ಗಲ್ಲು ಶಿಕ್ಷೆಗೆ ಅಪರಾಧವೊಂದೇ ಮಾನದಂಡ ಅಲ್ಲ, ಮಾನಸಿಕ ಆರೋಗ್ಯ ವರದಿ ಫೈನಲ್‌ - Vistara News

ಕ್ರೈಂ

ಗಲ್ಲು ಶಿಕ್ಷೆಗೆ ಅಪರಾಧವೊಂದೇ ಮಾನದಂಡ ಅಲ್ಲ, ಮಾನಸಿಕ ಆರೋಗ್ಯ ವರದಿ ಫೈನಲ್‌

ಮರಣದಂಡನೆ ವಿಧಿಸುವ ಮುನ್ನ ಅಪರಾಧಿಯ ಮಾನಸಿಕ ಆರೋಗ್ಯ ವರದಿ ಕಡ್ಡಾಯ ಎಂದಿದೆ ಸುಪ್ರೀಂ ಕೋರ್ಟ್. ಆರೋಪಿಯ ವಯಸ್ಸು, ಕುಟುಂಬದ ಹಿನ್ನೆಲೆ, ಅಪರಾಧ ಹಿನ್ನೆಲೆ, ಶೈಕ್ಷಣಿಕ ಅರ್ಹತೆ ಮತ್ತು ಇತರ ವಿವರ ಸಂಗ್ರಹಿಸಲು ಸರಕಾರಕ್ಕೆ ನಿರ್ದೇಶಿಸಿದೆ.

VISTARANEWS.COM


on

ಮಾನಸಿಕ ಆರೋಗ್ಯ ವರದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ಮುನ್ನ ಅವರ ಮಾನಸಿಕ ಆರೋಗ್ಯದ ಸ್ಥಿತಿಗತಿಯನ್ನು ಗಮನಿಸಬೇಕು ಎಂದು ಸುಪ್ರೀಂ ಕೋರ್ಟ್‌ ಕಳೆದ ವಾರ ನೀಡಿದ ತೀರ್ಪಿನಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಅದರಂತೆ, ಯಾರಿಗಾದರೂ ಮರಣದಂಡನೆ ವಿಧಿಸುವ ಮೊದಲು ನ್ಯಾಯಾಲಯಗಳು ಈಗ ಆರೋಪಿಯ ಮಾನಸಿಕ ಆರೋಗ್ಯ ವರದಿ ತರಿಸಿಕೊಂಡು ಜೈಲಿನಲ್ಲಿ ಅವರ ನಡವಳಿಕೆಯನ್ನು ಮೌಲ್ಯಮಾಪನ ಮಾಡಬೇಕಾಗುತ್ತದೆ.

ಮಧ್ಯಪ್ರದೇಶದ ಮೂವರು ಅಪರಾಧಿಗಳು ಜೂನ್ 2011ರಲ್ಲಿ ಕಳ್ಳತನ ಮಾಡಲು ಮನೆಗೆ ಪ್ರವೇಶಿಸಿದ ಬಳಿಕ ಮೂವರು ಮಹಿಳೆಯರನ್ನು ಬರ್ಬರವಾಗಿ ಕೊಲೆ ಮಾಡಿ, ಬಳಿಕ ವಿಚಾರಣಾ ನ್ಯಾಯಾಲಯ ಹಾಗೂ ರಾಜ್ಯ ಹೈಕೋರ್ಟ್‌ನಿಂದ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಅವರು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆಗೆ ಎತ್ತಿಕೊಂಡ ಸುಪ್ರೀಂ ಕೋರ್ಟ್‌ ನ ತ್ರಿಸದಸ್ಯ ಪೀಠ, ಜೈಲಿನಲ್ಲಿ ಅವರ ಉತ್ತಮ ನಡವಳಿಕೆ ಮತ್ತು  ಸುಧಾರಣೆಯ ಕಡೆಗೆ ಬಲವಾದ ಒಲವನ್ನು ನೋಡಿ,  ಮರಣದಂಡನೆಯ ತೀರ್ಪುಗಳನ್ನು ಕನಿಷ್ಠ 25 ವರ್ಷಗಳವರೆಗೆ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಿತು.

ಇದನ್ನೂ ಓದಿ| ರಾಜೀವ್‌ ಹತ್ಯೆ: ಬ್ಯಾಟರಿ ತಂದುಕೊಟ್ಟಿದ್ದ ಪೆರಾರಿವಾಲನ್‌ 32 ವರ್ಷ ಬಳಿಕ ಬಂಧಮುಕ್ತ

ನ್ಯಾಯಮೂರ್ತಿಗಳಾದ ಯು ಉದಯ್‌ ಲಲಿತ್,  ಎಸ್ ರವೀಂದ್ರ ಭಟ್ ಮತ್ತು ಬೇಲಾ ತ್ರಿವೇದಿ ಅವರ ಪೀಠವು ಶುಕ್ರವಾರ ಪ್ರಕಟಿಸಿದ ತೀರ್ಪಿನಲ್ಲಿ, ಬಚನ್ ಸಿಂಗ್ ವರ್ಸಸ್‌  ಸ್ಟೇಟ್ ಆಫ್ ಪಂಜಾಬ್ (1980) ನಲ್ಲಿ ಮರಣದಂಡನೆ ವಿಧಿಸುವ ಮೊದಲು ಶಿಕ್ಷೆಯ ಪ್ರಮಾಣವನ್ನು ತಗ್ಗಿಸುವ ಸಂದರ್ಭಗಳನ್ನು ನಿರ್ಣಯಿಸುವ ಅಗತ್ಯವಿದೆ ಎಂದು ಒತ್ತಿಹೇಳಿದೆ. ಶಿಕ್ಷೆಯ ಪ್ರಮಾಣ ಪ್ರಕಟಿಸುವ ಮುನ್ನ ಈ  ಏಳು ಅಂಶಗಳನ್ನು ವಿಶ್ಲೇಷಿಸುವಂತೆ ಅದು ಸೂಚಿಸಿದೆ. ಅವುಗಳೆಂದರೆ:  ಅಪರಾಧ ಎಸಗಿದ ಸಂದರ್ಭಗಳು (ತೀವ್ರವಾದ ಮಾನಸಿಕ ಅಥವಾ ಭಾವನಾತ್ಮಕ ಅಡಚಣೆಯಿಂದ ಮಾಡಿದ ಕೃತ್ಯ, ಬಲವಂತದ ಸನ್ನಿವೇಶದಲ್ಲಿ ಎಸಗಿದ ಕೃತ್ಯ, ಅಪರಾಧ ಎಸಗಿರುವುದನ್ನು ಆರೋಪಿಯು ನೈತಿಕವಾಗಿ ಸಮರ್ಥಸುವಂತಿದ್ದರೆ),  ಆರೋಪಿಯ ವಯಸ್ಸು, ಘಟನೆಯ ಸಮಯದಲ್ಲಿ ಆತ/ಆಕೆಯ  ಮಾನಸಿಕ ಸ್ಥಿತಿ , ಸುಧಾರಣೆಯ ಸಾಧ್ಯತೆ, ಮತ್ತು ಆರೋಪಿಗಳು ಸಮಾಜಕ್ಕೆ ನಿರಂತರ ಬೆದರಿಕೆಯಾಗಿ ಮುಂದುವರಿಯುತ್ತಾರೆಯೇ ಎಂಬ ಅಂಶಗಳನ್ನು ವಿಶ್ಲೇಷಿಸುವಂತೆ ಸೂಚಿಸಿತು.

