Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌ - Vistara News

ಕ್ರೈಂ

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Murder case : ಬೆಂಗಳೂರಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲುಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಗದಗನಲ್ಲಿ ಗ್ರಾ.ಪಂ ಸದಸ್ಯನ ಮನೆ ಮೇಲೆ ದಾಳಿ (assault Case) ಮಾಡಲಾಗಿದೆ. ಉಡುಪಿಯಲ್ಲಿ ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

VISTARANEWS.COM


on

murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಗದಗ/ಉಡುಪಿ: ಬೆಂಗಳೂರಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಡೈರಿ ಸರ್ಕಲ್ ಬಳಿ ವ್ಯಕ್ತಿ ತಲೆ ಮೇಲೆ ಕಲ್ಲೆಸೆದು ಭೀಕರವಾಗಿ ಕೊಲೆ (Murder case) ಮಾಡಲಾಗಿದೆ. ನೇಪಾಳ ಮೂಲದ ಗಜೇಂದ್ರ ಸಿಂಗ್ ಕೊಲೆಯಾದವನು

ಕಳೆದ ಮೂರು ವರ್ಷದ ಹಿಂದೆ ನೇಪಾಳದಿಂದ ಬೆಂಗಳೂರಿಗೆ ಬಂದಿದ್ದ ಗಜೇಂದ್ರ ಸಿಂಗ್, ಯಲಹಂಕದ ತಿರುಪತಿ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಸಂತೋಷ್ ಜತೆ ಬಾರ್‌ಗೆ ಹೋಗಿದ್ದ.

ಇಬ್ಬರು ಕಂಠಪೂರ್ತಿ ಕುಡಿದು ಮನೆಗೆ ಹೋಗುವಾಗ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ಹೋಗಿ ಗಜೇಂದ್ರ ಸಿಂಗ್ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಿ ಸಂತೋಷ್‌ ಎಸ್ಕೇಪ್‌ ಆಗಿದ್ದಾನೆ. ಘಟನೆ ಸಂಬಂದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತದೇಹವನ್ನು ಯಲಹಂಕ ‌ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ಸೇಡಿಗಾಗಾಗಿ ಗ್ರಾಪಂ ಸದಸ್ಯನ ಮನೆ ಮೇಲೆ ದಾಳಿ

ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಸೇಡು ತೀರಿಸಿಕೊಳ್ಳಲು ರಾತ್ರೋರಾತ್ರಿ ಗ್ರಾಮ ಪಂಚಾಯಿತಿ ಸದಸ್ಯನ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇ 8ರ ಮಧ್ಯರಾತ್ರಿ ಘಟನೆ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯ ಮಿಲಿಂದ್ ಕಾಳೆ ಮನೆ ಮೇಲೆ ದಾಳಿ ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಂಡ್ ಫ್ಯಾನ್ ವ್ಯವಹಾರವಾಗಿ ಮಿಲಿಂದ್ ಕಾಳೆ, ಪ್ರಕಾಶ್ ನಿಡಗುಂದಿ ಮಧ್ಯದ ಮುನಿಸಿನಿಂದ ಗಲಾಟೆ ನಡೆದಿದೆ ಎನ್ನಲಾಗಿದೆ. ಮಿಲಿಂದ್ ಕಾಳೆ ಮೇಲಿನ ಸೇಡಿಗಾಗಿ ಲಾಂಗ್, ಮಚ್ಚು, ರಾಡ್‌, ಕಲ್ಲುಗಳಿಂದ ದಾಳಿ ನಡೆಸಿದ್ದಾರೆ.

ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಗದಗ ಗ್ರಾಮೀಣ ಠಾಣೆಯಲ್ಲಿ ಸುಮಾರು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹಲವರನ್ನು ಬಂಧಿಸಿದ್ದು, ಪರಾರಿ ಆಗಿರುವ ಇನ್ನುಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಪ್ರಕರಣದ ಬೆನ್ನಲ್ಲೇ ಮೇ 9ರ ಮಧ್ಯಾಹ್ನ ಆರೋಪಿ ಪ್ರಕಾಶ್ ನಿಡಗುಂದಿ ಕಾರಿಗೆ ಬೆಂಕಿ ಹಾಗೂ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಿಲಿಂದ್ ಕಾಳೆ ಮನೆ ಮೇಲೆ ದಾಳಿಯ ರಿವೇಂಜ್‌ಗೆ ಪ್ರಕಾಶ್‌ ನಿಡಗುಂದಿ ಕಾರಿಗೆ ಮಿಲಿಂದ ಕಾಳೆ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಎರಡೂ ಬಣದಿಂದ ಹಲವರನ್ನು ಬಂಧಿಸಲಾಗಿದೆ. ಎರಡು ಕಡೆಯಿಂದಲ್ಲೂ ಪ್ರತ್ಯೇಕ ದೂರು ದಾಖಲಾಗಿದೆ.

