ಮಲಯಾಳಂ ನಟ ಶರತ್‌ಚಂದ್ರ ಆತ್ಮಹತ್ಯೆ - Vistara News

ಕ್ರೈಂ

ಮಲಯಾಳಂ ನಟ ಶರತ್‌ಚಂದ್ರ ಆತ್ಮಹತ್ಯೆ

ಮಲಯಾಳಂ ನಟ ಶರತ್‌ಚಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಖಿನ್ನತೆಗೆ ಸಂಬಂಧಿಸಿ ಈ ಆತ್ಮಹತ್ಯೆ ಸಂಭವಿಸಿದೆ.

VISTARANEWS.COM


on

sharathchandra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಚ್ಚಿ: ಮಲಯಾಳಂ ಚಲನಚಿತ್ರ ನಟ ಶರತ್ ಚಂದ್ರನ್ ಅವರು ತಮ್ಮ ನಿವಾಸದಲ್ಲಿ ಶವವಾಗಿ ಶನಿವಾರ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಶರತ್‌ಚಂದ್ರ ಬರೆದಿಟ್ಟಿರುವ ಪತ್ರ ಪತ್ತೆಯಾಗಿದೆ. 37 ವರ್ಷದ ಈ ನಟ ಅಂಗಮಲೈ ಡೈರೀಸ್, ಒರು ಮೆಕ್ಸಿಕನ್ ಅಪರಾಧ, ಸಿಐಎ, ಕೂಡೆ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಹಲವು ಜಾಹೀರಾತುಗಳಲ್ಲೂ ನಟಿಸಿದ್ದಾರೆ.

ಅವರು ಹಲವಾರು ತಿಂಗಳುಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಇವರಿಗೆ ತಂದೆ, ತಾಯಿ, ಕಿರಿಯ ಸಹೋದರ ಇದ್ದಾರೆ.

ಇದನ್ನೂ ಓದಿ: ಫೈಟಿಂಗ್‌ ದೃಶ್ಯ ಶೂಟಿಂಗ್‌ ವೇಳೆ ನಟಿ ಸಂಯುಕ್ತಾ ಹೆಗ್ಡೆಗೆ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

Neha Murder Case: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣದ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ಕೊಲೆ ಪ್ರಕರಣ (Neha Murder Case) ದೇಶಾದ್ಯಂತ ಸದ್ದು ಮಾಡುತ್ತಿದೆ. ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಂದೆ ಬಾಬಾ ಸಾಹೇಬ್‌ ಸುಬಾನಿ ಪ್ರತಿಕ್ರಿಯಿಸಿದ್ದು, ಮಗನ ತಪ್ಪಿನಿಂದ ಊರಿಗೇ ಕೆಟ್ಟ ಹೆಸರು ಬಂದಿದೆ. ನನ್ನ ಮಗ ಫಯಾಜ್‌ಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ವಿಸ್ತಾರ ನ್ಯೂಸ್‌ ಜತೆ ಮಾತನಾಡಿರುವ ಬಾಬಾ ಸಾಹೇಬ್‌ ಸುಬಾನಿ, ನನ್ನ ಮಗ ಮಾಡಿದ ತಪ್ಪಿಗೆ ನಾನು ಮುನವಳ್ಳಿ ಹಾಗೂ ರಾಜ್ಯದ ಜನರ ಬಳಿ ಕ್ಷಮೆ ಕೇಳುತ್ತೇನೆ. ನಮ್ಮನ್ನು ಮುನವಳ್ಳಿ ಜನ ಬೆಳೆಸಿದ್ದಾರೆ. ಅವರ ಋಣ ತೀರಿಸಲು ಸಾಧ್ಯವಿಲ್ಲ. ಹೀಗಾಗಿ ನಮ್ಮೂರಿನ ಜನ ನನ್ನನ್ನು ಕ್ಷಮಿಸಬೇಕು. ದಯವಿಟ್ಟು ಯಾವುದೇ ಯುವಕರು, ನನ್ನ ಮಗನ ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಬಾರದು ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ನಾನು ಯಾವತ್ತೂ ಯಾರಿಗೂ ಕೆಟ್ಟದ್ದು ಮಾಡಿಲ್ಲ, ಈಗ ನನ್ನ ಮಗ ದೇಶದ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿಬಿಟ್ಟಿದ್ದಾನೆ. ಹೀಗಾಗಿ ನನ್ನನ್ನು ಮುನವಳ್ಳಿ ಗ್ರಾಮದ ಜನರು ಕ್ಷಮಿಸಬೇಕು ಎಂದು ಕಣ್ಣೀರು ಹಾಕಿರುವ ಅವರು, ನಾನು ಸಾಯೋವರೆಗೆ ಮುನವಳ್ಳಿ ಜನರ ಸೇವೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಯಾರೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡುತ್ತಾರೋ ಅಂತಹವರಿಗೆ ಮುಂದಿನ ದಿನಗಳಲ್ಲಿ ಯಾರೂ ಅಂಥ ಕೃತ್ಯ ಮಾಡಬಾರದು, ಆ ರೀತಿಯ ಶಿಕ್ಷೆ ಆಗಬೇಕು. ಇಂತಹ ಘಟನೆಗಳಿಂದ ನಾಳಿನ ದಿನ ಹೆಣ್ಣುಮಕ್ಕಳನ್ನು ಶಾಲೆಗೆ ಕಳುಹಿಸಲು ಜನ ಭಯಪಡುತ್ತಾರೆ. ಹೀಗಾಗಿ ನನ್ನ ಜನ್ಮಭೂಮಿ ಮುನವಳ್ಳಿ, ಅವರಿಗಾಗಿ ನಾನು ಬದುಕುತ್ತೇನೆ ಎಂದು ಹೇಳಿದ್ದಾರೆ.

