Murder Case: ಶಿವರಾತ್ರಿ ದಿನವೇ ರೌಡಿಶೀಟರ್‌ನ ಕೊಚ್ಚಿ ಕೊಲೆ - Vistara News

ಕ್ರೈಂ

Murder Case: ಶಿವರಾತ್ರಿ ದಿನವೇ ರೌಡಿಶೀಟರ್‌ನ ಕೊಚ್ಚಿ ಕೊಲೆ

Rowdy Sheeter Murder Case : ಶಿವ ಅಲಿಯಾಸ್‌ ಕಾಟನ್‌ಪೇಟೆ ಶಿವ ಅಲಿಯಾಸ್‌ ವರ್ತೆ ಎಂಬ ಹೆಸರಿನ ಈತ ಕಾಟನ್ ಪೇಟೆ ಠಾಣೆ ರೌಡಿಶೀಟರ್ ಆಗಿದ್ದ.

VISTARANEWS.COM


on

rowdysheeter shiva
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ರೌಡಿಶೀಟರ್ ಒಬ್ಬನನ್ನು ಶಿವರಾತ್ರಿಯ (Maha Shivaratri) ದಿನವೇ ಬರ್ಬರವಾಗಿ ಹತ್ಯೆ (Rowdy Sheeter Murder Case) ಮಾಡಲಾಗಿದೆ. ಶಿವ ಅಲಿಯಾಸ್ ವರ್ತೆ ಕೊಲೆಯಾದ ರೌಡಿಶೀಟರ್ ಆಗಿದ್ದಾನೆ.

ಶಿವ ಅಲಿಯಾಸ್‌ ಕಾಟನ್‌ಪೇಟೆ ಶಿವ ಅಲಿಯಾಸ್‌ ವರ್ತೆ ಎಂಬ ಹೆಸರಿನ ಈತ ಕಾಟನ್ ಪೇಟೆ ಠಾಣೆ ರೌಡಿಶೀಟರ್ ಆಗಿದ್ದಾನೆ. ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್‌ನಲ್ಲಿ ಕೃತ್ಯ ನಡೆದಿದೆ. ಹಲವು ಜನರಿದ್ದ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದೆ.

ಹಳೆಯ ದ್ವೇಷ ಹಾಗೂ ಸ್ಥಳೀಯ ಗ್ಯಾಂಗ್‌ಗಳ ನಡುವಿನ ತಿಕ್ಕಾಟವೇ ಈ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಲೋಕಲ್‌ ವ್ಯಾಪಾರಿಗಳ ಮೇಲೆ ಸ್ವಾಮ್ಯಕ್ಕೆ ಪ್ರಯತ್ನಿಸುತ್ತಿದ್ದ ಶಿವನ ಮೇಲೆ ಎದುರಾಳಿ ಗ್ಯಾಂಗ್‌ನ ಕಣ್ಣಿತ್ತು ಎನ್ನಲಾಗಿದೆ. ಸಿಸಿಟಿವಿ ಫೂಟೇಜ್‌ಗಳ ಆಧಾರದಲ್ಲಿ ಕೊಲೆಗಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮೈಸೂರು ಮನಪಾ ಸದಸ್ಯನ ಸೋದರನ ಕೊಲೆ

ಮೈಸೂರು: ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯನ ಸಹೋದರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ (Murder Case) ನಗರದ ಉದಯಗಿರಿಯ ಮಾದೇಗೌಡ ವೃತ್ತ ಸಮೀಪ ನಡೆದಿದೆ. 5ಕ್ಕೂ ಹೆಚ್ಚು ಜನರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪಾಲಿಕೆ ಸದಸ್ಯ ಪಂಡು ಸಹೋದರ ಅಕ್ಮಲ್ ಕೊಲೆಯಾದ ವ್ಯಕ್ತಿ. ಬೆಂಗಳೂರು ಮೂಲದ ವ್ಯಕ್ತಿಗಳಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ವ್ಯಕ್ತಿ ಅಕ್ಮಲ್ ಎಸ್‌ಡಿಪಿಐನಲ್ಲಿ ಗುರುತಿಸಿಕೊಂಡಿದ್ದ.