ಉಡುಪಿಯಲ್ಲಿ ಪೆಟ್ರೋಲ್‌ ವಿಚಾರಕ್ಕೆ ಕಿರಿಕ್‌

ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ನಡೆದಿದೆ. ಎರಡು ಬೈಕ್‌ಗಳಲ್ಲಿ ಮಧ್ಯರಾತ್ರಿ ಬಂದ ಯುವಕರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದಾರೆ. ಪೆಟ್ರೋಲ್ ಹಾಕಲು ಹೇಳಿದಾಗ ಸಿಬ್ಬಂದಿ ಬಂದ್ ಆಗಿದೆ ಎಂದಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಯುವಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರದೀಪ್ ಕುಮಾರ್ (26) ಹಲ್ಲೆಗೊಳಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

Actor Darshan: ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

VISTARANEWS.COM


on

Actor Darshan in Parappana Agrahara Jail special fan who came to visit
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಹಾಗೂ ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್‌ ನೋಡಲು ಬಂದಿದ್ದಾರೆ.

ಇಂದು ಭಾನುವಾರ ಆದ ಕಾರಣ ದರ್ಶನ್‌ ಭೇಟಿಗೆ ಯಾರಿಗೂ ಅವಕಾಶ ಇಲ್ಲ. ಆದರೂ ನಟ ದರ್ಶನ್ ಭೇಟಿಗೆ ವಿಶೇಷ ಚೇತನ ಆಗಮಿಸಿದ್ದರು, ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಕಿವಿ ಕೇಳಿಸದಿದ್ದರು ಶಂಖ ಊದುತ್ತಾ, ಜಾಗಟೆ ಬಾರಿಸುತ್ತ ಜೈಲಿನ ಬಳಿ ಬಂದಿದ್ದರು. ತುರುವೆಕೆರೆಯ ಜಡಿಯೊ ಗ್ರಾಮದ ವಿಶೇಷ ಚೇತನ ಅಭಿಮಾನಿಯಾಗಿದ್ದಾರೆ. ʻʻನಟ ದರ್ಶನ್ ಒಳ್ಳೆಯ ವ್ಯಕ್ತಿ. ಅಂತಹವರನ್ನು ಜೈಲಿನಲ್ಲಿಟ್ಟರೆ ಸಿನಿ ಕಾರ್ಮಿಕರು, ನಿರ್ಮಾಪಕರಿಗೆ ತೊಂದರೆ. ಅವ್ರು ತಪ್ಪು ಮಾಡಿರಬಹುದು. ಆದರೆ ನಟ ದರ್ಶನ್ ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಬೇಕು. ದರ್ಶನ್ ಬಿಡುಗಡೆಗಾಗಿ ಗೃಹ ಮಂತ್ರಿ ಜಿ ಪರಮೇಶ್ವರ ಭೇಟಿಗೆ ಹೋಗಿದ್ದೆ. ಆದರೆ ಅವರು ಸಿಗಲಿಲ್ಲʼʼ ಎಂದು ವಿಶೇಷ ಚೇತನ ಅಭಿಮಾನಿ ಗೋವಿಂದ ರಾಜು ಹೇಳಿಕೆ ನೀಡಿದರು.

ಇದನ್ನೂ ಓದಿ: Actor Darshan: ಎಲ್ಲಾ ಹಣೆಬರಹ ಸ್ವಾಮಿ ಏನು ಮಾಡೋದು? ದರ್ಶನ್‌ ಕೇಸ್‌ ಬಗ್ಗೆ ಶಿವಣ್ಣ ಮಾತು!

