JDU Leader Shot Dead: ಮನೆ ಬಳಿಯೇ ಜೆಡಿಯು ನಾಯಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು - Vistara News

ಕ್ರೈಂ

JDU Leader Shot Dead: ಮನೆ ಬಳಿಯೇ ಜೆಡಿಯು ನಾಯಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಕೈಲಾಶ್ ಮಹತೋ ಅವರಿಗೆ ಜಮೀನು ವಿಚಾರದಲ್ಲಿ ಕೆಲವರೊಂದಿಗೆ ವೈರತ್ವ/ಸಂಘರ್ಷ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

JDU Leader Shot Dead
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಿಹಾರ ಜೆಡಿ(ಯು) ನಾಯಕ ಕೈಲಾಶ್​ ಮಹತೋ (70) ಅವರು ಗುರುವಾರ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ (JDU Leader Shot Dead). ಇಲ್ಲಿನ ಕಟಿಹಾರ್​​​ನಲ್ಲಿರುವ ಪುರ್ಬಿ ಬಾರಿ ನಗರ್​​ನ ವಾರ್ಡ್​ ನಂಬರ್​ 12ರಲ್ಲಿರುವ ಅವರ ಮನೆಯ ಸಮೀಪವೇ ಘಟನೆ ನಡೆದಿದೆ. ಕೈಲಾಶ್​ ಮಹತೋ ಅವರು ರಾತ್ರಿ ಮನೆಯ ಬಳಿ ಇದ್ದರು. ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಅವರ ಕಡೆಗೆ ನಾಲ್ಕೈದು ಗುಂಡು ಹಾರಿಸಿದ್ದಾರೆ. ಕೈಲಾಶ್ ಮಹತೋ ಹೊಟ್ಟೆ ಮತ್ತು ಎದೆಗೆ ಗುಂಡು ಬಿದ್ದು ಅವರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ತನಿಖೆ ಶುರು ಮಾಡಿದ್ದೇವೆ. ಕೈಲಾಶ್ ಮಹತೋ ಅವರಿಗೆ ಜಮೀನು ವಿಚಾರದಲ್ಲಿ ಕೆಲವರೊಂದಿಗೆ ವೈರತ್ವ/ಸಂಘರ್ಷ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲ, ಸ್ವಲ್ಪ ದಿನಗಳ ಹಿಂದೆ ಅವರು ತಮಗೆ ಬೆದರಿಕೆಯಿದೆ, ಹಾಗಾಗಿ ಭದ್ರತೆ ಬೇಕು ಎಂದು ಸ್ಥಳೀಯ ಆಡಳಿತಕ್ಕೆ ಮನವಿಯನ್ನೂ ಸಲ್ಲಿಸಿದ್ದರು. ಎಲ್ಲ ಆಯಾಮದಲ್ಲೂ ತನಿಖೆ ಕೈಗೊಳ್ಳುತ್ತೇವೆ. ಮೃತದೇಹವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದು, ವರದಿ ಬಂದ ನಂತರ ಇನ್ನಷ್ಟು ಮಾಹಿತಿಯನ್ನು ನಾವು ನೀಡುತ್ತೇವೆ ಎಂದು ಕಟಿಹಾರ ಎಸ್​​ಡಿಪಿಒ ಓಂ ಪ್ರಕಾಶ್​ ತಿಳಿಸಿದ್ದಾರೆ.

ಇದನ್ನೂ ಓದಿ: ಭಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ: ಒಬ್ಬ ಯೋಧನನ್ನು ಬಂಧಿಸಿದ ಪಂಜಾಬ್ ಪೊಲೀಸರು, ಆತ ಗುಂಡು ಹಾರಿಸಿದ್ದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

Viral Video: ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿ ಯುವಕನೊಬ್ಬ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮುನ್ನ ಘಟನೆಯನ್ನು ಚಿತ್ರೀಕರಿಸಿ ಆತ್ಮಹತ್ಯೆಯ ಕಾರಣವನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಗ್ರಾಮದ ಮುಖ್ಯಸ್ಥ ಮತ್ತು ಆತನ ಸಹಚರರ ಕಿರುಕುಳಕ್ಕೆ ಹೇಗೆ ಬಲಿಯಾದೆ ಎನ್ನುವುದನ್ನು ವಿವರಿಸಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Viral Video
Koo