ಆಸ್ತಿ ವಿಚಾರಕ್ಕೆ ಬರ್ಬರ ಕೊಲೆ

ಯಾದಗಿರಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಕೊಲೆ ಮಾಡಿರುವ ಘಟನೆ (Murder Case) ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಬಳಿ ನಡೆದಿದೆ. ಆಸ್ತಿ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಂಡ್ರಕಿ ಗ್ರಾಮದ ನರಸಿಂಹಲು (48) ಕೊಲೆಯಾದ ವ್ಯಕ್ತಿ. ಚಂಡ್ರಕಿ ಗ್ರಾಮದ ಮುಖ್ಯ ರಸ್ತೆಯ ಮೇಲೆಯೇ ಹಾಡ ಹಗಲೇ ಕಿರಾತಕರು ಕೊಲೆ ಮಾಡಿದ್ದಾರೆ. ಆಸ್ತಿ ವಿಚಾರವಾಗಿ ನರಸಿಂಹಲು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ಮೈಸೂರು ಪಾಲಿಕೆ ಕಾಂಗ್ರೆಸ್ ಸದಸ್ಯನ ಸಹೋದರನ ಬರ್ಬರ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Davanagere News: ದಾವಣಗೆರೆ ಸಮೀಪದ ಎಲೆಬೇತೂರಿನ ಕೆರೆಯಲ್ಲಿ ಲಕ್ಷಾಂತರ ಮೀನುಗಳು ಮೃತಪಟ್ಟಿವೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮೀನು ಸಾಕಾಣಿಕೆದಾರರು ಮನವಿ ಮಾಡಿದ್ದಾರೆ.

VISTARANEWS.COM


on

Davanagere News
Koo

ದಾವಣಗೆರೆ: ಕೆರೆಯಲ್ಲಿ 1 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮವಾಗಿರುವ ಘಟನೆ ದಾವಣಗೆರೆ (Davanagere News) ಸಮೀಪದ ಎಲೆಬೇತೂರಿನ ಕೆರೆಯಲ್ಲಿ ನಡೆದಿದೆ. ಅಧಿಕ ಬಿಸಿಲಿನ ತಾಪಕ್ಕೆ ಮೀನುಗಳು ಮೃತಪಟ್ಟಿರಬಹುದಾ ಅಥವಾ ಹಳೇ ವೈಷಮ್ಯದಿಂದ ಯಾರಾದರೂ ಕೆರೆಗೆ ವಿಷ ಬೆರೆಸಿದ್ದರಿಂದ ಮೀನುಗಳು ಸಾವಿಗೀಡಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.

ಕೆರೆಯಲ್ಲಿ 1.50 ಲಕ್ಷ ಮೀನುಗಳನ್ನು ಸಾಕಲಾಗಿತ್ತು. ಅದರಲ್ಲಿ 40 ಸಾವಿರ ಮೀನು ಹಿಡಿದು ಮಾರಲಾಗಿತ್ತು. ಇನ್ನುಳಿದ ಸುಮಾರು ಲಕ್ಷಕ್ಕೂ ಅಧಿಕ ಮೀನುಗಳು ಸಾವನ್ನಪ್ಪಿವೆ ಎನ್ನಲಾಗಿದೆ. ಬರೋಬ್ಬರಿ 5ರಿಂದ 10 ಕೆಜಿ ಇರುವ ಮೀನುಗಳು ಮೃತಪಟ್ಟು, ಕೆರೆಯಲ್ಲಿ ತೇಲುತ್ತಿವೆ. ಸತ್ತ ಮೀನುಗಳನ್ನು ನೋಡಿ ಮೀನು ಸಾಕಾಣಿಕೆದಾರರು ಕಂಗಾಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ದಾವಣಗೆರೆ: ಕುರಿಗೆ ಮೇವು ತರಲು ಹೋಗಿದ್ದ ಯುವಕ‌ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಬಿ.ಚಿತ್ತಾನಹಳ್ಳಿಯಲ್ಲಿ ನಡೆದಿದೆ. ಬಸವರಾಜ್ (18) ಮೃತ ದುರ್ದೈವಿ. ದಿವಂಗತ ಮಂಜುನಾಥ್, ಸೀತಮ್ಮ ದಂಪತಿಗಳ ದ್ವಿತೀಯ ಪುತ್ರ ಬಸವರಾಜ್ ಮುಂಜಾನೆ ಕುರಿಗಳಿಗೆ ಮೇವು ತರಲು ತೆರಳಿದ್ದ ವೇಳೆ ಅವಘಡ ನಡೆದಿದೆ.