ವರ್ಷದ ಹಿಂದೆ ನೇಹಾ ಅವರ ತಂದೆ ನನಗೂ ಎರಡು ಬಾರಿ ಫೋನ್‌ ಮಾಡಿದ್ದರು. ನನ್ನ ಮಗಳಿಗೆ ನಿಮ್ಮ ಮಗ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಿದ್ದರು. ಅವರ ತುಂಬಾ ಒಳ್ಳೆಯವರು. ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂದು ಮಗ ಹೇಳಿದ್ದ. ಆದರೆ, ನಾನು ಮಾಡಲ್ಲ ಎಂದಿದ್ದೆ. ಹೀಗಾಗಿ ಅವನು ಜಗಳ ಮಾಡಿದ್ದ. ಈಗ ಅವನು ನನ್ನ ಬಳಿ ಮಾತನಾಡಲ್ಲ. ನಮ್ಮ ದಾಂಪತ್ಯ ಜೀವನ ಸರಿಯಿಲ್ಲದ ಕಾರಣ ಅವರ ತಾಯಿ ಜತೆ ಅವನು ಪ್ರತ್ಯೇಕವಾಗಿ ವಾಸವಾಗಿದ್ದ ಎಂದು ಹೇಳಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ನಾನು ಸೈನಿಕನಾಗಿ ದೇಶ ಸೇವೆ ಸಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ, ನಮ್ಮ ತಾಯಿ ಬೇಡ ಅಂದಿದ್ದರು. ಹೀಗಾಗಿ ನನ್ನ ಮಗನನ್ನು ಸೇನೆಗೆ ಸೇರಿಸಬೇಕು ಅಂದುಕೊಂಡಿದ್ದೆ. ಆದರೆ ಅವನು ಈ ರೀತಿಯ ಕೆಲಸ ಮಾಡಿದ್ದಾನೆ ಎಂದು ತಿಳಿಸಿದರು.

Continue Reading

ಕರ್ನಾಟಕ

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

‌Assault Case: ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಲಕ್ಷ್ಮಿನಾರಾಯಣ್ ಎಂಬ ಯುವಕನ ಮೇಲೆ ಹಲ್ಲೆ ನಡೆದಿತ್ತು. ಮೋದಿ ಹಾಡು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಯುವಕನನ್ನು ಥಳಿಸಲಾಗಿತ್ತು. ಈ ಸಂಬಂಧ ಐವರ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