‍ಧರ್ಮಶಾಲಾ: ಬೆಚ್ಚಿ ಬೀಳಿಸುವ ಘಟನೆಯೊಂದರಲ್ಲಿ ಯುವಕನೊಬ್ಬ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮುನ್ನ ಘಟನೆಯನ್ನು ಚಿತ್ರೀಕರಿಸಿ ಆತ್ಮಹತ್ಯೆಯ ಕಾರಣವನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral Video). ಹಿಮಾಚಲ ಪ್ರದೇಶದ ಹಮೀರ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತನನ್ನು 22 ವರ್ಷದ ಸುನಿಲ್ ತಿವಾರಿ ಅಲಿಯಾಸ್ ಛೋಟು ಎಂದು ಗುರುತಿಸಲಾಗಿದೆ.

ಸಾಯುವ ಮೊದಲು ಸುನಿಲ್ ತಿವಾರಿ 1 ನಿಮಿಷ 22 ಸೆಕೆಂಡುಗಳ ವಿಡಿಯೊ ರೆಕಾರ್ಡ್ ಮಾಡಿದ್ದಾನೆ. ಅದರಲ್ಲಿ ಆತ ಗ್ರಾಮದ ಮುಖ್ಯಸ್ಥ ಮತ್ತು ಆತನ ಸಹಚರರ ಕಿರುಕುಳಕ್ಕೆ ಹೇಗೆ ಬಲಿಯಾದೆ ಎನ್ನುವುದನ್ನು ವಿವರಿಸಿದ್ದಾನೆ. ಸದ್ಯ ಈ ವಿಡಿಯೊ ನೋಡಿದ ನೆಟ್ಟಿಗರು ಆಘಾತ ವ್ಯಕ್ತಪಡಿಸಿದ್ದಾರೆ.

ವಿಡಿಯೊದಲ್ಲಿ ಏನಿದೆ?

ಹೊಲದಲ್ಲಿ ಕುಳಿತಿರುವ ಸುನಿಲ್ ತಿವಾರಿಯನ್ನು ತೋರಿಸುವ ಮೂಲಕ ವಿಡಿಯೊ ಆರಂಭವಾಗುತ್ತದೆ. ಬಳಿಕ ಆತ ವಿಷದ ಬಾಟಲಿಯನ್ನು ಕ್ಯಾಮೆರಾದ ಎದುರು ಹಿಡಿಯುತ್ತ, ಅಳುತ್ತ ಮಾತನಾಡುತ್ತಾನೆ. ಗ್ರಾಮದ ಮುಖ್ಯಸ್ಥ ಮತ್ತು ಅವನ ಸಹಚರರು ಹೇಗೆ ಕಿರುಕುಳ ನೀಡಿದರು ಎನ್ನುವುದನ್ನು ವಿವರಿಸುತ್ತಾನೆ. ಜತೆಗೆ ವಿಷದ ಮಾತ್ರೆ ಸೇವಿಸಿರುವುದಾಗಿ ತಿಳಿಸಿದ್ದಾನೆ. ಸಾಯಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದರ ಬಗ್ಗೆ ಗೊತ್ತಿಲ್ಲ ಎಂದೂ ಹೇಳುತ್ತಾನೆ.

“ಗ್ರಾಮದ ಮುಖ್ಯಸ್ಥ ಮತ್ತು ಅವನ ಸಹಚರರು ನನಗೆ ಚಿತ್ರಹಿಂಸೆ ನೀಡಿದ್ದಾರೆ ಮತ್ತು ಅದಕ್ಕಾಗಿಯೇ ಇಂದು ನಾನು ನನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ. ನಾನು ಈ ವಿಷವನ್ನು ಸೇವಿಸಿದ್ದೇನೆ ಮತ್ತು ನಾನು ಎಷ್ಟು ಹೊತ್ತು ಬದುಕುತ್ತೇನೆ ಎಂಬುದು ನನಗೆ ತಿಳಿದಿಲ್ಲ. ನಾನು 5 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇನೆ. ನಾನು ಇಂದು ಹೊರಡುತ್ತಿದ್ದೇನೆ. ನಿಮ್ಮ ಪ್ರಾರ್ಥನೆಯಲ್ಲಿ ನನ್ನನ್ನು ನೆನಪಿಸಿಕೊಳ್ಳಿ. ನಾನು ನಿಮ್ಮನ್ನು ಮತ್ತೆ ಎಂದಿಗೂ ಭೇಟಿಯಾಗುವುದಿಲ್ಲʼʼ ಎಂದು ಸುನಿಲ್‌ ಹೇಳಿದ್ದಾನೆ. ಈ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.

