Murder Case: ಅತ್ತಿಗೆಯನ್ನು ಮನೆ ಬಿಡಿಸಿದವನು ಅಣ್ಣನನ್ನೂ ದೊಣ್ಣೆಯಲ್ಲಿ ಹೊಡೆದು ಕೊಂದ - Vistara News

ಕ್ರೈಂ

Murder Case: ಅತ್ತಿಗೆಯನ್ನು ಮನೆ ಬಿಡಿಸಿದವನು ಅಣ್ಣನನ್ನೂ ದೊಣ್ಣೆಯಲ್ಲಿ ಹೊಡೆದು ಕೊಂದ

Murder Case: ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣತಮ್ಮಂದಿರ ಗಲಾಟೆ ನಡೆಯುತ್ತಿತ್ತು. ಅಣ್ಣನ ಪತ್ನಿ ಮನೆ ಬಿಟ್ಟು ಹೋಗಿದ್ದು, ಅದಕ್ಕೆ ತಮ್ಮ ಕಾರಣವೆಂದು ಅಣ್ಣನಿಗೆ ಸಿಟ್ಟಿತ್ತು.

VISTARANEWS.COM


on

manjunath murder case udupi crime
ಕೊಲೆಯಾದ ಮಂಜುನಾಥ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ತಮ್ಮನೊಬ್ಬ ಸ್ವಂತ ಅಣ್ಣನನ್ನು ದೊಣ್ಣೆಯಿಂದ ಹೊಡೆದು ಹೊಡೆದೇ ಕೊಲೆ ಮಾಡಿದ (Murder Case) ಬರ್ಬರ ಘಟನೆ ಉಡುಪಿ (Udupi news, Udupi crime) ಜಿಲ್ಲೆಯಲ್ಲಿ ನಡೆದಿದೆ. ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ಘಟನೆ ನಡೆದಿದೆ.

ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ಅಣ್ಣ. ಕೊಲೆ ಆರೋಪಿ ತಮ್ಮ ವಿಶ್ವನಾಥನನ್ನು (30) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ, ಒಂದೇ ಮನೆಯಲ್ಲಿ ವಾಸವಾಗಿದ್ದು, ಇವರಿಬ್ಬರೂ ಆಗಾಗ ಗಲಾಟೆ ಮಾಡುತ್ತಿದ್ದರು.

ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣತಮ್ಮಂದಿರ ಗಲಾಟೆ ನಡೆಯುತ್ತಿತ್ತು. ಅಣ್ಣನ ಪತ್ನಿ ಮನೆ ಬಿಟ್ಟು ಹೋಗಿದ್ದು, ಅದಕ್ಕೆ ತಮ್ಮ ಕಾರಣವೆಂದು ಅಣ್ಣನಿಗೆ ಸಿಟ್ಟಿತ್ತು. ಜಗಳದ ವೇಳೆ ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಅಣ್ಣ ದೂಷಿಸಿದ್ದ. ಇದರಿಂದ ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದು ಅಣ್ಣನ ಕೊಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದಿ ಕಾಮಣ್ಣರಿಗೆ ಧರ್ಮದೇಟು

ಕೊಪ್ಪಳ: ರಸ್ತೆಯಲ್ಲಿ ಓಡಾಡುವ ಮಹಿಳೆಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು (Misbehaviour) ಕೊಟ್ಟಿದ್ದಾರೆ. ಕೊಪ್ಪಳದ (Koppala News) ಕನಕಗಿರಿ ಪಟ್ಟಣದ 5ನೇ ವಾರ್ಡ್‌ನಲ್ಲಿ ಘಟನೆ ನಡೆದಿದೆ.

