Murder Case: ಪಾರ್ಟಿ ಮಾಡಿ ಮಲಗಿದ ಯುವಕನ ಕೊಲೆ, ಜೊತೆಗಿದ್ದ ಸ್ನೇಹಿತರಿಗೆ ಗೊತ್ತೇ ಆಗಲಿಲ್ಲ! - Vistara News

ಕ್ರೈಂ

Murder Case: ಪಾರ್ಟಿ ಮಾಡಿ ಮಲಗಿದ ಯುವಕನ ಕೊಲೆ, ಜೊತೆಗಿದ್ದ ಸ್ನೇಹಿತರಿಗೆ ಗೊತ್ತೇ ಆಗಲಿಲ್ಲ!

Murder Case: ಹೈದರ್ ನಗರ ತಾಂಡಾದ ಮೂವರು ಗೆಳೆಯರು ಊರಿನ ಹೊರವಲಯದಲ್ಲಿ ರಾತ್ರಿ ಪಾರ್ಟಿ ಮಾಡಿ ಮಲಗಿದ್ದಾರೆ. ನಡುರಾತ್ರಿ ಎದ್ದು ನೋಡಿದಾಗ ಸುಭಾಷ್ ಕೊಲೆಯಾಗಿದ್ದಾನೆ. ಗಾಬರಿಗೊಂಡ ಯುವಕರು ತಾಂಡಾಕ್ಕೆ ಹೋಗಿ ವಿಷಯ ತಿಳಿಸಿದ್ದಾರೆ.

VISTARANEWS.COM


on

gadag crime murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಮುಂಡರಗಿ ಪಟ್ಟಣದಲ್ಲಿ ಯುವಕನೊಬ್ಬನ ಭೀಕರ ಹತ್ಯೆ (Murder Case) ಆಗಿದೆ. ರಾತ್ರಿ ಮೂವರು ಗೆಳೆಯರು ಭರ್ಜರಿ ಎಣ್ಣೆ ಪಾರ್ಟಿ ಮಾಡಿ ನಿದ್ರೆ ಹೋಗಿದ್ದು, ನಡು ರಾತ್ರಿಯಲ್ಲಿ ಓರ್ವನ ಹತ್ಯೆಯಾಗಿದೆ. ಪಾರ್ಟಿ ಮಾಡಿದ ಗೆಳೆಯರು ಕಂಗಾಲಾಗಿ ಊರಿಗೆ ಬಂದು ವಿಷಯ ತಿಳಿಸಿದ್ದಾರೆ.

ಸುಭಾಷ್ ನಾಯಕ್ (23) ಕೊಲೆಯಾದ ಯುವಕ. ಗದಗ (Gadag news) ಜಿಲ್ಲೆಯ ಮುಂಡರಗಿ ಪಟ್ಟಣದ ಹೊಸ ಹುಡ್ಕೋ ಕಾಲೋನಿಯಲ್ಲಿ ಘಟನೆ ನಡೆದಿದೆ. ಕೊಲೆಯಾದ ಯುವಕ ಹೈದರ್ ನಗರ ತಾಂಡಾದ ನಿವಾಸಿ. ಹೈದರ್ ನಗರ ತಾಂಡಾದ ಮೂವರು ಗೆಳೆಯರು ಊರಿನ ಹೊರವಲಯದಲ್ಲಿ ರಾತ್ರಿ ಪಾರ್ಟಿ ಮಾಡಿ ಮಲಗಿದ್ದಾರೆ. ನಡುರಾತ್ರಿ ಎದ್ದು ನೋಡಿದಾಗ ಸುಭಾಷ್ ಕೊಲೆಯಾಗಿದ್ದಾನೆ. ಗಾಬರಿಗೊಂಡ ಯುವಕರು ತಾಂಡಾಕ್ಕೆ ಹೋಗಿ ವಿಷಯ ತಿಳಿಸಿದ್ದಾರೆ.

ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಶಂಕೆ ಮೂಡಿದೆ. ಜೊತೆಗಿದ್ದ ಗೆಳೆಯರು ನೀಡುತ್ತಿರುವ ಮಾಹಿತಿ ಗೊಂದಲಕಾರಿಯಾಗಿದ್ದು, ಅನುಮಾನ ಮೂಡಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಫಾರೆನ್ಸಕ್‌ ತಂಡದಿಂದ ಪರಿಶೀಲನೆ ನಡೆದಿದೆ.

ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಕೇಸ್

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಮುಸ್ಲಿಂ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯು ಇಸ್ಲಾಂಅನ್ನು ಅನುಸರಿಸಬೇಕು ಎಂದು ಒತ್ತಾಯಿಸುವ ಮೂಲಕ ಹೀನ ಕೃತ್ಯ ಎಸಗಿದ್ದಾನೆ. ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಇನ್ನು, ಕೃತ್ಯ ಬಯಲಾಗುತ್ತಲೇ ಇಬ್ರಾಹಿಂ ಖಾನ್‌ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

6 ತಿಂಗಳಿಂದ ನಿರಂತರ ಕಿರುಕುಳ

14 ವರ್ಷದ ಬಾಲಕಿ ಹಾಗೂ ಆಕೆಯ ಸಹೋದರಿಯ ತಂದೆ-ತಾಯಿ ತೀರಿಕೊಂಡ ಕಾರಣ 2023ರ ಕಾಶಿಗಾಂವ್‌ಗೆ ಇಬ್ಬರೂ ಸ್ಥಳಾಂತರಗೊಂಡಿದ್ದಾರೆ. ಸಂಬಂಧಿಕರ ಮನೆಯಲ್ಲಿ ಇಬ್ಬರೂ ಆಶ್ರಯ ಪಡೆದಿದ್ದಾರೆ. ಇದೇ ಕಾಶಿಗಾಂವ್‌ ನಿವಾಸಿಯಾದ ಇಬ್ರಾಹಿಂ ಖಾನ್‌, ಬಾಲಕಿಯನ್ನು ಗಮನಿಸಿದ್ದಾನೆ. ಪದೇಪದೆ ಬಾಲಕಿಯನ್ನು ಮಾತನಾಡಿಸುವುದು, ನಗುವುದು, ನೀನೇ ನನ್ನ ಜೀವನ ಎಂದು ಕಿಚಾಯಿಸುವುದು ಸೇರಿ ಹಲವು ರೀತಿಯಲ್ಲಿ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ.

ಕೆಲ ತಿಂಗಳ ಹಿಂದೆ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಇಬ್ರಾಹಿಂ ಖಾನ್‌ ಬಾಲಕಿಯ ಮನೆಗೆ ನುಗ್ಗಿದ್ದಾನೆ. ಆಗ ಬಾಲಕಿಯ ಎದುರು ಪ್ರೇಮ ನಿವೇದನೆ ಮಾಡಿದ ಆತ, ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆಕೆಯ ಮನೆಗೆ ಹೋಗುವುದು, ಲೈಂಗಿಕ ದೌರ್ಜನ್ಯ ಎಸಗುವುದು ಹಾಗೂ ಇಸ್ಲಾಂ ರೀತಿ-ರಿವಾಜುಗಳನ್ನು ಅನುಸರಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾನೆ. ಇಬ್ರಾಹಿಂ ಖಾನ್‌ನಿಂದ ನಿರಂತರವಾಗಿ ಕಿರುಕುಳಕ್ಕೊಳಗಾದ ಬಾಲಕಿಯು ಮೇ 3ರಂದು ಹಿರಿಯರೊಂದಿಗೆ ತೆರಳಿ ದೂರು ದಾಖಲಿಸಿದ್ದಾಳೆ. ಇದಾದ ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

“ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನುಗ್ಗುತ್ತಿದ್ದ ಆತ, ನನ್ನನ್ನು ಮದುವೆಯಾಗುತ್ತೇನೆ ಎಂಬುದಾಗಿ ಹೇಳು ಎಂದು ಒತ್ತಾಯಿಸುತ್ತಿದ್ದ. ನನಗೆ ನನ್ನ ತಂದೆ-ತಾಯಿ ಜತೆ ಇರಲು ಇಷ್ಟವಿಲ್ಲ. ನಿನ್ನೊಂದಿಗೆ ನಾನು ಬದುಕಲು ಇಷ್ಟ. ಇಬ್ಬರೂ ಬೇರೆ ಕಡೆ ಬಾಡಿಗೆ ಮನೆ ಮಾಡೋಣ. ಅಲ್ಲಿ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಇಬ್ಬರೂ ಜತೆಯಾಗಿರೋಣ ಎಂದು ಹೇಳಿದ. ಇದಕ್ಕೆ ನಾನು ಒಪ್ಪದಿದ್ದಾಗ ದೌರ್ಜನ್ಯ ಎಸಗಿದ” ಎಂಬುದಾಗಿ ಎಫ್‌ಐಆರ್‌ನಲ್ಲಿ ಬಾಲಕಿಯ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Prajwal Revanna Case: ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳಿಂದ ಮೊಟ್ಟೆ ಎಸೆತ ನಡೆದಿದೆ. ಕಾರಿನಲ್ಲಿ ಬಂದ ಐದಾರು ಮಂದಿ, ಮನೆಯ ಮುಂದಿದ್ದ ಪೊಲೀಸರನ್ನು ಕಂಡು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.