ವರದಿಗಳ ಪ್ರಕಾರ, ಸುನಿಲ್ ಅವರನ್ನು ಬುಧವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ಝಾನ್ಸಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ʼʼಕೆಲವು ವ್ಯಕ್ತಿಗಳೊಂದಿಗಿನ ವಿವಾದದ ನಂತರ ನನ್ನ ಸಹೋದರ ಸುನಿಲ್ ವಿಷ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಆರೋಪಿಸಿ ಸುನಿಲ್ ಸಹೋದರ ಶೀತಲ್ ಬುಧವಾರ ಮಜ್ಗವಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

ಇಬ್ಬರ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುನಿಲ್‌ ತನ್ನ ವಿಡಿಯೊದಲ್ಲಿ ಉಲ್ಲೇಖಿಸಿರುವ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬರೈಲ್ ಗ್ರಾಮದ ಮುಖ್ಯಸ್ಥ ದಿನೇಶ್, ರಾಜ್ ಕುಮಾರ್, ಪ್ರಶಾಂತ್, ಧನ್ನಿ ಮತ್ತು ಆಯುಷ್ ವಿರುದ್ಧ ಐಪಿಸಿ ಸೆಕ್ಷನ್ 30 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 18ರಂದು ಹರಿದ್ವಾರ ಬಾಬಾ ಗ್ರಾಮದ ಹೊರಗೆ ಸುನಿಲ್ ಮತ್ತು ಧನ್ನಿ ನಡುವೆ ವಾಗ್ವಾದ ನಡೆದಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಬಂದಾಗ ಸುನಿಲ್ ತನ್ನ ಸಂಬಂಧಿಕರೊಂದಿಗೆ ಹೊರಟು ಹೋಗಿದ್ದ. ಬಳಿಕ ಎರಡೂ ಕಡೆಯವರಿಗೆ ಠಾಣೆಗೆ ಬರಲು ತಿಳಿಸಲಾಗಿತ್ತು. ಆದರೆ ಹಾಜರಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

Fire Tragedy: ಬಿಹಾರದಲ್ಲಿ ಗುರುವಾರ ಭೀಕರ ಅಗ್ನಿ ಅವಘಢ ಸಂಭವಿಸಿದೆ. ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ನಡೆದ ಈ ಅಗ್ನಿ ಅವಘಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಸುರಕ್ಷತಾ ನಿಯಮಗಳನ್ನು ಅನುಸರಿಸದ ಕಾರಣ ಬೆಂಕಿ ಕಾಣಿಸಿಕೊಂಡಿತ್ತು.

VISTARANEWS.COM


on

Fire Tragedy
Koo

ಪಾಟ್ನಾ: ಬಿಹಾರದಲ್ಲಿ ಗುರುವಾರ (ಏಪ್ರಿಲ್‌ 25) ಭೀಕರ ಅಗ್ನಿ ಅವಘಢ (Fire Tragedy) ಸಂಭವಿಸಿದೆ. ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ನಡೆದ ಈ ಅಗ್ನಿ ಅವಘಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅವರನ್ನು ಸುರಕ್ಷಿತವಾಗಿ ಹೊರಗೆ ಕರೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರಣ ಏನು?

ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಸುರಕ್ಷತಾ ನಿಯಮಗಳನ್ನು ಅನುಸರಿಸದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಮಾಹಿತಿ ನೀಡಿ, ʼʼಬೆಂಕಿಯನ್ನು ಹತೋಟಿಗೆ ತಂದಿದ್ದೇವೆ. ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿತ್ತು. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದುʼʼ ಎಂದು ತಿಳಿಸಿದ್ದಾರೆ.