ಕಾಲೇಜು ಯುವತಿಯರಿಗೆ, ಮಹಿಳೆಯರನ್ನು ಹಿಂಬಾಲಿಸಿ ಹಲವು ದಿನಗಳಿಂದ ಕಿರಿಕಿರಿ ಉಂಟು ಮಾಡುತ್ತಿದ್ದ. ಹಲವು ದಿನಗಳಿಂದ ಈತನ ಕಾಟವನ್ನು ಸಹಿಸಿಕೊಂಡು ಬಂದಿದ್ದರು. ಆದರೆ ದಿನ ಕಳೆದಂತೆ ಈತನ ಹುಚ್ಚಾಟ ವಿಪರೀತಗೊಂಡಿತ್ತು. ಇದರಿಂದ ಬೇಸತ್ತ ಮಹಿಳೆಯರು ಈ ವಿಚಾರವನ್ನು ಮನೆಯವರಿಗೆ ಹೇಳಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸಿಟ್ಟಾದ ಜನರು ಯುವಕನನ್ನು ಹಿಡಿದು, ವಿದ್ಯುತ್‌ ಕಂಬಕ್ಕೆ ಕಟ್ಟಿ, ದೊಣ್ಣೆಯಿಂದ ಥಳಿಸಿದ್ದಾರೆ.

ಪೊಲೀಸ್‌ ಠಾಣೆಗೆ ನುಗ್ಗಿ ಎಎಸ್‌ಐಗೆ ಹೊಡೆದ ಮಹಿಳೆ; ಇಬ್ಬರು ಆಸ್ಪತ್ರೆ ಪಾಲು

ಬೆಂಗಳೂರು: ಪ್ರಾಪರ್ಟಿ ವಿಚಾರದಲ್ಲಿ ನ್ಯಾಯ ಸಿಗಲಿಲ್ಲ ಎಂದು ಸಿಟ್ಟಾದ ಮಹಿಳೆಯೊಬ್ಬರು ಪೊಲೀಸ್ ಮೇಲೆ ಹಲ್ಲೆ (Assault Case)‌ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಶನಿವಾರ ಮಧ್ಯಾಹ್ನ ಬೆಂಗಳೂರಿನ (Bengaluru News) ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಅಶ್ವಿನಿ ಎಂಬಾಕೆ ಎಎಸ್ಐ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾರೆ. ಹಲವು ದಿನಗಳಿಂದ ಗಂಗಮ್ಮನ ಗುಡಿ ಪೊಲೀಸ್ ಠಾಣೆಗೆ ಅಶ್ವಿನಿ ಬಂದು ಹೋಗುತ್ತಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಅಶ್ವಿನಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದರು ಎನ್ನಲಾಗಿದೆ.ಆದರೆ ತನ್ನ ಸಮಸ್ಯೆಗೆ ನ್ಯಾಯ ಸಿಗುತ್ತಿಲ್ಲವೆಂಬ ಸಿಟ್ಟಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮಾನಸಿಕ ಅಸ್ವಸ್ಥತೆಯಾಗಿರುವ ಅಶ್ವಿನಿ ಕಳೆದ 15 ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ನಿನ್ನೆ ಠಾಣೆಗೆ ಬಂದ ಅಶ್ವಿನಿ ಎಎಸ್‌ಐ ನಾಗರಾಜು ಜತೆ ಮಾತುಕತೆ ನಡೆಸಿದ್ದಾಳೆ. ಈ ವೇಳೆ ಏಕಾಏಕಿ ಸಿಟ್ಟಾಗಿ ಕೈಗೆ ಸಿಕ್ಕ ವಸ್ತುವಿನಿಂದ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾಳೆ.

ಸದ್ಯ ಹಲ್ಲೆಗೊಳಗಾದ ಎಎಸ್ಐ ನಾಗರಾಜು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಅಶ್ವಿನಿಗೂ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಈ ಘಟನೆ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ:Assault Case : ಶಿವಮೊಗ್ಗದಲ್ಲಿ ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಪುಂಡರಿಂದ ಹಲ್ಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Ramanagara News: ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದ ಮದುವೆ ಸಮಾರಂಭದಲ್ಲಿ ಐಸ್‌ ಕ್ರೀಂ ಸೇವಿಸಿದ್ದ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