ಮರಣದಂಡನೆಯನ್ನು “ಅಪರೂಪದಲ್ಲಿ ಅಪರೂಪದ” ಪ್ರಕರಣಗಳಲ್ಲಿ ಮಾತ್ರ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿತು. ಮರಣದಂಡನೆಯ ಬಗ್ಗೆ ಚರ್ಚಿಸುವಾಗ ಹೆಚ್ಚಿನ ನ್ಯಾಯಾಲಯಗಳು ಉಲ್ಲೇಖಿಸುವ ಸಿದ್ಧಾಂತವಿದು.   ಈ ಕಾರ್ಯವಿಧಾನದ ಅನುಸರಣೆಯನ್ನು ಖಚಿತಪಡಿಸಿಕೊಳ್ಳುವ ವ್ಯವಸ್ಥೆ ಇಲ್ಲದ ಕಾರಣ  ಈಗ ಈ ಮಾರ್ಗಸೂಚಿಗಳನ್ನು ನೀಡಬೇಕಾಯಿತು ಎಂದು  ನ್ಯಾಯ ಪೀಠ ಹೇಳಿದೆ.   ‘ಮರಣದಂಡನೆ ವಿಧಿಸಬಹುದಾದ ಅಪರಾಧ ಪ್ರಕರಣದಲ್ಲಿ- ಸೆಷನ್ಸ್ ನ್ಯಾಯಾಲಯವು ತೀರ್ಪು ಪ್ರಕಟಿಸುವ ಮುನ್ನ- ಸೂಕ್ತ ಹಂತದಲ್ಲಿ, ಆಪಾದಿತರ ಮನೋವೈದ್ಯಕೀಯ ಮತ್ತು ಮಾನಸಿಕ ಮೌಲ್ಯಮಾಪನವನ್ನು ಸರಕಾರವು ಮುಂಚಿತವಾಗಿ ಸಂಗ್ರಹಿಸಿ  ಸಲ್ಲಿಸಬೇಕು” ಎಂದು ತೀರ್ಪು ಹೇಳಿದೆ, ಅಪರಾಧ ಎಸಗುವ ಸಮಯದಲ್ಲಿ ವ್ಯಕ್ತಿಯ ಮನಸ್ಸಿನ ಸ್ಥಿತಿಗತಿಯನ್ನು ಇದು ಖಚಿತಪಡಿಸುತ್ತದೆ.

ಹೆಚ್ಚುವರಿಯಾಗಿ, ಆರೋಪಿಯ ವಯಸ್ಸು, ಕುಟುಂಬದ ಹಿನ್ನೆಲೆ, ಅಪರಾಧ ಹಿನ್ನೆಲೆ, ಶೈಕ್ಷಣಿಕ ಅರ್ಹತೆ ಮತ್ತು ಇತರ ವಿವರಗಳ ಮಾಹಿತಿಯನ್ನು ಸಂಗ್ರಹಿಸಲು ನ್ಯಾಯಾಲಯವು ರಾಜ್ಯಕ್ಕೆ ನಿರ್ದೇಶಿಸಿತು.   “ಜೈಲಿನಲ್ಲಿ ಅಪರಾಧಿಯ ವರ್ತನೆ ಮತ್ತು ನಡವಳಿಕೆ”, “ಜೈಲಿನಲ್ಲಿ ಮಾಡಿದ ಕೆಲಸ” ಮತ್ತು “ಆರೋಪಿಯು ತೊಡಗಿಸಿಕೊಂಡಿರುವ ಚಟುವಟಿಕೆಗಳು”, ಇತರ ವಿವರಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿಯನ್ನು ಒದಗಿಸುವಂತೆ ಜೈಲು ಅಧೀಕ್ಷಕರು ಅಥವಾ ಪರೀಕ್ಷಾ ಅಧಿಕಾರಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಬೇಕು. ಅಂತಹ ವರದಿಯು ಜೈಲಿನಲ್ಲಿನ ಸುಧಾರಣಾ ಪ್ರಗತಿ ಮತ್ತು ಯಾವುದೇ “ಅಪರಾಧ ಸಾಬೀತಿನ ನಂತರದ ಮಾನಸಿಕ ಅಸ್ವಸ್ಥತೆ” ಇರುವಿಕೆಯ ಕುರಿತು “ತಾಜಾ ಮನೋವೈದ್ಯಕೀಯ ಮತ್ತು ಮಾನಸಿಕ ವರದಿಯನ್ನು” ಒಳಗೊಂಡಿರಬೇಕು ಎಂದು ಪೀಠವು ಹೇಳಿದೆ.