ಇನ್ನು ಮಾರತ್ತಹಳ್ಳಿಯಿಂದ ಆಟೋ ಚಾಲಕ ಸುನೀಲ್ ದರ್ಶನ್ ನೋಡಲು ಆಗಮಿಸಿದ್ದರು. ತಿಂಗಳಿಗೆ ಒಮ್ಮೆ ದರ್ಶನ್ ಅಣ್ಣನ ಭೇಟಿ ಮಾಡುತ್ತಿದ್ದೆ ಆದರೆ ಈಗ ಜೈಲಿನಲ್ಲಿ ಇದ್ದಾರೆ. ಹಾಗಾಗಿ ನೋಡಲು ಬಂದೆ. ನಮ್ ಬಾಸ್ ಒಳ್ಳೆಯ ಕೆಲಸಗಳನ್ನು ಜನರಿಗೆ ಮಾಡುತ್ತಿದ್ದರು. ಈಗ ಅವರು ಜೈಲಿನಲ್ಲಿ ಕಷ್ಟ ಅನುಭವಿಸುತ್ತಿದ್ದಾರೆ. ತಂದೆ ತಾಯಿ‌ ಬಿಟ್ರೆ ದರ್ಶನ್ ನನಗೆ ದೇವರುʼʼಎಂದಿದ್ದಾರೆ.

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

Continue Reading

ಕ್ರೈಂ

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

ಎರಡು ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು (Physical Assualt) ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಆನ್‌ಲೈನ್ ಚಾಟ್‌ರೂಮ್ ನಲ್ಲಿ ಹುಡುಕುತ್ತಿದ್ದ ಕ್ರಾಲಿ ಮತ್ತು ಟ್ರಿಪ್ ದಂಪತಿಯನ್ನು ಅಮೆರಿಕದಲ್ಲಿ ಜಾರ್ಜಿಯಾದ ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Physical Assault
Koo

ಜಾರ್ಜಿಯಾ: ಎರಡು ವರ್ಷದ ಮಗಳನ್ನು ಲೈಂಗಿಕ ಚಟುವಟಿಕೆಗಾಗಿ (Physical Assualt) ಮಾರಾಟ ಮಾಡಲು ಯತ್ನಿಸಿದ ದುಷ್ಟ ದಂಪತಿಯನ್ನು ಅಮೆರಿಕದಲ್ಲಿ (america) ಜಾರ್ಜಿಯಾದ (Georgia) ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ. ಆಶ್ಲೀ ಕ್ರಾಲಿ (26) ಜೇಮ್ಸ್ ಟ್ರಿಪ್ (29) ಬಂಧಿತರು.

ಕ್ರಾಲಿ ಮತ್ತು ಟ್ರಿಪ್ ತಮ್ಮ 2 ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಹುಡುಕುತ್ತಿದ್ದರು. ಇದಕ್ಕಾಗಿ ಆನ್‌ಲೈನ್ ಚಾಟ್‌ರೂಮ್ ಅನ್ನು ಬಳಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಕ್ರಾಲಿ ಅಶ್ಲೀಲ ವಿಡಿಯೋಗಳನ್ನು ತಯಾರಿಸಿ ಅದನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು. ಇದರಲ್ಲಿ ಕೆಲವು ವಿಡಿಯೋಗಳು ಅಂಬೆಗಾಲಿಡುವ ಮಕ್ಕಳು ಸೇರಿದಂತೆ ಅವರ ಮಕ್ಕಳನ್ನು ಒಳಗೊಂಡಿವೆ. ಟ್ರಿಪ್ ತನ್ನ ಅಪ್ರಾಪ್ತ ವಯಸ್ಸಿನ ಸಂಬಂಧಿಗಳೊಂದಿಗೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕ್ರಾಲಿಯ ಅನುಮತಿಯನ್ನೂ ಪಡೆಯುತ್ತಿದ್ದನು.

