Site icon Vistara News

Murder Case : ಎದೆಗೆ ಚೂರಿ ಹಾಕಿ ರೌಡಿಶೀಟರ್‌ ಹತ್ಯೆ; ಕಾಣೆಯಾಗಿದ್ದ ವ್ಯಕ್ತಿಯನ್ನು ಹೂತಿಟ್ಟ ಹಂತಕರು!

Rowdy sheeter murdered in Vijayanagar

ವಿಜಯನಗರ/ದಾವಣಗೆರೆ: ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಎದೆಗೆ ಚೂರಿ ಹಾಕಿ ರೌಡಿಶೀಟರ್‌ವೊಬ್ಬನ ಬರ್ಬರ ಹತ್ಯೆಯಾಗಿದೆ. ಬಂಗಾರಿ ಮಂಜುನಾಥ್ (28) ಕೊಲೆಯಾದ (Murder Case) ರೌಡಿಶೀಟರ್ ಆಗಿದ್ದಾನೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣದ ಜೆಸ್ಕಾಂ ಕಚೇರಿಯ ಬಳಿ ಘಟನೆ ನಡೆದಿದೆ. ಹಳೇ ದ್ವೇಷ ಹಾಗೂ ವೈಷಮ್ಯದ ಜತೆಗೆ ಹಣಕಾಸಿನ ವ್ಯವಹಾರವೇ ಕೊಲೆಗೆ ಕಾರಣ ಎನ್ನಲಾಗಿದೆ. ದುಷ್ಕರ್ಮಿಗಳು ಮಂಜುನಾಥ್‌ ಎದೆಗೆ ಚೂರಿ ಹಾಕಿ ಕೊಲೆ ಮಾಡಿದ್ದಾರೆ.

ಆಸ್ಪತ್ರೆಯ ಎದುರು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯನಗರ ಎಸ್‌ಪಿ ಶ್ರೀಹರಿಬಾಬು ಬಿಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ, ಸಿಪಿಐ, ವಿಕಾಸ್, ಕೊಟ್ಟೂರು ಪಿಐ ವೆಂಕಟಸ್ವಾಮಿ ಸೇರಿದಂತೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೊಡಿದ್ದಾರೆ. ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗ್ರಾಮದಲ್ಲಿ ಹತ್ತು ದಿನಗಳ ಹಿಂದೆ ವ್ಯಕ್ತಿಯೊಬ್ಬ ಕಾಣೆಯಾಗಿದ್ದ. ಆದರೆ ಇದೀಗ ಅಣಬೂರು ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದಾರೆ. ಜಗಳೂರು ಗಾಂಧಿನಗರದ ನಿವಾಸಿ ಡಾಕ್ಯಾನಾಯ್ಕ್ ಎಂಬಾತ ಶವವಾಗಿ ಪತ್ತೆಯಾಗಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಸಾಂತಕುಮಾರ್ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಹೂತಿಟ್ಟ ಶವವನ್ನು ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಜಗಳೂರು ಠಾಣೆಯ ಪಿಎಸ್‌ಐ ಸಾಗರ್, ತಾಲೂಕು ದಂಡಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ಸಿಬ್ಬಂದಿ, ಬೆರಳಚ್ಚು ಸಿಬ್ಬಂದಿ ಹಾಗೂ ಶ್ವಾನದಳ ಆಗಮಿಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version