Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ! - Vistara News

ಕ್ರೈಂ

Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

Pavithra Gowda: ಇದಕ್ಕೂ ಮುಂಚೆ ʻʻನನ್ನನ್ನು ನೋಡಲು ಯಾರೂ ಬರುವುದಿಲ್ಲ. ನನ್ನನ್ನು ಯಾರೂ ಮಾತನಾಡಿಸುವುದಿಲ್ಲ’ ಎಂದು ಪವಿತ್ರಾ ಬೇಸರ ಮಾಡಿಕೊಂಡಿದ್ದರುʼʼಎನ್ನಲಾಗಿದೆ.ಕೊನೆಗೂ ಪವಿತ್ರಾ ಮಗಳು ಹಾಗೂ ಪವಿತ್ರಾ ತಾಯಿ ಜೈಲಿಗೆ ಬಂದು ಅವರನ್ನು ನೋಡಿ ಹೋಗಿದ್ದಾರೆ.ಇನ್ನು ದರ್ಶನ್‌ ವಿಚಾರಕ್ಕೆ ಬಂದರೆ,ಮಗ ಪತ್ನಿ ಬಂದು ಹೋದ ಬಳಿಕ ಡೆವಿಲ್ ಸ್ವಲ್ಪ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರಂತೆ. ದರ್ಶನ್‌ ರಾತ್ರಿ ರಾತ್ರಿ ಬೇಗನೇ ನಿದ್ರೆಗೆ ಜಾರಿದ್ದಾರೆ.

VISTARANEWS.COM


on

Pavithra Gowda Cried After In Jail darshan case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಪವಿತ್ರಾ ಗೌಡ (Pavithra Gowda) ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಆರಂಭದಲ್ಲಿ ಪವಿತ್ರಾ ಗೌಡ ಅವರನ್ನು ನೋಡಲು ಯಾರೂ ಬಂದಿರಲಿಲ್ಲ. ಇದೀಗ ಮಗಳನ್ನ ಕಂಡು ಕೊಂಚ ನಿರಾಳವಾಗಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಪವಿತ್ರಾ ಕುಗ್ಗಿ ಹೋಗಿದ್ದರು. ನಿನ್ನೇ ಪವಿತ್ರಾ ಗೌಡ ಭೇಟಿಗೆ ಮಗಳು ಖುಷಿ ತಾಯಿ, ತಂದೆ,ತಮ್ಮ ಆಗಮಿಸಿದ್ದರು. ಇದಕ್ಕೂ ಮುಂಚೆ ʻʻನನ್ನನ್ನು ನೋಡಲು ಯಾರೂ ಬರುವುದಿಲ್ಲ. ನನ್ನನ್ನು ಯಾರೂ ಮಾತನಾಡಿಸುವುದಿಲ್ಲ’ ಎಂದು ಪವಿತ್ರಾ ಬೇಸರ ಮಾಡಿಕೊಂಡಿದ್ದರುʼʼಎನ್ನಲಾಗಿದೆ.ಕೊನೆಗೂ ಪವಿತ್ರಾ ಮಗಳು ಹಾಗೂ ಪವಿತ್ರಾ ತಾಯಿ ಜೈಲಿಗೆ ಬಂದು ಅವರನ್ನು ನೋಡಿ ಹೋಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಬ್ಯಾರಕ್‌ನಲ್ಲಿ ಪವಿತ್ರಾ ಸೆರೆವಾಸ ಅನುಭವಿಸುತ್ತಿದ್ದಾರೆ. ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿದ್ದಾರೆ ಎನ್ನಲಾಗಿದೆ. ಮಗಳು ಖುಷಿ ಭೇಟಿ ಬಳಿಕ ರಾತ್ರಿ ಬೇಗನೆ ಪವಿತ್ರಾ ಗೌಡ ನಿದ್ದೆಗೆ ಜಾರಿದ್ದರು ಎನ್ನಲಾಗಿದೆ. ಜೈಲು ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ, ಸಾಂಬರ್, ಮಜ್ಜಿಗೆ ಊಟ ಮಾಡಿ ಮಲಗಿದ್ದರು. ಬೆಳಗ್ಗೆ 6 ಗಂಟೆಯ ಸುಮಾರಿಗೆ ನಿದ್ರೆಯಿಂದ ಪವಿತ್ರಾ ಎದ್ದಿದ್ದರು. ಬ್ಯಾರಕ್‌ನಲ್ಲಿಯೇ ಕೆಲಹೊತ್ತು ವಾಕಿಂಗ್ ಮಾಡಿದ್ದಾರೆ. ಜೈಲು ಸಿಬ್ಬಂದಿ ನೀಡಿದ್ದ ಕಾಫಿ ಕುಡಿದು ರಿಲ್ಯಾಕ್ಸ್‌ ಮೂಡ್‌ಗೆ ಜಾರಿದ್ದಾರೆ. ನಿತ್ಯ ಪೌಷ್ಟಿಕ ಆಹಾರ ತಿನ್ನುತ್ತಿದ್ದ ಪವಿತ್ರಾ ಜೈಲೂಟ ಒಗ್ಗದೆ ಇದ್ದರೂ ತಿನ್ನಲೇ ಬೇಕಾದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ರಿಲ್ಯಾಕ್ಸ್ ಮೂಡ್‌ನಲ್ಲಿ ದರ್ಶನ್