ʼʼನಾವು 16,000ಕ್ಕೂ ಹೆಚ್ಚು ಹೋಟೆಲ್‌ಗಳನ್ನು ಪರಿಶೀಲಿಸಿದ್ದೇವೆ. ಇನ್ನೂ ಪರಿಶೀಲನೆ ನಡೆಯುತ್ತಿದೆ. ಈ ವೇಳೆ ಅವರಿಗೆ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗುತ್ತದೆ. ಕೆಲವರು ನಮ್ಮ ಸೂಚನೆಯನ್ನು ಅನುಸರಿಸುತ್ತಾರೆ ಮತ್ತು ಕೆಲವರು ಅನುಸರಿಸುವುದಿಲ್ಲ. ಈ ಘಟನೆಗೆ ಅಂತಹ ನಿರ್ಲಕ್ಷ್ಯವೇ ಕಾರಣ. ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆʼʼ ಎಂದು ಶೋಭಾ ಒಹತ್ಕರ್ ಹೇಳಿದ್ದಾರೆ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಮಿಶ್ರಾ ಮಾಹಿತಿ ನೀಡಿ, ʼʼಜನದಟ್ಟಣೆಯ ಪ್ರದೇಶದಲ್ಲಿರುವ ಕಟ್ಟಡದಿಂದ 30ಕ್ಕೂ ಹೆಚ್ಚು ಜನರನ್ನು ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ. ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಹೋಟೆಲ್‌ನ ಬಲಭಾಗದಲ್ಲಿರುವ ಎರಡೂ ಹೋಟೆಲ್‌ಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಛಿದ್ರವಾದ ರೆಸ್ಟೋರೆಂಟ್​, 31 ಮಂದಿ ದುರ್ಮರಣ; ರಸ್ತೆಗೆ ಬಿದ್ದ ಹೆಣಗಳು, ಅವಶೇಷಗಳು

ಬಣ್ಣದ ಫ್ಯಾಕ್ಟರಿಯಲ್ಲಿ ಭೀಕರ ಬೆಂಕಿ ದುರಂತ, 11 ಸಾವು

ಕೆಲವು ದಿನಗಳ ಹಿಂದೆ ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ (Paint Factory) ಸಂಭವಿಸಿದ ಭೀಕರ ಬೆಂಕಿ ಆಕಸ್ಮಿಕದಲ್ಲಿ (Fire Tragedy) ಕನಿಷ್ಠ 11 ಜನರು ಸಾವನ್ನಪ್ಪಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು. ಅಗ್ನಿಶಾಮಕ ದಳದ ಪ್ರಕಾರ ಎರಡು ಬಣ್ಣ ಮತ್ತು ರಾಸಾಯನಿಕ ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಬಣ್ಣದ ಕಾರ್ಖಾನೆಯಲ್ಲಿ ಭಾರಿ ಪ್ರಮಾಣದ ರಾಸಾಯನಿಕಗಳನ್ನು ಶೇಖರಿಸಿಡಲಾಗಿದ್ದು, ಬೆಂಕಿಯ ಆರ್ಭಟ ಇನ್ನೂ ಜೋರಾಗಿತ್ತು. ರಾಸಾಯನಿಕಗಳು ಹಾಗೂ ಪೇಂಟ್‌ ಸುಟ್ಟಿದ್ದರಿಂದ ಉಂಟಾದ ಹೊಗೆ ಹಾಗೂ ದುರ್ವಾಸನೆ ಪರಿಸರದಲ್ಲಿ ದಟ್ಟವಾಗಿ ಕವಿದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಪೊಲೀಸರ ಪ್ರಕಾರ, ಬೆಂಕಿಯ ಮೊದಲು ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು.

ಸಂಜೆ 5.25ಕ್ಕೆ ಬೆಂಕಿ ಆಕಸ್ಮಿಕದ ಬಗ್ಗೆ ಕರೆ ಬಂತು. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು. ಬೆಂಕಿ ನಂದಿಸಿ ಸಿಬ್ಬಂದಿ ಒಳಕ್ಕೆ ಪ್ರವೇಶಿಸುವುದಕ್ಕೂ ಮುನ್ನವೇ 11 ಮಂದಿ ಸಾವನ್ನಪ್ಪಿದ್ದರು.