VISTARANEWS.COM


on

Ramanagara News
Koo

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ (Channapatna News) ಸಾತನೂರು ಸರ್ಕಲ್ ಬಳಿ ನಡೆದಿದೆ. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಊಟದ ನಂತರ ಐಸ್ ಕ್ರೀಂ ತಿಂದಿದ್ದ 50ಕ್ಕೂ ಹೆಚ್ಚು ಜನರ ಆರೋಗ್ಯ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಅಸ್ವಸ್ಥರಾಗಿದ್ದು, ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. ಹೀಗಾಗಿ ಅವರಲ್ಲಿ 40 ಜನರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ | Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥರ ಕುಟುಂಬಸ್ಥರು ಜಮಾಯಿಸಿದ್ದಾರೆ. ಅಸ್ವಸ್ಥರಿಗೆ ಡ್ರಿಪ್ಸ್ ಹಾಕಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Beef smuggling suspected Hindu activists pelt stones at vehicle

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

Fire Accident: ಬೆಂಗಳೂರಿನ ಎಂಜಿ‌ ರಸ್ತೆಯ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಭಾನುವಾರ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದೆ.

VISTARANEWS.COM


on

Fire Accident
Koo

ಬೆಂಗಳೂರು: ನಗರದ ಎಂ.ಜಿ. ರಸ್ತೆಯ ಆಪ್ಟಿಕಲ್ಸ್ ಮಳಿಗೆಯಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಡ (Fire Accident) ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎಂಜಿ‌ ರೋಡ್ ಮೆಟ್ರೋ ಸ್ಟೇಷನ್ ಬಳಿಯ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.

ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

Gadag News

ಗದಗ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ತಂಗಿಯ ಮಗನೊಂದಿಗೆ ಮಹಿಳೆಯೊಬ್ಬರು ನೀರು ತರಲು‌ ಕೃಷಿ ಹೊಂಡಕ್ಕೆ ಹೋದಾಗ ಘಟನೆ ನಡೆದಿದೆ.

ಗೀತಾ ಹೆಸರೂರು (34), ಮನೋಜ ಕವಲೂರು (5) ಮೃತರು. ಮೊದಲಿಗೆ ಮನೋಜ್ ಹೊಂಡದಲ್ಲಿ ಕಾಲು‌ ಜಾರಿ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಹೋಗಿದ್ದ ಗೀತಾ ಕೂಡ ನೀರಿನಲ್ಲಿ ಮುಳುಗಿದ್ದಾರೆ. ಶಾಲೆ ರಜೆ ಹಿನ್ನೆಲೆ ದೊಡ್ಡಮ್ಮನ ಮನೆಗೆ ಮನೋಜ್ ಬಂದಿದ್ದ. ಬಾಲಕನ ಜತೆಗೆ ಕೃಷಿ ಹೊಂಡಕ್ಕೆ ಗೀತಾ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಪತಿ ಮೇಲಿನ ಸಿಟ್ಟಿಗೆ ಮೂಕ ಮಗುವನ್ನೇ ಕಾಲುವೆಗೆ ಎಸೆದಳು; ಮೊಸಳೆ ಬಾಯಲ್ಲಿತ್ತು ಮೃತದೇಹ!

murder case In karwar

ಕಾರವಾರ : ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಇದನ್ನೂ ಓದಿ: Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

ಪ್ರಯಾಣಿಕನೊಬ್ಬನ ಪ್ಯಾಂಟ್ ಕಿಸೆಯಲ್ಲಿದ್ದ ಎರಡು ಹಾವುಗಳನ್ನು ಫ್ಲೋರಿಡಾದ ಮಿಯಾಮಿಯ ವಿಮಾನ ನಿಲ್ದಾಣದಲ್ಲಿ (Viral News) ಭದ್ರತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