ಇನ್ನು ದರ್ಶನ್‌ ವಿಚಾರಕ್ಕೆ ಬಂದರೆ,ಮಗ ಪತ್ನಿ ಬಂದು ಹೋದ ಬಳಿಕ ಡೆವಿಲ್ ಸ್ವಲ್ಪ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರಂತೆ. ದರ್ಶನ್‌ ರಾತ್ರಿ ರಾತ್ರಿ ಬೇಗನೇ ನಿದ್ರೆಗೆ ಜಾರಿದ್ದಾರೆ. ಬೆಳಗ್ಗೆ 5.30ರ ಸುಮಾರಿಗೆ ನಿದ್ರೆಯಿಂದ ಎದಿದ್ದಾರೆ ದರ್ಶನ್‌. ಜೈಲಿನ ಸಿಬ್ಬಂದಿ ಬಳಿ ಬಿಸಿ ನೀರನ್ನು ಕೇಳಿ ದರ್ಶನ್‌ ಕುಡಿದಿದ್ದರು. ಕೆಲ ಹೊತ್ತು ಬ್ಯಾರಕ್ ನಲ್ಲಿಯೇ ದರ್ಶನ್ ವಾಕಿಂಗ್ ಮಾಡಿದ್ದಾರೆ. ದಿನೇ ದಿನೇ ನಟ ದರ್ಶನ್ ತೂಕ ಕಳೆದುಕೊಳ್ಳುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ವಿಚಾರದಲ್ಲಿ, ಆರೋಪಿಗಳ ವರ್ಗಾವಣೆಗೆ ಬಂಧಿಖಾನೆ ಇಲಾಖೆ ಎಡಿಜಿಪಿ ಅನುಮೋದನೆ ನೀಡಿದೆ. ಕೋರ್ಟ್ ಆದೇಶದಂತೆ ವಿಚಾರಣಾಧೀನ ಬಂಧಿಗಳ ಶಿಫ್ಟ್‌ಗೆ ಅನುಮೋದನೆ ನೀಡಿದೆ. ರವಿಶಂಕರ್, ಕಾರ್ತೀಕ್‌, ಕೇಶವ್ ಮತ್ತು ನಿಖಿಲ್ ನಾಯಕ್ ಪರಪ್ಪನ ಅಗ್ರಹಾರದಿಂದ ಇಂದು ತುಮಕೂರು ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಪ್ರತ್ಯೇಕ ವಾಹನ ಹಾಗೂ ಶಸ್ತ್ರಸಜ್ಜಿತ ಬೆಂಗವಾಲು ಪಡೆಯೊಂದಿಗೆ ಆರೋಪಿಗಳನ್ನು ಕರೆದೊಯ್ಯಲು ತಯಾರಿ‌ ಆಗುತ್ತಿದೆ ಎಂದು ಮೂಲ ತಿಳಿಸಿದೆ.‌

ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Physical Abuse: ಬಾಲಕಿಯ ಮನೆಗೆ ಆರೋಪಿ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ.

