ಚಹಾ ಮಾಡುತ್ತಿದ್ದ ಅತ್ತೆಗೆ ಸುತ್ತಿಗೆಯಲ್ಲಿ ಹೊಡೆದು ಕೊಂದ ಸೋದರಳಿಯ; ಶವವನ್ನು 10 ತುಂಡುಗಳಾಗಿ ಕತ್ತರಿಸಿ ಬಕೆಟ್​​ನಲ್ಲಿ ತುಂಬಿದ! - Vistara News

ಕ್ರೈಂ

ಚಹಾ ಮಾಡುತ್ತಿದ್ದ ಅತ್ತೆಗೆ ಸುತ್ತಿಗೆಯಲ್ಲಿ ಹೊಡೆದು ಕೊಂದ ಸೋದರಳಿಯ; ಶವವನ್ನು 10 ತುಂಡುಗಳಾಗಿ ಕತ್ತರಿಸಿ ಬಕೆಟ್​​ನಲ್ಲಿ ತುಂಬಿದ!

ಜೈಪುರದ ವಿದ್ಯಾನಗರ ಎಂಬಲ್ಲಿ ಅನುಜ್​ ತನ್ನ ತಂದೆ ಮತ್ತು ತಂಗಿ ಮತ್ತು ಅತ್ತೆಯೊಂದಿಗೆ ವಾಸವಾಗಿದ್ದ. ಈ ಸರೋಜಾ ತನ್ನ ಪತಿ ತೀರಿಕೊಂಡ ಮೇಲೆ ತವರುಮನೆಗೆ ಬಂದು ಇವರೊಂದಿಗೇ ಇದ್ದರು. ಇನ್ನು ಅನುಜ್​ ಅಮ್ಮ ಕೂಡ ಕಳೆದ ವರ್ಷ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ.

VISTARANEWS.COM


on

Two killed as two bikes collide head on
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ದೆಹಲಿ ಶ್ರದ್ಧಾ ವಾಳ್ಕರ್​ ಹತ್ಯೆ ಮಾದರಿಯಲ್ಲೇ ರಾಜಸ್ಥಾನದ ಜೈಪುರದಲ್ಲಿ ಒಂದು ಕೊಲೆಯಾಗಿದೆ. ಇಲ್ಲೊಬ್ಬ 32ವರ್ಷದ ಯುವಕ ತನ್ನ 64 ವರ್ಷದ ಅತ್ತೆಯನ್ನು ಹತ್ಯೆ ಮಾಡಿ, ಮೃತದೇಹವನ್ನು 10 ತುಂಡುಗಳನ್ನಾಗಿ ಕತ್ತರಿಸಿ, ಬಕೆಟ್​​ನಲ್ಲಿ ತೆಗೆದುಕೊಂಡು ಹೋಗಿ ಹೆದ್ದಾರಿ ಪಕ್ಕದಲ್ಲಿ ಎಸೆದಿದ್ದಾನೆ. ಆರೋಪಿ ಹೆಸರು ಅನುಜ್​ ಶರ್ಮಾ ಎಂದಾಗಿದ್ದು, ಮೃತ ಅತ್ತೆ ಹೆಸರು ಸರೋಜಾ. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ, ತನಿಖೆ ಪ್ರಾರಂಭಿಸಿದ್ದಾರೆ.

ಜೈಪುರದ ವಿದ್ಯಾನಗರ ಎಂಬಲ್ಲಿ ಅನುಜ್​ ತನ್ನ ತಂದೆ ಮತ್ತು ತಂಗಿ ಮತ್ತು ಅತ್ತೆಯೊಂದಿಗೆ ವಾಸವಾಗಿದ್ದ. ಈ ಸರೋಜಾ ತನ್ನ ಪತಿ ತೀರಿಕೊಂಡ ಮೇಲೆ ತವರುಮನೆಗೆ ಬಂದು ಇವರೊಂದಿಗೇ ಇದ್ದರು. ಇನ್ನು ಅನುಜ್​ ಅಮ್ಮ ಕೂಡ ಕಳೆದ ವರ್ಷ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್​ 11ರಂದು ಅನುಜ್​ ಅಪ್ಪ ಮತ್ತು ತಂಗಿ ಮಧ್ಯಪ್ರದೇಶದ ಇಂಧೋರ್​ಗೆ ಹೋಗಿದ್ದರು. ಈತನಿಗೆ ಯಾವುದೋ ಕಾರ್ಯಕ್ರಮಕ್ಕೆ ದೆಹಲಿಗೆ ಹೋಗಬೇಕಿತ್ತು. ಆದರೆ ಸರೋಜಾ ಆತನನ್ನು ತಡೆದರು. ‘ಅಪ್ಪನೂ ಇಲ್ಲ, ನೀನು ದೆಹಲಿಗೆ ಹೋಗಬೇಡ’ ಎಂದು ಹೇಳಿದರು. ಇದರಿಂದ ಕುಪಿತಗೊಂಡ ಅನುಜ್​ ಅತ್ತೆಯೊಂದಿಗೆ ವಾಗ್ವಾದಕ್ಕೆ ಇಳಿದ. ಇಬ್ಬರ ಮಧ್ಯೆ ಮಾತಿನ ಚಕಮಕಿ ಉಂಟಾಗಿದೆ. ಆಕೆ ಅನುಜ್​​ಗೆ ಬೈಯುತ್ತಲೇ ಹೋಗಿ ಚಹಾ ಮಾಡುತ್ತಿದ್ದರು. ತೀವ್ರ ಸಿಟ್ಟಿಗೆದ್ದ ಅನುಜ್ ಹಿಂಬದಿಯಿಂದ ಹೋಗಿ​ ಸುತ್ತಿಗೆಯಿಂದ ಸರೋಜಾ ತಲೆಗೆ ಹೊಡೆದಿದ್ದಾನೆ. ಆಕೆ ಸತ್ತಿದ್ದು ದೃಢಪಡುತ್ತಿದ್ದಂತೆ ಮೃತದೇಹವನ್ನು 10 ತುಂಡುಗಳನ್ನಾಗಿ ಕತ್ತರಿಸಿದ್ದಾನೆ. ಹೀಗೆ ಶವ ಕತ್ತರಿಸಲು ಅವನು ಮಾರ್ಬಲ್​ ಕತ್ತರಿಸುವ ಕಟ್ಟರ್​​ನ್ನು ಬಳಸಿದ್ದಾನೆ. ಬಳಿಕ ಒಂದು ಬಕೆಟ್ ಮತ್ತು ಸೂಟ್​​​ಕೇಸ್​​​​​ನಲ್ಲಿ ತುಂಬಿಕೊಂಡು, ಜೈಪುರ್​-ಸಿಕಾರ್​ ಹೆದ್ದಾರಿ ಗುಂಟ ಸಾಗಿ, ದುರ್ಗಮ ಪ್ರದೇಶವೊಂದರಲ್ಲಿ ಅದನ್ನೆಲ್ಲ ಎಸೆದಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