ಮರ ಹತ್ತಿ ಸೊಪ್ಪು ಕತ್ತರಿಸುವ ವೇಳೆ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕ್ರೈಂ

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಇದಕ್ಕಾಗಿ ಕೆಲವು ಸಲಹೆಗಳು (Driving Tips) ಇಲ್ಲಿವೆ.

VISTARANEWS.COM


on

By

Driving Tips
Koo

ತಮಿಳುನಾಡಿನಲ್ಲಿ (tamilnadu) ಇತ್ತೀಚೆಗೆ ನಡೆದ ಭೀಕರ ರಸ್ತೆ (Driving Tips) ಅಪಘಾತದಲ್ಲಿ (Road Accident) ಐದು ಮಂದಿ (five death) ಸಾವನ್ನಪ್ಪಿದ್ದರು. ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು (car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ಐವರು ಪುದುಚೇರಿಯಿಂದ ಹಿಂತಿರುಗುತ್ತಿದ್ದಾಗ ಕಲಾಪಕ್ಕಂನಲ್ಲಿ ಈ ಅಪಘಾತ ಸಂಭವಿಸಿತ್ತು. ಗೋವಾದಲ್ಲಿ (goa) ನಡೆದ ಮತ್ತೊಂದು ಘಟನೆಯಲ್ಲಿ ಮುಖ್ಯರಸ್ತೆಯಲ್ಲಿ ಹಸು ಹಠಾತ್ ಕಾಣಿಸಿಕೊಂಡಿದ್ದರಿಂದ ಕಾರಿಗೆ ಭಾರಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ನೀವು ಕಾರನ್ನು ಓಡಿಸುತ್ತಿದ್ದರೆ ಮತ್ತು ಇದ್ದಕ್ಕಿದ್ದಂತೆ ಪ್ರಾಣಿಯು ನಿಮ್ಮ ಮುಂದೆ ಬಂದರೆ ನೀವು ಈ ಕೆಳಗಿನ ಸಲಹೆಗಳನ್ನು ಅನುಸರಿಸಬಹುದು.


1. ವೇಗದ ಮಿತಿಯಲ್ಲಿ ಚಾಲನೆ

ಅತಿ ವೇಗವಾಗಿ ವಾಹನ ಓಡಿಸುವುದು ಸರಿಯಲ್ಲ. ಇದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ವೇಗದ ವಾಹನ ಚಾಲನೆಗೆ ನಿಯಂತ್ರಣ ಹೇರಿ. ವಿಶೇಷವಾಗಿ ರಸ್ತೆಗಳಲ್ಲಿ ಪ್ರಾಣಿಗಳ ಸಾಧ್ಯತೆಗಳಿರುವ ಪ್ರದೇಶಗಳಲ್ಲಿ ನಿಧಾನವಾಗಿ ವಾಹನ ಚಲಾಯಿಸಿ.

2. ಶಾಂತವಾಗಿರಿ

ಭಯಭೀತರಾಗಬೇಡಿ ಅಥವಾ ಹಠಾತ್ ಚಲನೆಯನ್ನು ಮಾಡಬೇಡಿ. ಅದು ಪ್ರಾಣಿಗಳನ್ನು ಗಾಬರಿಗೊಳಿಸಬಹುದು ಅಥವಾ ನಿಮ್ಮ ಕಾರಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಬಹುದು.