ಇದನ್ನೂ ಓದಿ: Physical assualt : ಅಣ್ಣ ಕರೀತಾನೆ ಎಂದು ಹೇಳಿ ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ; ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಇವರ ಆರೈಕೆಯಲ್ಲಿದ್ದ ಎಲ್ಲಾ ಮಕ್ಕಳನ್ನು ಅವರ ಮನೆಯಿಂದ ಅಧಿಕಾರಿಗಳು ತ್ವರಿತವಾಗಿ ರಕ್ಷಣೆ ಮಾಡಿದ್ದಾರೆ. ಕ್ರಾಲಿ ವಿರುದ್ಧ ಮಕ್ಕಳ ಮೇಲೆ ಕಿರುಕುಳ ಮತ್ತು ಕಂಪ್ಯೂಟರ್ ಅಥವಾ ಎಲೆಕ್ಟ್ರಾನಿಕ್ ಪೋರ್ನೋಗ್ರಫಿ ಮತ್ತು 2007ರ ಮಕ್ಕಳ ಶೋಷಣೆ ಮತ್ತು ತಡೆಗಟ್ಟುವಿಕೆ ಕಾಯಿದೆಯನ್ನು ಉಲ್ಲಂಘಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. ಟ್ರಿಪ್ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಸದ್ಯ ಇಬ್ಬರನ್ನೂ ಕೊಲಂಬಿಯಾ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ. ತನಿಖೆ ಮುಂದುವರಿಸಲಾಗಿದ್ದು ಹೆಚ್ಚುವರಿ ಆರೋಪಗಳನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ: ಬಾಲಕಿ ಸಾವು

ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೃತಪಟ್ಟಿರುವ ಘಟನೆ ಕಲ್ಬುರ್ಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವ ಉಂಟಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಮಾಡುವುದಲ್ಲದೇ (Bike Wheeling) ಬೈಕ್‌ನಲ್ಲಿ ಓಡಾಡುವ ಯುವತಿಯರಿಗೆ ಕೀಟಲೆ ಮಾಡಿ ಪುಂಡರು ರ‍್ಯಾಗಿಂಗ್‌ ಮಾಡಿದ್ದಾರೆ. ಪುಂಡರ ಹಾವಳಿ ತಪ್ಪಿಸುವಲ್ಲಿ ಪೊಲೀಸರು ಹಿಂದೆ ಬಿದ್ದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

By

bike wheeling
Koo

ಆನೇಕಲ್: ಬೆಂಗಳೂರಿನ ಬೀದಿಗಳಲ್ಲಿ ಭಯಾನಕ ವ್ಹೀಲಿಂಗ್‌ (Bike Wheeling) ಹಾವಳಿ ಹೆಚ್ಚಾಗಿದೆ. ವ್ಹೀಲಿಂಗ್‌ ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಗೆ ಕೀಟಲೆ ಮಾಡಿ ಯುವಕರು ಪುಂಡಾಟ ಮೆರೆದಿದ್ದಾರೆ. ಪುಂಡರ ಹಾವಳಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ.

ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕಸಿಕ್ಕ ರೋಡ್‌ಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಚಟ ಹಲವು ಯುವಕರಲ್ಲಿ ಕಂಡುಬರುತ್ತಿದೆ. ಇದೀಗ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆದ್ದಾರಿಯುದ್ದಕ್ಕೂ ವ್ಹೀಲಿಂಗ್‌ ಮಾಡಿ ಕಿರಿಕಿರಿ ಮಾಡಿದ್ದಾರೆ. ಮಾತ್ರವಲ್ಲದೇ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯರನ್ನು ಚುಡಾಯಿಸಿರುವುದು ಕಂಡು ಬಂದಿದೆ.

ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಜನ ಯುವಕರ ತಂಡವು ಎಲೆಕ್ಟ್ರಾನಿಕ್ ಸಿಟಿಯಿಂದ ಚಂದಾಪುರದವರೆಗೆ ಯುವತಿಯನ್ನು ಹಿಂಬಾಲಿಸುತ್ತಾ ಕೀಟಲೆ ಮಾಡಿದ್ದಾರೆ. ಹಲವು ಬಾರಿ ಯುವತಿ ಎಚ್ಚರಿಕೆ ನೀಡಿದರೂ ಯುವಕರು ಹುಚ್ಚಾಟ ಮೆರೆದಿದ್ದಾರೆ. ವ್ಹೀಲಿಂಗ್‌ ಮಾಡಿ ಇತರೆ ವಾಹನಗಳಿಗೂ ಕಿರಿಕ್ ಮಾಡಿದ್ದಲ್ಲೇ ರಾಜಾರೋಷವಾಗಿ ಹೆದ್ದಾರಿಯಲ್ಲಿ ಯುವತಿಯರನ್ನು ರೇಗಿಸಿದ್ದಾರೆ.