ಇಷ್ಟೆಲ್ಲ ಆದ ಮೇಲೆ ಅನುಜ್​ ಪೊಲೀಸ್​ ಠಾಣೆಗೆ ಹೋಗಿ, ತನ್ನ ಅತ್ತೆ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಾನೆ. ಅಷ್ಟಲ್ಲದೆ, ತನ್ನ ಇತರ ಸಂಬಂಧಿಕರ ಜತೆ ಸೇರಿಕೊಂಡು ಅತ್ತೆಯನ್ನು ಹುಡುಕುವ ನಾಟಕವನ್ನೂ ಆಡಿದ್ದಾನೆ. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಎಲ್ಲೋ ಏನೋ ತಾಳೆಯಾಗುತ್ತಿಲ್ಲ, ಅನುಜ್​ ಹೇಳಿಕೆಗಳೆಲ್ಲ ಗೊಂದಲಕಾರಿಯಾಗಿವೆ ಎಂದು ಗೊತ್ತಾಗುತ್ತಿದ್ದಂತೆ ಮತ್ತಷ್ಟು ಗದರಿ ವಿಚಾರಣೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಅನುಜ್​ ಮನೆ ಬಳಿಯ ಸಿಸಿಟಿವಿ ಫೂಟೇಜ್​ ಕೂಡ ಪರಿಶೀಲಿಸಿದ್ದಾರೆ. ಆಗ ಆತ ಒಂದು ಸೂಟ್​ಕೇಸ್​ ಮತ್ತು ಬಕೆಟ್​ ಹಿಡಿದು ಹೋಗುತ್ತಿರುವುದು ಕಾಣಿಸಿದೆ. ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಆತ ಒಪ್ಪಿಕೊಂಡಿದ್ದಾನೆ. ಇನ್ನು ಅನುಜ್​ ಬಿಟೆಕ್​ ಪದವೀಧರ ಆಗಿದ್ದು, ತುಂಬ ಬುದ್ಧಿವಂತ ಹುಡುಗ. ನಮ್ಮನ್ನೇ ಗೊಂದಲಕ್ಕೀಡುಮಾಡುವಂತೆ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ. ಅವರ ಅಡುಗೆ ಮನೆಯಲ್ಲೂ ಯಾವಾಗ ರಕ್ತ ಕಾಣಿಸಿತೋ, ಆಗಲೇ ಆತನೇ ಕೊಲೆಗಾರ ಎಂಬುದು ದೃಢಪಟ್ಟಿತ್ತು ಎಂದು ಜೈಪುರ ಪೊಲೀಸ್ ಆಯುಕ್ತ ಆನಂದ್​ ಶ್ರೀವಾಸ್ತವ್​ ಹೇಳಿದ್ದಾರೆ.

ದೆಹಲಿಯಲ್ಲಿ ಶ್ರದ್ಧಾ ವಾಳ್ಕರ್​ ತನ್ನ ಪ್ರಿಯತಮ ಅಫ್ತಾಬ್​​ನಿಂದ ಹತ್ಯೆಯಾಗಿದ್ದು ದೇಶಾದ್ಯಂತ ಶಾಕ್​ ಉಂಟು ಮಾಡಿತ್ತು. ಯಾಕೆಂದರೆ ಆತ ಶ್ರದ್ಧಾಳ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ, ಫ್ರಿಜ್​​ನಲ್ಲಿಟ್ಟುಕೊಂಡು ಒಂದೊಂದೇ ದಿನ ಹೋಗಿ ಎಸೆದುಬಂದಿದ್ದ. ಆದರೆ ಅದಾದ ಮೇಲೆ ಇಂಥ ಮಾದರಿಯ ಕೊಲೆಗಳು ಪದೇಪದೆ ಬೆಳಕಿಗೆ ಬರುತ್ತಿವೆ. ಇದೊಂದು ಆತಂಕಕಾರಿ ಬೆಳವಣಿಗೆ ಎನ್ನಿಸಿದೆ.