ಪೀಠದ 122 ಪುಟಗಳ ತೀರ್ಪನ್ನು ಬರೆಯುತ್ತಾ, ನ್ಯಾಯಮೂರ್ತಿ ಭಟ್, ‘ದುರದೃಷ್ಟಕರ ವಾಸ್ತವವೆಂದರೆ, ವಿಚಾರಣೆಯ ಹಂತದಲ್ಲಿ ಉತ್ತಮವಾಗಿ ದಾಖಲಿಸಲಾದ ವಾಸ್ತವಾಂಶಗಳು, ಶಿಕ್ಷೆಯ ಪ್ರಮಾಣ ತಗ್ಗಿಸುವ ಸಂದರ್ಭಗಳ ಅನುಪಸ್ಥಿತಿಯಲ್ಲಿ, ಹೆಚ್ಚು ಬಲವಾದ ಶಿಕ್ಷೆಯ ತೀರ್ಪನ್ನು ನೀಡುವಂತೆ  ನ್ಯಾಯಾಲಯವನ್ನು ಪ್ರತಿಬಂಧಿಸುತ್ತವೆ. ಹೀಗಾಗಿ ಬಚನ್ ಸಿಂಗ್ ಪರೀಕ್ಷೆಯ ತಪ್ಪಾದ ಅನ್ವಯಿಸುವಿಕೆಯ ಆಧಾರದ ಮೇಲೆ ಮರಣದಂಡನೆಯನ್ನು ವಿಧಿಸಲಾಗುತ್ತದೆ’ ಎಂದು ಹೇಳಿದ್ದಾರೆ.   ಈ ತೀರ್ಪು “ಬಹಳ ಕಾಲದ ನಿರೀಕ್ಷೆಯಾಗಿತ್ತು’ ಎಂದು ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಅವರು ಪ್ರತಿಕ್ರಿಯಿಸಿದ್ದಾರೆ.   “ಇದು ಕೇವಲ ಮನೋವೈದ್ಯಕೀಯ ಮೌಲ್ಯಮಾಪನದ ಬಗ್ಗೆ ಅಲ್ಲ ಆದರೆ ಇಡೀ ಶ್ರೇಣಿಯ ಸನ್ನಿವೇಶಗಳ ಮೌಲ್ಯಮಾಪನವಾಗಿದೆ – ಕುಟುಂಬ, ವಯಸ್ಸು, ಬಡತನ, ಹಿಂದಿನ ಅನ್ಯಾಯ – ಇಂತಹ ಕೆಲವು ಕಾರಣಗಳು ಅಪರಾಧವನ್ನು ಮಾಡುವ ವ್ಯಕ್ತಿಗೆ ಸನ್ನಿವೇಶವನ್ನು ಸೃಷ್ಟಿಸಿತು ಎಂಬುದನ್ನು  ವಿವರಿಸುತ್ತದೆ’ ಎಂದು ಅವರು ಹೇಳಿದರು.  

ಬಚನ್ ಸಿಂಗ್ ತೀರ್ಪಿನ ನಂತರ ನಾಲ್ಕು ದಶಕಗಳವರೆಗೆ, ನ್ಯಾಯಾಲಯದ ಪರಿಗಣನೆಗೆ ತಗ್ಗಿಸುವ ಸಂದರ್ಭಗಳನ್ನು ಯೋಜನೆ ಅಥವಾ ವ್ಯವಸ್ಥೆಯ ಅನುಪಸ್ಥಿತಿಯನ್ನು ನ್ಯಾಯಾಲಯ ಗಮನಿಸಿದೆ. “ಅಪರಾಧದ ಕ್ರೌರ್ಯಕ್ಕೆ ಪ್ರತೀಕಾರದ ಪ್ರತಿಕ್ರಿಯೆಗೆ ಒಳಗಾಗುವುದನ್ನು ತಪ್ಪಿಸಲು, ವಿಚಾರಣೆಯ ಹಂತದಲ್ಲಿ ಶಿಕ್ಷೆ ತಗ್ಗಿಸುವ ಸಂದರ್ಭಗಳನ್ನು ಪರಿಗಣಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುವ ತುರ್ತು ಅವಶ್ಯಕತೆಯಿದೆ. ಮೇಲ್ಮನವಿ ಹಂತವನ್ನು ತಲುಪುವ ಬಹುಪಾಲು ಪ್ರಕರಣಗಳಲ್ಲಿನ ಪರಿಸ್ಥಿತಿಯು ಗಮನಾರ್ಹವಾಗಿದೆ. ಇದಕ್ಕಾಗಿ ವಿಚಾರಣಾ ನ್ಯಾಯಾಲಯವು ಆರೋಪಿಗಳು ಮತ್ತು ರಾಜ್ಯದಿಂದ ಮಾಹಿತಿಯನ್ನು ಪಡೆದುಕೊಳ್ಳಬೇಕು” ಎಂದು ಪೀಠ ಹೇಳಿದೆ.

ಇದನ್ನೂ ಓದಿ| ಹೈದರಾಬಾದ್‌ ರೇಪ್‌ ಕೇಸ್‌ ಎನ್‌ಕೌಂಟರ್‌ ಉದ್ದೇಶ ಪೂರ್ವಕ ಎಂದ ಸುಪ್ರೀಂಕೋರ್ಟ್‌ ರಚಿತ ಆಯೋಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಅಶ್ಲೀಲ ವಿಡಿಯೊ ಪ್ರಕರಣ; ಲಿಖಿತ್ ಗೌಡ, ಚೇತನ್‌ಗೆ ಜಾಮೀನು ನಿರಾಕರಣೆ

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಚೇತನ್ ಹಾಗೂ ಲಿಖಿತ್‌ ಬಂಧನವಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಅವರಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ.

VISTARANEWS.COM


on

Prajwal Revanna Case
Koo

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ವಿಡಿಯೊ ವೈರಲ್ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಲಿಖಿತ್ ಗೌಡ ಹಾಗೂ ಚೇತನ್‌ಗೆ ಜಾಮೀನು ತಿರಸ್ಕೃತಗೊಂಡಿದೆ. ಹಾಸನದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದೆ.

ಮೇ 12 ರಂದು ಎಸ್ಐಟಿ ಅಧಿಕಾರಿಗಳು ತಂಡ ಲಿಖಿತ್, ಚೇತನ್‌ರನ್ನು ಬಂಧಿಸಿತ್ತು. ಮೇ 12ರಂದು ಈ ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆದರೆ, ಇದೀಗ ಆರೋಪಿಗಳಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಅಶ್ಲೀಲ ವಿಡಿಯೊ ಹರಿಬಿಟ್ಟವರನ್ನು ವಶಕ್ಕೆ ಪಡೆಯುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ, ಆರೋಪಿಗಳಾದ ಚೇತನ್​ ಹಾಗೂ ಲಿಖಿತ್​ನನ್ನು ಬಂಧಿಸಿದ್ದರು. ಇನ್ನುಳಿದ ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ | CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

HD Revanna released from jail Revanna Go straight to HD Deve Gowda house

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಸೋಮವಾರ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಂಗಳವಾರ (ಮೇ 14) ಬಿಡುಗಡೆ (HD Revanna Released) ಮಾಡಲಾಗಿದೆ.

ಇದರಿಂದಾಗಿ ಒಟ್ಟು 11 ದಿನಗಳ ವನವಾಸದಿಂದ ಎಚ್.ಡಿ. ರೇವಣ್ಣ ಮುಕ್ತರಾದರು. ಈ ವೇಳೆ ರೇವಣ್ಣ ಪರ ವಕೀಲರು ಜಾಮೀನು ಷರತ್ತುಗಳನ್ನು ಪೂರೈಸಿದರು. ರೇವಣ್ಣ ಪಾಸ್ ಪೋರ್ಟ್, ಇಬ್ಬರು ಶ್ಯೂರಿಟಿ, ಐದು ಲಕ್ಷ ರೂಪಾಯಿ ಬಾಂಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ವಕೀಲರು ಸಲ್ಲಿಸಿದ ಬಳಿಕ ರೇವಣ್ಣ ಅವರನ್ನು ಬಿಡುಗಡೆ ಮಾಡಲಾಯಿತು.