VISTARANEWS.COM


on

lr Shivarame gowda prajwal revanna case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ (Prajwal Revanna Case) ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರನ್ನು (HD Deve Gowda) ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿರುವ, ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ (LR Shivarame Gowda) ಮನೆ ಮೊಟ್ಟೆ ದಾಳಿಗೆ (Egg throw) ಯತ್ನ ನಡೆಸಲಾಗಿದೆ.

ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳಿಂದ ಮೊಟ್ಟೆ ಎಸೆತ ನಡೆದಿದೆ. ಕಾರಿನಲ್ಲಿ ಬಂದ ಐದಾರು ಮಂದಿ, ಮನೆಯ ಮುಂದಿದ್ದ ಪೊಲೀಸರನ್ನು ಕಂಡು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆತದ ಬಳಿಕ ಎಲ್ಆರ್‌ಎಸ್ ಮನೆ ರಸ್ತೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.

ಪೆನ್ ಡ್ರೈವ್ ಪ್ರಕರಣ (Pen drive Case) ವಿಚಾರದಲ್ಲಿ ವಕೀಲ ದೇವರಾಜೇಗೌಡ ಜೊತೆ ಮಾತನಾಡುವಾಗ ಜೆಡಿಎಸ್ ವರಿಷ್ಠರ ಬಗ್ಗೆ ಎಲ್ ಆರ್ ಶಿವರಾಮೇಗೌಡ ಅವಹೇಳನಕಾರಿ ಮಾತನಾಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಆಡಿಯೋವನ್ನು ನಿನ್ನೆ ಬಿಡುಗಡೆ ಮಾಡಲಾಗಿತ್ತು.

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

ವಕೀಲ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ (LR Shivarame Gowda) ಅವರ ಮಧ್ಯೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೊ ಬಯಲಾಗಿದ್ದು, “ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಷ್ಟಕ್ಕೂ, ದೇವೇಗೌಡ ಅವರು ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ಲವಲ್ಲ” ಎಂಬುದಾಗಿ ಶಿವರಾಮೇಗೌಡ ಹೇಳಿದ್ದಾರೆ.

“ನೀವು ಡಿ.ಕೆ.ಶಿವಕುಮಾರ್‌ ಅವರ ಜತೆ ಕೈಜೋಡಿಸಿದರೆ ಯಾವ ಸಹಾಯ ಬೇಕೋ ಎಲ್ಲವನ್ನೂ ಮಾಡುತ್ತಾರೆ. ಜೆಡಿಎಸ್‌ಅನ್ನು ಎನ್‌ಡಿಎಯಿಂದ ಆಚೆಗೆ ಹಾಕಲು ನಾನೇ ನರೇಂದ್ರ ಮೋದಿ ಅವರಿಗೆ ಒತ್ತಾಯ ಮಾಡುತ್ತೇನೆ. ಇನ್ನೇನು ವಿಡಿಯೊಗಳು ಇವೆಯೋ, ಎಲ್ಲವನ್ನೂ ನಮಗೆ ಕೊಡಿ. ದೇವೇಗೌಡ ಕುಟುಂಬವನ್ನು ಬಲಿ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನೀವು ಯಾವುದಕ್ಕೂ ಹೆದರಬೇಡಿ. ನಿಮಗೆ ಏನು ಹೆಲ್ಪ್‌ ಬೇಕೋ ಅದನ್ನು ಡಿಕೆಶಿ ಮಾಡುತ್ತಾರೆ” ಎಂಬುದಾಗಿ ಶಿವರಾಮೇಗೌಡ ಭರವಸೆ ನೀಡಿರುವುದು ಆಡಿಯೊದಲ್ಲಿದೆ.

