Nisha narasapa: ಬಗೆದಷ್ಟು ಬೆಳಕಿಗೆ ಬರ್ತಿದೆ ನಿಶಾ ನರಸಪ್ಪ ಮಾಡಿರುವ ಮಹಾ ಮೋಸ! Vistara News
Connect with us

ಕಿರುತೆರೆ

Nisha narasapa: ಬಗೆದಷ್ಟು ಬೆಳಕಿಗೆ ಬರ್ತಿದೆ ನಿಶಾ ನರಸಪ್ಪ ಮಾಡಿರುವ ಮಹಾ ಮೋಸ!

Nisha narasapa: ನಿಶಾಗೆ ಹಣ ಕೊಟ್ಟು ಕಳೆದುಕೊಂಡ ಹಲವರು ನಿಶಾ ನರಸಪ್ಪ ಮನೆಯ ಬಳಿ ಹೋಗಿ ಹಣ ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ. ಸುಮಾರು ಎರಡು ಕೋಟಿ ರೂಪಾಯಿ ವಂಚನೆಯನ್ನು ನಿಶಾ ನರಸಪ್ಪ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Nisha narasapa
Koo

ಬೆಂಗಳೂರು: ಮಾಸ್ಟರ್‌ ಆನಂದ್‌ (Master anadh) ಮಗಳ ಹೆಸರು ಬಳಸಿ ಜನರಿಗೆ ವಂಚನೆ (Fraud Case) ಮಾಡುತ್ತಿರುವ ಆರೋಪ ಎದುರಿಸುತ್ತಿರುವ ನಿಶಾ ನರಸಪ್ಪ (Nisha narasapa) ಜಾಲ ಬೆಳೆಯುತ್ತಲೇ ಇದೆ. ಎನ್ಎನ್ ಪ್ರೊಡಕ್ಷನ್ ಮತ್ತು ಇವೆಂಟ್ ಮ್ಯಾನೇಜ್ಮೆಂಟ್‌ ಸಂಸ್ಥೆಯ ಪ್ರಮೋಷನ್‌ಗಾಗಿ ಸೆಲೆಬ್ರಿಟಿಗಳನ್ನು ಸಂಪರ್ಕಿಸುವ ನಿಶಾ ಮಾತಲ್ಲೇ ಮರಳು ಮಾಡುತ್ತಿದ್ದರು. ಬಳಿಕ ಅದೇ ಸೆಲೆಬ್ರಿಟಿ ಹೆಸರು ಬಳಸಿಕೊಂಡು ಜನರಿಂದ ಲಕ್ಷ ಲಕ್ಷ ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ನಿಶಾಗೆ ಹಣ ಕೊಟ್ಟು ಕಳೆದುಕೊಂಡ ಹಲವರು ನಿಶಾ ನರಸಪ್ಪ ಮನೆಯ ಬಳಿ ಹೋಗಿ ಹಣ ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ. ಸುಮಾರು ಎರಡು ಕೋಟಿ ರೂಪಾಯಿ ವಂಚನೆಯನ್ನು ನಿಶಾ ನರಸಪ್ಪ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ನಿಶಾ ಮೋಸದ ಬಲೆಗೆ ಬಿದ್ದು 10 ಲಕ್ಷ ರೂ. ಅರ್ಜುನ್‌ ಎಂಬುವರು ಕಳೆದುಕೊಂಡಿದ್ದಾರೆ. ನಿಶಾ ನರಸಪ್ಪ ಮಾಡಿರುವ ಮೋಸದ ಬಗ್ಗೆ ಆಡಿಯೊ ಕ್ಲಿಪ್ ಕೂಡ ಅರ್ಜುನ್‌ ಬಿಡುಗಡೆ ಮಾಡಿದ್ದಾರೆ. ಮನೆ ಹತ್ತಿರ ಬಂದು ಗಲಾಟೆ ಮಾಡಿದರೆ, ಒಂದು ರೂಪಾಯಿ ಸಹ ಸಿಗಲ್ಲ ಎಂದು ರಾಜಾರೋಷವಾಗಿ ನಿಶಾ ಹೇಳಿದ್ದಾಳೆ. ʻʻದುಡ್ಡೇ ಕೊಡಬೇಡ ಎಂದು ನಮ್ಮ ಮನೆಯವರು ಸಪೋರ್ಟ್ ಮಾಡುತ್ತಾರೆ. ನನ್ ಕಡೆ ಲಾಯರ್ ಇದಾರೆ. ನಮ್ಮ ಕಂಪನಿಯಿಂದ ತಿಂಗಳಿಗೆ ಇಷ್ಟು ಅಂತ ಅಮೌಂಟ್ ಲಾಯರ್‌ಗೆ ಕೊಡ್ತೇನೆ. ನಾನು ಕೋರ್ಟ್‌ಗೂ ಬರಲ್ಲ. ಸ್ಟೇಷನ್‌ಗೂ ಬರಲ್ಲʼʼಎಂದು ಓಪನ್ ಆಗಿ ಚಾಲೆಂಜ್ ಮಾಡಿದ್ದಾರೆ ನಿಶಾ.