ಇದನ್ನೂ ಓದಿ: Mudhol murder | ಅಪ್ಪನನ್ನು ಕೊಂದು 4 ದಿನದ ಬಳಿಕ ತಾಯಿ-ಅಣ್ಣನ ಬಳಿ ಬಾಯಿ ಬಿಟ್ಟಿದ್ದ ವಿಠಲ ಕುಳಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ; ದರ್ಶನ್‌ ಗ್ಯಾಂಗ್ ವಿರುದ್ಧ ದೂರು

ರೇಣುಕಾಸ್ವಾಮಿ ಕೊಲೆ‌ ಪ್ರಕರಣದಲ್ಲಿ ದಿನೇ ದಿನೇ ಹೊಸ ಹೊಸ ವಿಷ್ಯಗಳು ಹೊರಬರುತ್ತಿವೆ. ಇದರ ನಡುವೆ ಜೈಲಿನಲ್ಲಿದ್ದುಕೊಂಡೇ ದರ್ಶನ್ ಅಂಡ್ ಗ್ಯಾಂಗ್ ಬೆದರಿಕೆ ಹಾಕಿರೋದು ಬೆಳಕಿಗೆ ಬಂದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಸಾಕ್ಷಿದಾರ ದೂರು ದಾಖಲಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿ ಮಾಡಲು ಪೊಲೀಸರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಈ ಮಧ್ಯೆ ಚಾರ್ಜ್ ಶೀಟ್ ಸಲ್ಲಿಕೆಗೆ ಪ್ರಮುಖ ಸಾಕ್ಷಿದಾರ ಪೊಲೀಸರಿಗೆ ಸಿಕ್ಕಂತಾಗಿದೆ. ಆದರೆ, ಜೈಲಿನಿಂದಲೇ ಕೆಲ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಕೆಲಸವೂ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿ ದರ್ಶನ್‌ ಗ್ಯಾಂಗ್‌ (Actor Darshan) ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೈಲಿನಲ್ಲಿದ್ದುಕೊಂಡೇ ದರ್ಶನ್ ಅಂಡ್ ಗ್ಯಾಂಗ್ ಬೆದರಿಕೆ ಹಾಕಿರೋದು ಬೆಳಕಿಗೆ ಬಂದಿದೆ. ಕೊಲೆ‌ ಪ್ರಕರಣದ‌ ಪ್ರಮುಖ ಸಾಕ್ಷಿಯಾಗಿರೋ ವ್ಯಕ್ತಿಗೆ ಸಾಕ್ಷಿ ನುಡಿಯದಂತೆ ಡಿ ಗ್ಯಾಂಗ್ ಬೆದರಿಕೆ ಹಾಕಿದೆ ಎನ್ನಲಾಗಿದೆ. ಸದ್ಯ ಬೆದರಿಕೆ ಸಂಬಂಧ ಸಾಕ್ಷಿದಾರ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕರೆಂಟ್ ಶಾಕ್ ಕೊಡಲು ಆನ್‌ಲೈನ್‌ನಲ್ಲಿ ಮೆಗ್ಗರ್‌ ಡಿವೈಸ್‌ ಖರೀದಿ

