಪಾನಮತ್ತನಾಗಿದ್ದ ಎಂದು ಪೋಲೀಸರು ಹೇಳಿದ್ದಾರೆ.

ಶುಕ್ರವಾರ, ಪುಣೆಯ ಸ್ಥಳೀಯ ನ್ಯಾಯಾಲಯವು ಅಪ್ರಾಪ್ತನ ತಂದೆ ಸೇರಿದಂತೆ ಪ್ರಕರಣದಲ್ಲಿ ಬಂಧಿತ ಆರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಬಾಲಕ ಜೂನ್ 5ರವರೆಗೆ ಅಬ್ಸರ್ವೇಶನ್ ಹೋಮ್‌ನಲ್ಲಿರಲಿದ್ದಾನೆ.

ಕಲ್ಯಾಣಿನಗರ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಡಿಕ್ಕಿ ಹೊಡೆದು ಕೊಂದ ಪೋರ್ಷೆ ಕಾರನ್ನು 17 ವರ್ಷದ ಯುವಕ ಓಡಿಸಿಲ್ಲ ಎಂದು ಸಾಬೀತುಪಡಿಸಲು ಪ್ರಯತ್ನಿಸಲಾಗಿದೆ. ಅವರ ಕುಟುಂಬದಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಜವಾಬ್ದಾರಿಯನ್ನು ಹೊರಲು ಪ್ರಯತ್ನಿಸಿದ್ದಾನೆ. ತನಿಖೆಯ ವೇಳೆ ಎಸಗಿದ ಲೋಪಕ್ಕಾಗಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಶುಕ್ರವಾರ ಸಂಜೆ ತನಿಖೆಯನ್ನು ಯರವಾಡ ಪೊಲೀಸ್ ಠಾಣೆಯಿಂದ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಯಿತು. ಅಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮೇ 19ರಂದು ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಇಬ್ಬರು ಐಟಿ ವೃತ್ತಿಪರರು ಮಧ್ಯಪ್ರದೇಶ ಮೂಲದವರು. ಇವರ ಪೋಷಕರು ಸುಪ್ರೀಂ ಕೋರ್ಟ್ ತನಿಖೆಯ ಮೇಲ್ವಿಚಾರಣೆ ವಹಿಸಬೇಕು ಮತ್ತು ವಿಚಾರಣೆಯನ್ನು ತಮ್ಮ ರಾಜ್ಯದಲ್ಲಿ ನಡೆಸಬೇಕು ಎಂದು ಒತ್ತಾಯಿಸಿದರು.

ಅಪ್ರಾಪ್ತ ವಯಸ್ಕ ಕಾರು ಚಲಾಯಿಸುತ್ತಿದ್ದ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ. ಅವನು (ಬಾಲಾಪರಾಧಿ) ಪಬ್‌ನಲ್ಲಿ ಮದ್ಯ ಸೇವಿಸಿರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳು ನಮ್ಮ ಬಳಿ ಇವೆ. ಅವನು ಸಂಪೂರ್ಣವಾಗಿ ಪ್ರಜ್ಞೆ ಹೊಂದಿದ್ದ. ಈ ಅಪಘಾತಕ್ಕೆ ಐಪಿಸಿ ಸೆಕ್ಷನ್ 304 ಅನ್ವಯವಾಗುತ್ತದೆ ಎಂಬ ಸಂಪೂರ್ಣ ಜ್ಞಾನವನ್ನು ಹೊಂದಿದ್ದನು ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದ್ದಾರೆ.

ಠಾಣೆಯಲ್ಲಿ ಪಿಜ್ಜಾ ನೀಡಲಾಗಿದೆಯೇ?