3. ನಿಧಾನಗೊಳಿಸಿ

ಪ್ರಾಣಿಗಳು ಹಠಾತ್ ಎದುರು ಬಂದಾಗ ವೇಗವನ್ನು ತಕ್ಷಣವೇ ಆದರೆ ಕ್ರಮೇಣ ಕಡಿಮೆ ಮಾಡಿ. ಬ್ರೇಕ್‌ಗಳ ಮೇಲೆ ಸ್ಲ್ಯಾಮ್ ಮಾಡುವುದನ್ನು ತಪ್ಪಿಸಿ, ಇದು ನಿಮ್ಮ ಕಾರನ್ನು ಸ್ಕಿಡ್ ಮಾಡಲು ಕಾರಣವಾಗಬಹುದು.

4. ಹಾರ್ನ್ ಬಳಸಿ

ಪ್ರಾಣಿಗಳು ಮತ್ತು ನಿಮ್ಮ ವಾಹನ ಬರುತ್ತಿರುವುದನ್ನು ಇತರ ಚಾಲಕರು ಗಮನ ಹರಿಸುವಂತೆ ಎಚ್ಚರಿಸಲು ವಾಹನದಲ್ಲಿರುವ ಹಾರ್ನ್ ಅನ್ನು ಸದ್ದು ಮಾಡುತ್ತ ಚಲಾಯಿಸಿ.

5. ಏಕಾಏಕಿ ತಿರುಗಿಸಬೇಡಿ

ರಸ್ತೆಯಲ್ಲಿ ವಾಹನವನ್ನು ನೇರವಾಗಿ ಚಲಿಸಲು ಪ್ರಯತ್ನಿಸಿ ಮತ್ತು ಹಠಾತ್ ವಾಹನ ತಿರುಗಿಸಬೇಡಿ. ವಿಶೇಷವಾಗಿ ಹತ್ತಿರದಲ್ಲಿ ಇತರ ವಾಹನಗಳು ಇದ್ದಲ್ಲಿ ಸ್ಟೇರಿಂಗ್ ನಿಯಂತ್ರಣ ಕಷ್ಟವಾದಾಗ ಇತರ ವಸ್ತು ಅಥವಾ ವಾಹನಕ್ಕೆ ಡಿಕ್ಕಿಯಾಗಬಹುದು.

6. ವಾಹನದ ಲೈಟ್‌ಗಳನ್ನು ಫ್ಲ್ಯಾಶ್ ಮಾಡಿ

ಕತ್ತಲೆಯಾಗಿದ್ದರೆ ಅಥವಾ ಗೋಚರತೆ ಕಡಿಮೆಯಿದ್ದರೆ ಪ್ರಾಣಿಗಳು ಮತ್ತು ಇತರ ಚಾಲಕರಿಗೆ ನೀವು ಹೆಚ್ಚು ಗೋಚರಿಸುವಂತೆ ಮಾಡಲು ನಿಮ್ಮ ಕಾರಿನ ಹೆಡ್‌ಲೈಟ್‌ಗಳು ಮತ್ತು ಅಪಾಯದ ದೀಪಗಳನ್ನು ಬೆಳಗಿಸಿ.

ಇದನ್ನೂ ಓದಿ: Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

7. ಪ್ರಾಣಿಗಳು ಹೋಗಲು ಜಾಗ ಬಿಡಿ

ಸಾಧ್ಯವಾದರೆ ಪ್ರಾಣಿಗೆ ರಸ್ತೆಯಿಂದ ದೂರ ಸರಿಯಲು ಸಾಕಷ್ಟು ಜಾಗವನ್ನು ನೀಡಿ. ಅದನ್ನು ಬಲವಂತವಾಗಿ ಅಥವಾ ಹತ್ತಿರ ಹೋಗಲು ಪ್ರಯತ್ನಿಸಬೇಡಿ.