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆಯಲ್ಲಿ‌ ಪ್ರಮುಖವಾಗಿ ಬಳಸಿರೋ‌ ಸಾಧನ ಮೆಗ್ಗರ್ ಬಗ್ಗೆ ಮಹತ್ವದ ಮಾಹಿತಿ ತಿಳಿಸದುಬಂದಿದೆ. ಕರೆಂಟ್ ಶಾಕ್ ನೀಡಲೆಂದೇ ಮೆಗ್ಗರ್ ಅನ್ನು ಖರೀದಿ‌ ಮಾಡಿರೋದು ತನಿಖೆ ವೇಳೆ ಬೆಳಕಿಗೆ. ಪ್ರಕರಣದ ಆರೋಪಿ ಧನರಾಜ್‌ ಅಮೆಜಾನ್‌ನಲ್ಲಿ ಮೆಗ್ಗರ್ ಡಿವೈಸ್ ಬುಕ್ ಮಾಡಿದ್ದು, ಅದರ ಬೆಲೆ 699 ರೂಪಾಯಿಗಳಾಗಿದೆ. ಇನ್ನು ಬುಕ್ ಮಾಡಿದ ಮೆಗ್ಗರ್ ಅನ್ನು ಸ್ವೀಕರಿಸುವ ವೇಳೆ ಸ್ಕ್ಯಾನರ್ ಮೂಲಕ ಹಣ ಪೇ ಮಾಡಲು ಧನರಾಜ್ ಯತ್ನಿಸಿದ್ದ. ಆದರೆ ಅಮೆಜಾನ್ ಪೇ ಕೋಡ್‌ ಸ್ಕ್ಯಾನ್ ಮಾಡಿದ ವೇಳೆ ಹಣ ಸೆಂಡ್ ಆಗದ ಕಾರಣ ಆನ್ ಲೈನ್ ಮೂಲಕ ಹಣವನ್ನು ಕಳುಹಿಸಿದ್ದ ಧನರಾಜ್. ಆ ಹಣವನ್ನು ಡೆಲಿವರಿ ಬಾಯ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದು ಕಂಪನಿಗೆ ನೀಡಿದ್ದ. ಸದ್ಯ ಆ ಮಾಹಿತಿ ಕಲೆ ಹಾಕಿರೋ ಪೊಲೀಸರು ಮೆಗ್ಗರ್ ಡಿವೈಸ್ ಧನರಾಜ್‌ಗೆ ತಂದುಕೊಟ್ಟ ಡೆಲಿವರಿ ಬಾಯ್‌ನ ವಿಚಾರಣೆ ಮಾಡಿ ಆತನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಅಲ್ಲದೇ ರೇಣುಕಾಸ್ವಾಮಿ ಸೋಷಿಯಲ್ ಮೀಡಿಯಾ ಡೇಟಾ ರಿಟ್ರೀವ್ ಆಗಿದೆ. ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ, ವಾಟ್ಸ್‌ ಆ್ಯಪ್ ಡೇಟಾವನ್ನು ಪೊಲೀಸರು ರಿಟ್ರೀವ್ ಮಾಡಿದ್ದಾರೆ. ಪಶ್ಚಿಮ ವಿಭಾಗ ಸೆನ್ ಪೊಲೀಸ್ ಠಾಣೆಯಲ್ಲಿ ರಿಟ್ರೀವ್ ಆಗಿದ್ದು, ಪೆನ್ ಡ್ರೈವ್‌ನಲ್ಲಿ ಡೇಟಾ ಸಂಗ್ರಹಿಸಿ ಪಂಚನಾಮೆ ಮಾಡಲಾಗಿದೆ. ಈ ಮಧ್ಯೆ ಮೃತ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶಗಳ ಪರಿಶೀಲನೆ ಮಾಡಲಾಗಿದ್ದು, ಇದು ಕೂಡ ಪ್ರಮುಖ ಸಾಕ್ಷ್ಯವಾಗಿದ್ದು, ರೇಣುಕಾಸ್ವಾಮಿ ಮಾಡಿದ್ದ ಚಾಟಿಂಗ್‌ನಿಂದಲೇ ಕೊಲೆಗೆ ಪ್ರಮುಖ ಕಾರಣ ಎಂಬುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌; ವಿಚಾರಣೆ ಮುಂದೂಡಿದ ಹೈಕೋರ್ಟ್

ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್‌ ಮತ್ತು ಗ್ಯಾಂಗ್‌ಗೆ ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದ ಬೆನ್ನಲ್ಲೇ ಗುರುವಾರ ನ್ಯಾಯಾಂಗ ಬಂಧನವನ್ನು ಕೋರ್ಟ್‌ ವಿಸ್ತರಿಸಿತ್ತು.

ಆಗಸ್ಟ್​ 1ರಂದು ಕೇಸ್​ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದ ನ್ಯಾಯಾಧೀಶರು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದ್ದರು. ಪವಿತ್ರಾ ಗೌಡ, ದರ್ಶನ್​ ಸೇರಿದಂತೆ ಪರಪ್ಪನ ಆಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

Continue Reading

ಕ್ರೈಂ

Dog Attack: ವೃದ್ಧ ತಾಯಿಯನ್ನು ಮನೆಯ ಹೊರಗೆ ಮಲಗಿಸಿದ್ದ ಪುತ್ರರು; ಜೀವಂತವಾಗಿ ತಿಂದು ಹಾಕಿದ ಬೀದಿ ನಾಯಿಗಳು!

Dog Attack: ಮುಸ್ತಾಬಾದ್ ಮಂಡಲದ ಕೇಂದ್ರ ಕಚೇರಿಯ ಸೇವಾಲಾಲ್ ತಾಂಡಾ ಪ್ರದೇಶದಲ್ಲಿನ ಗುಡಿಸಲಿನಲ್ಲಿ ವೃದ್ಧೆ ಮಲಗಿದ್ದರು. ದೀರ್ಘಕಾಲದಿಂದ ಅವರು ಹಾಸಿಗೆ ಹಿಡಿದಿದ್ದರು. ಬೀದಿ ನಾಯಿಗಳ ಗುಂಪೊಂದು ಗುಡಿಸಲಿನೊಳಗೆ ನುಗ್ಗಿ ಅವರ ಮೇಲೆ ದಾಳಿ ಮಾಡಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಖಿಲ್ ಮಹಾಜನ್ ಹೇಳಿದ್ದಾರೆ. ಕರುಣಾಜನಕವಾದ ಈ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ.