Continue Reading

ಹುಬ್ಬಳ್ಳಿ

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ ನಡೆಸುತ್ತಿದ್ದಾರೆ. ಮಗಳ 5ನೇ ದಿನದ ಸಂತಾಪದ ನೆಪದಲ್ಲಿ ವಿಡಿಯೊ ತೆಗೆದುಕೊಂಡು ಹೋಗಿದ್ದಾರೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಹೀಗಾಗಿ ಆಯುಕ್ತರು ಪೊಲೀಸ್‌ ಭದ್ರತೆಯನ್ನು ಒದಗಿಸಿದ್ದಾರೆ ಎಂದು ನೇಹಾ ತಂದೆ ನಿರಂಜನ್‌ ಹಿರೇಮಠ ತಿಳಿಸಿದ್ದಾರೆ.

VISTARANEWS.COM


on

By

Neha Murder Case in hubblli
Koo

ಹುಬ್ಬಳ್ಳಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣಕ್ಕೆ (Neha Murder Case) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಈಗಾಗಲೇ ನೇಹಾ ಮನೆಗೂ ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದು, ನೇಹಾ ತಂದೆ-ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ಅನಾಮಧೇಯ ವ್ಯಕ್ತಿಗಳು ಮನೆ ಸುತ್ತಮುತ್ತ ಓಡಾಡುತ್ತಿದ್ದಾರೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಆತಂಕವನ್ನು ಹೊರಹಾಕಿದ್ದಾರೆ.

ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಮಗಳ ಹತ್ಯೆಯಾದ ಐದನೇ ದಿನ, ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೊ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡು ಬಂದಿದೆ. ಕೊಲೆ ಮಾಡುವ ಮುನ್ನ ಆರೋಪಿ ಬಿಡ್ನಾಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದ ಎಂದು ತಿಳಿದು ಬಂದಿದೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಈ ವಿಷಯವನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ, ಅವರು ಭದ್ರತೆ ಕೊಡುವುದಾಗಿ ಹೇಳಿದ್ದು, ಪೊಲೀಸರನ್ನು ನಿಯೋಜಿಸಿದ್ದಾರೆ ಎಂದು ನಿರಂಜನ್‌ ತಿಳಿಸಿದ್ದಾರೆ.

ಇನ್ನೂ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಂದಲೂ ಕೆಲ ಮಾಹಿತಿ ಕೇಳಿದ್ದಾರೆ. ಪ್ರಕರಣದ ತನಿಖೆಗೆ ನಮ್ಮ ಸಹಕಾರ ಕೇಳಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಆರೋಪಿಯನ್ನು ಕರೆತಂದು ವಿಚಾರಣೆ ಮಾಡಿದ್ದಾರೆ. ಸದ್ಯ ತನಿಖೆ ವಿವರಗಳನ್ನು ಹೇಳದಿರುವಂತೆ ಮನವಿ ಮಾಡಿದ್ದಾರೆ. ಸಿಐಡಿ ವರದಿ ಕೊಟ್ಟ ನಂತರ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಸಿಐಡಿ ಅಧಿಕಾರಿಗಳ ತನಿಖೆ ಮುಂದುವರಿದಿದ್ದು, ಗುರುವಾರ (ಏ.25) ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದರು. ಸಿಐಡಿ ಎಡಿಜಿಪಿ ಬಿಕೆ‌ ಸಿಂಗ್, ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಸುಮಾರು ಒಂದು ಗಂಟೆಗಳ ಸುದೀರ್ಘ ವಿಚಾರಣೆಯನ್ನು ನಡೆಸಿದರು. ನಂತರ ನೇಹಾ ತಂದೆ ನಿರಂಜನ್‌ ಹಿರೇಮಠ್‌, ತಾಯಿ ಗೀತಾರಿಂದ ಹೇಳಿಕೆಯನ್ನು ಪಡೆದರು.