ವಿಡಿಯೊ ಕೊಡಿ ಎಂಬುದಕ್ಕೆ ಉತ್ತರಿಸಿದ ದೇವರಾಜೇಗೌಡ, “ಅಣ್ಣ ಇದು ಹೆಣ್ಣುಮಕ್ಕಳ ಮಾನ ಮರ್ಯಾದೆ ಪ್ರಶ್ನೆ ಅಲ್ಲವೇ? ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಿದ್ದಾರೆ. ಅದಕ್ಕೆ ಶಿವರಾಮೇಗೌಡ, “ನಿನಗೆ ಏನು ಸಹಾಯ ಬೇಕೋ ಅದನ್ನು ಮಾಡುತ್ತಾರೆ. ಅಷ್ಟಕ್ಕೂ, ನೀನೇನೂ ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿಲ್ಲ. ಹಂಚಿದರೂ ಅದರಲ್ಲಿ ತಪ್ಪೇನಿಲ್ಲ. ನೀನೊಬ್ಬ ವಕೀಲನಾಗಿ ಹೀಗೆ ಹೆದರಿದರೆ ಹೇಗೆ? ಏನೂ ಆಗುವುದಿಲ್ಲ. ಯಾವ ವಿಡಿಯೊ ಇದೆ ನಮಗೆ ಕೊಡು” ಎಂದಿದ್ದಾರೆ.

ಗೌಡರು ಸೂಸೈಡ್‌ ಮಾಡಿಕೊಂಡಿಲ್ವಲ್ಲ

“ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಬಿಟ್ಟಿದ್ದಾರೆ ಎಂಬುದಾಗಿ ಹೇಳು. ಆ ದೇವೇಗೌಡರ ಮಕ್ಕಳು ಏನೂ ಕಡಿಮೆ ಇಲ್ಲ. ದೇವೇಗೌಡರು ಇಷ್ಟಾದರೂ ಆತ್ಮಹತ್ಯೆ ಮಾಡಕೊಂಡಿಲ್ಲವಲ್ಲ. ಪ್ರಜ್ವಲ್‌ ರೇವಣ್ಣ ಬೆಳೆಯುತ್ತಿದ್ದಾನೆ. ಕುಮಾರಸ್ವಾಮಿ ಅವರಿಗೆ ತಮ್ಮ ಮಗ ಮುಂದೆ ಬರಬೇಕು ಎಂಬ ಆಸೆ ಇದೆ. ಹಾಗಾಗಿ, ಕುಮಾರಸ್ವಾಮಿ ಅವರೇ ವಿಡಿಯೊಗಳನ್ನು ಹಂಚಿದ್ದಾರೆ ಎಂಬುದಾಗಿ ಹೇಳಿ” ಎಂದು ದೇವರಾಜೇಗೌಡ ಅವರಿಗೆ ಶಿವರಾಮೇಗೌಡ ಹೇಳಿರುವುದು ಆಡಿಯೊದಲ್ಲಿ ದಾಖಲಾಗಿದೆ. ಇದು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ನೀಡಿದೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Continue Reading

ದೇಶ

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

Triple Talaq: ತೆಲಂಗಾಣದ ಭೂಪನೊಬ್ಬ ವಾಟ್ಸ್‌ಆ್ಯಪ್‌ನಲ್ಲಿ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಕೆ.ಆರ್‌.ಕೆ. ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 32 ವರ್ಷ ವಯಸ್ಸಿನ ಅಬ್ದುಲ್ ಅತೀಖ್ ಬಂಧಿತ ವ್ಯಕ್ತಿ. ಆತ ತನ್ನ ಪತ್ನಿಗೆ ವಾಟ್ಸ್‌ಆ್ಯಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಮೂಲಕ ತ್ರಿವಳಿ ತಲಾಕ್‌ ನೀಡಿದ್ದ.

VISTARANEWS.COM


on

Triple Talaq
Koo

ಹೈದರಾಬಾದ್: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ (Triple Talaq) ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೆ ಈ ಬಗ್ಗೆ ಇನ್ನೂ ಕೆಲವರಿಗೆ ಅರಿವು ಮೂಡಿದಂತಿಲ್ಲ. ಅಂತಹ ಘಟನೆ ಮತ್ತೆ ಮತ್ತೆ ಘಟಿಸುತ್ತಲೇ ಇದೆ. ಅದಕ್ಕೆ ತಾಜಾ ಉದಾಹರಣೆ ಇಲ್ಲಿದೆ. ತೆಲಂಗಾಣದ ಭೂಪನೊಬ್ಬ ವಾಟ್ಸ್‌ಆ್ಯಪ್‌ನಲ್ಲಿ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ತೆಲಂಗಾಣದ ಅದಿಲಾಬಾದ್ ಜಿಲ್ಲೆಯ ಕೆ.ಆರ್‌.ಕೆ. ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 32 ವರ್ಷ ವಯಸ್ಸಿನ ಅಬ್ದುಲ್ ಅತೀಖ್ ಬಂಧಿತ ವ್ಯಕ್ತಿ. ಆತ ತನ್ನ ಪತ್ನಿಗೆ ವಾಟ್ಸ್‌ಆ್ಯಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಮೂಲಕ ತ್ರಿವಳಿ ತಲಾಕ್‌ ನೀಡಿದ್ದ.

