Murder Case : ಮದುವೆಗೆ ಪೀಡಿಸುತ್ತಿದ್ದ ಪ್ರಿಯಕರ; ಬ್ಲ್ಯಾಕ್‌ಮೇಲ್‌ ಮಾಡಿದವನ ಕೊಂದ ತಂದೆ! Vistara News

ಕರ್ನಾಟಕ

Murder Case : ಮದುವೆಗೆ ಪೀಡಿಸುತ್ತಿದ್ದ ಪ್ರಿಯಕರ; ಬ್ಲ್ಯಾಕ್‌ಮೇಲ್‌ ಮಾಡಿದವನ ಕೊಂದ ತಂದೆ!

Murder Case : ಮದುವೆ ಮಾಡಿಸದಿದ್ದರೆ ನಿಮ್ಮ ಮಗಳ ಫೋಟೊವನ್ನು ವೈರಲ್‌ ಮಾಡುವುದಾಗಿ ಯುವಕನೊಬ್ಬ ಬೆದರಿಕೆ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಯುವತಿ ತಂದೆ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

VISTARANEWS.COM


on

Devid and manjunath
ಹತ್ಯೆಯಾದ ಡೇವಿಡ್‌ ಹಾಗೂ ಆರೋಪಿ ಮಂಜುನಾಥ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಗಳನ್ನು ಪ್ರೀತಿಸುತ್ತಿದ್ದ ಯುವಕನನ್ನು ಕರೆಸಿ ರಾಡ್‌ನಿಂದ ಹಲ್ಲೆ‌ ಮಾಡಿ ಚಾಕುವಿನಿಂದ ಇರಿದು ಹತ್ಯೆ (Murder Case) ಮಾಡಲಾಗಿದೆ. ಬೆಂಗಳೂರಿನ ಅಶೋಕನಗರ ವ್ಯಾಪ್ತಿಯ ಸುಬ್ಬಣ್ಣ ಗಾರ್ಡನ್ ಬಳಿ ಘಟನೆ ನಡೆದಿದೆ. ಡೇವಿಡ್ (22) ಕೊಲೆಯಾದವನು. ಯುವತಿ ತಂದೆ ಮಂಜುನಾಥ್ ಎಂಬಾತನಿಂದ ಕೃತ್ಯ ನಡೆದಿದೆ.

ವಿಲ್ಸನ್ ಗಾರ್ಡನ್ ವಿನಾಯಕ ನಗರದಲ್ಲಿ ಮಂಜುನಾಥ್‌ ಕುಟುಂಬ ವಾಸವಾಗಿತ್ತು. ಆಟೋ ಡ್ರೈವರ್ ಆಗಿದ್ದ ಡೇವಿಡ್‌ ಹಾಗೂ ಮಂಜುನಾಥ್ ಅವರ ಮಗಳು ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಮದುವೆ ಮಾಡಿ ಕೊಡುವಂತೆ ಪದೇಪದೆ ಪೀಡಿಸುತ್ತಿದ್ದ. ಮದುವೆಗೆ ನಿರಾಕರಿಸಿದರೆ ಮಗಳೊಂದಿಗೆ ಇರುವ ಫೋಟೊಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.

ನಿಮ್ಮ ಮಗಳ ಫೋಟೊ, ವಿಡಿಯೊ ನನ್ನ ಬಳಿ ಇದೆ ಎಂದು ಡೇವಿಡ್ ಹೆದರಿಸುತ್ತಿದ್ದ. ಇದರಿಂದ ಮಗಳ ಮರ್ಯಾದೆ ಎಲ್ಲಿ ಹಾಳಾಗಿ ಬಿಡುತ್ತೆ ಎಂದು ಆತಂಕಗೊಂಡ ಮಂಜುನಾಥ್‌ ಅವರು ಡೇವಿಡ್‌ನನ್ನು ಕೊಂದು ಬಿಡುವ ನಿರ್ಧಾರಕ್ಕೆ ಬಂದಿದ್ದಾರೆ.