VISTARANEWS.COM


on

physical Abuse
Koo

ಕಲಬುರಗಿ: ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೃತಪಟ್ಟಿರುವ ಘಟನೆ (Physical Abuse) ಕಲಬುರಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವವಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

ಇದನ್ನೂ ಓದಿ | vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಕಾರವಾರ/ಉಡುಪಿ: ಭಾರಿ ಮಳೆ ಎಫೆಕ್ಟ್‌ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಬೃಹತ್ ಮರ (Road Accident) ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ ಘಟನೆ ನಡೆದಿದೆ. ಅನಿಲಗೋಡ ಗ್ರಾಮದ ಸವಾರ ಬಾಬು ನಾಯ್ಕ(52), ಭಾಗೀರಥಿ ನಾಯ್ಕ ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಈ ದಂಪತಿ ಸಂಬಂಧಿಯೊಬ್ಬರ ಶವಸಂಸ್ಕಾರಕ್ಕೆ ಬೈಕ್‌ನಲ್ಲಿ ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಏಕಾಏಕಿ ಬೃಹತ್‌ ಮರವು ಇವರಿಬ್ಬರ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸವಾರರನ್ನು ಕೂಡಲೇ ಸ್ಥಳೀಯರು ಹಾಗೂ ಭಟ್ಕಳದ ಬಿಜೆಪಿ ಮುಖಂಡರು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಡರಾತ್ರಿ ಹೊತ್ತಿ ಉರಿದ ಕಾರು

Road Accident Car Fire

ತಡರಾತ್ರಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಉಡುಪಿಯ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ಘಟನೆ ನಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ರಿಡ್ಜ್ ಕಾರು ಬೆಂಕಿಗಾಹುತಿ ಆಗಿದೆ. ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕಾರಿನ ಬಾನೆಟ್‌ನಲ್ಲಿ ಹೊಗೆ ಕಂಡು ಕಾರು ಚಾಲಕ ಹೊರಬಂದಿದ್ದು, ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಮಾಲೀಕನ ಮಾಹಿತಿ ಮೇಲೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದೆ.

ಇದನ್ನೂ ಓದಿ: Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Continue Reading

ಪ್ರಮುಖ ಸುದ್ದಿ

BS Yediyurappa: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

BS Yediyurappa: ಮಾಜಿ ಸಿಎಂ ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಮಧ್ಯಂತರ ಜಾಮೀನು ವಿಸ್ತರಿಸಿ, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆವರೆಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಜೂನ್‌ 14ರಂದು ಹೈಕೋರ್ಟ್‌ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಬಿ.ಎಸ್‌. ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ. ಅಲ್ಲದೇ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿದೆ.

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.

ಇದನ್ನೂ ಓದಿ | vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Prajwal Revanna Case

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌ ಸಿಕ್ಕಿದೆ. ತಮ್ಮ ಮೇಲೆ ಯಾವುದೇ ಆರೋಪವಿಲ್ಲದಿದ್ದರೂ ಕೇಸ್ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ ಪ್ರಶ್ನಿಸಿ ಪ್ರೀತಂ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್‌, ಪ್ರೀತಂ ಗೌಡರನ್ನು ಬಂಧಿಸದೆ, ತನಿಖೆ ಮುಂದುವರಿಸಲು ಎಸ್ಐಟಿಗೆ ಸೂಚನೆ ನೀಡಿದೆ.

ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಗರದ ಸಿಐಡಿ ಸೈಬರ್ ಠಾಣೆಯಲ್ಲಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ, ಕಿರಣ್​, ಶರತ್​ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ), 354 (ಡಿ), 354 ಬಿ, 506 ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಯಾವುದೇ ಆರೋಪವಿಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಜನ ಮಾತನಾಡುತ್ತಿದ್ದಾರೆಂಬ ಆಧಾರದ ಮೇಲೆ ಕೇಸ್ ಹಾಕಿದ್ದಾರೆ ಎಂದು ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಇದಕ್ಕೆ ಎಸ್‌ಪಿಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿ, ಆರೋಪಿ ವಿರುದ್ಧ ಸಂತ್ರಸ್ತೆಯ ವಿಡಿಯೊ ಹಂಚಿದ ಗಂಭೀರ ಆರೋಪವಿದೆ. ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದರು. ಈ ವೇಳೆ ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಮಾತನಾಡಿ, ಜನ ಮಾತನಾಡಿಕೊಳ್ಳುತ್ತಿರುವ ಕಾರಣಕ್ಕೆ ದೂರು ನೀಡಿದ್ದಾರೆ. ಸರ್ಕಾರದವರೇ 3 ಲಕ್ಷ ಪೆನ್ ಡ್ರೈವ್ ಹಂಚಿದ್ದಾರೆಂದು ಜನ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಸರ್ಕಾರದವರ ಮೇಲೂ ಎಫ್ಐಆರ್ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ವಾದ-ಪ್ರತಿವಾದ ಆಲಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರು, ವಿಡಿಯೊ ಹಂಚುವುದರಿಂದ ಮಹಿಳೆಯ ಗೌರವಕ್ಕೆ ಹಾನಿಯಾಗುತ್ತದೆ. ಇದು ಗಂಭೀರ ಅಪರಾಧವಾಗಿದೆ. ಆದರೆ, ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಎಸ್‌ಐಟಿ ಬಂಧಿಸದೇ, ತನಿಖೆ ಮುಂದುವರಿಸಬೇಕು. ಅಲ್ಲದೇ ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಸೂಚಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Prajwal Revanna Case: ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಕೇಸ್‌ ದಾಖಲಾಗಿತ್ತು. ಆದರೆ, ಕೇಸ್‌ನಲ್ಲಿ ಪ್ರೀತಂ ಗೌಡರನ್ನು ಬಂಧಿಸದೇ ವಿಚಾರಣೆ ನಡೆಸಲು ಎಸ್‌ಐಟಿಗೆ ಹೈಕೋರ್ಟ್‌ ಸೂಚಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌ ಸಿಕ್ಕಿದೆ. ತಮ್ಮ ಮೇಲೆ ಯಾವುದೇ ಆರೋಪವಿಲ್ಲದಿದ್ದರೂ ಕೇಸ್ ದಾಖಲಿಸಲಾಗಿದೆ ಎಂದು ಎಫ್‌ಐಆರ್‌ ಪ್ರಶ್ನಿಸಿ ಪ್ರೀತಂ ಗೌಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್‌, ಪ್ರೀತಂ ಗೌಡರನ್ನು ಬಂಧಿಸದೆ, ತನಿಖೆ ಮುಂದುವರಿಸಲು ಎಸ್ಐಟಿಗೆ ಸೂಚನೆ ನೀಡಿದೆ.