ಘಟನೆಯ ನಂತರ ಬಂಧಿತ ಬಾಲಾಪರಾಧಿಗೆ ಠಾನೆಯಲ್ಲಿ ಪಿಜ್ಜಾ ನೀಡಲಾಗಿದೆ ಎಂಬ ವರದಿಯನ್ನು ಕಮಿಷನರ್‌ ನಿರಾಕರಿಸಿದ್ದು, “ಪೊಲೀಸ್ ಠಾಣೆಯಲ್ಲಿ ಪಿಜ್ಜಾ ಪಾರ್ಟಿ ನಡೆಯಲಿಲ್ಲ. ಆದರೆ ನಾವು ಆ ಬಗ್ಗೆ ಆಂತರಿಕ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ. “ನಮ್ಮ ತನಿಖೆಯ ಸಮಯದಲ್ಲಿ, ಬಾಲಾಪರಾಧಿ ಕಾರನ್ನು ಚಾಲನೆ ಮಾಡುತ್ತಿದ್ದ ಎಂಬುದು ಸ್ಪಷ್ಟವಾಗಿ ಗೊತ್ತಾಗಿದೆ. ನಾವು ಈಗಾಗಲೇ ಅಗತ್ಯವಿರುವ ಎಲ್ಲಾ ಕಾಲಾನುಕ್ರಮದ ಪುರಾವೆಗಳನ್ನು ಸಂಗ್ರಹಿಸಿದ್ದೇವೆ” ಎಂದು ಪೊಲೀಸ್ ಕಮಿಷನರ್ ಹೇಳಿದರು.

ಅಪ್ರಾಪ್ತನ ಕುಟುಂಬದ ಚಾಲಕ ಆಗ ಕಾರಿನಲ್ಲಿದ್ದ. ಅಪಘಾತದ ನಂತರ, ಚಾಲಕನು ತಾನು ಕಾರನ್ನು ಓಡಿಸುತ್ತಿದ್ದೆ ಎಂದು ಆರಂಭದಲ್ಲಿ ಹೇಳಿಕೊಂಡಿದ್ದಾನೆ. ಆರಂಭಿಕ ಎಫ್‌ಐಆರ್‌ನಲ್ಲಿ, ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವು) ಅನ್ವಯಿಸಲಾಗಿದೆ. ಅದೇ ದಿನ ಅದನ್ನು ಸೆಕ್ಷನ್ 304 ಮಾಡಲಾಯಿತು. ಅಪಘಾತದ ನಂತರ ಅಪ್ರಾಪ್ತ ವಯಸ್ಕನನ್ನು ಜುವೆನೈಲ್ ಜಸ್ಟೀಸ್ ಬೋರ್ಡ್ ಮುಂದೆ ಹಾಜರುಪಡಿಸಲಾಗಿದೆ. ಅದು ಅವನಿಗೆ 300 ಪದಗಳ ಪ್ರಬಂಧವನ್ನು ಬರೆಯಲು ಕೇಳಿ, ಜಾಮೀನು ನೀಡಿತು. ನಂತರ ಜಾಮೀನು ರದ್ದುಪಡಿಸಿ, ಜೂನ್ 5 ರವರೆಗೆ ವೀಕ್ಷಣಾ ಕೇಂದ್ರಕ್ಕೆ ರಿಮಾಂಡ್ ಮಾಡಿದೆ.

ಇದನ್ನೂ ಓದಿ: ಕುಡಿದು ಕಾರು ಓಡಿಸಿ ಇಬ್ಬರ ಕೊಂದ ಬಾಲಕನಿಗೆ ರಿಮಾಂಡ್ ಹೋಮ್‌ನಲ್ಲಿ ಏನೆಲ್ಲ ಸವಲತ್ತಿದೆ ನೋಡಿ!

