Karave Protest : ನಾರಾಯಣ ಗೌಡ ಪರಪ್ಪನ ಅಗ್ರಹಾರ ಜೈಲಿಗೆ; ಮುಠ್ಠಾಳ ಸರ್ಕಾರ ಎಂದು ಆಕ್ರೋಶ - Vistara News

ಕರ್ನಾಟಕ

Karave Protest : ನಾರಾಯಣ ಗೌಡ ಪರಪ್ಪನ ಅಗ್ರಹಾರ ಜೈಲಿಗೆ; ಮುಠ್ಠಾಳ ಸರ್ಕಾರ ಎಂದು ಆಕ್ರೋಶ

karave-protest- ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕಕ್ಕಾಗಿ ಹೋರಾಟ ಮಾಡಿದ್ದಕ್ಕಾಗಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಮತ್ತು ಇತರ 28 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

VISTARANEWS.COM


on

TA Narayana Gowda Arrest and Jail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಿಸೆಂಬರ್‌ 27ರಂದು (ಬುಧವಾರ) ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ (Kannada Name plates) ಆಗ್ರಹಿಸಿ ನಡೆಸಲಾದ ಚಳವಳಿಗೆ (Karave Protest) ಸಂಬಂಧಿಸಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆಯ (Karnataka Rakshana Vedike) ಅಧ್ಯಕ್ಷ ನಾರಾಯಣ ಗೌಡ (TA Narayana Gowda) ಮತ್ತು ಇತರರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಬುಧವಾರ ಸಂಜೆ ಬಂಧಿಸಲ್ಪಟ್ಟ ಅವರನ್ನು ರಾತ್ರಿ 1.00 ಗಂಟೆ ಬಳಿಕ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದಾಗ ಜನವರಿ‌ 10ರವರೆಗೆ ನ್ಯಾಯಾಂಗ ಬಂಧನಕ್ಕೆ‌ (judicial custody) ನೀಡಿದ್ದರು. ಇದರಂತೆ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಜೈಲಿಗೆ ಹಾಕಲು ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ನಾರಾಯಣ ಗೌಡರು ಇದೊಂದು ಮುಠ್ಠಾಳ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರವೇ ನಾರಾಯಣ ಗೌಡ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಹೆದ್ದಾರಿ ತಡೆ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, (IPC 353) ರಡಿ ಪ್ರಕರಣವನ್ನು ನಾರಾಯಣ ಗೌಡ ಸೇರಿ ಸಂಘಟನೆಯ ಇನ್ನಿತರ ಕಾರ್ಯಕರ್ತರ ಮೇಲೆ ದಾಖಲು ಮಾಡಿಕೊಳ್ಳಲಾಗಿದೆ. ನಾರಾಯಣ ಗೌಡರ ಜತೆ 29 ಮಂದಿಯನ್ನು ಜೈಲಿಗೆ ಹಾಕಲಾಗಿದೆ.

ಪ್ರತಿಭಟನೆ ವೇಳೆ‌ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪ ದಾಖಲಾಗಿದೆ. ನಾರಾಯಣ ಗೌಡ ಸೇರಿ 6 ಮಂದಿ ವಿರುದ್ದ ಪಿಎಸ್ ಐ ಲಿತೀನ್ ದೂರಿನನ್ವಯ ಚಿಕ್ಕಜಾಲ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದ್ದು, ನ್ಯಾಷನಲ್ ಹೈವೆ ಅಥಾರಿಟಿ ಆ್ಯಕ್ಟ್ IPC 283, 188, 427, 341 ,188 283ರಡಿ ಎಫ್ಐಆರ್ ಮಾಡಲಾಗಿದೆ. ನಾರಾಯಣ ಗೌಡ A1, ಜಗದೀಶ್ A2, ಸುರೇಶ್ A3, ಬಿ.ಕೆ.ನಾರಾಯಣ ಸ್ವಾಮಿ A4, ಬಿ.ಟಿ .ಅನಿಲ್ ಕುಮಾರ್ A5, ಅಂಬರೀಶ್ A6 ಆಗಿದ್ದಾರೆ.

ಹೋರಾಟ ನಡೆಸಿದ ನಾರಾಯಣ ಗೌಡ ಹಾಗೂ ಸಂಗಡಿಗರನ್ನು ನಿನ್ನೆ ಪೊಲೀಸ್‌ ವಶಕ್ಕೆ ಪಡೆಯಲಾಗಿತ್ತು. ಇಂದು ನಸುಕಿನ ಜಾವ ನಾರಾಯಣ ಗೌಡ ಸೇರಿದಂತೆ 29 ಮಂದಿಯನ್ನು ದೇವನಹಳ್ಳಿಯಲ್ಲಿರುವ ನಿವಾಸಕ್ಕೆ ಹಾಜರುಪಡಿಸಲಾಯಿತು. 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ಹೊರಡಿಸಿದರು.

ನಾರಾಯಣ ಗೌಡ ಹಾಗೂ ಸಂಗಡಿಗರನ್ನು ಭಾರಿ ಬಿಗಿ ಭದ್ರತೆ ನಡುವೆ ಪೊಲೀಸರು ಕೊಂಡೊಯ್ದಿದ್ದಾರೆ. ಇದಕ್ಕೂ ಮುನ್ನ ಎಲ್ಲರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಮೆಡಿಕಲ್ ಟೆಸ್ಟ್‌ಗೆ ಕರೆದೊಯ್ಯುವಾಗ ಕರವೇ ಕಾರ್ಯಕರ್ತರು ಬಸ್ ತಡೆದು ಬಸ್‌ಗೆ ಕಲ್ಲು ತೂರಾಟ ನಡೆಸಿದರು. ಬಸ್ಸಿಗೆ ಕಲ್ಲು ತೂರುವಾಗ ಪೊಲೀಸರೊಬ್ಬರಿಗೆ ಕಲ್ಲೇಟು ಬಿದ್ದು ಗಾಯವಾಗಿದೆ.