ಅಶ್ಲೀಲ ವಿಡಿಯೊ ಇರುವ ಪೆನ್​ಡ್ರೈವ್​​ ಹಂಚಿಕೆ ಆರೋಪದಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ನಗರದ ಸಿಐಡಿ ಸೈಬರ್ ಠಾಣೆಯಲ್ಲಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ, ಕಿರಣ್​, ಶರತ್​ ಹಾಗೂ ಪ್ರೀತಂ ಗೌಡ ವಿರುದ್ಧ ಐಪಿಸಿ ಸೆಕ್ಷನ್ 354(ಎ), 354 (ಡಿ), 354 ಬಿ, 506 ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಎಫ್‌ಐಆರ್‌ ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಯಾವುದೇ ಆರೋಪವಿಲ್ಲದಿದ್ದರೂ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ. ಜನ ಮಾತನಾಡುತ್ತಿದ್ದಾರೆಂಬ ಆಧಾರದ ಮೇಲೆ ಕೇಸ್ ಹಾಕಿದ್ದಾರೆ ಎಂದು ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಇದಕ್ಕೆ ಎಸ್‌ಪಿಪಿ ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿ, ಆರೋಪಿ ವಿರುದ್ಧ ಸಂತ್ರಸ್ತೆಯ ವಿಡಿಯೊ ಹಂಚಿದ ಗಂಭೀರ ಆರೋಪವಿದೆ. ಹೀಗಾಗಿ ಮಧ್ಯಂತರ ಆದೇಶ ನೀಡದಂತೆ ಮನವಿ ಮಾಡಿದರು. ಈ ವೇಳೆ ಪ್ರೀತಮ್ ಗೌಡ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಮಾತನಾಡಿ, ಜನ ಮಾತನಾಡಿಕೊಳ್ಳುತ್ತಿರುವ ಕಾರಣಕ್ಕೆ ದೂರು ನೀಡಿದ್ದಾರೆ. ಸರ್ಕಾರದವರೇ 3 ಲಕ್ಷ ಪೆನ್ ಡ್ರೈವ್ ಹಂಚಿದ್ದಾರೆಂದು ಜನ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಸರ್ಕಾರದವರ ಮೇಲೂ ಎಫ್ಐಆರ್ ಮಾಡುತ್ತಾರಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ | Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ವಾದ-ಪ್ರತಿವಾದ ಆಲಿಸಿದ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರು, ವಿಡಿಯೊ ಹಂಚುವುದರಿಂದ ಮಹಿಳೆಯ ಗೌರವಕ್ಕೆ ಹಾನಿಯಾಗುತ್ತದೆ. ಇದು ಗಂಭೀರ ಅಪರಾಧವಾಗಿದೆ. ಆದರೆ, ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಎಸ್‌ಐಟಿ ಬಂಧಿಸದೇ, ತನಿಖೆ ಮುಂದುವರಿಸಬೇಕು. ಅಲ್ಲದೇ ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಸೂಚಿಸಿದ್ದಾರೆ.