Continue Reading

ರಾಜಕೀಯ

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Prajwal Revanna Case: ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ, ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Why did Deve Gowda write a letter to Prajwal and HD Kumaraswamy reveals secret
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದವರಿಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣವನ್ನು (Prajwal Revanna Case) ಜೀವಂತವಾಗಿ ಇಡಬೇಕು ಎಂಬುದನ್ನು ಹೊರತುಪಡಿಸಿದರೆ, ಇದರಲ್ಲಿನ ಸತ್ಯಾಂಶ ಮತ್ತು ವಾಸ್ತವಾಂಶವನ್ನು ಹೊರತರಬೇಕು ಎಂಬುದು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಯಾರಿಗೂ ಆಸಕ್ತಿ ಇಲ್ಲ. ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡರನ್ನೇ (Devarajegowda) ಮುಖ್ಯಮಂತ್ರಿಗಳು ಪ್ರಶ್ನೆ ಮಾಡುತ್ತಾರೆ. ಹಾಗಾಗಿ ನಾನು ಸಹ ಸಿಎಂಗೆ ಒಂದು ಪ್ರಶ್ನೆ ಕೇಳುತ್ತೇನೆ. ಸಿದ್ದರಾಮಯ್ಯ ಅವರೇ ನಿಮ್ಮ ಮಗ ರಾಕೇಶ್‌ ವಿದೇಶಕ್ಕೆ ಹೋದಾಗ ದುರ್ಘಟನೆ ನಡೆಯಿತಲ್ಲವೇ? ಅಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಿದ್ದರು? ಹಾಗೆ ಹೋಗಲು ನಿಮ್ಮ ಅನುಮತಿಯನ್ನು ಪಡೆದುಕೊಂಡಿದ್ದರಾ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಮೊಮ್ಮಗ ಪ್ರಜ್ವಲ್‌ ರೇವಣ್ಣ ವಾಪಸ್‌ ಬರುವಂತೆ ಏಕೆ ಪತ್ರ ಬರೆದರು? ಎಂಬ ಬಗ್ಗೆಯೂ ಎಚ್‌ಡಿಕೆ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ರಾಕೇಶ್‌ ವಿದೇಶಕ್ಕೆ ಹೋಗಿದ್ದಾಗ ನಿಮ್ಮ ಮಗನ ಜತೆಗೆ ಯಾರು? ಎಷ್ಟು ಜನ ಇದ್ದರು? ಅಲ್ಲಿ ನಡೆದಿದ್ದಂತಹ ಘಟನೆ ಬಗ್ಗೆ ತನಿಖೆಯನ್ನು ಏಕೆ ಮಾಡಲಿಲ್ಲ. ಆ ವಿಷಯವನ್ನು ಏಕೆ ಮುಚ್ಚಿಟ್ಟಿರಿ? ಹಾಗಿದ್ದರೆ ನೀವೇ ಅನುಮತಿಯನ್ನು ಕೊಟ್ಟಿದ್ದೀರಾ? ಬೆಳೆದಂತಹ ಮಕ್ಕಳು ಪ್ರತಿಯೊಂದು ವಿಚಾರವನ್ನು ತಂದೆ – ತಾಯಿಯನ್ನು ಕೇಳಿ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು.

ದೇವೇಗೌಡರು ಪತ್ರ ಬರೆದಿದ್ದು ಯಾಕೆ?

ರಾಜತಾಂತ್ರಿಕ ಪಾಸ್‌ ಪೋರ್ಟ್ ಬಗ್ಗೆ ಹೇಳುತ್ತೀರಲ್ಲವಾ? ಅದರ ಕಾನೂನು ಗೊತ್ತಾ ನಿಮಗೆ? ಈಗ ಪ್ರಜ್ವಲ್‌ನನ್ನು ಕರೆದುಕೊಂಡು ಬರುವುದಕ್ಕೆ ಪತ್ರ ಬರೆದಿದ್ದೀರಲ್ಲವೇ? ಅದು ಸದ್ಯಕ್ಕೆ ಏನೂ ಆಗಲ್ಲ. ಆದರೆ, ಈ ಪ್ರೊಸೆಸ್‌ ಸಾಕಷ್ಟು ದಿನ ಹಿಡಿಯುತ್ತದೆ ಎಂದೇ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಮೂಲಕ ಪತ್ರ ಬರೆದು ಕರೆಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೆಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಎಷ್ಟು ವರ್ಷ ಅವರ ಜತೆ ಕೆಲಸ ಮಾಡಿದ್ದಾರಾ? ಅವರ ಯಾವ ಮಟ್ಟದಲ್ಲಿ ರಾಜಕಾರಣ ಮಾಡಿದ್ದಾರೆ ಅಂತ ಅನುಭವ ಇಲ್ವಾ? ನಿಮ್ಮ ಕುಟುಂಬದಲ್ಲಿ ನಡೆದಿರುವುದು ಏನು? ವಿದೇಶಕ್ಕೆ ನಿಮ್ಮ ಮಗನನ್ನು ನೀವೆ ಕಳಿಸಿದ್ದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪೆನ್‌ಡ್ರೈವ್‌ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ?

ಹಾಸನದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವುಳ್ಳ ಪೆನ್ ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ವಿಚಾರಣೆ ನಡೆಯುವಾಗ ಯಾರದ್ದೇ ತಪ್ಪು ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂಬುದಾಗಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗ ಪೆನ್‌ಡ್ರೈವ್‌ ವಿತರಣೆ ಮಾಡಿರುವುದು ಅಪರಾಧ ಅಲ್ಲ ಎಂದು ಅವರೇ ಹೇಳುತ್ತಿದ್ದಾರೆ. ಆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್‌ ಮಾಡದೇ ಹೊರಗಡೆ ಬಿಟ್ಟಿದ್ದೀರಲ್ಲವೇ ಅವರಿಗೆ ಏನು ನ್ಯಾಯ ಕೊಡಿಸುತ್ತೀರಿ? ಸರ್ಕಾರದಿಂದ ಏನು ನ್ಯಾಯ ಕೊಡಲು ಸಾಧ್ಯ? ಇದನ್ನೆಲ್ಲ ಸರಿ ಮಾಡುತ್ತೀರಾ ನೀವು? ನಾಲ್ಕು ಗೋಡೆಗಳ ಮಧ್ಯೆ ನಡೆದದ್ದು ಬೇರೆ, ಆದರೆ ಇದನ್ನು ಬೀದಿಗೆ ತಂದಿದ್ದು ನೀವೆ ತಾನೇ? ಇದರಲ್ಲಿ ಏನು ಮಾಹಿತಿ ಸಿಕ್ಕಿತ್ತೋ ಅದನ್ನು ಇಟ್ಟುಕೊಂಡು ಸಂತ್ರಸ್ತೆಯ ಕುಟುಂಬಕ್ಕೆ ಸಮಸ್ಯೆ ಆಗದಂತೆ ವಿಚಾರಣೆ ನಡೆಸಬೇಕಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕಾರ್ತಿಕ್‌ಗೆ ಎಸ್‌ಐಟಿಯಲ್ಲಿ ರಾಜಾತಿತ್ಯ

ಮಾತು ಎತ್ತಿದ್ದರೆ ಅದೇನೋ ಹೊಸ ಹೆಸರಿಟ್ಟುಕೊಂಡಿದ್ದಾರೆ, ಬ್ರದರ್‌ ಸ್ವಾಮಿ ಅಂತೆ. ನಿಮ್ಮ ಯೋಗ್ಯತೆಗೆ ಇಷ್ಟು. ನಿಮಗೆ ಮಾನ, ಮರ್ಯಾದೆ ಇದ್ದರೆ? ನೀವು ಯಾವ ರೀತಿ ನಡೆದುಕೊಂಡು ಬಂದಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ನಿಮ್ಮ ಪಾರ್ಟಿ ಅಧ್ಯಕ್ಷ ಯಾವ ರೀತಿ ನಡೆದುಕೊಂಡು ಬಂದಿದ್ದಾರೆ ಅಂತ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ಎಸ್‌ಐಟಿಯಲ್ಲಿ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ರಾಜಾತಿತ್ಯ ಸಿಗುತ್ತಿದೆ. ಎಲ್ಲಿದ್ದಾನೆ ಅವನು? ಮಾವನ ಮನೆಗೆ ಹೋದಂತೆ ಹೋಗಿ ಬರುತ್ತಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ವಿಧಾನಸೌಧದ ಒಳಗಡೆ ಕ್ಯಾಸೆಟ್ ಸರ್ಕ್ಯುಲೇಷನ್ ಮಾಡಿದವರು ಓಡಾಡಿಕೊಂಡು ಇದ್ದಾರೆ. ಏನು ತನಿಖೆ ನಡೆಸುತ್ತೀರಿ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