VISTARANEWS.COM


on

By

Viral News
Koo

ಮಿಯಾಮಿ: ಪ್ರಯಾಣಿಕನೊಬ್ಬ ಪ್ಯಾಂಟ್‌ ಜೇಬಿನಲ್ಲಿ (Viral News) ಹಾವುಗಳನ್ನು (Snakes In Pant) ಸಾಗಿಸುತ್ತಿದ್ದ ಘಟನೆ ಫ್ಲೋರಿಡಾದ (Florida ) ಮಿಯಾಮಿಯ ವಿಮಾನ ನಿಲ್ದಾಣದಲ್ಲಿ (Miami Airport) ಬೆಳಕಿಗೆ ಬಂದಿದೆ. ಭದ್ರತಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ವೇಳೆ ಪ್ರಯಾಣಿಕನೊಬ್ಬ ಪ್ಯಾಂಟ್‌ನ ಜೇಬಿನಲ್ಲಿ ಹಾವುಗಳನ್ನು ಇಟ್ಟಿರುವುದನ್ನು ಪತ್ತೆ ಮಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭದ್ರತಾ ಅಧಿಕಾರಿಗಳು, ಏಪ್ರಿಲ್ 26ರಂದು ಚೆಕ್‌ಪಾಯಿಂಟ್‌ನಲ್ಲಿ ಪ್ರಯಾಣಿಕನೊಬ್ಬ ಪ್ಯಾಂಟ್‌ನಲ್ಲಿ ಹಾವುಗಳನ್ನು ಸಣ್ಣ ಚೀಲದಲ್ಲಿ ಇಟ್ಟು ಸಾಗಿಸುತ್ತಿರುವುದನ್ನು ಪತ್ತೆ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಸನ್‌ಗ್ಲಾಸ್ ಬ್ಯಾಗ್‌ನಲ್ಲಿ ಎರಡು ಸಣ್ಣ ಹಾವುಗಳನ್ನು ಪತ್ತೆ ಹಚ್ಚಿರುವ ಸಾರಿಗೆ ಭದ್ರತಾ ಆಡಳಿತದ (ಟಿಎಸ್‌ಎ) ವಕ್ತಾರರು ಹಾವುಗಳನ್ನು ಫ್ಲೋರಿಡಾ ಮೀನು ಮತ್ತು ವನ್ಯಜೀವಿ ಸಂರಕ್ಷಣಾ ಆಯೋಗಕ್ಕೆ ಒಪ್ಪಿಸಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಯಾಣಿಕನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ನಿಂತಿದ್ದಾಗ ಎಚ್ಚರಿಕೆ ಸದ್ದು ಕೇಳಿದಾಗ ಆತನೇ ತನ್ನ ಪ್ಯಾಂಟ್‌ನಲ್ಲಿ ಹಾವುಗಳಿವೆ ಎಂದು ಒಪ್ಪಿಕೊಂಡಿದ್ದಾನೆ. ಆತ ತನ್ನ ಚೀಲದಲ್ಲಿ ಈ ಹಾವುಗಳನ್ನು ಏಕೆ ಸಾಗಿಸುತ್ತಿದ್ದ ಎಂಬುದು ತಿಳಿದು ಬಂದಿಲ್ಲ. ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.



ಬೇಬಿ ಡೈಪರ್ ನಲ್ಲಿತ್ತು ಗುಂಡು

ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಲಕ್ಷಣ ಘಟನೆ ನಡೆದಿದೆ. ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಬಿಸಾಡಬಹುದಾದ ಬೇಬಿ ಡೈಪರ್‌ನಲ್ಲಿ 17 ಗುಂಡುಗಳನ್ನು ಬಚ್ಚಿಟ್ಟಿರುವುದನ್ನು ಭದ್ರತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ವಿಮಾನ ನಿಲ್ದಾಣದ ಭದ್ರತಾ ಚೆಕ್‌ಪಾಯಿಂಟ್‌ನಲ್ಲಿ ಎಕ್ಸ್-ರೇ ಯಂತ್ರದಲ್ಲಿ ಎಚ್ಚರಿಕೆ ಬಂದಿದ್ದರಿಂದ ಅಧಿಕಾರಿಗಳು ಪ್ರಯಾಣಿಕರ ಕ್ಯಾರಿ-ಆನ್ ಬ್ಯಾಗ್‌ನಿಂದ ಕ್ಲೀನ್ ಡೈಪರ್ ಅನ್ನು ತೆಗೆದು ನೋಡಿದಾಗ ಅದರಲ್ಲಿ ಬುಲೆಟ್ ತುಂಬಿದ ಡಯಾಪರ್ ಕಂಡು ಬಂದಿತ್ತು.

ಈ ಬಗ್ಗೆ ಪ್ರಯಾಣಿಕನನ್ನು ವಿಚಾರಿಸಿದಾಗ ತನಗೆ ಇದು ಗೊತ್ತೇ ಇಲ್ಲ ಎಂದು ಹೇಳಿದ್ದ. ತನ್ನ ಗೆಳತಿ ಅದನ್ನು ಇಟ್ಟುಕೊಳ್ಳುವಂತೆ ಸೂಚಿಸಿದ್ದಳು ಎಂದು ತಿಳಿಸಿದ್ದ ಎನ್ನಲಾಗಿದೆ.