‌Assault Case
Koo

ಮೈಸೂರು: ಮೋದಿ ಹಾಡು ಬಿಡುಗಡೆ ಮಾಡಿದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ (‌Assault Case) ಸಂಬಂಧಿಸಿ ನಗರದ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲ್ಲೆಗೊಳಗಾದ ಯುವಕ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಲೀಂ, ಜಾವೀದ್, ಪಾಷಾ ಸೇರಿ ಐವರ ಮೇಲೆ ಎಫ್ಐಆರ್ ದಾಖಲಾಗಿದೆ. ಹಳ್ಳಿಕೆರೆಹುಂಡಿ ಗ್ರಾಮದ ಲಕ್ಷ್ಮೀನಾರಾಯಣ್ ಎಂಬ ಯುವಕನ ಮೇಲೆ ಮೈಸೂರಿನ ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಶುಕ್ರವಾರ ಮಧ್ಯಾಹ್ನ ಹಲ್ಲೆ ನಡೆದಿತ್ತು.

ಮೂರನೇ ಬಾರಿ ಮೋದಿ ಅಧಿಕಾರಕ್ಕೆ ಏಕೆ ಬರಬೇಕು ಎಂದು ಯುವಕ ಹಾಡು ರಚಿಸಿದ್ದ. ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಸಾರ್ವಜನಿಕವಾಗಿ ವಿಡಿಯೊ ನೋಡುವಂತೆ ಮನವಿ ಮಾಡುತ್ತಿದ್ದ.
ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ವಿಡಿಯೊ ನೋಡುವಂತೆ ಹೇಳಿದ್ದ. ನಂತರ ಆತನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿತ್ತು. ಇದೀಗ ಗಾಯಾಳು ಲಕ್ಷ್ಮೀನಾರಾಯಣ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿತ್ತು. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಯುವಕನಿಗೆ ಒತ್ತಾಯ ಮಾಡಲಾಗಿತ್ತು.

ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿತ್ತು. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದರು. ನಂತರ ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಬಗ್ಗೆ ವಿಡಿಯೊ ಮೂಲಕ ಲಕ್ಷ್ಮಿನಾರಾಯಣ್ ಮಾಹಿತಿ ನೀಡಿದ್ದ.

ಇದನ್ನೂ ಓದಿ | Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

ಘಟನೆ ಬಗ್ಗೆ ಗಾಯಾಳು ಲಕ್ಷ್ಮೀನಾರಾಯಣ್ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ದೇಶ

Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

Instagram Reel: ಇನ್‌ಸ್ಟಾಗ್ರಾಮ್‌ ರೀಲ್ಸ್‌ ಹುಚ್ಚಿಗೆ 21 ವರ್ಷದ ಯುವ ಬಲಿಯಾಗಿದ್ದಾನೆ. ಉತ್ತರ ಪ್ರದೇಶದ ಜನಪದ್ ಬಂದಾದ ಖೈರಾಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವಂ ಕುಮಾರ್ ಎನ್ನುವ ಯುವ ಧ್ವಜ ಸ್ತಂಭದಲ್ಲಿ ತಲೆಕೆಳಗಾಗಿ ನೇತಾಡುವ ಸಾಹಸ ಪ್ರದರ್ಶನಕ್ಕೆ ಮುಂದಾಗಿದ್ದ. ಈ ವೇಳೆ ಕಂಬ ಕುಸಿದು ಬಿದ್ದು ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Instagram Reel
Koo

ಲಕ್ನೋ: ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ಇನ್‌ಸ್ಟಾಗ್ರಾಮ್‌ ರೀಲ್ಸ್‌ (Instagram Reel) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅಂತಹದ್ದೇ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ನ ಚಿತ್ರೀಕರಣಕ್ಕಾಗಿ ಸಾಹಸ ಪ್ರದರ್ಶಿಸುತ್ತಿದ್ದ 21 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ.

ಮೃತನನ್ನು ಶಿವಂ ಕುಮಾರ್ ಎಂದು ಗುರುತಿಸಲಾಗಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಶಿವಂ ಕುಮಾರ್‌ ಶಾಲೆಯ ಧ್ವಜ ಸ್ತಂಭದಲ್ಲಿ ನೇತಾಡುತ್ತಿದ್ದ. ಸ್ನೇಹಿತರು ಇದನ್ನು ಚಿತ್ರೀಕರಿಸುತ್ತಿದ್ದರು. ಈ ವೇಳೆ ಆತನ ಭಾರ ತಾಳಲಾರದೆ ಧ್ವಜ ಸ್ತಂಭ ಕುಸಿದು ಶಿವಂ ಕುಮಾರ್ ಕೊನೆಯುಸಿರು ಎಳೆದಿದ್ದಾನೆ.