ಇನ್ನೂ ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಹುಬ್ಬಳ್ಳಿಯ ಬಿವಿಬಿ ಕಾಲೇಜಿಗೆ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಆರು ದಿನಗಳ‌ ಕಾಲ‌ ಕಸ್ಟಡಿಗೆ ನೀಡಿದ ಹಿನ್ನೆಲೆ ಆರೋಪಿಯನ್ನು ಧಾರವಾಡದ ಕಾರಾಗೃಹದಿಂದ ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿತ್ತು. ಇದೀಗ ನೇಹಾ ತಂದೆ- ತಾಯಿಯಿಂದ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿರುವ ಸಿಐಡಿ ಅಧಿಕಾರಿಗಳು 1 ಗಂಟೆಯ ವಿಚಾರಣೆ ನಡೆಸಿ ವಾಪಸ್‌ ಆದರು.

ರಹಸ್ಯ ಸ್ಥಳದಲ್ಲಿ ಆರೋಪಿ ಫಯಾಜ್‌ ವಿಚಾರಣೆ

ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಧಾರವಾಡದಲ್ಲಿ ಬೀಡು ಬಿಟ್ಟಿದೆ. ಆರೋಪಿ ಫಯಾಜ್‌ನನ್ನು ಧಾರವಾಡದ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಸಿಐಡಿ ಅಧಿಕಾರಿಗಳು ನಿನ್ನೆ ಬುಧವಾರ ಸ್ಥಳ ಮಹಜರು ಜತೆಗೆ ಪ್ರಾಥಮಿಕ ಹಂತದ ವಿಚಾರಣೆ ಪೂರ್ಣಗೊಳಿಸಿದ್ದಾರೆ.

ಸ್ಥಳ ಮಹಜರು ವೇಳೆ ಕಾಲೇಜು ಬಳಿ ಎವಿಬಿಪಿ ಪ್ರತಿಭಟನೆ ನಡೆಸಿತ್ತು. ಇದೀಗ ಧಾರವಾಡದಲ್ಲಿಯೂ ಪ್ರತಿಭಟನೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಫಯಾಜ್‌ನನ್ನು ರಹಸ್ಯ ಸ್ಥಳದಲ್ಲಿಟ್ಟಿದ್ದಾರೆ. ಫಯಾಜ್‌ ನೇಹಾಳನ್ನು ಹತ್ಯೆ ಮಾಡಲು ಧಾರವಾಡದಲ್ಲೇ ಚಾಕು ಖರೀದಿ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಾಕು ಖರೀದಿಸಿದ ಸ್ಥಳ, ಸ್ನೇಹಿತರ ಭೇಟಿಯಾದ ಸ್ಥಳಗಳಿಗೆ ಸಿಐಡಿ ಟೀಂ ಭೇಟಿ ನೀಡುವ ಸಾಧ್ಯತೆ ಇದೆ.

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case : ನೇಹಾ ಹತ್ಯೆ ಪ್ರಕರಣ ಸಂಬಂಧ ವಿವಿಧ ಆಯಾಮದಲ್ಲಿ ಸಿಐಡಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ. ನೇಹಾ ತಂದೆ-ತಾಯಿ ವಿಚಾರಣೆ ಬಳಿಕ ನಿರಂಜನ್‌ ಹಿರೇಮಠ್‌ ಅವರ ಕಾರು ಚಾಲಕ ಹಾಗೂ ಅಕೌಂಟೆಂಟ್‌ರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

By

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ (Neha Murder case) ಸಂಬಂಧಿಸಿದಂತೆ ನೇಹಾ ತಂದೆ ನಿರಂಜನ್‌ ಹಿರೇಮಠ್‌ ಅವರ ಕಾರುಚಾಲಕ ಮತ್ತು ಅಕೌಂಟೆಂಟ್‌ರನ್ನು ಸಿಐಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ಮತ್ತು ಸಿಐಡಿ ಎಸ್‌ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಕಾರು ಚಾಲಕ ಮಹಾಂತೇಶ ಮೆಣಸಿನಕಾಯಿ, ಅಕೌಂಟೆಂಟ್ ಬಷೀರ್ ಅಹ್ಮದ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಅವರಿಬ್ಬರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ?