ಇದನ್ನೂ ಓದಿ: Karave Protest: ಕನ್ನಡ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಕರವೇ; ಇಂಗ್ಲಿಷ್‌ ನಾಮಫಲಕಗಳ ಧ್ವಂಸ

ಸಿಎಂ, ಸಚಿವರ ಮನೆಗಳಿಗೆ ಮುತ್ತಿಗೆ, ಪ್ರತಿಭಟನೆ

ನಾರಾಯಣ ಗೌಡರ ಬಂಧವನ್ನು ಖಂಡಿಸಿ ಮತ್ತು ಕಾರ್ಯಕರ್ತರ ಮೇಲೆ ನಡೆದ ದಬ್ಬಾಳಿಕೆಯನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಮತ್ತು ಎಲ್ಲ ಸಚಿವರ ನಿವಾಸಗಳ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸ ಮತ್ತು ಇತರ ಕಡೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ʼಕನ್ನಡಪರ ಹೋರಾಟ ನಡೆಸಿದ್ದಕ್ಕಾಗಿ ಬೆಳಗ್ಗೆಯಿಂದ ವಶಕ್ಕೆ ಪಡೆದು ಕೂಡಾ ಹಾಕಿದ್ದು, ಊಟ ನೀಡಿಲ್ಲ, ನನ್ನ ಮೆಡಿಸಿನ್ ನೀಡಿಲ್ಲ. ನನ್ನ ಮೊಬೈಲ್ ಕಸಿದು ನೊವುಂಟು ಮಾಡಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಿ ಕಾರ್ಯಕರ್ತರನ್ನು ಬಂಧಿಸಿದ್ದಾರೆʼ ಎಂದು ಆರೋಪಿಸಿದ್ದಾರೆ.

ಬಂಧಿತ ಕರವೇ ಕಾರ್ಯಕರ್ತರಲ್ಲಿ ಒಬ್ಬ ಅಸ್ವಸ್ಥನಾಗಿದ್ದಾನೆ. ಸೂರಿ ಎಂಬಾತನ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಪೊಲೀಸರ ವಶದಲ್ಲಿದ್ದ ವೇಳೆ ಬಸ್‌ನಲ್ಲಿ ಪ್ರಜ್ಞೆ ಕಳೆದುಕೊಂಡಿದ್ದಾನೆ. ಕೂಡಲೇ ಆತನನ್ನು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

Actor Darshan Arrested: ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸರು ತನಿಖಾ ವರದಿ ರಚಿಸಲಿದ್ದಾರೆ. ಆರೋಪಿಗಳ ಬಾಯಿ ಬಿಡಿಸಲಿದ್ದಾರೆ. ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೇಳಬಹುದಾದ ಸುಳ್ಳುಗಳನ್ನು ಆ ಕ್ಷಣದಲ್ಲೇ ತಡೆಯಲಿದ್ದಾರೆ. ಸಾಂದರ್ಭಿಕ ಪ್ರಶ್ನೆಗಳನ್ನು ಹಾಕುವ ಮೂಲಕ ನೈಜ ಉತ್ತರವನ್ನು ಪಡೆಯಲಿದ್ದಾರೆ. ಇವೆಲ್ಲವೂ ತನಿಖೆಯ ಪ್ರಗತಿಗೆ ನೆರವಾಗಲಿದೆ.

VISTARANEWS.COM


on

Actor Darshan Arrested
Koo

ಬೆಂಗಳೂರು: ದರ್ಶನ್ ಮತ್ತು ಆತನ ಗ್ಯಾಂಗ್​ನ(Actor Darshan Arrested ) ಕೈಗೆ ಸಿಕ್ಕಿ ಅಮಾನುಷವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿಯ ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಿದೆ. ವರದಿಯ ಪ್ರಕಾರ ಆರೋಪಿಗಳು ಅತ್ಯಂತ ಹೀನಾಯವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ರೇಣುಕಾ ಸ್ವಾಮಿಯ ದೇಹದ ಸರ್ವ ಅಂಗಗಳ ಮೇಲೂ ಕೊಲೆಗಾರರ ಗ್ಯಾಂಗ್​ ಪ್ರಹಾರ ಮಾಡಿದೆ. ಕೈಗೆ ಸಿಕ್ಕಿದ್ದ ವಸ್ತುಗಳಿಂದೆಲ್ಲ ಹೊಡೆದು ಆಘಾತ ಮಾಡಿದ್ದಾರೆ. ರಕ್ತ ಹೆಪ್ಪುಗಟ್ಟಿಸಿ ಕೊಲೆ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಪೊಲೀಸರು ತನಿಖಾ ವರದಿ ರಚಿಸಲಿದ್ದಾರೆ. ಆರೋಪಿಗಳ ಬಾಯಿ ಬಿಡಿಸಲಿದ್ದಾರೆ. ಆರೋಪಿಗಳು ಪ್ರಕರಣದಿಂದ ತಪ್ಪಿಸಿಕೊಳ್ಳಲು ಹೇಳಬಹುದಾದ ಸುಳ್ಳುಗಳನ್ನು ಆ ಕ್ಷಣದಲ್ಲೇ ಭೇದಿಸಲಿದ್ದಾರೆ. ಸಾಂದರ್ಭಿಕ ಪ್ರಶ್ನೆಗಳನ್ನು ಹಾಕುವ ಮೂಲಕ ಆರೋಪಿಗಳಿಂದ ನೈಜ ಉತ್ತರವನ್ನು ಕಕ್ಕಿಸಲಿದ್ದಾರೆ. ಇವೆಲ್ಲವೂ ತನಿಖೆಯ ಪ್ರಗತಿಗೆ ನೆರವಾಗಲಿದೆ.