ಗುಳಿಕ ಕಾಲದಲ್ಲಿಯೇ ರೇವಣ್ಣ ಜೈಲಿನಿಂದ ರಿಲೀಸ್

ಮಧ್ಯಾಹ್ನ 3:22 ರಿಂದ 5 ಗಂಟೆಯವರೆಗೆ ರಾಹುಕಾಲ ಇರುವ ಹಿನ್ನೆಲೆಯಲ್ಲಿ ಬಿಡುಗಡೆ ಪ್ರಕ್ರಿಯೆಯನ್ನು ಬೇಗ ಮಾಡಲಾಗಿದೆ. ಮಧ್ಯಾಹ್ನ 12.5 ರಿಂದ 1:39ರವರೆಗೆ ಗುಳಿಕ ಕಾಲ ಇದ್ದರಿಂದ 1.30ಕ್ಕೆ ರೇವಣ್ಣ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ರೇವಣ್ಣ ಜೈಲಿನಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಆದರೆ, ಅಲ್ಲಿ ಕ್ಷಣವೂ ನಿಲ್ಲದ ಎಚ್‌.ಡಿ. ರೇವಣ್ಣ ಸೀದಾ ಪದ್ಮನಾಭನಗರದಲ್ಲಿರುವ ಎಚ್‌.ಡಿ.ದ ದೇವೇಗೌಡ ಅವರ ನಿವಾಸಕ್ಕೆ ಹೊರಟಿದ್ದಾರೆ.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

ಎಚ್.ಡಿ. ರೇವಣ್ಣಗೆ ಜಾಮೀನು ಸಿಗುವುದಕ್ಕೆ ಕಾರಣಗಳೇನು?

  • ರೇವಣ್ಣ ಅವರೇ ಕಿಡ್ನ್ಯಾಪ್ ಮಾಡಿಸಿದ್ದು ಎನ್ನುವುದಕ್ಕೆ ಸಾಕ್ಷಿ ಇಲ್ಲ.
  • ಸಿಆರ್‌ಪಿಸಿ ಅಡಿ ಸಂತ್ರಸ್ತೆ ನೀಡಿದ್ದ ಹೇಳಿಕೆಯಲ್ಲೂ ಪ್ರಸ್ತಾಪ ಇಲ್ಲ.
  • ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಸಾಕ್ಷಿ ಒದಗಿಸಲು ಎಸ್‌ಐಟಿ ವಿಫಲವಾಗಿದೆ.
  • ಎಚ್‌.ಡಿ. ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್ ಅನ್ನಲು ಸಾಕ್ಷಿ ಇಲ್ಲ.
  • ರೇವಣ್ಣ ಅವರಿಗೆ ಏಕೆ ಜಾಮೀನು ಕೊಡಲಾಗುತ್ತಿದೆ ಎಂಬುದಾಗಿ ಈ ಮೇಲಿನ ಕಾರಣಗಳನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ಪಷ್ಟವಾಗಿ ಆದೇಶಿಸಿದ್ದಾರೆ. ಆದರೆ, ಕೆಲವು ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

8 ಷರತ್ತುಗಳನ್ನು ವಿಧಿಸಿ ಬೇಲ್ ಕೊಟ್ಟ ಕೋರ್ಟ್!

  • 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಕೊಡಬೇಕು
  • ಇಬ್ಬರ ಶ್ಯೂರಿಟಿಯನ್ನು ಒದಗಿಸಿಕೊಡಬೇಕು
  • ಯಾವ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದು
  • ಕೇಸ್ ಆಗಿರುವ ಕೆ.ಆರ್.ನಗರಕ್ಕೆ ಹೋಗಬಾರದು
  • ಎಸ್‌ಐಟಿ ತನಿಖೆಗೆ ಸೂಕ್ತ ಸಹಕಾರ ನೀಡಲೇಬೇಕು
  • ಯಾವುದೇ ರೀತಿಯ ಸಾಕ್ಷ್ಯ ನಾಶ ಮಾಡಬಾರದು
  • ಪಾಸ್ ಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು.
  • ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯದಿಂದ ಹೊರಹೋಗುವಂತಿಲ್ಲ.
Continue Reading

ಬೆಂಗಳೂರು

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

Theft Case : ಬೆಂಗಳೂರಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಕಳ್ಳತನದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಕ್ಕದ ಮನೆಯನ್ನೇ ದೋಚಿದ ಚೋರ್‌ ದಂಪತಿ, ನಂಬಿ ಕೆಲಸ ಕೊಟ್ಟ ಮಾಲೀಕನ ಕಚೇರಿಗೆ ಕನ್ನ ಹಾಕಿದ ಕಳ್ಳ ಕೆಲಸಗಾರನನ್ನು ಜೈಲಿಗಟ್ಟಿದ್ದಾರೆ.

VISTARANEWS.COM


on

By

theft case
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮನೆ ಕಟ್ಟಲೆಂದು ಮಗನಿಗೆ ಹೆಲ್ತ್‌ ಇನ್‌ಸೆಕ್ಟರ್‌ವೊಬ್ಬರು 50 ಲಕ್ಷ ರೂ. ಹಣ ಕೊಟ್ಟಿದ್ದರು. ಈ ವಿಷಯ ಮೊಮ್ಮಗಳಿಗೆ ಅದ್ಹೇಗೋ ಗೊತ್ತಾಗಿತ್ತು. ಕಂತೆ ಕಂತೆ ಹಣ ಕಂಡ ಮೊಮ್ಮಗಳು, ಆ ಹಣದಲ್ಲಿ ಫ್ರೆಂಡ್‌ ಜತೆಗೆ ಪಾರ್ಟಿ ಅಂತ ಮಸ್ತ್‌ ಮಜಾ ಮಾಡುತ್ತಿದ್ದಳು. ಆಕೆಯ ಲೈಫ್‌ಸ್ಟೈಲ್‌ ಕಂಡ ಪಕ್ಕದ ಮನೆ ದಂಪತಿ ಯುವತಿಗೆ ಬ್ಲಾಕ್‌ ಮಾಡಿ ಬರೋಬ್ಬರಿ 25 ಲಕ್ಷ ರೂ. ಸುಲಿಗೆ ಮಾಡಿದ್ದರು. ಅಷ್ಟಕ್ಕೆ ಸುಮ್ಮನಾಗದ ಈ ಖತರ್ನಾಕ್‌ ದಂಪತಿ ಮನೆಗಳ್ಳತನ (Theft Case) ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾರೆ. ಇವರಿಗೆ ಸಾಥ್‌ ಕೊಟ್ಟ ರೌಡಿಶೀಟರ್‌ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ಸಲ್ಮಾನ್ ಖಾನ್ @ ಹಂಡ ಸಲ್ಮಾನ್, ಅಸ್ಘರ್ ಮೆಹಬಿ, ಫಾತಿಮಾ, ಮೋಹಿದ್ ರಜ್‌ ಬಂಧಿತ ಮನೆಗಳ್ಳರಾಗಿದ್ದರೆ. ಬಂಧಿತರಿಂದ 24 ಲಕ್ಷ ನಗದು,150 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈ ನಾಲ್ವರು ನೆರೆ ಮನೆಯ ನಾಜಿಮಾ ಅಪ್ಸಾನ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು.