ಘಟನೆಯ ವಿವರ

ಅದಿಲಾಬಾದ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಿ. ಶ್ರೀನಿವಾಸ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼಅಬ್ದುಲ್ ಅತೀಖ್ 2017ರಲ್ಲಿ ಜಾಸ್ಮಿನ್‌ (28) ಎಂಬಾಕೆಯೊಂದಿವೆ ವಿವಾಹವಾಗಿದ್ದ. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ಇವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲಾರಂಭಿಸಿತು. ಆಗಾಗ ಪತಿ-ಪತ್ನಿ ಕಿತ್ತಾಡಿಕೊಳ್ಳುತ್ತಿದ್ದರು. ಇದು ತಾರಕ್ಕೆ ಹೋಗಿ ಕಳೆದ ವರ್ಷ ಜಾಸ್ಮಿನ್‌ ತಮ್ಮ ಪತಿಯ ವಿರುದ್ಧ ಕಿರುಕುಳ ಪ್ರಕರಣ ದಾಖಲಿಸಿದ್ದರುʼʼ ಎಂದು ಹೇಳಿದ್ದಾರೆ.

ʼʼಬಳಿಕ ಕೇಸ್‌ ಕೋರ್ಟ್‌ ಮೆಟ್ಟಿಲೇರಿತ್ತು. ಕುಟುಂಬ ನಿರ್ವಹಣೆಗೆ ಹಣ ನೀಡಬೇಕೆಂದು ಜಾಸ್ಮಿನ್‌ ಕೋರ್ಟ್‌ನಲ್ಲಿ ವಾದಿಸಿದ್ದರು. ಅದರಂತೆ ಕೋರ್ಟ್‌ ಪ್ರತಿ ತಿಂಗಳು ಜಾಸ್ಮಿನ್‌ಗೆ 7,200 ರೂ. ಪಾವತಿಸುವಂತೆ ಅಬ್ದುಲ್ ಅತೀಖ್‌ಗೆ ಸೂಚಿಸಿತ್ತು. ಆದರೆ ಅತೀಖ್‌ ಕೋರ್ಟ್‌ ಸೂಚನೆಯನ್ನೂ ಧಿಕ್ಕರಿಸಿದ್ದ. ಹಣವನ್ನೇ ನೀಡುತ್ತಿರಲಿಲ್ಲʼʼ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.

ಮತ್ತೊಮ್ಮೆ ಜಾಸ್ಮಿನ್‌ ನ್ಯಾಯಾಲಯದ ಮೊರೆ ಹೋಗಿದ್ದರು. ಈ ವೇಳೆ ಆತ ಜಾಸ್ಮಿನ್‌ಗೆ ವಾಟ್ಸ್‌ಆ್ಯಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಕಳುಹಿಸಿ ತ್ರಿವಳಿ ತಲಾಕ್‌ ನೀಡಿದ್ದ. ಈ ಮೆಸೇಜ್ ಅನ್ನು ಜಾಸ್ಮೀನ್ ತಮ್ಮ ಕುಟುಂಬಸ್ಥರಿಗೆ ಶೇರ್ ಮಾಡಿದ್ದರು. ಅವರ ಸಲಹೆ ಮೇರೆಗೆ ಜಾಸ್ಮಿನ್ ಪೊಲೀಸರಿಗೆ ದೂರು ನೀಡಿದ್ದರು. ʼʼಈ ಹಿನ್ನೆಲೆಯಲ್ಲಿ ಅಬ್ದುಲ್ ಅತೀಖ್ ವಿರುದ್ಧ ದೂರು ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆʼʼ ಎಂದು ಶ್ರೀನಿವಾಸ್ ವಿವರಿಸಿದ್ದಾರೆ.

ಇದನ್ನೂ ಓದಿ: Triple Talaq: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತ್ರಿವಳಿ ತಲಾಕ್ ನೀಡಿದ ದುರುಳ; ವರದಕ್ಷಿಣೆ ಆಸೆಗೆ ನೀಚ ಕೃತ್ಯ

ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌

ಕೆಲವು ದಿನಗಳ ಹಿಂದೆಯಷ್ಟೇ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ಈ ಘಟನೆ ನಡೆದಿತ್ತು. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದು ತಲೆ ಮರೆಸಿಕೊಂಡಿದ್ದ. ಬಳಿಕ ಅಫ್ಸಾನಾ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದರು.