8. ಸಿದ್ಧರಾಗಿರಿ

ಪ್ರಯಾಣ ಮಾಡುವಾಗ ಯಾವಾಗಲೂ ಸುತ್ತಮುತ್ತಲಿನ ಬಗ್ಗೆ ತಿಳಿದುಕೊಂಡಿರಿ. ವಿಶೇಷವಾಗಿ ಪ್ರಾಣಿಗಳು ಮುಕ್ತವಾಗಿ ತಿರುಗಾಡಲು ತಿಳಿದಿರುವ ಪ್ರದೇಶಗಳಲ್ಲಿ ಚಾಲನೆ ಮಾಡುವಾಗ ಜಾನುವಾರುಗಳ ಉಪಸ್ಥಿತಿಯನ್ನು ಸೂಚಿಸುವ ಎಚ್ಚರಿಕೆ ಚಿಹ್ನೆಗಳು ಅಥವಾ ಸಂಕೇತಗಳನ್ನು ಗಮನಿಸಿ.

Continue Reading

Latest

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

ಭಾರತದಲ್ಲಿ ಇತ್ತೀಚಿಗೆ ಆನ್‌ಲೈನ್ ವಂಚನೆಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇದೀಗ ನವಿ ಮುಂಬಯಿನ ಐರೋಲಿಯ ಗರ್ಭಿಣಿಯೊಬ್ಬರು ಆನ್‌ಲೈನ್ ಹಗರಣದಲ್ಲಿ (Online scams) ಸಿಕ್ಕಿಬಿದ್ದಿದ್ದು, ಸುಮಾರು 54 ಲಕ್ಷ ರೂ. ಕಳೆದುಕೊಂಡಿದ್ದಾರೆ. ವಂಚನೆ ಆಗಿದ್ದು ಹೇಗೆ? ಇಲ್ಲಿದೆ ವರದಿ.

VISTARANEWS.COM


on

By

Online scams
Koo

ಇತ್ತೀಚೆಗೆ ಆನ್ ಲೈನ್ ವಂಚಕರು (Online scams) ಹೆಚ್ಚಾಗಿದ್ದಾರೆ. ಅದರಲ್ಲೂ ಮನೆಯಲ್ಲೇ ಇದ್ದು, ಏನಾದರೂ ಸಣ್ಣಪುಟ್ಟ ಕೆಲಸ ಮಾಡಿ ಆದಾಯ ಗಳಿಸಬೇಕು ಎಂಬ ಹಂಬಲದಲ್ಲಿರುವ ಅನೇಕರು ಇದರ ಜಾಲದಲ್ಲಿ ಬಿದ್ದು ಕೈಯಲ್ಲಿರುವ ಅಲ್ಪಸ್ವಲ್ಪ ಹಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಇಂತಹ ಒಂದು ಪ್ರಕರಣ ನವಿ ಮುಂಬಯಿಯಲ್ಲಿ (Navi Mumbai) ವರದಿಯಾಗಿದೆ.

ಭಾರತದಲ್ಲಿ (India) ಇತ್ತೀಚಿಗೆ ಆನ್‌ಲೈನ್ ವಂಚನೆಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸೈಬರ್ ವಂಚಕರ ಲಾಭದಾಯಕ ಯೋಜನೆಗಳಿಗೆ ಅಸಂಖ್ಯಾತ ವ್ಯಕ್ತಿಗಳು ನಿತ್ಯವೂ ಬಲಿಯಾಗುತ್ತಿದ್ದಾರೆ. ಇದೀಗ ನವಿ ಮುಂಬಯಿನ ಐರೋಲಿಯ (Airoli) ಗರ್ಭಿಣಿಯೊಬ್ಬರು ಆನ್‌ಲೈನ್ ಹಗರಣದಲ್ಲಿ ಸಿಕ್ಕಿಬಿದ್ದಿದ್ದು, ಸುಮಾರು 54 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಪೊಲೀಸ್ ಅಧಿಕಾರಿಯ ಪ್ರಕಾರ, ಹೆರಿಗೆ ರಜೆಯಲ್ಲಿದ್ದ 37 ವರ್ಷದ ಮಹಿಳೆ ಆನ್‌ಲೈನ್‌ನಲ್ಲಿ ಸ್ವಲ್ಪ ಹೆಚ್ಚುವರಿ ಆದಾಯವನ್ನು ಗಳಿಸುವ ಮಾರ್ಗಗಳನ್ನು ಹುಡುಕುತ್ತಿದ್ದಳು. ತನ್ನ ಹುಡುಕಾಟದ ಸಮಯದಲ್ಲಿ ರೇಟಿಂಗ್ ಕಂಪೆನಿ ಮತ್ತು ರೆಸ್ಟೋರೆಂಟ್‌ಗಳನ್ನು ಒಳಗೊಂಡಿರುವ ಸ್ವತಂತ್ರ ಕೆಲಸದ ಭರವಸೆಯನ್ನು ನೀಡಿದ ಕೆಲವು ವ್ಯಕ್ತಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಂಪರ್ಕ ಸಾಧಿಸಿದ್ದಾಳೆ. ಕೇವಲ ಐದು ಆರಂಭಿಕ ಕಾರ್ಯಗಳನ್ನು ಪೂರ್ಣಗೊಳಿಸಿದ ಅನಂತರ ಅವರು ಉತ್ತಮ ಮೊತ್ತದ ಹಣವನ್ನು ಆಕೆಗೆ ನೀಡುವ ಭರವಸೆ ನೀಡಿದ್ದರು.