ಮಾತನಾಡುವ ನೆಪದಲ್ಲಿ ಡೇವಿಡ್‌ನನ್ನು ಕರೆಸಿಕೊಂಡ ಮಂಜುನಾಥ್‌ ರಾಡ್‌ನಿಂದ ಹೊಡೆದಿದ್ದಾರೆ. ಬಳಿಕ ಡೇವಿಡ್‌ ಕೆಳಗೆ ಬೀಳುತ್ತಿದ್ದಂತೆ ಚಾಕುವಿನಿಂದ ಇರಿದು ನಂತರ ಹಾಲೋಬ್ರಿಕ್ಸ್ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ. ಸದ್ಯ ಆರೋಪಿ ಮಂಜುನಾಥ್‌ನನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡೇವಿಡ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: World Cup 2023: ವಿಶ್ವಕಪ್‌ ಕ್ರಿಕೆಟ್‌ ಬೆಟ್ಟಿಂಗ್‌; ಸಿಸಿಬಿ ದಾಳಿ ವೇಳೆ ಚಿನ್ನದ ಬಿಸ್ಕೆಟ್‌ಗಳು ಪತ್ತೆ

ಕಿರುಕುಳ ಎಂದು ದೂರು ಕೊಡಲು ಹೋದರೆ ಠಾಣೆಯಲ್ಲೇ ಕತ್ತು ಕೊಯ್ದ ಗಂಡ

ಹಾಸನ: ಮನೆಯಲ್ಲಿ ವಿಪರೀತ ಹಿಂಸೆ (Domestic Violence) ಕೊಡುತ್ತಿದ್ದ ಗಂಡನ ವಿರುದ್ಧ ಮಹಿಳೆಯೊಬ್ಬರು ಧೈರ್ಯ ಮಾಡಿ ಠಾಣೆಗೆ ದೂರು ನೀಡಲು ಹೋದರೆ ಗಂಡ ಪೊಲೀಸರ ಮುಂದೆಯೇ ಆಕೆಯ ಕತ್ತು ಕೊಯ್ದ (Husband attacks wife) ಭಯಾನಕ ಘಟನೆ ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ (Hasana womens police station) ನಡೆದಿದೆ.

ಹರೀಶ್‌ ಎಂಬಾತನೇ ತನ್ನ ಹೆಂಡತಿ ಶಿಲ್ಪಾ ಅವರನ್ನು ಪೊಲೀಸ್‌ ಠಾಣೆಯಲ್ಲೇ ಕತ್ತು ಕೊಯ್ದು ದಾರ್ಷ್ಟ್ಯ ಮೆರೆದ ಗಂಡ. ಆತ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ಮುಂದೆಯೇ ತನ್ನ ಪತ್ನಿಯ ಕತ್ತನ್ನು ಚಾಕುವಿನಿಂದ ಕೊಯ್ದು ಕೊಲೆಗೆ ಯತ್ನಿಸಿದ್ದಾನೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಕೊಲೆ ಮಾಡಲು ಮುಂದಾಗಿದ್ದಾನೆ.

ಶಿಲ್ಪಾ ಮತ್ತು ಹರೀಶ್‌ ನಡುವೆ ಆರು ವರ್ಷದ ಹಿಂದೆ ಮದುವೆ ನಡೆದಿತ್ತು. ಇಬ್ಬರೂ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಹರೀಶ್‌ ಒಬ್ಬ ಅನುಮಾನ ಪಿಶಾಚಿ. ಆತ ಪ್ರತಿ ಹಂತದಲ್ಲೂ ಹೆಂಡತಿಯ ಮೇಲೆ ಅನುಮಾನಿಸುತ್ತಿದ್ದ. ಹೀಗಾಗಿ ಪ್ರತಿ ನಿತ್ಯ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಅವನು ಬಂದು ಹೊಡೆಯುತ್ತಿದ್ದ. ಇತ್ತ ಶಿಲ್ಪಾಗೂ ಗಂಡನ ಮೇಲೆ ಅನುಮಾನ ಇತ್ತು. ಹೀಗಾಗಿ ಮನೆಯಲ್ಲಿ ಜಗಳ ಎನ್ನುವುದು ಸಾಮಾನ್ಯವಾಗಿತ್ತು.