ನಿಶಾ ಮೇಲೆ ಈ ಹಿಂದೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಹಾಗೂ ಯಶವಂತಪುರ ಪೊಲೀಸ್ ಠಾಣೆಗಳಲ್ಲಿಯೂ ದೂರುಗಳು ದಾಖಲಾಗಿವೆ. ನಿಶಾ ತಮ್ಮ ಸಹೋದರನಿಂದ ಇಬ್ಬರಿಗೆ ಜೀವ ಬೆದರಿಕೆ ಹಾಕಿದ ಕುರಿತಾಗಿಯೂ ದೂರು ದಾಖಲಾಗಿತ್ತು. ಆದರೆ ಈಗ ವಂಶಿಕಾ ಹೆಸರಿನಲ್ಲಿ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದ ಬಳಿಕವಷ್ಟೆ ನಿಶಾರ ಬಂಧನವಾಗಿದೆ. ವಂಚನೆ ಹಣದಿಂದ ಐಶಾರಾಮಿ ಜೀವನ್ನು ನಿಶಾ ನರಸಪ್ಪ ಕಳೆಯುತ್ತಿದ್ದರು, ದುಬಾರಿ ಇನ್ನೋವಾ ಕಾರನ್ನು ಸಹ ನಿಶಾ ಖರೀದಿಸಿದ್ದರು.

ಇದನ್ನೂ ಓದಿ: Nisha Narasapa: ಮಾಡೆಲಿಂಗ್‌ ಜತೆ ವಂಚನೆಗೂ ಎತ್ತಿದ ಕೈ, ಯಾರು ಈ ನಿಶಾ ನರಸಪ್ಪ?

ನಿಶಾ ನರಸಪ್ಪ ಸಾಮಾಜಿಕ ಜಾಲತಾಣದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ಎಲ್ಲದ್ದಕ್ಕೂ ಉತ್ತರ ಕೊಡುತ್ತೇನೆ. ಹೊಸದಾಗಿ ಫೋಟೊ ಶೂಟ್​ಗೆ ರಿಜಿಸ್ಟ್ರೇಷನ್​ ಮಾಡಿಸುವವರು ದಯವಿಟ್ಟು ಎಲ್ಲರು ತಾಳ್ಮೆಯಿಂದ ಕಾಯಿರಿ ಎಂದು ಬರೆದುಕೊಂಡಿದ್ದಾರೆ. ನಿಶಾ ನರಸಪ್ಪ ಸದಾಶಿವನಗರ ಹಾಗೂ ಯಲಹಂಕ ನ್ಯೂಟೌನ್​ನಲ್ಲಿ ಮೋಸ ಹೋದ ಪೋಷಕರು ಮತ್ತಷ್ಟು ವಂಚನೆ ಪ್ರಕರಣದ ದೂರು ದಾಖಲಿಸಿದ್ದಾರೆ.

ಏನಿದು ಪ್ರಕರಣ?

ವಂಶಿಕಾ ಅಂಜನಿ ಕಶ್ಯಪ ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿ ಎಲ್ಲರ ಮನ ಗೆಲುತ್ತಿರುವ ಪೋರಿ. ತಂದೆ ನಟ ಮಾಸ್ಟರ್‌ ಆನಂದ್‌ರಂತೆ (Master anadh) ಅರಳು ಹುರಿದಂತೆ ಮಾತನಾಡುವ ವಂಶಿಕಾ (Vanshika Anjani kashyapa) ಸೋಶಿಯಲ್‌ ಮೀಡಿಯಾದಲ್ಲೂ (Social Media) ಹೆಚ್ಚು ಸದ್ದು ಮಾಡುತ್ತಿದ್ದಾಳೆ. ಈ ಬಾಲನಟಿ ವಂಶಿಕಾ ಹೆಸರನ್ನು ದುರುಪಯೋಗ (Fraud Case) ಮಾಡಿಕೊಳ್ಳಲಾಗುತ್ತಿದೆ ಎಂದು ತಾಯಿ ಯಶಸ್ವಿನಿ ಜು.13ರಂದು ಠಾಣೆ ಮೆಟ್ಟಿಲೇರಿದ್ದರು.

ವಂಶಿಕಾ ಮಾಸ್ಟರ್‌ ಆನಂದ್‌ ಹೆಸರಿನಲ್ಲಿ (Vanshika Anjani kashyapa) ಹಣ ಪೀಕಿದ ನಿಶಾ ನರಸಪ್ಪಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶಿಸಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬಳಿಕ ಒಂದೊಂದು ಹಳೇ ವಂಚನೆ ಕೇಸ್‌ಗಳು (Fraud Case) ಬೆಳಕಿಗೆ ಬರುತ್ತಿವೆ. ನಿಶಾ ನರಸಪ್ಪ (nisha narasapa) ವಿರುದ್ಧ ಇದೇ ಮೊದಲಲ್ಲ, ಈ ಹಿಂದೆಯೇ ವಂಚನೆ ಕೇಸ್‌ ದಾಖಲಾಗಿದೆ.

ಇವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ತಾರಾ ಎಂಬುವರಿಗೆ 20 ಲಕ್ಷ ರೂ. ವಂಚನೆ ಮಾಡಿರುವ ಆರೋಪವು ಕೇಳಿ ಬಂದಿದೆ. ಈ ಬಗ್ಗೆ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ರೀತಿ ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲೂ ವಂಚನೆ ದೂರುಗಳು ದಾಖಲಾಗಿದೆ. ಸದಾಶಿವನಗರ ಠಾಣೆಯಲ್ಲಿ ದಾಖಲಾದ ಕೇಸ್‌ನಲ್ಲಿ ಬರೋಬ್ಬರಿ 35 ಲಕ್ಷ ರೂ. ದೋಖಾ ಆಗಿದೆ.

ಇದನ್ನೂ ಓದಿ: Vanshika Anjani kashyapa : ಇವೆಂಟ್‌ ಮ್ಯಾನೇಜ್ಮೆಂಟ್‌ ಹೆಸರಲ್ಲಿ ನಿಶಾ ದೋಖಾ!