theft case

ನಾಜಿಮಾ ಪತಿ ಮೊಹಮ್ಮದ್ ಸಾಬುದೀನ್‌ಗೆ ಅವರ ತಂದೆ 50 ಲಕ್ಷ ರೂ. ನೀಡಿದ್ದರು. ಸಾಬುದೀನ್ ತಂದೆ ಹೆಲ್ತ್ ಇನ್ಸ್‌ಪೆಕ್ಟರ್ ಆಗಿದ್ದರು. ಹೀಗಾಗಿ ಮನೆ ಖರೀದಿ ಮಾಡಲು ಸಾಬುದೀನ್‌ಗೆ 50 ಲಕ್ಷ ರೂ. ನೀಡಿದ್ದರು. ಅನಂತರ ಅನಾರೋಗ್ಯದಿಂದ ಮೃತಪಟ್ಟಿದ್ದರು. ನಾಜಿಮಾ ಮತ್ತು ಸಾಬುದೀನ್ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇದರಲ್ಲಿ ಎರಡನೇ ಮಗಳಿಗೆ ಮನೆಯಲ್ಲಿ ಹಣ ಇರುವುದು ಗೊತ್ತಾಗಿತ್ತು. ಪೋಷಕರಿಗೆ ತಿಳಿಯದಂತೆ 2ನೇ ಮಗಳು ಸ್ನೇಹಿತರ ಜತೆಗೆ ಪಾರ್ಟಿ ಮಾಡಲು ಹಣ ಖರ್ಚು ಮಾಡುತ್ತಿದ್ದಳು.

ಇದೆಲ್ಲವನ್ನು ಪಕ್ಕದ ಮನೆಯಲ್ಲಿದ್ದ ಫಾತಿಮಾ ಹಾಗೂ ಮೋಹಿದ್ ರಜ್‌ ದಂಪತಿ ಗಮನಿಸಿದ್ದರು. ಬಳಿಕ ನಿನ್ನ ತಂದೆ -ತಾಯಿಯನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಸಿ 2ನೇ ಮಗಳಿಂದ ಕಳೆದೊಂದು ಒಂದು ವರ್ಷದಿಂದ ಹಂತ ಹಂತವಾಗಿ 25 ಲಕ್ಷ ರೂ. ಸುಲಿಗೆ ಮಾಡಿದ್ದರು. ಹಣದ ರುಚಿಕೊಂಡ ಈ ಚೋರ್‌ ದಂಪತಿ ಮತ್ತಷ್ಟು ಹಣ ಇರಬಹುದು ಎಂದು ಹೊಂಚು ಹಾಕಿದ್ದರು. ಇದಕ್ಕಾಗಿ ರೌಡಿಶೀಟರ್ ಸಲ್ಮಾನ್ ಖಾನ್, ಅಸ್ಘರ್ ಮೆಹಬಿ ಸಂಪರ್ಕ ಮಾಡಿದ್ದರು. ಅವರ ಮೂಲಕ ಮನೆ ಕಳ್ಳತನ ಮಾಡಿಸಲು ಪ್ಲಾನ್ ಮಾಡಿದ್ದರು. ಬೇಸಿಗೆ ರಜೆ ಇದ್ದಿದ್ದನ್ನೇ ಬಂಡವಾಳ ಮಾಡಿಕೊಂಡಿದ್ದರು.

ಮೇ 7ರಂದು ಸಾಬುದ್ದೀನ್‌ನ ಮಕ್ಕಳಿಬ್ಬರು ಹುಟ್ಟೂರಾದ ಹಿರಿಯೂರಿಗೆ ತೆರಳಿದರು. ಇತ್ತ ಸಾಬುದ್ದೀನ್ ಕೆಲಸಕ್ಕೆ ಹೋದಾಗ, ಹಿಂಬದಿ ಬಾಗಿಲು ಮುರಿದು ಕಳ್ಳತನ ಮಾಡಿ ಮುಂಬೈ ಪರಾರಿ ಆಗಲು ಮುಂದಾಗಿದ್ದರು. ಮುಂಬೈ ಕಡೆಗೆ ಹೊರಟಿದ್ದ ಪ್ರಮುಖ ಆರೋಪಿಗಳಾದ ಸಲ್ಮಾನ್, ಅಸ್ಗರ್‌ನನ್ನು ಕೃತ್ಯದ ನಡೆದ 6 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಸಿಕ್ಕಿದ್ದು ಹೇಗೆ?

ಗಾಂಧಿನಗರ ವಿಆರ್‌ಎಲ್ ಬಸ್ ನಿಲ್ದಾಣ ಬಳಿ ಮೊಬೈಲ್ ಲೊಕೇಶನ್ ಆಫ್‌ ಆಗಿತ್ತು. ಹೀಗಾಗಿ ಆರೋಪಿಗಳು ಬಸ್‌ನಲ್ಲಿಯೆ ಹೊರಟಿರಬಹುದು ಎಂದು ಪೊಲೀಸರು ಶಂಕಿಸಿದರು. ಹಾಗಾಗಿ ಟ್ರಾವೆಲ್ ಏಜೆನ್ಸಿಗೆ ಆರೋಪಿಗಳ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಇಬ್ಬರ ಹೆಸರಲ್ಲಿ ಎಸ್‌ಆರ್‌ಎಸ್‌ ಬಸ್‌ನಲ್ಲಿ ಮುಂಬೈಗೆ ಟಿಕೆಟ್ ಬುಕ್ ಆಗಿತ್ತು. ಕೂಡಲೇ ಚಾಲಕನಿಗೆ ಕರೆ ಮಾಡಿ ಬಸ್‌ನಲ್ಲಿ ಆರೋಪಿಗಳಿರುವ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ಚಾಲಕ ನೇರವಾಗಿ ಬಸ್‌ ಅನ್ನು ಚಿತ್ರದುರ್ಗ ರೂರಲ್ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದರು. ಕೂಡಲೇ ಚಿತ್ರದುರ್ಗ ರೂರಲ್ ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಅಶೋಕನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