ಘಟನೆ ವಿವರ

ಈ ಅವಘಡ ಗುರುವಾರ (ಏಪ್ರಿಲ್‌ 18) ಸಂಜೆ ನಡೆದಿದೆ. ಉತ್ತರ ಪ್ರದೇಶದ ಜನಪದ್ ಬಂದಾದ ಖೈರಾಡಾ ಗ್ರಾಮದ ಪ್ರೌಢಶಾಲೆಯಲ್ಲಿ ಈ ಘಟನೆ ವರದಿಯಾಗಿದೆ. ಶಿವಂ ತನ್ನ ತಂದೆಯನ್ನು ರೈಲ್ವೆ ನಿಲ್ದಾಣದಿಂದ ಕರೆದುಕೊಂಡು ಬಂದು ಮನೆಗೆ ಬಿಟ್ಟು ಸಂಜೆ ಸುಮಾರು 5 ಗಂಟೆಗೆ ಶಾಲೆಗೆ ತಲುಪಿದ್ದ. ಅಷ್ಟರಲ್ಲೆ ಶಾಲೆಗೆ ಬಂದಿದ್ದ ಆತನ ಸ್ನೇಹಿತರಾದ ಅನು ಮತ್ತು ಅಂಕಿತ್ ಅವನಿಗಾಗಿ ಕಾಯುತ್ತಿದ್ದರು. ನಂತರ ಈ ಮೂವರು ಶಾಲೆಯ ಛಾವಣಿಯನ್ನು ಏರಿದರು. ಇದು ಶಿವಂ ಅವರ ಕೊನೆಯ ಇನ್‌ಸ್ಟಾಗ್ರಾಂ ಸ್ಟಂಟ್ ಎಂದು ಆಗ ಅವರಿಗೆ ತಿಳಿದಿರಲಿಲ್ಲ. ಸ್ನೇಹಿತರು ರೆಕಾರ್ಡ್‌ ಮಾಡುತ್ತಿದ್ದಂತೆ ಶಿವಂ ಕಂಬದಲ್ಲಿ ಸಾಹಸ ಪ್ರದರ್ಶಿಸತೊಡಗಿದ್ದ. ಆಗ ಇದ್ದಕ್ಕಿದ್ದಂತೆ ಕಂಬ ಕುಸಿಯಿತು. ಬಿದ್ದು ಗಂಭೀರ ಗಾಯಗೊಂಡಿದ್ದ ಶಿವಂ ಸ್ನೇಹಿತರ ಕಣ್ಣೇದುರು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹಿಂದೆಯೂ ಇದೇ ರೀತಿಯ ಸಾಹಸ ಪ್ರದರ್ಶಿಸಿದ್ದ

ಅಚ್ಚರಿ ಎಂದರೆ ಶಿವಂ ಇಂತಹ ಸಾಹಸ ಪ್ರದರ್ಶಿಸುತ್ತಿರುವುದು ಇದು ಮೊದಲ ಸಲವೇನಲ್ಲ. ಆತನ ಇನ್‌ಸ್ಟಾಗ್ರಾಂ ತುಂಬ ಇಂತಹದ್ದೇ ಸಾಹಸದ ವಿಡಿಯೊ ತುಂಬಿಕೊಂಡಿದೆ. ಮರ ಮತ್ತು ಛಾವಣಿಯಲ್ಲಿ ತಲೆಕೆಳಗಾಗಿ ನೇತಾಡುತ್ತಿರುವ ಹಲವು ರೀಲ್ಸ್‌ಗಳಿವೆ.

ಶಿವಂ ಅವರದ್ದು ಬಡತನದ ಕುಟುಂಬ. ಅವರ ತಂದೆ ವರ್ದಾನಿ ವಾಟರ್ ಪೌಚ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದಾರೆ. ಕುಟುಂಬವು ಇದುವರೆಗೆ ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ ಎಂದು ಮಾಟೌಂಡ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರಾಮ್ ಮೋಹನ್ ರೈ ಹೇಳಿದ್ದಾರೆ.