ಅವರ ಪ್ರಸ್ತಾಪ ಮಹಿಳೆಗೂ ಇಷ್ಟವಾಗಿ ಕೆಲಸವನ್ನು ಪ್ರಾರಂಭಿಸಿದ್ದಳು. ಆಕೆಯ ಆನ್‌ಲೈನ್ ಕೆಲಸದ ಸಮಯದಲ್ಲಿ ಸ್ಕ್ಯಾಮರ್‌ಗಳು ಅವಳಿಗೆ ಸೂಚನೆಗಳನ್ನು ನೀಡುತ್ತಿದ್ದರು. ಹೊಟೇಲ್ ಗಳನ್ನು ರೇಟ್ ಮಾಡಲು ಲಿಂಕ್‌ಗಳನ್ನು ಹಂಚಿಕೊಂಡರು ಮತ್ತು ಅಂತಿಮವಾಗಿ ಹೆಚ್ಚಿನ ಆದಾಯದ ಭರವಸೆಯಲ್ಲಿ ಆಕೆ ಹಣವನ್ನು ಹೂಡಿಕೆ ಮಾಡಿದಳು. ಹಗರಣದಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆಯ ವಿವಿಧ ಖಾತೆಗಳಲ್ಲಿ ಒಟ್ಟು 54,30,000 ರೂ. ಕಳೆದುಕೊಂಡಿದ್ದಾಳೆ. ಮೇ 7 ಮತ್ತು 10 ನಡುವೆ ಇದು ನಡೆದಿದೆ.

ಆದರೂ ತನಗೆ ನಿಯೋಜಿಸಲಾದ ಕಾರ್ಯಗಳನ್ನು ಪೂರ್ಣಗೊಳಿಸಿದ ಅನಂತರ, ಮಹಿಳೆ ತನ್ನ ಭರವಸೆಯ ಸಂಭಾವನೆಯನ್ನು ಪಡೆಯಲು ಪ್ರಯತ್ನಿಸಿದಾಗ ವಂಚಕರು ಪ್ರತಿಕ್ರಿಯಿಸಲಿಲ್ಲ. ಆಕೆಯ ಕರೆಗಳಿಗೆ ಉತ್ತರಿಸಲು ನಿರಾಕರಿಸಿದ್ದರಿಂದ ಆಕೆ ತಾನು ಮೋಸ ಹೋಗಿರುವುದಾಗಿ ತಿಳಿದುಕೊಂಡಳು. ಬಳಿಕ ಸಂತ್ರಸ್ತೆ ನವಿ ಮುಂಬಯಿನ ಸೈಬರ್ ಪೊಲೀಸರನ್ನು ಸಂಪರ್ಕಿಸಿದಳು. ಅವರು ವಂಚನೆಯ ಆರೋಪದ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹೆಚ್ಚುತ್ತಿದೆ ವಂಚನೆ ಪ್ರಕರಣ