ರೇಣುಕಾಸ್ವಾಮಿ ದೇಹದ ಎಲ್ಲೆಲ್ಲಿ ಗಾಯವಾಗಿತ್ತು?

ಮರಣೋತ್ತರ ಪರಿಕ್ಷೆ ವರದಿಯ ಆಧಾರದಲ್ಲಿ ರೇಣುಕಾ ಸ್ವಾಮಿಯ ಮರ್ಮಾಂಗದ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಇದು ಮನುಷ್ಯನಿಗೆ ಅತೀವವಾದ ನೋವು ತರುವ ಆಘಾತವಾಗಿದೆ. ಕೊಲೆಗಾರರ ಹೊಡೆತಕ್ಕೆ ರೇಣುಕಾ ಅವರ ಮರ್ಮಾಂಗದಲ್ಲಿ ಆಂತರಿಕ ಹಾಗೂ ಬಾಹ್ಯ ರಕ್ತ ಸ್ರಾವ ಉಂಟಾಗಿದೆ.

ರೇಣುಕಾ ಅವರ ಹೊಟ್ಟೆ ಭಾಗದಲ್ಲೂ ರಕ್ತ ಸೋರಿಕೆಯಾಗಿದೆ. ಒಳ ಭಾಗದಲ್ಲೂ ರಕ್ತ ಹೆಪ್ಪುಗಟ್ಟಿದೆ. ಹೊರಗಿನಿಂದ ಅಪ್ಪಳಿಸಿರುವ ಬಾಹ್ಯ ವಸ್ತುಗಳಿಂದ ಈ ಗಾಯಗಳು ಉಂಟಾಗಿವೆ. ಅಂದರೆ ಮರದ ದೊಣ್ಣೆಗಳಿಂದ ಅವರ ಮುಖ, ಮೂತಿ ನೋಡದೆ ಹಲ್ಲೆ ಮಾಡಿರುವುದು ಖಾತರಿಯಾಗಿದೆ.

ರೇಣುಕಾ ಅವರ ತಲೆ ಭಾಗಕ್ಕೆ ಒಳಗಿನಿಂದ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಲೆ ಭಾಗದಲ್ಲಿ ರಕ್ತ ಸೋರಿಕೆ ಆಗಿಲ್ಲ. ಆದರೆ, ಯಾವುದೋ ವಸ್ತುವಿನಿಂದ ಅಪ್ಪಳಿಸಿರುವ ಆಘಾತ ತಲೆಗೆ ಆಗಿದೆ.

ಇದನ್ನೂ ಓದಿ: Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ಕೈ ಮತ್ತು ಕಾಲುಗಳು ಹಾಗೂ ಬೆನ್ನಿನಲ್ಲಿ ಸಿಕ್ಕಾಪಟ್ಟೆ ರಸ್ತ ಸ್ರಾವ ಉಂಟಾಗಿದೆ. ಪದೇ ಪದೇ ಆಗಿರುವ ಪ್ರಹಾರದಿಂದ ಚರ್ಮ ಕಿತ್ತು ಬಂದು ರಕ್ತ ಸ್ರಾವ ಉಂಟಾಗಿದೆ. ರೇಣುಕಾ ಅವರ ಸಾವಿನ ಆರ್ತನಾದವನ್ನೂ ಕೇಳದೆ ಆರೋಪಿಗಳು ಹಲ್ಲೆ ಮಾಡಿರುವುದು ಈ ವರದಿಯಿಂದ ಖಚಿತವಾಗಿದೆ. ಎದೆ ಭಾಗಕ್ಕೂ ಪೆಟ್ಟು ಬಿದ್ದಿದ್ದು ಹೃದಯ ಹಾಗೂ ಶ್ವಾಸಕೋಶಗಳಿರುವ ಪ್ರದೇಶಗಳು ಜರ್ಜರಿತಗೊಂಡಿದೆ.

ಹಲ್ಲೆಗೆ ಬಳಸಿರಬಹುದಾದ ವಸ್ತುಗಳು


ಮರದ ಪೀಸ್​ಗಳಿಂದಲೇ ಹಲ್ಲೆ ಮಾಡಿರುವುದು ಗಾಯದ ಆಳ ಮತ್ತು ತೀವ್ರತೆಯಿಂದ ಗೊತ್ತಾಗಿದೆ. ಚರ್ಮ ಸುಲಿದು ಹೋಗುವ ರೀತಿಯಲ್ಲಿ ಬಾರಿಸಿದ್ದನ್ನು ಗಮನಿಸಿದ್ದರೆ ಚರ್ಮದ ಬೆಲ್ಟ್ ಕೂಡ ಬಳಸಿರಬಹುದು. ಗಂಟೆಗಟ್ಟೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದ್ದು ಏಟಿನ ಆಘಾತಕ್ಕೆ ಅವರು ಮೂರ್ಛೆ ತಪ್ಪಿರಬಹುದು. ಅದೇ ರೀತಿ ಅವರ ತಲೆಯನ್ನು ಹಿಡಿದು ಯಾವುದೇ ಗಟ್ಟಿ ವಸ್ತುವಿಗೆ ಅಪ್ಪಳಿಸಿದ ಸೂಚನೆಯೂ ಇದೆ. ದೇಹದಲ್ಲಿ ಒಟ್ಟಾರೆಯಾಗಿ ಕೊಲೆಗಾರರ ಗ್ಯಾಂಗ್​ 15 ಕಡೆ ಗಾಯ ಮಾಡಿದೆ. ಶವವನ್ನು ಎಸೆದು ಹೋದ ಬಳಿಕ ಮುಖ ಹಾಗೂ ದವಡೆಯನ್ನು ನಾಯಿಗಳು ಕಿತ್ತು ಎಳೆದಿರುವುದು ಕೂಡ ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದೆ.