ಇದನ್ನೂ ಓದಿ: Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

ಇತ್ತ ಕಾರು-ಆಟೋ ಚಾಲಕರು ಸೂಚನೆಗೂ ತಲೆ ಕೆಡಿಸಿಕೊಳ್ಳದೆ ಯುವಕರು ಪುಂಡಾಟಿಕೆ ತೋರಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ಎದುರಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕ ಯುವತಿಗೆ ತೊಂದರೆ ಮಾಡಿದ್ದಾರೆ. ಬಳಿಕ ಯುವತಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಳ್ಳಲು ಶುರು ಮಾಡುತ್ತಿದ್ದಂತೆ ತಾವು ಧರಿಸಿದ್ದ ಶರ್ಟ್‌ನಲ್ಲೇ ಮುಖ ಮುಚ್ಚಿಕೊಂಡು ಎಸ್ಕೇಪ್‌ ಆಗಲು ಯತ್ನಿಸಿದ್ದಾರೆ.

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

Road Accident : ವೇಗವಾಗಿ ಬಂದ ಬಸ್‌ವೊಂದು ತಿರುವಿನಲ್ಲಿ ಕಂದಕ್ಕೆ ಉರುಳಿ ಬಿದ್ದಿದೆ. ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದರೆ, ಉಳಿದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯವಾಗಿವೆ.

VISTARANEWS.COM


on

By

Road Accident
Koo

ಮೈಸೂರು: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ಸಾರಿಗೆ ಬಸ್‌ವೊಂದು ಕಂದಕಕ್ಕೆ (Road Accident ) ಉರುಳಿದೆ. ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡಿನ ತಾಲೂಕಿನ ಮರಡಿಹುಂಡಿ ಗ್ರಾಮದ ಸಮೀಪ ಅಪಘಾತ ನಡೆದಿದೆ.

ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಬಸ್‌ ಮೈಸೂರಿಗೆ ತೆರಳುತ್ತಿತ್ತು. ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಸ್ ಪಲ್ಟಿ ಹೊಡೆದಿದೆ. ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ವರುಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಕ್ಕೆ ಬಿದ್ದ ಬಸ್‌ ಅನ್ನು ತೆರವು ಮಾಡಲಾಗಿದೆ.

ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

ಡಿವೈಡರ್‌ಗೆ ಕಾರು ಡಿಕ್ಕಿ ಇಬ್ಬರು ಸಾವು

ವಿಜಯನಗರ: ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ (Road Accident).

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pradeep Eshwar
ಕರ್ನಾಟಕ4 mins ago

Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

Actor Darshan in Parappana Agrahara Jail special fan who came to visit
ಸ್ಯಾಂಡಲ್ ವುಡ್19 mins ago

Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

Hardik Pandya
ಪ್ರಮುಖ ಸುದ್ದಿ21 mins ago

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

Physical Assault
ಕ್ರೈಂ27 mins ago

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

bike wheeling
ಬೆಂಗಳೂರು ಗ್ರಾಮಾಂತರ37 mins ago

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

Ex CIA Officer
ವಿದೇಶ40 mins ago

Ex CIA Officer: ಪಾಕಿಸ್ತಾನದಲ್ಲಿ ಉಗ್ರರನ್ನು ತಾಲಿಬಾನ್ ಮೂಲಕ ಕೊಲ್ಲುತ್ತಿರುವ ಭಾರತ; ಅಮೆರಿಕ ಗುಪ್ತಚರ ಇಲಾಖೆ ಮಾಜಿ ಅಧಿಕಾರಿ ಹೇಳಿಕೆ

Suryakumar Yadav
ಕ್ರೀಡೆ44 mins ago

Suryakumar Yadav Catch: ಬೌಂಡರಿ ಲೈನ್ ಟಚ್ ಮಾಡಿದ್ರಾ ಸೂರ್ಯಕುಮಾರ್?; ಹೊಸ ವಿಡಿಯೊ ವೈರಲ್​

Actor Darshan case Shivaraj Kumar reaction
ಸ್ಯಾಂಡಲ್ ವುಡ್51 mins ago

Actor Darshan: ಎಲ್ಲಾ ಹಣೆಬರಹ ಸ್ವಾಮಿ ಏನು ಮಾಡೋದು? ದರ್ಶನ್‌ ಕೇಸ್‌ ಬಗ್ಗೆ ಶಿವಣ್ಣ ಮಾತು!

Rohit Sharma
ಕ್ರೀಡೆ2 hours ago

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Karave Protest
ಕರ್ನಾಟಕ2 hours ago

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು3 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ23 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