ಇದೊಂದು ಮಾತ್ರವಲ್ಲ ಇಂತಹ ಹಲವಾರು ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ವಂಚಕರು ಮನೆಯಿಂದ ಕೆಲಸ ಮಾಡಲು ಇಚ್ಛಿಸುವವರಿಗೆ ಆಮಿಷಗಳನ್ನು ಒಡ್ಡಿ ವಂಚಿಸುತ್ತಾರೆ.ಆರಂಭದಲ್ಲಿ ಸ್ಕ್ಯಾಮರ್‌ಗಳು ಟೆಲಿಗ್ರಾಮ್, ವಾಟ್ಸಾಪ್ ಅಥವಾ ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ವ್ಯಕ್ತಿಗಳನ್ನು ತಲುಪುತ್ತಾರೆ. ಸರಳ ಕಾರ್ಯಗಳಿಗಾಗಿ ಹಣವನ್ನು ನೀಡುತ್ತಾರೆ. ಆದರೆ ವ್ಯಕ್ತಿಗಳು ಹಣವನ್ನು ಗಳಿಸಲು ಪ್ರಾರಂಭಿಸಿದ ಅನಂತರ ಸ್ಕ್ಯಾಮರ್‌ಗಳು ಅವರನ್ನು ಹೂಡಿಕೆ ಯೋಜನೆಗಳಿಗೆ ಆಕರ್ಷಿಸುತ್ತಾರೆ. ಅಲ್ಲಿ ಅವರು ಗಮನಾರ್ಹ ಮೊತ್ತದ ಹಣವನ್ನು ಹೂಡಿಕೆ ಮಾಡಲು ಮನವೊಲಿಸುತ್ತಾರೆ. ಅವರು ಹಣವನ್ನು ಸ್ವೀಕರಿಸಿದ ಅನಂತರ ಸ್ಕ್ಯಾಮರ್‌ಗಳು ವ್ಯಕ್ತಿಯಿಂದ ಸಂಪರ್ಕ ಕಡಿತಗೊಳಿಸುತ್ತಾರೆ.

ಸುರಕ್ಷಿತವಾಗಿರುವುದು ಹೇಗೆ?

ಮನೆಯಿಂದ ಕೆಲಸ ಮಾಡುವುದನ್ನು ಹೆಚ್ಚಿನವರು ಇಷ್ಟ ಪಡುತ್ತಾರೆ. ಆದರೆ ಇಂತಹ ಲಾಭದಾಯಕ ಆಫರ್‌ಗಳಿಗೆ ಮರುಳಾಗಬೇಡಿ ಎಂದು ಸರ್ಕಾರ ಎಚ್ಚರಿಸಿದೆ. ಇಂತಹ ವಂಚನೆಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕೆಲವು ತ್ವರಿತ ಸಲಹೆಗಳು ಇಲ್ಲಿವೆ.

ಅಪೇಕ್ಷಿಸದ ಕೊಡುಗೆಗಳ ಬಗ್ಗೆ ಜಾಗರೂಕರಾಗಿರಿ

ಮನೆಯಿಂದ ಕೆಲಸ ಮಾಡುವ ಅವಕಾಶವು ಹೆಚ್ಚಿನವರಿಗೆ ತುಂಬಾ ಒಳ್ಳೆಯದು ಎಂದು ತೋರುತ್ತದೆ. ಆದರೆ ಅಪೇಕ್ಷಿಸದ ಕರೆಗಳು, ಇ-ಮೇಲ್‌ಗಳು ಅಥವಾ ಕನಿಷ್ಠ ಪ್ರಯತ್ನಕ್ಕಾಗಿ ಹೆಚ್ಚಿನ ಆದಾಯ ಭರವಸೆ ನೀಡುವ ಸಂದೇಶಗಳ ಬಗ್ಗೆ ಜಾಗರೂಕರಾಗಿರಬೇಕು.