ಹಲವಾರು ಬಾರಿ ಪರಸ್ಪರ ಹಲ್ಲೆ, ಕೊಲೆಯತ್ನಗಳು ನಡೆದಾಗ ಇನ್ನು ಕೊಂದೇ ಬಿಡುತ್ತಾನೆ ಅನಿಸಿದಾಗ ಶಿಲ್ಪಾ ಆತನ ವಿರುದ್ದ ಹಾಸನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಗಂಡ ತೊಂದರೆ ಕೊಡುತ್ತಿದ್ದಾನೆ ಎಂಬ ಶಿಲ್ಪಾ ದೂರಿನ ಅನ್ವಯ ಪೊಲೀಸರು ಎಚ್ಚರಿಕೆ ನೀಡಲೆಂದು ಹರೀಶ್‌ ನನ್ನು ಬರ ಹೇಳಿದ್ದರು. ಶಿಲ್ಪಾ ಕೂಡಾ ಬಂದಿದ್ದಳು. ಪಿಎಸ್‌ಐ ಉಮಾ ಅವರು ಹರೀಶ್‌ ನನ್ನು ವಿಚಾರಣೆ ನಡೆಸಿದ್ದರು.

ಹೀಗೆ ವಿಚಾರಣೆ ನಡೆಸಿದ ಬೆನ್ನಿಗೇ ಹರೀಶ್‌ ಠಾಣೆಯಲ್ಲೇ ಇದ್ದ ಪತ್ನಿಯ ಮೇಲೆ ಏರಿಹೋಗಿದ್ದಾನೆ. ತಾನು ಮೊದಲೇ ತಂದಿದ್ದ ಚಾಕುವನ್ನು ಬಳಸಿ ಪತ್ನಿಯ ಕುತ್ತಿಗೆಯನ್ನೇ ಕೊಯ್ದಿದ್ದಾನೆ. ಕೊನೆಗೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಆತನ ಕೈಯಲ್ಲಿದ್ದ ಚಾಕುವನ್ನು ಕಿತ್ತುಕೊಂಡಿದ್ದಾರೆ.

ಗಾಯಾಳು ಶಿಲ್ಪಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ನಡುವೆ, ಹರೀಶ್‌ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Live News

Karnataka Live News: ರಾಜ್ಯದ ಮಹತ್ವದ ಸುದ್ದಿಗಳು; ರಾಜ್ಯಸಭೆಗೆ ಕರ್ನಾಟಕದಿಂದ ಸೋನಿಯಾ ಗಾಂಧಿ?

ಸೋನಿಯಾ ಗಾಂಧಿ ಅವರನ್ನು ರಾಜ್ಯದಿಂದಲೇ ರಾಜ್ಯಸಭೆಗೆ ಆರಿಸಿ ಕಳಿಸಲು ಕಾಂಗ್ರೆಸ್‌ ನಿರ್ಧಾರ ಸೇರಿದಂತೆ ರಾಜ್ಯದ ಇಂದಿನ ಮಹತ್ವದ ಬೆಳವಣಿಗೆಗಳಿಗಾಗಿ ಇಲ್ಲಿ ಗಮನಿಸಿ.

VISTARANEWS.COM


on

karnataka live news kannada today news live vistara news november 18 and CM Siddaramaiah BS Yediyurappa and DCM DK Shivakumar
Koo

ಬೆಂಗಳೂರು: ಸೋನಿಯಾ ಗಾಂಧಿ ಅವರನ್ನು ರಾಜ್ಯದಿಂದಲೇ ರಾಜ್ಯಸಭೆಗೆ ಆರಿಸಿ ಕಳಿಸಲು ಕಾಂಗ್ರೆಸ್‌ ನಿರ್ಧಾರ ಸೇರಿದಂತೆ ರಾಜ್ಯದ ಇಂದಿನ ಮಹತ್ವದ ಬೆಳವಣಿಗೆಗಳಿಗಾಗಿ ಇಲ್ಲಿ ಗಮನಿಸಿ.

Continue Reading

ಕ್ರೈಂ

Self Harm: 6 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಯುವತಿ ಆತ್ಮಹತ್ಯೆ

ಆರು ತಿಂಗಳ ಹಿಂದೆ ಆಜಾಮ್‌ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ.