ಇದನ್ನೂ ಓದಿ: Viral News: ರಿಕ್ಷಾದ ಟಾಪ್‌ಗೆ ಹತ್ತಿ ಸ್ಟೆಪ್‌ ಹಾಕಿದ ಯುವಕ; ವಿಡಿಯೊ ಕೊನೆಯಲ್ಲಿರುವ ರೋಚಕ ಟ್ವಿಸ್ಟ್‌ ಮಿಸ್‌ ಮಾಡದೆ ನೋಡಿ

ಕೆಲವು ದಿನಗಳ ಹಿಂದೆ ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಉತ್ತರ ಪ್ರದೇಶದಲ್ಲಿ ಅಮಾನುಷ ಘಟನೆಯೊಂದು ನಡೆದಿತ್ತು. ಗಾಜಿಯಾಬಾದ್‌ನಲ್ಲಿ ಯುವಕನೋರ್ವ ನಾಯಿಯ ಕಾಲನ್ನು ಹಿಡಿದು ಕ್ರೂರವಾಗಿ ತಿರುಗಿಸುವ ಮೂಲಕ ಅಮಾನುಷವಾಗಿ ವರ್ತಿಸಿದ ವಿಡಿಯೊ ವೈರಲ್‌ ಆದ ಬಳಿಕ ಈತನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಝಾಫರ್‌ (Zafar) ಎನ್ನುವ ಯುವಕ ನಾಯಿಯನ್ನು ಬಲವಂತದಿಂದ ಎಳೆದುಕೊಂಡು ಬರುತ್ತಾನೆ. ನಾಯಿ ಗಾಬರಿಯಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಮತ್ತಷ್ಟು ಬಿಗಿಯಾಗಿ ಹಿಡಿದುಕೊಳ್ಳುವ ಆತ ಅದನ್ನು ಅನಾಮತ್ತಾಗಿ ಎತ್ತಿಕೊಳ್ಳುತ್ತಾನೆ. ಬಳಿಕ ಅದರ ಕಾಲುಗಳನ್ನು ಹಿಡಿದುಕೊಂಡು ವೇಗವಾಗಿ ಸುತ್ತುತ್ತಾನೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಇದನ್ನು ಚಿತ್ರೀಕರಿಸಲಾಗಿತ್ತು.

Continue Reading

ಕರ್ನಾಟಕ

Road Accident: ಮುದ್ಗಲ್‌ ಬಳಿ ಬೈಕ್‌ – ಬುಲೇರೋ ನಡುವೆ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Road Accident: ತಾವರಗೇರಾದಿಂದ ಮಲ್ಲಾಪೂರಿನತ್ತ ಬೈಕ್‌ನತ್ತ ವಾಪಾಸಾಗುವಾಗ ಇನ್ನೊಂದು ಕಡೆಯಿಂದ ಬರುತ್ತಿದ್ದ ಬುಲೇರೋ ವಾಹನ ಡಿಕ್ಕಿಯಾಗಿದೆ. ಈ ವೇಳೆ ಶಿವಬಸವ ಹಾಗೂ ಹೊನ್ನಮ್ಮ ಕೆಳಗೆ ಬಿದ್ದಿದ್ದಾರೆ. ಶಿವಬಸವ ಅವರ ತಲೆ ಮೇಲೆಯೇ ವಾಹನ ಹರಿದಿದ್ದರಿಂದ ಅವರ ತಲೆ ಛಿದ್ರವಾಗಿದೆ. ಇನ್ನು ಹೊನ್ನಮ್ಮ ಸಹ ಗಂಭೀರವಾಗಿ ಗಾಯಗೊಂಡಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

VISTARANEWS.COM


on

Road accident between bike and Bolero near Mudgal Two dead
Koo

ರಾಯಚೂರು: ಮುದ್ಗಲ್‌ ಪಟ್ಟಣದ ಹೊರವಲಯದಲ್ಲಿ ದ್ವಿಚಕ್ರ ವಾಹನ ಹಾಗೂ ಬುಲೇರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಬೈಕ್‌ ಸವಾರರಿಬ್ಬರೂ ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ.