ಹೂಡಿಕೆ ಮಾಡುವ ಮೊದಲು ಸಂಶೋಧನೆ

ಮನೆಯಿಂದ ಕೆಲಸದ ಸ್ಥಾನಗಳಿಗೆ ಹಣವನ್ನು ಮುಂಗಡವಾಗಿ ಕಳುಹಿಸಬೇಡಿ. ಕಾನೂನುಬದ್ಧ ಕಂಪೆನಿಗಳಿಗೆ ಅಂತಹ ಪಾವತಿಗಳ ಅಗತ್ಯವಿರುವುದಿಲ್ಲ. ಬದ್ಧತೆ ಮಾಡುವ ಮೊದಲು ಕಂಪೆನಿ ಮತ್ತು ಉದ್ಯೋಗ ವಿವರಣೆಯನ್ನು ಸಂಪೂರ್ಣವಾಗಿ ಸಂಶೋಧಿಸಿ.

ಇದನ್ನೂ ಓದಿ: Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಪ್ಲಾಟ್‌ಫಾರ್ಮ್ ಅನ್ನು ಪರಿಶೀಲಿಸಿ

ಆನ್‌ಲೈನ್ ಪ್ಲಾಟ್‌ಫಾರ್ಮ್‌ನಲ್ಲಿ ಉದ್ಯೋಗವನ್ನು ಜಾಹೀರಾತು ಮಾಡಿದ್ದರೆ ಅದರ ಕಾನೂನುಬದ್ಧತೆಯನ್ನು ಖಚಿತಪಡಿಸಿಕೊಳ್ಳಿ. ಅಪರಿಚಿತ ವ್ಯಕ್ತಿಗಳು ಅಥವಾ ಕಂಪೆನಿಗಳೊಂದಿಗೆ ತೊಡಗಿಸಿಕೊಳ್ಳುವ ಮೊದಲು ಬಳಕೆದಾರರ ವಿಮರ್ಶೆಗಳು ಮತ್ತು ಪ್ಲಾಟ್‌ಫಾರ್ಮ್‌ನ ಆನ್‌ಲೈನ್ ಖ್ಯಾತಿಯನ್ನು ಪರಿಶೀಲಿಸಿ.

ಅನುಮಾನಾಸ್ಪದ ಚಟುವಟಿಕೆಯನ್ನು ವರದಿ ಮಾಡಿ

ನೀವು ಮನೆಯಿಂದ ಕೆಲಸ ಮಾಡುವ ಹಗರಣವನ್ನು ಎದುರಿಸಿದರೆ ತಕ್ಷಣವೇ ಅದನ್ನು ಅಧಿಕಾರಿಗಳಿಗೆ ವರದಿ ಮಾಡಿ. ಇತರರು ಬಲಿಪಶುವಾಗುವುದನ್ನು ತಡೆಯಲು ನೀವು ಆಫರ್ ಅನ್ನು ಎದುರಿಸಿದ ಪ್ಲಾಟ್‌ಫಾರ್ಮ್‌ಗೆ ಸಹ ನೀವು ಅದನ್ನು ವರದಿ ಮಾಡಬಹುದು.

Continue Reading

ರಾಜಕೀಯ

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

Prajwal Revanna Case: ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (ಟ್ವಿಟರ್‌) ಖಾತೆಗೆ ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಈಗಾಗಲೇ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ? ಯಾವ ಕಾರಣಕ್ಕೆ ಅವರ ಖಾತೆಯಿಂದ ಬ್ಲ್ಯೂ ಟಿಕ್‌ಗೆ ಗೇಟ್‌ಪಾಸ್‌ ಸಿಕ್ಕಿದೆ ಎಂಬುದು ಸದ್ಯದ ಕುತೂಹಲವಾಗಿದೆ.

VISTARANEWS.COM


on

Prajwal Revanna Case Prajwal Revanna loses X recognition in Obscene Video case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading
Advertisement
Davanagere News
ಕರ್ನಾಟಕ34 mins ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Robert Fico
ವಿದೇಶ42 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

Federation Cup 2024
ಕ್ರೀಡೆ58 mins ago

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Tips For Healthy Skin
ಆರೋಗ್ಯ1 hour ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ1 hour ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest1 hour ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ2 hours ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ2 hours ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ2 hours ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ2 hours ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ14 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ16 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