ಲಾರಿಗೆ ತಲೆ ಅಪ್ಪಳಿಸಿದ್ದನ್ನು ಒಪ್ಪಿಕೊಂಡ ಕೊಲೆಗಾರರು

ದರ್ಶನ್ ಗ್ಯಾಂಗ್​ನ (Actor Darshan) ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿ ಪ್ರಕರಣ ಥೇಟ್‌ ಸಿನಿಮಾ ಮಾದರಿಯಲ್ಲಿಯೇ ನಡೆದಿದೆ. ಪೊಲೀಸರ ಮುಂದೆ ಆರೋಪಿಗಳು ಕೊಲೆ ಮಾಡಿದ್ದು ಹೇಗೆ ಎಂಬುದನ್ನು ವಿವರಸಿದ್ದಾರೆ. ಪೊಲೀಸರು ಸತತ ಪ್ರಶ್ನೆಗಳು ಹಾಗೂ ಕೆಂಗಣ್ಣನ್ನು ಎದುರಿಸಲಾಗದ ಆರೋಪಿಗಳು ಕೊಲೆ ಮಾಡಿರುವ ಪ್ರತಿ ಕ್ಷಣವನ್ನೂ ವಿವರಿಸಿದ್ದಾರೆ.

ಪೊಲೀಸರ ಲಾಠಿ ಏಟು ರುಚಿ ತಿನ್ನುತ್ತಿದ್ದಂತೆ ಆರೋಪಿಗಳು ಹೇಳಿಕೆ ನೀಡಿದ್ದು ಹೀಗೆ. ʻʻಮೊದಲಿಗೆ ದರ್ಶನ್‌ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ದರ್ಶನ್‌ ಅವರು ರೇಣುಕಾ ಸ್ವಾಮಿಯನ್ನು ಜೋರಾಗಿ ತಳ್ಳಿದ್ದರು. ಇದರಿಂದಾಗಿ ಶೆಡ್‌ನಲ್ಲಿದ್ದ ಲಾರಿಗೆ ರೇಣುಕಾಸ್ವಾಮಿ ತಲೆ ತಾಗಿ ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದ. ಆಗ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ಅಲ್ಲಿದ್ದರು. ಆ ಬಳಿಕ ದರ್ಶನ್‌ ಮತ್ತು ಪವಿತ್ರಾ ಮನೆಗೆ ಹೋಗಿದ್ದರು. ನಾವು ಮತ್ತೆ ರೇಣುಕಾ ಸ್ವಾಮಿಗೆ ಹೊಡೆದೆವು. ರೇಣುಕಾ ಸ್ವಾಮಿ ಕಾಲು ಹಿಡಿದು ಕಾಂಪೌಂಡ್‌ಗೆ ಬಡಿದೆವು. ಆಗ ರೇಣುಕಾಸ್ವಾಮಿ ಸ್ಥಳದಲ್ಲೇ ಮೃತಪಟ್ಟರು. ತಕ್ಷಣ ನಮ್ಮ ದರ್ಶನ್‌ ಅವರಿಗೆ ಕರೆ ಮಾಡಿದೆವು. ಬಾಡಿನ ಏನಾದ್ರು ಮಾಡಿ ಮುಚ್ಚಾಕಿ ಅಂದರು. ಭಯದಲ್ಲಿ ಏನ್ಮಾಡಬೇಕು ಅಂತಾ ಗೊತ್ತಾಗದೆ ಮೋರಿಗೆ ಬಿಸಾಕಿ ಮನೆಗೆ ಹೋಗಿದ್ವಿʼʼಎಂದು ಹೇಳಿಕೆ ನೀಡಿದ್ದಾರೆ.

Continue Reading

ಕರ್ನಾಟಕ

Actor Darshan: ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

Actor Darshan: ದರ್ಶನ್ ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು‌ ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Actor Darshan
Koo

ಚಿತ್ರದುರ್ಗ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ, ಅವನಿಗೆ ಇಂತಹ ಶಿಕ್ಷೆಯಾ? ಏನು ಮಾಡದ ತಪ್ಪಿಗೆ ನನ್ನ ಮಗ ಬಲಿ ಆದ. ಅವನ ಪಾಡಿಗೆ ಅವನು ಇದ್ದ, ಏನೂ ಮಾಡಿಲ್ಲ. ಯಾವುದೇ ಗಲಾಟೆ ಗೋಜಿಗೆ ಹೋಗಿರಲಿಲ್ಲ. ನಟ ದರ್ಶನ್‌ಗೆ ಶಿಕ್ಷೆ ಆಗಲೇಬೇಕು, ಅವನು ಹೀರೋ ಅಲ್ಲ ಖಳನಾಯಕ. ಬರೀ ತೆರೆ ಮೇಲೆ ಮಾತ್ರ ಹೀರೋ ತರ ನಾಟಕವಾಡುತ್ತಾನೆ. ಅವನಿಗೆ ಮಾನವೀಯತೆ ಅನ್ನೋದೇ ಗೊತ್ತಿಲ್ಲ, ಮನಷ್ಯ ಅಲ್ಲ, ಆತ ಪಶು ಎಂದು ರೇಣುಕಾ ಸ್ವಾಮಿ ತಂದೆ ಕಾಶಿನಾಥ ಶಿವನಗೌಡ ಕಿಡಿಕಾರಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯಿಸಿರುವ ಅವರು, ಏನು ಮಾಡದ ತಪ್ಪಿಗೆ ನನ್ನ ಮಗ ಬಲಿಯಾಗಿದ್ದಾನೆ, ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ನನ್ನ ಮಗ ಹಾಗೂ ಪವಿತ್ರ ಗೌಡ ನಡುವೆ ಚಾಟಿಂಗ್ ನಡೆದಿತ್ತು