VISTARANEWS.COM


on

By

Dog attack
Koo

ದೀರ್ಘಕಾಲದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯ ಮೇಲೆ ರಾತ್ರಿ ಬೀದಿ ನಾಯಿಗಳು (street dog) ದಾಳಿ (Dog Attack) ನಡೆಸಿ ಕೊಂದು ಹಾಕಿರುವ ಘಟನೆ ತೆಲಂಗಾಣದ (telangana) ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಕರೀಂನಗರದಲ್ಲಿ ನಡೆದಿದೆ. 82 ವರ್ಷದ ಪಿಟ್ಲಾ ರಾಜ್ಯಲಕ್ಷ್ಮಿ ಬುಧವಾರ ರಾತ್ರಿ ಗುಡಿಸಿಲಿನಲ್ಲಿ ಮಲಗಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿದ್ದವು ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮುಸ್ತಾಬಾದ್ ಮಂಡಲದ ಕೇಂದ್ರ ಕಚೇರಿಯ ಸೇವಾಲಾಲ್ ತಾಂಡಾ ಪ್ರದೇಶದಲ್ಲಿನ ಗುಡಿಸಲಿನಲ್ಲಿ ರಾಜ್ಯಲಕ್ಷ್ಮಿ ಮಲಗಿದ್ದರು. ದೀರ್ಘಕಾಲದಿಂದ ಅವರು ಹಾಸಿಗೆ ಹಿಡಿದಿದ್ದರು. ಬೀದಿ ನಾಯಿಗಳ ಗುಂಪೊಂದು ಗುಡಿಸಲಿನೊಳಗೆ ನುಗ್ಗಿ ಅವರ ಮೇಲೆ ದಾಳಿ ಮಾಡಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಖಿಲ್ ಮಹಾಜನ್ ಹೇಳಿದ್ದಾರೆ.

ನಾಯಿಗಳು ಅವರನ್ನು ಕಚ್ಚಿ ಕೊಂದು ಮುಖ ಮತ್ತು ದೇಹದ ಕೆಲವು ಭಾಗಗಳನ್ನು ತಿಂದು ಹಾಕಿವೆ. ಸಮೀಪದಲ್ಲೇ ವಾಸಿಸುವ ಮಹಿಳೆಯ ಕುಟುಂಬ ಸದಸ್ಯರು ಗುರುವಾರ ಬೆಳಗ್ಗೆ ಆಕೆಯ ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗ್ರಾಮಸ್ಥರ ಪ್ರಕಾರ, ರಾಜ್ಯಲಕ್ಷ್ಮಿ ಬುಧವಾರ ರಾತ್ರಿ ಮನೆ ಸಮೀಪದ ಗುಡಿಸಲಿನಲ್ಲಿ ಮಲಗಿದ್ದರು. ಯಾವುದೇ ಬಾಗಿಲು ಇಲ್ಲದ ಕಾರಣ ಗಾಢ ನಿದ್ದೆಯಲ್ಲಿದ್ದ ಅವರ ಮೇಲೆ ನಾಯಿಗಳು ಸುಲಭವಾಗಿ ದಾಳಿ ನಡೆಸಿವೆ. ನಾಯಿಗಳು ಅವರ ತಲೆ ಮತ್ತು ಹೊಟ್ಟೆಯ ಭಾಗವನ್ನು ತಿಂದು ಹಾಕಿವೆ ಎಂದು ತಿಳಿಸಿದ್ದಾರೆ.

ಸಂತ್ರಸ್ತೆಯ ಮನೆಯ ಬಳಿ ನಾಯಿಯು ರಸ್ತೆಯಲ್ಲಿ ಮಾಂಸವನ್ನು ವಾಂತಿ ಮಾಡುವುದನ್ನು ಕಂಡ ಸ್ಥಳೀಯರು ಕೋಪಗೊಂಡು ಬೀದಿ ನಾಯಿಯನ್ನು ಕೊಂದು ಹಾಕಿದ್ದರು.

ಇದನ್ನೂ ಓದಿ: Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಲಕ್ಷ್ಮಿ ಕಳೆದ ನಾಲ್ಕು ವರ್ಷಗಳಿಂದ ಹಾಸಿಗೆ ಹಿಡಿದಿದ್ದು, ಇಬ್ಬರು ಪುತ್ರರಿದ್ದರೂ ತಾಯಿಯನ್ನು ತಮ್ಮ ಮನೆಯ ಹೊರಗೆ ಪ್ರತ್ಯೇಕ ಕೋಣೆಯಲ್ಲಿ ಇರಿಸಿದ್ದರು ಎಂದು ಮುಸ್ತಾಬಾದ್ ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಪುತ್ರನ ದೂರಿನ ಮೇರೆಗೆ ಬಿಎನ್‌ಎಸ್‌ನ ಸೆಕ್ಷನ್ 194ರ ಅಡಿಯಲ್ಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

Latest

Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

Viral Video: ಮಧ್ಯಪ್ರದೇಶದಲ್ಲಿ ಯುವ ಕಾಂಗ್ರೆಸ್ ನಾಯಕನೊಬ್ಬ ತನ್ನ ಗೆಳತಿಗೆ ಹಾಡಹಗಲೇ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಸಂತ್ರಸ್ತೆ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕೆ ಮೊರೆ ಇಡುತ್ತಿರುವುದು ಕಂಡು ಬಂದಿದೆ. ಅಲ್ಲೇ ಇದ್ದ ಆತ “ಅವಳು ನನಗೆ ಮೋಸ ಮಾಡಿದ್ದಾಳೆ. ಈ ಹುಡುಗಿಯರು ಕೇವಲ ಹಣವನ್ನು ಬಯಸುತ್ತಾರೆʼʼ ಎಂದು ಕಿರುಚಿದ್ದಾನೆ. ಆಕೆಯ ಬಳಿ ನಿನಗೆ ಎಷ್ಟು ಬಾಯ್ ಫ್ರೆಂಡ್‌ಗಳಿದ್ದಾರೆ? ಅಯಾನ್, ರಯಾನ್, ಆಜಾದ್, ಹರ್ಷಿತ್ ಎಂದು ಪ್ರಶ್ನಿಸಿದ್ದಾನೆ.