VISTARANEWS.COM


on

self harm muskath
Koo

ಚಿಕ್ಕಬಳ್ಳಾಪುರ: ಪತಿ ಹಾಗೂ ಪತ್ನಿ ನಡುವೆ ವೈಮನಸ್ಸು ಬಂದ ಕಾರಣ ಮನನೊಂದ ಪತ್ನಿ ಆತ್ಮಹತ್ಯೆ (Self Harm) ಮಾಡಿಕೊಂಡ ಘಟನೆ ನಡೆದಿದೆ. ಮುಸ್ಕಾತ್ ತಾಜ್ (21) ಆತ್ಮಹತ್ಯೆ ಮಾಡಿಕೊಂಡ ಪತ್ನಿ.

ಇವರು ಚಿಕ್ಕಬಳ್ಳಾಪುರ (Chikkaballapura news) ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್‌ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ (murder complaint) ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹೆಜ್ಜೇನು ದಾಳಿಯಿಂದ ಕಾರ್ಮಿಕ ಸಾವು

ರಾಮನಗರ: ಟಿಂಬರ್ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಾರೆ. ರಾಮನಗರದ (ramanagara news) ಮಾಗಡಿ ತಾಲೂಕಿನ ಬೆಳಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಬಜ್ಜಯ್ಯ (53) ಸ್ಥಳದಲ್ಲೇ ಸಾವಿಗೀಡಾದ ವ್ಯಕ್ತಿ. ಮರ ಕಡಿಯುವಾಗ ಹೆಜ್ಜೇನು ಗೂಡು ಬಜ್ಜಯ್ಯ ಮೇಲೆ ಬಿದ್ದಿದೆ. ಹೆಜ್ಜೇನು ಹುಳುಗಳು ಗುಂಪಾಗಿ ದಾಳಿ ನಡೆಸಿವೆ. ಹೆಜ್ಜೇನು ದಾಳಿಯಿಂದ ಇನ್ನಿತರ ಕೆಲವು ಕಾರ್ಮಿಕರಿಗೂ ಗಾಯಗಳಾಗಿದ್ದು, ಸ್ಥಳದಿಂದ ಓಡಿಹೋಗಿದ್ದಾರೆ. ಬಜ್ಜಯ್ಯನವರಿಗೆ ನೂರಾರು ಹುಳಗಳು ಕಡಿದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಮಾಗಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಆಟೋ ಚಾಲಕನ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಯುವಕನೊಬ್ಬನನ್ನು ಹತ್ತಕ್ಕೂ ಅಧಿಕ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಅರುಣ್ (24) ಕೊಲೆಯಾದ ಆಟೋ ಚಾಲಕ. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಅರುಣ್‌ನ ಮದುವೆ ಸಹ ಮುಂದಿನ ತಿಂಗಳು ಫಿಕ್ಸ್ ಆಗಿತ್ತು. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿರುವ ರೀತಿ ನೋಡಿದರೆ ಹಳೆಯ ದ್ವೇಷ ತೀರಿಸಿಕೊಳ್ಳಲು ನಡೆದ ಕೃತ್ಯದಂತೆ ಕಾಣಿಸುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sukhdev Singh: ಆತ್ಮೀಯವಾಗಿ ಮಾತನಾಡುತ್ತಲೇ ಸುಖ್​ದೇವ್ ಮೇಲೆ ಹಾರಿಸಿದ್ರು 5 ಗುಂಡು; ಇಲ್ಲಿದೆ ವಿಡಿಯೊ!

Continue Reading

ಕ್ರೈಂ

Murder Case: ಮುಂದಿನ ತಿಂಗಳು ಮದುವೆಯಾಗಲಿ‌ದ್ದ ಆಟೋ ಚಾಲಕನ ಬರ್ಬರ ಹತ್ಯೆ

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ (Murder Case) ನಡೆದಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