ನನ್ನ ಮಗ ಹಾಗೂ ಪವಿತ್ರಾ ಗೌಡ ನಡುವೆ ಚಾಟಿಂಗ್ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ನಿರಂತರ ಚಾಟಿಂಗ್ ಮಾಡುತ್ತಿದ್ದರು ಎಂದು ಮಾಹಿತಿ ಕೊಟ್ಟಿದ್ದಾರೆ ಎಂದು ರೇಣುಕಾ ಸ್ವಾಮಿ ತಾಯಿ ಹೇಳಿದ್ದಾರೆ. ಹಾಗಾದರೆ ಮೊದಲಿನಿಂದಲೂ ಪವಿತ್ರಾ ಹಾಗೂ ರೇಣುಕಾ ಮಧ್ಯೆ ಪರಿಚಯ ಇತ್ತೇ? ಕುಟುಂಬಕ್ಕೆ ಹೇಳದೆ ರೇಣುಕಾ ಸ್ವಾಮಿ ವಿಷಯ ಮುಚ್ಚಿಟ್ಟಿದ್ದರಾ? ಹಾಗಾದರೆ ಇಬ್ಬರ ಮಧ್ಯೆ ಏನು ಚಾಟಿಂಗ್‌ ನಡೆದಿತ್ತು ಎಂಬುವುದು ಕುತೂಹಲ ಮೂಡಿಸಿದ್ದು, ರೇಣುಕಾಸ್ವಾಮಿ ತಾಯಿ ಹೇಳಿಕೆ ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

ಲಾರಿಗೆ ತಲೆಯನ್ನು ಬಡಿದು ಸಿನಿಮಾ ಶೈಲಿಯಲ್ಲೇ ರೇಣುಕಾ ಸ್ವಾಮಿ ಕೊಲೆ ಮಾಡಿದ್ದ ದರ್ಶನ್ ಗ್ಯಾಂಗ್​!

ಬೆಂಗಳೂರು: ದರ್ಶನ್ ಗ್ಯಾಂಗ್​ನ (Actor Darshan) ಅಮಾನುಷ ಕೃತ್ಯಕ್ಕೆ ಬಲಿಯಾದ ರೇಣುಕಾ ಸ್ವಾಮಿ ಪ್ರಕರಣ ಥೇಟ್‌ ಸಿನಿಮಾ ಮಾದರಿಯಲ್ಲಿಯೇ ನಡೆದಿದೆ. ಪೊಲೀಸರ ಮುಂದೆ ಆರೋಪಿಗಳು ಕೊಲೆ ಮಾಡಿದ್ದು ಹೇಗೆ ಎಂಬುದನ್ನು ವಿವರಸಿದ್ದಾರೆ. ಪೊಲೀಸರು ಸತತ ಪ್ರಶ್ನೆಗಳು ಹಾಗೂ ಕೆಂಗಣ್ಣನ್ನು ಎದುರಿಸಲಾಗದ ಆರೋಪಿಗಳು ಕೊಲೆ ಮಾಡಿರುವ ಪ್ರತಿ ಕ್ಷಣವನ್ನೂ ವಿವರಿಸಿದ್ದಾರೆ.

ಪೊಲೀಸರ ಲಾಠಿ ಏಟು ರುಚಿ ತಿನ್ನುತ್ತಿದ್ದಂತೆ ಆರೋಪಿಗಳು ಹೇಳಿಕೆ ನೀಡಿದ್ದು ಹೀಗೆ. ʻʻಮೊದಲಿಗೆ ದರ್ಶನ್‌ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ದರ್ಶನ್‌ ಅವರು ರೇಣುಕಾ ಸ್ವಾಮಿಯನ್ನು ಜೋರಾಗಿ ತಳ್ಳಿದ್ದರು. ಇದರಿಂದಾಗಿ ಶೆಡ್‌ನಲ್ಲಿದ್ದ ಲಾರಿಗೆ ರೇಣುಕಾಸ್ವಾಮಿ ತಲೆ ತಾಗಿ ಆತ ಅಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದಿದ್ದ. ಆಗ ದರ್ಶನ್‌ ಹಾಗೂ ಪವಿತ್ರಾ ಇಬ್ಬರೂ ಅಲ್ಲಿದ್ದರು. ಆ ಬಳಿಕ ದರ್ಶನ್‌ ಮತ್ತು ಪವಿತ್ರಾ ಮನೆಗೆ ಹೋಗಿದ್ದರು. ನಾವು ಮತ್ತೆ ರೇಣುಕಾ ಸ್ವಾಮಿಗೆ ಹೊಡೆದೆವು. ರೇಣುಕಾ ಸ್ವಾಮಿ ಕಾಲು ಹಿಡಿದು ಕಾಂಪೌಂಡ್‌ಗೆ ಬಡಿದೆವು. ಆಗ ರೇಣುಕಾಸ್ವಾಮಿ ಸ್ಥಳದಲ್ಲೇ ಮೃತಪಟ್ಟರು. ತಕ್ಷಣ ನಮ್ಮ ದರ್ಶನ್‌ ಅವರಿಗೆ ಕರೆ ಮಾಡಿದೆವು. ಬಾಡಿನ ಏನಾದ್ರು ಮಾಡಿ ಮುಚ್ಚಾಕಿ ಅಂದರು. ಭಯದಲ್ಲಿ ಏನ್ಮಾಡಬೇಕು ಅಂತಾ ಗೊತ್ತಾಗದೆ ಮೋರಿಗೆ ಬಿಸಾಕಿ ಮನೆಗೆ ಹೋಗಿದ್ವಿʼʼಎಂದು ಹೇಳಿಕೆ ನೀಡಿದ್ದಾರೆ.