VISTARANEWS.COM


on

Viral Video
Koo


ಇತ್ತೀಚೆಗೆ ಲವ್‌ ಬ್ರೇಕಪ್, ಮೋಸ, ವಂಚನೆ ಮಾಡುವಂತಹ ಪ್ರಕರಣಗಳು (Love Case) ಇತ್ತೀಚೆಗೆ ಮಿತಿ ಮೀರಿ ಬಿಟ್ಟಿದೆ. ಇದೀಗ ಮಧ್ಯಪ್ರದೇಶದಲ್ಲಿ ಕೂಡ ಇಂತಹದೊಂದು (Viral Video) ಪ್ರಕರಣ ನಡೆದಿದೆ. ಮಧ್ಯಪ್ರದೇಶದ ನೀಮುಚ್‍ನಲ್ಲಿ ಯುವ ಕಾಂಗ್ರೆಸ್ ನಾಯಕನೊಬ್ಬ ತನ್ನ ಗೆಳತಿಗೆ ಹಾಡಹಗಲೇ ಚಾಕುವಿನಿಂದ ಭೀಕರವಾಗಿ ಇರಿದಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಘಟನೆಯನ್ನು ಪ್ರೇಕ್ಷಕರೊಬ್ಬರು ವಿಡಿಯೊ ಮಾಡಿದ್ದು, ಇದರಲ್ಲಿ ಸಂತ್ರಸ್ತೆ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕೆ ಮೊರೆ ಇಡುತ್ತಿರುವುದು ಕಂಡು ಬಂದಿದೆ. ಆ ವ್ಯಕ್ತಿ ಅವಳನ್ನು ಭೀಕರವಾಗಿ ಚಾಕುವಿನಿಂದ ಇರಿದಿದ್ದಾನೆ. ಅಲ್ಲೇ ಇದ್ದ ಆತ “ಅವಳು ನನಗೆ ಮೋಸ ಮಾಡಿದ್ದಾಳೆ. ಈ ಹುಡುಗಿಯರು ಕೇವಲ ಹಣವನ್ನು ಬಯಸುತ್ತಾರೆ ಎಂದು ಹೇಳುತ್ತಾ ಆಕೆಯ ಬಳಿ ನಿನಗೆ ಎಷ್ಟು ಬಾಯ್ ಫ್ರೆಂಡ್‌ಗಳಿದ್ದಾರೆ? ಅಯಾನ್, ರಯಾನ್, ಆಜಾದ್, ಹರ್ಷಿತ್?ʼʼ ಎಂದು ಪ್ರಶ್ನಿಸುತ್ತಿರುವುದು ಕೇಳಿಸುತ್ತದೆ.

ವರದಿಗಳ ಪ್ರಕಾರ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ನೀಮುಚ್‍ನ ಕಾಟ್ ಪೊಲೀಸ್ ಠಾಣೆ (Cantt police station)ಪ್ರದೇಶದ ಗಾಂಧಿ ವಾಟಿಕಾ ಬಳಿ ಈ ಘಟನೆ ನಡೆದಿದೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ತೀವ್ರ ರಕ್ತಸ್ರಾವವಾಗುತ್ತಿದ್ದ ಯುವತಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಜಿಲ್ಲಾ ಆಸ್ಪತ್ರೆಯಿಂದ, ಯುವತಿಯ ಕುಟುಂಬವು ಅವಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿತು. ಅಲ್ಲಿ ಅವಳ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಆರೋಪಿಯನ್ನು ಕುಲದೀಪ್ ವರ್ಮಾ (23) ಎಂದು ಗುರುತಿಸಲಾಗಿದೆ. ಆತ ಯುವತಿಯನ್ನು ಕೊಲೆ ಮಾಡುವ ಪ್ರಯತ್ನದ ಹಿಂದಿನ ನಿಖರವಾದ ಉದ್ದೇಶವನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಜಲಾವೃತ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಿರುಕುಳ; ವಿಡಿಯೊ ನೋಡಿ ಜನಾಕ್ರೋಶ