ಇದೊಂದು ಕಾಂಗ್ರೆಸ್ ಪಕ್ಷವಾ?

ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ನಾನು ಮಾಡಿದ್ದೇನಾ? ಇದೊಂದು ಕಾಂಗ್ರೆಸ್ ಪಕ್ಷವಾ? ಗೌರವ ಇದೆಯಾ? ಮಾನ, ಮರ್ಯಾದೆ ಇದೆಯಾ? ನಿಮ್ಮ ಡಿಸಿಎಂ ಡಿ.ಕೆ. ಶಿವಕುಮಾರ್, ಅದೇ ಸಿಡಿ ಶಿವು ಅವರು ಯಾಕಪ್ಪಾ ಶಿವರಾಮೇಗೌಡರ ಜತೆ ಮಾತನಾಡಿದರು? ಇವರದ್ದು ಹಸ್ತಕ್ಷೇಪ ಇಲ್ಲವೆಂದಾದರೆ ಏಕೆ ಮಾತನಾಡಬೇಕಿತ್ತು? ಇನ್ನೂ ಏನಾದರೂ ಸಾಕ್ಷಿ ಇದ್ದರೆ ಕೊಡು ಅಂತ ಕೇಳಿದ್ದು ಯಾಕೆ? ಬ್ರೋಕರ್‌, ತಲೆ ಹಿಡಿಯುವ ಕೆಲಸವನ್ನು ಮಾಡುತ್ತಿರುವವರು ಇವರು. ನನ್ನ ಬಗ್ಗೆ ಪಕ್ಷದಿಂದ ಟ್ವೀಟ್‌ ಮಾಡಿಸುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಿ? ಗೃಹ ಸಚಿವರೇ ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಿ. ನಿಮಗೆ ತಂದೆ – ತಾಯಿ ಜನ್ಮ ಕೊಟ್ಟು ಭೂಮಿಗೆ ಬಂದಿದ್ದೀರಿ. ಒಡಹುಟ್ಟಿದ ಅಕ್ಕ – ತಂಗಿಯರು ಇದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ

ಚನ್ನಗಿರಿಯ ಪ್ರಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತಾವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ. ಏಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಈ ಸರ್ಕಾರದವರು ಹಾಗೆ ಬಳಕೆ ಮಾಡಿಕೊಂಡಿದ್ದಾರೆ. ಅದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿತ ಕಂಡಿದೆ. ಇದು ಸರ್ಕಾರದ ಸ್ವಯಂ ಜವಾಬ್ದಾರಿಯಾಗಿದೆ. ಅವರೇ ಮಾಡಿಕೊಂಡ ಕೆಲಸ ಇದು. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

Continue Reading

ಮೈಸೂರು

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Murder case : ಇತ್ತೀಚೆಗೆ ಸಣ್ಣ ವಿಚಾರಕ್ಕೆಲ್ಲ ಶುರುವಾಗುವ ಜಗಳವು ಕೊಲೆಯಲ್ಲಿ ಅಂತ್ಯವಾಗುತ್ತಿದೆ. ಸದ್ಯ ಮೈಸೂರಿನಲ್ಲಿ ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿದ್ದು, ಯುವಕನೊರ್ವ ತನ್ನ ದೊಡ್ಡಮ್ಮನನ್ನೇ ಕೊಂದಿದ್ದಾನೆ.