Continue Reading

ಕರ್ನಾಟಕ

Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Kalaburagi News: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜೂ.14 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಪ್ರಸಕ್ತ 2024-25ನೇ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಮತ್ತು ಸದರಿ ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡುವ ಸಂಬಂಧ ಯೋಜನಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕ.ಕ. ಭಾಗದ ಸಚಿವರನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

KKRDB Chairman Dr Ajay Singh pressmeet in Kalaburagi
Koo

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಇದೇ ಜೂನ್ 14ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಸಿಂಗ್ (Kalaburagi News) ಹೇಳಿದರು.

ಇಲ್ಲಿನ ಕೆ.ಕೆ.ಆರ್.ಡಿ.ಬಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ 2024-25ನೇ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಮತ್ತು ಸದರಿ ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡುವ ಸಂಬಂಧ ಯೋಜನಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಕ.ಕ. ಭಾಗದ ಸಚಿವರನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ದರ ಮತ್ತೆ ಗಗನಮುಖಿ; ಇಂದಿನ ಬೆಲೆ ಇಷ್ಟಿದೆ

ಸಿಎಂ ಸಭೆ ನಂತರ ಇದೇ ಜೂನ್ 28ಕ್ಕೆ ಮಂಡಳಿ ಸಭೆ ನಡೆಸಲು ನಿರ್ಧರಿಸಿದ್ದು, 15 ದಿನದೊಳಗೆ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಪ್ರಸಕ್ತ ಸಾಲಿನ ಕೆಲಸಗಳು ಆರಂಭಿಸಲಾಗುವುದು ಎಂದರು. ಕಳೆದ ವರ್ಷ ನಮ್ಮ ಸರ್ಕಾರ ಈ ಭಾಗಕ್ಕೆ 5 ಸಾವಿರ ಕೋಟಿ ರೂ. ಅನುದಾನ ಘೋಷಿಸಿ 3 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದು, ಅದರಂತೆ ಪ್ರದೇಶದಲ್ಲಿ ರಸ್ತೆ, ಚರಂಡಿ ನಿರ್ಮಾಣ, ಮೂಲಸೌಕರ್ಯ ಕೆಲಸ ಭರದಿಂದ ಸಾಗಿದೆ. ಇದರೊಂದಿಗೆ ಪ್ರದೇಶದಲ್ಲಿ ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ನೀಟ್ ಪರೀಕ್ಷೆ ಅವ್ಯವಹಾರ ಕುರಿತಂತೆ ಪ್ರತಿಕ್ರಿಯಿಸಿದ ಡಾ.ಅಜಯ್ ಸಿಂಗ್, ಲೋಕಸಭಾ ಚುನಾವಣಾ ಫಲಿತಾಂಶ ದಿನವೇ ಪರೀಕ್ಷೆ ರಿಸಲ್ಟ್ ಘೋಷಣೆ ಮಾಡಿದ್ದು, ಹಲವು ಅವಮಾನಕ್ಕೆ ಎಡೆಮಾಡಿಕೊಟ್ಟಿದೆ. ಎಲ್ಲೆಡೆ ಅವ್ಯವಹಾರ ಕೇಳಿ ಬರುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ‌ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟವಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ‌ ಎಂದು ತಿಳಿಸಿದರು.

ಇದನ್ನೂ ಓದಿ:Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಶಿಕ್ಷಣಕ್ಕೆ ಹೆಚ್ಚಿನ ಒತ್ತು

ಪ್ರದೇಶದಲ್ಲಿ ಶಿಕ್ಷಕರ ಕೊರತೆ ಇರುವುದು ನಿಜ. ಮಂಡಳಿ ಅತಿಥಿ ಶಿಕ್ಷಕರನ್ನು ನೇಮಿಸಬಹುದು. ಪೂರ್ಣ ಪ್ರಮಾಣದಲ್ಲಿ ಶಿಕ್ಣಕರ ನೇಮಕ ಸರ್ಕಾರದ ಹಂತದಲ್ಲಿಯೇ ನಡೆಯಬೇಕಾಗುತ್ತದೆ. ಮುಖ್ಯಮಂತ್ರಿಗಳಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಒತ್ತಾಯ ಮಾಡಲಾಗುವುದು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಅನುಭವಿ ಶಿಕ್ಷಣ ತಜ್ಞರ ಸಮಿತಿ ರಚಿಸಿ ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಮಂಡಳಿಯು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾದ 652 ಕೋಟಿ ರೂ. ಮೊತ್ತದಲ್ಲಿ ಫಲಿತಾಂಶ‌ ಸುಧಾರಣೆ ನಿಟ್ಟಿನಲ್ಲಿ ಕೇವಲ 3 ಕೋಟಿ ರೂ. ಖರ್ಚು ಮಾಡಿದೆ. ಮುಂದಿನ‌ ದಿನದಲ್ಲಿ ಈ ಮೊತ್ತ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