ಪ್ರತ್ಯಕ್ಷದರ್ಶಿಗಳ ಪ್ರಕಾರ, ಇವರಿಬ್ಬರು ಉದ್ಯಾನವನದ ಹೊರಗೆ ನಿಂತು ಯಾವುದೋ ವಿಚಾರಕ್ಕೆ ವಾದಿಸುತ್ತಿದ್ದಾಗ ವ್ಯಕ್ತಿ ಚಾಕುವನ್ನು ಹೊರತೆಗೆದು ಆಕೆಗೆ ಇರಿದಿದ್ದಾನೆ. ಸಂತ್ರಸ್ತೆಯ ಕಿರುಚಾಟ ಕೇಳಿ ಸ್ಥಳದಲ್ಲಿದ್ದವರು ಓಡಿ ಬಂದಿದ್ದಾರೆ. ಆದರೆ ಯಾರೂ ಹುಡುಗಿಯನ್ನು ಕಾಪಾಡಲು ಮತ್ತು ಆ ವ್ಯಕ್ತಿಯನ್ನು ಎದುರಿಸಲು ಪ್ರಯತ್ನಿಸಲಿಲ್ಲ ಎನ್ನಲಾಗಿದೆ. ಸಂತ್ರಸ್ತೆಯನ್ನು 20 ವರ್ಷದ ತಸ್ಲೀಮ್, ಬೋಹ್ರಾ ಬಜಾರ್ ನಿವಾಸಿ ಎಂದು ಗುರುತಿಸಲಾಗಿದ್ದು, ಆರೋಪಿ ಕುಲದೀಪ್ ವರ್ಮಾ ಕೇಸರ್ ಪುರ ನಿವಾಸಿಯಾಗಿದ್ದು, ಯುವ ಕಾಂಗ್ರೆಸ್ ನಾಯಕನಾಗಿದ್ದಾನೆ. ಈತ ಜ್ಞಾನೋದಯ ಮಹಾವಿದ್ಯಾಲಯದಲ್ಲಿ ಎನ್ಎಸ್‌ಯುಐನ ಕಾಲೇಜು ಅಧ್ಯಕ್ಷನಾಗಿದ್ದ. ಇತ್ತೀಚೆಗೆ ಅವನನ್ನು ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಸೇರಿಸಲಾಗಿತ್ತು.

Continue Reading

ಬಾಗಲಕೋಟೆ

Road Accident : ಜವರಾಯನ ಅಟ್ಟಹಾಸಕ್ಕೆ ಮಸಣ ಸೇರಿದ ಕಾಲೇಜು ವಿದ್ಯಾರ್ಥಿ

Road Accident : ಕೋಲಾರದಲ್ಲಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್‌ ರನ್‌ ಮಾಡಿ ಬೈಕ್‌ ಸವಾರ ಎಸ್ಕೇಪ್‌ ಆಗಿದ್ದಾನೆ.

VISTARANEWS.COM


on

By

Road Accident
Koo

ಕೋಲಾರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ (Road Accident) ಸಂಭವಿಸಿದೆ. ಜವರಾಯನ ಅಟ್ಟಹಾಸಕ್ಕೆ ವಿದ್ಯಾರ್ಥಿ ಮಸಣ ಸೇರಿದ್ದಾನೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ (18) ಮೃತ ದುರ್ದೈವಿ. ಭಾರ್ಗವ್‌ ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಸ್ ಮಿಸ್ ಆದ ಕಾರಣ ದ್ವಿಚಕ್ರ ವಾಹನದಲ್ಲಿ ಅಡ್ಡಗಲ್ ಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ಬಸ್‌ವೊಂದು ಬೈಕ್‌ಗೆ ಗುದ್ದಿದೆ. ಪರಿಣಾಮ ಕೆಳಗೆ ಬಿದ್ದ ಭಾರ್ಗವ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

ಮಗನ ಮೃತ ದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: Love case : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆದ ಬೈಕ್‌ ಸವಾರ

ಬೆಂಗಳೂರು: ಮಕ್ಕಳನ್ನು ರಸ್ತೆಯಲ್ಲಿ ಆಟವಾಡಲು ಬಿಡುವ ಪೋಷಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಟ್‌ ಆ್ಯಂಡ್‌ ರನ್‌ ಮಾಡಿ ಎಸ್ಕೇಪ್‌ ಆಗಿದ್ದಾನೆ. ಸೈಕಲ್ ತುಳಿಯುತ್ತಾ ಆಟವಾಡುತ್ತಿದ್ದ ಬಾಲಕನಿಗೆ ಗುದ್ದಿ ಕಾಲ್ಕಿತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಬನಶಂಕರಿ 6ನೇ ಹಂತದಲ್ಲಿ ಈ ಅಪಘಾತ ನಡೆದಿದೆ. ನಂಬರ್ ಪ್ಲೇಟ್‌ ಇಲ್ಲದ ಆರ್‌ಎಕ್ಸ್ ಬೈಕ್‌ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಮುಂಭಾಗದ ರಸ್ತೆಯಲ್ಲಿ ಸೈಕಲ್ ತುಳಿಯುತ್ತಿದ್ದ ಬಾಲಕನಿಗೆ ವೇಗವಾಗಿ ಬಂದು ಗುದ್ದಿದ್ದಾನೆ.