ಲಾಭಾಂಶದ ನಶೆ ಎರಿಸುವ ನಿಶಾ

ಸಾಲದ ರೂಪದಲ್ಲಿ ಹಾಗೂ ಇನ್ವೆಸ್ಟ್ ಮಾಡಿದರೆ ಲಾಭಾಂಶ ನೀಡುವುದಾಗಿ ಆಸೆ ತೋರಿ ನಿಶಾ ನರಸಪ್ಪ ಮೋಸ ಮಾಡಿರುವುದು ಕಂಡು ಬಂದಿದೆ. ಮೊದ ಮೊದಲು ಲಾಭಾಂಶದ ಹಣ ಕೊಟ್ಟು ಬಳಿಕ ಎರಡರಷ್ಟು ಹಣ ಪಡೆದಿದ್ದಾರೆ. ರಾಮನಗರ ಮೂಲದ ನಿಶಾ ನರಸಪ್ಪ, ಬೆಂಗಳೂರಿನ ದೊಡ್ಡ ಮಾಲ್‌ಗಳಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದರು. ಇದಲ್ಲದೆ ಬೆಂಗಳೂರು ಹೊರ ವಲಯದ ರೆಸಾರ್ಟ್‌ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಯಮಾರಿಸುತ್ತಿದ್ದರು ಎನ್ನಲಾಗಿದೆ.

ಸದ್ಯ ಸದಾಶಿವನಗರ ಠಾಣೆಗೆ ಹರಿದು ಬರುತ್ತಿರುವ ದೂರುಗಳನ್ನು ತಮ್ಮ ಮನೆ ವ್ಯಾಪ್ತಿಯ ಠಾಣೆಯಲ್ಲಿ ನೀಡಲು ಸೂಚನೆ ನೀಡಲಾಗಿದೆ. ಹೈಕೋರ್ಟ್‌ನಲ್ಲೂ ಓರ್ವ ಮಹಿಳೆ ಕೇಸ್ ಹಾಕಿದ್ದು, ವಿಚಾರಣೆ ಹಂತದಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕಿರುತೆರೆ

Brindavana Serial Kannada: ಅಪರೂಪದ ಕತೆಯೊಂದಿಗೆ ʻಕನ್ನಡತಿ’ ಅಮ್ಮಮ್ಮ; ʻಬೃಂದಾವನʼಕ್ಕೆ ಯೋಗರಾಜ್ ಭಟ್ ಸಾಥ್‌!

Brindavana Serial Kannada: ‘ಪುಟ್ಟಗೌರಿ ಮದುವೆ’, ‘ಮಂಗಳಗೌರಿ ಮದುವೆ’, ‘ರಂಗನಾಯಕಿ’, ‘ನಾಗಿಣಿ- 2’, ‘ಗೀತಾ’, ‘ರಾಣಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಕೆ. ಎಸ್ ರಾಮ್‌ ಜೀ ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ.

VISTARANEWS.COM


on

Edited by

Brundavana Kannada Serial
Koo

ಬೆಂಗಳೂರು: ಬಿಗ್‌ ಬಾಸ್‌ ಪ್ರಸಾರದ ಅನೌನ್ಸ್‌ ಬೆನ್ನಲ್ಲೇ ಕಲರ್ಸ್‌ ಕನ್ನಡ ಮತ್ತೊಮ್ಮೆ ಸಿಹಿ ಸುದ್ದಿಯನ್ನು ಹೊತ್ತು ತಂದಿದೆ. ಅಷ್ಟೇ ಅಲ್ಲದೇ ‘ಕನ್ನಡತಿ’ ಧಾರಾವಾಹಿ ಮೂಲಕ ಅಮ್ಮಮ್ಮ ಎಂದೇ ಖ್ಯಾತಿ ಪಡೆದ ಚಿತ್ಕಲಾ ಬಿರಾದಾರ್ (Chitkala Biradar) ಅವರು ಮತ್ತೊಮ್ಮೆ ಕಿರುತೆರೆಯಲ್ಲಿ ಮಿಂಚಲು ರೆಡಿ ಆಗಿದ್ದಾರೆ. ‘ಪುಟ್ಟಗೌರಿ ಮದುವೆ’, ‘ಮಂಗಳಗೌರಿ ಮದುವೆ’, ‘ರಂಗನಾಯಕಿ’, ‘ನಾಗಿಣಿ- 2’, ‘ಗೀತಾ’, ‘ರಾಣಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಕೆ. ಎಸ್ ರಾಮ್‌ ಜೀ ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಮತ್ತೆ ಬೃಂದಾವನ(Brundavana Serial Kannada) ಧಾರಾವಾಹಿ ಮೂಲಕ ಹೊಸ ಕತೆಯನ್ನು ಹೊತ್ತು ತರುತ್ತಿದ್ದಾರೆ.