ಕೆಲಸ ಕೊಟ್ಟ ಮಾಲೀಕನಿಗೆ ದ್ರೋಹ

ನಂಬಿ‌ ಕೆಲಸ ಕೊಟ್ಟ ಮಾಲೀಕನಿಗೆ ಕೆಲಸಗಾರನೊಬ್ಬ ದ್ರೋಹ ಬಗೆದಿದ್ದಾನೆ. ಮಾಲೀಕ ಹಣ ಇಡುವುದನ್ನು ನೋಡಿಕೊಂಡ ಕೆಲಸಗಾರ ಹಣವನ್ನೆಲ್ಲ ದೋಚಿ ಎಸ್ಕೇಪ್‌ ಆದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಹೇಶ್‌ ಎಂಬಾತ ಕೆ.ಎನ್.ಎಸ್ ಇನ್ಪ್ರಾಕ್ಚರ್ ಕಂಪೆನಿಯಲ್ಲಿ ಕೆಲಸಕ್ಕೆ ಸೇರಿದ್ದ. ಕಂಪೆನಿ ಮಾಲೀಕ ಕಛೇರಿಯಲ್ಲಿ ಹಣ ಇಡುವುದನ್ನು ಗಮನಿಸಿದ್ದ. ಕಛೇರಿಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಹಣ ದೋಚಿ ಪರಾರಿಯಾಗಿದ್ದ. ಪರಾರಿಯಾದ ಮಹೇಶ್‌ ಸುಬ್ರಮಣ್ಯದ ಮೂಲಕ ಮಡಿಕೇರಿಯ ಹೊಂ ಸ್ಟೇ ಸೇರಿಕೊಂಡು ತಲೆ ಮರೆಸಿಕೊಂಡಿದ್ದ.ಆರೋಪಿ ಮಾಹಿತಿ ಪಡೆದು ಮಡಿಕೇರಿಯಲ್ಲಿ ಹಣ ಸಹಿತ ಮಹೇಶ್‌ನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 24.50 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.

ಕುಖ್ಯಾತ ಆರೋಪಿ ಅರೆಸ್ಟ್‌

ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಕಾರ್ಯಚರಣೆ ನಡೆಸಿ ‌ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ಮೂರು ಮನೆ ಕಳ್ಳತನ ‌ನಡೆಸಿ ತಲೆ ಮರೆಸಿಕೊಂಡಿದ್ದ ಸಯ್ಯದ್ ಅಹ್ಮದ್ @ ಸಯ್ಯದ್ ಬಂಧಿತ‌ ಆರೋಪಿಯಾಗಿದ್ದಾನೆ. ಬಂಧಿತನಿಂದ 653 ಗ್ರಾಂ ಚಿನ್ನಾಭರಣ 22 ಗ್ರಾಂ ವಜ್ರ ಸೇರಿದಂತೆ 1 ಕೆ.ಜಿ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು‌ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಕೊಲೆ ಸೇರಿದಂತೆ 40 ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಬೆಂಗಳೂರು ಸೇರಿದಂತೆ ಮೈಸೂರಿನ ವಿವಿ ಪುರಂನಲ್ಲಿ ಕೈ ಚಳಕ ತೋರಿದ್ದಾನೆ

ವಿದೇಶಿಗರು ಅರೆಸ್ಟ್‌

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದಿಂದ ವಿಶೇಷ ಕಾರ್ಯಚರಣೆ ನಡೆಸಿ ವಿದೇಶಿಗರು ಸೇರಿ ಒಟ್ಟು ಎಂಟು ಜನರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 2.74 ಕೋಟಿ ಮೌಲ್ಯದ ಡ್ರಗ್ಗ್ ವಶಕ್ಕೆ ಪಡೆಯಲಾಗಿದೆ. ಸಂಪಿಗೆಹಳ್ಳಿ, ವಿವಿಪುರಂ, ಕಾಟನ್ ಪೇಟೆ, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

HD Revanna Released: ಮನೆಗೆ ಧಾವಿಸಿದ ಹಿರಿಯ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಮೊದಲಿಗೆ ಬೆಳಗ್ಗೆ ಮನೆಯಲ್ಲಿ ಮಾಡಿಸಲಾಗಿದ್ದ ದೇವರ ಪೂಜೆಯ ಪ್ರಸಾದವನ್ನು ಕೊಡಲಾಯಿತು. ಬಳಿಕ ಎಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತರು. ಊಟದ ಸಮಯದಲ್ಲಿ ರೇವಣ್ಣ ಅವರು ಎಸ್‌ಐಟಿ ವಶ ಹಾಗೂ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಹೇಳಿಕೊಂಡಿದ್ದಾರೆನ್ನಲಾಗಿದೆ. ಇನ್ನು ಭವಾನಿ ರೇವಣ್ಣ ಹಾಗೂ ಸೂರಜ್ ರೇವಣ್ಣ ಅಂತರ ಕಾಯ್ದುಕೊಂಡರಾ ಎಂಬ ಪ್ರಶ್ನೆ ಮೂಡುತ್ತಿದೆ.

VISTARANEWS.COM


on

HD Revanna released from jail Revanna Go straight to HD Deve Gowda house
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಜಾಮೀನು ಸಿಕ್ಕ ಮೇಲೆ ಬಿಡುಗಡೆಯಾಗಿ (HD Revanna Released) ಹೊರಬಂದಿದ್ದಾರೆ. ವಿಪರ್ಯಾಸವೆಂದರೆ ಅವರ ತಂದೆ ಉದ್ಘಾಟನೆ ಮಾಡಿದ್ದ ಪರಪ್ಪನ ಅಗ್ರಹಾರ ಜೈಲು ಸೇರಿ ಅಲ್ಲಿಂದ ಹೊರಬೇಕಾಯಿತು. ಇನ್ನು ರೇವಣ್ಣ ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (HD Devegowda) ನಿವಾಸಕ್ಕೆ ತೆರಳಿದ್ದು, ಅವರನ್ನು ಕಂಡ ಕೂಡಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Devegowda) ತಬ್ಬಿಕೊಂಡು ಸ್ವಾಗತಿಸಿದರು. ಇನ್ನು ಕುಟುಂಬಸ್ಥರನ್ನು ಕಂಡಕೂಡಲೇ ರೇವಣ್ಣ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಹನ್ನೊಂದು ದಿನಗಳ ಹಿಂದೆ ಇದೇ ದೇವೇಗೌಡರ ಮನೆಯಲ್ಲಿ ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಸೀದಾ ಅಲ್ಲಿಗೇ ಎಚ್‌.ಡಿ. ರೇವಣ್ಣ ಬಂದಿದ್ದಾರೆ. ಇದಕ್ಕಿಂತ ಮುಂಚಿತವಾಗಿ ಎಚ್‌.ಡಿ. ದೇವೇಗೌಡರು ಮನೆಯಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದ್ದರು. ರೇವಣ್ಣ ಮನೆಗೆ ಎಂಟ್ರಿ ಆದ ತಕ್ಷಣ ಅವರನ್ನು ತಬ್ಬಿಕೊಂಡ ಕುಮಾರಸ್ವಾಮಿ ಸಂತೈಸಿದರು. ಅಲ್ಲಿಂದ ಸೀದಾ ಒಳಗೆ ಹೋದ ರೇವಣ್ಣ ಅವರು ಎಚ್‌.ಡಿ. ದೇವೇಗೌಡರ ಕೋಣೆಗೆ ಎಂಟ್ರಿ ಕೊಟ್ಟರು.
ದೇವೇಗೌಡರನ್ನು ನೋಡಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದರು ಎನ್ನಲಾಗಿದೆ. ಜತೆಗೆ ತಾಯಿ ಚನ್ನಮ್ಮ ಅವರ ಆಶೀರ್ವಾದವನ್ನೂ ಈ ವೇಳೆ ರೇವಣ್ಣ ಪಡೆದುಕೊಂಡರು.