Continue Reading

ಬೆಂಗಳೂರು

vasavi condiments : ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ; ನಿದ್ರೆ ಮಾತ್ರೆ ಸೇವಿಸಿ ಮಾಲಕಿ ಗೀತಾ ಆತ್ಮಹತ್ಯೆಗೆ ಯತ್ನ

vasavi condiments: ಅವರೆಮೇಳದಿಂದ ಹೆಚ್ಚು ಹೆಸರು ಮಾಡಿದ್ದ ವಾಸವಿ ಕಾಂಡಿಮೆಂಟ್ಸ್‌ ಮಾಲಕಿ ಗೀತಾ ಅವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 10 ವರ್ಷಗಳಿಂದ ಕೋಟ್ಯಾಂತರ ರೂ. ಬಾಡಿಗೆ ಕಟ್ಟದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಕೋರ್ಟ್‌ ಮೆಟ್ಟಿಲೇರಿದ್ದರು.

VISTARANEWS.COM


on

By

Vasavi Condiments owner attempts suicide by consuming sleeping pills
ಬಾಡಿಗೆ ಕಟ್ಟದ ಕಾರಣ ವಾಸವಿ ಕಾಂಡಿಮೆಂಟ್ಸ್‌ಗೆ ಬೀಗ ಹಾಕಿದ ಪೊಲೀಸರು ಮತ್ತೊಂದು ಕಡೆ ಆತ್ಮಹತ್ಯೆಗೆ ಯತ್ನಿಸಿದ ಮಾಲಕಿ ಗೀತಾ
Koo

ಬೆಂಗಳೂರು: ಬೆಂಗಳೂರಿನ ವಾಸವಿ ಕಾಂಡಿಮೆಂಟ್ಸ್‌ನ (vasavi condiments) ಮಾಲಕಿ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ಬೆಂಗಳೂರಿನ ಸಜ್ಜನ್ ರಾವ್ ಸರ್ಕಲ್ ಬಳಿ ಇರುವ ಶ್ರೀ ವಾಸವಿ ಕಾಂಡಿಮೆಂಟ್ಸ್‌ನ ಮಾಲಕಿ ಗೀತಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

10 ವರ್ಷ ಬಾಡಿಗೆ ಕಟ್ಟದ ಹಿನ್ನೆಲೆಯಲ್ಲಿ ಗೀತಾ ವಿರುದ್ಧ ಅಂಗಡಿ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ವಾಸವಿ ಕಾಂಡಿಮೆಂಟ್ಸ್‌ನ ಮಾಲಕಿ ಗೀತಾ ಬರೋಬ್ಬರಿ ಒಂದು ಕೋಟಿ 70 ಲಕ್ಷ ರೂ. ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದರು. ಕೇವಲ 40 ಲಕ್ಷ ಮಾತ್ರ ಬಾಡಿಗೆ ನೀಡಿದ್ದರಂತೆ.

ಹೀಗಾಗಿ ಇಂದು ಕೋರ್ಟ್ ಅನುಮತಿ ಪಡೆದು ಪೊಲೀಸರು ಅಂಗಡಿಗೆ ಬೀಗ ಹಾಕಿದ್ದರು. ಈ ವೇಳೆ ವಾಸವಿ ಕಾಂಡಿಮೆಂಟ್ಸ್ ಮಾಲಕಿ ಗೀತಾ ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ನಿದ್ರೆ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸದ್ಯ ಗೀತಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರೇಕಾಯಿ ತಿನಿಸುಗಳಿಗೆ ಹಾಗೂ ಅವರೇಕಾಯಿ ಮೇಳಕ್ಕೆ ವಾಸವಿ ಕಾಂಡಿಮೆಂಟ್ಸ್ ಪ್ರಸಿದ್ದಿಯಾಗಿತ್ತು. ಆದರೆ ಬಾಡಿಗೆ ಕಟ್ಟದ ಹಿನ್ನೆಲೆ ಪೊಲೀಸರು ಅಂಗಡಿಗೆ ಬೀಗ ಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Muhammad Usman
ಪ್ರಮುಖ ಸುದ್ದಿ12 mins ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​ಬ

Dina Bhavishya
ಭವಿಷ್ಯ12 mins ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ5 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ5 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ6 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ6 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ7 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ7 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ8 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ8 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ11 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