ಕಲರ್ಸ್‌ ಕನ್ನಡ ವಾಹಿನಿ ಬೃಂದಾವನ ಧಾರಾವಾಹಿಯ ಪ್ರೋಮೊ ಹಂಚಿಕೊಂಡಿದೆ. ಪ್ರೋಮೊದಲ್ಲಿ ಅಮ್ಮಮ್ಮ ಪ್ರಮುಖ ಹೈಲೈಟ್‌. ಈ ಪ್ರೋಮೊದಲ್ಲಿ ಕೂಡು ಕುಟುಂಬದ ಕಥೆ ಎದ್ದು ಕಾಣುತ್ತಿದೆ. ಈ ಕುಟುಂಬದಲ್ಲಿ 36 ಜನ ಇದ್ದಾರೆ. ಯೋಗರಾಜ್ ಭಟ್ ಧ್ವನಿಯಲ್ಲಿ ಪ್ರೋಮೊ ಮೂಡಿ ಬಂದಿದೆ. ಮೊಮ್ಮೊಗನಿಗೆ ಮದುವೆ ಮಾಡಬೇಕು ಎನ್ನುವುದು ಸುಧಾ ಮೂರ್ತಿ (ಚಿತ್ಕಲಾ ಬಿರಾದಾರ್) ಆಸೆ. ಆದರೆ, ಮನೆಯಲ್ಲಿರುವ ಎಲ್ಲರ ಒಪ್ಪಿಗೆ ಇದಕ್ಕೆ ಸಿಗಬೇಕು. ಸದ್ಯ ಧಾರಾವಾಹಿ ಪ್ರೋಮೊ ಗಮನ ಸೆಳೆಯುತ್ತಿದೆ. ನೋಡುಗರು ʻʻಬೃಂದಾವನ ಹೆಸರು ಕೇಳಿದಾಗಲೇ ಗೊತ್ತಿತ್ತು. ಇದು ಕೂಡು ಕುಟುಂಬ ಅಂತ. ಆದರೆ ಇಷ್ಟೊಂದು ದೊಡ್ಡ ಕುಟುಂಬ ಅಂತ ಗೊತ್ತಿರಲಿಲ್ಲ. ಪ್ರೋಮೊ ಮಾತ್ರ ಯಾವ ಸಿನಿಮಾ ಟೀಸರ್‌ಗೂ ಕಡಿಮೆ ಇಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ.

ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಗೀತಾ’ ಮತ್ತು ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಣಿ’ ಧಾರಾವಾಹಿಯನ್ನು ರಾಮ್ ಜೀ ನಿರ್ದೇಶಿಸುತ್ತಿದ್ದಾರೆ. ಮೂಲಗಳ ಪ್ರಕಾರ ‘ಗೀತಾ’ ಧಾರಾವಾಹಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಈ ಧಾರಾವಾಹಿ ಮುಗಿದ ಬಳಿಕ ‘ಬೃಂದಾವನ’ ಆರಂಭ ಆಗಲಿದೆ ಎನ್ನಲಾಗುತ್ತಿದೆ. ಪ್ರೋಮೊ ಕಂಡವರು ʻಕನ್ನಡತಿ’ ಧಾರಾವಾಹಿಯ ಅಮ್ಮಮ್ಮ ಅವರನ್ನು ಕಂಡು ಕಮೆಂಟ್‌ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ. ‘ಬೃಂದಾವನ’ ಧಾರಾವಾಹಿಯಲ್ಲಿ ಹೊಸ ರೀತಿಯ ಪಾತ್ರದ ಮೂಲಕ ಮತ್ತೆ ಬಂದಿದ್ದಾರೆ.

ಇದನ್ನೂ ಓದಿ: Kannada Serials TRP: ʻಅಮೃತಧಾರೆʼ ಬೀಟ್‌ ಮಾಡಿದ ʻಗಟ್ಟಿಮೇಳʼ; ಟಿಆರ್‌ಪಿ ರೇಸ್‌ನಲ್ಲಿ ʻಶ್ರೀರಸ್ತು ಶುಭಮಸ್ತುʼ!

‘ರಾಮಾಚಾರಿ’ ಸೇರಿ ಹಲವು ಧಾರಾವಾಹಿಗಳು ಇನ್ನು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದು, ಇವುಗಳ ಜತೆಗೆ ಈಗ ‘ಬೃಂದಾವನ’ ಧಾರಾವಾಹಿ ಕೂಡ ಪ್ರಸಾರ ಕಾಣಲಿದೆ. ಈ ಧಾರಾವಾಹಿ ಸಂಜೆ 7 ಗಂಟೆ ಸ್ಲಾಟ್‌ಗೆ ಬಿಗ್ ಬಾಸ್ – ಸೀಸನ್ 10 ಮುಗಿದ ಬಳಿಕ ಪ್ರಸಾರವಾಗಲಿದೆ ಎಂದು ವರದಿಯಾಗಿದೆ.

Continue Reading

ಕಿರುತೆರೆ

Kannada Serials TRP: ʻಅಮೃತಧಾರೆʼ ಬೀಟ್‌ ಮಾಡಿದ ʻಗಟ್ಟಿಮೇಳʼ; ಟಿಆರ್‌ಪಿ ರೇಸ್‌ನಲ್ಲಿ ʻಶ್ರೀರಸ್ತು ಶುಭಮಸ್ತುʼ!

ʻಸೀತಾ ರಾಮ’ ಧಾರಾವಾಹಿ (Kannada Serials TRP) ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ದಿನೇದಿನೆ ಹೆಚ್ಚು ಪೈಪೋಟಿ ನೀಡಲು ಶುರು ಮಾಡಿದೆ. ಈ ವಾರದ ಟ ಆರ್‌ಪಿ ಡಿಟೇಲ್ಸ್‌ ಇಲ್ಲಿದೆ.