ಶಿವಬಸವ (37) ಹೊನ್ನಮ್ಮ ( 33) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇವರು ಲಿಂಗಸುಗೂರು ತಾಲೂಕಿನ ಹತ್ತಿಚಿನ್ನದಗಣಿ ಸಮೀಪದ ಮಲ್ಲಾಪೂರು ಗ್ರಾಮದವರಾಗಿದ್ದಾರೆ. ತಾವರಗೇರಾದಲ್ಲಿ ಮದುವೆಗೆಂದು ಹೋದವರು ಅಲ್ಲಿಂದ ವಾಪಸ್‌ ಬರುತ್ತಿದ್ದರು. ಆ ವೇಳೆ ಅಪಘಾತ ಸಂಭವಿಸಿದೆ.

ತಾವರಗೇರಾದಿಂದ ಮಲ್ಲಾಪೂರಿನತ್ತ ಬೈಕ್‌ನತ್ತ ವಾಪಾಸಾಗುವಾಗ ಇನ್ನೊಂದು ಕಡೆಯಿಂದ ಬರುತ್ತಿದ್ದ ಬುಲೇರೋ ವಾಹನ ಡಿಕ್ಕಿಯಾಗಿದೆ. ಈ ವೇಳೆ ಶಿವಬಸವ ಹಾಗೂ ಹೊನ್ನಮ್ಮ ಕೆಳಗೆ ಬಿದ್ದಿದ್ದಾರೆ. ಶಿವಬಸವ ಅವರ ತಲೆ ಮೇಲೆಯೇ ವಾಹನ ಹರಿದಿದ್ದರಿಂದ ಅವರ ತಲೆ ಛಿದ್ರವಾಗಿದೆ. ಇನ್ನು ಹೊನ್ನಮ್ಮ ಸಹ ಗಂಭೀರವಾಗಿ ಗಾಯಗೊಂಡಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ಗಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಬೆಂಗಳೂರು: ಆ ನಯವಂಚಕರು ದೊಡ್ಡ ದೊಡ್ಡ ಉದ್ಯಮಿಗಳನ್ನೇ (Fraud Case) ಟಾರ್ಗೆಟ್‌ ಮಾಡುತ್ತಿದ್ದರು. ಅದರಲ್ಲೂ ದೇವರು, ಆಧ್ಯಾತ್ಮದ ನಂಬಿಕೆ ಇತ್ತು ಅಂದರೆ ಮುಗಿತು ವಂಚನೆಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದರು. ಚಮತ್ಕಾರಿ ಪಾತ್ರೆ ಎಂದು ನಂಬಿಸಿ ಉದ್ಯಮಿಯೊಬ್ಬರನ್ನು ವಂಚಿಸಲು ಮುಂದಾಗಿದ್ದ ಗ್ಯಾಂಗ್ ಜಯನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಅದೃಷ್ಟದ ಚೆಂಬಿನ ಹಿಂದೆ ಬಿದ್ದ ಉದ್ಯಮಿಯೊಬ್ಬ ಲಕ್ಷ ಲಕ್ಷ ಕಳೆದುಕೊಂಡಿದ್ದ. ಆದರೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಕಳೆದುಕೊಂಡ ಹಣ ವಾಪಸ್‌ ಸಿಕ್ಕಿದ್ದು, ಅಂತರರಾಜ್ಯ ವಂಚಕ ಶಿವಶಂಕರ್, ಅಬ್ದುಲ್ ಸುಕ್ಕುರ್ ಹಾಗೂ ಸನ್ನಿ ಗಿಲ್ ಎಂಬುವವರು ಸಿಕ್ಕಿಬಿದ್ದಿದ್ದಾರೆ.

ಈ ಮೂವರು ತಮ್ಮ ಬಳಿ ಅದೃಷ್ಟ ಖುಲಾಯಿಸುವ ಚಮತ್ಕಾರಿ ಪಾತ್ರೆ ಇದೆ. ಅದನ್ನೂ ಮನೆಯಲ್ಲಿ ಇಟ್ಟರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ಇದಕ್ಕೆ ವಿದೇಶಿ ಮಾರ್ಕೆಟ್‌ನಲ್ಲಿ ಕೋಟಿ ಕೋಟಿ ಬೆಲೆ ಇದೆ ಎಂದು ಬಣ್ಣ ಬಣ್ಣದ ಮಾತುಗಳನ್ನು ಹೇಳಿ ನಂಬಿಸುತ್ತಿದ್ದರು. ಅದೇ ರೀತಿ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಟಾರ್ಗೆಟ್ ಮಾಡಿ, ಒಂದೂವರೆ ಕೋಟಿ ಕೊಟ್ಟರೆ ಈ ಅದೃಷ್ಟದ ಪಾತ್ರೆ ಕೊಡುವುದಾಗಿ ನಂಬಿಸಿದ್ದಾರೆ. ಕೊನೆಗೆ 70 ಲಕ್ಷ ರೂಪಾಯಿಗೆ ಡೀಲ್ ಮುಗಿಸಿದ್ದರು.