arun murderd
Koo

ಬೆಂಗಳೂರು: ರಾಜಧಾನಿಯಲ್ಲಿ ಯುವಕನೊಬ್ಬನನ್ನು ಹತ್ತಕ್ಕೂ ಅಧಿಕ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ (Murder Case) ಮಾಡಿದ್ದಾರೆ. ಅರುಣ್ (24) ಕೊಲೆಯಾದ ಆಟೋ ಚಾಲಕ. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಂಬರ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಅರುಣ್‌ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಅರುಣ್‌ನ ಮದುವೆ ಸಹ ಮುಂದಿನ ತಿಂಗಳು ಫಿಕ್ಸ್ ಆಗಿತ್ತು. 10ಕ್ಕೂ ಅಧಿಕ ಮಂದಿ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿರುವ ರೀತಿ ನೋಡಿದರೆ ಹಳೆಯ ದ್ವೇಷ ತೀರಿಸಿಕೊಳ್ಳಲು ನಡೆದ ಕೃತ್ಯದಂತೆ ಕಾಣಿಸುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಮಚ್ಚಿನಿಂದ ಕೊಚ್ಚಿ ಮಗನನ್ನೇ ಕೊಂದ ತಂದೆ

ಆನೇಕಲ್: ಮಚ್ಚಿನಿಂದ ಕೊಚ್ಚಿ ಮಗನನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್‌ ಸಮೀಪದ ನಾರಾಯಣಪುರದಲ್ಲಿ ನಡೆದಿದೆ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದಾಗ ಮಗನನ್ನು ತಂದೆಯೇ ಹತ್ಯೆ (Murder Case) ಮಾಡಿದ್ದಾರೆ.

ಸುರೇಶ್ (35) ಕೊಲೆಯಾದ ವ್ಯಕ್ತಿ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಮಂಗಳವಾರವೂ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನ ಹಿಡಿದು ಹೊಡೆಯುತ್ತಿದ್ದ ಹಿನ್ನೆಲೆಯಲ್ಲಿ ಗಲಾಟೆ ಬಿಡಿಸಲು ತಂದೆ ಮುಂದಾಗಿದ್ದಾರೆ. ಆದರೆ, ಗಲಾಟೆ ವಿಕೋಪಕ್ಕೆ ತಿರುಗಿದಾಗ ತಂದೆ ಮಚ್ಚಿನಿಂದ ಸುರೇಶ್‌ಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಆನೇಕಲ್ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು, ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Sukhdev Singh Gogamedi: ರಜಪೂತ್ ಕರ್ಣಿ ಸೇನಾ ಮುಖಂಡ ಸುಖ್​ದೇವ್​​ ಗೋಗಮೇಡಿ ಗುಂಡಿಟ್ಟು ಹತ್ಯೆ

Continue Reading

ಕರ್ನಾಟಕ

karnataka Weather :‌ ಇಂದು-ನಾಳೆ ಭಾಗಶಃ ಮೋಡ ಕವಿದ ವಾತಾವರಣ; ಇಲ್ಲೆಲ್ಲ ಮಳೆ ಸೂಚನೆ

Rain News : ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಕರಾವಳಿಯಲ್ಲಿ ಮಳೆಯು ಮಾಯವಾಗಿದ್ದು, ಶುಷ್ಕ ವಾತಾವರಣವು (Dry Weather) ಮೇಲುಗೈ ಸಾಧಿಸಲಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಸೂರ್ಯ ಮರೆಯಾಗಿ, ಮೋಡ ಕವಿದ ವಾತಾವರಣ (karnataka Weather Forecast) ಇರಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಕರಾವಳಿಯಲ್ಲಿ ಒಣ ಹವೆ ಇರಲಿದೆ.

ರಾಜಧಾನಿ ಬೆಂಗಳೂರಲ್ಲಿ ಥಂಡಿ ಗಾಳಿಯೊಂದಿಗೆ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಸೂರ್ಯನ ದರ್ಶನ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಣ್ಣ ಪ್ರಮಾಣದಲ್ಲಿ ಮಳೆ ಜಿನುಗಲಿದೆ. ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Rohit Sharma : ಫಾರಿನ್ ಟೂರ್​ ಮುಗಿಸಿ ಮರಳಿದ ರೋಹಿತ್​ ಶರ್ಮಾ ಫ್ಯಾಮಿಲಿ

ಇಲ್ಲೆಲ್ಲ ಚದುರಿದ ಮಳೆ

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೆಳಗಾವಿ, ಬೀದರ್ ಮತ್ತು ಗದಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆ ಸುರಿಯಲಿದೆ. ಉಳಿದಂತೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಸೂರ್ಯ ಕಣ್ಮರೆಯಾಗಲಿದ್ದಾನೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 18 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 33 ಡಿ.ಸೆ – 21 ಡಿ.ಸೆ
ಬೆಳಗಾವಿ: 29 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Brindavana Serial Kannada Vishwanath Ravindra Haveri
ಕಿರುತೆರೆ4 mins ago