VISTARANEWS.COM


on

Edited by

Kannada Serials
Koo

ಬೆಂಗಳೂರು: ‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಧಾರಾವಾಹಿಯು ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಹಲವು ಧಾರಾವಾಹಿಗಳ ಟಿಆರ್​ಪಿಯಲ್ಲಿ ಬದಲಾವಣೆ ಆಗಿದೆ. ʻಸೀತಾ ರಾಮ’ ಧಾರಾವಾಹಿ (Kannada Serials TRP) ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ದಿನೇದಿನೆ ಹೆಚ್ಚು ಪೈಪೋಟಿ ನೀಡಲು ಶುರು ಮಾಡಿದೆ. ಈ ವಾರದ ಟ ಆರ್‌ಪಿ ಡಿಟೇಲ್ಸ್‌ ಇಲ್ಲಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನವನ್ನು ಉಳಿಸಿಕೊಂಡು ಬರುತ್ತಲೇ ಇದೆ. ಈಗಲೂ ಒಳ್ಳೆಯ ಟಿಆರ್​ಪಿಯೊಂದಿಗೆ ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಪುಟ್ಟಕ್ಕನ ಮೆಸ್‌ಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಬಂಗಾರಮ್ಮ ಇದೀಗ ಆರೋಪಿಗಳನ್ನು ಪುಟ್ಟಕ್ಕನ ಮುಂದೆ ತಂದು ನಿಲ್ಲಿಸಿದ್ದಾಳೆ. ಪುಟ್ಟಕ್ಕನ ಮಗಳು ಹಾಗೂ ಬಂಗಾರಮ್ಮನ ಮಗ ಕಂಠಿ ನಡುವೆ ಆಪ್ತತೆ ಹೆಚ್ಚಾಗುತ್ತಿದೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ನಗರ ಭಾಗದಲ್ಲೂ ಮೊದಲ ಸ್ಥಾನದಲ್ಲಿದೆ ಎನ್ನುವುದು ವಿಶೇಷ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಕಳೆದ ವಾರವೂ ಎರಡನೇ ಸ್ಥಾನದಲ್ಲಿ ಇತ್ತು. ಈ ವಾರವೂ ಎರಡನೇ ಸ್ಥಾನ ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ಪುಟ್ಟಕ್ಕನ ಮಕ್ಕಳು ಧಾರಾವಾಹಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ರೀತು ಸಿಂಗ್ ಹೆಸರಿನ ಬಾಲಕಿ ವೈಷ್ಣವಿ ಗೌಡ ಮಗಳಾಗಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾಳೆ. ಈ ಧಾರಾವಾಹಿ 50ನೇ ಎಪಿಸೋಡ್‌ಗಳನ್ನು ಪೂರೈಸಿದೆ. ಸೀತಾ ರಾಮ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದ ಟಿಆರ್​ಪಿ ಪರಿಗಣಿಸಿದರೆ ‘ಗಟ್ಟಿಮೇಳ’ ಹಾಗೂ ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿ ಸಮನಾಗಿದೆ. ಆದರೆ, ನಗರ ವಿಭಾಗದಲ್ಲಿ ಸೀತಾ ರಾಮ ಧಾರಾವಾಹಿ ಮೇಲುಗೈ ಸಾಧಿಸಿದೆ. ‘ಸೀತಾ ರಾಮ’ ಬರುವುದಕ್ಕೂ ಮೊದಲು ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ಹಿಂದಿನ ವಾರ ಅಮೃತಧಾರೆ ಧಾರಾವಾಹಿ ಬೀಟ್‌ ಮಾಡಿತ್ತು. ಟಿಆರ್‌ಪಿಯಲ್ಲಿ ಭಾರಿ ಕುಸಿತ ಕಂಡಿತ್ತು. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿಯಲ್ಲಿ ಭೂಮಿಕಾ ಬಲಗಾಲಿಟ್ಟು ಗೌತಮ್‌ ಮನೆಗೆ ಬಂದಾಗಿದೆ. ಕಳೆದ ವಾರ ‘ಗಟ್ಟಿಮೇಳ’ ಧಾರಾವಾಹಿ ಹಿಂದಿಕ್ಕಿ ಮೂರನೇ ಸ್ಥಾನ ಪಡೆದುಕೊಂಡಿತ್ತು. ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: Kannada Serials TRP: ಈ ಬಾರಿಯೂ ‘ಸೀತಾ ರಾಮ’ ಟಾಪ್‌; ಸುಧಾರಿಸಿದ ‘ಅಮೃತಧಾರೆ’ ಧಾರಾವಾಹಿ!

ಸತ್ಯ -ಶ್ರೀರಸ್ತು ಶುಭಮಸ್ತು

‘ಸತ್ಯ’ ಹಾಗೂ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಐದು ಹಾಗೂ ಆರನೇ ಸ್ಥಾನದಲ್ಲಿದೆ. ಈ ಧಾರಾವಾಹಿಗಳಿಗೆ ವೀಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ. ‘ಸತ್ಯ’ ಧಾರಾವಾಹಿ ಮೊದಲಿನಿಂದಲೂ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿರುವ ಧಾರಾವಾಹಿ. ಅತ್ತೆ ಕೂಡ ಸತ್ಯಳನ್ನು ಪ್ರೀತಿಸಲು ಶುರು ಮಾಡಿದಂತಿದೆ. ಈ ಎರಡೂ ಧಾರಾವಾಹಿಗಳು ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

Continue Reading

South Cinema

Megha Shetty: ಮದುವೆ ಫಿಕ್ಸ್‌ ಆಯ್ತಾ ಬಂಗಾರ? ಮೂಗು ಚುಚ್ಚಿಸಿಕೊಂಡ ಮೇಘಾ ಶೆಟ್ಟಿಗೆ ಫ್ಯಾನ್ಸ್‌ ಪ್ರಶ್ನೆ!