ಭವಾನಿ ರೇವಣ್ಣ ನೆಗ್ಲೆಟ್‌?

ಎಚ್‌.ಡಿ. ರೇವಣ್ಣ ಅವರಿಗೆ ಸೋಮವಾರ ಸಂಜೆಯೇ ಬೇಲ್‌ ಸಿಕ್ಕರೂ ಭವಾನಿ ರೇವಣ್ಣ ಅವರ ಸುದ್ದಿಯೇ ಇಲ್ಲವಾಘಿದೆ. ಇನ್ನು ಪದ್ಮನಾಭ ನಗರದ ದೇವೇಗೌಡರ ನಿವಾಸಕ್ಕೂ ಅವರು ಆಗಮಿಸಲಿಲ್ಲ. ರೇವಣ್ಣ ಜೈಲಿಗೆ ಹೋದಾಗಲೂ ನೋಡಲು ಹೋಗಲಿಲ್ಲ. ರೇವಣ್ಣ ಎಸ್ಐಟಿ ಕಸ್ಟಡಿಯಲ್ಲಿ ಇದ್ದಾಗಲೂ ಬರಲಿಲ್ಲ. ಬಿಡುಗಡೆ ಆಗಿ ದೇವೇಗೌಡರ ನಿವಾಸಕ್ಕೆ ರೇವಣ್ಣ ಬಂದರೂ ಅತ್ತ ಕಡೆ ಸುಳಿಯದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತರ ಕಾಯ್ದುಕೊಂಡರಾ ಭವಾನಿ ಹಾಗೂ ಸೂರಜ್ ರೇವಣ್ಣ?

ಭವಾನಿ ರೇವಣ್ಣ ಹಾಗೂ ಸೂರಜ್ ರೇವಣ್ಣ ಅಂತರ ಕಾಯ್ದುಕೊಂಡರಾ ಎಂಬ ಪ್ರಶ್ನೆ ಮೂಡುತ್ತಿದೆ. ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಗ್ಗೆ ಅಸಹನೆಯಾ? ಇಲ್ಲವೇ ಪ್ರಜ್ವಲ್ ಕೇಸ್‌ ಬಗ್ಗೆ ಸಮರ್ಥನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೀಗೆ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ದೇವೇಗೌಡರ ಜತೆ ಊಟಕ್ಕೆ ಕುಳಿತ ಮಕ್ಕಳು; ಕಂಪ್ಲೇಂಟ್‌ ಹೇಳಿದರಾ ರೇವಣ್ಣ?

ಮನೆಗೆ ಧಾವಿಸಿದ ಹಿರಿಯ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಮೊದಲಿಗೆ ಬೆಳಗ್ಗೆ ಮನೆಯಲ್ಲಿ ಮಾಡಿಸಲಾಗಿದ್ದ ದೇವರ ಪೂಜೆಯ ಪ್ರಸಾದವನ್ನು ಕೊಡಲಾಯಿತು. ಬಳಿಕ ಎಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತರು. ಊಟದ ಸಮಯದಲ್ಲಿ ರೇವಣ್ಣ ಅವರು ಎಸ್‌ಐಟಿ ವಶ ಹಾಗೂ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಹೇಳಿಕೊಂಡಿದ್ದಾರೆನ್ನಲಾಗಿದೆ.

ಎಸ್ಐಟಿ ಅಧಿಕಾರಿಗಳು ತನಿಖೆ ನೆಪದಲ್ಲಿ ಏನೆಲ್ಲ ಪ್ರಶ್ನೆಗಳನ್ನು ಕೇಳಿದರು? ಯಾವ ಮಾದರಿಯ ಪ್ರಶ್ನೆಗಳು ಇದ್ದವು? ಯಾವೆಲ್ಲ ಒತ್ತಡವನ್ನು ನೀಡಿದರು? ಎಂಬಿತ್ಯಾದಿ ವಿಷಯಗಳ ಬಗ್ಗೆ ಎಚ್‌.ಡಿ. ರೇವಣ್ಣ ಅವರು ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ಷಡ್ಯಂತ್ರದ ಬಗ್ಗೆ ಚರ್ಚೆ?

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ನಿಷ್ಪಕ್ಷಪಾತ ತನಿಖೆಯನ್ನು ನಡೆಸಲಾಗುತ್ತಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮಧ್ಯಪ್ರವೇಶ ಮಾಡಿದ್ದಾರೆ. ರಾಜಕೀಯವಾಗಿ ಏನೆಲ್ಲ ಷಡ್ಯಂತ್ರ ನಡೆಯುತ್ತಿದೆ ಎಂಬ ಬಗ್ಗೆ ಈಗಾಗಲೇ ಆರೋಪ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯವನ್ನು ರೇವಣ್ಣ ಮುಂದೆ ಪ್ರಸ್ತಾಪ ಮಾಡಿದ್ದಾರೆನ್ನಲಾಗಿದೆ. ಅಲ್ಲದೆ, ರಾಜಕೀಯ ಷಡ್ಯಂತ್ರದ ಜತೆಗೆ ಮುಂದಿನ ನಡೆ ಏನು ಎಂಬ ಬಗ್ಗೆಯೂ ತಂದೆ ಮತ್ತು ಮಕ್ಕಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಜೆಡಿಎಸ್‌ ಶಾಸಕರು, ಮುಖಂಡರ ಜತೆ ರೇವಣ್ಣ ಚರ್ಚೆ