2019ರ ಜುಲೈಯಲ್ಲಿ ಸಂಸತ್ತು ಅಂಗೀಕರಿಸಿದ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಪ್ರಕಾರ, ಮುಸ್ಲಿಮರಲ್ಲಿ ಚಾಲ್ತಿಯಲ್ಲಿದ್ದ ‘ತ್ರಿವಳಿ ತಲಾಖ್’ ಮೂಲಕ ತ್ವರಿತ ವಿಚ್ಛೇದನದ ನೀಡುವ ಕ್ರಮವನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಘೋಷಿಸಲಾಗಿದೆ.

Continue Reading

ಕ್ರೈಂ

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Rave Party: ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ಸ್ ಹೌಸ್‌ನಲ್ಲಿ ಬರ್ತ್‌ಡೇ ಹೆಸರಿನಲ್ಲಿ ಪಾರ್ಟಿ ನಡೆಯುತ್ತಿತ್ತು. ತಡರಾತ್ರಿ ಎರಡು ಗಂಟೆ ದಾಟಿದರೂ ಪಾರ್ಟಿ ನಡೆಯುತ್ತಿತ್ತು. ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳಿಗೆ ಇದರ ಮಾಹಿತಿ ತಿಳಿದು ದಾಳಿ ಮಾಡಿದ್ದಾರೆ. ಅವಧಿ ಮೀರಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿಯಲ್ಲಿ ಸಾಕಷ್ಟು ಡ್ರಗ್ಸ್ ಪತ್ತೆಯಾಗಿವೆ.

VISTARANEWS.COM


on

rave party electronic city
Koo

ಬೆಂಗಳೂರು: ಸಿಸಿಬಿ ಪೊಲೀಸರು (CCB Police) ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ (Rave party) ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ (Andhra Pradesh) ತೆಲುಗು ನಟಿಯರನ್ನು ಕರೆಸಿಕೊಂಡು ಪಾರ್ಟಿ ಮಾಡುತ್ತಿದ್ದುದು ಪತ್ತೆಯಾಗಿದೆ. ತೆಲುಗು ನಟಿ (Telugu Actress) ಹೇಮಾ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿಯ ಫಾರ್ಮ್ ಹೌಸ್ ಒಂದರ ಮೇಲೆ ದಾಳಿ ನಡೆಸಲಾಯಿತು. ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿವೆ. ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿವೆ. ಜೊತೆಗೆ ಪಾರ್ಟಿಯಲ್ಲಿ ಆಂಧ್ರ ಮತ್ತು ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದುದು ತಿಳಿದುಬಂದಿದೆ. ಡ್ರಗ್ಸ್‌ ಬಳಕೆ ಮತ್ತಿತರ ವಿಚಾರಗಳ ಬಗ್ಗೆ ಇವರನ್ನು ಪ್ರಶ್ನಿಸಲಾಗುತ್ತಿದೆ.

ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಕಂಡುಬಂದರು. ಇವರು ಆಹ್ವಾನಿತರಾಗಿ ಪಾರ್ಟಿಯಲ್ಲಿ ಭಾಗವಹಿಸಲು ಬಂದರೇ ಅಥವಾ ದುಡ್ಡು ನೀಡಿ ಕರೆಸಲಾಯಿತೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇವರಲ್ಲಿ ಹಲವರು ತೆಲುಗು ನಟಿಯರು ಎಂದು ಗೊತ್ತಾಗಿದೆ. ಬಂದವರಲ್ಲಿ ಹೆಚ್ಚಿನವರು ಕೂಡ ತೆಲುಗಿನವರು.

ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ಸ್ ಹೌಸ್‌ನಲ್ಲಿ ಬರ್ತ್‌ಡೇ ಹೆಸರಿನಲ್ಲಿ ಪಾರ್ಟಿ ನಡೆಯುತ್ತಿತ್ತು. ತಡರಾತ್ರಿ ಎರಡು ಗಂಟೆ ದಾಟಿದರೂ ಪಾರ್ಟಿ ನಡೆಯುತ್ತಿತ್ತು. ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳಿಗೆ ಇದರ ಮಾಹಿತಿ ತಿಳಿದು ದಾಳಿ ಮಾಡಿದ್ದಾರೆ. ಅವಧಿ ಮೀರಿ ಪಾರ್ಟಿ ಮಾಡಲಾಗಿದ್ದು, ಪಾರ್ಟಿಯಲ್ಲಿ ಸಾಕಷ್ಟು ಡ್ರಗ್ಸ್ ಪತ್ತೆಯಾಗಿವೆ.