ಅನಾಮಧೇಯ ವ್ಯಕ್ತಿಗಳು ಮನೆ ಸುತ್ತಮುತ್ತ ಓಡಾಡುತ್ತಿದ್ದಾರೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯಿಸಿದ್ದಾರೆ. ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಮಗಳ ಹತ್ಯೆಯಾದ ಐದನೇ ದಿನ, ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೊ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡು ಬಂದಿದೆ. ಕೊಲೆ ಮಾಡುವ ಮುನ್ನ ಆರೋಪಿ ಬಿಡ್ನಾಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದ ಎಂದು ತಿಳಿದು ಬಂದಿದೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಈ ವಿಷಯವನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ, ಅವರು ಭದ್ರತೆ ಕೊಡುವುದಾಗಿ ಹೇಳಿದ್ದು, ಪೊಲೀಸರನ್ನು ನಿಯೋಜಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಂದಲೂ ಕೆಲ ಮಾಹಿತಿ ಕೇಳಿದ್ದಾರೆ. ಪ್ರಕರಣದ ತನಿಖೆಗೆ ನಮ್ಮ ಸಹಕಾರ ಕೇಳಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಆರೋಪಿಯನ್ನು ಕರೆತಂದು ವಿಚಾರಣೆ ಮಾಡಿದ್ದಾರೆ. ಸದ್ಯ ತನಿಖೆ ವಿವರಗಳನ್ನು ಹೇಳದಿರುವಂತೆ ಮನವಿ ಮಾಡಿದ್ದಾರೆ. ಸಿಐಡಿ ವರದಿ ಕೊಟ್ಟ ನಂತರ ಮಾಹಿತಿಯನ್ನು ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Physical abuse : ಬೆಂಗಳೂರಲ್ಲಿ ಯುವತಿ ಕಿಡ್ನ್ಯಾಪ್; ಐವರು ಕಾಮುಕರಿಂದ ಅತ್ಯಾಚಾರ

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
ವೈರಲ್ ನ್ಯೂಸ್6 mins ago

Viral Video: ವಿಷ ಸೇವಿಸಿ ವಿಡಿಯೊ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ; ಸಾವಿಗೆ ಕಾರಣವೇನು?

deadly murder
Latest29 mins ago

Deadly Murder: ಬರ್ಗರ್‌ ತಿಂದನೆಂದು ಸ್ನೇಹಿತನನ್ನೇ ಗುಂಡಿಟ್ಟು ಕೊಂದ!

Chemistry paper leak case
ಕೋರ್ಟ್30 mins ago

Chemistry paper leak : ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; 17 ಆರೋಪಿಗಳು ಖುಲಾಸೆ

Ranji Trophy
ಪ್ರಮುಖ ಸುದ್ದಿ52 mins ago

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

Fire Tragedy
ದೇಶ1 hour ago

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

World Malaria Day April 25
ಆರೋಗ್ಯ1 hour ago

World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

Bismah Maroof
ಕ್ರೀಡೆ1 hour ago

Bismah Maroof : ಹೆಣ್ಣು ಮಗುವಿನ ಸಮೇತ ಆಡಲು ಹೋಗುತ್ತಿದ್ದ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ ನಿವೃತ್ತಿ

Modi in Karnataka Pm Modi to visit Karnataka on April 28 and 29 Raichur conference maybe cancelled
Lok Sabha Election 20241 hour ago

Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

Lok Sabha Election
ಕರ್ನಾಟಕ1 hour ago

Lok Sabha Election: ನಾಳೆ ಮೊದಲ ಹಂತದ ಮತದಾನ; ಬೆಂಗಳೂರಿನಲ್ಲಿ ಏನಿರತ್ತೆ? ಏನಿರಲ್ಲ?

KKR vs PBKS
ಕ್ರೀಡೆ2 hours ago

KKR vs PBKS: ಪಂಜಾಬ್​ಗೆ ಮಸ್ಟ್​ ವಿನ್​ ಗೇಮ್; ಕೆಕೆಆರ್​ ಎದುರಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ2 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ5 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20247 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