ಬೆಂಗಳೂರಿನಲ್ಲೂ ಪತ್ತೆಯಾಗಿತ್ತು

ಇತ್ತೀಚೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಥಾಯ್ಲೆಂಡ್‌ನಿಂದ ಬಂದ ವ್ಯಕ್ತಿಯ ಬ್ಯಾಗ್‌ನಲ್ಲಿ 17 ಅತಿ ವಿಷಕಾರಿ ಕಾಳಿಂಗ ಸರ್ಪ , 55 ಚೆಂಡು ಹೆಬ್ಬಾವು ಮತ್ತು ಆರು ಕಾಪುಚಿನ್‌ ಕೋತಿ ಮರಿಗಳನ್ನು ಪತ್ತೆಯಾಗಿತ್ತು.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಏರ್ ಏಷಿಯಾ ವಿಮಾನದಲ್ಲಿ ಟರ್ಮಿನಲ್ 1ರಲ್ಲಿ ಬಂದಿಳಿದಿದ್ದ ವಿಮಾನದಿಂದ ಇಳಿದ ಪ್ರಯಾಣಿಕರ ವಿವರಗಳನ್ನು ಪಡೆದುಕೊಳ್ಳುತ್ತಿದ್ದಾಗ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದುದು ಕಂಡುಬಂದಿತ್ತು.

ಇದನ್ನೂ ಓದಿ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

ಕೂಡಲೇ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನ ಚೆಕ್‌ ಇನ್‌ ಲಗೇಜನ್ನು ಸ್ಕ್ಯಾನ್‌ ಮಾಡಿದರು. ಅದರಲ್ಲಿ ಹಾವು, ಕೋತಿಗಳು ಇರುವುದು ಕಂಡುಬಂತು. ಬಳಿಕ ಅವನನ್ನು ತಡೆ ಹಿಡಿದು ಹೆಚ್ಚಿನ ತಪಾಸಣೆ ನಡೆಸಿದಾಗ ಆತನ ಬಳಿ ವಿಷಕಾರಿ ಕಾಳಿಂಗ ಸರ್ಪ, ಹೆಬ್ಬಾವು ಮತ್ತು ಕೋತಿ ಮರಿಗಳನ್ನು ತಂದಿರುವುದು ಪತ್ತೆಯಾಗಿತ್ತು.

ಹಾವು ಮತ್ತು ಕೋತಿಯನ್ನು ತಂದಿರುವ ವ್ಯಕ್ತಿ ತಮಿಳುನಾಡಿನವನು ಎಂದು ತಿಳಿದು ಬಂದಿತ್ತು. ವನ್ಯ ಜೀವಿ ಕಳ್ಳಸಾಗಣೆದಾರ ಎಂದು ಗುರುತಿಸಿ ಆತನನ್ನು ಬಂಧಿಸಿ 1962ರ ಕಸ್ಟಮ್ಸ್ ಕಾಯಿದೆಯ ಸೆಕ್ಷನ್ 110ರ ಅಡಿಯಲ್ಲಿಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Continue Reading

ಕ್ರೈಂ

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case: ಎಚ್‌.ಡಿ. ರೇವಣ್ಣ ಅವರನ್ನು ರಿಮ್ಯಾಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಅಪಹರಣ ಹಾಗೂ ಪ್ರಜ್ವಲ್‌ ಮೇಲಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಪ್ರಶ್ನೆಗಳು ಕೇಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Prajwal Revanna Case HD Revanna sent to judicial custody Shift to Parappana Agrahara
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು 4 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮ್ಯಾಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 4 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೋರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಈ ಕೇಸ್‌ಗೆ ಸಂಬಂಧಿಸಿ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading
Advertisement
karnataka Weather Forecast
ಮಳೆ27 mins ago

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

Pain relievers
ಆರೋಗ್ಯ57 mins ago

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ7 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ7 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ7 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ7 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ7 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ8 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ11 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ13 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ13 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