Megha Shetty: ʻಬಂಗಾರʼ ಅಂತಲೇ ಧಾರಾವಾಹಿಯಲ್ಲಿ ಅಪ್ಪ ಸುಬ್ಬವಿನಿಂದ ಕರೆಸಿಕೊಳ್ಳುತ್ತಿದ್ದ ಮೇಘನಾ ಇದೀಗ ಮೂಗು ಚುಚ್ಚಿಸಿಕೊಂಡಿದ್ದಾರೆ. ʻʻಬಂಗಾರಗೆ ಮದುವೆ ಫಿಕ್ಸ್‌ ಆಯ್ತಾ?ʼʼಎಂದು ಅವರ ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Edited by

megha shetty In Pink dress
Koo

ಬೆಂಗಳೂರು: ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಆಗಾಗ ರೀಲ್ಸ್‌ ಮಾಡುವುದರ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಅಷ್ಟೇ ಅಲ್ಲದೇ ಇದೀಗ ಹಲವು ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ʻಬಂಗಾರʼ ಅಂತಲೇ ಧಾರಾವಾಹಿಯಲ್ಲಿ ಅಪ್ಪ ಸುಬ್ಬವಿನಿಂದ ಕರೆಸಿಕೊಳ್ಳುತ್ತಿದ್ದ ಮೇಘನಾ ಇದೀಗ ಮೂಗು ಚುಚ್ಚಿಸಿಕೊಂಡಿದ್ದಾರೆ. ʻʻಬಂಗಾರಗೆ ಮದುವೆ ಫಿಕ್ಸ್‌ ಆಯ್ತಾ?ʼʼಎಂದು ಅವರ ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ.

ಮೇಘಾ ಶೆಟ್ಟಿ ಮೂಗು ಚುಚ್ಚಿಕೊಳ್ಳುವ ವಿಡಿಯೊ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. ಮೂಗು ಚುಚ್ಚಿಸಿಕೊಳ್ಳುವುದಕ್ಕೂ ಮುನ್ನ ಸಹಜವಾಗಿಯೇ ಮೇಘಾ ಕೂಡ ಹೆದರಿದ್ದಾರೆ. ಆದರೆ, ಮೂಗು ಚುಚ್ಚುವವರು ಕೊಂಚ ಧೈರ್ಯ ಹೇಳಿದ್ದಾರೆ. ಬಳಿಕ ಕಣ್ಣು ಮುಚ್ಚಿ ಕಣ್ಣು ತೆರೆಯುವುದರೊಳಗೆ ಚುಚ್ಚಿದ್ದಾರೆ. ಈ ವಿಡಿಯೊ ಕಂಡು ಮೇಘನಾ ಫ್ಯಾನ್ಸ್‌ ಮದುವೆಗೆ ತಯಾರಿ ಆದ್ರಾ? ಎಂದು ಕಮೆಂಟ್‌ ಮಾಡಿದ್ದಾರೆ.

ಮತ್ತೊಬ್ಬರು ʻʻಬಂಗಾರ ಈಗ ಇನ್ನು ಮುದ್ದಾಗಿ ಕಾಣಿಸುತ್ತಿದ್ದೀಯಾʼʼಎಂದು ಕಮೆಂಟ್‌ ಮಾಡಿದ್ದಾರೆ. ಮೇಘಾ ಶೆಟ್ಟಿ ಆಗಾಗ ಫೋಟೊಶೂಟ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಹಳ್ಳಿ ಉಡುಗೆಯಾಗಿರುವ ಲಂಗ ದಾವಣಿ ತೊಟ್ಟು ನಟಿ ಮೇಘಾ ಶೆಟ್ಟಿ ಮಿಂಚಿದ್ದರು. ಮಾದಕ ನೋಟದ ಮೂಲಕ ಪಡ್ಡೆ ಹುಡುಗರ ನಿದ್ದೆ ಕದಿಯುತ್ತಿದ್ದ ಮೇಘಾ ಶೆಟ್ಟಿ ಸಿಂಪಲ್ ಲುಕ್​ನಲ್ಲಿ ಕಂಡಿದ್ದರು. ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ. ತಮ್ಮ ಅದ್ಭುತ ನಟನೆ ಮೂಲಕ ಜನರನ್ನು ಸೆಳೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮೇಘಾ ಸಖತ್​ ಆ್ಯಕ್ಟಿವ್​ ಆಗಿದ್ದಾರೆ.

ಇದನ್ನೂ ಓದಿ: Megha Shetty: ಮುಕ್ತಾಯವಾಗಲಿದೆಯೇ ʻಜೊತೆ ಜೊತೆಯಲಿʼ ಧಾರಾವಾಹಿ; ಮೇಘಾ ಶೆಟ್ಟಿ ಹೇಳಿದ್ದೇನು?

ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೋತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದರು. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ʻಟ್ರಿಬಲ್ ರೈಡಿಂಗ್ʼ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು ಮೇಘಾ ಶೆಟ್ಟಿ. ಧನ್ವೀರ್ ನಟನೆಯ ʻಕೈವʼ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಮರಾಠಿ ಭಾಷೆಗೂ ಕಾಲಿಟ್ಟಿದ್ದಾರೆ. ‘ಲಂಡನ್ ಕೆಫೆ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ.

Continue Reading

ಕಿರುತೆರೆ

Amrithadhare Serial Kannada: `ಅಮೃತಧಾರೆ’ಸೆಟ್‌ನಲ್ಲಿ ʻನಾನು ನಂದಿನಿʼ ಸ್ಟೆಪ್‌; ಎಲ್ಲೆಲ್ಲೂ  ವಿಕ್ಕಿಪೀಡಿಯಾ ಸಾಂಗ್‌ ಗುಂಗು!

ʻಅಮೃತಧಾರೆʼ ಧಾರಾವಾಹಿ (Amrithadhare Serial Kannada) ಖ್ಯಾತಿಯ ಸಾರಾ ಅಣ್ಣಯ್ಯ ಈ ಹಾಡಿಗೆ ರೀಲ್ಸ್‌ ಮಾಡಿದ್ದಾರೆ. ಸಾರಾ (sara annaiah) ಅವರಿಗೆ ಸಹ ನಟ ಶಶಿಧರ್ ಹೆಗ್ಡೆ ಸಾಥ್ ಕೊಟ್ಟಿದ್ದಾರೆ.