ಈ ವೇಳೆ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಜೆಡಿಎಸ್‌ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಕೆ ಆರ್ ಪೇಟೆ ಶಾಸಕ ಎಚ್.ಡಿ. ಮಂಜುನಾಥ್, ಮಾಗಡಿ ಮಾಜಿ ಶಾಸಕ ಮಂಜುನಾಥ್ ಸೇರಿದಂತೆ ಹಲವರು ಆಗಮಿಸಿದ್ದಾರೆ. ಇನ್ನು ಎಚ್‌.ಡಿ. ರೇವಣ್ಣ ಸಹ ಕೆಲವು ಪ್ರಮುಖರ ಜತೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

Continue Reading

ಕ್ರೈಂ

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

Road Accident: ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಉಡುಪಿಯಲ್ಲಿ ಸ್ಕೂಟರ್‌ಗೆ‌ ಟ್ರಕ್‌ ಡಿಕ್ಕಿ ಹೊಡೆದರೆ, ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಗುದ್ದಿದೆ. ಚಿತ್ರದುರ್ಗದಲ್ಲಿ ಲಾರಿ- ಬಸ್ ನಡುವೆ ಅಪಘಾತ ನಡೆದರೆ, ಚಿಕ್ಕಮಗಳೂರಲ್ಲಿ ರಸ್ತೆ ಮಧ್ಯೆ ಐರಾವತ ಬಸ್ ಹೊತ್ತಿ ಉರಿದಿದೆ.

VISTARANEWS.COM


on

By

Road Accident
Koo

ಉಡುಪಿ/ಮಂಡ್ಯ/ಚಿತ್ರದುರ್ಗ/ ಚಿಕ್ಕಮಗಳೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ನಾಲ್ಕು ಅಪಘಾತದಲ್ಲಿ ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿ ಸ್ಕೂಟರ್‌ಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಕಟ್ಟಡವೊಂದರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯೊಬ್ಬರು ಸ್ಕೂಟರ್‌ನಲ್ಲಿ ನೇರವಾಗಿ ಹೋಗುತ್ತಿದ್ದರು. ಈ ವೇಳೆ ಲೆಫ್ಟ್ ಟರ್ನ್ ತೆಗೆದುಕೊಳ್ಳುವ ಧಾವಂತದಲ್ಲಿ ಟ್ರಕ್‌ ಸ್ಕೂಟಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮಹಿಳೆ ಸ್ಕೂಟರ್‌ ಸಮೇತ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಟ್ರಕ್ ಚಾಲಕ ತಕ್ಷಣ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ದುರಂತ ತಪ್ಪಿದೆ. ಒಂದು ತಿಂಗಳ ಹಿಂದೆಯಷ್ಟೇ ಇದೇ ಸ್ಥಳದಲ್ಲಿ ಇದೇ ರೀತಿಯ ಅಪಘಾತ ನಡೆದಿತ್ತು.

Road Accident

ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಕಾರೊಂದು ಗುದ್ದಿದೆ. ಮಂಡ್ಯದ ಹನಕೆರೆ ಗ್ರಾಮದ ಸಮೀಪದ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಅಪಘಾತ ನಡೆದಿದೆ. ಕೇರಳ ಮೂಲದ ಮೂವರಿಗೆ ಗಂಭೀರ ಗಾಯವಾಗಿದೆ. ಕೇರಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹೈವೆಯಲ್ಲಿ ಉರುಳಿಬಿದ್ದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಚಿತ್ರದುರ್ಗದಲ್ಲಿ ಲಾರಿ- ಬಸ್ ನಡುವೆ ಅಪಘಾತ

ಚಿತ್ರದುರ್ಗ ತಾಲೂಕಿನ ವಿಜಾಪುರ ಗ್ರಾಮದದಲ್ಲಿ ಲಾರಿ ಹಾಗೂ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ವೋಲ್ವೋ ಬಸ್‌ ಹೊರಟಿತ್ತು. ಈ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದು ವೋಲ್ವೋ ಬಸ್‌ ಜಮೀನಿಗೆ ನುಗ್ಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಮಗಳೂರಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಐರಾವತ ಬಸ್

ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಚಾಲಕನ-ನಿರ್ವಾಹಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿದ್ದ ಎ.ಸಿ ಬಸ್‌ನಲ್ಲಿ ಡ್ರೈವರ್-ಕಂಡಕ್ಟರ್ ಸೇರಿ 40 ಮಂದಿ ಪ್ರಯಣಿಕರಿದ್ದರು. ತರೀಕೆರೆ ತಾಲೂಕಿನ ನೇರಲಕೆರೆ ಕ್ರಾಸ್ ಬಳಿ ಬೆಳಗಿನ ಜಾವ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಇದನ್ನೂ ಗಮನಿಸಿದ ಚಾಲಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬಳಿಕ ನೋಡನೋಡುತ್ತಿದ್ದ ಐರಾವತ ಎಸಿ ಸ್ಲೀಪರ್ ಬಸ್ ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Milk Products
ಆಹಾರ/ಅಡುಗೆ47 seconds ago

Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Prajwal Revanna Case
ಕರ್ನಾಟಕ7 mins ago

Prajwal Revanna Case: ಅಶ್ಲೀಲ ವಿಡಿಯೊ ಪ್ರಕರಣ; ಲಿಖಿತ್ ಗೌಡ, ಚೇತನ್‌ಗೆ ಜಾಮೀನು ನಿರಾಕರಣೆ

Image-Fantastic Dragon Jewellery!
ಫ್ಯಾಷನ್31 mins ago

Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಆವರಿಸಿದ ಚಿತ್ರ-ವಿಚಿತ್ರ ಡ್ರಾಗನ್‌ ಜ್ಯುವೆಲರಿಗಳು!

Silicon City Hospital doctors successful surgery on girl suffering from Arterio Venus malpermation
ಬೆಂಗಳೂರು35 mins ago

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

CM Siddaramaiah says Our government is stable for 5 years BJP will disintegrate
Lok Sabha Election 202441 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

Team India New Head Coach
ಕ್ರೀಡೆ44 mins ago

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Money Guide
ಮನಿ-ಗೈಡ್55 mins ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Hebbal Flyover
ಪ್ರಮುಖ ಸುದ್ದಿ1 hour ago

Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

DK Shivakumar hits back at HD Kumaraswamy
ರಾಜಕೀಯ1 hour ago

HD Kumaraswamy: ಎಚ್‌ಡಿಕೆ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಿಕೊಳ್ಳಲಿ: ಡಿಕೆ ಶಿವಕುಮಾರ್ ತಿರುಗೇಟು

theft case
ಬೆಂಗಳೂರು2 hours ago

Theft Case : ಪಕ್ಕದ ಮನೆಗೆ ಕನ್ನ ಹಾಕಿದ ಚೋರ್‌ ದಂಪತಿ; ಕೆಲಸ ಕೊಟ್ಟ ಮಾಲೀಕನನ್ನೇ ದೋಚಿದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 202441 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ5 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು6 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ13 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ23 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ23 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ24 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ24 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