2,009 ಕೋಟಿ ರೂ. ಖರ್ಚು

ಕೆ.ಕೆ.ಆರ್.ಡಿ.ಬಿ. ಮಂಡಳಿಗೆ 2023-24ನೇ ಸಾಲಿಗೆ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂ. ಅನುದಾನ ಘೋಷಿಸಿ, 3 ಸಾವಿರ ಕೋಟಿ ರೂ. ಹಂಚಿಕೆ‌ ಮಾಡಲಾಗಿದೆ. ಇದರಲ್ಲಿ ಇದುವರೆಗೆ 2,009 ಕೋಟಿ ರೂ. ಖರ್ಚು ಮಾಡಿದ್ದು, ಬರುವ ಆಗಸ್ಟ್ ಮಾಹೆವರೆಗೆ ಉಳಿದ ಅನುದಾನ ಸಹ ಖರ್ಚು ಮಾಡಲಾಗುವುದು ಎಂದರು.

ಇದನ್ನೂ ಓದಿ: Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

371ಜೆ ಮೀಸಲಾತಿ ವಿರೋಧಕ್ಕೆ ಖಂಡನೆ

ದೇಶದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವೆಂದು ಕಲ್ಯಾಣ ಕರ್ನಾಟಕ ಭಾಗಕ್ಕೆ ದಶಕಗಳ ಹೋರಾಟ ಫಲವಾಗಿ 371(ಜೆ) ಮೀಸಲಾತಿ ದೊರಕಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲವು ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಖಂಡಿಸುತ್ತೇನೆ ಎಂದ ಅವರು, ಈ ಭಾಗಕ್ಕೆ ಸಂವಿಧಾನ ಬದ್ಧ ಸಿಗಬೇಕಾದ ಸವಲತ್ತು ದೊರಕಿಸಲು ಮತ್ತು ಮೀಸಲಾತಿ ರಕ್ಷಣೆ‌ಗೆ ತಾವು ಬದ್ಧರಾಗಿದ್ದೇವೆ. ಯಾವುದೇ ಹಂತದ ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದು ತಿಳಿಸಿದರು.

Continue Reading

ಕರ್ನಾಟಕ

Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

Renuka Swamy Murder Case: ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು. ದರ್ಶನ್‌ ಸೇರಿ ಇತರ 13 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

VISTARANEWS.COM


on

Renukaswamy murder case
Koo

ಚಿತ್ರದುರ್ಗ: ರೇಣುಕಾ ಸ್ವಾಮಿ ಹತ್ಯೆ ಖಂಡಿಸಿ (Renuka Swamy Murder Case) ನಗರದಲ್ಲಿ ಬುಧವಾರ 10ಕ್ಕೂ ಹೆಚ್ಚು ಸಂಘಟನೆಗಳಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಬಜರಂಗದಳ, ವಿಶ್ವ ಹಿಂದು ಪರಿಷತ್, ಕನ್ನಡಪರ ಸಂಘಟನೆ, ರೈತ ಸಂಘಟನೆಗಳ 200ಕ್ಕೂ ಅಧಿಕ ಮಂದಿ ಭಾಗಿಯಾಗಿದ್ದರು. ನಟ ದರ್ಶನ್‌ ಸೇರಿ ಇತರ 13 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ನಗರದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಮೌನ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಕೆ.ಬಸವರಾಜನ್, ನಗರಸಭಾ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಪ್ರತಿಭಟನೆಗೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ | Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

ಈ ವೇಳೆ ಮಾಜಿ ಶಾಸಕ ಎಸ್.ಬಸವರಾಜನ್ ಮಾತನಾಡಿ, ಈ ಪ್ರಕರಣದಲ್ಲಿ ರಾಜಕಾರಣಿಗಳು ಪ್ರಭಾವ ಬೀರುವ ಸಾಧ್ಯತೆ ಇದೆ. ಸರ್ಕಾರ ಅವರ ಪರವಾಗಿ ಇರಬಹದು ಎನಿಸುತ್ತದೆ. ಕಾಂಗ್ರೆಸ್ ಪರ ದರ್ಶನ್ ಪ್ರಚಾರ ಮಾಡಿದರು, ಅದಕ್ಕಾಗಿ ಸರ್ಕಾರ ಅಥವಾ ರಾಜಕಾರಣಿಗಳು ಅವರ ಪರ ನಿಲ್ಲಬಹುದು. ಅದಕ್ಕಾಗಿ ಈ ಪ್ರಕರಣವನ್ನು ಸಿಬಿಐಗೆ ನೀಡುವುದು ಸೂಕ್ತ ಎಂದು ಹೇಳಿದರು.

ದರ್ಶನ್‌ಗೆ ಇರುವುದು ಅಂಧ ಅಭಿಮಾನಿಗಳು. ಇಂತ ಕೃತ್ಯ ಮಾಡಿದರೂ ಬೆಂಬಲ ಕೊಡುತ್ತಾರೆ ಎಂದರೆ ಏನರ್ಥ? ಅಭಿಮಾನಿಗಳು ನಟನ ತಪ್ಪು ತಿದ್ದಬೇಕು. ತಪ್ಪನ್ನೇ ಸರಿ ಎಂದು ಹುಬ್ಬೇರಿಸಬೇಡಿ. ಅಭಿಮಾನಿಗಳು ಹುಬ್ಬೇರಿಸಿದ್ದಕ್ಕೆ ಹೀಗೆ ಕೊಲೆ ಆಗಿದೆ. ಸೆಲೆಬ್ರಿಟಿ ತಪ್ಪಿಸಿಕೊಳ್ಳಲು ಪೊಲೀಸರು ಬಿಡಬಹುದಿತ್ತು. ಆದರೆ ಪೊಲೀಸರು ಹಾಗೆ ಮಾಡದೆ ಅರೆಸ್ಟ್ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಗಳಿಂದ ಪ್ರಕರಣ ದಾರಿ ತಪ್ಪಿಸುವ ಕೆಲಸ ಮಾಡಬಹುದು. ಅದಕ್ಕೆ ಅವಕಾಶ ಕೊಡದೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