VISTARANEWS.COM


on

By

Murder case in Mysuru
Koo

ಮೈಸೂರು: ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ವಿಕೋಪಕ್ಕೆ ತಿರುಗಿದ್ದು, ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ (Murder Case) ಮಾಡಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ನಿಂಗಣ್ಣ ಎಂಬುವವರ ಪತ್ನಿ ವಿನೋದಾ (45) ಕೊಲೆಯಾದವರು.

ನಿಂಗಣ್ಣ ಹಾಗೂ ಸ್ವಾಮಿ ಇಬ್ಬರು ಸಹೋದರರಾಗಿದ್ದು, ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಮತ್ತದೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು. ಈ ಮಧ್ಯೆ ಜಗಳಕ್ಕೆ ಎಂಟ್ರಿ ಕೊಟ್ಟ ಸ್ವಾಮಿ ಅವರ ಪುತ್ರ ಅಭಿಷೇಕ್ ತನ್ನ ದೊಡ್ಡಮ್ಮನ ಮೇಲೆ ಹಲ್ಲೆ ಮಾಡಿ ಹೊಟ್ಟೆಗೆ ಒದ್ದಿದ್ದಾನೆ. ಕೆಳಗೆ ಬಿದ್ದವರಿಗೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ವಿನೋದಾರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇತ್ತ ದೊಡ್ಡಮ್ಮ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಅಭಿಷೇಕ್ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಎಎಸ್‌ಪಿ ನಂದಿನಿ ಸೇರಿದಂತೆ ಇತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ (police custody) ಆರೋಪಿಯೊಬ್ಬ ಸಾವಿಗೀಡಾಗಿದ್ದು (Lockup death), ಇದರಿಂದ ರೊಚ್ಚಿಗೆದ್ದ ಆರೋಪಿ (culprit) ಕಡೆಯವರು ಠಾಣೆಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ (Channagiri news) ತಾಲೂಕಿನಲ್ಲಿ ಘಟನೆ ನಡೆದಿದೆ.

ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈತ ಒಸಿ ಆಡಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರಿಂದ ತನಿಖೆಗೆ ಒಳಗಾಗಿದ್ದ. ಸಂಜೆ ಪೊಲೀಸರು ಈತನನ್ನು ಠಾಣೆಗೆ ಕರೆತಂದಿದ್ದ‌ರು.

ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅದಿಲ್‌ ಸಾವನ್ನಪ್ಪಿದ್ದ. ಅಕ್ರೋಶಗೊಂಡ ಆರೋಪಿ ಸಂಬಂಧಿಕರು, ಆರೋಪಿಯ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ನೀಡಿದ ಹಿಂಸೆಯ ಪರಿಣಾಮ ಲಾಕಪ್‌ ಡೆತ್‌ ಆಗಿದೆ, ಅದನ್ನು ಮುಚ್ಚಿಡಲು ಲೋ ಬಿಪಿ ನಾಟಕವಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್‌ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ನೂರಾರು ಜನ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟೈಯರ್‌ ಸಿಡಿದು ಲಾರಿಯೊಂದು ಸುಟ್ಟು ಕರಕಲಾಗಿದ್ದು, ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

VISTARANEWS.COM


on

By

Road Accident
Koo

ಮೈಸೂರು/ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ಹುಣಸೂರು ತಾಲೂಕಿನ ಮೈಸೂರು- ಬಂಟ್ವಳ ರಾಷ್ಟೀಯ ಹೆದ್ದಾರಿ 275ರ ಬನ್ನಿಕುಪ್ಪೆ ಬಳಿ ಅಪಘಾತ (Road Accident) ನಡೆದಿದೆ.