VISTARANEWS.COM


on

Edited by

Sara annaiah nanu nandini reels Viral
Koo

ತಮ್ಮ ವಿಭಿನ್ನ ಕಾಮಿಡಿ ವಿಡಿಯೊಗಳಿಂದ ವಿಡಿಯೊ ಕ್ರಿಯೇಟರ್ ವಿಕಾಸ್ ( ವಿಕ್ಕಿ ಪೀಡಿಯಾ) (Vicky Pedia) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿನ ʻನಾನು ನಂದಿನಿʼ ಹಾಡಿಗೆ ರೀಲ್ಸ್‌ ಮಾಡುವರ ಸಂಖ್ಯೆ ಹೆಚ್ಚಾಗಿದೆ. ಇದೀಗ ʻಅಮೃತಧಾರೆʼ ಧಾರಾವಾಹಿ (Amrithadhare Serial Kannada) ಖ್ಯಾತಿಯ ಸಾರಾ ಅಣ್ಣಯ್ಯ ಈ ಹಾಡಿಗೆ ರೀಲ್ಸ್‌ ಮಾಡಿದ್ದಾರೆ. ಸಾರಾ (sara annaiah) ಅವರಿಗೆ ಸಹ ನಟ ಶಶಿಧರ್ ಹೆಗ್ಡೆ ಸಾಥ್ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ ವಿಕ್ಕಿ ಪೀಡಿಯಾ ಅವರ ಈ ರೀಲ್ಸ್‌ 15 ಮಿಲಿಯನ್‌ಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ.

“ನಾನು ನಂದಿನಿ ಬೆಂಗಳೂರಿಗ್ ಬಂದಿನಿ” ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲಕ್ಷ ಲಕ್ಷ ವ್ಯೂಸ್ ಸಾಧಿಸಿ ದಾಖಲೆ ಬರೆದಿದೆ. ಇದೀಗ ಅಮೃತಧಾರೆ ಧಾರಾವಾಹಿಯ ಕಲಾವಿದರು ಈ ಹಾಡಿಗೆ ರೀಲ್ಸ್‌ ಮಾಡಿದ್ದು, ಸಖತ್‌ ಫೇಮಸ್‌ ಆಗಿದೆ. ಬಿಗ್ ಬಾಸ್ ಖ್ಯಾತಿಯ ವೈನ್‌ ಸ್ಟೋರ್ ರಘು, ದಿವ್ಯಾ ಉರುಡುಗ, ನಿರೂಪಕಿ ಅನುಪಮಾ ಗೌಡ, ನಟಿ ಚೈತ್ರಾ ಆಚಾರ್, ಚಂದನಾ ಅನಂತಕೃಷ್ಣ ಸೇರಿದಂತೆ ಹಲವರು ಈ ವಿಡಿಯೊ ನೋಡಿ ಮೆಚ್ಚಿಕೊಂಡಿದ್ದಾರೆ. ಇನ್ನ ಮೀಮ್ಸ್‌ ಪೇಜ್‌ಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿದೆ.

ವಿಕ್ಕಿಪೀಡಿಯಾ ಖ್ಯಾತಿಯ (Vicky Pedia) ವಿಕಾಸ್‌ (vickypedia) ಕಂಟೆಂಟ್ ಕ್ರಿಯೇಟರ್. ಭಾಷಣ ಟ್ರಾನ್ಸ್‌ಲೇಟ್‌ ವಿಡಿಯೊ ಅಣಕ ಮಾಡಿ ಇವರು ಸಾಕಷ್ಟು ಫೇಮಸ್ ಆಗಿದ್ದರು. ಚುನಾವಣಾ ಸಮಯದಲ್ಲಿ ರಾಷ್ಟ್ರಮಟ್ಟದ ನಾಯಕರ ಹಿಂದಿ ಭಾಷೆಯ ಭಾಷಣವನ್ನು ಸಖತ್‌ ಆಗಿ ಕಾಮಿಡಿಯಾಗಿ ಅಣುಕಿಸಿದ್ದರು. ಆದರೀಗ ಹೆಣ್ಣು ಮಕ್ಕಳು ಉದ್ಯೋಗಕ್ಕೆಂದು ನಗರಕ್ಕೆ ಬಂದು, ಪಿಜಿಯಲ್ಲಿ ಯಾವ ರೀತಿ ಸಮಸ್ಯೆಗೆ ಗುರಿಯಾಗುತ್ತಾರೆ, ಅಷ್ಟೇ ಅಲ್ಲದೇ ಕನ್ನಡ ಮೀಡಿಯಂನಲ್ಲಿ ಓದಿದ ಕಾರಣಕ್ಕೆ ಇಂಗ್ಲಿಷ್ ಬಾರದೇ ಏನೆಲ್ಲಾ ಸಮಸ್ಯೆಗೆ ಗುರಿಯಾಗುತ್ತಾರೆ ಎಂಬುದನ್ನು ವಿಡಿಯೊ ಮೂಲಕ ಹಾಡಿದ್ದಾರೆ.

ಇದನ್ನೂ ಓದಿ: Viral Video: ನಾನು ನಂದಿನಿ ಬೆಂಗಳೂರು ಬಂದಿನಿ; ಭಾರಿ ವೀಕ್ಷಣೆ ಕಂಡ ವಿಕ್ಕಿಪೀಡಿಯಾ ಹಾಡು!