ಬಾಲಕ ರಸ್ತೆಯಲ್ಲೇ ಬಿದ್ದು ಅಳುತ್ತಿದ್ದರು ಬೈಕ್‌ ಸವಾರ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕಳೆದ ಆಗಸ್ಟ್ 1ರ ರಾತ್ರಿ 8 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಗಾಗಿ ದಕ್ಷಿಣ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕುರಿಗಳ‌ ಮೇಲೆ ಹರಿದ ಲಾರಿ, ಸ್ಥಳದಲ್ಲೇ 33 ಕುರಿಗಳ ಮಾರಣ

ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ 33 ಕುರಿಗಳು ಮೃತಪಟ್ಟಿವೆ. ಬಾಗಲಕೋಟೆಯ ಕಡಪಟ್ಟಿ ಫಾರ್ಮ್ ಹೌಸ್ ಬಳಿ ನಸುಕಿನ ವೇಳೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಳಕಲ್ಲನ ಎನ್‌ಹೆಚ್ 50 ರಲ್ಲಿರುವ ಕಡಪಟ್ಟಿ ಫಾರ್ಮ್ ಹೌಸ್‌ನಿಂದ ಹುನಗುಂದದಿಂದ ಹನುಮಸಾಗರ ಕಡೆ ಹೊರಟಿದ್ದಾಗ ಅಪಘಾತ ನಡೆದಿದೆ. ಹುನಗುಂದದಿಂದ ಕುಷ್ಟಗಿ ಕಡೆ ಹೊರಟಿದ್ದ ಲಾರಿಯು ಹಿಂದಿನಿಂದ ವೇಗವಾಗಿ ಬಂದು ಕುರಿಗಳ ಹರಿದಿದೆ. ಕುರಿಗಾಹಿ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನುಜ್ಜುಗುಜ್ಜಾದ 33 ಕುರಿಗಳು, 30ಕ್ಕೂ ಹೆಚ್ಚು ಕುರಿಗಳಿಗೆ ಗಾಯವಾಗಿದೆ.

ರಾಯಣ್ಣ ಮಲ್ಲಪ್ಪ ಕೊಡೆಕಲ್ಲ (30) ಕುರಿಗಾಹಿ ಮಾಲಿಕ ಗಾಯಗೊಂಡಿದ್ದಾನೆ. ರಾಯಣ್ಣ ಮೂಲತಃ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿಯಾಗಿದ್ದಾನೆ. ಹರಿಯಾಣ ಪಾಸಿಂಗ್ ಇದ್ದು, ರಾಜಸ್ಥಾನ ಮೂಲದ ಅತ್ತಾರಖಾನ್ (25) ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಳಕಲ್ಲ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಪ್ರಮುಖ ಸುದ್ದಿ35 mins ago

Lakshya Sen : ಒಲಿಂಪಿಕ್ಸ್​ನ ಸೆಮಿ ಫೈನಲ್​ಗೇರಿ ಇತಿಹಾಸ ನಿರ್ಮಿಸಿದ ಷಟ್ಲರ್ ಲಕ್ಷ್ಯ ಸೇನ್​

IND vs SL ODI
ಕ್ರಿಕೆಟ್58 mins ago

IND vs SL ODI : ನಾಟಕೀಯ ತಿರುವು; ಲಂಕಾ ವಿರುದ್ಧದ ಮೊದಲ ಏಕ ದಿನ ಪಂದ್ಯ ಟೈ

Border Security Force
ಪ್ರಮುಖ ಸುದ್ದಿ1 hour ago

Border Security Force : ಗಡಿಯಲ್ಲಿ ಭಯೋತ್ಪಾದನೆ ಹೆಚ್ಚಳ; ಬಿಎಸ್​ಎಫ್​ ಮುಖ್ಯಸ್ಥರನ್ನು ಹುದ್ದೆಯಿಂದ ತೆಗೆದು ಹಾಕಿದ ಕೇಂದ್ರ ಸರ್ಕಾರ

African Culture
ವಿದೇಶ2 hours ago

Breast Ironing: ಆಫ್ರಿಕಾದಲ್ಲಿದೆ ಬಿಸಿ ವಸ್ತುಗಳಿಂದ ಯುವತಿಯರ ಸ್ತನ ಚಪ್ಪಟೆಗೊಳಿಸುವ ಕ್ರೂರ ಪದ್ಧತಿ!

high-speed road corridor
ಪ್ರಮುಖ ಸುದ್ದಿ2 hours ago

High Speed Road Corridor : 8 ಹೊಸ ಹೈಸ್ಪೀಡ್​ ರೋಡ್​ ಕಾರಿಡಾರ್​​​ಗೆ ಒಪ್ಪಿಗೆ ಕೊಟ್ಟ ಕೇಂದ್ರ ಸರ್ಕಾರ

RRB ALP Recruitment
ಕರ್ನಾಟಕ2 hours ago

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

Sri Vidyashreesha Theertha Swamiji ashirvachan at Vyasaraja Matha of Sosale village
ಮೈಸೂರು2 hours ago

Mysore News: ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

Minister Shivaraj tangadagi visited and inspected Tungabhadra river side villages
ಮಳೆ2 hours ago

Koppala News: ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು; ನದಿಪಾತ್ರದ ಗ್ರಾಮಗಳಿಗೆ ತಂಗಡಗಿ ಭೇಟಿ

Space mission
ಪ್ರಮುಖ ಸುದ್ದಿ2 hours ago

Space mission : ಇಂಡೊ- ಯುಎಸ್​ ಬಾಹ್ಯಾಕಾಶ ಯಾನಕ್ಕೆ ಭಾರತದ ಶುಭಾಂಶು ಶುಕ್ಲಾ ‘ಪ್ರಧಾನ ಗಗನಯಾತ್ರಿ’

Actor Darshan
ಕರ್ನಾಟಕ3 hours ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ; ದರ್ಶನ್‌ ಗ್ಯಾಂಗ್ ವಿರುದ್ಧ ದೂರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