ದರ್ಶನ್ ನಿಜ ಜೀವನದಲ್ಲಿ ಹೀರೋ ಅಲ್ಲವೇ ಅಲ್ಲ

ಬಿಜೆಪಿ ಮಾಜಿ ಶಾಸಕ ತಿಪ್ಪಾರೆಡ್ಡಿ ಮಾತನಾಡಿ, ನಟ ದರ್ಶನ್ ತೆರೆ ಮೇಲೆ ಸ್ಟಾರ್ ಆಗಿದ್ದಾರೆ, ಆದರೆ ನಿಜ ಜೀವನದಲ್ಲಿ ಅವರು ಹೀರೋ ಅಲ್ಲವೇ ಅಲ್ಲ. ರೇಣುಕಾ ಸ್ವಾಮಿ ತಂದೆ-ತಾಯಿ ಗೋಳು ನೋಡೋಕೆ ಆಗಲ್ಲ. ಈ ಸರ್ಕಾರ ಬಂದಾಗಿನಿಂದ ಇಂತ ಘಟನೆಗಳು ನಡೆಯುತ್ತಿವೆ. A1 ಆಗಿದ್ದ ದರ್ಶನ್‌ನ A2 ಮಾಡಿದ್ದೇಕೆ? ಪ್ರಕರಣದಿಂದ ತಪ್ಪಿಸಲು ಹೀಗೆ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮಾತ್ರ ಏನೂ ಆಗಿಲ್ಲ ಎನ್ನೋ ತರ ಮಾತಾಡುತ್ತಾರೆ. ಸರ್ಕಾರ ಇಂತ ಪ್ರಕರಣಗಳನ್ನು ಕೇರ್ ಲೆಸ್ ಮಾಡಬಹುದು. ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು. ಆರೋಪಿಗಳು ರಿಲೀಸ್ ಆಗಬಾರದು, ಬಿಡುಗಡೆಯಾದರೆ ನಾವು ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Continue Reading
Advertisement
AUS vs NAM
ಕ್ರೀಡೆ12 mins ago

AUS vs NAM: 17 ವರ್ಷಗಳ ಹಿಂದಿನ ಅನಗತ್ಯ ಟಿ20 ದಾಖಲೆ ಮುರಿದ ಗೆರ್ಹಾರ್ಡ್ ಎರಾಸ್ಮಸ್

Actor Darshan Arrested
ಪ್ರಮುಖ ಸುದ್ದಿ33 mins ago

Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

Actor Darshan
ಕರ್ನಾಟಕ38 mins ago

Actor Darshan: ದರ್ಶನ್‌ ಹೀರೋ ಅಲ್ಲ ಖಳನಾಯಕ, ಆತನಿಗೆ ಶಿಕ್ಷೆ ಆಗಲೇಬೇಕು: ರೇಣುಕಾ ಸ್ವಾಮಿ ತಂದೆ ಕಿಡಿ

KKRDB Chairman Dr Ajay Singh pressmeet in Kalaburagi
ಕರ್ನಾಟಕ46 mins ago

Kalaburagi News: ಜೂ.14ರಂದು ಸಿಎಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Actor Darshan Ban From Sandalwood If Murder Allegation
ಸ್ಯಾಂಡಲ್ ವುಡ್50 mins ago

Actor Darshan: ಚಿತ್ರರಂಗದಿಂದ ಬ್ಯಾನ್‌ ಆಗ್ತಾರಾ ದರ್ಶನ್? ಫಿಲ್ಮ್ ಚೇಂಬರ್ ಅಧ್ಯಕ್ಷರು ಹೇಳಿದ್ದೇನು?

IND vs USA
ಕ್ರೀಡೆ53 mins ago

IND vs USA: ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಉಭಯ ತಂಡಗಳು ಸೂಪರ್​-8 ಪ್ರವೇಶ

Sebi Fines
ವಾಣಿಜ್ಯ58 mins ago

Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

Viral News
ಪ್ರಮುಖ ಸುದ್ದಿ1 hour ago

Viral News: ರೈಲಿನಲ್ಲಿ ಜನಿಸಿದ ತಮ್ಮ ಮಗುವಿಗೆ ʼಮಹಾಲಕ್ಷ್ಮಿʼ ಎಂದು ಹೆಸರಿಟ್ಟಿದ್ದೇಕೆ ಮುಸ್ಲಿಂ ದಂಪತಿ?

Actor Darshan The murder was done by team in the style movie
ಸ್ಯಾಂಡಲ್ ವುಡ್1 hour ago

Actor Darshan: ಲಾರಿಗೆ ತಲೆಯನ್ನು ಬಡಿದು ಸಿನಿಮಾ ಶೈಲಿಯಲ್ಲೇ ರೇಣುಕಾ ಸ್ವಾಮಿ ಕೊಲೆ ಮಾಡಿದ್ದ ದರ್ಶನ್ ಗ್ಯಾಂಗ್​!

Renukaswamy murder case
ಕರ್ನಾಟಕ2 hours ago

Renuka Swamy Murder Case: ಚಿತ್ರದುರ್ಗದಲ್ಲಿ ಮೌನ ಪ್ರತಿಭಟನೆ; ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಗೆ ಆಗ್ರಹ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ23 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ24 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