ಸಾರಾ ಅಣ್ಣಯ್ಯ ಪೋಸ್ಟ್‌

ವಿಡಿಯೊದಲ್ಲಿ ವಿಕ್ಕಿಪೀಡಿಯಾ ವಿಕ್ಕಿ ಪಿಂಕ್‌ ವಿಗ್‌ ಧರಿಸಿ, ಬಾರ್ಬಿ ಹಾಡಿನ ಟ್ಯೂನ್‌ ಬಳಸಿಕೊಂಡು ಈ ಹಾಡು ಹಾಡಿದ್ದಾರೆ. ‘ನಾನು ನಂದಿನಿ ಬೆಂಗಳೂರು ಬಂದಿನಿ, ಪಿಜಿಲಿ ಇದ್ದೀನಿ, ಐಟಿ ಕೆಲಸ ಮಾಡ್ತೀನಿ, ಊಟ ಸರಿ ಇಲ್ಲ ಅಂದ್ರೂನು ತಿಂತಿನಿ, ಬಂದ ದುಡ್ಡೆಲ್ಲಾ ಮನೆಗೆ ಕಳಿಸ್ತೀನಿ, ಬಾರೆ ನಂದಿನಿ ಗೋಬಿ ತಿನಿಸ್ತೀನಿ ಬೇ ಬೇ ಬೇಡ, ಬಾರೆ ನಂದಿನಿ ಬೆಂಗಳೂರು ತೋರಿಸ್ತೀನಿ, ಓಹ್ ಬೇಡ ಓಹ್ ಬೇಡ, ಬಾರೆ ನಂದಿನಿ ಪೇಡ ತಿನ್ನಿಸ್ತೀನಿ, ಬೆ ಬೆ ಬೇಡ, ಬಾರೆ ನಂದಿನಿ ಪಿಕ್ಚರ್ ತೋರಿಸ್ತೀನಿ, ಬೇಡ ಬೇಡ, ನೋಡಮ್ಮ ಇಂಗ್ಲೀಷ್ ನೀನು ಕಲಿಬೇಕು, ಇಲ್ಲ ಅಂದ್ರೆ ಐಟಿಲಿ ಕಷ್ಟ ಆಗುತ್ತೆ ಸರ್ ನಾನು ಕನ್ನಡ ಮೀಡಿಯಾಂನಲ್ಲಿ ಓದಿದ್ದೆ. ಅದಕ್ಕೆ ನನ್ನ ಇಂಗ್ಲೀಷ್ ಅಷ್ಟಕಷ್ಟೆ, ಐ ಕ್ಯಾನ್ ಟ್ರೈ ಐ ಕ್ಯಾನ್ ಟಾಕ್, ಬಟ್ ವಾಟ್ ಐ ಸ್ಪೀಕ್ ಇಟ್ಸ್ ಬಟ್ಲರ್ ಇಂಗ್ಲೀಷ್’ ಇದು ಈ ಹಾಡಿನ ಲಿರೀಕ್ಸ್‌ ಆಗಿದೆ. ಪೋಷಕರು ಕೂಡ ಮಕ್ಕಳೊಂದಿಗೆ ರೀಲ್ಸ್‌ ಮಾಡಿದ್ದಾರೆ.

Continue Reading
Advertisement
Sudha Murty
ಕರ್ನಾಟಕ11 mins ago

Sudha Murty: ಅಮೆರಿಕದಲ್ಲಿ ಕಾರ್ಯಕ್ರಮ ಎಂದು ಸುಧಾ ಮೂರ್ತಿ ಹೆಸರಲ್ಲಿ ವಂಚನೆ; ಇಬ್ಬರ ವಿರುದ್ಧ ಕೇಸ್‌

Cauvery water Dispute
ಕರ್ನಾಟಕ24 mins ago

Cauvery Dispute : ಸಮರ್ಥವಾಗಿ ವಾದ ಮಾಡದೆ ನಮಗೆ ಸೋಲಾಯಿತೇ? ಆರೋಪದಲ್ಲಿ ನಿಜವೆಷ್ಟು? ಸುಳ್ಳೆಷ್ಟು?

Bus Accident In Raichur
ಕರ್ನಾಟಕ40 mins ago

Bus Accident: ನಿಂತಿದ್ದ ಲಾರಿಗೆ ಸಾರಿಗೆ ಬಸ್‌ ಡಿಕ್ಕಿ; 32 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

DUSU Election Result
ದೇಶ1 hour ago

DUSU Election: ದೆಹಲಿ ವಿವಿಯಲ್ಲಿ ಎಬಿವಿಪಿ ದರ್ಬಾರ್;‌ ಚುನಾವಣೆಯಲ್ಲಿ ಭಾರಿ ಗೆಲುವು, ದೇಶ ಮೊದಲು ಎಂದ ಬಿಜೆಪಿ

fruits and cold cough
ಆರೋಗ್ಯ2 hours ago

Health Tips: ಶೀತ, ನೆಗಡಿಯಾದಾಗ ಈ ಎಲ್ಲ ಹಣ್ಣುಗಳಿಂದ ದೂರವಿರುವುದು ಒಳ್ಳೆಯದು!

new kannada book yabli
ಕಲೆ/ಸಾಹಿತ್ಯ2 hours ago

Sunday Read: ಹೊಸ ಪುಸ್ತಕ: ಯಾಬ್ಲಿ: ಯಥಾಪ್ರಕಾರ

cryptocurrency fraud
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: ಅಳಿವಿನ ಅಂಚಿನಲ್ಲಿ ಝಣ ಝಣ ಕಾಂಚಾಣ!

pak human right
ಕ್ರಿಕೆಟ್3 hours ago

ವಿಸ್ತಾರ ಸಂಪಾದಕೀಯ: ಮಾನವ ಹಕ್ಕುಗಳ ಪ್ರಶ್ನೆ; ಪಾಕ್‌ ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Sphoorti Salu
ಸುವಚನ4 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

ಟ್ರೆಂಡಿಂಗ್‌