Fraud Case in bengaluru

ವಿಡಿಯೊದಲ್ಲಿ ತೋರಿಸಿದ್ದ ಅದೃಷ್ಟ ಚೆಂಬನ್ನು ಕೊಡುತ್ತೇವೆ ದುಡ್ಡು ರೆಡಿ ಮಾಡಿಕೊಳ್ಳಿ ಎಂದಿದ್ದರು. ತಾಮ್ರದ ಪಾತ್ರೆ ತೆಗೆದುಕೊಂಡು ಯಡಿಯೂರು ಕೆರೆ ಬಳಿ ಬಂದು ಹಣ ತೆಗೆದುಕೊಳ್ಳಲು ವ್ಯವಹಾರ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಜಯನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಉದ್ಯಮಿಗೆ ವಂಚಿಸಿ ಪಡೆದಿದ್ದ 70 ಲಕ್ಷ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬೆಂಗಳೂರಿನಲ್ಲಿರುವ ಸುಮಾರು 20 ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ವಂಚಿಸುವುದಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ನಕಲಿ ದಾಖಲೆ ಕೊಟ್ಟು 22 ಬ್ಯಾಂಕ್‌ಗಳಿಗೆ ವಂಚನೆ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್‌ಗಳಿಗೆ ವಂಚಿಸಿದ್ದ ಖತರ್ನಾಕ್‌ ಫ್ಯಾಮಿಲಿಯ ಬಂಧನವಾಗಿದೆ. ಒಂದೇ ಕುಟುಂಬದ ಐವರು ಆರೋಪಿಗಳು ‌ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುಮಾರು 22 ಬ್ಯಾಂಕ್‌ಗಳಿಗೆ ವಂಚಿಸಿ, ಬರೋಬ್ಬರಿ 10 ಕೋಟಿ ರೂ. ಸಾಲ ಪಡೆದಿದ್ದರು.

Fraud Case in Bengaluru

ನಾಗೇಶ್‌, ಸತೀಶ್‌, ವೇದ, ಶೋಭಾ, ಸುಮ, ಶೇಷಗಿರಿ ಬಂಧಿತ ಆರೋಪಿಗಳಾಗಿದ್ದಾರೆ. ಒಂದೇ ಸ್ವತ್ತಿಗೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆಯುತ್ತಿದ್ದರು. ನಕಲಿ ದಾಖಲೆಗಳನ್ನು ಡೀಡ್ ಮಾಡಿಸಿ, ಸಬ್ ರಿಜಿಸ್ಟರ್ ಕಚೇರಿಯಲ್ಲಿ ನೊಂದಣಿ ಮಾಡಿಸುತ್ತಿದ್ದರು. ಬಳಿಕ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಬ್ಯಾಂಕ್‌ಗಳಲ್ಲಿ ಕಂತು ಸಾಲ ಹಾಗೂ ಯಂತ್ರೋಪಕರಣ ಸಾಲ ಪಡೆಯುತ್ತಿದ್ದರು. ಹೀಗೆ ಒಟ್ಟು 22 ಬ್ಯಾಂಕ್‌ಗಳಲ್ಲಿ ಹತ್ತು ಕೋಟಿ ರೂ.ಗೂ ಅಧಿಕ ಸಾಲ‌ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಪತಿ, ಪತ್ನಿ ಹಾಗೂ ಈಕೆ ಸೋದರಿ, ಭಾವ ಹಾಗೂ ಅವರ ಸ್ನೇಹಿತೆ ಬಂಧಿತರಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ತು ದಿನ ಕಸ್ಟಡಿಗೆ ಪಡೆದು ಜಯನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading
Advertisement
ಕರ್ನಾಟಕ55 mins ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ60 mins ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ1 hour ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ2 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ2 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ2 hours ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 20242 hours ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ2 hours ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ2 hours ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ3 hours ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ10 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ20 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