ಕಾನ್‌ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬವರ ಮಾಲಿಕತ್ವದ ಫಾರ್ಮ್ ಹೌಸ್‌ನಲ್ಲಿ ಇದು ನಡೆದಿದ್ದು, ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಪಾರ್ಟಿಗೆ ಆಂಧ್ರಪ್ರದೇಶದಿಂದ ಫ್ಲೈಟ್‌ನಲ್ಲಿ ಹಲವರನ್ನು ಕರೆಸಿಕೊಂಡಿದ್ದ. ಒಂದು ಬೆಂಜ್ ಕಾರಿನಲ್ಲಿ ಆಂಧ್ರಪ್ರದೇಶದ ಎಂಎಲ್ಎ ಒಬ್ಬರ ಪಾಸ್ ಪತ್ತೆಯಾಗಿದೆ. ಎಂಎಲ್ಎ ಕಾಕನಿ ಗೋವರ್ಧನ ರೆಡ್ಡಿ ಎಂಬವರ ಹೆಸರಿನ ಪಾಸ್ ಕಂಡುಬಂದಿದೆ.

ಪಾರ್ಟಿ ಸ್ಥಳದಲ್ಲಿ ಹದಿನೈದಕ್ಕೂ ಹೆಚ್ಚು ವಿಲಾಸಿ ಕಾರುಗಳು ಪತ್ತೆಯಾಗಿವೆ. ದುಬಾರಿ ಮರ್ಸಿಡಿಸ್‌ ಬೆಂಜ್, ಜಾಗ್ವಾರ್, ಆಡಿ ಕಾರುಗಳಲ್ಲಿ ಕುಬೇರರು ಬಂದಿದ್ದುದು ಗೊತ್ತಾಗಿದೆ. ಸನ್ ಸೆಟ್ ಟು ಸನ್ ರೈಸ್ ಪಾರ್ಟಿ ಎಂದು ಆಯೋಜಿಸಲಾಗಿತ್ತು. ಭಾನುವಾರ ಸಂಜೆ ಐದು ಗಂಟೆಯಿಂದ ಬೆಳಗ್ಗೆ ಆರು ಗಂಟೆ ತನಕ ಪಾರ್ಟಿ ನಡೆಸಲು ಉದ್ದೇಶಿಸಲಾಗಿತ್ತು.

ನಗರದ ಒಳಭಾಗದಲ್ಲಿ ಸಿಸಿಬಿ ಪೊಲೀಸರು ಇಂಥ ಪಾರ್ಟಿಗಳ ಮೇಲೆ ನಿರಂತರ ನಿಗಾ ಇಟ್ಟಿದ್ದು, ದಾಳಿಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ನಗರದ ಹೊರ ವಲಯದಲ್ಲಿ ಕಳ್ಳತನದಿಂದ ಪಾರ್ಟಿ ಆಯೋಜಿಸಲಾಗಿದೆ. ಇಂಥ ಒಂದು ದಿನದ ಪಾರ್ಟಿಗೆ ಮೂವತ್ತರಿಂದ ಐವತ್ತು ಲಕ್ಷ ಖರ್ಚು ಮಾಡಲಾಗುತ್ತದೆ. ಪಾರ್ಟಿಯಲ್ಲಿ ಡಿಜೆಗಳು, ಮಾಡೆಲ್‌ಗಳು ಹಾಗು ಟೆಕ್ಕಿಗಳು ಪತ್ತೆಯಾಗಿದ್ದಾರೆ. ಡಿಜೆಗಳಾದ RABZ, KAYVEE ಮತ್ತು BLOODY MASCARA ಎಂಬವರು ಭಾಗಿಯಾಗಿದ್ದಾರೆ. ಎಲ್ಲರನ್ನೂ ಪ್ರಶ್ನಿಸಲಾಗುತ್ತಿದೆ. ನಾರ್ಕೊಟಿಕ್ಸ್ ಸ್ನಿಫರ್ ಡಾಗ್‌ಗಳಿಂದ ಸ್ಥಳ ಪರಿಶೀಲನೆ ನಡೆಯುತ್ತಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರು ಎಲ್ಲರನ್ನು ಪ್ರಶ್ನಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Continue Reading