ಬನ್ನಿಕುಪ್ಪೆ ಬಳಿ ಮಹಿಳೆ ಮೈಸೂರು ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನವು ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಮಹಿಳೆ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಮೃತಳ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಣಸೂರು ಶವಗಾರಕ್ಕೆ ರವಾನೆ ಮಾಡಲಾಗಿದೆ. ಇನ್ನೂ ಮಹಿಳೆ ಬಗ್ಗೆ ಮಾಹಿತಿ ಸಿಕ್ಕವರು 9480805057 ನಂಬರ್ ತಿಳಿಸುವಂತೆ ಇನ್ಸ್‌ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.

ಅಪಘಾತಕ್ಕೆ ತುಮಕೂರಲ್ಲಿ ಯುವಕ ಸಾವು

ಇತ್ತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡ ಆಲದಮರದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೊರ್ವ ಮೃತಪಟ್ಟಿದ್ದಾನೆ. ಪವನ್ ಎಸ್‌. ಆರ್ (23) ಮೃತ ದುರ್ದೈವಿ.

ಶಿರಾ ನಿವಾಸಿಯಾಗಿರುವ ಪವನ್ ತುಮಕೂರಿನ ಐನಾಕ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿ ತುಮಕೂರಿನಿಂದ ಶಿರಾಗೆ ಬೈಕ್‌ನಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಿಂದ ಹಾರಿ ಬಿದ್ದ ಪವನ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ‌

ಇದನ್ನೂ ಓದಿ: Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

ಚಾಮರಾಜನಗರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಟೈಯರ್‌ ಸಿಡಿದು ಸುಟ್ಟು ಕರಕಲಾದ ಲಾರಿ

ಕಾಫಿ ತುಂಬಿದ ಲಾರಿ ಟೈಯರ್ ಸಿಡಿದು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಕಣೇನೂರು ಗ್ರಾಮದ ಬಳಿ ಘಟನೆ ನಡೆದಿದೆ. ಲಾರಿ ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿತ್ತು.

ಈ ವೇಳೆ ಕಣೇನೂರು ಗ್ರಾಮಕ್ಕೆ ಬರುವಾಗ ಲಾರಿ ಮುಂಭಾಗದ ಚಕ್ರ ಸಿಡಿದು ಬೆಂಕಿ ಕಾಣಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿ ಕೆನ್ನಾಲಿಗೆಗೆ ಲಾರಿ ಭಸ್ಮವಾಗಿತ್ತು. ಲಾರಿಯಲ್ಲಿದ್ದ ಕಾಫಿ ಬೀಜ ಸುಟ್ಟು ಕರಕಲಾಗಿತ್ತು. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿಯಿಂದ ಜಿಗಿದು ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಿಂದ ಬಿದ್ದು ಅಸ್ವಸ್ಥಗೊಂಡಿದ್ದ ಲಾರಿ ಚಾಲಕನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಕಾರಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pune Porsche accident
ಕ್ರೈಂ4 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

Summer Special Trains
ಬೆಂಗಳೂರು12 mins ago

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Lockup Death
ಕರ್ನಾಟಕ13 mins ago

Lockup Death: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ, ಎಫ್ಐಆರ್ ಇಲ್ಲದೆ ಕರೆ ತಂದಿದ್ದು ತಪ್ಪು ಎಂದ ಸಿಎಂ

Hardik Pandya
ಕ್ರೀಡೆ37 mins ago

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Prajwal Revanna Case Why did Deve Gowda write a letter to Prajwal and HD Kumaraswamy reveals secret
ರಾಜಕೀಯ38 mins ago

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Murder case in Mysuru
ಮೈಸೂರು42 mins ago

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Gold Rate Today
ಚಿನ್ನದ ದರ43 mins ago

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

Shreerastu Shubhamastu Serial Netra Jadhav out
ಕಿರುತೆರೆ55 mins ago

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Road Accident
ಕ್ರೈಂ1 hour ago

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್1 hour ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