Brindavana Serial Kannada: ʻಏನಾಗಲಿ ಮುಂದೆ ಸಾಗು ನೀʼಎಂದ ʻಬೃಂದಾವನʼ ಧಾರಾವಾಹಿ ಮಾಜಿ ನಾಯಕ!

mamtha
ದೇಶ8 mins ago

Mamata Banerjee: ಸಲ್ಮಾನ್‌ ಖಾನ್‌ ಜತೆ ಮಮತಾ ಬ್ಯಾನರ್ಜಿ ಡ್ಯಾನ್ಸ್‌! ವಿಡಿಯೊ ಇಲ್ಲಿದೆ

namitha actress
South Cinema31 mins ago

Actress Namitha: ಚೆನ್ನೈ ಪ್ರವಾಹ; ಅವಳಿ ಮಕ್ಕಳೊಂದಿಗೆ ಅಪಾಯಕ್ಕೆ ಸಿಲುಕಿದ್ದ ನಟಿ!

karnataka live news kannada today news live vistara news november 18 and CM Siddaramaiah BS Yediyurappa and DCM DK Shivakumar
Live News37 mins ago

Karnataka Live News: ರಾಜ್ಯದ ಮಹತ್ವದ ಸುದ್ದಿಗಳು; ರಾಜ್ಯಸಭೆಗೆ ಕರ್ನಾಟಕದಿಂದ ಸೋನಿಯಾ ಗಾಂಧಿ?

karni sena chief murder
ದೇಶ60 mins ago

ಕರ್ಣಿ ಸೇನಾ ನಾಯಕನ ಹತ್ಯೆ ವಿರೋಧಿಸಿ ಇಂದು ರಾಜಸ್ಥಾನ ಬಂದ್, ಗೆಹ್ಲೋಟ್‌ ಮೇಲೆ ಆರೋಪ

Wedding Fashion
ಫ್ಯಾಷನ್1 hour ago

Wedding Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ವೆಡ್ಡಿಂಗ್‌ ಪರ್ಸ್

Ranbir Kapoor Animal was shot at Saif Ali Khan’s 800 crore Pataudi Palace
ಬಾಲಿವುಡ್1 hour ago

Animal Movie: 150 ಕೋಣೆಯ ಅರಮನೆಯಲ್ಲಿ ʻಅನಿಮಲ್‌ʼ ಶೂಟಿಂಗ್‌; ಇದು ಯಾರ ಬಂಗಲೆ ನೋಡಿ!

self harm muskath
ಕ್ರೈಂ1 hour ago

Self Harm: 6 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಯುವತಿ ಆತ್ಮಹತ್ಯೆ

war Between Sangeetha And Captain Snehith Gowda
ಬಿಗ್ ಬಾಸ್2 hours ago

BBK SEASON 10: ನೀನು ಯಾರಿಗೆ ʻಚೇಲಾʼ ಅಂತ ಗೊತ್ತು ʻಹೋಗೋಲೋʼ ಎಂದು ಸ್ನೇಹಿತ್‌ ಮೇಲೆ ರೊಚ್ಚಿಗೆದ್ದ ಸಂಗೀತಾ!

Captain Snehith Gowda Not Bother To Stop Physical Fight Between vinay and Karthik
ಬಿಗ್ ಬಾಸ್2 hours ago

BBK SEASON 10: ವಿನಯ್‌-ಕಾರ್ತಿಕ್‌ ನಡುವೆ ಫಿಸಿಕಲ್‌ ಅಟ್ಯಾಕ್‌; ಯಾವ ಸೀಮೆ ಕ್ಯಾಪ್ಟನ್ ಸ್ನೇಹಿತ್‌ ನೀನು?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

read your daily horoscope predictions for december 6 2023
ಪ್ರಮುಖ ಸುದ್ದಿ6 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ14 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ15 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ15 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ4 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

ಟ್ರೆಂಡಿಂಗ್‌