ಕರ್ನಾಟಕ

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Pralhad Joshi: ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹುಬ್ಬಳ್ಳಿ ಅಂಜಲಿ ಹತ್ಯೆ ಬಗ್ಗೆ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pralhad Joshi
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ, ಆತ್ಮಹತ್ಯೆ ಕೃತ್ಯಗಳೇ ಅಧಿಕವಾಗಿದ್ದು, ಅಭಿವೃದ್ಧಿ ಸಮಾಧಿಯಾಗಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ. 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ ಪ್ರಚಾರಕ್ಕೆ ತೆರಳಿದ್ದ ಸಚಿವರು ಭಾನುವಾರ ಹುಬ್ಬಳ್ಳಿಗೆ ಬರುತ್ತಲೇ ನೇರ ಅಂಜಲಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವಿರುದ್ಧ ಹರಿ ಹಾಯ್ದರು. ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಬಳಿಕ ಈಗ ಮತ್ತೊಬ್ಬ ಯುವತಿ ಭೀಕರವಾಗಿ ಕೊಲೆಯಾಗಿದ್ದಾಳೆ. ಅಂಜಲಿ ಅಜ್ಜಿ ಮತ್ತು ‌ಸಹೋದರಿಯರು‌ ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌? ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.

ಇದನ್ನೂ ಓದಿ | Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

ನೇಹಾ ಹತ್ಯೆಯಾದಾಗ ಬಹುದೊಡ್ಡ ಜನಾಂದೋಲನವೇ ಆಯಿತು. ಆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ‌ ಕೃತ್ಯ ನಡೆಸುವವರಿಗೆ‌ ಪ್ರೋತ್ಸಾಹ ನೀಡಿದಂತಾಗಿದೆ. ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಗಂಭೀರತೆಯೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಎಂಬುದನ್ನು ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ ಎಂದು ಕಿಡಿಕಾರಿದರು.

ಅಧಿಕಾರಿಗಳ ವರ್ಗಾವಣೆ ದಂಧೆ

ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಿಕ್ಕಾಪಟ್ಟೆ ಹಣ ತೆಗೆದುಕೊಳ್ತಾರೆ. ಗಾಂಜಾ‌, ಅಫೀಮು‌ ಚಟುವಟಿಕೆಗಳಿಗೆ‌ ಕಡಿವಾಣ ಹಾಕಲು ಆಗ್ತಿಲ್ಲ. ಕಾನೂನು‌ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಭಿವೃದ್ದಿಯು ಸಮಾಧಿಯಾಗಿದೆ ಎಂದು ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಾಲಕರಲ್ಲಿ ಭಯ

ರಾಜ್ಯದಲ್ಲಿ ಕಡುಬಡ‌ವರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಜನರು ಬೀದಿಗಿಳಿಯುವ ಪರಿಸ್ಥಿತಿಯನ್ನ‌ ಸರ್ಕಾರ ತಂದುಕೊಳ್ಳಬಾರದು. ಕೊಲೆ, ಹತ್ಯೆ, ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಯಾರೋ ಒಬ್ಬ ಅಧಿಕಾರಿ‌ಯನ್ನು ಅಮಾನತ್ತು ಮಾಡಿ ಕೈ ತೊಳೆದುಕೊಳ್ಳಬಾರದು ಎಂದು ಹೇಳಿದರು.

ಅಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ

ದುಷ್ಕರ್ಮಿಯಿಂದ ಹತ್ಯೆಗೀಡಾದ ಹುಬ್ಬಳ್ಳಿ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಭಾವಚಿತ್ರಕ್ಕೆ ಸಚಿವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಇದನ್ನೂ ಓದಿ | R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

ಈ‌ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶೋಕ‌ ಕಾಟವೆ, ಅಂಬಿಗೇರ ಸಮಾಜದ ಮುಖಂಡರಾದ ಮಾರುತಿ ಕಬ್ಬೇರ, ಪಕ್ಷದ ಪ್ರಮುಖರಾದ ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಬಾವಿ, ಶಶಿ ಬಿಜುವಾಡ, ಅನೂಪ್ ಬಿಜುವಾಡ, ರಾಜು ಜರ್ತಾರಘರ್, ಶಿವಯ್ಯ ಹಿರೇಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading
Advertisement
actor Chetan Kumar Ahimsa
ಸಿನಿಮಾ12 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ30 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್34 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್36 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ1 hour ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ1 hour ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